ಹುಟ್ಟು ಹಬ್ಬದ ಶುಭಾಶಯಗಳು ಸರ್: ರೇಣುಕಾ ಶಿಲ್ಪಿ, ಹೂವಿನಹಡಗಲಿ.
ಕನ್ನಡ ಸಾರಸ್ವತ ಲೋಕದಲ್ಲಿ ತಮ್ಮದೇ ಆದ ವಿಶಿಷ್ಟ ಕಥನ ಶೈಲಿಯಿಂದ ಜನಪ್ರಿಯರಾಗಿರುವ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕ್ರತ ಕತೆಗಾರ ಕುಂ.ವೀರಭದ್ರಪ್ಪ ಅವರಿಗೆ ಇದೇ ಅಕ್ಟೋಬರ್ 1 ರಂದು ಜನ್ಮದಿನದ ಸಂಭ್ರಮ. ಈ ಸುಸಂದರ್ಭದಲ್ಲಿ ‘ಕುಂವೀ ಯವರಿಗೆ ಈ ಕಿರು ಪರಿಚಯಾತ್ಮಕ ಲೇಖನದ ಮೂಲಕ ಶುಭ ಕೋರುವ ಪುಟ್ಟ ಪ್ರಯತ್ನವಿದು. ನಾನು ಮೊದಲ ಬಾರಿ ಅವರನ್ನು ಕಂಡದ್ದು ನನ್ನ ಹೈಸ್ಕೂಲು ದಿನಗಳಲ್ಲಿ. ಸರಿಸುಮಾರು ಹದಿನೈದು ವರ್ಷಗಳ ಹಿಂದೆ, ನನ್ನೂರು ಹೂವಿನಹಡಗಲಿಯಲ್ಲಿ- ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ … Read more