ಕನ್ನಡ ಹಾಡು ಬರೆಯಲು ಮದ್ರಾಸಿಗೆ ಹೋದ ಕಥೆಯು: ಹೃದಯಶಿವ ಅಂಕಣ

"ಬಿಳಿ ಕೂದಲಿಗೆ ಬೆಳ್ಳಿ ರೇಟು ಬಂದುಬಿಟ್ಟರೆ ಹೆಂಗಿರುತ್ತೆ ಶಿವಾ?" ಅಂತ ಮುರಳಿಮೋಹನ್ ರವರು ಹೇಳುತ್ತಿದ್ದಂತೆಯೇ ಡ್ರೈವರ್ ಗಕ್ಕನೆ ಗಾಡಿ ಸೈಡಿಗೆ ಹಾಕಿದ. ಕ್ಷಣಹೊತ್ತಿನ ಮೌನದ ನಂತರ ನಾನು, "ಅಣ್ಣತಮ್ಮಂದಿರು ಭಾಗ ಆಗುವ ಸಂದರ್ಭದಲ್ಲಿ ತಂದೆತಾಯಿಗಳು ತಮ್ಮ ಕಡೆಗೇ ಇರಲಿ ಅಂತ ಪಟ್ಟು ಹಿಡೀಬಹುದು ಸಾರ್" ಅಂದೆ. ಒಂದು "ಗೊಳ್ " ಅನ್ನಬಹುದಾದ ಸಾಮೂಹಿಕ ನಗೆಯ ತರುವಾಯ ಎಲ್ಲರೂ ಗಂಭೀರವಾಗಿ ಕಾರಿನಿಂದ ಕೆಳಗಿಳಿದು ಒಬ್ಬರಿಗೊಬ್ಬರು ಗ್ಯಾಪು ಬಿಟ್ಟುಕೊಂಡು ಬೇಲಿಯೆಡೆಗೆ ಮುಖಮಾಡಿ ನಿಂತು ತಂತಮ್ಮ ಲಕ್ಷ್ಯವನ್ನು ತಂತಮ್ಮ ಪ್ಯಾಂಟಿನ ಜಿಪ್ಪಿನತ್ತ … Read more

ಅಣ್ಣಾವ್ರ ಜೊತೆ ಒಂದು ಬೆಳಗ್ಗೆ: ಹೃದಯಶಿವ

ಗುರುಕಿರಣ್ ರನ್ನು ನಾವೆಲ್ಲಾ ಸಾಮಾನ್ಯವಾಗಿ ಗುರೂಜಿ ಅಂತೀವಿ. ಇಂಥ ಗುರೂಜಿ ಒಂದು ಬೆಳಗ್ಗೆ ತಮ್ಮ ಜೊತೆ ನನ್ನನ್ನೂ ಆಕಾಶ್ ಆಡಿಯೋಗೆ ಕರೆದುಕೊಂಡು ಹೋಗಿದ್ದರು. ಆಗಿನ್ನೂ ಒಂದೇ ಒಂದು ಹಾಡು ಸೈತ ಸಿನಿಮಾಗೆ ಬರೆದಿರಲಿಲ್ಲ ನಾನು. ಚಿತ್ರಗೀತೆ ಬರೆಯುವುದರ ಕುರಿತು ಆಗಷ್ಟೇ ಕಲಿಕೆಯ ಹಂತದಲ್ಲಿದ್ದ ನನಗೆ ರೆಕಾರ್ಡಿಂಗ್ ಸಂದರ್ಭದಲ್ಲಿ ಸ್ಟುಡಿಯೋ ಒಳಗೆ ಜರುಗುವ ವಿದ್ಯಮಾನಗಳ ಬಗ್ಗೆ ತೀರಾ ಕುತೂಹಲವಿತ್ತು. ಗಾಯಕ/ಗಾಯಕಿ ಬಂದು ಸಾಹಿತಿಯ ಮುಖೇನ ಸಾಹಿತ್ಯವನ್ನು ತಮ್ಮ ಡೈರಿಯಂಥ ಪುಸ್ತಕದಲ್ಲಿ ಬರೆದುಕೊಳ್ಳುವುದು, ನಂತರ ಟ್ರ್ಯಾಕ್ ಕೇಳುವುದು, ಟ್ಯೂನಿಗನುಗುಣವಾಗಿ ತಾವು … Read more