ಅಂತ:ಕರಣ: ಕು.ಸ.ಮಧುಸೂದನ್
ಕಳೆದ ಒಂದು ತಿಂಗಳಿನಿಂದ ಶುರುವಾಗಿದ್ದ ರಾಮೇಗೌಡನ ಕಲ್ಲಿನ ಪುರಾಣ ಅವನ ಹೆಂಡತಿ ಮಗನ ತಲೆ ಕೆಡಿಸಿತ್ತು. ಅನ್ನ ಕಲೆಸಿ ಒಂದು ತುತ್ತು ಬಾಯಿಗಿಟ್ಟು ಅಗಿಯುತ್ತಿದ್ದಂತೆ, ‘ಅಯ್ಯೋ!ಕಲ್ಲು!ಕಲ್ಲು!’ ಅಂತ ರಾಮೆಗೌಡ ಕೂಗಾಡಲು ಪ್ರಾರಂಭಿಸುತ್ತಿದ್ದ. ಇದರಿಂದ ರೋಸತ್ತ ತಾಯವ್ವ ಪ್ರತಿ ಸಾರಿಯೂ ತಾನೇ ಅನ್ನ ಸಾರು ಕಲೆಸಿ ಒಂದೊಂದು ಅಗುಳನ್ನೂ ಹಿಚುಕಿ ನೋಡಿಊಟ ಬಡಿಸುತ್ತಿದ್ದಳು. ಅಷ್ಟಾದರು ಬಾಯಿಗಿಟ್ಟ ತುತ್ತನ್ನು ಉಗಿದು ಕಲ್ಲು, ಕಲ್ಲು ಎಂದು ಕೂಗಾಡುವುದನ್ನೇನು ರಾಮೇಗೌಡ ಬಿಟ್ಟಿರಲಿಲ್ಲ. ಜೊತೆಗೆ ‘ಬಡ್ಡೆತ್ತದೆ, ಬರೀ ಕಲ್ಲೇ ಉಣ್ಣಾಕಿಕ್ತಿಯಲ್ಲೇ ಬೇವಾರ್ಸಿ’ ಅಂತ ತಾಯವ್ವನ … Read more