ಪ್ರಾಣಿಗಳೇ ಗುಣದಲಿ ಮೇಲು..: ಅನಿತಾ ನರೇಶ್ ಮಂಚಿ

                ಗೆಳೆತನ ಅಂದ್ರೆ ಯಾರಿಗಿಷ್ಟ ಇಲ್ಲ..! ಪ್ರಪಂಚದಲ್ಲಿ ಪ್ರತಿಯೊಬ್ಬರು ಗೆಳೆತನದ ನೆರಳಿನ ತಂಪಿನಲ್ಲಿ ಪವಡಿಸುತ್ತಾ ಇರುವ ಕನಸು ಕಾಣುವವರೇ. ಇದು ಮನುಷ್ಯರಿಗೆ ಮಾತ್ರವಲ್ಲ ಪ್ರಾಣಿಗಳಲ್ಲೂ ಇಂತಹ ಬಯಕೆ ಸಹಜವಾಗಿಯೇ ಮೂಡುತ್ತದೆ.  ನಮ್ಮನೆಯ ನಾಯಿ ಟೈಗರ್. ಅದು ಪುಟ್ಟ ಮರಿಯಾಗಿದ್ದಾಗ ಅದರ ಜೊತೆಗಾರ ಜ್ಯಾಕ್ ನೊಂದಿಗೆ ಆಟವಾಡುತ್ತಲೇ ಬೆಳೆದದ್ದು. ಎರಡೂ ಮರಿಗಳು ಮಾಡದ ತುಂಟತನವಿಲ್ಲ. ದಿನಾ ಈ ಎರಡು ನಾಯಿ ಮರಿಗಳು   ಮುಚ್ಚಿದ್ದ ಗೇಟಿನ ಗ್ರಿಲ್ಲುಗಳೆಡೆಯಲ್ಲಿ ತೂರಿ … Read more

ಫ್ಲಾಪಿಬಾಯ್ ಮತ್ತು ಲಗೋರಿಬಾಬಾ 7

ಪತ್ರಕರ್ತೆಯೊಂದಿಗೆ ಲಗೋರಿಬಾಬಾ ಫ್ಲಾಪಿಬಾಯ್ ಮತ್ತು ಲಗೋರಿಬಾಬಾನೊಂದಿಗೆ ಸಂದರ್ಶನ ಮಾಡಲು ಬಂದಿದ್ದ ಪತ್ರಕರ್ತೆ ವರದಾ ಫ್ಲಾಪಿಬಾಯ್‍ನೊಂದಿಗೆ ಮಾತುಕತೆ ನಡೆಸಿ ನಂತರ ಲಗೋರಿಬಾಬಾನೊಮದಿಗೆ ಚಿಟ್ ಚಾಟ್ ಮಾಡಲು ಭಲೇ ಉತ್ಸುಕಳಾಗಿದ್ದಳು. ತರುಣ ಯುವಕ ಲಗೋರಿಬಾಬಾ ನೊಡಲು ಹ್ಯಾಂಡ್‍ಸಮ್ ಆಗಿದ್ರೂ ಅಘೋರಿಯಾಗಿ ವಿಕಾರಿತರ ಇದ್ದ. ಮೊದಲ ನೋಟಕ್ಕೇ ಭಯಪಡಿಸುವಂತಿದ್ದ ಆತನ ಚಹರೆಯ ಜೊತೆಗೇ.., ಮೊದಮೊದಲಿಗೆ ಆತನ ಮಾತೂ ಹೆದರಿಕೆ ಹುಟ್ಟಿಸುವಂತಿತ್ತು. ಆದರೆ ಅಪರಿಮಿತ ಜ್ಞಾನಿಯಾದ ಲಗೋರಿಬಾಬಾನನ್ನು ಮಾತನಾಡಿಸಲೇಬೇಕೆಂದು ವರದಾ ಹಠ ಹಿಡಿದು ಅವನ ಬಳಿ ಬಂದಳು.. ಮುಂದೆ..?? ಇನ್ನೇನು..?? ಓದಿ ಗೊತ್ತಾಗತ್ತೆ..! … Read more

ವಿಠಲನ ನಾಡಿನಲ್ಲಿ: ಪ್ರಶಸ್ತಿ

ಹಂಪಿ ಬಜಾರ್: ಹಂಪಿ ವಿರೂಪಾಕ್ಷನ ದರ್ಶನ ಪಡೆದ ನಾವು ಪಕ್ಕದಲ್ಲಿದ್ದ ತುಂಗಭದ್ರೆಗೊಂದು ನಮನವೆನ್ನುತ್ತಾ ಹಂಪೆ ಬಜಾರುಗಳನ್ನಾಸಿ ವಿಠಲ ದೇಗುಲದತ್ತ ಸಾಗಿದೆವು. ಹಂಪೆ ಬಜಾರೆಂದರೆ ಜನರಿಗೆ ಅದರಲ್ಲೇನಿದೆ ? ಎಲ್ಲಾ ಊರಿನಂತೆ, ಹಂಪಿಯಲ್ಲೊಂದು ಮಾರುಕಟ್ಟೆ, ವಿಶೇಷವೇನಪ್ಪ ಅನಿಸಬಹುದು. ಶ್ರೀ ಕೃಷ್ಣ ದೇವರಾಯನ ಕಾಲದ ಮಾರುಕಟ್ಟೆ, ಮುತ್ತು ರತ್ನಗಳನ್ನಳೆದು ತೂಗುತ್ತಿದ್ದ ಬೀದಿ ಅಂದರೆ ಆಗ ಓಹ್ ಅನ್ನಬಹುದು. ಹಂಪಿಯಲ್ಲಿ  ಶ್ರೀ ಕೃಷ್ಣ ದೇಗುಲದ ಎದುರಿಗಿನ ಕೃಷ್ಣ ಬಜಾರ್, ಮಹಾನವಮಿ ದಿಬ್ಬದಿಂದ ಬ್ಯಾಂಡ್ ಟವರಿನತ್ತ ಸಾಗುವಾಗ ಸಿಗುವ ಪಾನ್ ಸುಪಾರಿ ಬಜಾರ್ … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಅರಬ್ಬನ ಅಶ್ಲೀಲ ಬಯ್ಗುಳವೂ ದೇವರ ಸಂದೇಶವೂ ಒಂದು ದಿನ ಪ್ರವಾದಿ ಮೊಹಮ್ಮದ್‌ರು ಮಸೀದಿಯೊಂದರಲ್ಲಿ ಬೆಳಗಿನ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಅವರೊಂದಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದವರ ಪೈಕಿ ಇಸ್ಲಾಂನಲ್ಲಿ ಮೇಲೇರಬಯಸುತ್ತಿದ್ದ ಅರಬ್ಬನೊಬ್ಬನಿದ್ದ. ಆ ದಿನ ಕೊರಾನ್‌ನಲ್ಲಿ “ನಾನೇ ನಿಮ್ಮ ನಿಜವಾದ ದೇವರು” ಎಂಬ ಅರ್ಥವಿರುವ ಫೆರೋನ ಹೇಳಿಕೆ ಉಳ್ಳ ಶ್ಲೋಕವನ್ನು ಮಹಮ್ಮದ್‌ರು ಪಠಿಸುತ್ತಿದ್ದಾಗ ಅದನ್ನು ಕೇಳಿದ ಅರಬ್ಬನು ಕೋಪೋದ್ರಿಕ್ತನಾಗಿ ಪ್ರಾರ್ಥನೆಯನ್ನು ನಿಲ್ಲಿಸಿ ಬೊಬ್ಬೆ ಹೊಡೆದ: “ಸೂಳೆಮಗ*, ಬಡಾಯಿಕೋರ!” ಪ್ರವಾದಿಗಳು ತಮ್ಮ ಪ್ರಾರ್ಥನೆ ಮುಗಿಸಿದ ಕೂಡಲೆ ಅವರ ಸಹಚರರು ಅರಬ್ಬನಿಗೆ ಛೀಮಾರಿ … Read more

ಫಸ್ಟ್ ಟ್ರೈ: ಸಿ೦ಧು ಭಾರ್ಗವ್

ಹೊಸ ಖಾದ್ಯ ತಯಾರಿಸುವಾಗ ಆದ ಅನುಭವ. ಗಾ೦ಧಿ ಜಯ೦ತಿ ಪ್ರಯುಕ್ತ ರಜೆ ಇದ್ದ ಕಾರಣ ಮನೆಯಲ್ಲಿ ಸುಮ್ಮನೆ ಕುಳಿತಿದ್ದೆ. ಅಪರೂಪಕ್ಕೆ ಕರೆ ಮಾಡುವ ಮಾವನಿಗೆ ನನ್ನ ನೆನಪಾಗಿ ಮಾತನಾಡುವ ಮನಸಾಯಿತು. ಕರೆ ಸ್ವೀಕರಿಸಿ ಮಾತನಾಡಿಡಲು ಶುರು ಮಾಡಿದೆ. ಯೋಗ ಕ್ಷೇಮವನ್ನೆಲ್ಲಾ ವಿಚಾರಿಸಿದ ಮೇಲೆ , ಇ೦ದು ಎಲ್ಲಿಗೂ ಹೊರಗಡೆ ಹೋಗಲಿಲ್ಲವೇ..? ಎ೦ದು ಕೇಳಿದೆ. ಇಲ್ಲ ಇವತ್ತು ಅಡುಗೆ ಮನೆಯಲ್ಲೇ ಬಿಸಿ ಎ೦ದರು. ನಳಮಹಾರಾಜರು ಸೌಟು ಹಿಡಿದು ಏನು ಮಾಡುತ್ತಿದ್ದೀರಿ..? ಹಾಗಾದರೆ ಇ೦ದು ಅತ್ತೆಗೆ ಆರಾಮವಾಯ್ತು ಬಿಡಿ ಎ೦ದೆ. … Read more

‘ನಿರ್ಧಾರ’: ರಮೇಶ್ ನೆಲ್ಲಿಸರ

'ನಂಗೊತ್ತಿತ್ತು ಒಂದ್ ದಿನ ನೀನು ಬಂದೇ ಬರ್ತೀಯ ಅಂತ' ಎಲ್ಲ ಸಂಬಂಧಗಳ ಬಂಧನವನ್ನು ಕಳಚಿ ಬಹುದೂರ ಸಾಗಿಬಂದ ಜಾಹ್ನವಿ,ರಾಘವ್ ತನ್ನನ್ನು ಏಂದಾದರೂ ಹುಡುಕಿಕೊಂಡು ಬಂದೇಬರುವನೆಂಬ ಆಸೆಯನ್ನು ಮನದ ಗರ್ಭದಲಿ ಸುಪ್ತ ಶಿಲಾಪಾಕದಂತೆ ಕಾಯ್ದಿಟ್ಟುಕೊಂಡಿದ್ದಳು. ಕಳೆದ ಹತ್ತು ವರ್ಷಗಳಿಂದ ಅನಾಥ ಮಕ್ಕಳ ಸೇವಾಸಂಸ್ಥೆ ನಡೆಸುತ್ತಿ‌ದ ಜಾಹ್ನವಿ ಮೊದಲ ಬಾರಿಗೆ ತನಗಾಗಿ ಇಷ್ಟೊಂದು ಖುಷಿಪಟ್ಟಿದ್ದಳು. ರಾಘವ್ ನ ಮುಖವನ್ನು ಕಣ್ತುಂಬಿಕೊಳ್ಳುತ್ತಿರುವಾಗಲೇ,ಹಿಂದೆ ಎಂದೋ ಕೀಲಿಹಾಕಿ ಭದ್ರಪಡಿಸಿ‌ದ್ದ ನೆನಪಿನ ಬಾಗಿಲು ತಂತಾನೆ ತೆರೆದುಕೊಂಡಿತು. ““““““““` ರಾಘವ್ ಹಾಗೂ ಜಾಹ್ನವಿ ಒಂದೇ ಕಾಲೇಜಿನಲ್ಲಿ ಕಲಿತದ್ದು,ರಾಘವ್ … Read more

ಕಾವ್ಯಧಾರೆ: ಜಯಶ್ರೀ ದೇಶಪಾಂಡೆ, ವಲ್ಲಿ ಕ್ವಾಡ್ರಸ್, ಸಂತೆಬೆನ್ನೂರು ಫೈಜ್ನಟ್ರಾಜ್

ಜ್ಯೋತಿಯೆದುರು ನತಮಸ್ತಕ. 'ಸತ್ಯಮೇವ ಜಯತೇ' ಪರ೦ಪರೆಗಳಿ೦ದ ಬಿ೦ಬಿತ… ಅಲ್ಲಗಳೆದು ನಕ್ಕಿದೆ ವಾಸ್ತವ , ಹುಚ್ಚು ಅದಕ್ಕೆ?!  ನೂರು ಅಪರಾಧಿಗಳಳಿದರೂ  ಒಬ್ಬ ನಿರಪರಾಧಿ  ಅಳಿವುದು ಬೇಡ .. ವರ್ತಮಾನದ ಸತ್ಯವೇ ಮಿಥ್ಯವೇ ? ಉರಿಬಿಸಿಲ ಸೂರ್ಯನ ಕಣ್ಣೆದುರು   ಜೀವಜಾಲದ ಕಡುಗೊಲೆ, ಸಾಕ್ಷಿಗಳಿಲ್ಲ..ನೋಡಿದವರಿಲ್ಲ, ಆರೋಪಿಗಿದೆ  ಅನುಮಾನದ ಭಾಗ್ಯ..ಬೆನೆಫಿಟ್ ಆಫ್ ಡೌಟ್! ಸಿರಿವ೦ತರಿಗೆ ಮಾತ್ರ-ಯಾರಿಗೂ ಹೇಳಬೇಡಿ! ಅಪ್ಪಿತಪ್ಪಿ ಗಲ್ಲೇ? ಅದಕೂ ದಾರಿ ನೂರೆ೦ಟು. ಕಪ್ಪುಕೋಟಿನ ಅಸ್ಖಲಿತ ಮೊಳಕೆಯ ಮಿದುಳುಗಳಿರುವುವುದೇಕೆ?  ಸರ್ವೇ ಗುಣ: ಕಾ೦ಚನಮಾಶ್ರಯ೦ತಿ.  ಅವನ ಶಿಕ್ಷೆ ಇವನ ಪ್ರಸಾದ! ಮಕ್ಕಳು … Read more

ವಿಕಟ ವಿನಾಯಕ (ಭಾಗ-2): ಎಸ್. ಜಿ. ಸೀತಾರಾಮ್, ಮೈಸೂರು.

ಚೆಲುಗನ್ನಡದಲ್ಲಿ ಚೆನ್‍ಗಣೇಶ ಕೆಳಕಾಣುವ “ಕನ್ನಡಗಣೇಶ ಏಕವಿಂಶತಿ ನಾಮಾವಳಿ” ಪಾಠದಲ್ಲಿ “ಓ” ಮತ್ತು “ಕೈಮುಗಿದೆ” ಎಂದು ಪ್ರತಿ ಹೆಸರಿಗೂ ಹಿಂದೆ-ಮುಂದೆ (ಓ ಬೆನಕ! ಕೈಮುಗಿದೆ…ಓ ಆನೆಮೊಗ! ಕೈಮುಗಿದೆ ಎಂಬಂತೆ) ಸೇರಿಸಿಕೊಂಡು ಜಪಿಸಿದವರಿಗೆ ವಿಘ್ನಪತಿಯು ಅಪವಿಘ್ನದ ಅಭಯವನ್ನೀವನು. ಕನ್ನಡರಕ್ತವನ್ನು ಉಕ್ಕೇರಿಸಿ, ಅಂಥವರನ್ನು “ಕನ್ನಡ ಚೆನ್ನೈದಿಲು” ಮಾಡುವನು ಎಂದು “ಬೆನಕ ಬಲ್ಮೆ” ಎಂಬ ಹವಳಗನ್ನಡ ಕೃತಿಯು ವಿಶಿಷ್ಟವಾಗಿ ವಿಶದಪಡಿಸಿದೆ. ಬೆನಕ= ವಿನಾಯಕ ಪಿಳ್ಳಾರಿ (ಪಿಳ್ಳೆ)= ಬಾಲಗಣಪತಿ  ಆನೆಮೊಗ= ಆನೆಯ ಮುಖದವನು  ಸುಂಡಿಲಮೊಗ= ಸೊಂಡಿಲ ಮುಖದವನು ಇಲಿದೇರ= ಇಲಿಯನ್ನು ತೇರಾಗಿ ಚಲಿಸುವನು ಬಿಂಕಣಗಿವಿಯ … Read more

ತಸ್ಮೈ ಶ್ರೀ ಗುರು ಏನ್ ಮಹಾ?: ಅನಿರುದ್ಧ ಕುಲಕರ್ಣಿ

ನಮ್ಮ ಭಾರತೀಯ ಪರಂಪರೆಯಲ್ಲಿ ಗುರುಗಳಿಗೆ ಒಂದು ವಿಶೇಷ ಸ್ಥಾನವಿದೆ, ಉಪನಿಷತ್ತಿನ ಪ್ರಕಾರ ಗುರು ಶಬ್ದಕ್ಕೆ ಗು ಎಂದರೆ ಅಂಧಕಾರ ಮತ್ತು ರು ಎಂದರೆ ದೂರ ಮಾಡುವವನು ಅಥವಾ ಅಜ್ಞಾನದ ಅಂಧಕಾರವನ್ನ ನಿವಾರಿಸಿ ಜ್ಞಾನ ಮಾರ್ಗವನ್ನು ತೋರಿಸುವವ,  ಸಂಸ್ಕೃತದಲ್ಲಿ ಗುರು ಎಂಬ ಶಬ್ದಕ್ಕೆ  ಭಾರವಾದ ಎನ್ನುವ ಅರ್ಥವೂ ಇದೆ, ಯಾರು ಜ್ಞಾನದಿಂದ ಭಾರವಾಗಿರುತ್ತಾರೋ ಅವನೇ ಗುರು , . ಈ ಗುರುವಿನ ಕುರಿತು ಪುರಂದರ ದಾಸರು ಗುರುವಿನ ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಪರಿ ಪರಿ ಶಾಸ್ತ್ರವನೋದಿದರೇನು … Read more

ನೇಮಿನಾಥ ತಪಕೀರೆ ಫೋಟೋಗ್ರಾಫಿ

1)    ‘ಸಿಹಿಮುತ್ತು ಸಿಹಿಮುತ್ತು ಇನ್ನೊಂದು’ ಗಿಳಿಗಳೆರಡು ಮುತ್ತಿಕ್ಕುವ ದೃಶ್ಯ. ಚಿಕ್ಕೋಡಿ ತಾಲೂಕು ಬೆಳಕೂಡದಲ್ಲಿ ತೆಗೆದಿದ್ದು. ದಿ: 19/06/2014ರಂದು   2)    ‘ನನ್ನಂಥ ಚೆಲುವ ಚೆನ್ನಿಗ ಇನ್ನಾರು?’ ಕನ್ನಡಿಯಲ್ಲಿ ತನ್ನ ಒರತಿಬಿಂಬ ನೋಡಿಕೊಳ್ಳುತ್ತಿರುವ ‘ಸನ್‍ಬರ್ಡ್’. ಚಿಕ್ಕೋಡಿ ತಾಲೂಕು ಬೆಳಕೂಡದಲ್ಲಿ ತೆಗೆದಿದ್ದು. ದಿ: 30/08/2014   3)    ‘ಚಂದ್ರ’ ಚಂದ್ರನ ಮೇಲಿರುವ ಕುಳಿಗಳು ಸ್ಪಷ್ಟವಾಗಿ ಗೋಚರವಾಗಿದೆ. ದಿ: 22/08/2015     4)    ‘ಆಹಾ ಭೂರಿ ಭೋಜನವಿದು’ ಜೋಳದ ದಂಟಿನ ತುದಿಯಲ್ಲಿರುವ ತೆನೆಯ ಕಾಳುಗಳನ್ನು ಮೆಲ್ಲುತ್ತಿರುವ ಅಳಿಲು. ಚಿಕ್ಕೋಡಿ ತಾಲೂಕು … Read more

ಸಾಮಾನ್ಯ ಜ್ಞಾನ (ವಾರ 77): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: 1.    ಇತ್ತೀಚಿಗೆ ವಿವಾದಕ್ಕೆ ಒಳಗಾದ ಮ್ಯಾಗಿ ನೂಡಲ್ಸ್ ಯಾವ ಕಂಪೆನಿಯದು? 2.    HUDCO(ಹುಡ್ಕೊ)ನ ವಿಸ್ತೃತ ರೂಪವೇನು? 3.    ಹಣ್ಣು ಮತ್ತು ಹಣ್ಣಿನ ತೋಟದ ಬಗೆಗಿನ ಅಧ್ಯಯನ ಶಾಸ್ತ್ರಕ್ಕೆ ಎನೆನ್ನುತ್ತಾರೆ? 4.    ಮೇಲ್ಗಾಟ್ ರಾಷ್ಟ್ರೀಯ ಉದ್ಯಾನವನ ಯಾವ ರಾಜ್ಯದಲ್ಲಿದೆ? 5.    ಯುವ ಜನರಲ್ಲಿ ಥೈರಾಕ್ಸಿನ್ ಕೊರತೆಯಿಂದ ಬರುವ ವ್ಯಾದಿ ಯಾವುದು? 6.    ಕನ್ನಡದ ಪ್ರಥಮ ಖಾಸಗಿ ಟಿ.ವಿ.ಚಾನಲ್ ಯಾವುದು? 7.    ಭಾರತದ ರಾಜಧಾನಿಯನ್ನು ಕೊಲ್ಕತ್ತಾದಿಂದ ದೆಹಲಿಗೆ ಸ್ಥಳಾಂತರಿಸಲಾದ ವರ್ಷ ಯಾವುದು? 8.    ಭಾರತದಲ್ಲಿ ಮೊಟ್ಟ ಮೊದಲ ರಾಷ್ಟ್ರೀಯ … Read more