ನೀನಿಲ್ಲದೇ ಖಾಲಿಯಾಗಿದೆ ಬದುಕು: ಪೂಜಾ ಗುಜರನ್, ಮಂಗಳೂರು.

ಮೊದಲು ನಿನ್ನನ್ನು ಸರಿಯಾಗಿ ಬೈದು ಬಿಡಬೇಕು ಅನ್ನುವಷ್ಟು ಕೋಪ ಉಕ್ಕಿ ಬಂದರೂ ನನ್ನನ್ನು ನಾನು ನಿಯಂತ್ರಿಸಿಕೊಳ್ಳುತ್ತೇನೆ. ಅದೆಷ್ಟು ಬೈದರೂ ಅದು ನನ್ನ ಮೂಕವೇದನೆಗಷ್ಟೆ ಸಮಾ.ಈ ಮೌನಕ್ಕೂ ನಿನ್ನದೇ ಗುರುತು. ಅದಕ್ಕೆ ಸುಮ್ಮನಿದ್ದು ಬಿಡುತ್ತೇನೆ. ನಿನ್ನ ನೆನಪುಗಳನ್ನು ಮೂಟೆಕಟ್ಟಿ ಮೂಲೆಗೆಸದರೂ ನೀನು ಕಾಡುವುದನ್ನು ನಿಲ್ಲಿಸುವುದಿಲ್ಲ. ಅದೆಂತಹ ಹಠಮಾರಿ ನಿನ್ನ ನೆನಪುಗಳು. ‌ಕಾಡಿಸಿ ಪೀಡಿಸಿ ಗೊಂದಲವಾಗಿಸುತ್ತದೆ. ನೀನು ಮತ್ತೆ ಬರಲಾರೆ ಅನ್ನುವ ಸತ್ಯವನ್ನು ಯಾವುದೇ ಕಾರಣಕ್ಕೂ ಈ ಮನಸ್ಸು ಒಪ್ಪುತ್ತಿಲ್ಲ. ನಿನ್ನ ತಲುಪುವ ಎಲ್ಲ ಮಾರ್ಗಗಳು ಮುಚ್ಚಿ ಹೋಗಿವೆ. ಆದರೂ … Read more

ಪತ್ರಗಳು: ರಘು ಕೆ.ಟಿ.

ಜಾಹಿರಾತಿಗೆ ಅಂಕುಶ. . .  ಮಾನ್ಯರೆ, ಕೊನೆಗೂ ಆ ದಿನ ಬಂದೇಬಿಟ್ಟಿತು ನೋಡಿ.. .. ..  ಸುಳ್ಳು ಮತ್ತು ನಂಬಲಾರ್ಹವಲ್ಲದ ಜಾಹಿರಾತುಗಳನ್ನು ನೀಡಿ ಗ್ರಾಹಕರ ಕಣ್ಣಿಗೆ ಮಣ್ಣೆರಚ್ಚುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸುಲಭವಾಗಿ ಹಣಮಾಡುತ್ತಿರುವ ಬಹುರಾಷ್ಟ್ರೀಯ ಹಾಗೂ ಇತರೆ ಜಾಹಿರಾತು ಕಂಪನಿಗಳಿಗೆ ಕೇಂದ್ರೀಯ ಗ್ರಾಹಕ ರಕ್ಷಣೆ ಮಂಡಳಿಯು ಕೊನೆಗೂ ಅಂಕುಶವನ್ನು ಹಾಕಲು ನಿರ್ಧರಿಸಿರುವುದ ಸಂತೋಷದ ವಿಷಯ. ತಮ್ಮ ಉತ್ಪನ್ನಗಳನ್ನು ಮಾರಾಟಮಾಡಲು ಕಂಪನಿಗಳು ನಾನಾ ಬಗೆಯ ತಂತ್ರಗಳನ್ನು ಬಳಸಿಕೊಳ್ಳುವುದು ಸಾಮಾನ್ಯವಾಗಿದೆ. ಇದಕ್ಕೆ ಇಂಬುಕೊಡುವಂತೆ ವಿವಿಧ ಕ್ಷೇತ್ರಗಳ ದೊಡ್ಡ ದೊಡ್ಡ … Read more

ಕಿರು ತೆರೆಯಲ್ಲಿ ಕನ್ನಡ: ಶಿದ್ರಾಮ ಸುರೇಶ ತಳವಾರ

ಪ್ರಸಕ್ತ ದಿನಗಳಲ್ಲಿ ಮಹಿಳೆಯರೂ ಸೇರಿದಂತೆ ಹಲವಾರು ಪುರುಷರೂ ಕೂಡಾ ಕಿರುತೆರೆಯಲ್ಲಿ ಪ್ರಸಾರವಾಗುವ ಧಾರಾವಾಹಿಗಳ ದಾಸರಾಗಿದ್ದಾರೆ. ಮುಂಚೆ ಅದೆಷ್ಟೋ  ಕೌಟುಂಬಿಕ  ಎಂಬ ಶೀರ್ಷಿಕೆಯಡಿ ಧಾರಾವಾಹಿಗಳು ಬರುತ್ತಿದ್ದವು. ಅವುಗಳನ್ನು ಚಿಕ್ಕಂದಿನಲ್ಲಿದ್ದಾಗ ನಾವೂ ನೋಡಿದ್ದೇವೆ. ಆ ನಿರ್ದೇಶಕರ ಹೆಸರುಗಳನ್ನು  ನಾವು ಸರಿಯಾಗಿ ನೆನಪಿಟ್ಟುಕೊಳ್ಳದೇ ಹೋದರೂ ಆ ಧಾರಾವಾಹಿಗಳಿಂದ ನಾವು ಸಾಕಷ್ಟು ವಿಷಯಗಳೊಂದಿಗೆ ಕನ್ನಡ, ಕನ್ನಡದ ಪದಗಳನ್ನು ತಿಳಿದುಕೊಂಡು ಕಲಿತುಕೊಂಡಿದ್ದೇವೆ. ಇದು ಸಂತಸದ ವಿಷಯವಷ್ಟೇ. ಇತ್ತೀಚಿನ ಕೆಲ ವರ್ಷಗಳಿಂದ ಕನ್ನಡದ ಸುಮಾರು ಚಾನೆಲ್‌ಗಳು ದೃಶ್ಯ ಮಾಧ್ಯಮದಲ್ಲಿವೆಯಾದರೂ ಯಾವ ಮಾಧ್ಯಮವೂ ಸ್ಪಷ್ಠ ಕನ್ನಡದ ಉಚ್ಛಾರಣೆಯನ್ನು … Read more

ಗೆಳೆಯನಿಗೊಂದು ಪತ್ರ: ಜಯಪ್ರಕಾಶ್ ಪುತ್ತೂರು

ಪ್ರೀತಿಯ ಗೆಳೆಯನಿಗೆ ನಿನ್ನ ಗೆಳೆಯನ ನಮಸ್ಕಾರ. ಹೇಗಿದ್ದಿಯಾ ಎಂದು ಕೇಳುವುದಿಲ್ಲ, ಇತ್ತಿಚೆಗೆ ನಿನ್ನಲ್ಲಾದ ಕೆಲವು ಬದಲಾವಣೆಗಳನ್ನು ಗಮನಿಸಿಯೇ ಈ ಪತ್ರ ಬರೆಯುತ್ತಿದ್ದೇನೆ. ಬದುಕೇ ಮುಗಿದುಹೋಯಿತು ಎಂಬಂತೆ ಆತ್ಮಹತ್ಯೆಗೆ ಪ್ರಯತ್ನಿಸಿದಿಯಂತೆ? ಯಾಕೊ ನನ್ನ ಗೆಳೆಯ ನೀನು ಸದಾ ಜೀವನೋತ್ಸಾಹದ ಬಗ್ಗೆ ಮಾತನಾಡುತ್ತಿದ್ದವನು, ನಿನಗೆ ಜೀವನದ ಮೇಲೆ ಬೇಸರವೇ? ನಂಬೋಕೆ ಆಗ್ತಾ ಇಲ್ಲ ಕಣೋ. ಆದ್ರೂ ನಂಬಲೇಬೇಕು, ನಿನ್ನ ಇತ್ತಿಚೆಗಿನ ಬದಲಾದ ಮನೋಸ್ಥಿತಿಯನ್ನು. ಅಲ್ಲಾ ಕಣೋ ನೀನು ಪ್ರೀತಿಸಿದ ಹುಡುಗಿ ನಿನಗೆ ಸಿಗಲಿಲ್ಲ ಎಂಬ ಒಂದೇ ಕಾರಣಕ್ಕೆ ಈ ನಿರ್ಧಾರವೇ? … Read more

ಎರಡು ಪತ್ರಗಳು: ಎಚ್.ಕೆ.ಶರತ್, ವಿನಯ.ಎ.ಎಸ್.

ಮಿತಿಯ ಪರಿಧಿಯೊಳಗೆ ಪ್ರೀತಿ ಯಾವುದು ಪ್ರೀತಿ? ಹೊಸತನ್ನು ಅಪ್ಪುವುದೋ… ಹಳೆ ನಂಟು ಕಳಚುವುದೋ… ಕನಸುಗಳ ಗೂಡು ಕಟ್ಟುತ್ತ ವಾಸ್ತವದ ಎದೆಗೆ ಒದೆಯುವುದೋ… ಯಾವುದು ಪ್ರೀತಿಯಲ್ಲ? ಮೋಹದ ಗಂಟು ಸುತ್ತಿಕೊಂಡ ಭಾವವೋ… ಟೈಂ ಪಾಸ್ ಎಂಬ ಕ್ಷುಲ್ಲಕ ಗ್ರಹಿಕೆಗೆ ಅಡಿಯಾಳಾದ ತೋರಿಕೆಯ ಸಂಬಂಧವೋ… ನಿಜದ ನೆಲೆ ಹುಡುಕುತ್ತ ಹೊರಟರೆ ಎಲ್ಲವೂ ಗೋಜಲು ಗೋಜಲು. ವ್ಯವಸ್ಥೆ ನಿರ್ಮಿಸಿರುವ ಚೌಕಟ್ಟು ಮೀರಲು ಮುಂದಾಗುವ ಪ್ರೀತಿ ಹೊಸದೊಂದು ಬಿಕ್ಕಟ್ಟಿಗೆ ಮುನ್ನುಡಿ ಬರೆಯುತ್ತದೆ. ಚೌಕಟ್ಟುಗಳ ಮಿತಿಯಲ್ಲಿ ಪ್ರೀತಿ ಹುಟ್ಟುವುದಾದರೂ ಹೇಗೆ? ಜಾತಿ, ಅಂತಸ್ತು, ವಯಸ್ಸು, … Read more

ಪ೦ಜು ನಾ ಕ೦ಡ೦ತೆ: ವೆಂಕಟೇಶ್ ಪ್ರಸಾದ್

ಅದು ೨೦೧೧ ನವ೦ಬರ ಆಗ ನಾನು ಅ೦ತಿಮ ವರ್ಷದ ಪದವಿಯಲ್ಲಿದ್ದೆ. ಎಲ್ಲಾ ಕಾಲೇಜು ಹುಡುಗರ೦ತೆ ನಾನೂ ಫೇಸ್ ಬುಕ್ಕನ್ನು ಬಲವಾಗಿ ಅ೦ಟಿ ಕೊ೦ಡಿದ್ದೆ. ದಿನಾ ಬೆಳಗಾದರೆ ಫೇಸ್ಬುಕ್ ನೋಡದೆ ಮುಖ ಪ್ರಕ್ಷಾಳನ ಮಾಡಿಕ್ಕೊಳ್ಳುತ್ತಿರಲಿಲ್ಲ. ಹೀಗೆ ಒ೦ದು ದಿನ  ಫೇಸ್ ಬುಕ್ ನಲ್ಲಿ ಸ೦ಚರಿಸುತ್ತಿದ್ದಾಗ ‘ಕನ್ನಡ ಬ್ಲಾಗ್’ ಎ೦ಬ ಮಿತ್ರರ ಸಮೂಹದ ಪರಿಚಯವಾಯಿತು. ‘ಕನ್ನಡದ ಕ೦ಪ’ನ್ನು ಪಸರಿಸುವ ತಾಣಕ್ಕೆ ನಾನೂ ಸೇರಿಕೊ೦ಡೆ. ಅದರಲ್ಲಿ ಪ್ರಕಟವಾಗುತ್ತಿದ್ದ ಕಥೆ , ಕವನ , ಹಾಸ್ಯ ಲೇಖನ ಇತ್ಯಾದಿಗಳನ್ನ ಓದಿ/ಓದದೇ ಒ೦ದು ‘ಲೈಕ್’ … Read more

‘ಪಂಜು’ ವಿಗೆ ಹೃದಯ ಪೂರ್ವಕ ಶುಭಾಶಯಗಳು: ಸುಮನ್ ದೇಸಾಯಿ

             ತನ್ನ ಪ್ರಖರ ಬೆಳಕಿನ ಸೊಬಗಿನಿಂದ ಹೊಳೆಯುತ್ತ ೨೫ ನೇ ವಾರಕ್ಕೆ ಕಾಲಿಡುತ್ತಿರುವ " ಪಂಜು" ವಿಗೆ ನನ್ನ ಹೃದಯಪೂರ್ವಕ ಶುಭಾಶಯಗಳು. ಸಾಹಿತ್ಯದ ಮತ್ತ ಓದುವ ಹಪಹಪಿಯಿರುವ ನಾನು ಒಂದು ದಿನಾ ಹಿಂಗ ಕನ್ನಡ ವೆಬ್ ತಾಣಗಳನ್ನ ಹುಡಕಲಿಕತ್ತಾಗ ನನ್ನ ಕಣ್ಣಿಗೆ ಬಿದ್ದಿದ್ದು ಈ " ಪಂಜು" ಇ-ಪತ್ರಿಕೆ. ಆವಾಗಾಗಲೆ ಪತ್ರಿಕೆ ಶುರುವಾಗಿ ಒಂದ ೧೫ ವಾರ ಆಗಿದ್ವು ಅನಿಸ್ತದ. ಕೂತುಹಲದಿಂದ ಒಂದೊಂದ ವಾರದ ಸಂಚಿಕೆಗಳನ್ನ ತಗದು ನೋಡಿದ್ರ, ಹಬ್ಬದ … Read more

ನನ್ನ ಪುಟ್ಟ ಕನಸು:ವೀರ್ ಸಂತೋಷ್

  ನನ್ನ ಪುಟ್ಟ ಕನಸಿನ ಹೆಸರು, “ಪೂರ್ವಿ”. ಅವಳು ನನ್ನ ಜೀವನಕ್ಕೆ ಬಂದು ಇವತ್ತಿಗೆ ಸರಿಯಾಗಿ ಒಂದು  ವರ್ಷವಾಯ್ತು. ಒಂದು ವರ್ಷದ ಹಿಂದೆ ಇದ್ದ ಸಂತೋಷ ಇವತ್ತಿಗೂ ಹಾಗೇ ಇದೆ. ದಿನದಿಂದ ದಿನಕ್ಕೆ ಅವಳ ಮೇಲಿನ ಪ್ರೀತಿ ಜಾಸ್ತಿಯಾಗ್ತಾ ಇದೆ. ಅವಳನ್ನು ನೋಡಿದ ಮೊದಲನೇ ದಿನ ಇನ್ನೂ ನನ್ನ ಕಣ್ಣಲ್ಲಿ ಹಸಿರಾಗಿದೆ. ಅವಳನ್ನು ನೋಡಿದ ಮರುಕ್ಷಣವೇ ನನ್ನ ಜೀವನ ಪರಿಪೂರ್ಣವಾಯಿತು. ಅವಳ ನೋಟದ ಶಕ್ತಿಯೇ ಅಂತಹದ್ದು.  ಅವಳ ಪುಟ್ಟ ಕೈ ಬೆರಳುಗಳು ನನ್ನ ಕನಸಿನ ಲೋಕವನ್ನು ಚಿತ್ರಿಸಲು … Read more

ಈಗ ಬೇಕಿರುವುದು ಶುದ್ಧವಾದ ಓದು: ಜೋಗಿ

  ನಿಮ್ಮ ಪತ್ರಿಕೆ ಪಂಜು ಎರಡೂ ಸಂಚಿಕೆಗಳನ್ನು ಓದಿದೆ. ಇಷ್ಟವಾಯಿತು. ತಾವು ಓದಿದ ಕಾದಂಬರಿಗಳ ಬಗ್ಗೆ ಮತ್ತು ನೋಡಿದ ಸಿನಿಮಾಗಳ ಬಗ್ಗೆ ಬರೆಯುವುದು, ತಮ್ಮ ಅನುಭವಗಳನ್ನು ದಾಖಲಿಸುವುದು ಮತ್ತು ಒಳನೋಟಗಳನ್ನು ಹಂಟಿಕೊಳ್ಳುವುದು ಪತ್ರಿಕೆಯನ್ನು ಚೆಂದಾಗಿ ಮಾಡಿದೆ. ಇದಕ್ಕಿಂತ ಹೆಚ್ಚಾಗಿ ಬರೆಯುತ್ತಿರುವ ಬಹಳಷ್ಟು ಮಂದಿ ಹೊಸಬರಾಗಿರುವುದರಿಂದ ಪತ್ರಿಕೆಗೊಂದು ಹೊಸ ನೋಟವೂ ಸಿಕ್ಕಿದೆ. ಅನುಭವಿ ಲೇಖಕರು ಬರೆಯತೊಡಗಿದೊಡನೆ, ನಮಗೆ ಅವರ ನಿಲುವು, ದೃಷ್ಟಿಕೋನ, ಸಿದ್ಧಾಂತದ ಬಗ್ಗೆ ಪೂರ್ವಗ್ರಹ ಕೂಡ ಇರುವುದರಿಂದ ನಮ್ಮ ಓದನ್ನು ಅದು ಪ್ರಭಾವಿಸುತ್ತದೆ. ಇಲ್ಲಿ ಹಾಗಾಗುವುದಿಲ್ಲ. ಹೊಸ … Read more

ಅಂತರ್ಜಾಲ ಕನ್ನಡ ಬ್ಲಾಗ್ ಹಾಗೂ ಪತ್ರಿಕೆಗಳು ಮತ್ತು ಕನ್ನಡದ ಕಾಯಕ

ಬದಲಾಗುತ್ತಿರುವ ಪ್ರಸ್ತುತ ವಿದ್ಯಮಾನಗಳನ್ನು ಗಮನಿಸಿದರೆ ಪರಭಾಷಾ ಹಾವಳಿ ಹಾಗೂ ಆಂಗ್ಲ ಭಾಷೆಯ ವ್ಯಾಮೋಹ ನಮ್ಮನ್ನು ತೀರಾ ಕಾಡುತ್ತಿರುವ ವಿಷಯಗಳು ಏಕೆಂದರೆ ಈ ಎರಡೂ ವಿಷಯಗಳು ಕನ್ನಡದ ಉಳಿವಿಗೆ ಸಂಚಕಾರ ತಂದೊಡ್ಡಬಹುದು ಎನ್ನುವ ಮಾತನ್ನು ತಿರಸ್ಕರಿಸುವಂತಿಲ್ಲ. ಆದರೆ ಕನ್ನಡ ಸಾವಿಲ್ಲದ ಸಾವಿರ ಕಾಲ ಬದುಕುವ ಕನ್ನಡಿಗರ ಉಸಿರಾಗಿರುವ ಭಾಷೆ. ಆದರೆ ಪ್ರಸ್ತುತ ಸನ್ನಿವೇಷದಲ್ಲಿ ಕನ್ನಡ ಕಟ್ಟುವ ಕೆಲಸ ಅತ್ಯವಶ್ಯಕ. ಇಂತಹ ಕನ್ನಡ ಕಟ್ಟುವ ಕೆಲಸವನ್ನು ಹಲವಾರು ಸಂಸ್ಥೆಗಳು, ಸಂಘಟನೆಗಳು ನಿರ್ವಹಿಸುತ್ತಿವೆಯಾದರು ಕೆಲವೊಂದು ಕಾರ್ಯಗಳು  ಮಾತ್ರ ಕೇವಲ ಪತ್ರಿಕೆಗಳ ಸುದ್ದಿಗಷ್ಟೇ … Read more

ನಮ್ಮ-ನಿಮ್ಮ ಕದ ತಟ್ಟಿದೆ ಈ ಬೆಳಕಿನ ‘ಪಂಜು’

  ಒಮ್ಮೆ ಪ್ರಜಾವಾಣಿಯಲ್ಲಿ ಒಂದು ಸುಂದರ ವ್ಯಂಗ್ಯ ಚಿತ್ರ ಪ್ರಕಟವಾಗಿತ್ತು. ಅದನ್ನು ಬರೆದದ್ದು ಯಾರೆಂದು ಮರೆತಿದ್ದೇನೆ. ಆ ಚಿತ್ರ ಹೀಗಿತ್ತು: ಒಬ್ಬ ಯುವಕ, ಸಾಕಷ್ಟು ದಿನ ಕೂದಲು ಗಡ್ಡ ಟ್ರಿಮ್ ಮಾಡಿಸದೆ ಫಲವತ್ತಾಗಿ ಬೆಳೆದುಬಿಟ್ಟಿದೆ. ಆತ ಒಂದು ಕಂಪ್ಯೂಟರಿನ ಮುಂದೆ ಕುಳಿತಿದ್ದಾನೆ. ಆತನು ಆಚೀಚೆ ಅಲುಗಾಡದಂತೆ ಕುಳಿತಿದ್ದುದಕ್ಕೆ ಸಾಕ್ಷಿಯೆಂಬಂತೆ ಆತನ ಗಡ್ಡ–ಮುಖಕ್ಕೂ ಮತ್ತು ಆ ಕಂಪ್ಯೂಟರಿನ ಮಾನೀಟರಿಗೂ ದಟ್ಟಾದ ಜೇಡರ ಬಲೆ ಹೆಣೆದುಕೊಂಡುಬಿಟ್ಟಿದೆ. ಈ ಅರ್ಥವತ್ತಾದ ಚಿತ್ರ ಹೇಳುವಂತೆ ನಾವೆಲ್ಲರೂ ಇಂದು ಕಂಪ್ಯೂಟರ್, ಅಂತರ್ಜಾಲ ಎಂಬ ಮೋಹಕತೆಗೆ … Read more