ಹೆತ್ತ ಕರುಳು-ತಾಯ್ತನ-ಮಮತೆ: ಕೃಷ್ಣವೇಣಿ ಕಿದೂರು

ಸುಬ್ಬಕ್ಕ ಮಿಲಿಟರಿಯಲ್ಲಿದ್ದ ಮಗನಿಗೆ ಮದುವೆ ಮಾಡಿದರೂ ಸೊಸೆಯನ್ನು ಮಗನೊಂದಿಗೆ ಕಳಿಸಲೇ ಇಲ್ಲ. ವರ್ಷಕ್ಕೊಮ್ಮೆ ಎರಡು ತಿಂಗಳ ರಜಾದಲ್ಲಿ ಆತ ಬಂದಾಗ ಅವಳಿಗೆ ಗಂಡನ ದರ್ಶನ. ಅವನಿಗೂ ಅಮ್ಮ ಹೇಳುವುದರಲ್ಲಿ ತಪ್ಪೇನಿಲ್ಲವೆನಿಸುತ್ತಿತ್ತು. ಮುದುಕರು, ಇಬ್ಬರೇ ಇದ್ದಾರೆ; ಕೂಗಿ ಕರೆದರೆ ಓಗೊಡಲು ಸೊಸೆ ಇರಲಿ ಎಂದರೆ ತಪ್ಪೇನು? ರಜಾದಲ್ಲಿ ಮಗ ಬಂದರೂ ಸುಬ್ಬಕ್ಕನ ಒಂದು ಕಿವಿ ಇವರತ್ತಲೇ ಇರುತ್ತಿತ್ತು. ಸೊಸೆ ಮಗನ ಕಿವಿ ಊದಿ ಕರೆದುಕೊಂಡು ಹೋಗಲು ಹಟ ಹಿಡಿದರೆ ಎಂಬ ಭೀತಿ,  ಅವರಿಬ್ಬರನ್ನು ಹತ್ತಿರವಾಗಲು ಬಿಡದಂತೆ ಕಾಯುವಂತೆ ಮಾಡಿತ್ತು. … Read more

ಬದುಕಿನೊಳಗೊಂದಾಗಿ ಬೆರೆತ ಮಂಕುತಿಮ್ಮನ ಕಗ್ಗದ ಸೊಬಗು: ಸುರೇಶ್ ಮಡಿಕೇರಿ

ತರಚುಗಾಯವ ಕೆರೆದು ಹುಣ್ಣನಾಗಿಪುದು ಕಪಿ ಕೊರತೆಯೊಂದನು  ನೀನು ನೆನೆನೆನೆದು ಕೆರಳಿ ಧರೆ ಎಲ್ಲವನು ಶಪಿಸಿ ಮನದಿ ನರಕವ ನಿಲಿಸಿ ನರಳುವುದು ಬದುಕೇನೋ? ಮಂಕುತಿಮ್ಮ ಇದೇನೋ ಸೂರಿ ಏನೋ ಬಡಬಡಿಸ್ತಾ ಇದ್ದೀಯಾ? ಯಾರೀ ಮಂಕುತಿಮ್ಮ? ಎಂದು ಪ್ರಶ್ನಿಸಿದ ಸ್ನೇಹಿತನ ಮೇಲೆ ಕೋಪ ಬಂದರೂ ತೋರ್ಪಡಿಸಿಕೊಳ್ಳದೆ ಏನೂ ಇಲ್ಲ ಕಣೋ ಅದು ಡಿ.ವಿ.ಜಿ ಅವರ ಕಗ್ಗ ಎಂದೆ. ಹೌದಾ, ಏನಿದರ ಅರ್ಥ ಎಂದ ಅವನಿಗೆ ನನಗೆ ತಿಳಿದ ಮಟ್ಟಿಗೆ ವಿವರಿಸಿದೆ.  ಮಂಗ ತನ್ನ ಮೈಮೇಲೆ ಸ್ವಲ್ಪ ಗಾಯವಾದರೂ ಅದನ್ನು ಕೆರೆದು … Read more

ಮಾಲಿನ್ಯದ ವಿರುದ್ಧ ಧ್ವನಿ ಏರಿಸಿ…ಪರಿಸರ ಉಳಿಸಿ!!: ನಾರಾಯಣ ಬಾಬಾನಗರ, ವಿಜಾಪುರ

1972ನೇ ವರ್ಷ. ವಿಶ್ವ ಸಂಸ್ಥೆಯ ಮಹಾಸಭೆಯಲ್ಲಿ ಪರಿಸರ ಸಂರಕ್ಷಣೆ, ನೈರ್ಮಲ್ಯ, ಪರಿಸರ ಮಹತ್ವವನ್ನು ಸಾರುವ ದಿನವನ್ನು ಆಚರಿಸುವ ಅಗತ್ಯವಿದೆ ಎಂಬ ನಿರ್ಣಯವನ್ನು ಕೈಗೊಳ್ಳಲಾಯಿತು. ಹೀಗಾಗಿ ಪ್ರತಿ ವರ್ಷ ಜೂನ 5 ರಂದು ವಿಶ್ವ ಪರಿಸರ ದಿನವನ್ನಾಗಿ ಆಚರಿಸುವ ನಿರ್ಧಾರಕ್ಕೆ ಬರಲಾಯಿತು. ಪ್ರಪ್ರಥಮ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದ್ದು 1973 ರಲ್ಲಿ.  ಪ್ರಸ್ತುತ ದಿನಗಳಲ್ಲಿಯೂ ಅದರ ಪ್ರಸಕ್ತತೆಯಿದೆ.  ಪ್ರತಿವರ್ಷ ವಿಶ್ವ ಪರಿಸರ ದಿನಾಚರಣೆಯನ್ನು ಒಂದು ಕೇಂದ್ರ ವಿಷಯ ಹಾಗೂ ಒಂದು ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತದೆ. 2014 ರ ಕೇಂದ್ರ … Read more

ಏನು ಸೊಗಸಿದೀ ಮಧುರ ಸಂಬಂಧ: ಪೂರ್ಣಿಮಾ ಸುಧಾಕರ ಶೆಟ್ಟಿ

’ಸಂಬಂಧ’ ಈ ಪದವೇ ನನಗೆ ವಿಚಿತ್ರವಾಗಿ ಕಾಣುತ್ತದೆ. ಈ ಸಂಬಂಧ ಅನ್ನುವುದು ಪರಸ್ಪರರನ್ನು ಬೆಸೆಯುವ ಕೊಂಡಿಯಾಗಿ ಮಾನವನ ಜೀವನದಲ್ಲಿ ಮಹತ್ತರವಾದ ಪ್ರಭಾವ ಬೀರುತ್ತದೆ. ಜೀವನದಲ್ಲಿ ಭಾವ ಬಂಧಗಳ ಅನ್ಯೋನ್ಯತೆಯ ಗೂಡು ಕಟ್ಟುವಲ್ಲಿ ಸಹಕಾರಿಯಾಗುತ್ತದೆ. ಹೀಗಿರುವಾಗ ನನ್ನನ್ನು ಅನೇಕ ಸಲ ಕಾಡಿದ, ಕಾಡುತ್ತಿರುವ ಪ್ರಶ್ನೆ ಅಂದರೆ ಸಂಬಂಧ ಅಂದರೇನು? ಸಂಬಂಧಿಕರು ಯಾರು? ಇತ್ಯಾದಿ. ನಾವು ಇವರು ನಮ್ಮ ಸಂಬಂಧಿಕರೆಂದು ಕರೆಯುವುದು ನಮ್ಮ ರಕ್ತ ಸಂಬಂಧಿಗಳನ್ನು. ಹಾಗಿದ್ದರೆ ನಮ್ಮ ಜೀವನದಲ್ಲಿ ಅನೇಕ ರೀತಿಯಲ್ಲಿ ಪ್ರಾಮುಖ್ಯತೆ ಪಡೆಯುವ ಇತರರು ನಮ್ಮ ಸಂಬಂಧಿಕರಲ್ಲವೇ?. … Read more

ಒಂದು ಬಸ್ಸಿನ ಕಥೆ: ಅನಿತಾ ನರೇಶ್ ಮಂಚಿ ಅಂಕಣ

ಆಗಷ್ಟೇ ಕಣ್ಣಿಗೆ ನಿದ್ದೆ ಹಿಡಿಯುತ್ತಿತ್ತು.  ಹತ್ತಿರದ ಮಂಚದಲ್ಲಿ ಮಲಗಿದ್ದ ಗೆಳತಿ ’ಗಂಟೆ ಎಷ್ಟಾಯಿತೇ’ ಎಂದಳು. ಪಕ್ಕದಲ್ಲಿದ್ದ ಟಾರ್ಚನ್ನು ಹೊತ್ತಿಸಿ ’ಹತ್ತೂವರೆ’ ಎಂದೆ.  ’ನಾಳೆ ಬೇಗ ಎದ್ದು ಬಸ್ಸಿಗೆ ಹೋಗ್ಬೇಕಲ್ಲ .. ಬೇಗ ಮಲಗು’ ಎಂದಳು.  ಸಿಟ್ಟು ಒದ್ದುಕೊಂಡು ಬಂತು. ಮಲಗಿದ್ದವಳನ್ನೇ ಏಳಿಸಿ ಬೇಗ ಮಲಗು ಅನ್ನುತ್ತಾಳಲ್ಲಾ ಇವಳು ಅಂತ. ಮಾತಿಗೆ ಮಾತು ಬೆಳೆಸಿದರೆ ಇನ್ನೂ ಬರಬೇಕಿದ್ದ ನಿದ್ದೆಯೂ ಹಾರಿ ಹೋದರೆ ಎಂದು ಹೆದರಿ ಮತ್ತೆ ಕಣ್ಣಿಗೆ ಕಣ್ಣು ಕೂಡಿಸಿದೆ.  ಬೇಕಾದ ಕೂಡಲೇ ಓಡಿ ಬಂದು ಆಲಂಗಿಸಲು ಅದೇನು … Read more

ಮೂರು ಕವಿತೆಗಳು: ಕುಮಲೇಶ ಗೌಡ, ಈಸೋಪ, ರಮೇಶ್ ನೆಲ್ಲಿಸರ

ಸಾವು ಕಣ್ರೆಪ್ಪೆಗಳನ್ನ  ತೆರೆದು ನೋಡಿದರೆ ಬೆಳಕನ್ನ ನೋಡಲಾಗದೆ ಮುಚ್ಚಿಕೊಂಡವು ಪ್ರಯಾಸದಿಂದ ತೆರೆದ ಕಣ್ಣನ್ನ ಅವನನ್ನ ಬಿಗಿದು ಕಟ್ಟಲಾಗಿತ್ತು ಊರಾಚೆಗಿನ ಬಟಾಬಯಲಿನ ಮಧ್ಯೆ ಮರವೊಂದಕ್ಕೆ ನಿರ್ಜನ ಪ್ರದೇಶದಲ್ಲಿ ಸುತ್ತಲೂ ಬಿದ್ದಿದ್ದ ಹಿಡಿಗಾತ್ರದ ಕಲ್ಲುಗಳು ಅವನ ಮೈಗೆ ತಾಕಿ ಕೆಳಬಿದ್ದವಾಗಿದ್ದವು ರಕ್ತ ಹೊರಬಂದು ಹೆಪ್ಪುಗಟ್ಟಿತ್ತು ಗಾಯಗಳಿಂದ ತುಟಿಗಳೊಣಗಿತ್ತು ಮುಖದಲ್ಲಿ ಜೀವವಿದೆಯಾ ಇನ್ನೂ ಅನ್ನುವಂತ ನಿರ್ಜೀವವಾದ ಭಾವ ಸುತ್ತಲೂ ನೋಡಿ ಒಮ್ಮೆ ಯಾರೂ ಕಾಣದಾದಾಗ ನೆನಪು ಮಾಡಿಕೊಳ್ಳಲು ಶುರುಮಾಡಿದ ತನ್ನೀ ಪರಿಸ್ಥಿತಿಗೆ!!  ಕಾರಣ! ಇನ್ನೂ …….ಅದೆ..! ಐ….ಕ..!! –ಕಮಲೇಶ ಗೌಡ   … Read more

ಭರ್ಜರಿ ಸಿನಿಮಾ ಬಹದ್ದೂರ್: ಪ್ರಶಸ್ತಿ

ಮಂಗಳವಾರನೇ ಫ್ರೆಂಡ್ ಹೇಳಾಗಿತ್ತು. ಈ ಶನಿವಾರ ಅಥ್ವಾ ಭಾನುವಾರ ಒಂದು ಮೂವಿಗೆ ಹೋಗ್ಬೇಕಂದಿದ್ದ. ಅದ್ರಲ್ಲೇನಿದೆ ದೊಡ್ ವಿಷ್ಯ. ಪ್ರತೀವಾರ ಒಂದೊಂದು ಹೊಸ ಸಿನಿಮಾ ಬರುತ್ತಿರುತ್ತೆ. ಅದ್ರಲ್ಲೂ ಇದು ಬೆಂಗ್ಳೂರು. ಇಲ್ಲಿ ತೆಲುಗು, ತಮಿಳು, ಹಿಂದಿ, ಇಂಗ್ಲೀಷು, ಮಲೆಯಾಳಿ ಅಥ್ವಾ ಅವುಗಳದ್ದೇ ರಿಮೇಕಾದ ಯಾವ್ದ್ರಾದ್ರೂ ಚಿತ್ರ ಯಾವಾಗ್ಲೂ ಓಡ್ತಿರತ್ತೆ ! ಅದ್ರಲ್ಲೊಂದಕ್ಕೆ ಹೋಗೋದ್ರಲ್ಲೇನಿದೆ ವಿಶೇಷ ಅಂದ್ರಾ ? ಅಲ್ಲೇ ಇದ್ದಿದ್ದು ಫ್ರೆಂಡ್ ಹೇಳ್ತಾ ಇದ್ದಿದ್ದು ಈ ವಾರಕ್ಕೆ ಎರಡನೇ ವಾರ ಮುಗಿಸಿದ ಕನ್ನಡದ ಸ್ವಮೇಕ್ ಸಿನಿಮಾ ಬಹಾದ್ದೂರ್ ಬಗ್ಗೆ 🙂 … Read more

ಗಡುವು ದಾಟಿದ ಪ್ರೀತಿ ಗಡಿ ದಾಟದ ಬದುಕು: ಅಮರ್ ದೀಪ್ ಪಿ.ಎಸ್.

ಇಂದಿಗೆ ಸರಿಯಾಗಿ ಎದೆಯಲ್ಲಿ ಒಂದು ಬಾಗಿಲು ಶಾಶ್ವತವಾಗಿ ಮುಚ್ಚಿ ಬರೋಬ್ಬರಿ ಹತ್ತೊಂಬತ್ತು ವರ್ಷ. ಅದರೊಂದಿಗೆ ಒಂದು ಸುಂದರವಾದ ನೆನಪಿನ ಬಿಳಿ ಗೋಡೆ ಮತ್ತು ಅದೊರೊಳಗಿನ ಖಾಲಿ ಖಾಲಿ ಭಾವನೆ.  ನನಗೊಬ್ಬನಿಗೆ ಕಾಣಿಸುವಂತೆ ಭಾಸ.  ಅದಕ್ಕೆ ಪ್ರತಿ ನಿತ್ಯ ನೀರು, ಗೊಬ್ಬರ ಹಾಕಬೇಕಿಲ್ಲ. ಬರಿಯ ಪ್ರೀತಿಯ ಮೆಚ್ಚುಗೆಯ ಪದವೊಂದನ್ನು ಎದೆಯೊಳಗೆ ಇಳಿ ಬಿಟ್ಟರೆ ಸಾಕು; ಅಲ್ಲೊಂದು ಬುಗ್ಗೆಯಂಥ ಮೊಗ್ಗು ಬೆಳೆಯುತ್ತದೆ. ದಿನವೂ ಬಂದು ಬಾಗಿಲಿಂದ, ಕಿಟಕಿಯೊಳಗಿಂದ ಇಣುಕಿ, ಕರೆದು ತಮ್ಮನ್ನು ಬಿತ್ತರಿಸಿಕೊಳ್ಳುವ ನಕ್ಷತ್ರಗಳಿಗೆ ಇಂದಿನ ರಾತ್ರಿಯ ಸಾಲು ಹಬ್ಬ. … Read more

ಗೆಲುವೋ? ಸೋಲೋ?: ಅಖಿಲೇಶ್ ಚಿಪ್ಪಳಿ

ಬಹುಶ: ನನಗಾಗ ನಾಲ್ಕೈದು ವರ್ಷಗಳಿರಬಹುದು.  ಅಮ್ಮನ ಜೊತೆ ಅಜ್ಜನ ಮನೆಯಲ್ಲಿ ವಾಸ್ತವ್ಯ ಹೂಡಿದ್ದೆ. ಆ ಊರಿನಲ್ಲಿ ಆಗ ಮಾರಿಜಾತ್ರೆಯ ಸಂದರ್ಭ. ಮಾರಿಜಾತ್ರೆಯೆಂದರೆ, ಬೆಳಗಿನ ಜಾವವೇ ಶುರುವಾಗುತ್ತದೆ. ಅದೇಕೋ ಗೊತ್ತಿಲ್ಲ ಗಾಢ ನಿದ್ದೆಯಲ್ಲಿದ್ದ ನನ್ನನ್ನೂ ಎಬ್ಬಿಸಿಕೊಂಡು ಮಾರಿಜಾತ್ರೆಗೆ ಕರೆದುಕೊಂಡು ಹೋದರು. ಅಜ್ಜನ ಮನೆಯ ಎದುರುಭಾಗದಲ್ಲಿರುವ ಆಚೆಕೇರಿಯಲ್ಲಿ ಮಾರಿಹಬ್ಬದ ಆಚರಣೆ. ಕತ್ತಲಲ್ಲಿ ತೋಟವಿಳಿದು ಆಚೆಕಡೆ ಹೋಗಬೇಕು. ಟಾರ್ಚ್ ಹಿಡಿದ ಯಾರೋ ಮುಂದೆ ಹೋಗುತ್ತಿದ್ದರು. ನನ್ನನ್ನು ಯಾರೋ ಎತ್ತಿಕೊಂಡಿದ್ದರು. ಆ ವಿವರಗಳು ನೆನಪಿನಲ್ಲಿ ಇಲ್ಲ. ಮಾರಿಜಾತ್ರೆ ನಡೆಯುವ ಸ್ಥಳ ತಲುಪಿದೆವು. ಆಗ … Read more

ಸಾಮಾನ್ಯ ಜ್ಞಾನ (ವಾರ 49): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಇತ್ತೀಚಿಗೆ ನರೇಂದ್ರ ಮೋದಿಯವರು ಉದ್ಘಾಟಿಸಿದ ಭಾರತದ ಬೃಹತ್ ಫುಡ್ ಪಾರ್ಕ್ ಕರ್ನಾಟಕದ ಯಾವ ಜಿಲ್ಲೆಯಲ್ಲಿದೆ? ೨.    ಇತ್ತೀಚಿಗೆ ತಮಿಳುನಾಡಿನ ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದವರು ಯಾರು? ೩.    ರೊಸಾರಿಯೋ ಚರ್ಚ್ ಕರ್ನಾಟಕದಲ್ಲಿ ಎಲ್ಲಿದೆ? ೪.    ವಿಜಯ ವಿಠಲ ಇದು ಯಾರ ಅಂಕಿತನಾಮವಾಗಿದೆ? ೫.    ಶಾಂತಿ ಸ್ವರೂಪ ಭಟ್ನಾಗರ್ ಪ್ರಶಸ್ತಿಗಳನ್ನು ಯಾವ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ನೀಡಲಾಗುವುದು? ೬.    ಸನಾದಿ ಅಪ್ಪಣ್ಣ ಕಾದಂಬರಿಯನ್ನು ಬರೆದವರು ಯಾರು? ೭.    ಮಾನವನ ದೇಹದಲ್ಲಿ ಮೂತ್ರಜನಕಾಂಗದ ಮೇಲೆ ಇರುವ ಗ್ರಂಥಿಯ … Read more