ಹೆಸರೇ ಸೂಚಿಸುವಂತೆ "ಕಂಕಣ" ಎನ್ನುವುದು ಕನ್ನಡಿಗರಿಂದ, ಕನ್ನಡಕ್ಕಾಗಿ ಜನ್ಮ ತಾಳಿರುವ ಒಂದು ಕನ್ನಡಪರ ಬಳಗ. ಖ್ಯಾತ ಚಲನಚಿತ್ರ ಸಾಹಿತಿ “ಕವಿರಾಜ್” ಈ ತಂಡದ ಸಾರಥಿಯಾಗಿದ್ದು ಸುಮಾರು 150 ಸ್ವಯಂ ಪ್ರೇರಿತ ಕನ್ನಡಿಗ ಸದ್ಯಸರು ಈ ಬಳಗದಲ್ಲಿದ್ದಾರೆ. ಇತ್ತೀಚೆಗೆ ಕರ್ನಾಟಕದಲ್ಲಿ, ಅದರಲ್ಲೂ ನಮ್ಮ ರಾಜಧಾನಿ ಬೆಂಗಳೂರಿನಲ್ಲಿ ದಿನನಿತ್ಯ ಜೀವನದಲ್ಲಿ ಕನ್ನಡ ಬಳಕೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಾ ಸಾಗಿದೆ. ಶಾಪಿಂಗ್ ಮಾಲ್ ಗಳು, ಅಂಗಡಿಗಳು, ಹೋಟೆಲ್ ಗಳು, ಬ್ಯಾಂಕ್ ಗಳು, ಬಸ್ ನಿಲ್ದಾಣಗಳು ಮುಂತಾದ ಸ್ಥಳಗಳಲ್ಲಿ ಕನ್ಮಡಿಗರೇ […]
ಗಾಂಧಿಯವರ ಅಸಹಕಾರ ಚಳುವಳಿಯ ಕರೆಗೆ ಓಗೊಟ್ಟ ಫಲವಾಗಿ ಹಲವರು ಸ್ಥಳೀಯ ಮಟ್ಟದಲ್ಲಿ ಕರನಿರಾಕರಣೆ, ಸರಕಾರಿ ಖಜಾನೆಗಳ ಲೂಟಿ, ಶ್ರೀಮಂತರ ಸ್ವತ್ತನ್ನು ದೋಚಿಕೊಂಡು ಬಡವರಿಗೆ ಹಂಚುವುದು ಮುಂತಾದವುಗಳನ್ನು ಮಾಡುತ್ತಾ ಆಗಿನ ಸರಕಾರಗಳಿಗೆ ಸವಾಲಾಗಿರುವ ಸಂಗತಿ ಇತಿಹಾಸದಲ್ಲಿ ದಾಖಲಾಗಿದೆ. ದೇಶದ ಸ್ವಾತಂತ್ರ್ಯ ಸಮರದ ಇತಿಹಾಸವನ್ನು ಅವಲೋಕಿಸಿದಾಗ, ಜನನಾಯಕರ ಜನಾಂದೋಲನಗಳು, ಕಾನೂನುಬದ್ಧ ಚಳುವಳಿಗಳು ಒಂದೆಡೆಯಾದರೆ ಜಾಗೃತ ಯುವಮನಸ್ಸುಗಳು, ಆದಿವಾಸಿಗಳ ರಕ್ತಸಿಕ್ತ ಹೋರಾಟದಲ್ಲಿ ಸ್ವ್ವಾತಂತ್ರ ಸಮರದ ಗಂಗೆಯ ಪ್ರವಾಹಕ್ಕೆ ಸಾವಿರ ತೊರೆಗಳು ಸೇರಿಕೊಂಡು ಬಿಸಿನೆತ್ತಿರಿನ ತರ್ಪಣದಿಂದ ತಾಯ್ನೆಲದ ಮುಕ್ತಿಗಾಗಿ ಅನ್ಯಾಯದ ವಿರುದ್ಧ ಸಿಡಿದೆದ್ದು […]
Excellent art.