ಹಮ್ಮಿಂಗ್ ಎಂಬ ನ್ಯಾನೋ ಹಕ್ಕಿ!!!: ಅಖಿಲೇಶ್ ಚಿಪ್ಪಳಿ

ಹೃದಯದ ಬಡಿತ ನಿಮಿಷಕ್ಕೆ ಸರಾಸರಿ 1200 ಇರುವ ಜೀವಿ ಯಾವುದು? ಸೆಕೆಂಡಿಗೆ 80 ರಿಂದ 250 ಬಾರಿ ರೆಕ್ಕೆ ಬಡಿಯುವ ಪಕ್ಷಿ ಯಾವುದು? ತನ್ನ ತೂಕಕ್ಕಿಂತ ಒಂದುವರೆ ಪಟ್ಟು ಆಹಾರ ಸೇವಿಸುವ ಜೀವಿ ಯಾವುದು? ಬರೀ 300 ಮಿಲಿಗ್ರಾಂ ತೂಕದ ಮೊಟ್ಟೆಯಿಡುವ ಹಕ್ಕಿ ಬಗ್ಗೆ ಗೊತ್ತ? ಹೀಗೆ ಮುಗಿಯದ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಒಂದೇ. ಅದು ಹಮ್ಮಿಂಗ್ ಬರ್ಡ್ ಆಲಿಯಾಸ್ ಝೇಂಕಾರದ ಹಕ್ಕಿ!! ನಮಗೆ ಇದನ್ನು ನೋಡುವ ಭಾಗ್ಯ ಇಲ್ಲ. ಏಕೆಂದರೆ ಭಾರತದಲ್ಲಿ ಇವು ಇಲ್ಲ. ಸಂತೋಷದ … Read more

ಅವ್ವನ ಸೀರೆ ಮತ್ತು ಬಾಳೀಗ೦ಟು…: ಜಯಶ್ರೀ ದೇಶಪಾಂಡೆ

     'ಎರಡು ..ಮೂರು ..ನಾಲ್ಕು , ಐದು. ಮತ್ತ ಇದು ಹತ್ತು . ಸಾಕೇನು?" " ಸಾಕು ಅ೦ದುಬಿಡ್ಲಿ ಇ೦ವಾ"  ಅ೦ತ ಇರ್ಬೇಕು ಅವ್ವನ ಮನಸಿನ್ಯಾಗ. ಯಾಕ೦ದ್ರ ಅವನ ಹಿ೦ದ ನಾನೂ          ನಿ೦ತಿದ್ದೆ.  ನನ್ನ ಕೈಗೂ ಹಿ೦ಗೇ ರೊಕ್ಕಾ  ಎಣಿಸಿ ಹಾಕಬೇಕಿತ್ತು..ಆದರ ಇ೦ವಾ ,ಅ೦ದ್ರ ನನ್ನ ತಮ್ಮ ,ಹೇಳಿ ಕೇಳಿ ಅಚ್ಚ್ಹಾದ  ಮಗಾ..  ಅ೦ವಾ ನಮ್ಮವ್ವನ 'ಶೇ೦ಡೆಫಳ' ಅರ್ಥಾತ್  (ಮುದ್ದಿನ ಮಗ !) ..ಅ೦ವಗ ಕೇಳಿದಷ್ಟು ಕೊಡೂದು ಎ೦ದಿಗಿದ್ರೂ ಇದ್ದದ್ದನ … Read more

ಮೌನಿ:ಪ್ರಶಸ್ತಿ ಪಿ.

ಬೆರೆವ ಭಾವಗಳ ಸರಳ ಸುಂದರಿಯು ಮೌನ ತಾಳಿದ್ದಾಳೆ. ಧುಮುಕಲನುವಾಗಿ ನಲ್ಲಿಯಂಚಲ್ಲಿ ನಿಂತ ಹನಿಯೊಂದು ಗುರುತ್ವವನ್ನೂ ಲೆಕ್ಕಿಸದೆ ನಲ್ಲಿಯನ್ನೇ ಅಂಟಿಕೊಂಡಂತೆ ತನ್ನ ಕಾದಿರುವವರ ನಿರೀಕ್ಷೆಗಳಿಗೆ ಸ್ಪಂದಿಸದಂತೆ ಮೌನವಾಗಿದ್ದಾಳೆ. ಉಕ್ಕಿ ಹರಿಯುತ್ತಿದ್ದ ಹುಚ್ಚುಹೊಳೆ, ಜೀವ ಸೆಲೆ, ತಾಯಿ ಮೌನಿಯಾಗಿದ್ದಾಳೆ. ಮಳೆಯೆಂದರೆ ಹುಚ್ಚೆದ್ದು ಹೊಡೆವ ದಿನಗಳವು. ಬೇಸಿಗೆಯೆಂದರೆ ಕಲ್ಲಂಗಡಿ ಹೋಳೋ,ಇಬ್ಬಟ್ಟಲ, ಮುರುಗನುಳಿ(ಕೋಕಂ) ಪಾನಕಗಳು ಮನೆಮನೆಯಲ್ಲೂ ಖಾಯಂ ಆಗಿರುತ್ತಿದ್ದ ದಿನಗಳವು. ಚಳಿಗಾಲವೆಂದ್ರೆ ಏಳರ ಮೇಲೆ ಮನೆಯಿಂದ ಹೊರಗೆ ಕಾಲಿಡಲು ಬೇಸರಿಸುತ್ತಿದ್ದ ಕಾಲವದು. ಒಂದೇ ದಿನದಲ್ಲಿ ಮೂರೂ ಋತುಗಳ ದರ್ಶನವಾಗುತ್ತಿದ್ದ ಚೌಚೌ ಬಾತ್ ದಿನಗಳಲ್ಲ. … Read more

ಪ್ರೀತಿಸುವವರು ಪುಣ್ಯವಂತರು: ಅಕ್ಷಯ ಕಾಂತಬೈಲು

         ಫಟಫಟನೆ ಚಿಟಿಕೆ ಹೊಡೆದಷ್ಟು ವೇಗದಲ್ಲಿ ನಮ್ಮ ಜೀವನದಲ್ಲೊಂದು ಒಳ್ಳೆಯ ಬದಲಾವಣೆಯು ಕಂಡುಬಿಟ್ಟರೆ, ಅದು ಅವನ ಅಥವಾ ಅವಳ ಪುಣ್ಯ ಮಾರಾಯ ಅಂತ ಹೇಳಿಸಿಕೊಳ್ಳುತ್ತೇವೆ. ಈ ಬದಲಾವಣೆಯ ಹಿಂದೆ ನಾವೆಷ್ಟು ಶ್ರಮವಹಿಸಿದ್ದೇವೆಂದು ಮತ್ತು ನಿಗಾವಹಿಸಿದ್ದೇವೆಂದು ನಮಗೆ ಮಾತ್ರವೆ ಗೊತ್ತು. ಬದಲಾವಣೆಗೊಂದು ಪ್ರೀತಿಯು ಕಾರಣವಾದರೆ ಅದರ ಸೊಗಸೇ ಬೇರೆ ಅನ್ನಿಸುವುದುಂಟು. ಗಟ್ಟಿಯಾಗಿ ನಮ್ಮ ಮನಸ್ಸು ಒಳಗೊಳಗೇ ಜಪಿಸುತ್ತಿರುತ್ತದೆ. ಅವಳಿಂದಾಗಿ ಮತ್ತೆ ನನಗೆ ಜೀವಿಸಬೇಕೆಂದೆನಿಸಿತು, ಅವನಿಂದಾಗಿ ನಾನು ಮತ್ತೆ ಉತ್ಸುಕಳಾದೆ, ಅವಳೆಂದರೆ ಪ್ರಾಣ, ಅವನೆಂದರೆ ಉಸಿರು … Read more

ಮೂವರ ಕವನಗಳು: ಸಂತೋಷಕುಮಾರ ಸೋನಾರ, ನಗರ ಸುಧಾಕರ ಶೆಟ್ಟಿ, ಕಿರಣ್ ಕುಮಾರ್ ಕೆ. ಆರ್.

ವಾಸ್ತವ ಬುದ್ಧ ಜನಿಸಿದಾ ನಾಡಿನಲ್ಲಿ  ಬೃಂದಾವನವ ಕಟ್ಟದೆ  ಬಾಂಬನ್ನು ಸುಟ್ಟರಲ್ಲ! ಬಸವ ಜನಿಸಿದಾ ಭುವಿಯಲ್ಲಿ  ಭಕುತಿಯಿಂದ ಬಾಳದೇ   ಬರ್ಭರ ಹಿಂಸೆಯಾಗುತ್ತಿದೆಯಲ್ಲ! ಗಾಂಧಿ ಜನಿಸಿದ ದೇಶದಲ್ಲಿ  ಗಂಧದ ಪರಿಮಳವ ಸೂಸದೇ  ಗನ್ನನ್ನು ಹಿಡಿದೆವಲ್ಲ! ಬುದ್ಧ, ಬಸವ, ಗಾಂಧಿ ಈಗ ಇದ್ದಿದ್ದರೆ??? ಬುದ್ಧ ಕಲ್ಲಾಗುತ್ತಿದ್ದ! ಗಾಂಧಿ ಮೌನವಾಗುತ್ತಿದ್ದ! ಬಸವ ಮತ್ತೊಮ್ಮೆ ಐಕ್ಯವಾಗುತ್ತಿದ್ದ! **** ಈ ಜಗತ್ತಿನೊಳಗೆ  ಪ್ರತಿಯೊಬ್ಬರಿಗೂ  ಒಂದೂಂದು ದಾರ!  ನನ್ನದೊಂದು ದಾರ  ನಿನ್ನದೊಂದು ದಾರ!  ಅವರದೊಂದು ದಾರ   ಆಗಬೇಕಿದೆ ನಾವು  ಇದರಿಂದ ಉದ್ಧಾರ!  ಬೇಡವೇ ಬೇಡವಂತೆ  … Read more

ಝೆನ್ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಇನ್ನೇನೂ ಪ್ರಶ್ನೆಗಳಿಲ್ಲ. ಸಾಮಾಜಿಕ ಸಮಾರಂಭವೊಂದರಲ್ಲಿ ಝೆನ್‌ ಗುರುವನ್ನು ಸಂಧಿಸಿದ ಮನೋವೈದ್ಯನೊಬ್ಬ ತನ್ನನ್ನು ಕಾಡುತ್ತಿದ್ದ ಪ್ರಶ್ನೆಯೊಂದನ್ನು ಕೇಳಲು ತೀರ್ಮಾನಿಸಿದ. “ನಿಜವಾಗಿ ನೀವು ಜನರಿಗೆ ಹೇಗೆ ಸಹಾಯ ಮಾಡುತ್ತೀರಿ?” ವಿಚಾರಿಸಿದ ಮನೋವೈದ್ಯ. “ಇನ್ನೇನೂ ಪ್ರಶ್ನೆಗಳನ್ನು ಕೇಳಲಾಗದ ಸ್ಥಿತಿಗೆ ಅವರನ್ನು ಕೊಂಡೊಯ್ಯುತ್ತೇನೆ,” ಉತ್ತರಿಸಿದರು ಝೆನ್‌ ಗುರುಗಳು. ***** ೨. ಸ್ವರ್ಗ. ಮರುಭೂಮಿಯಲ್ಲಿ ಇಬ್ಬರು ದಾರಿ ತಪ್ಪಿ ಅಸಹಾಯಕರಗಿದ್ದಾರೆ. ಹಸಿವು ಮತ್ತು ಬಾಯಾರಿಕೆಯಿಂದ ಶಯುವಂತಾಗಿದ್ದಾರೆ. ಕೊನೆಗೆ ಅವರು ಅತೀ ಎತ್ತರವಾಗಿದ್ದ ಗೋಡೆಯೊಂದರ ಸಮೀಪಕ್ಕೆ ಬರುತ್ತಾರೆ. ಗೋಡೆಯ ಆಚೆ ಬದಿಯಲ್ಲಿ ಜಲಪಾತದ ಸದ್ದು … Read more

ಪಿತೃ ಪೂಜೆಯ ಊಟ: ಸಾವಿತ್ರಿ ವಿ. ಹಟ್ಟಿ

ನಾನು, ಅಕ್ಕ ಮತ್ತು ಅವ್ವ ಆಬಾಲಿ ಹೂವು ಹೆಣ್ಕೊಂತ ಕುಂತಿದ್ವಿ. ಅಕ್ಕ ಮತ್ತು ಅವ್ವ ಮನೆತನಕ್ಕ ಸಂಬಂಧ್ಸೀದ ವಿಷಯ ಮಾತಾಡ್ಕೊಂತ ಇದ್ರು. ಮಧ್ಯೆ ಮಧ್ಯೆ ನಾನು ಅವರ ಮಾಲೀಗೂ ನನ್ನ ಮಾಲೀಗೂ ಹೋಲಿಸಿ ನೋಡಿ ಜಾಸ್ತಿ ನಾನೇ ಕಟ್ಟಿದ್ದು ಅಂತ ಧಿಮಾಕಿನಿಂದ ಹೂವು ಹೆಣೆಯಾಕ್ಹ್ಹತ್ತಿದ್ದೆ.  ಆ ಹೊತ್ಗೆ ಹೊರಬಾಗಿಲ ಹತ್ರ ಯಾರದಾ ನೆಳ್ಳು ಬಿದ್ದಂಗಾತು. ಬಾಗಿಲ ತೋಳು ಹಿಡಿದು ಹಣಕಿ ಹಾಕಿದಂಗಾತು. ಎದ್ದು ಹೋಗಿ ನೋಡಿದೆ. ಯಾರೂ ಇರಲಿಲ್ಲ. ಯಾವಾ ಸಣ್ಣ ಹುಡುಗ್ರು ಆಟ ಆಡ್ಕೊಂತ ಬಂದು … Read more

ಸಂಸಾರ ಸಾಗರದಿ ಅನುಮಾನದ ಅಲೆಗಳು: ಹೊರಾ.ಪರಮೇಶ್ ಹೊಡೇನೂರು

 "ಸಂಸಾರ" ಎಂಬುದು ಅನಾದಿ ಕಾಲದಿಂದಲೂ ಗಂಡು ಮತ್ತು ಹೆಣ್ಣುಗಳ ನಡುವೆ ಸೃಷ್ಟಿಸಿಕೊಳ್ಳುವ ಅಪೂರ್ವ ಅನುಬಂಧವಾಗಿದ್ದು ಅವರ ನಡುವಿನ ದೈಹಿಕ ಮತ್ತು ಮಾನಸಿಕ ಸಮ್ಮಿಲನದ ಫಲವಾಗಿ ಪಡೆಯುವ ಮಕ್ಕಳಿಂದಾಗಿ ಪೀಳಿಗೆಗಾಗಿ ಸರಣಿ ಹರಿದುಕೊಂಡು ಬಂದಿವೆ. "ಮದುವೆ" ಎಂಬ ಸಾಮಾಜಿಕ ಒಪ್ಪಂದದ ಪರವಾನಗಿ ಪಡೆದು ಜೀವನ ಸಂಗಾತಿಗಳಾಗಿ, ಪರಸ್ಪರ ನಿಷ್ಠರಾಗಿ ಬಾಳುವ ದಂಪತಿಗಳ ಬೇಕು ಬೇಡಗಳು, ಕಷ್ಟ-ಸುಖಗಳು, ಇಷ್ಟ-ಅನಿಷ್ಟಗಳು, ನೀತಿ-ನಿರ್ಧಾರಗಳು ಬಹುತೇಕ ಇಬ್ಬರೂ ಕೂಡಿ ಚರ್ಚಿಸುವ ಮೂಲಕ ಕೈಗೊಂಡರೂ, ಹೆಚ್ಚಾಗಿ ಜೀವನೋಪಾಯಕ್ಕಾಗಿ ದುಡಿಯುವ ಪುರುಷನೇ(ಪತಿ) ಮನೆಯ ಯಜಮಾನಿಕೆ ವಹಿಸಿದರೆ, ಮಹಿಳೆಯು(ಸತಿ) … Read more