ಜನ ಸೇರಿ ಕೊಂದ ಗಜಪುತ್ರಿಯ ಕಥೆ!: ಅಖಿಲೇಶ್ ಚಿಪ್ಪಳಿ

[ಶಿರಸಿ-ಹಾನಗಲ್-ಸೊರಬ ಗಡಿಭಾಗದಲ್ಲಿ ಮಾನವ ಚಟುವಟಿಕೆಗಳಿಂದಾಗಿ ದಿಕ್ಕುತಪ್ಪಿದ ಆನೆಮರಿ ಪ್ರಕರಣಕ್ಕೆ ಸಂಬಂಧಿಸಿದ ವಿಷಯಗಳನ್ನು ವಿವಿಧ ಮೂಲಗಳಿಂದ ಸಂಗ್ರಹಿಸಿ, ತನಿಖಾ ಮಾದರಿಯಲ್ಲಿ ಸತ್ಯವನ್ನು ಕಂಡು ಹಿಡಿಯುವ ಪ್ರಯತ್ನವನ್ನು ಇಲ್ಲಿ ಮಾಡಲಾಗಿದೆ. ದಿನಾಂಕ:27/10/2015ರಿಂದ 31/10/2015ರ ವರೆಗೆ ಮಾಮೂಲಿ ದಿನಪತ್ರಿಕೆಗಳಲ್ಲಿ ಅರಣ್ಯ ಇಲಾಖೆ ಹೇಳಿದ ವಿಷಯಗಳನ್ನು ಮಾತ್ರ ಸತ್ಯವೆಂದು ಪರಿಗಣಿಸಿ ವರದಿ ತಯಾರಿಸಿ ಎಲ್ಲಾ ಪತ್ರಿಕೆಗಳು ಪ್ರಕಟಿಸಿದ್ದವು. ಇಲಾಖೆಯ ವೈಫಲ್ಯವನ್ನಾಗಲೀ ಅಥವಾ ಸ್ಥಳೀಯರ ಮೌಢ್ಯದಿಂದಾದ ಅವಘಡವನ್ನಾಗಲಿ ಯಾವುದೇ ಪತ್ರಿಕೆ ವರದಿ ಮಾಡಿಲ್ಲವೆಂಬುದು ಇಲ್ಲಿ ಗಮನಿಸಬೇಕಾದ ಅಂಶ]. ಗಾಂಧಿಜಯಂತಿಯನ್ನು ಆಚರಿಸಿ, ದೇಶಕ್ಕೆಲ್ಲಾ ಅಹಿಂಸೆಯ ಪಾಠ … Read more

ಆ ಲಾಜಿನ ಸುತ್ತಮುತ್ತ!: ಗುರುಪ್ರಸಾದ ಕುರ್ತಕೋಟಿ

ಎರಡು ದಶಕಗಳ ಹಿಂದಿನ ಮಾತು… ಆಗ ಇಂಜಿನಿಯರಿಂಗ್ ಮಾಡಿದರೇನೇ ಏನೋ ಸಾಧನೆ ಮಾಡಿದಂಗೆ ಅಂದುಕೊಂಡು ಬಾಗಲಕೋಟೆಯ ಕಾಲೇಜಿನಲ್ಲಿ ಸೀಟನ್ನು ಬಗಲಲ್ಲಿರಿಕೊಂಡು, ಆ ಊರಿನಲ್ಲಿ ನನ್ನ ಮೊದಲನೆಯ ವರ್ಷದ ವ್ಯಾಸಂಗಕ್ಕೆ ವಾಸ್ತವ್ಯ ಹೂಡಿದ್ದ  ದಿನಗಳವು. ಆಗಿನ್ನೂ ಹಳೆಯ ಬಾಗಲಕೋಟೆಯು ಮುಳುಗಡೆಯಾಗಿರಲಿಲ್ಲ. ನನ್ನ ವಿದ್ಯಾಭ್ಯಾಸ ಮುಗಿದಮೇಲೆ ಮುಳುಗಿತು! ಅಪ್ಪನಿಗೆ ಪರಿಚಯದವರ ಸಂಬಂಧಿಕರ ಮನೆಯೊಂದು ಅಲ್ಲಿತ್ತು, ಅವರ ಮನೆಯ ಆವರಣದಲ್ಲಿನ್ನೊಂದು ಒಂಟಿ ಮನೆಯೂ ಇದ್ದು, ನನ್ನ ಅದೃಷ್ಟಕ್ಕೊ ದುರದೃಷ್ಟಕ್ಕೋ ಅದು ಲಭ್ಯ ಇತ್ತಾದ್ದರಿಂದ ನನಗೆ ಅಲ್ಲಿ ವಾಸಿಸಲು ಅವರು ಅವಕಾಶ ನೀಡಿದ್ದರು. … Read more

ಆನ್‍ಲೈನ್ ಖರೀದಿ!: ಎಸ್.ಜಿ.ಶಿವಶಂಕರ್

ನಮ್ಮ ಮಕ್ಕಳು ವಿದೇಶಗಳಲ್ಲಿದ್ದಾರೆ. ಅವರಲ್ಲಿಗೆ ಅಗಾಗ್ಗೆ ಹೋಗಿ ಬರುತ್ತಿರುತ್ತೇವೆ. ಬರೆಯುವ ಹವ್ಯಾಸ ನನ್ನದು. ಜೊತೆಗೆ ಸ್ನೇಹಿತರೊಂದಿಗೆ, ಇ-ಮೈಲಿನಲ್ಲಿ ವಿಷಯಗಳನ್ನು ವಿನಿಮಯ ಮಾಡಿಕ್ಕೊಳ್ಳುವ ಅಭ್ಯಾಸವಿದೆ. ವಿದೇಶದಲ್ಲಿರುವಾಗ ಉಪಯೋಗಿಸಲು ಒಂದು ಪುಟ್ಟ ಲ್ಯಾಪ್ಟಾಪು ಇದ್ದರೆ ಅನುಕೂಲವೆನ್ನಿಸುತ್ತಿತ್ತು. ಆದರೆ ಹೆಚ್ಚು ಖರ್ಚು ಮಾಡಲು ಮನಸ್ಸಿರಲಿಲ್ಲ. ಮನೆಯಲ್ಲಾಗಲೇ ಒಂದು ಡೆಸ್ಕ್‍ಟಾಪು ಇತ್ತು. ಸರಿ ಆನ್‍ಲೈನಿನಲ್ಲಿ ಹುಡುಕಿದೆ. ಕಂಪ್ಯೂಟರಿನ ಸ್ಕ್ರೀನಿನ ಮೇಲೆ ಲ್ಯಾಪ್ಟಾಪು ನೋಡಿದೆ. ನಾಲಕ್ಕು ಸಾವಿರಕ್ಕೆ ಲ್ಯಾಪ್ಟಾಪು ಜೊತೆಗೊಂದು ಬ್ಯಾಕ್‍ಪ್ಯಾಕಿನ ವಿಶೇಷ ರಿಯಾಯತಿಯ ಕೊಡುಗೆ ಆಕರ್ಷಕವಾಗಿತ್ತು. ಹನ್ನೊಂದು ಇಂಚಿನ ಸ್ಕ್ರೀನು, ಪೂರ್ಣವಾದ ಕೀಬೋರ್ಡು … Read more

ನುಡಿಸೇವಕ: ಮಹಾಂತೇಶ್ ಯರಗಟ್ಟಿ

 “ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು  ಕನ್ನಡವೇ ಸತ್ಯ ಕನ್ನಡವೇ ನಿತ್ಯ” ರಾಷ್ಟ್ರಕವಿ ಕುವೆಂಪುರವರ ಈ ಮೇಲಿನ ಸಾಲುಗಳಂತೆ ತಾವಿದ್ದ ಸ್ಥಳದಲ್ಲೆ ಅದೆಷ್ಟೊ ಸಾಧಕರು ಕನ್ನಡ ಸೇವೆಗಾಗಿ ಶ್ರಮಿಸುವರ ಸಾಲಿನಲ್ಲಿ ನಟರಾಜಕುಂದೂರ ರವರು ಕೂಡ ನಿಲ್ಲುತ್ತಾರೆ ಎಂದರೆ ತಪ್ಪಾಗಲಾರದು ಇವರು ಮೂಲತಃ ದಾವಣಗೆರೆ ಜಿಲ್ಲೆಯ ಹೋನ್ನಾಳಿ ತಾಲೂಕಿನ ಕುಂದೂರು ಗ್ರಾಮದ ಬಡಕುಟುಂಬದಲ್ಲಿ ಜನಿಸಿದವರು, ತಮ್ಮ ಬಾಲ್ಯದ ಶಿಕ್ಷಣದಲ್ಲೆ ಕನ್ನಡದ ನೆಲ-ಜಲದ ಬಗ್ಗೆ ಅಪಾರ ಪ್ರೀತಿಯನ್ನೇ ಮೈಗೂಡಿಸಿಕೊಂಡವರು. ನಟರಾಜ ಕುಂದೂರು ರವರು ಈಗ ಕರ್ನಾಟಕ ರಾಜ್ಯ … Read more

ಕರ್ನಾಟಕ ಪರಿಶೆ (ಭಾಗ-1): ಎಸ್. ಜಿ. ಸೀತಾರಾಮ್, ಮೈಸೂರು

ಭೂತಮೂಲಗನ್ನಡಿಯಿಂದ          ಕನ್ನಡ ಭುವನೇಶ್ವರಿಯ ಛಾಯಾವತಾರಳಾದ “ಮಾತೃ ಭೂತೇಶ್ವರಿ” ಮೈಸೂರಿನಲ್ಲಿ ಮೊನ್ನೆ ಮಹಾಲಯ ಅಮಾವಾಸ್ಯೆಯ ಡಾಕಿಣಿ ಮುಹೂರ್ತದಲ್ಲಿ (ರಾತ್ರಿ 2ರ ಸಮಯ) ವಾಯುಸಂಚಾರದಲ್ಲಿದ್ದಾಗ, ಅಲ್ಲಿ ನೂತನವಾಗಿ ಕಟ್ಟ್ಟಲಾಗಿರುವ ‘ಮಿನಿ’ ವಿಧಾನಸೌಧದ ಮೇಲಿರುವ ಮೂರು ಘೋಷಣೆಗಳನ್ನು ಕಂಡು, ಭಯಭೀತೇಶ್ವರಿ ಆದಳೆಂದೂ, ಆಕ್ಷಣವೇ ‘ಕನ್ನಡ’, ‘ಕರ್ನಾಟಕ’, ‘ರಾಜ್ಯೋತ್ಸವ’ ಇತ್ಯಾದಿ ಘನವಿಚಾರಗಳ ಹುಚ್ಚುಚ್ಚು ಆಲೋಚನೆಗಳು ಆಕೆಯ ಮನಸ್ಸಿನಲ್ಲಿ ಉಕ್ಕುಕ್ಕಿಬಂದು, ಕಡೆಗೆ ಅವಳು ಅಲ್ಲೇ ಇವೆಲ್ಲವನ್ನೂ ‘ಠೀವಿ-007’ ಮುಂದೆ ಹೃದಯಾಘಾತಪೂರ್ವಕವಾಗಿ ಕಾರಿಕೊಂಡಳೆಂದೂ ವರದಿಯಾಗಿದೆ. ಆ ವಿಪರೀತ ಆಲೋಚನೆಗಳ ಆಯ್ದ ಭಾಗಗಳನ್ನು … Read more

ಅಚ್ಯುತನ ಅರಸುತ್ತಾ: ಪ್ರಶಸ್ತಿ

ಅಚ್ಯುತರಾಯ ದೇವಾಲಯ, ವಿಠಲ ದೇವಾಲಯ, ಮಾತಂಗಪರ್ವತಕ್ಕೆ ದಾರಿ ತೋರೋ ಮಾರ್ಗದರ್ಶಿ ಫಲಕ ಏಕಶಿಲಾ ನಂದಿಯ ಬುಡದಲ್ಲಿ ಕಾಣುತ್ತಿತ್ತು. ರಾಮಾಯಣದಲ್ಲಿ ಬರೋ ಮಾತಂಗಪರ್ವತ(ಹಂಪಿ ಕಥಾನಕದ ಮೊದಲಭಾಗದಲ್ಲಿ ಹೇಳಿದಂತೆ)ಇದೇ ಎಂದು ಓದಿದ್ದ ನಾವು ಅದಕ್ಕೆ ಭೇಟಿ ನೀಡಬೇಕೆಂಬ ಆಸೆಯಿಂದ ಅತ್ತ ಹೆಜ್ಜೆ ಹಾಕಿದೆವು.ಮೂರು ದಿನವಾದ್ರೂ ಇಲ್ಲಿರೋ ಜಾಗಗಳನ್ನೆಲ್ಲಾ ಸುತ್ತೇ ಹೋಗಬೇಕೆಂದು ಬಂದಿದ್ದ ನಮಗೆದುರಾಗಿದ್ದೊಂದು ಪ್ರವೇಶದ್ವಾರ.ಕ್ರೇನುಗಳಿಲ್ಲದ ಕಾಲದಲ್ಲಿ ಆ ಪಾಟಿ ಭಾರದ ಕಲ್ಲುಗಳನ್ನು ಅಷ್ಟು ಮೇಲಕ್ಕೆ ಸಾಗಿಸಿ ಎರಡಂಸ್ತಿನ ಪ್ರವೇಶದ್ವಾರಗಳನ್ನು, ಹಜಾರಗಳನ್ನು ಕರಾರುವಕ್ಕಾಗಿ ಕಟ್ಟಿದ್ದಾದರೂ ಹೇಗೆಂದು ಕುತೂಹಲ ಮೂಡಿಸೋ ಇಂಥಾ ದ್ವಾರಗಳು, … Read more

ಕಾವ್ಯಧಾರೆ: ಸಿಪಿಲೆನಂದಿನಿ, ಎಸ್ ಕಲಾಲ್, ಕು.ಸ.ಮಧುಸೂದನ್ ರಂಗೇನಹಳ್ಳಿ

ಅವನು ಕಾಡುಗಳ್ಳರಲ್ಲಿ ಬಬ್ಬನು  ಮಳೆತಂಪಿಗೆ ನಳ-ನಳಸುತ್ತ ಚಿಗುರೊಡೆಯುತ್ತಿದೆ ವನರಾಶಿ ತುಂಬಿದೆ ಶಿಖೆಯಾದ್ರಿಗಳು ಅವನ ಮೈತುಂಬಿದ  ಹಸಿರು ಎಲೆಗಳ ಉಡುಪುಲಿ  ಎಂತಹ ಸುವಾಸನೆ  ಮಣ್ಣಿನ ಬೇರಿನೊಳಗೂ  ಸೂಸುವ ತಾಜಾತನ ಅವನ ಎದೆಯೊಳಗೆ ಜೀವನಿರೋದಕ  ಮೌನಕವಿದ ರುದ್ರ ತೊರೆಯಂತಹ ಮುಖ ಸಿಡಿಲಿನಂತಹ ಬಾಹುಗಳಲ್ಲಿ ಬಂದಿಯಾಗುವ ಸಾರಂಗ, ಚಿತ್ತಾಕರ್ಷಕ ಗುಂಡಿಗೆ  ದಮನಿಯ ಮೇಲೆ ಚಿನ್ನದಕಾಂತಿ ಹುಲಿಪಟ್ಟೆ  ನಡುವಲ್ಲಿ ನೀಲಿ ವರ್ಣದ ಗುಂಡುಗಳ ಬತ್ತಳಿಕೆ ಕಂಗಳ ಹಂಚಿನಲಿ  ಬೆಳ್ಳಿಮುಗಿಲ ಹೊಳಯುವ ಚಿತ್ತಾರ ಹಾಲ್ದಿಂಗಳ ಬೆಳಕ ನೆರಳಿನಲಿ ನೆಡೆವಾಗ  ಕಣಿವೆಗಳಲಿ ಕಂಪನ  ಕಾನನದೆದೆಯ ಆಳದೊಳಗೆ … Read more

ನಾವು- ನಮ್ಮ ಕನ್ನಡ: ನಾಗೇಶ್ ಟಿ. ಕೆ.

ನನ್ನ ಹೆಸರು ನಾಗೇಶ್ ಟಿ ಕೆ. ಮೂಲತಃ ಹಾಸನ ಜಿಲ್ಲೆಯವ, ಪ್ರಸ್ತುತ ಗೌರಿಬಿದನೂರು ತಾಲ್ಲೋಕಿನಲ್ಲಿ ವಾಸ. ನಾನೊಬ್ಬ ಕನ್ನಡ ಪ್ರೇಮಿ, ಹುಚ್ಚು ಅಭಿಮಾನಿಯಲ್ಲ ಕೇವಲ ಭಾಷಾಭಿಮಾನಿಯಷ್ಟೆ.     1956ರಲ್ಲಿ ಅಸ್ಥಿತ್ವಕ್ಕೆ ಬಂದ ‘ಮೈಸೂರು ರಾಜ್ಯ’ ಇಂದು ಶ್ರೀಗಂಧದ ಬೀಡು, ಶಿಲ್ಪಕಲೆಗಳ ತವರೂರು ಎಂದು ಕರೆಯಲ್ಪಡುವ ‘ಕರ್ನಾಟಕ’ 60ನೇ ಕನ್ನಡ ರಾಜ್ಯೋತ್ಸವ ಆಚರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಕನ್ನಡ ನಾಡು, ಕನ್ನಡ ರಾಜ್ಯೋತ್ಸವದ ವಿಶೇಷತೆ, ಕನ್ನಡಿಗರ ಭಾಷಾಭಿಮಾನದ ಬಗ್ಗೆ ಬರೆಯಲು ಇಚ್ಛಿಸುತ್ತೇನೆ.    ಕನ್ನಡ ನಾಡಿನ ಇತಿಹಾಸ ಎರಡು ಸಾವಿರ ವರ್ಷಕ್ಕು … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಭರವಸೆ, ಭಯ, ಜ್ಞಾನ ಸೂಫಿ ಮುಮುಕ್ಷು ಹಸನ್‌ ಮರಣಶಯ್ಯೆಯಲ್ಲಿದ್ದಾಗ ಯಾರೋ ಒಬ್ಬ ಕೇಳಿದ, “ಹಸನ್‌ ನಿನ್ನ ಗುರು ಯಾರು?” “ನೀನು ತುಂಬ ತಡಮಾಡಿ ಈ ಪ್ರಶ್ನೆ ಕೇಳಿರುವೆ. ಈಗ ಸಮಯವಿಲ್ಲ, ನಾನು ಸಾಯುತ್ತಿದ್ದೇನೆ.” “ನೀನೊಂದು ಹೆಸರು ಮಾತ್ರ ಹೇಳಬೇಕಷ್ಟೆ. ನೀನಿನ್ನೂ ಬದುಕಿರುವೆ, ನೀನಿನ್ನೂ ಉಸಿರಾಡುತ್ತಿರುವೆ, ಆದ್ದರಿಂದ ಸುಲಭವಾಗಿ ನನಗೆ ನಿನ್ನ ಗುರುವಿನ ಹೆಸರು ಹೇಳಬಹುದು.” “ಅದು ಅಷ್ಟು ಸುಲಭವಲ್ಲ. ಏಕೆಂದರೆ ನನಗೆ ಸಹಸ್ರಾರು ಗುರುಗಳಿದ್ದರು. ಅವರ ಹೆಸರುಗಳನ್ನು ಹೇಳಲು ನನಗೆ ಅನೇಕ ತಿಂಗಳುಗಳು, ಅಲ್ಲ, ವರ್ಷಗಳು … Read more

ಸಾಮಾನ್ಯ ಜ್ಞಾನ (ವಾರ 79): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: 1.    ಗಾಂಧಿ ಶಾಂತಿ ಪುರಸ್ಕಾರ ಪಡೆದ ಪ್ರಥಮ ಭಾರತೀಯ ಯಾರು? 2.    ಬಾಬು ಕೃಷ್ಣಮೂರ್ತಿ ಇದು ಯಾರ ಕಾವ್ಯ ನಾಮವಾಗಿದೆ? 3.    ಕನ್ನಡದ ದಾಸಯ್ಯ ಎಂದು ಯಾವ ಕವಿಯನ್ನು ಕರೆಯುತ್ತಾರೆ? 4.    ಶಿವಾಜಿಯ ರಾಜ್ಯದ ರಾಜಧಾನಿ ಯಾವುದಾಗಿತ್ತು? 5.    ಭಾರತೀಯ ಜೇನು ಸಂಶೋಧನಾ ಸಂಸ್ಥೆ ಎಲ್ಲಿದೆ? 6.    ಅಂಬರ ಅರಮನೆ ಎಲ್ಲಿದೆ? 7.    ಉಕ್ಕು ತಯಾರಿಕೆಯಲ್ಲಿ ಬಳಸುವ ಮುಖ್ಯ ಲೋಹ ಯಾವುದು? 8.    1986ರಲ್ಲಿ ಬೆಂಗಳೂರಿನಲ್ಲಿ ಸಾರ್ಕ್ ಸಮ್ಮೇಳನ ನಡೆದಾಗ ಭಾರತದ ಪ್ರಧಾನಿ ಯಾರಾಗಿದ್ದರು? 9.   … Read more