ಕಲೆ-ಸಂಸ್ಕೃತಿ

“ಅಲೈದೇವ್ರು” ನಾಟಕ ಪ್ರದರ್ಶನ

ಬೆಂಗಳೂರಿನ ವಿಶ್ವರಂಗ ತಂಡವು ಕೋರೊನಾ ನಂತರದಲ್ಲಿ “ಅಲೈದೇವ್ರು” ಎಂಬ ಮಹತ್ವದ ನಾಟಕವನ್ನು ಆಯ್ದುಕೊಂಡಿದ್ದು, ರವಿವಾರ ಸಂಜೆ ೪.೩೦ಕ್ಕೆ ಮತ್ತು ೭.೩೦ಕ್ಕೆ ಬಸವೇಶ್ವರ ಇಂಜಿನಿಯರ್ಸ್ ಅಕಾಡೆಮಿಯ ಕೆಇಎ ಪ್ರಭಾತ ರಂಗಮಂದಿರದಲ್ಲಿ ಎರಡು ಪ್ರದರ್ಶನ ನೀಡುತ್ತಿದೆ.

ಹನುಮಂತ ಹಾಲಿಗೇರಿಯವರ ರಚನೆಯ ಈ ನಾಟಕವನ್ನು ಸಿದ್ದರಾಮ ಕೊಪ್ಪರ ನಿರ್ದೇಶಿಸುತ್ತಿದ್ದಾರೆ. ಈ ನಾಟಕದಲ್ಲಿ ೩೫ಕ್ಕೂ ಹೆಚ್ಚು ಕಲಾವಿದರು ನಟಿಸುತ್ತಿರುವುದು ವಿಶೇಷ. ಉತ್ತರ ಕರ್ನಾಟಕ ಪ್ರತಿಯೊಂದು ಹಳ್ಳಿಯಲ್ಲೂ ನಡೆಯುವ ಜನಪದರ ಹಬ್ಬ ಅಲೈಹಬ್ಬದ ಕುರಿತತಾದ ಕಥಾ ಹಂದರವನ್ನು ಈ ನಾಟಕ ಹೊಂದಿದೆ. ಈ ಹಬ್ಬದಲ್ಲಿ ನಡೆಯುವ ಜನಪದ ಅಲೈ ಕುಣ್ತ ಮತ್ತು ಅಲೈಪದಗಳನ್ನು ಅಭ್ಯಾಸ ಮಾಡುವುದಕ್ಕಾಗಿಯೇ ಕಲಾವಿದರು ಎರಡು ತಿಂಗಳು ಸಮಯ ವ್ಯಯಿಸಿದ್ದಾರೆ.   


ಕನ್ನಡದ ಬರಹಗಳನ್ನು ಹಂಚಿ ಹರಡಿ

Leave a Reply

Your email address will not be published. Required fields are marked *