ಮೈಸೂರಿನ ಕಲಾಮಂದಿರದ ಕಿರುರಂಗಮಂದಿರದಲ್ಲಿ “ಪಾರ್ಶ್ವ ಸಂಗೀತ” ನಾಟಕ ಪ್ರದರ್ಶನ

ಇದೇ ಜೂನ್ ತಿಂಗಳ 23, 24, 29, 30 ಹಾಗೂ ಜುಲೈ 1 ರಂದು ಸಂಜೆ 7 ಗಂಟೆಗೆ ಕಲಾಮಂದಿರ ಆವರಣದಲ್ಲಿರುವ ನೂತನ ಕಿರುರಂಗಮಂದಿರದಲ್ಲಿ ರಂಗವಲ್ಲಿ ತಂಡದ ನೂತನ ರಂಗಪ್ರಯೋಗ, ಹೆಸರಾಂತ ಸಾಹಿತಿ ಶ್ರೀನಿವಾಸ ವೈದ್ಯ ಅವರ ಬರಹಗಳನ್ನಾಧರಿಸಿದ “ಪಾಶ್ರ್ವಸಂಗೀತ” ನಾಟಕದ ಪ್ರದರ್ಶನವಿದೆ. ರಂಗಾಯಣದ ಹಿರಿಯ ಕಲಾವಿದರಾದ ಪ್ರಶಾಂತ್ ಹಿರೇಮಠ ಈ ನಾಟಕದ ನಿರ್ದೇಶಕರು.

ನಾಟಕ ಕುರಿತು
ಪಾಶ್ರ್ವಸಂಗೀತ ನಾಟಕವು 1940ರ ದಶಕದಿಂದ 70ರ ದಶಕಗಳವರೆಗಿನ ಆದರೆ ಇಂದಿಗೂ ಜನಮಾನಸದಲ್ಲಿ ಉಳಿದಿರುವ ಹಿಂದಿ ಚಿತ್ರಗೀತೆಗಳೊಂದಿಗಿನ ನಮ್ಮ ಅವಿನಾಭಾವ ಸಂಬಂಧವನ್ನು ತೆರೆದಿಡುತ್ತದೆ. ಅಂದಿನ ಕಾಲದ ಅದ್ಭುತ ಹಾಡುಗಳು, ಸಂಗೀತ ನಮ್ಮನ್ನು ಬೇರೊಂದು ಲೋಕಕ್ಕೆ ಕರೆದೊಯ್ಯುತ್ತದೆ. ಹಿಂದಿ ಗಾನಲೋಕದಲ್ಲಿ ದಂತಕತೆಗಳೆನಿಸಿದ ಕೆ.ಎಲ್.ಸೈಗಲ್, ತಲತ್ ಮಹಮೂದ್, ಮಹಮದ್ ರಫಿ, ಕಿಶೋರ್‍ಕುಮಾರ್, ಶಂಶಾದ್ ಬೇಗಂ, ಲತಾ ಮಂಗೇಶ್ಕರ್, ಮನ್ನಾಡೇ ಮುಂತಾದವರ ಸುಶ್ರಾವ್ಯ ಕಂಠ ನಮ್ಮ ಹೃದಯದ ತಂತಿಗಳನ್ನು ಮೀಟಿ ಭಾವತರಂಗಗಳನನ್ನು ಎಬ್ಬಿಸುವ ಪರಿಯನ್ನು ಈ ನಾಟಕದ ಮೂಲಕ ಕಟ್ಟಿಕೊಡಲಾಗಿದೆ. ಈ ನಾಟಕದ ನಿರೂಪಕ ತನ್ನ ಬಾಲ್ಯದ ಅನುಭವದ ಮೂಲಕ ಆ ಕಾಲದ ಹಿಂದಿ ಚಿತ್ರ ಸಂಗೀತದ ಸುವರ್ಣ ಯುಗವನ್ನು ನೆನಪಿಸಿಕೊಳ್ಳುತ್ತಾನೆ. ಅಪ್ರತಿಮ ಚಿತ್ರಪ್ರೇಮಿಯಾದ ತನ್ನ ಚಿಕ್ಕಪ್ಪನ ಜೀವನಗಾಥೆಯನ್ನು ಪ್ರೇಕ್ಷಕರೆದುರು ಹರವಿಡುತ್ತಾನೆ.

ಸುಮಾರು 25ಕ್ಕೂ ಹೆಚ್ಚು ಕಲಾವಿದರು ಅಭಿನಯಿಸಿರುವ ಈ ನಾಟಕದ ರಂಗರೂಪ-ಬಿ.ಪಿ.ಅರುಣ್. ಸಂಗೀತ ನಿರ್ವಹಣೆ -ವಿಶ್ವಾಸ್‍ಕೃಷ್ಣ, ರಂಗವಿನ್ಯಾಸ-ಹೆಚ್.ಕೆ.ದ್ವಾರಕಾನಾಥ್ ಬೆಳಕಿನ ವಿನ್ಯಾಸ-ಕೃಷ್ಣಕುಮಾರ್ ನಾರ್ಣಕಜೆ, ವಸ್ತ್ರವಿನ್ಯಾಸ-ನಂದಿನಿ ಕೆ.ಆರ್., ನೃತ್ಯಸಂಯೋಜನೆ-ಕಾರ್ತಿಕ್ ಉಪಮನ್ಯು, ರಂಗನಿರ್ವಹಣೆ-ಸೀಮಂತಿನಿ ಬಿ., ಸಹ-ನಿರ್ದೇಶನ ಮಹೇಶ್‍ಕುಮಾರ್.

ಹೆಚ್ಚಿನ ವಿವರಗಳಿಗೆ 9448871815, 9964656482 ಸಂಪರ್ಕಿಸಿರಿ.


 

ಕನ್ನಡದ ಬರಹಗಳನ್ನು ಹಂಚಿ ಹರಡಿ
0 0 votes
Article Rating
Subscribe
Notify of
guest

0 Comments
Inline Feedbacks
View all comments
0
Would love your thoughts, please comment.x
()
x