ಮಾನಸಿ: ಮಹಾದೇವ ಹಡಪದ
ಬರೋ…. ಬಂಧು ಬಳಗ ದೊಡ್ಡದು, ಆದ್ದರಿಂದ ಮದುವಿ ಮನಿ ತುಂಬ ಬರೇ ಹೊಯ್ಯ-ನಯ್ಯ ಮಾತುಕತೆ ಜೋರಾಗಿ ನಡೆದಿತ್ತು. ಅತ್ತಿ ಮಾವ ಬಂದ ಮಂದೀನ ಸಂಭಾಳಸಲಿಕ್ಕ ಮತ್ತು ಯಾವ ಅನಾನುಕೂಲ ಆಗಧಂಗ ನೋಡಕೊಳ್ಳಲಿಕ್ಕ ಒದ್ದಾಡೊ ಆ ಹೊತ್ತಿನಾಗ ಮನುಕುಮಾರ ಮತ್ತವನ ವಿಧವೆ ತಾಯಿ ಶಿವಕ್ಕ ಧೂಳಸಂಜಿ ಅಷ್ಟೊತ್ತಿಗೆ ಬಂದ್ರು. ‘ಇದೇನವಾ ಬೆಂಗ್ಳೂರು ಸೇರಿದ್ದ ಮಗರಾಯ ಅಪರೂಪಕ್ಕ ಅತ್ತಿ ಮನೀಗೆ ಬಂದನಲ’್ಲ ಸಣ್ಣತ್ತಿ ಚಾಷ್ಟಿ ಮಾಡಿದಳು. ಹೌದು ನಾಟಕ, ಹಾಡು, ಕುಣಿತ ಅಂತ ತಿರುಗೋ … Read more