ಕನ್ನಡ ನಾಡಿನ ಸಾಹಿತ್ಯ ಲೋಕದ ಅದ್ವಿತೀಯ ಧ್ರುವತಾರೆ- ಡಿವಿಜಿ: ಹನಿಯೂರು ಚಂದ್ರೇಗೌಡ

  ಕನ್ನಡ ನಾಡಿನ ಸಾಹಿತ್ಯ ಲೋಕದ ಅದ್ವಿತೀಯ ಧ್ರುವತಾರೆ ಡಿವಿಜಿ.ಇವರ ಅನೇಕ ಅನನ್ಯ  ಸಾಧನೆಗಳ  ನಡುವೆ ನಮಗೆ ಶ್ರೇಷ್ಠವೆನಿಸಿರುವುದು  ತತ್ವಾಧಾರಿತವಾದ ಅವರ ಕಾವ್ಯಗಳಾದ "ಮಂಕುತಿಮ್ಮನ ಕಗ್ಗ" ಮತ್ತು "ಮರುಳ ಮುನಿಯನ ಕಗ್ಗ" ಗಳೇ  ಎನ್ನುವುದು ಸರ್ವವಿದಿತ. ಪತ್ರಿಕೋದ್ಯಮವೇ ಸರ್ವಸ್ವವೆಂದು ತಿಳಿದಿದ್ದ ಡಿವಿಜಿ ಸಾಹಿತ್ಯ ಲೋಕಕ್ಕೆ ಪಾದವಿರಿಸಿದ್ದು ಮಾತ್ರ ಅನಿರೀಕ್ಷಿತವೇ.ಆದರೂ ಅವರೊಬ್ಬ ದಾರ್ಶನಿಕ ಬರಹಗಾರ. 1887 ರ ಮಾರ್ಚ್ 17 ಜನಿಸಿದ  ಇವರಿಗೆ ಇಂದಿಗೆ  (ಮಾರ್ಚ್ 17, 2013ಕ್ಕೆ ) 126 ವಸಂತದ ಸಂಭ್ರಮ. ಈ ನೆಪದಲ್ಲೊಂದು ಅವರ … Read more

ಅಪರಿಚಿತ: ರುಕ್ಮಿಣಿ ಎನ್.

ಆಗ ಸಮಯ ಅಪರಾಹ್ನದ ೩ ಘಂಟೆ ೨೦ ನಿಮಿಷಗಳು. ದಾದರ್ ನಿಂದ ಧಾರವಾಡಕ್ಕೆ ಹೋಗುವ ಮುಂಬೈ-ಧಾರವಾಡ ಎಕ್ಸ್‌ಪ್ರೆಸ್ ಟ್ರೈನ್ ಹೊರಡುವುದು ಕೇವಲ ೫ ನಿಮಿಷಗಳು ಮಾತ್ರ ಬಾಕಿ ಇತ್ತು. ಅತ್ತಲಿಂದ ಒಬ್ಬ ತರುಣೆ ಟ್ರೈನ್ ತಪ್ಪಿ ಹೋಗಬಹುದೆಂಬ ಭೀತಿಯಲ್ಲಿ, ಅಕ್ಕ-ಪಕ್ಕದವರನ್ನು ಲೆಕ್ಕಿಸದೇ ಎದುರಿಗೆ ಬಂದವರನ್ನು ನೂಕುತ್ತ, ಮತ್ತೆಲ್ಲೋ ಕಣ್ಣಾಡಿಸುತ್ತ ಓಡುತ್ತಲೇ ಇದ್ದಳು. ಟ್ರೈನ್ ಹಸಿರು ನಿಶಾನೆ ತೋರಿಸಿ ಕೊನೆಗೊಮ್ಮೆ ಹಾರ್ನ್ ಹಾಕಿ ಇನ್ನೇನು ಹೊರಟೆ ಬಿಟ್ಟಿತು ಅನ್ನೋವಷ್ಟರಲ್ಲಿ ಅವಳು ಟ್ರೈನ್ ಹತ್ತಿಬಿಟ್ಟು, ಸ್ವಲ್ಪ ತಡವಾಗಿದ್ದರೂ ಟ್ರೈನ್ ತಪ್ಪಿ … Read more

ಮೂವರ ಕವನಗಳು: ರಾಜಹಂಸ, ಸೋಮೇಶ್ ಎನ್ ಗೌಡ, ಕೆ.ಮುರಳಿ ಮೋಹನ್ ಕಾಟಿ

ಭೂಲೋಕದ ಸ್ವರ್ಗ ಭೂಲೋಕದ ಸ್ವರ್ಗ ಈ ಕರ್ನಾಟಕ ಯಾತ್ರಿಕರ ಹೃದಯಕ್ಕೊಂದು ಪುಳಕ ಕೈಮುಗಿದು ಬಿನ್ನಹಿಸಿ ಈ ನಾಡಿಗೆ ನಮ್ಮಮ್ಮ ಭುವನೇಶ್ವರಿ  ಮಾತೆಗೆ   ಹಗಲಿರುಳು ದುಡಿಯಿರಿ ವಾಙ್ಮಯದಭಿವೃದ್ಧಿಗೆ ಎಡಬಿಡದೆ ಶ್ರಮಿಸಿರಿ ಸಿರಿಗನ್ನಡದೇಳಿಗೆಗೆ ಎಂದೆಂದಿಗೂ ಕಡೆಗಣಿಸದಿರಿ ಸವಿಗನ್ನಡನುಡಿಗೆ ಸಿರಿಗನ್ನಡನಾಡಿಗೆ ಚಿನ್ನದ ಮಣ್ಣಿಗೆ ಪುಣ್ಯದ ಭೂಮಿಗೆ ಬೆಳದಿಂಗಳಬೀಡಿಗೆ   ಉಸಿರಿರುವರೆಗೂ ನುಡಿಯಲಿ ನಮ್ಮ ನಾಲಿಗೆ ಅಮೃತ ಸವಿಯ ಜೇನು ರುಚಿಯ ಕನ್ನಡ ನುಡಿಗೆ ಒಗ್ಗಟ್ಟಾಗಿ ಹೋರಾಡ ಬನ್ನಿರಿ ತಾಯಿನಾಡಿನರಕ್ಷಣೆಗೆ ಕನ್ನಡದ ಛಲವೊಂದೆ ಕನ್ನಡದ ನೆಲವೊಂದೆ ಕನ್ನಡದ ನುಡಿವೊಂದೆ ಕನ್ನಡದ ಮನವೊಂದೆ!  … Read more

ಕಲಾಮಾರ್ಗೀಯ ಸಿನೆಮಾ ಎಂಬ ಕೌಶಲದ ಸಂವೇದನೆ…: ಮಹದೇವ ಹಡಪದ್

ನಮ್ಮ ಹಳ್ಳಿಗಳಲ್ಲಿ ಇನ್ನೂ ಕತೆ ಕೇಳುವ ಮತ್ತು ಹೇಳುವ ಹಂಬಲ ಕಮ್ಮಿಯಾಗಿಲ್ಲ. ಎಷ್ಟೋ ಕಥನಗಳು ಕಟ್ಟೆಯ ಮುಶೈರಾಗಳಲ್ಲಿ ಹಾಗೆ ಉಳಿದಿದ್ದಾವೆ ಎಂದರೆ ಉತ್ತರಕ್ಕಾಗಿ ಮಾಯಾಪೆಟ್ಟಿಗೆಯ ಕಡೆ ನೋಡಬೇಕಾಗುತ್ತದೆ. ಅಲ್ಲಿನ ಆರಂಭದ ಅಪಲಾಪದಿಂದ ಹಿಡಿದು ಜಾಹಿರಾತಿನ ತುಣುಕು ಸುರುವಾಗುವತನಕ ನೆಟ್ಟನೋಟದಿಂದ ಆಚೀಚೆ ಸರಿದಾಡದೇ ಕುಳಿತುಬಿಡುವವರ ವಯಸ್ಸಿಗೆ ನಿರ್ಬಂಧವೇ ಇಲ್ಲ. ಹಾಗೆ ನೋಡುವವರ ಮತ್ತು ನೋಡಿಸಿಕೊಳ್ಳಲ್ಪಡುವವರ ಕುರಿತು ವ್ಯವಹಾರಿಕ ಅಧ್ಯಯನ ಏನೇ ಹೇಳಿರಲಿ ಅಲ್ಲಿ ಸಹಜ ಅನುಕಂಪಗಳೇ ಬಂಡವಾಳವಾಗುತ್ತ ಹೋಗುವ ರೀತಿ ಮಾತ್ರ ಸಮಾಜದ ಆಂತರಿಕ ಸ್ಥಿರತೆಗೆ ಪೆಟ್ಟುಕೊಡುವುದಂತೂ ಖಚಿತ. … Read more

ಯುದ್ಧವೆಂದರೆ ಬರೀ ಸೋಲು ಗೆಲುವಲ್ಲ: ವಾಸುಕಿ ರಾಘವನ್

ನಮ್ಮಲ್ಲಿ ಯುದ್ಧದ ಸಿನಿಮಾಗಳೇ ಬಹಳ ಅಪರೂಪ. ಐತಿಹಾಸಿಕ ಚಿತ್ರವಾದರೆ ಯುದ್ಧ ಅಂದರೆ ರಾಜರ ಕಾಲದ ಕಾಸ್ಟ್ಯೂಮ್ ಧರಿಸಿ ಮಾಡುವ ಫೈಟಿಂಗ್ ಅಷ್ಟೇ. ಈಗಿನ ಕಾಲದ ಕಥೆ ಆಗಿದ್ದರೆ ಅದು ಯಾವುದಾದರೊಂದು ಯುದ್ಧದ ಡಾಕ್ಯುಮೆಂಟರಿ ಥರ ಇರುತ್ತೆ. ಜೊತೆಗೆ ಅದೇ ಕ್ಲೀಷೆಗಳು – ಮಗನ ಬರುವಿಕೆಗಾಗಿ ಕಾಯುತ್ತಿರುವ ವಿಧವೆ ಅಮ್ಮ, ಪರ್ಸಿನಲ್ಲಿ ಇರೋ ಹೆಂಡತಿ ಫೋಟೋ ನೋಡ್ತಾ ಸಾಯೊ ಸೈನಿಕ, ಯೋಧರು ಅಂದರೆ ಬರೀ ಒಳ್ಳೆಯವರು ಅನ್ನೋ ಭಾಷಣ. ನಮ್ಮಲ್ಲಿ anti-war ಸಿನಿಮಾಗಳು ಇಲ್ಲವೇ ಇಲ್ಲ. ಸ್ವಲ್ಪ ಮಟ್ಟಿಗೆ … Read more

ಕುವೆಂಪುರವರ ಸೂರ್ಯಗೀತೆ; ಆನಂದಮಯ ಈ ಜಗಹೃದಯ: ದಿವ್ಯ ಆಂಜನಪ್ಪ

ಆನಂದಮಯ ಈ ಜಗಹೃದಯ……… ಕುವೆಂಪುರವರ ಸೂರ್ಯಗೀತೆಗಳಲ್ಲಿ ಪ್ರಸಿದ್ಧವಾದ ಈ ಗೀತೆಯೂ ಒಂದು. ಕವಿಗಳು ಈ ಜಗತ್ತಿನ ಎಲ್ಲಾ ಆಗೂ-ಹೋಗುಗಳ ಮೂಲವು 'ಶಿವ'ನೆಂದು ಭಾವಿಸುತ್ತಾರೆ. ಹಸುರಿನಿಂದ ನಳನಳಿಸುವ ಸಹ್ಯಾದ್ರಿಯಂತಹ ಬೆಟ್ಟಗಳು-ಅರಣ್ಯಗಳು. ಭೋರ್ಗರೆವ ಸಾಗರ, ನೀಲಿ ಆಕಾಶ, ಧುಮ್ಮಿಕ್ಕುವ ಜಲಧಾರೆ, ಸೋನೆ ಮಳೆ, ಹಕ್ಕಿಗಳ ಚಿಲಿಪಿಲಿ, ಮೋಡಗಳ ಘರ್ಜನೆ, ಹಾಡುವ ಕೋಗಿಲೆಗಳ ಕಂಠ ಸಿರಿ- ಹೀಗೆ ಪ್ರಕೃತಿಯ ಪ್ರತೀ ಸೌಂದರ್ಯದಲ್ಲೂ ಶಿವನ ಹೃದಯವು ವಿಸ್ತರಿಸಿದೆ ಎಂದು ಕವಿ ಉನ್ಮತ್ತರಾಗಿ ಹಾಡಿದ್ದಾರೆ. ಪ್ರಕೃತಿಯಲ್ಲಿ ಸಾಧಾರಣವಾಗಿ ಸಂಭವಿಸುವ ಸೂರ್ಯೋದಯ ಚಂದ್ರೋದಯವೂ ದೇವನ ದಯೆ … Read more

ನನ್ನೊಳಗಿನ ಗುಜರಾತ (ಭಾಗ 9): ಚಿನ್ಮಯ್ ಮಠಪತಿ

  ಬದಲಾಗುತ್ತಿರುವ ಜೀವನ ಕ್ರಮವನ್ನೊಮ್ಮೆ ಸಿಂಹಾವಲೋಕನ ಮಾಡಬೇಕು. ಇಂತಹ ಒಂದು ಅವಲೋಕನ ಮಾಡಿದರೆ, ಎಷ್ಟೋ ವಿಸ್ಮಯಗಳು ನಮ್ಮನ್ನು ಯಾವದೋ ಒಂದು ಮಾಯಾಲೋಕಕ್ಕೆ ಕರೆದೊಯ್ದು ಒಂದು ಸುತ್ತು ಸುತ್ತಾಡಿಸಿಕೊಂಡು ಬರುತ್ತವೆ.  ಈ ನಡುವೆ ನಮ್ಮಲ್ಲಿ ಹಲವಾರು ಪ್ರಶ್ನೆಗಳು ಹುಟ್ಟುತ್ತವೆ ಮತ್ತು ಉತ್ತರವನ್ನು ಕೆಲವೊಂದಿಷ್ಟು ಪ್ರಶ್ನೆಗಳು ಕಂಡುಕೊಳ್ಳುತ್ತವೆ. ಕೆಲವು ಪ್ರಶ್ನೆಗಳು ಪ್ರಶ್ನೆಗಳಾಗಿಯೇ ಉಳಿಯುತ್ತವೆ. ಮೊನ್ನೆ, ನೆನ್ನೆ ಮತ್ತು ಇವತ್ತೆಂಬ ಈ ಪುಟ್ಟ ಕಾಲಾಂತರದಲ್ಲಿ ಕಾಣ ಸಿಗುವ ಅಮೋಘ ಬದಲಾವಣೆಗಳ ಜೊತೆ,  ಚೂರು ಹಿಂದೆ ಸರಿದು ಹಿಂದಿನ ವಿದ್ಯಮಾನಗಳನ್ನು ಅವಲೋಕಿಸಿದರೆ ಅದರ … Read more

ಕಾಮಾತುರಾಣಾಂ: ಉಪೇಂದ್ರ ಪ್ರಭು

'ಏ ಚೆನ್ನಾಗಿ ಥಳಿಸು. ಜೀವಮಾನವಿಡೀ ಮರೀಬಾರ್ದು. ಮಾನಗೇಡಿ, ಏನಂದ್ಕೊಂಡಿದ್ದಾನೆ?' 'ಹಾಡುಹಗಲಲ್ಲೇ ಈ ಥರ ವರ್ತಿಸೋರು ಇನ್ನು ರಾತ್ರೆ ಏನೆಲ್ಲಾ ಮಾಡಿಯಾರೋ?' 'ಎಷ್ಟು ಕೊಬ್ಬು. ಅವಳ ಅಪ್ಪನ ವಯಸ್ಸಾಗಿರಬಹುದು!' 'ಕಾಮಾತುರನಿಗೆ ಎಲ್ಲಿಯ ಭಯ , ಎಲ್ಲಿಯ ಲಜ್ಜೆ !' 'ಎಲ್ಲಾ ಈ ಕುಡಿತದಿಂದ.  ದಿನಾ ನೋಡ್ತಿದ್ದೀವಿ. ಮಧ್ಯಾಹ್ನ, ಸಂಜೆ, ರಾತ್ರೆ, ಹೊತ್ತಿಲ್ಲ ಗೊತ್ತಿಲ್ಲ, ತೂರಾಡುತ್ತಲೇ ಇರುತ್ತಾನೆ.  ಈ ಗೌರ್‍ಮೆಂಟ್ನವ್ರೂ ಅಷ್ಟೆ. ತಮ್ಮ ಲಾಭಕ್ಕೆ ಎಲ್ಲಾರ್ಗೂ ಲೈಸನ್ಸ್ ಕೊಟ್ಟ್‍ಬಿಟ್ಟಿದ್ದಾರೆ. ಹೆಜ್ಜೆಗೊಂದೊಂದು ಬಾರ್, ಸಾರಾಯಿ ಅಂಗಡಿ!'  'ಚಪ್ಲಿಯಿಂದ ಬಾರಿಸ್ರೋ, ಸತ್ರೂ ಸಾಯ್ಲಿ. … Read more

ಹೀಗೂ ಒಂದು ಪ್ರೇಮ ಪತ್ರ: ಶೀತಲ್ ವನ್ಸರಾಜ್

ಪ್ರೀತಿಯೊಂದಿಗೆ ಪೂರ್ಣತೆ ತಂದವಳೇ ,               ಅಪ್ಪ,ಅಮ್ಮ,ಕಸಿನ್ಸ್ ,ಫ್ರೆಂಡ್ಸ್ ಎಲ್ಲರೂ ಇದ್ದರೂ ಎನೋ ಒಂದು ಕೊರತೆ ಇತ್ತು ಜೀವನದಲ್ಲಿ.. ಕೇಕ್ ಮೇಲೆ ಚೆರ್ರಿ ಮಿಸ್ ಆದಂತೆ,ಕಾಫಿಯಲ್ಲಿ ಕೊಂಚ ಸಕ್ಕರೆ ಕಡಿಮೆ ಇದ್ದಂತೆ,ಸಿಂಗರಿಸಿಕೊಂಡ ಹೆಣ್ಣು ಕುಂಕುಮವಿಡುವುದ ಮರೆತರೆ ಹೀಗೆ ಏನೇನೊ ಅಪೂರ್ಣ…ನೀ ಬಂದಾಗ ಅದಕ್ಕೆಲ್ಲಾ ಪೂರ್ಣತೆ ಸಿಕ್ಕಂತೆ,ಜೀವನಕ್ಕೊಂದು ಅರ್ಥ ಸಿಕ್ಕಿತು ನೀ ನನಗೆ ಸ್ವಂತವಾದ ದಿನವೇ…ನಾವಿಬ್ಬರು ಸೇರಿ ನಡೆಸಿದ ಜೀವನ ಸರಸ -ವಿರಸಗಳೊಡನೆ  ನೀ ಕರೆಯುತ್ತಿದ್ದಾಗ ಒಮ್ಮೊಮ್ಮೆ ನನ್ನ 'ಜೀ' ಎಂದು, 'ವನ್' ಎಂಬುದು ಇರದಿದ್ದರೂ ಜೀವನವೊಂತು ಸಂಪೂರ್ಣವಾಗಿತ್ತು…ಈಗ … Read more

ಹೀಗೊಂದು ಕಥೆ: ಸುನಿಲ್ ಗೌಡ

  "ಎಲ್ಲಾ ಕೆಲ್ಸ ಮುಗ್ಸಿ ತಿಂಡಿ ಮಾಡಿದ್ರು ಇನ್ನೂ ಬಿದ್ದಿದ್ದೀಯಲ್ಲಾ, ಚಿಂತೆ ಇಲ್ದೋನ್ಗೆ ಚಿತೆ ಮೇಲೆ ಮಲ್ಗಿಸಿದ್ರು ನಿದ್ದೆ ಬರ್ತವಂತೆ. ಎದ್ದು ತೋಟ ನೋಡೋಗೊ ಸೋಮಾರಿ, ಈಗೀನ್ ಕಾಲದ್ ಹುಡುಗ್ರು ಮಲ್ಗದು ಏಳದು ಯಾವ್ದು ಸರಿ ಮಾಡಲ್ಲ". ಅಡುಗೆಯ ಮನೆಯಿಂದ ವಗ್ಗರಣೆಯ ತುಪ್ಪದ ವಾಸನೆ ಜೊತೆ ಸರ್ರನೆ ಬಂದ ಅಮ್ಮನ ಧ್ವನಿಗೆ ಕಿವಿ ಮುಚ್ಚಿ ವಗ್ಗರಣೆಯ ವಾಸನೆಯನ್ನು ಆಸ್ವಾದಿಸಲು ಮುಂದಾದೆ, "ಏಳ್ತೇನೆ ತಡಿಯಮ್ಮ, ಯಾಕೆ ಈ ತರಹಾ ಕಿರುಚ್ತೀಯ, ಆ ವಾಯ್ಸ್ ನನ್ ಕಿವೀಲಿ ಕೇಳೋಕೆ ಆಗಲ್ಲಾ.." … Read more

ಮೂವರ ಚುಟುಕಗಳು: ಶಂಕರ್ ಕೆಂಚನೂರು, ಪ್ರತಾಪ್ ಬ್ರಹ್ಮವಾರ್, ರಾಜಶೇಖರ (ಬಂಡೆ)

ಪರಿತ್ಯಕ್ತರು ಆ ಅರಳಿ ಕಟ್ಟೆಮೇಲೆ ಒಂದಷ್ಟು ಜನ ಹಿರಿಯರು, ಇನ್ನೊಂದು ಕಡೆ ಗಾಜು ಒಡೆದಿದ್ದಕ್ಕೆ ಚಿತ್ರ ಮಾಸಿದ್ದಕ್ಕೆ ಪೂಜೆಯ ಅರ್ಹತೆ ಕಳೆದುಕೊಂಡ ದೇವರ ಫೋಟೋಗಳು -ಶಂಕರ್ ಕೆಂಚನೂರು ಅನಾಥ ನಿರೀಕ್ಷೆ ತುಕ್ಕು ಹಿಡಿದ ತಕ್ಕಡಿಯಂತ ಹೃದಯವನ್ನಾ  ಅದ್ಯಾರದೋ ಮನಸ್ಸಿಗೆ ತೂಕಕಿಟ್ಟೆ   ಅದೂ ಪಕ್ಕಾ ವ್ಯಪಾರಿ  ತೂಕಿಸಿಕೊಂಡು  ಮತ್ತೆ ಕೆಲಸಕೆ ಬರದ ತಕ್ಕಡಿಯೆಂದು ನನ್ನತ್ತ ತಳ್ಳಿತು  ಅನಾಥ ಹೃದಯ ಮತ್ತೆ ಎತ್ತಿಕೊಳುವ  ಮನಸಿಗೆ ಕಾಯುತಿಹುದು ಶಬರಿ ಕಾದಂತೆ   -ಪ್ರತಾಪ್ ಬ್ರಹ್ಮವಾರ್   ಬಂಡೆಯ ಚುಟುಕಗಳು ಮುಳುಗಡೆಗೆ … Read more

ಆತ್ಮ ಮತ್ತು ಮನಸ್ಸುಗಳಿಗೆ ಆನಂದ ತರುವದೆ, ಆಧ್ಯಾತ್ಮ: ಕೆ.ಎಂ. ವಿಶ್ವನಾಥ

ಈ ಭೂಮಿಯಲ್ಲಿ ಯಾವುದೂ ಶಾಶ್ವತವಲ್ಲ, ಎಲ್ಲವೂ ಒಂದು ದಿನ ನಶಿಸಿ ಹೋಗುತ್ತದೆ. ಅದರಲ್ಲಿ ಉಳಿವುದೊಂದೇ ಜೀವಾತ್ಮ. ಅದನ್ನು ಸದಾ ಸಂತೋಷವಾಗಿಡುವ ಏಕೈಕ ಅಸ್ತ್ರವೆಂದರೆ ಅದೇ ಆಧ್ಯಾತ್ಮ . ಸಂಸಾರದ ಈ ಸಾಗರದಲ್ಲಿ ತಾಪತ್ರಯಗಳು, ವೇದನೆ  ನೋವು, ಜಿಗುಪ್ಸೆ, ಹತಾಶೆ, ಸಂತೋಷ, ಇವೆಲ್ಲ ತಪ್ಪಿದಲ್ಲ, ಎಲ್ಲವೂ ನಮ್ಮನ್ನು ತಿಂದು ಹಾಕುವುದು, ಸದಾ ನಮ್ಮ ಮನಸ್ಸು ಮತ್ತು ಆತ್ಮಗಳಿಗೆ ಚಿಂತನೆಗೆ ಹಚ್ಚುವುದು. ನಿಂತಲ್ಲಿ ನಿಲ್ಲದೆ, ಕೂತಲ್ಲಿ ಕೂಡದೆ ಹೋಗುವುದು, ಅತ್ತಿಂದ ಇತ್ತ ಮಂಗದಂತೆ ಜಿಗಿದಾಡುವದು, ನಾವು ವಿನಾಕಾರಣ ಕೋಪಗೊಳ್ಳುವುದು, ಮತ್ತೊಬ್ಬರ … Read more