ಆಸಕ್ತಿಯು ಹವ್ಯಾಸವಾಗಿ ಬದಲಾದ ಕಥೆ…: ಅಶೋಕ ಬಾವಿಕಟ್ಟಿ
ವ್ಯಾಪಾರ, ಮನೆ ಮಕ್ಕಳು …ಇಷ್ಟೇ ಎನ್ನುವಂತಿದ್ದ ಕಾಲವದು. ಬೆಂಗಾಡಿನಂತಿದ್ದ ನಮ್ಮೂರ ಪರಿಸರವೂ ಸಹಜವಾಗಿ ಹಸಿರು, ಜಲಪಾತ, ಬೆಟ್ಟಗುಡ್ಡ, ದಟ್ಟಕಾಡು, ನೀರಿನ ಹರಿವು ಇವುಗಳೆಡೆ ಒಂದು ಆಕರ್ಷಣೆ ಹುಟ್ಟಿಸುತ್ತಿದ್ದವು. ಶಾಲಾ ಕಾಲೇಜು ಸಮಯದಲ್ಲಿ ಪ್ರವಾಸಕ್ಕೆಂದು ಹೋದಾಗ ಇಳಿದ ಜೋಗದ ಗುಂಡಿಯೂ ಏರಿದ ಮುಳ್ಳಯ್ಯನಗಿರಿ ಬೆಟ್ಟವೇ ನಮ್ಮ ಪಾಲಿನ ಕೌತುಕಗಳು ಮತ್ತು ದಾರಿಯಲ್ಲಿ ಬರುವ ದಟ್ಟಕಾಡು, ಭೋರ್ಗರೆವ ಜಲಪಾತ, ಮಳೆಗಳೇ ಚೇತೊಹಾರಿ ಚಿತ್ರಗಳು. ವಿಪರೀತ ಆಸ್ಥೆಯಿಂದ ಗಿಡ ನೆಟ್ಟು , ನೀರುಣಿಸಿ, ಟಿಸಿಲೊಡೆದ ಚಿಗುರು ನೋಡಿ ” ನಾ ನೆಟ್ಟ … Read more