ಧ್ವಜ ಹಾರಿ ಪಾರಿವಾಳವಾಗಿ: ಪ್ರವೀಣ
೬೭ನೆಯ ಸ್ವಾತಂತ್ರ್ಯ ದಿನಾಚಾರಣೆಯ ಬೆಳಿಗ್ಗೆ ಎಂಟೂವರೆಗೆ ಕಣ್ಣೂರಿನ ಇತಿಹಾಸದಲ್ಲಿ ಅಸ್ತಿತ್ವವೇ ಇಲ್ಲದ ಜಾಲಪ್ಪ ಹೀಗೆ ಏಕಾಏಕಿ ಗೊಂದಲದಲ್ಲಿ ಸ್ಥಿಮಿತ ಕಳೆದುಕೊಂಡ ಜನಜಂಗುಳಿಯಲ್ಲಿ ಗೂಳಿಯಂತೆ ನುಗ್ಗಿ ತೋರಿದ ಧೈರ್ಯಕ್ಕೆ, ಮೆರೆದ ಸಾಹಸಕ್ಕೆ ಪೊಲೀಸ್ ಕೈಕೋಳ ತೊಡಿಸಿದರೆ ಊರಜನತೆ ಕರತಾಡನ ಜಯಕಾರಗಳಲ್ಲಿ ದುಮುದುಮಿಸಿತು. ಜಾಡರ ಜಾಲಪ್ಪನ ಕೈಗೆ ಪೊಲೀಸರು ಕೈಕೋಳ ಹಾಕಿ ಬೀದಿಯಲ್ಲಿ ಮೆರವಣಿಗೆಯೋಪಾದಿಯಲ್ಲಿ ಅವನನ್ನು ಎಳೆದೊಯ್ಯುತ್ತಿದ್ದಾರೆಂಬ ಸುದ್ದಿ ಶರವೇಗದಲ್ಲಿ ಊರಿನ ಮೂಲೆಮೂಲೆಗಳಲ್ಲಿ ತಲುಪಿದರೆ ಅವನ ಜೋಕುಗಳನ್ನು ಗುಲಾಬ ಜಾಮೂನಿನಂತೆ ನುಂಗಿ ನಕ್ಕು ನಲಿದವರೂ ನಂಬುತ್ತಿರಲಿಲ್ಲ, ಬೆಳಿಗ್ಗೆ ಭಾಂಡೆ … Read more