ಶಿಕಾರಿ: ಡಾ. ಗವಿ ಸ್ವಾಮಿ
ಎರಡು ವರ್ಷದ ಎಳೆಗೂಸು ತನ್ನ ಶಕ್ತಿಯನ್ನೆಲ್ಲ ಒಗ್ಗೂಡಿಸಿ ಅವನನ್ನು ಅಲುಗಾಡಿಸುತ್ತಿದ್ದಳು. ಆತ ತೆರೆದ ಕಣ್ಣುಗಳಿಂದ ಛಾವಣಿಯನ್ನು ದಿಟ್ಟಿಸುತ್ತಾ ಮರದ ಕೊರಡಿನಂತೆ ಬಿದ್ದಿದ್ದ . ತನ್ನನ್ನು ಎಬ್ಬಿಸಲು ಹೆಣಗಾಡುತ್ತಿದ್ದ ಮುದ್ದಿನ ಮಗಳಿಗೆ ಒಂಚೂರೂ ಸ್ಪಂದಿಸದೇ ನಿತ್ರಾಣನಾಗಿ ಹಾಸಿಗೆಗೆ ಅಂಟಿಕೊಂಡಿದ್ದ. ಮೂರ್ನಾಲ್ಕು ಬಾರಿ ಅಪ್ಪನನ್ನು ಜಗ್ಗಾಡಿ ಸುಸ್ತಾದ ಕಂದನ ಕಣ್ಣುಗಳಲ್ಲಿ ಹತಾಶೆ ಮಡುಗಟ್ಟಿತು. ತನ್ನನ್ನು ಮೊರದಗಲದ ಅಂಗೈ ಮೇಲೆ ಕೂರಿಸಿಕೊಂಡು ಮುದ್ದಿಸುತ್ತಿದ್ದ ಅಪ್ಪ.. ಗೊಂಬೆಯಂತೆ ಎಸೆದು ಆತುಕೊಳ್ಳುತ್ತಿದ್ದ ಅಪ್ಪ ಈಗ ಸ್ಪಂದಿಸದೇ ಮರದ ಕೊಂಟಿನಂತೆ ಮಲಗಿರುವುದನ್ನು ನೋಡಿ ಪುಟ್ಟ ಕಣ್ಣುಗಳಲ್ಲಿ … Read more