ಕಾವ್ಯಧಾರೆ
ನೀ ಮೌನ ಮುರಿಯಬೇಕು ನೀನು ಮತ್ತೆ ಎಂದಿನಂತೆ ಮಾತಾಡಬಹುದೆಂಬ ನಂಬಿಕೆ ಅರೆ ಘಳಿಗೆ ಸುಮ್ಮನಿರದ ಕನಸುಗಳು ಹುಟ್ಟುವುದನು ತಡೆಯುವವರು ಯಾರು..!? ನನಸಾಗುವ ಹೂ ಅರಳಲು ರವಿ ಹೊಸತಾಗಿಯೆ ಹುಟ್ಟಬೇಕು ನೀ ಮಾತಿಗೆ ಅಮೃತವನುಣಿಸುವ ಮನಸು ಮಾಡಬೇಕು ಒಲವಲಿ ಮೌನ ಮಾತಾಗಿ ಮುತ್ತಾಗುವುದು ಸಾಮಾನ್ಯ ತಾನೇ..? -ಅಕ್ಷತಾ ಕೃಷ್ಣಮೂರ್ತಿ ಗಜಲ್ ನೀರಡಿಸಿದಾಗ ಬಾಂವಿ ತೋಡಿದಂಗಾತು ಸಾಯುಹೊತ್ತಾಗ ನಿನ್ನ ನೋಡಿದಂಗಾತು ಹ್ಯಾಂಗೈತಿ ನಮ್ಮ ಜೋಡಿ ಗೊತ್ತೇನ ಸಾಕಿ? ಚೂಡಾದ ಜೊತಿ ಚಹಾ ಕೂಡಿದಂಗಾತು.! ಮಾಡಿಲ್ಲದ … Read more