ಕವಿತೆ ಕಳ್ಳರಿದ್ದಾರೆ ಎಚ್ಚರಿಕೆ!!!: ನಟರಾಜು ಎಸ್. ಎಂ.

ಪಿಯುಸಿಯ ದಿನಗಳವು. ಯಾವುದೋ ಮುದ್ದು ಕನಸಿಗೆ ಬಿದ್ದು ಕವಿತೆ ಬರೆಯಲು ಶುರು ಮಾಡಿದ್ದೆ. ಬರೆದ ಕವಿತೆಯನ್ನು ತರಗತಿಯಲ್ಲಿ ಓದಬೇಕೆಂಬ ಹಪಹಪಿ ಇತ್ತು. ಅಂದು ಕ್ಲಾಸಿಗೆ ಸರ್ ಇನ್ನೂ ಬಾರದಿದ್ದ ಕಾರಣ ಕ್ಲಾಸಿನಲ್ಲಿ ಹರಟುತ್ತಾ ಕುಳಿತ್ತಿದ್ದ ಸಹಪಾಠಿಗಳಿಗೆ ಅಚ್ಚರಿಯಾಗುವಂತೆ ಡಯಾಸ್ ಬಳಿ ನಿಂತು "ಇವತ್ತು ಒಂದೆರಡು ಕವಿತೆ ಓದಬೇಕು ಅಂದುಕೊಂಡಿದ್ದೇನೆ" ಎಂದಿದ್ದೆ. ನನ್ನ ಮಾತಿಗೆ ಗಲಾಟೆಯಲ್ಲಿ ತೊಡಗಿದ್ದ ಕ್ಲಾಸ್ ಒಂದು ಹಂತಕ್ಕೆ ಸೈಲೆಂಟ್ ಆಗಿ ಹೋಗಿತ್ತು. ಹಿಂದಿನ ಬೆಂಚಿನ ಒಂದಿಬ್ಬರು ಗೆಳೆಯರು "ಎಲ್ಲಾ ಸೈಲೆಂಟ್ ಆಗ್ರಪ್ಪಾ ನಟ ಕವಿತೆ … Read more

ದಾರಿ ತೋರುವ ದುರಂತನಾಯಕ: ಚೈತ್ರಾ ಎಸ್.ಪಿ.

ಅವನೆಂದರೆ ಥಟ್ಟನೆ ನೆನಪಾಗುವುದು ಹೆಸರು ದುರಂತನಾಯಕ. ಮಹಾಕಾವ್ಯದ ದುರಂತನಾಯಕ. ಅಸಹಾಯಕ ಪರಿಸ್ಥಿತಿಯಲ್ಲಿ ಸಿಕ್ಕಿ ಒದ್ದಾಡಿದ ನತದೃಷ್ಟ.ಅವಮಾನಗಳಲ್ಲಿ ಬೆಂದು ಮಿಂದೆದ್ದವ. ತಿರಸ್ಕಾರಗಳನ್ನೆ ಕಂಡವ. ಹುಟ್ಟಿದಾಗ ತಾಯಿಗೆ ಬೇಡವಾದ. ಗುರುಕುಲದಲ್ಲಿ ಗುರುಗಳಿಗೆ ಬೇಡವಾದ.ಸ್ವಯಂವರದಲ್ಲಿ ಮೆಚ್ಚಿದ ಹುಡುಗಿಗೆ ಬೇಡವಾದ. ಹೇಗೆ ಬದುಕಿರಬಹುದು ತನ್ನ ಬಾಳನ್ನು ? ಬೇಸರದಲ್ಲೇ ? ಖಿನ್ನತೆಯಲ್ಲೇ ? ಕಂಡಿರದ ತಂದೆ-ತಾಯಿಗಾಗಿ ಹಂಬಲಿಸಿದನೇ ? ಮಾಡಿದ ತಪ್ಪಿಗಾಗಿ ಪರಿತಪಿಸಿದನೇ ? ಬೆರಳು ತೋರಿಸಿದರೆಂದು ಮರುಗಿದನೇ ? ಜನ್ಮದತ್ತವಾಗಿ ಐಶ್ವರ್ಯ, ಕ್ಷಾತ್ರಪಂಥದ ಹೆಗ್ಗುರುತಾದ ಎದೆಗವಚಗಳನ್ನು ಹೊತ್ತು ಬಂದರೂ ಸೂತಪುತ್ರನೆಂಬ ಹಣೆಪಟ್ಟಿಯಿಂದ ಕಂಗೆಟ್ಟನೆ … Read more

ಪಾಂಡದ ಪರಿ-ಬಿದಿರೆಂಬ ಸಿರಿ: ಅಖಿಲೇಶ್ ಚಿಪ್ಪಳಿ

ಕಳೆದ 2 ವರ್ಷದಿಂದ ಕಳಲೆ ತಿಂದಿಲ್ಲ. ಕಳಲೆ ತಿನ್ನುವುದು ಕಾನೂನುಬಾಹಿರವೆಂದು ಅಂದು ಕೊಂಡಿದ್ದ ದಿನಗಳವು. ಆದರೂ ಮಳೆಗಾಲ ಬಂತೆಂದರೆ ಕಳಲೆಗೆ ಮುಗಿಬೀಳುವುದು ನಡದೇ ಇತ್ತು ಮತ್ತು ಇದೆ. ಕಳಲೆಗಾಗಿಯಲ್ಲವಾದರೂ ರೈತರು ತಮ್ಮ ಸ್ವಂತ ಜಮೀನಿನಲ್ಲಿ ಬಿದಿರನ್ನು ನೆಟ್ಟು ಬೆಳೆಸಿರುತ್ತಾರೆ. ಅದರಲ್ಲಿ ಮೂಡುವ ಕಳಲೆಗಳ (ಬ್ಯಾಂಬೂ ಶೂಟ್) ಲ್ಲಿ ಕೆಲವನ್ನು ಕತ್ತರಿಸಿ, ಸಂಸ್ಕರಿಸಿ ತಿನ್ನುವ ವಾಡಿಕೆ ಮಲೆನಾಡಿನಲ್ಲಿ ಇದೆ. ಹಿಂದಿನ ವಾಡಿಕೆಯಂತೆ ಬಿದಿರು ಹೂ ಬಿಟ್ಟ ನಂತರದಲ್ಲಿ ಸಾಯುತ್ತದೆ. ಬಿದಿರು ಹೂ ಬಿಡುವುದು 60 ವರ್ಷಕ್ಕೊಮ್ಮೆ. 2013-14ರಲ್ಲಿ ಮಲೆನಾಡಿನ … Read more

ಏಕಾದಶಿ: ಗುಂಡುರಾವ್ ದೇಸಾಯಿ

‘ಲೇ ರಂಡೆಗಂಡಾ, ಎಂತಾ ಅನಾಹುತ ಮಾಡಿಬಿಟ್ಟಿ, ನನ್ನ ಜೀವಮಾನದ ಸಾಧನೆಯಲ್ಲಾ ಇವತ್ತು ವ್ಯರ್ಥ ಮಾಡತಿದ್ದೆಲ್ಲೋ    , ಕೃಷ್ಣ ಕೃಷ್ಣ ನೀನ ಕಾಪಾಡಬೇಕ¥!À’ ಅಂತ ಬಯ್ಯಕೋತ ಗುಡಿಯಿಂದ ಬಂದ್ಲು. ‘ಏನಾಯ್ತವ್ವ ಒಮ್ಮಿದೊಮ್ಮೆಲೆ, ಯಾಕ ಸಿಟ್ಟಿಗೆದ್ದು ದಾರ್ಯಾಗಿನಿಂದ ಕೂಗಿಕೊಂತ ಬರಕತಿದಿ, ಮೆಲ್ಲಕ ಬಾರವ್ವ, ಮೆಲ್ಲಕ ಮಾತಾಡು ’ ‘ನನ್ನ ಸುದ್ದಿ ಬಿಡು, ಎಂತ ಮೋಸ ಮಾಡಿಬಿಟ್ಟೆಲ್ಲೋ, ನೀನು ಬಾಳ ಶ್ಯಾಣೆ ಅಂತ ಮಾಡಿದ್ದೇ, ನಿನಗಿಂತ ನಿಮ್ಮಕ್ಕನ ವಾಸಿ. ನಿಮ್ಮಪ್ಪ ಹೋದ ಮ್ಯಾಲೆ ಪಂಚಾಂಗ ನೋಡಿ ತಿಥಿ ಲೆಕ್ಕ ಎಷ್ಟು ಕರೆಕ್ಟಾಗಿ … Read more

ಸಾವು: ಪ್ರಶಸ್ತಿ

ಸಾವೆಂಬುದು ಬೆನ್ನ ಹತ್ತಿ ಬರುತ್ತಿದೆಯಾ ಎಂಬ ಭಾವ ಪದೇ ಪದೇ ಕಾಡತೊಡಗಿತ್ತವನಿಗೆ. ಯದ್ವಾತದ್ವಾ ಟ್ರಾಫಿಕ್ ಜ್ಯಾಂನಿಂದ ರೈಲು ತಪ್ಪಿಸಿಕೊಂಡ ಬೇಜಾರಲ್ಲಿ ಬಸ್ಸಿಗೆ ಹೋದ ದಿನವೇ ರೈಲಿನ ಅಪಘಾತವಾಗಿ ಅದೆಷ್ಟೋ ಜನ ಅಸುನೀಗಿದ್ದರು. ಆ  ಆಘಾತ ಮನಸ್ಸಿನಿಂದ ಅಳಿಸೋ ಮುನ್ನವೇ ಇವ ರಿಸರ್ವ ಮಾಡಿಸಿದ್ದ ಬಸ್ಸು ಆಯತಪ್ಪಿ ಕೊರಕಲಿಗೆ ಜಾರಿದ ಸುದ್ದಿ ಕೇಳಿಬಂದಿತ್ತು. ಬೇಗ ಹೋಗಬೇಕಂದುಕೊಂಡ್ರೂ ಆ ಶುಕ್ರವಾರವೇ ವಿಪರೀತ ಲೇಟಾಗಿ ರಿಸರ್ವ್ ಮಾಡಿಸಿದ ಬಸ್ಸಿಗೆ ಹೋಗಲಾಗದ್ದಕ್ಕೆ ಅದೆಷ್ಟೋ ಶಾಪ ಹಾಕಿದ್ದವನಿಗೆ ಮಾರನೇ ದಿನದ ಪೇಪರ್ ನೋಡಿದಾಗ ಮತ್ತೊಮ್ಮೆ … Read more

ನಾಲ್ವರ ಕವನಗಳು: ಶಿದ್ರಾಮ ತಳವಾರ, ನೂರುಲ್ಲಾ ತ್ಯಾಮಗೊಂಡ್ಲು, ಮೆಲ್ವಿನ್ ಕೊಳಲಗಿರಿ, ಆಶಿತ್

ಪಯಣ ಎಲ್ಲೋ ನಡೆಯುತ್ತಿದೆ ನನ್ನೀ ಪಯಣ ಎಲ್ಲೆಂತೆನಗರಿವಿಲ್ಲವಾದರೂ ಇಲ್ಲೇ ಎಲ್ಲೋ ನಡೆಯುತ್ತಿದ್ದೇನೆ,,,,, ದಾರಿಯುದ್ದಕ್ಕೂ ಬರೀ ಕತ್ತಲು ಎಲ್ಲೆಲ್ಲೂ ಸ್ಮಶಾನ ಮೌನ ಕಾಣದಿಹ ಈ ದಾರಿಯಲ್ಲಿ ನನಗೆ ನಾನೇ ಪ್ರಶ್ನೆ, ಅಲ್ಲಲ್ಲಿ ನಾಯಿ ಊಳಿಡುತಿವೆ, ತಂಪು ಗಾಳಿಗೆ ಒಣಗಿದೆಲೆಗಳು ಪಟ ಪಟ ಉದುರುವ ಸದ್ದು ಬೇರೇನಿಲ್ಲ, ಆದರೂ,,, ಅದಾರೋ ನನ್ನ ಹಿಂಬಾಲಿಸುವಂತಿದೆ. ಇಲ್ಲೇ ಎಲ್ಲೋ ದೂರದಲ್ಲಿ ಬೆಂಕಿ ಹೊತ್ತಿಕೊಂಡಿದೆ ಬಹುಶ: ಹೆಣ ಸುಡುತಿರಬಹುದು ವಾಸನೆ ಮೂಗು ಕಟ್ಟುತಿದೆ ಯಾವುದೀ ತಾಣ ? ಕೆಟ್ಟ ಕನಸಿರಬಹುದು ಅಲ್ಲವೇ ? ಆದರೂ,,,, … Read more

ಗೆಲುವು ಸುಲಭಾನಾ?: ರೋಷನ್ ಅರೆಹೊಳೆ

ಅದ್ಭುತವಾದ ವಿಜಯವನ್ನು ಸಾಧಿಸಿದವರೆಲ್ಲ ಉನ್ನತ ಸ್ಥಾನದಿಂದ ಬಂದವರಲ್ಲ…! ತೀರಾ ಕೆಳಮಟ್ಟದಿಂದಾನೇ ಬಂದಿರುವವರು….! ಕಷ್ಟದ ಅರಿವಿದ್ದರೆ, ಜಯದ ರುಚಿ ಬೇಕು ಎನಿಸುವುದು. ಒಮ್ಮೆ ಕೆಲವು ಸಾಧಕರ ಬಗ್ಗೆ ತಿಳಿದುಕೊಂಡರೆ, ನಾವು ಎಲ್ಲಿದ್ದೇವೆ? ಎನ್ನುವಂತಹದ್ದು ಅರಿವಾಗುತ್ತದೆ. ಇಂದು ಜಗತ್ತಿನಾದ್ಯಂತ ಅತಿ ಹೆಚ್ಚು ಜನರು ಇಷ್ಟ ಪಡುವ ಆಟ ಫುಟ್ಬಾಲ್. ಸದ್ಯದ ಯುವಕರಿಗೆ ಫುಟ್ಬಾಲ್ ಅಲ್ಲಿ ಇಷ್ಟವಾಗುವ ಆಟಗಾರ "ಲೂಯಿಸ್ ಲಯೋನೆಲ್ ಆ್ಯಂಡ್ರೆಸ್ ಮೆಸ್ಸಿ" ಲೂಯಿಸ್ ರೊನಾಲ್ಡೊ ತರ ಆಕ್ರಮಣಕಾರಿ ಆಟಗಾರನಲ್ಲದಿದ್ದರೂ ಆತ ಜಗತ್ತಿಗೆ ಇಷ್ಟವಾಗುತ್ತಾನೆ….! ಇಷ್ಟರ ಮಟ್ಟಿಗೆ ಈತ ಜನಪ್ರಿಯನಾಗಲು … Read more

ಹನಿಯೂರು ಚಂದ್ರೇಗೌಡರ “ಸೋಲಿಗರು: ಬದುಕು ಮತ್ತು ಸಂಸ್ಕೃತಿ” ಕೃತಿಯ- ಒಂದು ವಿಮರ್ಶೆ: ಡಾ. ಕೆ.ಮಧುಸೂದನ ಜೋಷಿ

  ಬಹುಮುಖಿಯಾಗಿ  ಬಹುರೂಪಿಯಾಗಿ ಬೆಳೆದು ಬಂದ ಕನ್ನಡ ಸಾಹಿತ್ಯ ಕಾಲದಿಂದ ಕಾಲಕ್ಕೆ ತಕ್ಕಂತೆ ಬದಲಾಗುತ್ತ, ಪ್ರಸ್ತುತಗೊಳ್ಳುತ್ತ ಬಂದಿದ್ದರಿಂದಲೇ ಅದು ಜೀವಂತಿಕೆಯನ್ನು ಕಾಯ್ದುಕೊಂಡು 8 ಜ್ಞಾನಪೀಠಗಳನ್ನು ಏರಿ ಭರತೀಯ ಸಾಹಿತ್ಯ ಸಾಮ್ರಾಜ್ಯದ ಮೊದಲ ಚಕ್ರವರ್ತಿಯಾಗಿ ಮೆರೆದಿದೆ; ಮೆರೆಯುತ್ತಿದೆ. ಕಾವ್ಯ, ಕತೆ, ಕಾದಂಬರಿ, ನಾಟಕ, ವಿಮರ್ಶೆ, ಸಂಶೋಧನೆ, ಆತ್ಮಚರಿತ್ರೆ, ಜೀವನಚರಿತ್ರೆ, ಗೀತನಾಟಕ, ಕಥನಕವನ, ಪ್ರವಾಸಕಥನ, ಜನಾಂಗೀಯ ಅಧ್ಯಯನ…. ಹೀಗೆ ಹತ್ತು ಹಲವು ಮುಖಗಳಲ್ಲಿ ಹೊಮ್ಮಿಬಂದ ಕನ್ನಡ ಸಾಹಿತ್ಯವಾಹಿನಿ ಮೈದುಂಬಿಕೊಳ್ಳುತ್ತ, ಮನಗಳನ್ನು ತುಂಬುತ್ತ ಸಾಗಿದೆ. ಆದರೆ ಈ ಎಲ್ಲ ಸಾಹಿತ್ಯದ ಪ್ರಕಾರಗಳಲ್ಲಿಯೇ ಅಪರೂಪ … Read more

ಇರಲಾದರದ್ದು ಮಾಡಿ ಮೈ ಕೆರಕೊಂಡರಂತ…: ಗಾಯತ್ರಿ ಬಡಿಗೇರ

ಬಾಳಿನ ಹಾದಿಯಲ್ಲಿ ಸಂಬಂಧ, ಸ್ನೇಹ, ಪ್ರೀತಿ, ದ್ವೇಷ, ಸಿಟ್ಟು ಮತ್ತು ನೋವು-ನಲಿವು ಎಲ್ಲವೂ ಸಹಜ. ಕೆಲವೊಮ್ಮೆ ಕನಸದಾಗು ನೆನಸಿಕೊಂಡಿರಂಗಿಲ್ಲ ಹಂತಾ ದುರಂತ ನಡದ ಬಿಡ್ತಾವ. ಜೀವನಾ ಒಂದ ಚೌಕ್ಕಟನ್ಯಾಗ ಇರಬೇಕು. ಆದ್ರ ಚೌಕ್ಕಟ್ಟೆ ಜೀವನಲ್ಲ. ತಿಳ್ಕೊಬೇಕಾದ ವಿಷಯ ಹೇಳಲಾರದಷ್ಟ ಆದ. ಆದ್ರ ಕೇಳೊ ಮನಸ್ಸಗಳು ಪ್ರೀತಿ ಎಂಬ ಬೆಂಕಿಯಲ್ಲಿ ಬಿದ್ದು ಜಗತ್ತಿನ ಅರಿವಿಲ್ಲದೆ ನರಳತಿದಾವ. ಪ್ರೀತಿ ಮಾಡೋದ ತಪ್ಪಲ್ಲ. ಹಂಗಂತಾ ಪ್ರೀತಿನೇ ಜೀವನಾ ಅಲ್ರಿ. ಪ್ರೀತಿ ಮಾಡಿ ಅದೇನು ಸಾದಸ್ತಾರೋ? ಗೊತ್ತಿಲ್ಲ. ಆದ್ರ ಮನೆವರ ಹೊಟ್ಟೆ ಮಾತ್ರ … Read more