ಪರಶುವಿನ ದೇವರು: ಶಾಂತಿ ಕೆ. ಅಪ್ಪಣ್ಣ
ಪರಶುವಿಗೆ ದೇವರು ಬಂದಾಗ ಡೊಳ್ಳನ ಕೇರಿಯ ಜನ ಅದಿನ್ನೂ ತಂತಮ್ಮ ಕೆಲಸಗಳಿಂದ ಮರಳಿ ದಣಿವಾರಿಸಿಕೊಳ್ಳುತ್ತ, ಅಲ್ಲಲ್ಲೆ ಜಗುಲಿ ಕಟ್ಟೆಯ ಮೇಲೆ ಕುಳಿತು ಗಂಡಸರು ಬೀಡಿಯ ಝುರುಕಿ ಎಳೆದು ಕೊಳ್ಳುತ್ತಿದ್ದರೆ, ಹೆಂಗಸರು ಒಂದು ಬಾಯಿ ಕಾಫಿ ಕುಡಿಯುವ ಆತುರಕ್ಕೆ ಒಳಗೆ ಒಲೆ ಹಚ್ಚುವ ಕೆಲಸದಲ್ಲಿ ತೊಡಗಿದ್ದರು. ಮೊದಲಿನಂತೆ ಚೂರುಪಾರು ಸೌದೆ ತಂದು ಪ್ರಯಾಸದಿಂದ ಒಲೆ ಹಚ್ಚುವ ಕೆಲಸವೇನೂ ಈಗಿರಲಿಲ್ಲ, ಊರು ನಾಡು ಕಾಣುತ್ತಿದ್ದ ಬದಲಾವಣೆಯ ಗಾಳಿ ಯಾವುದೇ ತಕರಾರು ಮಾಡದೆ ಕೇರಿಯೊಳಗೂ ನುಸುಳಿ ಅಲ್ಲೂ ಅಲ್ಪಸ್ವಲ್ಪ ಬದಲಿಕೆ ತರತೊಡಗಿತ್ತು. … Read more