ವಿಶಾಲವಾದ ತಿಳಿಗೊಳ
ಅದರೊಳಗೆ ಇಣುಕಿ ನೋಡಿದರೆ
ಕಾಣುವುದು ಮಿರಿಮಿರಿ ಮಿಂಚುವ ತಳ
ಪ್ರತಿಬಿಂಬ ಕಾಣಲು ಸಾಕು
ಈ ಕನ್ನಡಿ ಜಲ ..!
ಅಪಾಯವೇನೂ ಇಲ್ಲವಾದರೂ
ಇದರಲ್ಲಿ ಯಾರೂ
ಸ್ನಾನ ಮಾಡಬೇಡಿ ; ಈಸಬೇಡಿ….
ಅತ್ತಿತ್ತ ಚಲಿಸುತ್ತಾ
ಮನಕ್ಕೆ ಮುದ ನೀಡುವ
ಬಣ್ಣ ಬಣ್ಣದ ಮೀನುಗಳ
ಹಿಡಿದು ಕೊಲ್ಲಬೇಡಿ
ಕಸಕಡ್ಡಿ , ಕಲ್ಲೆಸೆಯಬೇಡಿ
ಕಾಲು , ಕೋಲು ಹಾಕಿ ಕಲಕಿ
ತಿಳಿ ನೀರ ಕೆಡಿಸುವುದು ತಪ್ಪು
ಕೊಳಕ ತೊಳೆಯಲು
ಇದು ಜಾಗವೇ ಅಲ್ಲ
ಶುದ್ದ ಜಲ…!
ಬಾಯಾರಿದ್ದರೆ ಕುಡಿದುಬಿಡಿ ಒಂದಿಷ್ಟು
ದಡದಲ್ಲಿ ಕುಳಿತು
ಸವಿದುಬಿಡಿ ಸೌಂದರ್ಯ
ಇದಕ್ಕಿಂತ ಸುಖ ಬೇರೇನಿದೆ..?
ಒಂದು ಕೊಳ ನಿರ್ಮಲವಾಗಿಡುವುದು
ಸುಲಭ ಎಂದುಕೊಂಡಿರಾ…?
ಕಣ್ಣಲ್ಲಿ ಕಣ್ಣಿಟ್ಟು
ಬಹಳ ಕಾಲದಿಂದ ಕಾಯುತ್ತಿದ್ದೇನೆ
ಧಾರಾಳ ಕಷ್ಟ-ನಷ್ಟ ಅನುಭವಿಸಿದ್ದೇನೆ
ಕೊನೇತನಕ ಹೀಗೇ ಇರಿಸಿಕೊಳ್ಳಬೇಕೆಂಬ
ಛಲ ನನಗೆ
ಅದಕ್ಕೇ ಹೇಳುತ್ತಿದ್ದೇನೆ
ಸಹಕರಿಸದೇ ಹೋದರೂ
ಕೊನೆಪಕ್ಷ ಕದಡುವ ಕೆಲಸಕ್ಕೆ ಮಾತ್ರ
ಕೈ ಹಾಕಬೇಡಿ…..
ಅಪ್ಪ ಅಂದರೆ…… ಏನೇ ಕೇಳಿದರೂ ಏನೇ ಹೇಳಿದರೂ ಕೋರ್ಟ್ ಲ್ಲಿ ದಾವೆ ಹೂಡಿದಂತೆ ಚೌಕಾಸಿ ಮೇಲೆ ಚೌಕಾಸಿ ಪರ ವಿರೋಧದ ತೀರ್ಪಿನ ಮೇಲೆ ನೂರಾರು ಕರಾರಿನ ಅಪ್ಪನ ಮೊಹರು….. ಹೆಜ್ಜೆ ಹೊಸ್ತಿಲ ಹೊರಗಿಟ್ಟರೂ ಒಳಗಿಟ್ಟರೂ ತೀವ್ರ ಹದ್ದಿನ ಕಣ್ಣು ಇಟ್ಟಂತೆ ಶೋಧ ಪ್ರತಿಶೋಧಗಳ ಕಾರ್ಯಾಚರಣೆ ತಪ್ಪೊಪ್ಪುಗಳ ಸರ್ಪಗಾವಲಿನಲ್ಲಿ ಖುಲಾಸೆಯೇ ಸಿಗದ ಅಪ್ಪನ ಕಾಯ್ದೆ …… ಎಲ್ಲೇ ಇದ್ದರೂ ಹೇಗೆ ಇದ್ದರೂ ಕುದುರೆಗೆ ಲಗಾಮು ಹಾಕಿಟ್ಟಂತೆ ಸಾಗುವ ಪಥದಿ ತಿರುವು ಏನೇ ಬಂದರು ಸ್ಥಿರ ಸಿದ್ದಾಂತಗಳ ಗಡಿ ಮೀರಲು […]
ಕಾವ್ಯಧಾರೆಯ ಪ್ರವಾಹದಲ್ಲಿ ನನಗಾಸರೆ ಸಿಗದೆ ಕೊಚ್ಚಿ ಹೋದೆನು ! ಮೂರು ಕವನಗಳು ಆತ್ಮೀಯ ಕಲ್ಪನೆಗಳಲ್ಲಿ ಚೆನ್ನಾಗಿ ಮೂಡಿಬಂದಿವೆ…ಎಲ್ಲಾ ಕವಿಮಿತ್ರರಿಗೆ ಶುಭಾಶಯಗಳು !
Olleya Kavanagalu…
Muvar kavitegalu channagive…………
ಸಹಕರಿಸದೇ ಹೋದರೂ
ಕೊನೆಪಕ್ಷ ಕದಡುವ ಕೆಲಸಕ್ಕೆ ಮಾತ್ರ
ಕೈ ಹಾಕಬೇಡಿ…..
ಸಾಲುಗಳು ಅದ್ಭುತ ಪ್ರಭಾವಶಾಲಿ ಸಾಲುಗಳು
prabhakar..
ಶಾರದಾ ಅವರೆ ತುಂಬಾ ಧನ್ಯವಾದಗಳು
ಹಸಿದವರ ಕನಸು ಕದ್ದವರು
* ನಾಗರಾಜ್ ಹರಪನಹಳ್ಳಿ . ಕಾರವಾರ
ಕವನ ಇಷ್ಟವಾಯ್ತು
ಎಲ್ಲಾ ಸಾಲುಗಳು ಮನಮಿಡಿಯುತ್ತವೆ
ತಲ್ಲೀನೆ
good sushma..