ಸಹೃದಯಿಗಳೇ, ನಿಮಗೆ ತಿಳಿದಂತೆ ಕಳೆದ ಒಂಬತ್ತು ವರ್ಷಗಳಿಂದ ಪಂಜು ಪತ್ರಿಕೆ ಕನ್ನಡದ ಸೇವೆಯಲ್ಲಿ ನಿರತವಾಗಿದೆ. ಪ್ರತಿ ವರ್ಷದ ಹೋಸ್ಟಿಂಗ್ ವೆಚ್ಚ, ವೆಬ್ ಡೊಮೈನ್ ನವೀಕರಣ ವೆಚ್ಚ ಮತ್ತು ಇತರ ವೆಚ್ಚಗಳು ಹೆಚ್ಚತ್ತಲೇ ಹೋಗುತ್ತಿವೆ. ಈ ಎಲ್ಲಾ ವೆಚ್ಚಗಳನ್ನು ಪಂಜು ಇಷ್ಟು ವರ್ಷ ನಿಭಾಯಿಸುತ್ತಲೇ ಬಂದಿದೆ. ಹೆಚ್ಚುತ್ತಿರುವ ತಂತ್ರಜ್ಞಾನಗಳ ಜೊತೆಗೆ ಅವುಗಳಿಗೆ ಹಣ ನೀಡಬೇಕಾದ ಅವಶ್ಯಕತೆ ಕೂಡ ಇರುವುದರಿಂದ ನಿಮಗೆ ಪಂಜುವಿಗೆ ನೆರವಾಗುವ ಮನಸಿದ್ದರೆ ನಿಮಗೆ ಅನಿಸಿದ್ದಷ್ಟು ಹಣವನ್ನು ಪಂಜುವಿಗೆ ಡೊನೇಟ್ ಮಾಡಿ. ಧನ್ಯವಾದಗಳೊಂದಿಗೆ ಪಂಜು ಬಳಗ ಪಂಜುವಿಗೆ […]
ಹಿರಿಯ ಸಾಹಿತಿ ಹಾಗೂ ವಿಚಾರವಾದಿ ಡಾ. ಮೋಗಳ್ಳಿ ಗಣೇಶ ಅವರ ‘ಅಂಬೇಡ್ಕರ್ ಎಂಬ ಮಹಾನದಿ ಮತ್ತು ದಲಿತೀಕರಣಗೊಂಡ ಗಾಂಧೀಜಿ’ ಕೃತಿಯ ಬಿಡುಗಡೆ ಹಾಗೂ ರಾಜ್ಯಮಟ್ಟದ ಕವಿಗೋಷ್ಠಿ ಫೆ10 ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ನಾಗಶಾಂತಿ ಉನ್ನತಿ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆಯಲಿದೆ. ರಾಣೇಬೆನ್ನೂರಿನ ಕಾಗದ ಸಾಂಗತ್ಯ ವೇದಿಕೆ ಹಾಗೂ ಲಡಾಯಿ ಪ್ರಕಾಶನ ಜಂಟಿಯಾಗಿ ಕೃತಿಯ ಬಿಡುಗಡೆ ಹಾಗೂ ಕವಿಗೋಷ್ಠಿ ಸಮಾರಂಭವನ್ನು ಹಮ್ಮಿಕೊಂಡಿದೆ. ಖ್ಯಾತ ವಿಮರ್ಶಕರು ಹಾಗೂ ಬೆಂಗಳೂರು ವಿವಿಯ ಪ್ರಾಧ್ಯಾಪಕ ಜೀವನಪ್ರೇಮ, ಕೊಂಕು ಯಾವುದನ್ನೂ ಬಚ್ಚಿಡದಂತೆ […]
ಈ ವೀಕೆಂಡ್ನಲ್ಲಿ “ಅಲೈದೇವ್ರು” ನಾಟಕವನ್ನು ನೀವು ಮನೆಯಲ್ಲೆ ಕುಳಿತು ನೋಡಬಹುದು. ನೀವು ನೋಡಿ ಫೀಡಬ್ಯಾಕ್ ಕೊಟ್ರೆ ನಮ್ಮ ತಂಡಕ್ಕೆ ಖುಷಿ. ಲಾಕ್ಡೌನ್ ಇರದಿದ್ರೆ ಇಷ್ಟೊತ್ತಿಗೆ ನಮ್ಮ ಜನರಂಗದಿಂದ “ಅಲೈದೇವ್ರು” ನಾಟಕ ಹತ್ತಾರು ಪ್ರದರ್ಶನ ಕಾಣುತ್ತಿತ್ತೇನೋ. ಸಾಲಸೋಲ ಮಾಡಿ, ಕೆಲವರು ಹತ್ರ ಇಸ್ಕೊಂಡು, ಲಕ್ಷಾಂತರ ರೂಪಾಯಿ ಖರ್ಚು ಮಾಡಿ 35 ಜನ ಹೊಸಬರೊಂದಿಗೆ ನಾಟಕ ಕಟ್ಟಿದ್ದೆವು. ಆದರೆ, ಇನ್ನು ಮುಂದೆ ಪ್ರದರ್ಶನವಾಗುತ್ತೋ ಇಲ್ಲವೋ ಗೊತ್ತಿಲ್ಲ. ಆದ್ದರಿಂದ ಈ ನಾಟಕವು ಈಗ ಜೂನ್ 19ರಿಂದ ಶನಿವಾರ ಬೆಳಿಗ್ಗೆ 7 ಗಂಟೆಯಿಂದ […]