ಸತ್ತವನ ಶಿಕಾಯತ್ತುಗಳು : ಪ್ರಸಾದ್ ಕೆ.
1977 ರ ದಿನಗಳು ಇಪ್ಪತ್ತೆರಡರ ಯುವಕನೊಬ್ಬನಿಗೆ ಬ್ಯಾಂಕಿನಿಂದ ಲೋನ್ ಬೇಕಾಗಿತ್ತು. ಲೋನ್ ಅಂದಾಗ ಕಾಗದ ಪತ್ರಗಳ ಅವಶ್ಯಕತೆ, ಓಡಾಟ ಎಲ್ಲವೂ ಸಹಜವೇ ಅನ್ನಿ. ಆಗಿನ ಕಾಲದಲ್ಲಿ ಈಗಿನಂತೆ ಕರೆದು ಸಾಲ ಕೊಡುತ್ತಿರಲಿಲ್ಲವೋ ಏನೋ! ಇರಲಿ, ವಿಷಯಕ್ಕೆ ಬರೋಣ. ಸೋ ಈ ನಮ್ಮ ಬಡಪಾಯಿ ಯುವಕ ಆ ಸರ್ಟಿಫಿಕೇಟು, ಈ ಸರ್ಟಿಫಿಕೇಟು ಅಂತ ಕಾಗದ ಪತ್ರಗಳನ್ನು ಲಗುಬಗೆಯಿಂದ ಹೊಂದಿಸುತ್ತಲೇ ಇದ್ದ. ಬಹುತೇಕ ಎಲ್ಲಾ ಮುಗಿದ ನಂತರ ತನ್ನ ಗುರುತು ಪ್ರಮಾಣಪತ್ರದ ಸಲುವಾಗಿ ಆತ ರೆವೆನ್ಯೂ ಆಫೀಸಿನ ಬಾಗಿಲು … Read more