ಹೂವಾಗಿ ಅರಳಿ: ವೆಂಕಟೇಶ ಚಾಗಿ

  ಬೆಳಗಿನ ೬ ಗಂಟೆಯ ಸಮಯ. . ಕಣ್ಣಲ್ಲಿ ಇನ್ನೂ ನಿದ್ದೆ ಮಂಪರು. ಆದರೂ ಕಣ್ತೆರೆಯುವಂತೆ ಮಾಡಿತ್ತು ಮೊಬೈಲ್. ಯಾರದೋ ಮೆಸೆಜ್ ಬಂದಿರುವ ರಿಂಗ್ ಟೋನ್ ಆಗಾಗ ಕೇಳಿಸುತ್ತಿತ್ತು. ಚಳಿಗಾಲದ ಚಳಿಯಲ್ಲಿ ಮುದುಡಿಕೊಂಡು ಮಲಗಿದ್ದ ನಾನು ಮನಸ್ಸಿಲ್ಲದೇ ಕಣ್ತೆರೆಯಬೇಕಾಯಿತು. ಒಂಟಿ ಕಣ್ಣು ತೆರೆದು ಮೊಬೈಲ್ ತಡಕಾಡಿದೆ. ಮೆಸೆಜ್ ಟೋನ್ ನ ಶಬ್ದ ಮೊಬೈಲ್ ನ್ನು ಬೇಗ ಕೈಗೆ ಸಿಗುವಂತೆ ಮಾಡಿತ್ತು. ಆನ್ ಮಾಡುತ್ತಿದ್ದಂತೆ ಸುಮಾರು ೧೦ ಮೆಸೆಜ್ ಗಳಲ್ಲೂ ಸಾರಿ ಸಾರಿ ಸಾರಿ. . . ಹಿಂದಿನ … Read more

ಇದು ಕಥೆಯಲ್ಲ ವ್ಯಥೆ: ಆರೀಫ ವಾಲೀಕಾರ

ಅವ್ವ..! ಅವ್ವ..! ಎಂದು ರಾಮ ಓಡುತ್ತಾ ಮನೆಗೆ ಬಂದ ರಾಮು, ಅಕ್ಕ ಎಲ್ಲಿ ಎಂದು ಕೇಳಿದ?. ಅದಕ್ಕೆ ಗುರವ್ವ(ರಾಮು ತಾಯಿ) ಅವಳು(ರುಕ್ಕು ರಾಮುನ ಅಕ್ಕ) ಹಳ್ಳಕ್ಕೆ ಕಟ್ಟಿಗೆ ತರಲು ಹೋಗಿದ್ದಾಳೆಂದು ಹೇಳಿ. ತನ್ನ ಕಾಯಕದಲ್ಲಿ ತಲ್ಲಿನಳಾದಳು. ನಾನು ಆಟ ಆಡೋಕೆ ಹೋಗುತ್ತೀನಿ ಎಂದು ರಾಮು ಓಡಿ ಹೋದ. ಗುರವ್ವ ಕುಳ್ಳು ಸರಿಮಾಡುತ್ತಾ ಗೋಣು ಹಾಕಿದಳು. ಸೂರ್ಯಸ್ತ ಆಗುತ್ತಿತ್ತು. ಧರೆಪ್ಪ(ಗುರವ್ವನ ಗಂಡ) ಗೌಡರ ಹೊಲದ ಕೆಲಸ ಮುಗಿಸಿಕೊಂಡು ಮನೆಗೆ ಬಂದ. ‘ಲೇ ಗುರಿ ಎಲ್ಲಿ ಇದ್ದಿಯೇ?. ಗುರವ್ವಾ ಚುಮಣಿಗೆ … Read more

ಪರೀಕ್ಷೆಯನ್ನು ಹಬ್ಬದಂತೆ ಆಚರಿಸಿ ಉತ್ತಿರ್ಣರಾಗಿರಿ: ಜಯಶ್ರೀ ಭ. ಭಂಡಾರಿ.

ಇಂದಿನ ಮಕ್ಕಳು ನಾಳಿನ ನಾಡ ಬೆಳಗುವ ನಾಯಕರು. ಅವರಿಗೆ ಸರಿಯಾದ ಮಾರ್ಗದರ್ಶನ ಬೇಕು. ಶಾಲೆಯಲ್ಲಿ ಗುರುಗಳು ಮನೆಯಲ್ಲಿ ಪಾಲಕರು ಮಕ್ಕಳ ಶ್ರೇಯಸ್ಸಿಗೆ ಶ್ರಮಿಸುತ್ತಾರೆ. ಹುಟ್ಟಿದ ಪ್ರತಿಮಗುವಿನಲ್ಲಿ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಅವನನ್ನು ಭಾವಿಭವಿಷ್ಯತ್ತಿಗೆ ಅಣಿಮಾಡುವ ಗುರುತರ ಜವಾಬ್ದಾರಿ ಶಿಕ್ಷಕರ ಹಾಗೂ ಪಾಲಕರ ಮೇಲಿದೆ. ಮಗ/ಳು ಶಾಲೆಗೆ ಹೋಗತಾರೆ ಅಂದರೆ ಅವರ ಬಗ್ಗೆ ಪಾಲಕರ ಕಾಳಜಿ ಬೇಕೆಬೇಕು. ತಯಾರಿ ಮಾಡಿ ಶಾಲೆಗೆ ಕಳಿಸಿದರೆ ಜವಾಬ್ದಾರಿ ಮುಗಿತು ಅವರ ಕೇಳಿದ್ದೆಲ್ಲ ಕೊಡಿಸಿದರೆ ಆಯ್ತಲ್ಲವಾ ಅನ್ನಬೇಡಿ. ನಿಮ್ಮ ಮಗು ನಿಮ್ಮ … Read more

ಜಾಣಸುದ್ದಿ 9: ಕೊಳ್ಳೇಗಾಲ ಶರ್ಮ

ಈ ವಾರದ ಸಂಚಿಕೆಯಲ್ಲಿ ಕೊಳ್ಳೇಗಾಲ ಶರ್ಮರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… ಇ ಮೇಲ್ ನಲ್ಲಿ ಅಥವಾ ವಾಟ್ಸ್ ಅಪ್ ನಲ್ಲಿ ಈ ಧ್ವನಿಮುದ್ರಿಕೆ ನಿಮಗೆ ಬೇಕು ಎಂದನಿಸಿದರೆ ನಿಮ್ಮ ಕೋರಿಕೆಯನ್ನು ನಮ್ಮ ಇ … Read more

ನೆನಪಾಗುತ್ತಾರೆ ಇನ್ನೂ ನಮ್ಮ ಅಪ್ಪಾಜಿ ಮೇಷ್ಟ್ರು : ಜಹಾನ್‍ ಆರಾ. ಎಚ್. ಕೋಳೂರು

ಬೆಳಗ್ಗೆ ಶಾಲೆ ಗಂಟೆ ಹೊಡೆದ ನಿಮಿಷಾರ್ಧದಲ್ಲಿ ಎಲ್ಲರೂ ಪ್ರಾರ್ಥನೆ ಕಡೆಗೆ. ಆಯಸ್ಕಾಂತವು ಕಬ್ಬಿಣದ ವಸ್ತುಗಳನ್ನು ಆಕರ್ಷಿಸಿದಂತೆ ಮೇಷ್ಟ್ರ ವಿಷಲ್ ನಮ್ಮನ್ನು ಆಕರ್ಷಿಸುತ್ತಿತ್ತು. ಗಟ್ಟಿ ಧ್ವನಿಯಲ್ಲಿ “ಸಾವಧಾನ” ಎಂದರೆ ಹುಮ್ಮಸ್ಸಿನಿಂದ “ಏಕ್” ಎನ್ನುವ ಧ್ವನಿ ಒಂದು ಕಡೆಯಾದರೆ ನೂರಾರು ಮಕ್ಕಳ ಕಿವಿಗಳವರೆಗೆ ತರುವ ಮತ್ತೊಂದು ಧ್ವನಿ “ವಿಶ್ರಾಮ್” ಮತ್ತೊಂದು ಕಡೆ,ಇ ದು ನಮ್ಮ ಶಾಲೆಯ ಪಿ.ಟಿ.ಮೇಷ್ಟ್ರಾದ ಅಪ್ಪಾಜಿಗೌಡ್ರ ಶಿಸ್ತಿನ ಪಾಠ. ಶಿಸ್ತು, ಸಜ್ಜನಿಕೆಗೆ ಮತ್ತೊಂದು ಹೆಸರೇ ಇವರು. ನೀಳಕಾಯದ ಬಿಳಿಗೂದಲಿನ ಇವರು ಯಾವಾಗಲೂ ಸಫಾರಿ ಬಟ್ಟೆ ಮೈಮೇಲೆ, ಎಲ್ಲರ … Read more

ಗಿಲಿಗಿಲಿ ಪುವ್ವಾ : ಕೃಷ್ಣ ಶ್ರೀಕಾಂತ ದೇವಾಂಗಮಠ

ಪಾತ್ರ ವರ್ಗ ಚಾರು – ಒಂದು ಕೈ ಮಾತ್ರ ಇರುವ ಕೇರಿಯ ಹುಡುಗ ಮಾನು – ಕೇರಿಯ ಹುಡುಗ ಮೀರಾ – ಕೇರಿಯ ಹುಡುಗಿ ಮಾದಪ್ಪ – ಮಾನುವನ ತಂದೆ ಅನಾಮಿಕ – ಧ್ವನಿ ಪುಟ್ಟಿ – ಲಂಬೋದರ & ಜಾನ್ನವಿಯ ಮಗಳು ಗೌರಿ – ಗೆಳತಿ ದೇವ್ರು – ಅಜ್ಜಿಯ ಮಮ್ಮಕ್ಕಳು ಅನಿ – ಅಜ್ಜಿಯ ಮಮ್ಮಕ್ಕಳು ಮಾಯಾ – ಅಕ್ಕನಂಥ ಗೆಳತಿ ಜಾನ್ನವಿ – ಪುಟ್ಟಿಯ ತಾಯಿ ಲಂಭೋದರ – ಪುಟ್ಟಿಯ ತಂದೆ ದೃಶ್ಯ … Read more

ಕಾವ್ಯಧಾರೆ 2

ಯುಗಾದಿ ನವ ಸಂತಸ ನವ ಸಂಭ್ರಮ ನವ ನವೋಲ್ಲಾಸ ತುಂಬಲು ಮತ್ತೆ ಬಂದಿದೆ ಯುಗಾದಿ ನವ ಚೇತನ ನವ ಭಾವನ ನವ ನವೋತ್ಸಾಹ ಬೀರಲು ಮತ್ತೆ ಬಂದಿದೆ ಯುಗಾದಿ ನವ ಪಲ್ಲವಿ ನವ ಕಿನ್ನರಿ ನವ ನವೋತ್ಕರ್ಷ ಹೊಂದಲು ಮತ್ತೆ ಬಂದಿದೆ ಯುಗಾದಿ ನವ ಬಂಧನ ನವ ಸ್ಪಂದನ ನವ ನವೋದಯ ಹೊಮ್ಮಲು ಮತ್ತೆ ಬಂದಿದೆ ಯುಗಾದಿ ನವ ಬದುಕಿಗೆ ನವ ದಾರಿಗೆ ನವ ನವೋದಕವೆರೆಯಲು ಮತ್ತೆ ಬಂದಿದೆ ಯುಗಾದಿ ನವ ಮಂಥನ ನವ ಚಿಂತನ ನವ … Read more

ಜೀವನದ ಅಂಚಿನಲ್ಲಿರುವ ಪುಟಗಳನ್ನು ಪ್ರೀತಿಯ ಬಣ್ಣದಿಂದ ತುಂಬೋಣ: ಜಯಶ್ರೀ. ಜೆ. ಅಬ್ಬಿಗೇರಿ

ಅದ್ಯಾಕೆ ಹೀಗೆ ಅಂತ ನನಗೂ ಗೊತ್ತಿಲ್ಲ. ಮೊದಲಿನಿಂದಲೂ ಹಾಗೆ ಗೆಳತಿಯರು ಅಂತ ಸಮೀಪವಿದ್ದವರೆಲ್ಲ ನನ್ನೊಂದಿಗೆ ಒಂದಿಷ್ಟು ಜಾಸ್ತಿನೇ ಅನ್ನುವಷ್ಟು ಆತ್ಮೀಯರಾಗ್ತಾರೆ. ತಮ್ಮ ಮನಸ್ಸಿನಲ್ಲಿರುವುದನ್ನು ನನ್ನ ಬಳಿ ಮುಕ್ತವಾಗಿ ಹೇಳಿಕೊಳ್ಳುತ್ತಾರೆ. ಬಹುಶಃ ನಾನು ನನ್ನದೇನೋ ಕೆಲಸವಿದೆ ಎಂದು ಅವರಿಗೆ ಬೆನ್ನು ಹಾಕಿ ಎದ್ದು ಹೋಗದೇ ಇರುವುದರಿಂದಲೋ, ಅವರು ಹೇಳಿದ್ದನ್ನೆಲ್ಲ ದೇವರ ಹಾಗೆ ಕೂತು ಕೇಳಿಸಿಕೊಳ್ಳುತ್ತೇನೆ ಎನ್ನುವುದಕ್ಕೋ ಅಥವಾ ಅವರು ಏನು ಹೇಳಿದರೂ ಅದನ್ನು ಪ್ರಶ್ನಿಸದೇ ಒಪ್ಪಿಕೊಳ್ಳುತ್ತೇನೆ ಎನ್ನುವ ಕಾರಣಕ್ಕೋ, ಏನೋ ಗೊತ್ತಿಲ್ಲ. ಒಟ್ಟಿನಲ್ಲಿ ವಯಸ್ಸಿನಲ್ಲಿ ಹೆಚ್ಚು ಕಡಿಮೆ ಹಿರಿಯರು … Read more

ಯುಗಾದಿ: ವೈ. ಬಿ. ಕಡಕೋಳ

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ಎಂಬ ಬೇಂದ್ರೆಯವರ ಗೀತೆಯ ಸಾಲುಗಳಲ್ಲಿ ಯುಗಾದಿಯ ಬರುವಿಕೆ, ಅದರಲ್ಲಿನ ಸಡಗರ ವರ್ಣನಾತೀತ. ಋತುಗಳ ರಾಜ ವಸಂತನ ಆಗಮನದ ಸೂಚನೆಯ ಜೊತೆಗೆ ಯುಗಾದಿಯು ಎಲ್ಲ ಹಬ್ಬಗಳಿಗೂ ನಾಂದಿಯಾಗಿ ಪ್ರತಿ ಸಂವತ್ಸರದ ಚೈತ್ರ ಮಾಸ ಶುಕ್ಲಪಕ್ಷದ ಪಾಡ್ಯಮಿ ತಿಥಿಯಂದು ಆಚರಿಸಲ್ಪಡುವ ಹಬ್ಬ ಯುಗಾದಿ. ರಾಮಾಯಣ ಕಾಲಕ್ಕಿಂತ ಮೊದಲು ಉತ್ತರಾಯಣದಿಂದ ಹೊಸ ವರ್ಷದ ಗಣನೆ ಪ್ರಾರಂಭವಾಗುತ್ತಿತ್ತು. ಶ್ರೀರಾಮನು ಆವತರಿಸಿದ ಮಾಸ ಹಾಗೂ ಪಟ್ಟಾಭಿಷೇಕವಾದ … Read more

ವೈದ್ಯಕೀಯ ಲೋಕದ ಸಂಶೋಧನೆಗಳ ದಿಕ್ಕು ಬದಲಾಗಬೇಕು!: ಕೆ ಟಿ ಸೋಮಶೇಖರ ಹೊಳಲ್ಕೆರೆ

ಮಾನವನ ಚಿಂತನೆಗಳು ಪ್ರಕೃತಿಯ ನಿಯಮಗಳಿಗೆ ದೇಹ ಪ್ರಕೃತಿಗೆ ಪೂರಕವಾಗಿರಬೇಕು. ಸಹಜ ಚಿಂತನೆಗಳು ಪ್ರಕೃತಿಯ, ದೇಹ ಪ್ರಕೃತಿಯ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕೊಡುತ್ತವೆ. ಅಸಹಜ ಚಿಂತನೆಗಳು ಸಮಸ್ಯೆಗಳ ಸರಣಿಯನ್ನೇ ಸೃಷ್ಟಿಸುತ್ತವೆ! ಸಹಜ ಚಿಂತನೆಗಳಿದ್ದರೂ ಮಾನವ ತನ್ನ ದುರಾಸೆಯಿಂದ ದುಡ್ಡಿನ ಪಿಶಾಚಿ ಯಾಗಿರುವುದರಿಂದ ಉದ್ದೇಶಪೂರ್ವಕವಾಗಿ ಅಸಹಜವಾಗಿ ಚಿಂತಿಸಿ ಪ್ರಕೃತಿಯ, ದೇಹ ಪ್ರಕೃತಿಯ ನೋವು ಯಾತನೆಗಳಿಗೆ ಕಾರಣವಾಗುತ್ತಿದ್ದಾನೆ. ಪರಿಸರ ಮಾಲಿನ್ಯಕ್ಕೂ ಕಾರಣನಾಗಿದ್ದಾನೆ! ಇತ್ತೀಚೆಗೆ ಜಗತ್ತಿನಾದ್ಯಂತ ಇದೆ ವಿಜೃಂಭಿಸಿ ಜೀವಜಲ, ಅನಾರೋಗ್ಯ ಸಮಸ್ಯೆಗಳು ಅತಿ ಆಗಲು ಯಾತನೆ ಮುಗಿಲು ಮುಟ್ಟಲು ಕಾರಣವಾಗಿದೆ. ಇಡೀ … Read more

ಕಾರ್ನ್ ಪಲಾವ್ ಮತ್ತು ಕರಬೂಜದ ಹಣ್ಣಿನ ಮಿಲ್ಕ್ ಶೇಕ್: ವೇದಾವತಿ ಹೆಚ್.ಎಸ್.

1.ಕಾರ್ನ್ ಪಲಾವ್. (Corn Pulao) ಮಕ್ಕಳಿಂದ ದೊಡ್ಡವರವರೆಗೂ ಇಷ್ಟವಾಗುವ ಕಾರ್ನ್ ಪಲಾವ್ ಆರೋಗ್ಯಕರವಾದ ಮತ್ತು ರುಚಿಕರವಾದ ಪಲಾವ್ ನಲ್ಲಿ ಒಂದಾಗಿದೆ. ಕಾರ್ನ್ ಪಲಾವ್ ವೊಂದಿಗೆ ರಯತಾ, ವೆಜ್ ಕೂರ್ಮ ಹಾಕಿ ಸವಿಯಲು ರುಚಿಯಾಗಿರುತ್ತದೆ. ಬೇಕಾಗುವ ಸಾಮಾಗ್ರಿಗಳು: ಬಾಸುಮತಿ ಅಕ್ಕಿ ಒಂದು ಕಪ್ ಕಾರ್ನ್ ಒಂದು ಕಪ್ ಈರುಳ್ಳಿ ಎರಡು/ಚಿಕ್ಕದಾಗಿ ಕತ್ತರಿಸಿ. ಟೊಮೆಟೊ ಎರಡು/ಚಿಕ್ಕದಾಗಿ ಕತ್ತರಿಸಿ ಕ್ಯಾರೆಟ್, ಬೀನ್ಸ್ ಒಂದು ಕಪ್/ಚಿಕ್ಕದಾಗಿ ಕತ್ತರಿಸಿ ಕ್ಯಾಪ್ಸಿಕಂ ಒಂದು/ಚಿಕ್ಕದಾಗಿ ಕತ್ತರಿಸಿ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಒಂದು ಟೀ ಚಮಚ ಗರಂಮಸಾಲೆ ಅರ್ಧ … Read more

ತನ್ನ ಅಹಂನ ಮುಂದೆ ದೇಶ ಕಾಯುವ ಯೋಧರ ತ್ಯಾಗ ಬಹು ದೊಡ್ಡದು: ನಾಗರಾಜ್.ಮುಕಾರಿ (ಚಿರಾಭಿ)

ಬೇಸಿಗೆ ಕಾಲ ಬಂದಾಗಲೆಲ್ಲಾ ಊಟಿ ಅಥವಾ ಮನಾಲಿಯ ನೆನಪಾಗುತ್ತಿತ್ತು ಕಾರಣ ನಿಮಗೆ ಗೊತ್ತೇ ಇದೆ. ಅಲ್ಲಿಯ ವಾತಾವರಣ ದೇಹ ತಂಪು ಮಾಡುವುದರ ಜೊತೆಗೆ ಕಣ್ಣುಗಳಲ್ಲಿ ಅಲ್ಲಿಯ ಸ್ವರ್ಗರಮಣೀಯ ದೃಷ್ಯಗಳನ್ನು ತುಂಬಿ ಆನಂದ ಪಡೆಸುತ್ತದೆ. ಹಾಗಾಗಿ ಈ ಬಾರಿ ಮನಾಲಿಗೆ ಹೋಗುವುದಾಗಿ ನಿರ್ಧರಿಸಿ ತಿರುವನಂತಪುರಂ-ಡೆಲ್ಲಿಗೆ ಹೊರಡುವ ರಾಜಧಾನಿ ಎಕ್ಸ್‍ಪ್ರೆಸ್‍ನಲ್ಲಿ ಟಿಕೆಟ್ ಬುಕ್ ಮಾಡಿ ಕುಟುಂಬ ಸಮೇತರಾಗಿ ಹೊರಟೇ ಬಿಟ್ಟೆವು. ರೈಲಿನ ಒಳಹೊಕ್ಕೊಡನೇ ತಂಪಾದ ಗಾಳಿ ಮೈಯಲ್ಲಾ ತಣ್ಣಗಾಗಿಸಿತು. ಮನಾಲಿಯ ಸುಖ ಇಲ್ಲಿಂದಲೇ ಸಿಗಲು ಶುರುವಾಯಿತು. ನಮಗೆ ನಿಗಧಿ ಪಡಿಸಿದ … Read more

ಸ್ತ್ರೀ ಸ್ವತಂತ್ರ ಅಸ್ಥಿತ್ವದ ಅಗತ್ಯತೆ: ನಾಗರೇಖಾ ಗಾಂವಕರ

ಆಧುನಿಕ ಮಹಿಳಾ ಜಗತ್ತು ತನ್ನದೇ ಸ್ವಯಂಕೃತ ಸಾಧನೆಯ ಸರಣಿಯಲ್ಲಿ ಸಾಗಲು ಅತೀ ಜರೂರತ್ತು ಇರುವುದು ಆಕೆಗೆ ಶಿಕ್ಷಣದ ಅಗತ್ಯತೆ. ಶೈಕ್ಷಣಿಕ ಕ್ಷಮತೆಯಲ್ಲಿ ಆಕೆಯ ಹೆಜ್ಜೆಗಳು ದಿಟ್ಟ ದಾಪುಗಾಲು ಹಾಕಬೇಕಿದೆ. ಶೈಕ್ಷಣಿಕ ಅಗತ್ಯತೆತೆ ಅರಿವು ಇನ್ನೂ ಹಲವು ಹಳ್ಳಿಗಳಲ್ಲಿ ಮೂಡಿಲ್ಲ. ಅರ್ಧಕ್ಕೆ ಶಿಕ್ಷಣದಿಂದ ವಂಚಿತರಾಗುವ ಅದೆಷ್ಟೋ ಹುಡುಗಿಯರಿದ್ದಾರೆ. ಅದರಲ್ಲೂ ಹೆಣ್ಣುಮಕ್ಕಳನ್ನು ಅತಿ ಚಿಕ್ಕ ವಯಸ್ಸಿನಲ್ಲಿ ವಿವಾಹಮಾಡಿಕೊಡುವ ಸಂಪ್ರದಾಯಗಳು ನಿಂತಿಲ್ಲ. ಹೆಣ್ಣು ಕಲಿತು ಉದ್ಧಾರ ಮಾಡುವುದು ಅಷ್ಟೇ ಇದೆ. ಮುಸರೆ ತೊಳೆಯುವುದೇನೂ ತಪ್ಪೋಲ್ಲ ಅನ್ನೋ ಮನಸ್ಥಿತಿ ಇಂದಿಗೂ ಜೀವಂತ. ಹಿಂದೆಲ್ಲಾ … Read more

ಧೈರ್ಯವೇ ಹಿಮಾಲಯ, ಗೆಲ್ಲು ನೀ ಅಧೈರ್ಯವಾ. . . . : ಸುನಂದಾ ಎಸ್ ಭರಮನಾಯ್ಕರ

ಧೈರ್ಯ ಎಂದರೆ ಛಾತಿ, ಕೆಚ್ಚು, ಎದೆಗಾರಿಕೆ. ಧೈರ್ಯವು ಭಯ, ನೋವು ಅಪಾಯ ಅನಿಶ್ಚಿತತೆ ಅಥವಾ ಬೆದರಿಕೆಯನ್ನು ಎದುರಿಸುವ ಸಾಮಥ್ರ್ಯ ಮತ್ತು ಇಚ್ಛೆಯಾಗಿದೆ. ಮನುಷ್ಯ ಯಾವುದೇ ಸಾಧನೆ ಮಾಡಬೇಕಾದರೂ ಆತನಲ್ಲಿ ಮೊದಲು ಇರಬೇಕಾದದ್ದು ಧೈರ್ಯ. “ಧೈರ್ಯಂ ಸರ್ವತ್ರ ಸಾಧನಂ”. ಮನುಷ್ಯನಲ್ಲಿ ಸಿಗುವ ಅತಿ ವಿರಳ ಹಾಗೂ ಅತಿ ಅಮೂಲ್ಯವಾದ ವಸ್ತುವೆಂದರೆ ಧೈರ್ಯವೇ ಆಗಿದೆ. ಅದನ್ನು ಪೇಟೆಯಲ್ಲಿ ಖರೀದಿ ಮಾಡಲಾಗುವುದಿಲ್ಲ. ಅದು ಮಾರಾಟದ ವಸ್ತುವಾಗಿದ್ದರೆ ಪುಕ್ಕಲರೂ, ಶ್ರೀಮಂತರಾದಿಯಾಗಿ ಎಲ್ಲರೂ ಅದನ್ನು ಕೊಂಡು ಕೊಂಡು ತಮ್ಮ ಬಳಿ ಇರಿಸಿಕೊಳ್ಳುತ್ತಿದ್ದರು. ಬದುಕು ಗೆಲ್ಲಲು … Read more

ಪದ್ದಕ್ಕಜ್ಜಿಯ ಅಂತಾಕ್ಷರಿ: ವೃಂದಾ. ಸಂಗಮ

ನಮ್ಮ ಪದ್ದಕ್ಕಜ್ಜಿ ನಿಮಗೆಲ್ಲಾ ಗೊತ್ತೇ ಇದೆಯಲ್ವಾ ? ಗೊತ್ತಿದ್ದೇ ಇರತ್ತೆ. ಅವರು ಇಡೀ ಊರಲ್ಲೇ ವರ್ಲ್ಡ ಫೇಮಸ್ಸು. ಅವರು ಇವತ್ತು ತಿಂಡಿಗೆ ಒತ್ತು ಶಾವಿಗೆ ಮಾಡಿದ್ದರು. ಅಲ್ಲರೀ, ಅದೇನೋ ಅಂತಾಕ್ಷರಿ ಅಂದು ಬಿಟ್ಟು, ಇದೇನು ತಿಂಡಿ ಬಗ್ಗೆ ಹೇಳ್ತಿದೀರಲ್ಲ, ಅಂತಿದೀರಾ ? ಪೂರ್ತಿ ಕೇಳಿಸಕೊಳ್ಳಿ. ಅಲ್ಲೇ ಇರೋದು ಮಜಾ, ಒತ್ತು ಶಾವಿಗೆಯ ಖಾರದ ತಿಂಡಿ ಹಾಗೂ ಅದಕ್ಕೆ ಸಿಹಿಯಾಗಿ ಗಸಗಸೆ ಪಾಯ್ಸ. ನಮ್ಮ ರಾಯರು, ಅದೇ ನಮ್ಮ ಪದ್ದಕ್ಕಜ್ಜಿ ಗಂಡ, ನಿಮಗೆ ಗೊತ್ತೇ ಇದೆಯಲ್ಲ, ನಾನು ಬೇರೆ … Read more

ಇದರರ್ಥವೇನು?: ಸಹನಾ ಪ್ರಸಾದ್

ನಾನು ರಜಿತಾ. ರಂಜಿತಾ ಹೆಸರು ಬರೆಯುವಾಗ ಈ ರೀತಿ ತಿರುಚಲ್ಪಟ್ಟು, ಈ ಹೆಸರು ಖಾಯಂ ಆಯಿತು. ವಯಸ್ಸು ೫೫. ಗಂಡ ಸದಾಶಿವ, ದೊಡ್ಡ ಕಂಪನಿಯಲ್ಲಿ ಕೈ ತುಂಬಾ ಕೆಲಸ ಹಾಗು ಕೈ ತುಂಬಾ ದುಡ್ಡೂ ಸಹ. ಮೊದಲಿಂದಲೂ ಮಿತಭಾಷಿ. ಈಗ ವಯಸ್ಸಾದಂತೆ ಮಹಾ ಮೌನಿ. ಬೆಳಗ್ಗೆ ಎದ್ದು ತನ್ನ ಪ್ರಾತಃವಿಧಿಗಳನ್ನು ತೀರಿಸಿ, ೨೦ ನಿಮಿಷ ವ್ಯಾಯಾಮ ಮಾಡಿ , ತಿಂಡಿ ತಿನ್ನುತ್ತಾ ಪೇಪರ್ ಓದಿ ಹೊರಡುವರು. ಹೊಸ ಮಾದರಿಯ ಕಾರು, ಅದಕ್ಕೊಬ್ಬ ಡ್ರೈವರ್ ಇದಾನೆ. ಗಂಡನ ದಿನಚರಿಯಲ್ಲಿ … Read more

ಬದುಕಿದು ಸುಂದರ. . .: ಧೀರೇಂದ್ರ ನಾಗರಹಳ್ಳಿ.

‘ಅವನು’  ವಿಪರೀತವಾದ ಗೊಂದಲದಲ್ಲಿ ಮುಳುಗಿದ್ದ. ತನ್ನ ಸ್ನೇಹಿತನಾದ ‘ಇವನಿ’ಗೆ ಯಾವುದೋ ಒಂದು ಮಾಹಿತಿ ಕೊಡಲು ವಿನಂತಿಸಿದ್ದ. ಅದಕ್ಕೆ ಪ್ರತ್ಯತ್ತರವಾಗಿ ಇವನು,  ಅವನು ಕೇಳಿದ್ದ ಮಾಹಿತಿಯನ್ನೇನೋ  ಒದಗಿಸಿದ್ದ. ಅದನ್ನು ಯಥಾವತ್ತಾಗಿ ಸ್ವೀಕರಸೊವುದೋ ಅಥವಾ ತುಸುವಷ್ಟೇ ತೆಗೆದು ಕೊಂಡು ಉಳಿದದ್ದನ್ನು ಬಿಟ್ಟುಬಿಡಬೇಕೋ?. ಅವನು ಆ ಮಾಹಿತಿಯನ್ನು ಈ ತರಹದ  ಗುಮಾನಿಯಿಂದ ನೋಡುವುದಕ್ಕೆ ಕಾರಣ, ಆ ಮಾಹಿತಿಯಲ್ಲಿ ಇವನು ಕುಳಿತಿದ್ದ. ಇವನು ಕುಳಿತಿದ್ದ ಆ ಮಾಹಿತಿಯಲ್ಲಿ ಅವನಾಗಿರುವ ಇವನಿರಲಿಲ್ಲ. ಹೀಗಾಗಿ ಈ ಮಾಹಿತಿಯನ್ನು ಸ್ವೀಕರಿಸುವುದೋ ಅಥವಾ ಬೇಡವೂ ಎನ್ನುವ ಗೊಂದಲದಲ್ಲಿದ್ದ. ಆದರೆ … Read more

ಹೊಸ ಚೈತನ್ಯ ನೀಡುವ ಹಬ್ಬ ಯುಗಾದಿ: ಡಾ. ಶಿವಕುಮಾರ ಎಸ್‌. ಮಾದಗುಂಡಿ

ಪ್ರಾಚೀನ ರೋಮನ್ ಕವಿ ಓವಿಡ್ ಒಮ್ಮೆ ಜ್ಯೋತಿಷಿ ಜಾನುಸ್ನನ್ನು ಕೇಳಿದ: ‘ಹೊಸ ವಷ೯ ಜನವರಿಯಿಂದಲೇ ಏಕೆ ಆರಂಭವಾಗಬೇಕು’? ಎಂದು. ಅದಕ್ಕೆ ಜ್ಯೋತಿಷಿ ಹೇಳಿದರೂ ಜನವರಿ ತಿಂಗಳಿನಲ್ಲಿ ಸೂರ್ಯ ಮಕರ ರಾಶಿ ಪ್ರವೇಶಿಸುತ್ತಾನೆ. ಅಂದಿನವರೆಗೆ ಹಿಮದಿಂದ ಮಂಕಾಗಿದ್ದ ಜಗತ್ತು ಅಂದಿನಿಂದ ಸ್ವಚ್ಛವಾಗಿ ಜನತೆಯಲ್ಲಿ ಹೊಸ ಉತ್ಸಾಹ, ನವೋದಯ ಆರಂಭವಾಗುವುದರಿಂದ ಅಂದಿನಿಂದ ಹೊಸವರ್ಷದ ಆರಂಭ ಎಂದು ಹೇಳಿದರು. ಆದರೆ, ಸಾಮಾನ್ಯವಾಗಿ ಹೊಸ ವರ್ಷ ಎಂದರೆ ಜಗತ್ತಿನಲ್ಲಿ ಜನವರಿ ಒಂದು ಎಂದು ನಾವೆಲ್ಲರೂ ಭಾವಿಸುತ್ತೇವೆ. ಆದರೆ, ಆ ದಿನ ಮನೆಯ ಗೋಡೆಯ … Read more

ಮನದಲಿ ಮೂಡಿದ ಸಂಭ್ರಮದ ಯುಗಾದಿ: ಪಿ. ಕೆ. ಜೈನ್ ಚಪ್ಪರಿಕೆ.

ಭೂಮಿಯು ಸೂರ್ಯನ ಸುತ್ತ ಸುತ್ತುವಾಗ ಹವಮಾನದಲ್ಲಿ ಹಾಗೂ ನಿಸರ್ಗದಲ್ಲಿ ಉಂಟಾಗುವ ಬದಲಾವಣೆಗಳಿಗೆ ಋತುಗಳು ಎನ್ನುತ್ತೇವೆ. ಭಾರತೀಯರ ಪದ್ಧತಿಯಲ್ಲಿ 6 ಋತುಗಳಿದ್ದು ವಸಂತ ಋತುವು ಹಿಂದೂ ವರ್ಷದ ಆರಂಭದ ಋತುವಾಗಿದೆ. ಒಂದೊಂದು ಋತುವಿಗೂ ಎರಡು ಮಾಸಗಳಿದ್ದು ಚೈತ್ರ ಮತ್ತು ವೈಶಾಖ ಮಾಸಗಳು ವಸಂತ ಋತುವಿನಡಿಯಲ್ಲಿ ಬರುತ್ತವೆ. ಹೀಗೆ ಚೈತ್ರ ಮಾಸ ಶುಕ್ಲ ಪಕ್ಷದಲ್ಲಿ ಬರುವ ಯುಗಾದಿಯನ್ನು ಹೊಸ ವರ್ಷವೆಂದು ಆಚರಿಸುತ್ತೇವೆ. ಯುಗಾದಿಯು ದಕ್ಷಿಣ ಬಾರತದ ಜನರಿಗೆ ವರ್ಷದ ಮೊದಲ ಹಬ್ಬವಾಗಿ ಉತ್ತರ ಭಾರತದವರಿಗೆ ಇದು ಹೋಳಿಯ ನಂತರ ಬರುವ … Read more

ಹರಕೆ ಸಂದಾಯ: ಕೃಷ್ಣವೇಣಿ ಕಿದೂರು

ನಮ್ಮ ತುಳು ಭಾಷೆಯಲ್ಲಿ ಒಂದು ಮಾತಿದೆ. ಯಾರಿಗಾದರೂ ಒಂದು ಕೆಲಸ ಒಪ್ಪಿಸಿದಾಗ ಅಸಡ್ಡೆಯಿಂದ ಅಥವಾ ಉಡಾಫೆಯಿಂದ ಅರೆಬರೆ ಮಾಡಿದ್ದು ಕಂಡಾಗ ’ ಉಂದ್ ಎಂಚಿನ? ಪರಕೆ ಸಂದಾಯನಾ” (ಏನಿದು ? ಹರಕೆ ಸಂದಾಯವಾ ಅಂತ ಕೇಳುವುದು. ಕನ್ನಡದಲ್ಲಿಯೂ ಅದೇ ಅರ್ಥದ ಮಾತು ಉಂಟು. ಮಾಡುವ ಕಾರ್ಯವನ್ನು ಔದಾಸಿನ್ಯದಿಂದ ಅರ್ಧಮರ್ಧ ಮಾಡಿದಾಗ ಅದಕ್ಕೆ ಹೆಸರೇ’’ ಹರಕೆ ಸಂದಾಯವಾ” ಅಂತ ಸಣ್ಣಕ್ಕೆ ಗದರಿಸುವುದು. ಒಪ್ಪಿಸಿದ ಕೆಲಸ ಒಪ್ಪವಾಗಿ ಮಾಡಿದಾಗ ಅಂಥ ಮಾತಿಗಲ್ಲಿ ಎಡೆಯಿಲ್ಲ. ಬದಲಿಗೆ ಮೆಚ್ಚುಗೆ, ಪ್ರಶಂಸೆ , ಅಭಿಮಾನ … Read more

ಪ್ರಸವ ಕಾಲ….: ಆಶಾಜಗದೀಶ್

  ಮನೆ ಮುಂದಿನ ಮಲ್ಲಿಗೆ ತನ್ನ ಎಂದಿನ ತನ್ಮಯತೆಯಲ್ಲಿ ತಾರಸಿಯ ಮೇಲೆ ಧ್ಯಾನಸ್ಥವಾಗಿತ್ತು. ಮಿಸುಗಾಡುವ ಒಡಲು ಅದಕ್ಕೊಂದು ಗರ್ಭಿಣಿಯ ಕಳೆ ತಂದಿತ್ತಿತ್ತು. ಅದೂ ತೀರಾ ಇತ್ತೀಚಿನಿಂದ ಹೀಗೆ….. ಅದು ನವೆಂಬರ್ ಡಿಸೆಂಬರಿನ ಸಂದರ್ಭ… ಗುಬ್ಬಿಯೊಂದು ತನ್ನ ಸಂಗಾತಿಯೊಂದಿಗೆ ಬಾಣಂತನಕ್ಕಾಗಿ ಬಂದಿತ್ತು… ಹೀಗೆ ಹಕ್ಕಿಗಳು ಮೇಲಿಂದ ಮೇಲೆ ನಮ್ಮ ತೋಟವಲ್ಲದ ಪುಟ್ಟ ತೋಟಕ್ಕೆ ಬರುವುದು ಮಾಮೂಲೇ ಇತ್ತಾದರೂ ಪ್ರತಿ ಬಾರಿಯೂ ಹೋಸದೆಂಬಂತಹ ಉತ್ಸಾಹ ಮಾತ್ರ ನಮ್ಮನ್ನು ಅದೇಕೆ ತುಂಬುತ್ತಿತ್ತೋ ಗೊತ್ತಿಲ್ಲ… ಬಹುಶಃ ಹುಟ್ಟು ಎನ್ನುವುದು ಸಕಲ ಜೀವರಾಶಿಯೊಳಗೆ ಪ್ರವೇಶಿಸುವಾಗ … Read more

ಆಸೆಯೆಂಬ ಬಿಸಿಲು ಕುದುರೆ ಏಕೆ ಏರುವೆ…?: ರಮೇಶ್ ವಿ

ಆಸೆ ಯಾರಿಗಿರಲ್ಲ  ಹೇಳಿ! ಪ್ರತಿಯೊಬ್ಬ ಮನುಷ್ಯನಿಗೂ ಅವನೆದೆಯಾದಂತ ಆಸೆ ಆಕಾಂಕ್ಷೆ ಇರುತ್ತೆ, ಅವನ ಆಸೆಯೇ ನಾಳೆಗೆ ಪ್ರೇರಣೆ, ಭರವಸೆ ಹಾಗು ಮುನ್ನುಡಿ. ಆದ್ರೆ ಅದು ದುಃಖದ ಮೂಲವು ಹೌದು. ನನಗು ನನ್ನ ತಂದೆ ಉಳಿಸಿಕೋ ಬೇಕೆಂಬ ಮಹದಾಸೆ ಇತ್ತು ಆದ್ರೆ ಕಡೆಯಲ್ಲಿ ನಮ್ಮಾಸೆ ಜೊತೆ ಅಪ್ಪನಿಗೂ ಎಳ್ಳು ನೀರು ಬಿತ್ತಂತಾಯಿತು! ನನ್ನ ಅನುಭವದ ಮಾತು…! ಮಾರ್ಚ್ ೨೦೧೭ ಅಪ್ಪನಿಗೆ ೬೦ ವಸಂತ ತುಂಬಿದಾಗ ಷಷ್ಠಿಪೂರ್ತಿ ಪೂಜೆ ಮಾಡಲಾಗಲಿಲ್ಲ, ಈಗ ೭೦ ನೇ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಷಷ್ಠಿಪೂರ್ತಿ … Read more

ಯಶೋದೆ: ಪ್ರೇಮಾ ಟಿ ಎಂ ಆರ್

ಲೇಡೀಸ್ ಕ್ಲಬ್ ನಲ್ಲಿ ನವರಾತ್ರಿ ಉತ್ಸವ. ಕೈಯ್ಯಲ್ಲಿ ಪೂಜಾ ಸಾಮಗ್ರಿ ಹಿಡಿದು ಹಿಡಿದು ಗಡಿಬಿಡಿಯಲ್ಲೇ ಹೊರಟಿದ್ದಳು ಕವನ. ಹಿಂದಿಂದ ಬಂದ ಬೈಕೊಂದು ಅವಳನ್ನು ದಾಟಿಕೊಂಡು ನಾಲ್ಕು ಮಾರು ಮುಂದೆ ನಿಂತಿತು. ಬೈಕ್ ಸವಾರ ಹೆಲ್ ಮೆಟ್ ತೆಗೆದು ಸಣ್ಣಗೆ ನಕ್ಕರು. ಈ ವ್ಯಕ್ತಿಯನ್ಬ ಎಲ್ಲೋ ನೋಡಿದ ನೆನಪು ಎಲ್ಲಿ ? ತಲೆಕೆರೆದುಕೊಂಡಳು ಕವನ. ಓ ಹೌದಲ್ವಾ ತಾನು ಗೇಟಿಗೆ ಬೀಗ ಸಿಕ್ಕಿಸುವಾಗ ಎದುರುಗಡೆ ಮನೆಯ ಅಂಗಳದಲ್ಲಿ ನಿಂತಿದ್ದರು ಆ ವ್ಯಕ್ತಿ . ಕಳೆದ ವಾರವಷ್ಟೇ ಆ ಮನೆಯ … Read more

ಹೊಸ್ತಿನ ಮನೆ ಸ್ಮಶಾನವಾದಾಗ: ಪ್ರವೀಣ್ ಶೆಟ್ಟಿ

ಅಂದೇಕೋ ಅವನು ತುಂಬಾ ಖುಷಿಯಾಗಿದ್ದ! ತಂಗಿ ಬೆಂಗಳೂರಿನಿಂದ ಬಂದ ಖುಷಿ, ಅದರ ಜೊತೆ ನಾಳೆ ಅಂದರೆ ಹೊಸ್ತು ಬೇರೆ. ಮನೆಯಲ್ಲಿ ಎಂದೋ ಕಳೆದುಹೊಗಿದ್ದ ಸಂಭ್ರಮ ಬೇರೆ. ಎಲ್ಲ ಅಣ್ಣ-ಅಕ್ಕ-ತಂಗಿ ಒಟ್ಟಾಗಿ ವರುಷಗಳೇ ಕಳೆದಿತ್ತು. ಎಲ್ಲಾ ಸೇರಿ ಹೊಸ್ತು ಮಾಡುವ ಸಂಭ್ರಮ ಮನೆಮಾಡಿತ್ತು. ಅವನು ಸೀತಾರಾಮ ಮೂವರು ಒಡಹುಟ್ಟಿದ ತಂಗಿಯರೊಂದಿಗೆ ಒಬ್ಬನೇ ಮಗ. ಟಿಸಿಎಚ್ ಮಾಡಿ ಸರಕಾರಿ ಕೆಲಸಕ್ಕಾಗಿ ಅರ್ಜಿ ಗುಜರಾಯಿಸಿ ಕಾಯುತ್ತಿದ್ದ. ಹಾಗೆ ತಂದೆಯ ವ್ಯವಹಾರಲ್ಲಿ ಕೈ ಜೊಡಿಸಿದ್ದ. ಅದೇ ಸಮಯಕ್ಕೆ ಸರಿಯಾಗಿ ಗ್ರಾಮೀಣ ಕೃಪಾಂಕದ ಅಡಿಯಲ್ಲಿ … Read more

ಆಧುನಿಕ ವಿಜ್ಞಾನಕ್ಕೆ ಸವಾಲಾದ ಪುರಾತನ ಸಲಕರಣೆಗಳು: ಆರ್.ಬಿ.ಗುರುಬಸವರಾಜ ಹೊಳಗುಂದಿ

21ನೇ ಶತಮಾನದಲ್ಲಿ ನಮ್ಮ ಪೂರ್ವಜರ ಹೆಚ್ಚಿನ ಸಹಾಯವಿಲ್ಲದೇ ನಾವು ಮಹತ್ತರವಾದ ಮತ್ತು ಪ್ರಬಲವಾದ ತಾಂತ್ರಿಕ ಸಾಮ್ರಾಜ್ಯವನ್ನು ಸಾಧಿಸಿದ್ದೇವೆಂದು ಭಾವಿಸುತ್ತೇವೆ. ಆದರೆ ಭಾವಿಸಿದಂತೆ ಇದು ಸತ್ಯವಲ್ಲ. ಇತ್ತೀಚಿನ ಸಂಶೋಧನೆ ಎಂದು ಹೇಳುವ ಬಹುತೇಕ ವಸ್ತುಗಳನ್ನು ನಮ್ಮ ಪೂರ್ವಜರು ಆಗಲೇ ಬಳಸಿದ್ದರು ಮತ್ತು ನಾವು ಈಗ ಯೋಚಿಸುವುದಕ್ಕಿಂತ ಮುಂಚಿತವಾಗಿ ಅವರು ವೈಜ್ಞಾನಿಕವಾಗಿ ಮುಂದುವರೆದಿದ್ದರು ಎನ್ನುವುದಕ್ಕೆ ಕೆಲವೊಂದು ನಿದರ್ಶನಗಳು ದೊರೆಯುತ್ತವೆ. ಅಂತಹ ಕೆಲ ಸಲಕರಣೆಗಳೇ ನಮ್ಮ ಇಂದಿನ ಆಧುನಿಕ ತಂತ್ರಜ್ಞಾನಕ್ಕೆ ಹಾಗೂ ವಿವಿಧ ಸಂಶೋಧನೆಗಳಿಗೆ ಪ್ರೇರಣೆಯಾಗಿವೆ. ಹಾಗಾದರೆ ಆ ವಸ್ತುಗಳು ಯಾವುವು? … Read more

ಚಿಗುರಿನ ಮುನ್ನ: ಮಂಜು ಹೆಗಡೆ

“ನಂಗೆ ನಿನ್ನಿಂದ ಒಂದು ಮಗು ಬೇಕು, ಪ್ಲೀಸ್ ಇಲ್ಲ ಅನ್ನಬೇಡ. ನಾನು ಜೀವನದಲ್ಲಿ ಒಂಟಿ ಆಗ್ಬಿಡ್ತೀನಿ. ನೆಮ್ಮದಿ, ನನ್ನ ಜೀವನಕ್ಕೆ ಭರವಸೆಗಾದ್ರು ಬೇಕು. ಇದು ಕೋನೆಯ ಆಸೆ, ಇಲ್ಲ ಅನ್ನಬೇಡಿ. ” ಅಂತ ಗಾಯತ್ರಿ ಗೋಗರಿತಾ ಇದ್ದಾಗ ರಾಘವ ಮೌನವಾಗಿದ್ದ. ‘ಇಲ್ಲ ಕಣೆ ಏನ್ ಹೇಳಬೇಕು ತಿಳಿತಿಲ್ಲ, ನಿನ್ನ ಮಾತು ಒಮ್ಮೆಲೆ ಬಾಂಬ್ ಬಿದ್ದಾಗೆ ಆಗಿದೆ. ‘ ಏಕಾಂತದಲ್ಲೂ ವೈರುಧ್ಯದ ಭಾವ. ‘ಹಾಗಲ್ಲ ರಾಘವ 7ವರ್ಷ ಆಯ್ತು ನಂದು ನಿಂದು ಪರಿಚಯ, ಮದುವೆ ಆದಾಗಿಂದ ನಾನು ಪಟ್ಟ … Read more

ಮೋಹಕ ತಿರುವು: ಕಮಲ ಬೆಲಗೂರ್.

ಪಾರ್ವತಿ ಒಲೆಯ ಮುಂದೆ  ಕುಳಿತು ರೊಟ್ಟಿ ಮಾಡ್ತಿದ್ದಾಳೆ. ಯಾಂತ್ರಿಕವಾಗಿ ಕೈ ಕೆಲಸಮಾಡುತ್ತಿದ್ದರೂ ಮನಸ್ಸು ಗಾಢವಾದ ಯೋಚನೆಯಲ್ಲಿ ಸಿಲುಕಿದೆ. ಕಣ್ಣು ಗಳು ಉರಿಯನ್ನೇ ದಿಟ್ಟಿಸಿ ನೋಡುತ್ತಿವೆ. ಮನಸ್ಸು ಮಗನ ಬಗ್ಗೆ ಯೋಚಿಸುತ್ತಾ ಕೊರಗುತ್ತಿದೆ. ಮಗನ ಸಂಸಾರವನ್ನು ನೋಡುತ್ತಾ ಕಣ್ತುಂಬಿಸಿಕೊಳ್ಳಬೇಕೆಂಬ ಆಸೆ ಆಸೆಯಾಗಿಯೇ ಉಳಿದುಬಿಟ್ಟಿದೆ. ಪಾರ್ವತಿ ವಿಧವೆ. ಮಗ ಸೋಮು ಪ್ರತಿಭಾವಂತ. ಚಿಕ್ಕಂದಿನಲ್ಲಿಯೇ ಅಪ್ಪನನ್ನು ಕಳೆದುಕೊಂಡು ಬೆಳೆದ ಅವನಿಗೆ ಅಮ್ಮನೇ ಸರ್ವಸ್ವ. ಅಪ್ಪನ ಕೊನೆಯ ಆಸೆಯಂತೆ ಅವರ ಸ್ನೇಹಿತರ ಮಗಳೊಂದಿಗೆ ಅವನ ಬಾಲ್ಯ ವಿವಾಹವಾಗಿರುತ್ತದೆ. ತಂದೆಯ ಮರಣಾನಂತರ ಎರಡೂ ಕುಟುಂಬಗಳು … Read more

ಪಂಜು ಕಾವ್ಯಧಾರೆ

ಕಂಗೊಳಿಸೋ ಕಣ್ಣಲಿ ಮೂಡಿಸುದೆ ಮುಗುಳ್ನಗೆಯನ್ನ ಬಂಧಿಯಾಗಲು ಕಾಯುತಿರುವೆ ಚಿನ್ನ ನನ್ನ ಚಿನ್ನ   ಕಣ್ಣಂಚಿನ ನೋಟದಲಿ ಸೆರೆ ಹಿಡಿರುವೆ ನನ್ನ ಮನ ಮೋಹಿಸುವ ನಿನ್ನ ಪಿಸು ಮಾತುಗಳೆ  ಚೆನ್ನ ನೀ ತಿರುಗೆ ನೋಡುವ ಆ ನೋಟ ಬಹು ರೋಮಾಂಚನ ಕಂಗೊಳಿಸೋ ಕಣ್ಣಲಿ ಮೂಡಿಸುದೆ ಮುಗುಳ್ನಗೆಯನ್ನ ಸದಾ ನಿನ್ನ ನೋಡುವ ಆಸೆ ಮುಚ್ಚದೆ ಕಣ್ಣ ರೆಪ್ಪೆಯನ್ನ ಸವಿಯಲು ಕಾತುರ ನಿನ್ನ ತುಟಿ ಅಂಚಿನ ಸಿಹಿ ಜೇನನ್ನ ಸೆರೆ ಹಿಡಿದು ಬಂಧಿಸು ನಿನ್ನ ಮನಸಲಿ ನನ್ನ ಬಂಧಿಯಾಗಲು ಕಾಯುತಿರುವೆ ಚಿನ್ನ … Read more

ಹನ್ನೊಂದು ದಿನಗಳ ವನವಾಸ (ಭಾಗ ೧): ಪ್ರಸಾದ್ ಕೆ.

ಅವಳು ಮೆಲ್ಲನೆ ತನ್ನ ಕಣ್ಣುಗಳನ್ನು ತೆರೆಯಲು ಪ್ರಯತ್ನಿಸಿದಳು. ಕಣ್ಣೆಲ್ಲಾ ಮಂಜು. ಎದ್ದೇಳಲು ಎಷ್ಟು ಪ್ರಯತ್ನಿಸಿದರೂ ಶಕ್ತಿಯೇ ಸಾಲುತ್ತಿಲ್ಲ. ಒದ್ದೆ ನೆಲವು ತನ್ನ ದೇಹದ ಶಕ್ತಿಯನ್ನೆಲ್ಲಾ ಹೀರಿ ಕಚ್ಚಿ ಹಿಡಿದಿರುವಂತೆ.  ಹೀಗೆ ಅದೆಷ್ಟು ಬಾರಿ ಪ್ರಯತ್ನಿಸಿದಳೋ ಏನೋ ಆ ಹುಡುಗಿ. ಕೊನೆಗೂ ಹಲವು ಘಂಟೆಗಳ ನಂತರ ಪ್ರಜ್ಞೆಯು ಮರಳಿ ಬಂದಾಗ ತಾನು ದಪ್ಪನೆಯ ಕುಚರ್ಿಯಂತಿರುವ ಆಕೃತಿಯ ಕೆಳಗೆ ಮುದುಡಿ ಮಲಗಿರುವುದು ಅವಳಿಗೆ ಗೊತ್ತಾಗಿದೆ. ಮಲಗಿದ ಭಂಗಿಯಲ್ಲೇ ಪ್ರಯಾಸದಿಂದ ಕಣ್ಣನ್ನಾಡಿಸಿದರೆ ಸುತ್ತಲೂ ಕಾಡೇ ಕಾಡು. ಪ್ರಯಾಸದಿಂದ ತಲೆಯೆತ್ತಿ ನೋಡಿದರೆ ತಲೆಯ … Read more