ವಿಶ್ವಾಮಿತ್ರ!!: ಎಸ್.ಜಿ.ಶಿವಶಂಕರ್
ಅರಳೀಕಟ್ಟೆಯಲ್ಲಿ ಕೂತಿದ್ದ ಶತಾಯುಶಿ ಹನುಮಜ್ಜ ತನ್ನಷ್ಟೇ ವಯಸ್ಸಾದಂತೆ ಕಾಣುತ್ತಿದ್ದ ಕನ್ನಡಕವನ್ನು ಸರಿಪಡಿಸಿಕೊಂಡು ತನ್ನ ಮುಂದೆ ಧೂಳೆಬ್ಬಿಸುತ್ತಾ ಹೋದ ಕಾರು ನೋಡಿದ. ಇದು ಎಷ್ಟನೆಯ ಕಾರು ಎಂದು ಅಚ್ಚರಿಪಟ್ಟ. ಸುಮಾರು ಅರ್ಧ ಗಂಟೆಯಿಂದ ಏನಿಲ್ಲವೆಂದರೂ ಇಪ್ಪತ್ತಕ್ಕೂ ಹೆಚ್ಚು ಕಾರುಗಳು ಅವನು ಕೂತಿದ್ದ ಆರಳೀಕಟ್ಟೆಗೆ ಧೂಳಿನ ಅಭಿಷೇಕ ಮಾಡಿದ್ದವು. "ಇವತ್ತೇನು ನಡೀತೈತೆ ಆ ಫಾರಮ್ಮಿನಾಗೆ..?" ಹನುಮಜ್ಜ ಗೊಗ್ಗರು ದನಿಯಲ್ಲಿ ತನಗೆ ತಾನೇ ಎಂಬಂತೆ ಹೇಳಿಕೊಂಡ. "ಏನು ನಡದ್ರೆ ನಮಗೇನು..? ನಾವು ಹೊಲಗೈಯಾದು ತಪ್ಪತೈತ..?" ಹನುಮಜ್ಜನಿಗಿಂತ ಹತ್ತು ವರ್ಷ ಕಿರಿಯ ಭರಮಜ್ಜ … Read more