ಹಂಚದ ಹೊರತು ಹರಡುವುದು ಕಷ್ಟ….

ಇತ್ತೀಚೆಗೆ ತುಂಬು ಲೇಖನವೊಂದನ್ನು ಬರೆದು ಎಷ್ಟೋ ದಿನಗಳಾಗಿಬಿಟ್ಟಿದೆ. ಒಂದೆರಡು ಗಂಟೆ ಒಂದೆಡೆ ಕುಳಿತು ಶ್ರದ್ಧೆಯಿಂದ ಬರೆದರೆ ಚಂದವಾದ ಬರಹಗಳನ್ನು ಕಟ್ಟಿಕೊಡುವುದು ಕಷ್ಟದ ಕೆಲಸವೇನಲ್ಲ. ಆದರೆ ಆ ರೀತಿ ಕುಳಿತು ಬರೆಯುವ ಶ್ರದ್ದೆಯನ್ನು ನಮ್ಮದಾಗಿಸಿಕೊಳ್ಳುವುದು ಕಷ್ಟದ ಕೆಲಸ. ಕೆಲವೊಮ್ಮೆ ನಮ್ಮೊಳಗಿನ ಶ್ರದ್ಧೆ, ಸೃಜನಶೀಲತೆ ಒಂದು ದಿನ ಹಠಾತ್ತನೆ ಮಾಯವಾಗಿ “ಏನು ಬರೆಯೋದು ಏನು ಮಾಡೋದು” ಎಂಬ ಭಾವನೆ ತುಂಬಿದ ಶೂನ್ಯತೆಯ ದಿನಗಳು ನಮ್ಮಲ್ಲಿ ಹುಟ್ಟಿಸಿಬಿಡುತ್ತವೆ. ಕೆಲವು ದಿನಗಳ ಹಿಂದೆ ಆ ರೀತಿ ಶೂನ್ಯತೆ ನನ್ನೊಳಗೆ ಮೂಡಿದ ಒಂದು ದಿನ … Read more

ಹೂಗಂಧವಿನ್ನೂ ಉಳಿದೇ ಇದೆ ಕೈ ಬೆರಳುಗಳಲ್ಲಿ

ನನ್ನ ಮುದ್ದಿನ ಚಿಟ್ಟೆ… ಏನೂ, ದುಪ್ಪಟ್ಟ ಕೊಡವಿ ನೋಡಿಕೊಳ್ಳುತ್ತಿರುವೆಯಾ? ಸಾಕ್ ಸಾಕು ಸುಮ್ನೆ ಅಟ್ಟ ಹತ್ತಿಸಿದೆ. ಆದರೂ ಪತಂಗಕ್ಕೂ ನಿಂಗೂ ತುಂಬಾನೇ ಸ್ವಾಮ್ಯ ಕಣೆ. ನಿನ್ನ ಚೆಲ್ಲುಚೆಲ್ಲಾಟ, ತರಳೆಗಳು ಪತಂಗದ ಬಣ್ಣಗಳಿಗಿಂತಲೂ ಹೆಚ್ಚು ಕಣ್ಣು ಚುಚ್ಚುತ್ತೆ. ಬಿಡು ನೀನೋ ಚಿಟ್ಟೆನ ಮೀರಿಸೋವಷ್ಟ್ ಸುಂದರಿ, ಉಬ್ಬಿಹೋಗಬೇಡ, ಅದು ನನ್ನ ಕಣ್ಣಿಗೆ ಮಾತ್ರ. ಯಾಕಂದ್ರೆ ನನ್ನ ಸ್ನೇಹಿತ ಹೇಳ್ತಿದ್ದ “ಅವಳೇನು ಚನ್ನಾಗಿದಾಳೆ ಅಂತ ಲವ್ ಮಾಡ್ತಿದಿಯೋ” ಅಂತ (ಹ್ಹಿ ಹ್ಹಿ ಹ್ಹಿ…). ಹುಂ.., ಇರಲಿ. ಹ್ಯಾಪಿ ವೆಲೆಂಟೈನ್ಸ್ ಡೇ ಬೀ … Read more

ಪ್ರೀತಿಯೆಂದರೆ…

ಪ್ರೀತಿ ಪ್ರೀತಿಯೆಂಬುದು ಬರಿಯ ಭಾವಗಳೆಂಬ ಅಪ್ಪಳಿಸುವ ಅಲೆಗಳ ಭೋರ್ಗರೆವ ಸಮುದ್ರವಲ್ಲ, ಎಂದೋ ಪೌರ್ಣಿಮೆ-ಅಮಾವಸ್ಯೆಗಳಲಿ ಮಾತ್ರವೇ ಚಂದಿರನಿಗಾಗಿ ಹಾತೊರೆವ ಮೋಹವಲ್ಲ, ಒಡಲಲಿ ಸಾವಿರ ಗುಟ್ಟುಗಳನಿಟ್ಟ, ಒಮ್ಮೆ ಈಜಲೇ ಬೇಕೆಂಬ ಕುತೂಹಲವಲ್ಲ, ಶಾಂತತೆಯ ತೋರಿಕೆಯಲಿ ಒತ್ತಡವ ತನ್ನೂಳಗೆ ಬಚ್ಚಿಟ್ಟು, ಕಡೆಗೆ ಸುನಾಮಿಯೆಬ್ಬಿಸುವ ಭಯಂಕರತೆಯಲ್ಲ, ಸಿಹಿನದಿಗಳ, ಕರಗುವ ಹಿಮವನೆಲ್ಲವ ಕಬಳಿಸಿ ವಿಸ್ತಾರವಾಗುತಲಿ, ತೀರವ ಕೊರೆವ ಸ್ವಾರ್ಥವಲ್ಲ, ಎಂದಿಗೂ ಉಪ್ಪೇ ಆಗಿರುವ, ಕುಡಿಯಲೇ ಆಗದ ಜಲವಲ್ಲ, ದಿನವೂ ರವಿಯೊಡನೆ ಸರಸವಾಡುತಲಿ, ರೂಪ-ನೋಟಗಳಲಿ ಕಣ್ಸೆಳೆಯುವ ಆಕರ್ಷಣೆಯಲ್ಲ, ದಡದ ಮರಳಿನ ಮೇಲೆ ಗಿಚಿ ಮರೆಯಾದ ಹೆಸರಲ್ಲ, … Read more

ನಾರಾಯಣ-ಸುಧಾ ಮೂರ್ತಿ ಕಾಲ ಇದಲ್ಲ

  ನಾಲ್ವರು ವಿಭಿನ್ನ ವಯೋಮಾನದವರ ಜೊತೆ ಪಂಜುವಿನ ಪ್ರೇಮಿಗಳ ದಿನದ ವಿಶೇಷ ಸಂಚಿಕೆಗಾಗಿ ನಡೆಸಿದ ಮಾತುಕತೆಯ ತುಣುಕುಗಳು ಇಗೋ ಸಹೃದಯಿಗಳೇ ನಿಮಗಾಗಿ..   ಪಂಜು ಪ್ರೀತಿ ಬಗ್ಗೆ ನಿಮ್ಮ ಅಭಿಪ್ರಾಯವೇನು? ರುಕ್ಮಿಣಿ ನಾಗಣ್ಣವರ ಎರಡು ಮನಗಳ ನಡುವಿನ ಅನನ್ಯ ಭಾವ, ನಾನೇ ನೀನು ನೀನೇ ನಾನು ಎನ್ನುವ ಅಪೂರ್ವ ಬಂಧನ. ಹೃದಯ ಸಂಗಮಗಳ ಸೇತುವೆ ಈ ಪ್ರೀತಿ.. ಪ್ರೀತಿ ಹೃದಯಗಳ ಭಾವಗೀತೆ.. ಪಂಜು ಈ ವಿಶೇಷ ದಿನದಲ್ಲಿ ಏನಾದರು ಸಂದೇಶ ಹೇಳಲು ಬಯಸ್ತೀರ? ರುಕ್ಮಿಣಿ ನಾಗಣ್ಣವರ ನವ … Read more

ಪ್ರೇಮೋತ್ಸವದ ನೆಪದಲ್ಲಿ (ಪ್ರೀತಿಯಿಂದ ಪ್ರೀತಿಯ ವಿಮರ್ಶೆ…..)

ಪ್ರೀತಿ ಎಂದರೇನು….? ಪ್ರೀತಿ ಎಲ್ಲಿದೆ….? ಪ್ರೀತಿ ಹೇಗಿದೆ….? ಪ್ರೀತಿ ಏಕೆ ಬೇಕು….? ಇಂದಿನ ಕಾಲದಲ್ಲಿ ಪ್ರೀತಿಯ ಸ್ಥಿತಿಗತಿ ಏನು…..? ಹೀಗೆ ಪ್ರೀತಿ ಎಂದರೆ ನಮ್ಮ ಮನಸ್ಸಿನಲ್ಲಿ ಅದೆಷ್ಟು ಪ್ರಶ್ನೆಗಳು, ದ್ವಂದ್ವಗಳು ಕಾಡುತ್ತದೆಯಲ್ಲವೆ…..! ಪ್ರೀತಿ ಎಂದರೆ  ವಿಶ್ಲೇಷಣೆ ಅವರವರ ಬಾವಕ್ಕೆ, ಭಕುತಿಗೆ, ಖುಷಿಗೆ ಬಿಟ್ಟದ್ದು.. ಕೆಲವರ ಪ್ರಕಾರ ಪ್ರೀತಿ ಎಂದರೆ…… ಕವಿಗಳಿಗೆ ಕಾವ್ಯಕ್ಕೆ ಸ್ಪೂತಿ, ಪತ್ರಿಕೆಗಳಿಗೆ ಸುದ್ದಿ, ಸಿನಿಮಾದವರಿಗೆ ಬರಿದಾಗದ ಕಥಾ ಸಂಪತ್ತು, ಇಂದಿನ  ಹುಡುಗ, ಹುಡುಗಿಯರಿಗೆ ಜಾಲಿ, ಟೈಂ ಪಾಸ್, ಕೆಲವರಿಗೆ ಸೆಕ್ಸ್ , ಇನ್ನೂ ಕೆಲವರಿಗೆ … Read more

ಪ್ರೀತಿಯ ಹಾದಿ….

ಯೌವ್ವನ ನೂರಾರು ಕನಸುಗಳ ಸುಂದರ ಲೋಕ. ಇಂಥ ಲೋಕದಲ್ಲಿ ಹತ್ತಾರು ಬಗೆಯ ಕನಸುಗಳನ್ನು  ನನಸಾಗಿಸಿಕೋಳ್ಳಲು ಇರುವ ಬಯಕೆ ಅಧಮ್ಯ. ಹಾಗೇ ಬಯಕೆಗಲು ಹೆಚ್ಚಾಗಿ ಬಯಲಾಗುವುದು ತಾರುಣ್ಯದಲ್ಲೇ ಅಲ್ಲವೇ, ಯೌವ್ವನ ತುಂಬೊ ತುಳುಕುತ್ತಿರುವ ಈ ಹಂತದಲ್ಲಿ ಎಲ್ಲವೂ ತನ್ನ ಮೂಗಿನ ನೇರಕ್ಕೆ ನಡೆಯಬೇಕು ಎನ್ನುವ ಮನೋಸ್ಥಿತಿ.ಜೀವನವನ್ನು ಸಮಾಜವನ್ನು ಗಡಿಗಳ ಮೀರಿ ಗ್ರಹಿಸುವುದಕ್ಕೆ ಆಗ ತಾನೇ ಸಿದ್ದವಾಗಿರುವ ಮನಸ್ಸು. ಊಹೆ, ಆಲೋಚನೆಗಳೆಲ್ಲವೂ ರಂಗುರಂಗಾಗಿ ಕಾಣಿಸಿಕೊಂಡು ಎಲ್ಲದರಲ್ಲೂ ಆವೇಶದ ಭರಾಟೆ ಸಾಗುತ್ತಿರುತ್ತದೆ. ಪ್ರಪಂಚವನ್ನೇ ಎದುರಿಸುವ ದೋರಣೆ, ಯಾವುದೋ ಸಾಹಸ ಮಾಡಬೇಕೆಂಬ ಆತುರ, … Read more

ಪ್ರೀತಿ ಎಂದರೇನು …! ಕಾಮವೋ…? ಸ್ವಾರ್ಥವೋ…? ಪ್ರೇಮವೋ…..?

ನಾನು ಪದವಿ ಕಾಲೇಜಿಗೆ ಸೇರಿ ಬೆಂಗಳೂರಿಗೆ ಹೊಸದು. ಮೊದಲ ಬಾರಿ ಮಹಾನಗರದ ದರ್ಶನವಾದ್ದರಿಂದ ಸ್ವಲ್ಪ ಖುಷಿಯ ಜೊತೆಗೆ ಭಯವೂ ಆಗುತ್ತಿತ್ತು. ನಮ್ಮ ಕಾಲೇಜು ಕಬ್ಬನ್ ಪಾರ್ಕ್ ಸಮೀಪದಲ್ಲೇ ಇದ್ದುದರಿಂದ ಆಗಾಗ ವಿರಾಮದ ವೇಳೆಯಲ್ಲಿ ಸುತ್ತಾಡಲು ಕಬ್ಬನ್ ಪಾರ್ಕಿಗೆ ಸ್ನೇಹಿತರೆಲ್ಲ ಹೊರಡುತ್ತಿದ್ದೆವು. ಹೋದಾಗಲೆಲ್ಲ ನಮಗೆ ಯುವಕ ಯುವತಿ ಜೋಡಿಗಳೇ ಹೆಚ್ಚಾಗಿ ಕಾಣಸಿಗುತ್ತಿದ್ದರು. ತೀರಾ ಹಳ್ಳಿಯವರೇ  ಆಗಿದ್ದ ನಮ್ಮ ಗುಂಪಿನವರು ಇವರು ಪ್ರೇಮಿಗಳೊ….? ಕಾಮಿಗಳೊ…? ಇವರ ತೆವಲಿಗೆ ಈ ಸಾರ್ವಜನಿಕ ತಾಣವೆ ಬೇಕೆ ಎಂದು ಅಣುಕಿಸುತ್ತೆದ್ದೆವು. ಹಾಗಾದರೆ ಪ್ರೀತಿ ಎಂದರೇನು? … Read more

ಪ್ರೀತಿ

ಮನಕ್ಕೆ ಸಿಗದದ್ದು, ಸಿಕ್ಕಾಗ ದಕ್ಕದದ್ದು, ಮರೆತಾಗ ನೆನೆದದ್ದು, ಬಯಸಿದಾಗ ಪಲಾಯನವಾದದ್ದು, ನಾ ಮುಂದೆ ನೆಡೆದಾಗ ಹಿಂದೆ ಅತ್ತದ್ದು……… ಬಹಳಷ್ಟು ಜನರ ಪ್ರೀತಿಯ ಅನುಭವ ಇವಿಷ್ಟೇ ಆಗಿರುತ್ತದೆ. ಹೌದಾದರೆ ಲೈಕ್ ಒತ್ತಿ, ಇಲ್ಲವಾದರೆ ಕಾಮೆಂಟ್ ಮಾಡಿ ಎಂದರೆ, ಕಾಮೆಂಟಿಗಿಂತ ಲೈಕ್ಸ್ ಹೆಚ್ಚಾಗಿರುತ್ತದೆ ಎಂಬುದು ನನ್ನ ನಂಬಿಕೆ. ಅದೇನೇ ಇರಲಿ, ಪ್ರೀತಿ' ಎಂಬ ಭಾವವೇ ಮಧುರ, ವಿಸ್ಮಯ. ಪ್ರೀತಿಗೆ ವಯಸ್ಸಿನ ಪ್ರಶ್ನೆ ಇಲ್ಲ. ಪ್ರೀತಿಯಲ್ಲಿ ಎಲ್ಲರೂ ಟೀನೇಜರೇ,,,,:-)) ಈ ಪ್ರೀತಿಯ ಕಲ್ಪನೆ, ಕನಸುಗಳು ಹುಟ್ಟುವುದೇ ಹದಿಹರೆಯಗಳಲ್ಲಿ. ಅಂದರೆ ಹೈಸ್ಕೂಲ್-ಕಾಲೇಜಿನ ದಿನಗಳಲ್ಲಿ, … Read more

ಅಮಾವಾಸ್ಯೆಯ ಕತ್ತಲಲ್ಲಿ ಬೆಳದಿಂಗಳು ಸುರಿದಂತೆ

ಮೊನ್ನೆ ಸಂಕ್ರಾತಿ ಹಬ್ಬದ ದಿನ ಗವಿ ಗಂಗಾಧರೇಶ್ವರ ದೇವಸ್ಥಾನದ ಅಂಗಳದಲ್ಲಿ ನಿಂತು ಗಾಳಿಗೆ ಹಾರಿ ಹಾರಿ ನಿನ್ನ ಕೆನ್ನೆಗೆ ಮುತ್ತಿಕ್ಕುತ್ತಿದ್ದ ಕೂದಲನ್ನು ಪದೇ ಪದೇ  ಹಿಂದಕ್ಕೆ ಸರಿಸುತ್ತಿದ್ದಾಗಲೇ ನಿನ್ನನ್ನು ನಾನು ನೋಡಿದ್ದು. ಮರುಕ್ಷಣವೇ ನನ್ನ ಮನಸಿನ ಮನೆಯ ತುಂಬೆಲ್ಲ ಒಲವ ಶ್ರಾವಣದ ಸಂಭ್ರಮ ಶುರುವಾಗಿ ಹೋಗಿತ್ತು.  ಹನುಮಂತನ ಬಾಲದಂತಿದ್ದ ಕ್ಯೂ ಬಿಸಿಲಲ್ಲಿ ಬೆವರಿಳಿಸುತ್ತಿದ್ದರೆ ದೇವರ ದರ್ಶನ ಬೇಡ ಎನಿಸುತ್ತಿತ್ತು. ಇನ್ನೊಂದಿಷ್ಟು ಹೊತ್ತು ನೋಡಿ ಮನೆಗೆ ಹೊರಟು ಬಿಡೋಣ..  ಅಂದುಕೊಳ್ಳುತ್ತಿದ್ದವನ ಮುಂದೆ ಜಗತ್ತಿನ ಸೌಂದರ್ಯವೆಲ್ಲ ಹೆಣ್ಣಾಗಿ ರೂಪ ಪಡೆದಿದೆಯೇನೋ … Read more

ನಿನ್ನ ಪ್ರೇಮದ ಪರಿಯ….

ಓಯ್, ಮೊದಲಿಗೆ ಹೇಳಿ ಬಿಡ್ತೀನಿ ಕೇಳು, ನಾ ಸುಮಾರಾಗಿ ಒಂದಷ್ಟು ಪ್ರೇಮ ಪತ್ರಗಳನ್ನ ಹಿಂದೆಯೂ ಬರೆದಿದ್ದೇನೆ, ಆದರೆ ಆ ಎಲ್ಲಾ ಪತ್ರ ಬರಿಯೋದಕ್ಕೂ ಮೊದಲು ಯೋಚಿಸುತಿದ್ದುದು ಇದನ್ನ ಯಾರಿಗೆ ಬರೀಲಿ ಎಂದು, ಕಾರಣ ಇಲ್ಲದಿಲ್ಲ ಕೊಡೋದಕ್ಕೆ ಕಲ್ಪಿತ ಸುಂದರಿಯರೆ ನನ್ನ ಮುಂದಿದ್ದದ್ದು….ಆದರೆ ಈ ಭಾರಿ ಈ ವಿಷಯದಲ್ಲಿ ನಾ ಅದೃಷ್ಟವಂತನೆ ಸರಿ, ಬರೆದಿಟ್ಟಿದ್ದನ್ನು ಕೊಡಲು ನೀನಿದ್ದಿ, ಜತನದಿಂದ ಪತ್ರವನ್ನು ಎತ್ತಿಟ್ಟು ನಿನ್ನ ತೆಕ್ಕೆಯಲ್ಲಿ ನನ್ನ ಬಂಧಿಸಿ “ಐ ಲವ್ ಯೂ” ಎನ್ನುತ್ತಿ ಎಂಬುದು ಗೊತ್ತಿರುವ ಕಾರಣ ನಿನ್ನದೊಂದು … Read more

ಯು.ಆರ್. ಅನಂತಮೂರ್ತಿಯವರ ಭಾರತೀಪುರ

  ಇತ್ತೀಚಿಗೆ ನಾನು ಓದಿದ ಕಾದಂಬರಿ ಶ್ರೀ ಯು.ಆರ್. ಅನಂತಮೂರ್ತಿರವರ ‘ಭಾರತೀಪುರ’, ಈ ಕಾದಂಬರಿ ಈ ವರ್ಷದ ಕೆ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಪಠ್ಯವಸ್ತುವೂ ಆಗಿದೆ ಗೆಳೆಯರೊಬ್ಬರ ಸಲಹೆಯಂತೆ ಈ ಕಾದಂಬರಿಯನ್ನು ಓದಿದೆ. ಕಾದಂಬರಿಯ ನಾಯಕ ‘ಜಗನ್ನಾಥ ಭಾರತೀಪುರದ ಸಂಪ್ರದಾಯಸ್ಥ ಬ್ರಾಹ್ಮಣ ಕುಟುಂಬದಲ್ಲಿ ಹುಟ್ಟಿದವನಾಗಿದ್ದು, ಉನ್ನತ ಶಿಕ್ಷಣವನ್ನು ‘ಇಂಗ್ಲೆಂಡಿನಲ್ಲಿ ಪಡೆದಿರುತ್ತಾನೆ. ಈತ ಇಂಗ್ಲೆಂಡಿನಲ್ಲಿ ‘ಬಂಡಾಯ’ ದ ಬಗ್ಗೆ ಮಾತನಾಡುತ್ತ ಎಲ್ಲರನ್ನೂ ಆಕರ್ಷಿಸಿರುತ್ತಾನೆ. ಆ ವೇಳೆಗೆ ಅವನಿಗೆ ‘ಮಾರ್ಗರೇಟ್’ ಗೆಳತಿಯಾಗಿ ಸಿಗುತ್ತಾಳೆ. ಅತೀ ಶೀಘ್ರದಲ್ಲೆ ಪ್ರೇಯಸಿಯಾಗಿರುತ್ತಾಳೆ. ಜಗನ್ನಾಥನ ಗೆಳೆಯ, ಸದಾಕಾಲ … Read more

ಎದ್ದೇಳು ಮಂಜುನಾಥ – ಒಂದು ಅಪರೂಪದ ಚಿತ್ರ

“ಕನ್ನಡದ ಮಟ್ಟಿಗೆ ಒಂದು ಉತ್ತಮ ಪ್ರಯತ್ನ/ಚಿತ್ರ” – ಈ ವಾಕ್ಯವನ್ನು ನೀವು ತುಂಬಾ ಸಲ ಕೇಳಿರುತ್ತೀರ. ನೀವು ಬಳಸಿರುವ ಸಾಧ್ಯತೆಗಳೂ ಇವೆ. ಒಂದು ಕ್ಷಣ ಯೋಚಿಸಿ, ಹಿಂಗಂದ್ರೆ ನಿಜವಾದ ಅರ್ಥ ಏನು ಅಂತ. ‘ಫ್ರೆಂಚ್ ಮಟ್ಟಿಗೆ ಒಳ್ಳೆ ಚಿತ್ರ’ ಅಥವಾ ‘ಇಟಾಲಿಯನ್ ಮಟ್ಟಿಗೆ ಉತ್ತಮ ಪ್ರಯೋಗ’ ಅಂತೆಲ್ಲಾದ್ರೂ ಕೇಳಿದ್ದೀರಾ? ಅಥವಾ ‘ಕನ್ನಡದ ಮಟ್ಟಿಗೆ ಉತ್ತಮ ಪೇಂಟಿಂಗ್ ಇದು’ ಅಥವಾ ‘ಕನ್ನಡದ ಮಟ್ಟಿಗೆ ಉತ್ತಮ ಸಂಗೀತ ಇದು’ ಅಂತೇನಾದ್ರೂ? ಇಲ್ಲ ಅಲ್ವಾ? ಮತ್ತೆ ಕನ್ನಡ ಚಲನಚಿತ್ರಗಳಿಗೇಕೆ ಈ ವಾಕ್ಯಪ್ರಯೋಗ? … Read more

ನೈತಿ(ಕತೆ)

  'ಸಾರ್ ನಿಮ್ಮನ್ನ ಎಲ್ಲೋ ನೋಡಿದ್ದೀನಿ ಸಾರ್….ನೀವು…..ನೀವ್ ದಾರವಾಯಿಲಿ ಬತ್ತೀರ ಅಲ್ವಾ?' ಅಂತ ಶುರು ಮಾಡಿದ ಅವನು. ನಾನು ಸುಮ್ಮನೆ 'ಹ್ಞೂಂ' ಅಂದೆ. 'ಅದೇ ಅನ್ಕೊಂಡೆ… ನೀವು ಬಸ್ ಅತ್ದಾಗಿಂದ ತಲೆ ಕೆಡುಸ್ಕೊತಿದ್ದೆ, 'ಇವ್ರುನ್ನ ಎಲ್ಲೋ ನೋಡ್ದಂಗದಲ್ಲ ಅಂತ…ಈಗ ವಳಿತು ಸಾರ್… 'ನಮಸ್ಕಾರ ಸಾರ್…ನನ್ನೆಸ್ರು ಕೃಷ್ಣ ಅಂತ…' 'ಈ ಬಸ್ ಕಂಡಕ್ಟರ ನೀವು?'    ' ಊಂ ಸಾರ್ ಒಂತರ ಅಂಗೆ ಅನ್ಕೊಳ್ಳಿ… ಈ ಬಸ್ಗೆ ನಾನೇ ಕಂಡಕ್ಟ್ರು, ಕ್ಲೀನರ್ರು, ಕ್ಯಾಶಿಯರ್ರು ಎಲ್ಲಾ'  ಅವನ ಮಾತಿನ ಧಾಟಿಗೆ ನಕ್ಕು ಮೆಚ್ಚುಗೆ ಸೂಚಿಸಿದೆ.  … Read more

ನನ್ನ ಹಳ್ಳಿಯಲ್ಲಿನ ಪ್ರಾಥಮಿಕ ಜೀವನ ಹಾಗೂ ಶಿಕ್ಷಣ

ಹಸಿರು ತಾಯಿಯ ಮಡಿಲಿನಲ್ಲಿ ಮಲಗಿರುವ ಪುಟ್ಟ ಕ೦ದಮ್ಮ ನನ್ನ ಹಳ್ಳಿ..ಕಣ್ಣು ಹಾಯಿಸಿದಷ್ಟು ದೂರ ದ್ರಷ್ಠಿ ಸವರುವುದು ಹಸಿರು ಹೊತ್ತು ನಿ೦ತಿರುವ ಗಿಡಮರ ಬಳ್ಳಿಗಳೆ..ಆಗು೦ಬೆ ಬೆಟ್ಟದ ಬುಡದಲ್ಲಿ ಹರಡಿಕೊ೦ಡಿರುವ ಕಾಡುಗಳ ನಡುವಣದ ನನ್ನ ಹಳ್ಳಿಯಲ್ಲಿ ಈ ಜೀವ ಜನನ ತಾಳಿದ್ದು ನನ್ನ ಪುಣ್ಯವೇ ಸರಿ. ದೂರ ಎ೦ಬಷ್ಟು ಅ೦ತರವನ್ನು ಇಟ್ಟುಕೊ೦ಡು ಅಲ್ಲಲ್ಲಿ ಮ೦ಗಳೂರು ಹೆ೦ಚಿನ ಹೊದಿಕೆ ಹೊದ್ದಿರುವ ಮನೆಗಳು, ನಮ್ಮ ಹಿ೦ದಿನವರ್ಯಾರೋ ಜೀವನೋಪಾಯಕ್ಕೊ೦ದು ದಾರಿ ಕ೦ಡುಕೊಳ್ಳುವ ಪ್ರಯತ್ನದ ಫಲವಾಗಿ ಅಲ್ಲಲ್ಲಿ ಕಾಡು ಕಡಿದು ಸಮತಟ್ಟು ಮಾಡಿ ನಿರ್ಮಾಣಗೊ೦ಡಿರುವ ಭತ್ತದ … Read more

ಅಗಾಧ ಬದುಕು – ನಿಗೂಢ ಸಾವು, ಅಳುವ ಮನಸು…..

ಕಣ್ಣಲ್ಲಿ ಸಾವಿರ ಕನಸುಗಳ ಮತಾಪು… ಬೆನ್ನಲ್ಲಿ ಈಡೇರಿಸಿಕೊಳ್ಳಲಾಗದ ಅಸಹಾಯಕತೆಯ ನಡುಕ…   ಬಣ್ಣ ಬಣ್ಣದ ಕತ್ತಲು… ಭವಿಷ್ಯವನ್ನು ತೋರಲಾರದ ಬೆಳಕು… ನಮ್ಮೆಲ್ಲ ಪ್ರಯತ್ನವನ್ನೂ ಮೀರಿ ಒಮ್ಮೆಲೇ ಧುತ್ತನೆ ಎದುರಾಗಿ ಕಾಡುವ ಹತಾಶೆ… ಮನುಷ್ಯನ್ನು ಸಾವು ಮತ್ತು ಸೋಲುಗಳು ಕಂಗೆಡಿಸಿದಷ್ಟು ಮತ್ಯಾವ ವಿಷಯಗಳೂ ಕಂಗೆಡಿಸಲಾರವೇನೋ.  ಸಾವನ್ನಾದರೂ ಒಪ್ಪಿಕೊಂಡು ಬಿಡಬಹುದು.  ಏಕೆಂದರೆ ಅದು ಸಾರ್ವಕಾಲಿಕ ಮತ್ತು ಸರ್ವವಿಧಿತ ಸತ್ಯ.  ಆದರೆ ಸೋಲುಗಳು –  ಮನುಷ್ಯನನ್ನು ಮಾನಸಿಕವಾಗಿ ಹಾಗೂ ದೈಹಿಕವಾಗಿ ಎರಡೂ ವಿಧಗಳಲ್ಲೂ ಹಣ್ಣಾಗಿಸುವ ವಿಚಾರವೆಂದರೆ ಸೋಲುಗಳು.  ಅವು ಸತತ ಹಾಗೂ … Read more

ಅಂತರ್ಜಾಲದ ಹುಡುಗ

ಭಾವನ ಊಟಮುಗಿಸಿ ವಿಶ್ರಾಂತಿಗಾಗಿ ಸ್ವಲ್ಪ ಹೊತ್ತು ಮಲಗೋಣ ಎಂದು ಸೋಫಾದಲ್ಲಿ ಇನ್ನೇನು ಮಲಗಬೇಕು ಅಷ್ಟರಲ್ಲಿ ಅವಳ ಮೊಬೈಲ್ ಗೆ ಟಿನ್ ಟಿನ್ ಎಂದು ಸಂದೇಶ ಬಂತು, ಎದ್ದು ನೋಡಿದಾಗ  ಹಾಯ್ ಅಕ್ಕಾ ಹೇಗಿದ್ದೀಯ,ಈ ಬದನಸೀಬ್ ತಮ್ಮನ ಮರೆತುಬಿಟ್ಟೆಯ ಎನ್ನುವ ಸಂದೇಶ ನೋಡಿ ಅವಳಲ್ಲಿ ಬೇಸರ, ಸಂತೋಷ, ಆತಂಕದ ಭಾವನೆಗಳು ಒಮ್ಮೆಲೆ ನುಗ್ಗಿ ಕರುಳಲ್ಲಿ ಚುಚ್ಚಿದ ಅನುಭವ. ನಿಧಾನವಾಗಿ ಕಣ್ಣಲ್ಲಿ ನೀರಿನ ಹನಿಗಳು ತೊಟ್ಟಿಕ್ಕಿದವು. ಒಮ್ಮೆ ನಿಟ್ಟುಸಿರಿಟ್ಟಳು. ಮನಸ್ಸು ನಿದ್ದೆ ಮರೆತು ನೆನಪಿನ ಕುದುರೆಯ ಬೆನ್ನೇರಿತ್ತು. ಆಗಿನ್ನು ಹೊಸತಾಗಿ … Read more

ಮೂರು ಕವನಗಳು

ಬತ್ತಿಹುದು ಕಾಲುವೆ- (ಕಂಬನಿ)   ಕಾಲುವೆಯ ಮೇಲೆ ಕುಳಿತು ಕಲ್ಚಾಚಿ ಒಂದೊಂದೇ ಕಲ್ಲು ಎಸೆದು ತಿಳಿ ನೀರಲ್ಲಿ ಸಣ್ಣ ಸಣ್ಣ ಅಲೆ ಎಬ್ಬಿಸಿ ಕಂಡ ಕನಸುಗಳು ಸವಿ ಅಂದು   ಯಾವುದೊ ದೂರದೂರ ಜನ ಸಾಗರವಿದು ಕಲ್ಮಶವಿಲ್ಲದ ಪುಟ್ಟ ಪುಟ್ಟ ಕಂಗಳು ತಿಳಿ ಮನದ ಸರೋವರ ಶಾಂತ ಚಿತ್ತ, ಬರಿ ಕನಸುಗಳ ನನಸಾಗಿಸೋ ಗುರಿ ಮಾತ್ರ   ಕಣ್ಣ ಅಳತೆಗೂ ಮೀರಿದ ಬೇಲಿ ಇತ್ತು  ಸುತ್ತ ಕಣ್ಣ ತಪ್ಪಿಸಿ ಅದಾರು ಬಂದವರು ತಿಳಿಗೊಳವ ಕಲಕಿ ಮೌನದ ಮುಸುಕೊದ್ದು … Read more

ಕಿಕ್ಕೇರಿ ಪಂಚಲಿಂಗೇಶ್ವರ ಹಾಗೂ ಹೊಸಹೊಳಲು ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನ

"ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು ಕರ್ನಾಟವಿದುವೆ ನೃತ್ಯ ಶಿಲ್ಪ ಕಲೆಯ ಬೀಡಿದು…ಅಪಾರ ಕೀರ್ತಿಯೇ" ಕನ್ನಡ ಚಿತ್ರರಂಗದ ಭೀಷ್ಮ ಎಂದೇ ಹೆಸರಾಗಿದ್ದ ಶ್ರೀ ಆರ್. ಎನ್. ನಾಗೇಂದ್ರ ರಾಯರು ದಿಗ್ದರ್ಶಿಸಿದ್ದ ಮಹತ್ವಾಕಾಂಕ್ಷೆಯ ಚಿತ್ರ ವಿಜಯನಗರದ ವೀರಪುತ್ರ ಚಿತ್ರದ ಕುದುರೆ ನಡಿಗೆಯ ತಾಳದ ಜನಪ್ರಿಯ ಗೀತೆ ಕೇಳಿದಾಗೆಲ್ಲ ಕರ್ನಾಟಕದಲ್ಲಿ ಶಿಲ್ಪಕಲೆಯು ಉನ್ನತ ಸ್ಥಾಯಿ ಮುಟ್ಟಿದ್ದ ಹೊಯ್ಸಳ ಅರಸರ ಕಲೆಯು ನೆನಪಿಗೆ ಬರುತ್ತದೆ.   ಡಿಸೆಂಬರ್ ೨೯ನೆ ತಾರೀಕು ಹಾಸನದಿಂದ ಮೈಸೂರಿಗೆ ಹೋಗಬೇಕಿತ್ತು..ಕರುನಾಡಿನ ಎಲ್ಲ ಸ್ಥಳಗಳು ಕೈ ರೇಖೆಯಂತೆ … Read more

ನನ್ನೊಳಗಿನ ಗುಜರಾತ…!!! ಭಾಗ-4

ಯಾಕೋ ಮನಸ್ಸು ಒಮ್ಮೊಮ್ಮೆ ಅಗಣಿತ ಮುಖವಾಡಗಳನ್ನು ಹಾಕುತ್ತದೆ. ಹಾಕಿ, ಜಗದ ಜನರ ಮುಂದೆ ಏನೆಲ್ಲ ತಾನೇ ಆಗಿ ಗಿರ್ರೆಂದು ತಿರುಗುವ ಬುಗುರಿಯ ಹಾಗೆ ತಿರುಗುತ್ತದೆ. ತುತ್ತೂರಿಯಾಗಿ ಏರು ದನಿಯಲ್ಲಿ ಕೂಗಿ, ಮಾರ್ದನಿಸಿ ಸದ್ದು ಗದ್ದಲೆಬ್ಬಿಸಿ ಒಳಮಾನಸದೊಳು ಭೀಮ ಅಲೆಗಳನ್ನು ಎಬ್ಬಿಸುತ್ತದೆ. ನೃತ್ಯ ಕಲಾ ಪ್ರವೀಣೆ ಚೆಂದುಳ್ಳಿ ಚೆಲುವೆ ನರ್ತಕಿಯಾಗಿ ಕುಣಿಯುತ್ತದೆ. ಬುಗುರಿಯಾಗಿ ಸುತ್ತಿ, ತುತ್ತೂರಿಯಾಗಿ ಕೂಗಿ, ನರ್ತಕಿಯಾಗಿ ಕುಣಿದು, ತಾನಷ್ಟೆ ಒಳ ಸುಖಿಸಿ, ಸ್ಖಲಿಸಿ ಎಲ್ಲವುಗಳನ್ನು ಅನುಭವಿಸುವ ಹಕ್ಕನ್ನು ತಾನೇ ಪಡೆದಿದ್ದರೆ, ಅದರ ಹಿಂದಿಂದೆಯೇ ಬಿಡಿಸಿಕೊಳ್ಳಲಾಗದ ಸೂತ್ರದಂತೆ … Read more

ಅಂತರ್ಜಾಲ ಕನ್ನಡ ಬ್ಲಾಗ್ ಹಾಗೂ ಪತ್ರಿಕೆಗಳು ಮತ್ತು ಕನ್ನಡದ ಕಾಯಕ

ಬದಲಾಗುತ್ತಿರುವ ಪ್ರಸ್ತುತ ವಿದ್ಯಮಾನಗಳನ್ನು ಗಮನಿಸಿದರೆ ಪರಭಾಷಾ ಹಾವಳಿ ಹಾಗೂ ಆಂಗ್ಲ ಭಾಷೆಯ ವ್ಯಾಮೋಹ ನಮ್ಮನ್ನು ತೀರಾ ಕಾಡುತ್ತಿರುವ ವಿಷಯಗಳು ಏಕೆಂದರೆ ಈ ಎರಡೂ ವಿಷಯಗಳು ಕನ್ನಡದ ಉಳಿವಿಗೆ ಸಂಚಕಾರ ತಂದೊಡ್ಡಬಹುದು ಎನ್ನುವ ಮಾತನ್ನು ತಿರಸ್ಕರಿಸುವಂತಿಲ್ಲ. ಆದರೆ ಕನ್ನಡ ಸಾವಿಲ್ಲದ ಸಾವಿರ ಕಾಲ ಬದುಕುವ ಕನ್ನಡಿಗರ ಉಸಿರಾಗಿರುವ ಭಾಷೆ. ಆದರೆ ಪ್ರಸ್ತುತ ಸನ್ನಿವೇಷದಲ್ಲಿ ಕನ್ನಡ ಕಟ್ಟುವ ಕೆಲಸ ಅತ್ಯವಶ್ಯಕ. ಇಂತಹ ಕನ್ನಡ ಕಟ್ಟುವ ಕೆಲಸವನ್ನು ಹಲವಾರು ಸಂಸ್ಥೆಗಳು, ಸಂಘಟನೆಗಳು ನಿರ್ವಹಿಸುತ್ತಿವೆಯಾದರು ಕೆಲವೊಂದು ಕಾರ್ಯಗಳು  ಮಾತ್ರ ಕೇವಲ ಪತ್ರಿಕೆಗಳ ಸುದ್ದಿಗಷ್ಟೇ … Read more