ಪಂಜುವಿನ ಕನ್ನಡ ಪದಗಳ ಮೆರವಣಿಗೆಗೆ ನೂರರ ಸಂಭ್ರಮ: ನಟರಾಜು ಎಸ್. ಎಂ.

ಡಿಸೆಂಬರ್ 3, 2014 ರಂದು ವಿಶ್ವ ವಿಕಲ ಚೇತನರ ದಿನದ ಸಲುವಾಗಿ ಎನ್ ಜಿ ಓ ಒಂದರ ಕಾರ್ಯಕ್ರಮಕ್ಕೆ ಹೋಗಬೇಕಿತ್ತು. ಅವತ್ತೇ ಪಶ್ಚಿಮ ಬಂಗಾಳದ ಸಿಎಂ ನಾನಿರುವ ಪುಟ್ಟ ಊರಾದ ಜಲ್ಪಾಯ್ಗುರಿಗೆ ಆಗಮಿಸಿದ್ದರು. ಆ ಕಾರಣಕ್ಕೆ ಇಡೀ ಊರಿನ ತುಂಬಾ ಬಂದೋಬಸ್ತಿನ ವಾತಾವರಣವಿತ್ತು. ಆ ಎನ್ ಜಿ ಓ ಆಫೀಸಿನ ಹತ್ತಿರದ ಪ್ರವಾಸಿ ಮಂದಿರದಲ್ಲಿ ಸಿಎಂ ತಂಗಿದ್ದ ಕಾರಣ ಆ ಎನ್ ಜಿ ಓ ಗೆ ಮಧ್ಯಾಹ್ನದವರೆಗೂ ತನ್ನ ಕಾರ್ಯಕ್ರಮಗಳನ್ನು ಶುರು ಮಾಡಲು ಒಂಚೂರು ತೊಂದರೆಯೇ ಆಗಿತ್ತು. … Read more

ಅರುಣ್ ಅಂತರಾಳದ ಮಾತು: ಅರುಣ್ ನಂದಗಿರಿ

ನಿನ್ನ ಭವಿಷ್ಯಕ್ಕೆ ನೀನೇ ಶಿಲ್ಪಿ ಇದು ಸ್ವಾಮಿ ವಿವೇಕಾನಂದರ ಮಾತು, ಈ ಸುಭಾಷಿತವನ್ನು ದಿನಪತ್ರಿಕೆಯೊಂದರಲ್ಲಿ ನೋಡಿದ್ದೆ. ಆಗ ನಾನಿನ್ನು ೮ ವರ್ಷದ ಬಾಲಕನಾಗಿದ್ದೆ. ಆದರೂ ಈ ಮಾತನ್ನು ಅರ್ಥಮಾಡಿಕೊಂಡಿದೆ! ಭವಿಷ್ಯದಲ್ಲಿ ನಾನೇನಾಗಬೇಕೋ ಅದನ್ನು ನಾನೇ ನಿರ್ಧರಿಸಬೇಕು. ಗುರಿ ಈಡೇರುವವರೆಗೂ ಛಲ ಬಿಡಬಾರದೆಂದು. ಆಗ ನಾವೆಲ್ಲ ಬೆಂಗಳೂರಿನಲ್ಲಿದ್ದೆವು. ಸುಮಾರು ೨೨ ವರ್ಷದಷ್ಟು ಹಳೆಯ ಬೆಂಗಳೂರದು. ಡಾ| ಲಕ್ಷ್ಮಿ ಡೇ ನಮ್ಮ ಮನೆಯ ಹತ್ತಿರವೇ ತಮ್ಮ ಕ್ಲಿನಿಕ್ ಇಟ್ಟಿದ್ದರು. ’ಆರೋಗ್ಯ ಧಾಮ’ ಅಂತ ಅದರ ಹೆಸರು ಅದರ ಒಂದು ಭಾಗದಲ್ಲಿ … Read more

ಸಮಾಜದ ಚೇತರಿಕೆಗೆ ಊರುಗೋಲಾಗ ಬಯಸಿದ “ಚೇತನ”: ಬೀರಪ್ಪ ಅಂಡಗಿ ಚಿಲವಾಡಗಿ

ಅಂಗವಿಕಲತೆ ಎಂಬುದನ್ನು ಯಾವ ವ್ಯಕ್ತಿಯು ಪಡೆದುಕೊಂಡು ಬಂದುದಲ್ಲ. ಅದು ಆಕಸ್ಮಿತವಾಗಿ ಬರುವಂತದ್ದಾಗಿದೆ. ಅಂಗವಿಕಲತೆಯನ್ನು ಹೊಂದಿರುವ ವ್ಯಕ್ತಿಯು ತನ್ನ ವಿಕಲತೆಯ ಕಡೆಗೆ ಗಮನವನ್ನು ಹರಿಸದೇ ಸಾಧನೆಯನ್ನು ಮಾಡಿ ತೋರಿಸುವುದರ ಕಡೆಗೆ ಗಮನವನ್ನು ಹರಿಸುವರು. ಅಂಗವಿಕಲತೆಗೆ  ಒಳಗಾದ ವ್ಯಕ್ತಿಯು ಸಾಧಾರಣ ವ್ಯಕ್ತಿಗಳಿಗಿಂತ ವಿಶೇಷವಾದ ಶಕ್ತಿಯನ್ನು ಹೊಂದಿರುತ್ತಾರೆ. ಅದಕ್ಕೆ ಉದಾಹರಣೆಯೆಂದರೆ ನಾನೇ. ನಾನು ಐದನೇ ವಯಸ್ಸಿನಲ್ಲಿ ಇರುವಾಗ ಪೋಲಿಯೋ ಲಸಿಕೆಯನ್ನು ಹಾಕಿಸಿಯೂ ಅಥವಾ ಹಾಕಿಸದೆಯೋ ನನ್ನ ಎಡಗಾಲು ಶಕ್ತಿಯನ್ನು ಕಳೆದುಕೊಂಡೆ. ಪ್ರಾಥಮಿಕ ಶಿಕ್ಷಣವನ್ನು ನನ್ನ ಸ್ವ ಗ್ರಾಮವಾದ ಕೊಪ್ಪಳ ತಾಲೂಕಿನ ಚಿಲವಾಡಗಿಯಲ್ಲಿ … Read more

‘ಎಲ್ಲಾ ನ್ಯೂನತೆಗಳಾಚೆ ಮನಸ್ಸು ಜೀವಿಸಲಿ’: ದಿವ್ಯ ಆಂಜನಪ್ಪ

ಆ ತಾಯಿ ದಿನವೂ ತನ್ನ ಮಗುವನ್ನು ಶಾಲೆಗೆ ಕರೆದೊಯ್ಯುತ್ತಿದ್ದಳು. ಮಗುವಿಗೆ ಇನ್ನೂ ಮೂರುವರೆ ವರುಷಗಳು. ಒಂದೇ ಬಸ್ಸಿನ ಪ್ರಯಾಣಿಕಳಾಗಿ ನಾನು ಸಹ ಆಗಾಗ ಇವರನ್ನು ಗಮನಿಸುತ್ತಿದ್ದೆನು. ಮಗುವಿಗೆ ಇನ್ನೂ ಸರಿಯಾಗಿ ನಾಲಿಗೆ ಹೊರಳದು, ಕಿವಿಯೂ ತುಸು ಮಂದವೇ. ಹಾಗಾಗಿ ಆಕೆ ಒಂದು ವಿಶೇಷ ಅಗತ್ಯಯುಳ್ಳ ಶಾಲೆಗೆ ಸೇರಿಸಿದ್ದರು. ಮಗು ಮುದ್ದು ಮುದ್ದುಗಿದ್ದು ಬಸ್ಸಿನ ಎಲ್ಲರ ಗಮನವನ್ನು ಸೆಳೆದಿತ್ತು. ಹಾಗೆಯೇ ಅಕ್ಕಪಕ್ಕದವರನ್ನು ಮುಟ್ಟಿ ಮುಟ್ಟಿ ಮಾತನಾಡಿಸಿ ನಕ್ಕು ಮನ ಗೆದ್ದಿತ್ತು. ಮಗುವಿನ ಮುಗ್ಧತೆಯು ಅದರ ನ್ಯೂನತೆಯನ್ನು ನಮ್ಮೆಲ್ಲರ ಮನಗಳಿಂದ … Read more

ವಿಕಲಚೇತನರಿಗಾಗಿ ಸಮನ್ವಯ ಶಿಕ್ಷಣ: ವೈ.ಬಿ.ಕಡಕೋಳ

  ಶೈಕ್ಷಣಿಕ ಮುಖ್ಯವಾಹಿನಿಯಲ್ಲಿ ಸಾಮಾನ್ಯ ಮಕ್ಕಳೊಂದಿಗೆ ವಿಶೇಷ ಅಗತ್ಯವಿರುವ ಮಕ್ಕಳನ್ನು ಸೇರಿಸಿ ನೀಡುವ ಶಿಕ್ಷಣವನ್ನು ಸಮನ್ವಯ ಶಿಕ್ಷಣ ಎನ್ನುವರು.೧೯೮೬ ರ "ರಾಷ್ಟ್ರೀಯ ಶಿಕ್ಷಣ ನೀತಿ",೧೯೯೦ ರಲ್ಲಿ ವಿಶ್ವಸಂಸ್ಥೆ ಮಂಡಿಸಿದ "ಸರ್ವರಿಗೂ ಶಿಕ್ಷಣ" ೧೯೯೫ ರ "ಅಂಗವಿಕಲ ವ್ಯಕ್ತಿಗಳ ಸಮಾನ ಹಕ್ಕುಗಳ ಸಂರಕ್ಷಣೆ ಹಾಗೂ ವಿಕಾಸ ಕಾಯೆ"ಯು ಅಂಗವಿಕಲ ಮಕ್ಕಳು ಸಾಮಾನ್ಯ ಶಾಲೆಯಲ್ಲಿ ಶಿಕ್ಷಣ ಪಡೆಯುವ ಅವಕಾಶವನ್ನು ಹೊಂದಿ ಅಂತಹ ಮಕ್ಕಳು ಕೂಡ ದೈರ್ಯ ಮತ್ತು ಆತ್ಮವಿಶ್ವಾಸದಿಂದ ಜೀವನವನ್ನು ಎದುರಿಸಬೇಕು ಹಾಗೂ ಸಮಾಜದ ಮುಖ್ಯವಾಹಿನಿಯಲ್ಲಿ ಬೆರೆಯಬೇಕು ಎಂಬುದನ್ನು ತಿಳಿಸಿವೆ. … Read more

ಪ್ರತಿಕ್ ರವರ ಸಂದರ್ಶನ: ಚೈತ್ರ ಭವಾನಿ

ಕಸ್ತೂರಿ ವಾಹಿನಿಯ ಕ್ರೈಂ ಕಾರ್ಯಕ್ರಮಗಳನ್ನು ವೀಕ್ಷಿಸುತ್ತಿದವರಿಗೆ ಪ್ರತಿಕ್ ಅವರ ಧ್ವನಿ ಚಿರಪರಿಚಿತ. ಮಾಧ್ಯಮ ಕ್ಷೇತ್ರದಲ್ಲಿ ಇವರ ಹೆಸರನ್ನು ಕೇಳಿದವರು ಒಮ್ಮೆ ಹುಬ್ಬೆರಿಸೋದು ಸಾಮಾನ್ಯ. ಮಾಧ್ಯಮ ಕ್ಷೇತ್ರದಲ್ಲಿ ಪ್ರತಿಕ್ ಎಲ್ಲರಿಗಿಂತಲೂ ವಿಭಿನ್ನವಾಗಿ ನಿಲ್ಲುತ್ತಾರೆ. ಕೆಲಸ ಮಾಡಲು ದೈಹಿಕವಾಗಿ ಸಮರ್ಥರಿದ್ದರೂ ಕೆಲಸದ ಒತ್ತಡ, ಅತೃಪ್ತಿ, ಸಂಬಳದ ಕೊರತೆ ಹೀಗೆ ನಾನಾ  ಕಾರಣಗಳಿಂದ ಮಾಧ್ಯಮ ಕ್ಷೇತ್ರಕ್ಕೆ ಗುಡ್ ಬೈ ಹೇಳುತ್ತಿರುವವರ ನಡುವೆ ಹುಟ್ಟಿದಾಗಿನಿಂದಲೂ ತಮ್ಮ ಎಡಗೈ ಸ್ವಾಧೀನ ಕಳೆದುಕೊಂಡ ಪ್ರತಿಕ್  ಅದೊಂದು ಸಮಸ್ಯೆಯೇ ಅಲ್ಲವೆಂದು  ಇಂದಿಗೂ, ಮುಂದೆಯೂ ಇದೆ ಕ್ಷೇತ್ರದಲ್ಲಿ ಹೊಸ … Read more

ವಲ್ಸಮ್ಮನ ಕಥೆ: ಭಾರವಿ

 "ಇನ್ನೊಂದ್ ಹೆಜ್ಜೆ ಮುಂದಿಟ್ರೆ ತಲೆ ಒಡಿತೀನಿ" ದೊಣ್ಣೆ ಹಿಡಿದ ವಲ್ಸಮ್ಮನ ಎಚ್ಚರಿಕೆ ನಾಲ್ಕು ಗೋಡೆಗಳ ಒಳಗಿಂದ ಹೊರಗೆ ಕೇಳಿಸುತ್ತಿದೆ. ಗಂಡನೆನೆಸಿಕೊಂಡವ ಇನ್ನೂ ಗುರುಗುಟ್ಟುತ್ತಲೇ ಇದ್ದಾನೆ. ಕುಡಿದ ಬಾಯಿಂದ ಅಸ್ಪಷ್ಟವಾಗಿ ಕೆಟ್ಟ ಪದಗಳು ವಾಸನೆಯೊಂದಿಗೆ ಉರುಳುತ್ತಿವೆ. 6 ವರ್ಷದ ಮಗ ವಿನಿತ್ ಮೂಲೆಯಲ್ಲಿ ನಿಂತುಕೊಂಡು ಅಪ್ಪನನ್ನು ದುರುಗುಟ್ಟಿಕೊಂಡು ನೋಡುತ್ತಿದ್ದಾನೆ. ಆದರೆ ವರ್ಗೀಸ್ ಗೆ ಇದ್ಯಾವುದರ ಪರಿವೆಯೂ ಇಲ್ಲ. ಅವನಿಗೆ ಒಂದು ಬಾರಿ ಹೆಂಡತಿಯ ಮೇಲೆ ಕೈ ಮಾಡುವ ಆಸೆ. ಆದರೆ ಅವಳನ್ನು ಸಮೀಪಿಸಲು ಹೆದರಿಕೆ. ಎಲ್ಲಿ ದೊಣ್ಣೆಯ ಹೊಡೆತ … Read more

ಗೆದ್ದು ಬಂದಳು ಸೀತೆ ..: ಅನಿತಾ ನರೇಶ್ ಮಂಚಿ

 ಶಾಲೆಯಿಂದ ಬರುವ ದಾರಿಯಲ್ಲೇ ಇದ್ದ ಅಪ್ಪನ ಕ್ಲಿನಿಕ್ಕಿನ ಪಕ್ಕದ  ಖಾಲಿ ಕೋಣೆ ನನ್ನ  ಕಣ್ಣಿಗೆ ನಿತ್ಯವೂ ಬೀಳುತ್ತಿತ್ತು.  ಎಲ್ಲಾ ಅಂಗಡಿಯ ಬಾಗಿಲುಗಳಂತೆ ಇದಕ್ಕೂ ಮರದ ಉದ್ದುದ್ದ ಹಲಗೆಗಳೇ ಬಾಗಿಲು. ಒಂದರ ಪಕ್ಕದಲ್ಲಿ ಒಂದರಂತೆ ಜೋಡಿಸಿ ಇಡುತ್ತಿದ್ದ ಇದನ್ನು ಹಾಕುವುದು ಮತ್ತು ತೆರೆಯುವುದೂ ಕೂಡಾ ನಾಜೂಕಿನ ಕೆಲಸವೇ. ಯಾಕೆಂದರೆ ಆಯಾಯ ಜಾಗ ತಪ್ಪಿ ಹಲಗೆಗಳನ್ನು ಜೋಡಿಸಿದರೆ ಅಂಗಡಿಯ ಬಾಗಿಲು ಹಾಕಲೇ ಸಾಧ್ಯವಾಗುತ್ತಿರಲಿಲ್ಲ. ಅದಕ್ಕಾಗಿಯೇ ಹೆಚ್ಚಿನೆಲ್ಲಾ ಬಾಗಿಲಿನ ಹಲಗೆಗಳ ಮೇಲೆ ಒಂದು, ಎರಡು, ಮೂರು …  ಎಂದು ಸಂಖ್ಯೆಗಳನ್ನು ಬರೆದಿಡುತ್ತಿದ್ದರು. … Read more

ಕತ್ತಲಡಗಿಸಲು ಹಣತೆಯೊಂದು ಸಾಕು: ಸಚೇತನ

ಕ್ಲಾಸಿನಲ್ಲಿ ಪಾಠ ಓದಲು  ಎದ್ದು ನಿಂತ ಪುಟ್ಟ ಕಂದಮ್ಮ  ಭಯಗೊಂಡಿದ್ದಾನೆ, ಸಣ್ಣನೆಯ ನಡುಕ ಮೈ ತುಂಬಾ ಹರಡಿ ತುಟಿಯ ತುದಿಯಲ್ಲಿ ಕುಳಿತಿದೆ, ತೊದಲಿದರೆ ಎನ್ನುವ ಆತಂಕ ಆ ಚಿಕ್ಕ ಕಣ್ಣುಗಳನ್ನು ದಾಟಿ ಹೊರ ಬರುತ್ತಿದೆ,   ಕೈಯಲ್ಲಿ ಅಂಗಿಯ ತುದಿಯನ್ನು ಹಿಡಿದು ಎಳೆಯುತ್ತಿದ್ದಾನೆ, ಶಕ್ತಿಮೀರಿ ಹೊರಡಿಸಿದ ಮಾತು ಬೆಚ್ಚನೆಯ ಗೂಡಿನಿಂದ ಕೆಳಬಿದ್ದ ನಡುಗುವ ಗುಬ್ಬಚ್ಚಿಯಂತೆ,ಮುದ್ದಾಗಬೇಕಿದ್ದ ಮಾತು ಮೊದ್ದಾಗಿದೆ, ತೊದಲು. ಕಂದಮ್ಮನ ಕಣ್ಣಿನಿಂದ ಮಾತು ಹೊರಬರುತ್ತಿಲ್ಲ ಶಬ್ದಗಳು ಹನಿಗಳಾಗಿವೆ.  ಇಲ್ಲಿಯೂ ಹಾಗೆ ಕಥೆಯ ನಾಯಕ ಅಂತಿಥವನಲ್ಲ, ಅವನು ಬ್ರಿಟಿಷರ … Read more

ತನ್ನಂತೆ ಪರರ ಬಗೆದೊಡೆ ಕೈಲಾಸ: ಆರಿದ್ರಿಕಾ ಭಾರತಿ

ಅಪ್ಪಾ ಹೆಣ್ಣು ಮಗುವಿಗಾಗಿ ಕಾಯುತ್ತಾ ಕಾಯುತ್ತಾ, ೭ನೇ ಮಗು ಜನಿಸಿದ ಮೇಲೆ ಭೂಮಿಗೆ ಇಳಿಯುತ್ತಾಳೆ 'ಲತಾ, ಮುದ್ದು ಮುಖ, ಬೆಳ್ಳಿ ಗುಂಡಿಗೆ ಟೋಪಿ ಹಾಕಿದಂತೆ ದಟ್ಟ ಕರಿ ಕೂದಲು, ಉದ್ದ ಮೂಗಿನ ಸುಂದರ ಗೊಂಬೆ, ಊರಣ್ಣ, ನಿನ್ ಮಗಳು ಸ್ಪುರದ್ರೂಪಿ, ಕೈ ತೊಳೆದು ಮುಟ್ಬೇಕು. ಎಂದರೆ ತಂದೆಗೊಂದು ಗರಿ. ಉಳಿದ ಯಾವುದೇ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸದ ಊರಣ್ಣ ನಿಗೆ 'ಏ ನನ್ ವಂಶಕ್ಕೆ ಪೋಲಿಯೋ, ಮಣ್ಣು ಮಸಿ ಬರಲ್ಲ, ಎಂಬ ಧೋರಣೆ. ಲತಾ ಗೆ ೩ … Read more

ಜೀವನದ ಕೆಲವು ಪುಟಗಳಿಂದ

ಆಕೆ ಜಾರಿ ಬಿದ್ದಾಗೆಲ್ಲಾ ಆಕೆಗಿಂತ ಹೆಚ್ಚು ನೋವಾಗುವುದು ನನಗೆ. ಆಕೆ ನಸು ನಗುತ್ತಾಳೆ. ನಾನು ಪೆಚ್ಚು ಪೆಚ್ಚಾಗಿ ನಗುತ್ತೇನೆ. ಮದುವೆಯಾದ ಮೊದಲು – ಸುಮಾರು ಇಪ್ಪತ್ತೈದು ವರ್ಷಗಳ ಹಿಂದೆ. ಕತ್ತಲಾಗಿತ್ತು. ಅದು ಹಳ್ಳಿ. ಹೊಸ ಮದು ಮಗ ಮದುಮಗಳು ಕೈ ಕೈ ಹಿಡಿದುಕೊಂಡು ಹೋಗುವಾಗ, ಯಾರೋ ತಮಾಶೆ ಮಾಡಿದರು. ಆಕೆ ಕೈ ಕೊಸರಿಕೊಂಡು ನಡೆದಳು. ಅದು ಒಂದು ಕ್ಷಣ ಮಾತ್ರ. ಬಿದ್ದ ಸದ್ದು. ಹಿಂದೆ ನೋಡಿದರೆ ಆಕೆ ಬಿದ್ದಿದ್ದಾಳೆ. ಇಂದಿಗೂ ಆ ಘಟನೆ ನೆನೆದಾಗ, ಆಕೆಯ ಅಸಾಹಯಕತೆಯ … Read more

ಆಪ್ತ ರಕ್ಷಕ!: ಗುರುಪ್ರಸಾದ ಕುರ್ತಕೋಟಿ

ಅವತ್ತು  ಕೆಲಸ ಮುಗಿಸಿ ನಾನು ಮನೆಗೆ ಬಂದಾಗ ರಾತ್ರಿ ಹನ್ನೊಂದು ಗಂಟೆ. ಕೆಲಸದ ಸುಸ್ತು, ತಲೆ ಬೇರೆ ಸಣ್ಣಗೆ ನೋಯುತ್ತಿತ್ತು. ನಮ್ಮ ಅಪಾರ್ಟಮೆಂಟಿನ ಹೊರಗೆ ಕಾರು ನಿಲ್ಲಿಸಿಕೊಂಡು "ಅವನು" ಗೇಟು ತೆಗೆಯಲೆಂದು ಕಾಯುತ್ತಿದ್ದೆ…  ಅವನ ಹೆಸರು ನಂದೀಶ. ಅವನನ್ನು ಏನಂತ ಪರಿಚಯಿಸಬೇಕೆಂದು ಗೊತ್ತಾಗುತ್ತಿಲ್ಲ. ಸೆಕ್ಯುರಿಟಿ ಅನ್ನಲೇ? ಊಹುಂ, ಅವನು ಅದಕ್ಕಿಂತ ಜಾಸ್ತಿ. ವಾಚ್ ಮನ್ ಅನ್ನಲೂ  ಮನಸ್ಸಿಲ್ಲ, ಏಕೆಂದರೆ ವಾಚ್ ಮ್ಯಾನ್ ಗಳು ಬರೀ ವಾಚ್ ಮಾಡುತ್ತಾರೆ ಅಷ್ಟೆ!  ಅವನನ್ನು  ನಮ್ಮ "ಆಪ್ತ ರಕ್ಷಕ" ಅಂತ ಕರೆಯುವುದೇ … Read more

ಆಟಿಸಂ ಅನ್ನೋ ಸಂಕೀರ್ಣ ಮನೋ ಅವಸ್ಥೆ: ಪ್ರಶಸ್ತಿ

ದೈಹಿಕ ಅಂಗವೈಕಲ್ಯ ಅನ್ನೋದು ಮೇಲುನೋಟಕ್ಕೆ ಕಂಡುಬರುತ್ತೆ. ಆದ್ರೆ ಮಾನಸಿಕ ಅಂಗವೈಕಲ್ಯ ? ಕಣ್ಣೆದ್ರೇ ಇದ್ರೂ ಗೊತ್ತಾಗಲ್ಲ.  ಏ ಅವನ್ಯಾಕೆ ಅಷ್ಟು ದೊಡ್ಡದಾಗಿ , ಎಳೆದೆಳೆದು ಮಾತಾಡ್ತಾನೆ, ದೇಹ ನೋಡಿದ್ರೆ ಅಷ್ಟು ವಯಸ್ಸಾದಂತಿದೆ ಆದ್ರೆ ಬುದ್ದಿ ಮಾತ್ರ ಇನ್ನೂ ಬೆಳೆದಿಲ್ಲವಾ ಅನ್ನುವಂತಹಾ ಸಿಲ್ಲಿ ಪ್ರಶ್ನೆಗಳನ್ನು ಕೇಳುತ್ತಾನೆ.  ಇದ್ದಕ್ಕಿದ್ದಂಗೆ ಜಗಳಕ್ಕೆ ಬಂದು ಬಿಡ್ತಾನೆ ಮಾರಾಯ ಅವ. ಸ್ವಲ್ಪ ಹುಷಾರಾಗಿರು ಅಂತಿದ್ದ ಹೊಸದಾಗಿ ಪೀಜಿಗೆ ಬಂದವನ ಬಗ್ಗೆ ಗೆಳೆಯ. ಹೂಂ. ಅವನು ಆಟಿಸಂ ಇಂದ ಒದ್ದಾಡ್ತಾ ಇದಾನೆ . ನಿನ್ನೆ ಸಿಕ್ಕಾಗ … Read more

ಮನಸ್ಸಿದೆ! ಕನಸಿದೆ! ಅನುಕಂಪ ಬೇಡ, ಅವಕಾಶ ಕೊಡಿ: ಪಾ.ಮು. ಸುಬ್ರಮಣ್ಯ, ಬ.ಹಳ್ಳಿ.

   ನಾವು ಯಾರಿಗೇನೂ ಕಮ್ಮಿ ಇಲ್ಲ.  ಯಾರ ಹಂಗೂ ನಮಗಿಲ್ಲ.  ನಮಗೂ ಒಂದು ಮನಸ್ಸಿದೆ. ಕನಸಿದೆ. ಬದುಕಿದೆ. ಅಸಹಾಯಕತೆಯ ಅನುಕಂಪದಲೆಯಲ್ಲಿ ಮುಳುಗಿಸಿ, ಕಾರುಣ್ಯಧಾರೆಯಲ್ಲಿ ತೇಲಿಸುವ ಅಗತ್ಯವಿಲ್ಲ.  ನಮಗೆ ಅವಕಾಶ ಕೊಡಿ.  ’ಆಗುವುದಿಲ್ಲ’ ಎಂಬುದನ್ನೆಲ್ಲಾ ’ಆಗಿಸಿ’ ಬಿಡುತ್ತೇವೆ.  ಪ್ರತಿಯೊಬ್ಬ ವಿಕಲಚೇತನರಲ್ಲಿ ಕಂಡು ಕೇಳಿ ಬರುವ ದೃಢ ವಿಶ್ವಾಸದ ನುಡಿಗಳಿವು.   ವಿಕಲಚೇತನರೆಂದರೆ ಸಮಾಜದಲ್ಲಿ ಅವಗಣನೆಗೆ ಒಳಗಾಗಿ ಅವರಿಗೆ ತಮ್ಮದೇ ಆದ ಸ್ವಂತಿಕೆ ಇಲ್ಲದಂತಹ ಸ್ಥಿತಿಗೆ ತಂದು ಬಿಟ್ಟಿದ್ದೇವೆ.   ಯಾರೀ ವಿಕಲಚೇತನರು?  ’ಅಂಗವಿಕಲ’ ಎಂಬ ಪದಕ್ಕೆ ಪರ್ಯಾಯವಾಗಿ ಇಂದು … Read more

ವಿಶೇಷ ಮಕ್ಕಳ ಪೋಷಣೆಯೂ ಘಾಸಿಗೊಳಿಸುವ ಮತಾಂಧತೆಯೂ: ಅಮರ್ ದೀಪ್ ಪಿ.ಎಸ್.

ಮಕ್ಕಳು ದೇವರ ಸಮಾನ ಅಂತಾರೆ.   ಅಂಥ ಮಕ್ಕಳು ಹುಟ್ಟಿದ ಸಮಯದಿಂದ ಹಿಡಿದು ಬೆಳೆದು ನಾಲ್ಕು ಹೆಜ್ಜೆ ಇಟ್ಟು ನಾಲ್ಕು ತೊದಲು ಮಾತಾಡುವಂತಾಗುವಷ್ಟರಲ್ಲಿ ತಂದೆ ತಾಯಿಯರು ಅದೆಷ್ಟೇ ಮೊಂಡರು, ಸಿಡುಕರು, ದುಡುಕರು, ಗತ್ತು ಗೈರತ್ತಿನವರಿದ್ದರೂ ಮಕ್ಕಳ ಮುಂದೆ ಮೊಳಕಾಲೂರಿ “ಬಾಲೇ ಕಂದಾ, ಬಾರೇ ಬಂಗಾರಿ, ಹೌದಾ ಚಿನ್ನು, ನನ್ ಸೋನು, ಮೈ ಸ್ವೀಟಿ ಅಂತೆಲ್ಲಾ ಕರೆದು ಮುದ್ದು ಮಾಡದೇ ಬೇರೆ ಕಾರಣವೇ ಇಲ್ಲದಂತೆ ರಿಲೇಟ್ ಆಗಿಬಿಡುತ್ತಾರೆ.  ಅದು ದೊಡ್ಡವರನ್ನು ಬೆಂಡ್ ಮಾಡಲು ಮಕ್ಕಳಿಗಿರುವ ಶಕ್ತಿಯೂ ಹೌದು ಮತ್ತು … Read more

ಅಸಾಧ್ಯವೆಂಬುದು ಇಲ್ಲ: ಮಾಲಾ

ಮನುಜ ಮನಸ್ಸು ಮಾಡಿದರೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದಕ್ಕೆ ನಿದರ್ಶನ ಶಿಲ್ಪಿ ಬಡೆಕ್ಕಿಲ ಶಾಮಸುಂದರ ಭಟ್. ಬಡೆಕ್ಕಿಲ ಕೃಷ್ಣ ಭಟ್ ಹಾಗೂ ಸರಸ್ವತೀ ದಂಪತಿಗಳ ಮೂರನೇ ಮಗನಾಗಿ ಜನಿಸಿದ ಶಾಮಸುಂದರ ಎರಡು ವರ್ಷ ಆಗಿದ್ದಾಗಲೇ ಪೋಲಿಯೋ ರೋಗಕ್ಕೆ ತುತ್ತಾದ. ಒಂದು ಕಾಲು ದುರ್ಬಲವಾಗಿ ಕೃಶವಾಯಿತು. ಇದರಿಂದ ವಿದ್ಯಾಭ್ಯಾಸವೂ ಕುಂಠಿತವಾಯಿತು. ಮನೆಯಲ್ಲೇ ಅಕ್ಷರಾಭ್ಯಾಸದಲ್ಲಿ ತೊಡಗಿದ. ತಂದೆ ವೈದ್ಯರು. ಮೊದಲಿಗೆ ದ.ಕ. ಜಿಲ್ಲೆಯ ವಿಟ್ಲದಲ್ಲಿ, ತದನಂತರ ಪುತ್ತೂರಿನಲ್ಲಿ ವಾಸ. ಅಲ್ಲಿ ಶಾಮಸುಂದರ (೧೯೬೯-೭೫) ಮಣ್ಣಿನಲ್ಲಿ ಮೂರ್ತಿಗಳನ್ನು ಮಾಡಲು ತೊಡಗಿದ. ಯಾರಿಂದಲೂ … Read more

ಬದುಕ ಪ್ರೀತಿಗೆ…ಅದರ ರೀತಿಗೆ…: ಭಾಗ್ಯ ಭಟ್

  ಅದೊಂದು ಸಂಜೆ ಮನೆಯೆದುರು ಶಟಲ್ ಆಡ್ತಾ ಇದ್ದೆ.ಅಲ್ಲೊಂದು ಜೋಡಿ ಕಂಗಳು ಒಂದು ವಾರದಿಂದ ನಾವು ಆಟ ಆಡೋದನ್ನ ನೋಡ್ತಾ ನಗುತಿತ್ತು.ನಾನೋ ಎಲ್ಲರನ್ನೂ ಮಾತಾಡಿಸಬೇಕನ್ನೋ, ಅಕ್ಕ ಪಕ್ಕದವರನ್ನೆಲ್ಲಾ ಫ್ರೆಂಡ್ಸ್ ಮಾಡ್ಕೋಬೇಕು ಅಂತನ್ನೋ catagory ಅವ್ಳು.  ಆ ಮುಗ್ಧ ಕಂಗಳ ಜೊತೆ ಮಾತಿಗೆ ಕೂರಲೇ ಬೇಕಂತ ನಿರ್ಧರಿಸಿ ಸುಮ್ಮನೆ ಎದುರು ಮನೆಯ ಗೇಟ್ ದಾಟಿ ಒಳಗಡೆ ಹೋದೆ  ಬರ್ತೀಯಾ ಪುಟ್ಟಾ ಆಟ ಆಡೋಣ ಅಂತ ಕೇಳಿಕೊಂಡು .ಅವ ಸುಮ್ಮನೆ ನಕ್ಕು ನೀವು ಆಟ ಆಡೋದನ್ನ ನೋಡೋದೆ ಖುಷಿ ನಂಗೆ … Read more

ಐರನ್ ಬಾಕ್ಸ್: ಪ್ರಜ್ವಲ್ ಕುಮಾರ್

(ಕಾಲ್ಪನಿಕ) ರಾತ್ರಿ ಒಂದು ಘಂಟೆ. ಶನಿವಾರವಾದ್ದರಿಂದ ಲ್ಯಾಪ್-ಟಾಪ್ ನಲ್ಲಿ ಯಾವುದೋ ಫಿಲಂ ನೋಡಿಕೊಂಡು ಮಲಗಿ ಒಂದರ್ಧ ಘಂಟೆ ಆಗಿ ನಿದ್ರೆ ಕಣ್ಣಿಗೆ ಹತ್ತುತ್ತಿತ್ತಷ್ಟೆ. ಪಕ್ಕದ ಕೋಣೆಯಿಂದ 'ಢಬ್' ಅಂತ ಏನೋ ಬಿದ್ದ ಸದ್ದು. ನಾವಿದ್ದ ಮನೆ 1ಬಿ.ಹೆಚ್.ಕೆ. ಅಂದ್ರೆ ಒಂದು ಕೋಣೆ, ಇನ್ನೊಂದು ಹಾಲ್, ಅದಕ್ಕೆ ಅಂಟಿಕೊಂಡಿರುವ ಅಡುಗೆಮನೆ ಮತ್ತು ಬಾತ್ರೂಮ್. ಆ ಮನೇಲಿ ನಾನು, ಮತ್ತೆ ನನ್ನ ಫ್ರೆಂಡು ಮುರಳಿ ಅಂತ ಇಬ್ರೂ ಒಟ್ಟಿಗೆ ಇರ್ತಾ ಒಂದು ವರ್ಷದ ಮೇಲಾಗಿತ್ತು. ರಾತ್ರಿ ನಾನು ಹಾಲ್ ನಲ್ಲಿ … Read more

ಹಾರಲಾರದ ಹಾಡುವ ಹಕ್ಕಿ: ಗುಂಡೇನಟ್ಟಿ ಮಧುಕರ

ಮನುಷ್ಯನಿಗೆ  ಯಾವುದಾದರೊಂದು ಅವಯವಗಳಿಲ್ಲದಿದ್ದರೂ ನಡೆಯುವುದಿಲ್ಲ. ಕಣ್ಣು, ಕಿವಿ, ಮೂಗು, ಕಾಲು, ಕೈ ಹೀಗೆ ಎಲ್ಲ ಅವಯವಗಳೂ ಬೇಕೇ ಬೇಕು ಆದರೆ ಯಾವುದೋ ಒಂದು ಕಾರಣದಿಂದ ಇವುಗಳಲ್ಲಿಯವುಗಳಿಂದ ವಂಚಿತನಾದ ವ್ಯಕ್ತಿ ಜೀವನದಲ್ಲಿ ಉತ್ಸಾಹವನ್ನು ಕಳೆದುಕೊಳ್ಳುತ್ತಾನೆ. ಸಮಾಜದಲ್ಲಿ ಕೀಳರಿಮೆ ಮನೋಭಾವವನ್ನು ಬೆಳೆಸಿಕೊಳ್ಳುವವರೇ ಹೆಚ್ಚು. ಆದರೆ ಎರಡೂ ಕಾಲಿಲ್ಲದೆಯೇ ಸುಮಾರು ನಾಲ್ಕು ದಶಕಗಳನ್ನು ಕಳೆದಿರುವ ವಿನಾಯಕ ಮುತಾಲಿಕ ದೇಸಾಯಿಯವರು ಇಂಥವರಿಗೆ ಹೇಳುವ ಕಿವಿಮಾತೇನೆಂದರೆ. ಜೀವನದಲ್ಲಿ ಉತ್ಸಾಹವೆನ್ನುವುದು ಅತಿ ಮಹತ್ವದ ವಸ್ತು. ಜೀವನೋತ್ಸಾಹವನ್ನು  ಕಳೆದುಕೊಂಡಿರುವವ  ಜೀವನದಲ್ಲಿ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಹುಟ್ಟಿದ ತಪ್ಪಿಗೆ … Read more

ಫ್ರೀಡಾ ಕಾಹ್ಲೋ: ಬದುಕು, ಬವಣೆ ಮತ್ತು ಬಣ್ಣಗಳು: ಪ್ರಸಾದ್ ಕೆ.

"ಇಲ್ಲಿಂದ ಹೊರಬಿದ್ದವಳೇ ಮೂರು ಕೆಲಸಗಳನ್ನು ಮಾಡಬೇಕಿದೆ ನನಗೆ. ಪೈಂಟಿಂಗ್, ಪೈಂಟಿಂಗ್ ಮತ್ತು ಪೈಂಟಿಂಗ್"  ಮೂವತ್ತಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆಗಳನ್ನು ಮಾಡಿಸಿಕೊಂಡು, ನೋವನ್ನೆಲ್ಲಾ ದೇಹದ ಮೂಲೆಮೂಲೆಯಲ್ಲೂ ಆವರಿಸಿಕೊಂಡು ಮೆಕ್ಸಿಕೋದ ಆಸ್ಪತ್ರೆಯ ವಾರ್ಡೊಂದರಲ್ಲಿ ಮಲಗಿದ್ದ ಹೆಣ್ಣೊಬ್ಬಳು ಹೇಳಿದ ಮಾತಿದು. ಈ ಚಿತ್ರಕಲಾವಿದೆಯ ಹೆಸರು ಫ್ರೀಡಾ ಕಾಹ್ಲೋ. ಪಿಕಾಸೋ ಮತ್ತಿತರ ದಿಗ್ಗಜರ ಸಮಕಾಲೀನಳಾದಳೂ ಕೂಡ ತನ್ನ ಜನ್ಮಭೂಮಿ ಮೆಕ್ಸಿಕೋದಲ್ಲಷ್ಟೇ ಅಲ್ಲದೆ ವಿಶ್ವದಾದ್ಯಂತ ತನ್ನದೇ ಆದ ಛಾಪನ್ನು ಕಲಾಲೋಕದಲ್ಲಿ ಮೂಡಿಸಿದವರು ಫ್ರೀಡಾ. ತನ್ನ ದೇಹವನ್ನು ಮತ್ತು ಮನಸ್ಸಿನಲ್ಲಾ ಮಡುಗಟ್ಟಿ ಆವರಿಸಿದ್ದ ನೋವುಗಳೊಂದಿಗೆ ಜೀವನದುದ್ದಕ್ಕೂ ಹಟಬಿಡದೆ … Read more

ಹೃದಯ ಗೆದ್ದವರು: ಸಂದೇಶ್ ಎಲ್. ಎಮ್.

    ನನ್ನದು ಹೇಳಿ ಕೇಳಿ ಬಹುರಾಷ್ಟ್ರೀಯ ಕಂಪನಿ. ಏನೇನೋ ಸವಲತ್ತುಗಳು, ಎಲ್ಲ ಕಂಪನಿಗಳು ಸಾರ್ವಜನಿಕ ರಜೆಗಳು, ಹಬ್ಬ-ಹರಿದಿನಗಳಿಗೆ ರಜೆಮೀಸಲಿಟ್ಟರೆ  ನಮ್ಮ ಕಂಪನಿ ಪ್ರತಿಯೊಬ್ಬ ಉದ್ಯೋಗಿಗಳಿಗೂ ಒಂದು ದಿನದ ರಜೆಯನ್ನು "Valentine day" ಗೆ ಮೀಸಲಿಡುತ್ತದೆ, ಆ ರಜೆಯನ್ನು ವರ್ಷದಲ್ಲಿ ಉದ್ಯೋಗಿಯು ಯಾವಾಗ ಬೇಕಾದರೂ ಉಪಯೋಗಿಸಿಕೊಳ್ಳಬಹುದು!!!!  ನಂಬ್ತೀರಾ..?? ನಂಬಲೇಬೇಕು ಆದ್ರೆ ಸ್ವಲ್ಪ ಸ್ಪೆಲ್ಲಿಂಗ್ ಮಿಸ್ಟೇಕ್ ಅಷ್ಟೆ ಅದು "Valentine day"  ಅಲ್ಲ "Volunteer day".    My day is dedicated to "Diya" ಅನ್ನೋ ಒಂದು … Read more

ನಾಲ್ಕು ಕವಿತೆಗಳು: ನಾಗೇಶ ಮೈಸೂರು, ವಿನಾಯಕ ಭಟ್, ರಶ್ಮಿ ಸುಧೀರ್, ಪವಿತ್ರ ಆಚಾರ್ಯ

ವಿಕಲ ಚೇತನ ಸಕಲ.. ಯಾರು ವಿಕಲ ಚೇತನರು, ಸ್ವಾಮಿ ? ಸಕಲವಿದ್ದೂ ಇಲ್ಲದ ನಾವೊ, ಅವರೊ? ಯಾರ ತಪ್ಪೊ, ಪಾಪವೊ ಸುಂಕ ಕಟ್ಟುತ ತೆರದಲೆ ಜೀವನ ಪೂರ ಹೋರಾಟದ ಬದುಕಲಿ ಛಲ ಬಂಡವಾಳ… ಆತ್ಮಾಭಿಮಾನ ಸ್ವಾಭಿಮಾನ ಹಂಬಲ ಸಕಲಾಂಗರೆ ಕೈಬಿಟ್ಟಾ ಗಳಿಗೆ ವೈಕಲ್ಯವೆ ದೂರಿ, ಕಾಡಿ ಸಂಬಳ ನೋವಲ್ಲೆ ಕೀಳರಿಮೆ ಅನುಕಂಪದ ಎದೆಯಲೆ ಬೀಜ ಬಿತ್ತು ಬೆಳೆದು – ಗೊಂಚಲೊ, ಕುರುಚಲೊ..! ಊನವಿದ್ದರೇನು ದೈಹಿಕ, ಮಾನಸಿಕ ? ವಿಕಲಾಂಗ ನೋಡುವ ದೃಷ್ಟಿ ಸಹಿತ ಸಹಿ ಹಾಕಿಬಿಡುವ ಅಂಕಿತ … Read more

ಅಂಗವಿಕಲರ ಸಮಸ್ಯೆಗಳಿಗೆ ದ್ವನಿಯಾಗಿರುವ ಫಕ್ಕೀರೇಶ: ದಿಗಂಬರ ಎಂ.ಪೂಜಾರ

ಸಮಾಜದಲ್ಲಿ ಎಲ್ಲರೂ ಗುರುತಿಸುವದು ಒಂದು ಒಳ್ಳೆಯ ಕೆಲಸಗಳಿಗೆ ಅಥವಾ ಅವರು ಮಾಡುವ ಕೆಟ್ಟ ಕೆಲಸಗಳಿಂದ ತಮ್ಮ ಹೆಸರನ್ನು ಮಾಡಿಕೊಂಡಿರುತ್ತಾರೆ. ಸಮಾಜದಲ್ಲಿರುವ ಕೆಲವರು ಸಮಾಜಕ್ಕೆ ಏನಾದರೂ ಮಾಡಬೇಕೆನ್ನುವ ಇಚ್ಚೆ ಹೊಂದಿರುತ್ತಾರೆ.  ಆದರೆ ಕೆಲವು ತಾವಾಯಿತು ತಮ್ಮ ಪಾಡಾಯಿತು ಎನ್ನುವ ಮನೋಭಾವದವರೆ ಹೆಚ್ಚಾಗಿರುವ ಈ ಸಂದರ್ಭದಲ್ಲಿ ವಿಕಲಾಂಗನಾದರೂ ತನ್ನ ವಿಕಲತೆಯನ್ನು ನುಂಗಿಕೊಂಡು ಶಿರಹಟ್ಟಿ ತಾಲೂಕಿನಲ್ಲಿನ ಅಂಗವಿಕಲರ ಸಮಸ್ಯೆಗಳಿಗೆ ದ್ವನಿಯಾಗಿ ಸ್ಪಂದಿಸುವ ಮೂಲಕ ಮಾನವೀಯತೆ ಮೌಲ್ಯಗಳನ್ನು ಬೆಳೆಸುತ್ತಿರುವ ಬಾಳೇಹೊಸೂರು ಗ್ರಾಮದ ಫಕ್ಕೀರೇಶ ಮ್ಯಾಟಣ್ಣವರ ವಿಶಿಷ್ಟ ವ್ಯಕ್ತಿತ್ವದ ವ್ಯಕ್ತಿಯಾಗಿದ್ದಾರೆ. ಫಕ್ಕೀರೇಶ ಮ್ಯಾಟಣ್ಣವರ ಶಿರಹಟ್ಟಿ … Read more

ಅನಿಶ್ಚಿತತೆಯ ಬಿರುಗಾಳಿಗೆ ಸಿಕ್ಕು ಬೆಳಗಲು ಸೆಣಸಾಡುತ್ತಿರುವ ದೀಪಗಳು: ಕಮಲ ಬೆಲಗೂರ್

ಬಾಲ್ಯಾವಸ್ತೆ ಮಾನವ ಬದುಕಿನ ಅತ್ಯಮೂಲ್ಯಕ್ಷಣಗಳು ಆದರೆ ಅದೇ ಕ್ಷಣವೇ ಅಂಗವಿಕಲ ಮಗುವಿಗೆ ತ್ರಾಸದಾಯಕವಾಗಿರುತ್ತದೆ. ತನ್ನ ಹೆತ್ತವರ ನೋಟದಲ್ಲಿ ಪ್ರೀತಿಯ ಬದಲು ಕನಿಕರ ನೋವು ವ್ಯಥೆ ಕಂಡಾಗ ಆ ಮುಗ್ಧ ಮನಸ್ಸು ಕುಗ್ಗುತ್ತದೆ. 'ನಾನು ಅಂಗ ವಿಕಲನಾಗಿ ಬದುಕುವುದಕ್ಕಿಂತ ಸಾವನ್ನು ಬಯಸುತ್ತೇನೆ '. ಇಂತಹ ಪ್ರತಿಕ್ರಿಯೆ ವಿಚಿತ್ರವೆನ್ನಿಸಿದರೂ ಸತ್ಯ. ಪ್ರತಿನಿತ್ಯ ಇಂಚಿಂಚು ನೋವನ್ನುಂಡು ಸೋಲೆದುರಿಸುತ್ತಾ ಪರಾವಲಂಬಿಗಳಾಗಿ ಅಸಹನೀಯ ಬದುಕನ್ನು ಬದುಕುವವರ ಬಗ್ಗೆ ಸಾಮಾನ್ಯರಿಗೆ ಸಹಾನುಭೂತಿಯಾಗುವುದು. ಆದರೆ ವಾಸ್ತವದಲ್ಲಿ ಸಾಮಾನ್ಯ ಜನರು ಜೀವನ ನಡೆಸುವ ರೀತಿಗಿಂತ ಭಿನ್ನವಾಗಿ ಹೆಚ್ಚು ದಕ್ಷತೆಯಿಂದ … Read more

ಮೃದುಲ: ಪಾರ್ಥಸಾರಥಿ ಎನ್.

 ಚಳಿಯಿಂದಾಗಿ ಏಳಲು ಮನಸೇ ಇಲ್ಲ. ಹಾಗೆ ಮುದುರಿಕೊಂಡಳು ಮೃದುಲಾ. ಬೇಸಿಗೆಯಲ್ಲಾದರೆ ಬೆಳಗಿನ ಸೂರ್ಯನ ಬೆಳಕು ರೂಮಿನಲ್ಲಿ ಪಸರಿಸಿ, ಬೇಗ ಏಳುವಂತೆ ಪ್ರೇರೆಪಿಸುತ್ತವೆ, ಚಳಿಗಾಲವೆಂದರೆ ಸೂರ್ಯನಿಗೂ ಸಹ ಸೋಮಾರಿತನವೆ !. ಎಂತಹುದೋ ಮಾಯಕದ ನೆನಪಿನಲ್ಲಿ ನಕ್ಕಳು ಮೃದುಲ. ಕಾಲೇಜಿಗೆ ಹೋಗುವ ಬಸ್ಸು ಎಂಟಕ್ಕೆ  ಮುಖ್ಯರಸ್ತೆಗೆ ಬಂದುಬಿಡುತ್ತದೆ ಅಷ್ಟರೊಳಗೆ ಸಿದ್ದವಾಗಿ ಹೋಗದಿದ್ದರೆ ಬಸ್ಸು ತಪ್ಪಿಸಿಕೊಂಡಂತೆ ಮತ್ತೆ ಸಿಟಿ ಬಸ್ ಹಿಡಿದು ಹೋಗುವದೆಂದರೆ ರೇಜಿಗೆ ಎನ್ನುವ ಭಾವ ತುಂಬಿದಂತೆ ಪೂರ್ಣ ಎಚ್ಚರಗೊಂಡು ಎದ್ದು ಕುಳಿತಳು.  ಅಮ್ಮ ಗೀಸರ್ ಆನ್ ಮಾಡಿರುವಳೋ ಇಲ್ಲವೋ … Read more

ಪಂಜುವಿಗೆ ಅಭಿನಂದನೆಗಳು: ಮಂಜು ಹಿಚ್ಕಡ

ಅದು ೨೦೧೩ನೇ ಇಸವಿ, ಆಗಷ್ಟ್- ಸೆಪ್ಟೆಂಬರ್ ತಿಂಗಳು. ಗೂಗಲನಲ್ಲಿ ಏನನ್ನೋ ಹುಡುಕುತಿದ್ದಾಗ ಪಂಜು ಎನ್ನುವ ಆನ್ ಲೈನ್ ಪತ್ರಿಕೆ ಕಣ್ಣಿಗೆ ಬಿತ್ತು. ಒಮ್ಮೆ ಓದಿದರೆ ಮತ್ತೊಮ್ಮೆ ಓದಬೇಕು ಎನ್ನುವಂತಹ ಲೇಖನಗಳು, ಕತೆಗಳು, ಕವಿತೆಗಳು ಆ ಪತ್ರಿಕೆಯ ತುಂಬೆಲ್ಲಾ ತುಂಬಿದ್ದವು. ನನಗೆ ಪತ್ರಿಕೆಯನ್ನು ಓದುತ್ತಾ ಹೋದ ಹಾಗೆ ಆ ಪತ್ರಿಕೆಯಲ್ಲಿ ಆಸಕ್ತಿ ಬೆಳೆಯತೊಡಗಿತು. ನಾನು ಹೆಸರಿಗೆ ಕವಿ-ಲೇಖಕ-ಕತೆಗಾರ ಎಂದು ನನ್ನಷ್ಟಕ್ಕೆ ಹೇಳಿಕೊಂಡರೂ ಅದುವರೆಗೆ ನನ್ನ ಯಾವುದೇ ಲೇಖನಗಳಾಗಲಿ ಕತೆಗಳಾಗಲಿ, ಕವನಗಳಾಗಲಿ ನನ್ನ ಬ್ಲಾಗನ್ನು ಬಿಟ್ಟರೆ ಬೇರೆಲ್ಲು ಪ್ರಕಟವಾಗಿರಲಿಲ್ಲ. ಹಾಗಂತ … Read more

ಅಡೆತಡೆಗಳನ್ನು ದಾಟಿ ಸವಾಲುಗಳನ್ನು ಮೆಟ್ಟಿ ನಿಂತಲ್ಲಿ: ಪ್ರಭಾಕರ ತಾಮ್ರಗೌರಿ

  ಇಂದು ದೇಶದಲ್ಲಿ ಎಷ್ಟೊಂದು ವಿಕಲಾಂಗ ಚೇತನರಿದ್ದಾರೆ. ಕಣ್ಣಿಲ್ಲ, ಮೂಗಿಲ್ಲ, ಮಾತನಾಡಬೇಕೆಂದರೆ ಬಾಯಿಇಲ್ಲ.ಎದ್ದು ನಡೆದಾಡಬೇಕೆಂದರೆ ಕಾಲು ಇಲ್ಲ. ಏನಾದರೂ ಕೆಲಸ ಮಾಡಬೇಕೆಂದರೆ ಕೈ ಇಲ್ಲ. ಇಂಥವರನ್ನ ನೋಡಿದರೆ ಪಾಪ ಅಯ್ಯೋ ಅನ್ನಿಸುತ್ತೆ. ಇವರನ್ನ ನೋಡಿದರೆ ಅಂತಃಕರಣ ಜುಂ ಎನ್ನುತ್ತದೆ. ಚಿಕ್ಕ ವಯಸ್ಸಿನಲ್ಲಿ ಅಂಗ ವೈಫಲ್ಯದಿಂದ ಬಳಲುತ್ತಿರುವ ಈ ಮಕ್ಕಳು ಆದಾರೋಪಕ್ಕೆ ಬಲಿಯಾದವೋ ಗೊತ್ತಿಲ್ಲ…? ಎಲ್ಲ ಮಕ್ಕಳಂತೆ  ಇವರು ಬಾಲ್ಯದ ಸುಮಧುರ ಜೀವನ ಕಳೆಯಬೇಕಾಗಿದ್ದ ಈ ಮಕ್ಕಳು ಎಲ್ಲವುಗಳಿಂದ ವಂಚಿತರಾಗಿ ಬದುಕು ಸಾಗಿಸುತ್ತಿದ್ದಾರೆ. ಅಂಗ ವೈಫಲ್ಯದಿಂದ ಬಳಲುತ್ತಿದ್ದಾರೆ. ಇದು … Read more

ಪಶ್ಚಿಮ ಘಟ್ಟಗಳ ಸ್ಥಿತಿ-ಗತಿ – ಅವಲೋಕನ: ಅಖಿಲೇಶ್ ಚಿಪ್ಪಳಿ

ಇತ್ತೀಚಿನ ದಿನಗಳಲ್ಲಿ ಪತ್ರಿಕೋಧ್ಯಮದಲ್ಲಿ ಹೊಸ ತಲೆಮಾರು ಸೃಷ್ಟಿಯಾಗುತ್ತಿದೆ. ಆದರೆ ಸಾರವುಳ್ಳ ಮಾಹಿತಿಗಳು ಲಭ್ಯವಾಗುತ್ತಿಲ್ಲ. ನವಂಬರ್ ಮತ್ತು ಡಿಸೆಂಬರ್ ೨೦೧೪ರ ತಿಂಗಳಲ್ಲಿ ಸಾಗರಕ್ಕೆ ಪತ್ರಿಕೋಧ್ಯಮದ ಹಿರಿಯ ದಿಗ್ಗಜರಿಬ್ಬರು ಆಗಮಿಸಿದ್ದರು. ನವಂಬರ್ ೩೦ರಂದು ಪ್ರಜಾವಾಣಿಯಲ್ಲಿ ಕಾರ್ಯನಿರ್ವಹಿಸಿದ ಶ್ರೀ ದಿನೇಶ್ ಅಮಿನ್‌ಮಟ್ಟು ಹಾಗೂ ಡಿಸೆಂಬರ್ ೧೧ರಂದು ಶ್ರೀ ನಾಗೇಶ ಹೆಗಡೆ. ಪ್ರಸ್ತುತ ಪತ್ರಿಕೋಧ್ಯಮದ ವಿಷಯದಲ್ಲಿ ಈರ್ವರ ಅಭಿಪ್ರಾಯವು ಹೆಚ್ಚು-ಕಡಿಮೆ ಹೋಲುತ್ತಿದ್ದವು. ದಿನೇಶ್ ಅಮಿನ್‌ಮಟ್ಟು ಹೇಳಿದ್ದು, ನಮ್ಮ ಕಾಲದಲ್ಲಿ ಪತ್ರಿಕೋಧ್ಯಮಕ್ಕೆ ಬೇಕಾದ ತಯಾರಿ ಇರುತ್ತಿತ್ತು ಆದರೆ ಆತ್ಮವಿಶ್ವಾಸದ ಕೊರತೆ ಕಾಡುತ್ತಿತ್ತು. ಈಗಿನ ಪತ್ರಿಕೋಧ್ಯಮದಲ್ಲಿ … Read more

ಸಾಮಾನ್ಯ ಜ್ಞಾನ (ವಾರ 58): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಬಿಎಮ್‌ಟಿಸಿ ಕೊಡುಮಾಡುವ ನೃಪತುಂಗ ಪ್ರಶಸ್ತಿಯನ್ನು ಇತ್ತೀಚೆಗೆ ಯಾರಿಗೆ ನೀಡಲಾಯಿತು? ೨.    ೧೨ನೇ ಅಖಿಲಭಾರತ ಶರಣ ಸಾಹಿತ್ಯ ಸಮ್ಮೇಳನ ಇತ್ತೀಚೆಗೆ ಎಲ್ಲಿ ನಡೆಯಿತು? ೩.    ಇತ್ತೀಚೆಗೆ ಅಮೇರಿಕಾ ವೈದ್ಯಕೀಯ ನಿರ್ದೇಶಕರಾಗಿ ಆಯ್ಕೆಯಾದ ಭಾರತದ ಪ್ರಥಮ ವ್ಯಕ್ತಿ ಯಾರು? ೪.    ಇಸ್ರೋ ಇತೀಚಿಗೆ ಯಾವ ಬಾಹ್ಯಾಕಾಶ ಕೇಂದ್ರದಿಂದ ಜಿ.ಎಸ್.ಎಲ್.ವಿ ಮಾರ್ಕ್ – ೩ ರಾಕೆಟ್‌ನ್ನು ಉಡಾವಣೆ ಮಾಡಲಾಯಿತು? ೫.    ಪೆರಿಯಾರ್ ಅಭಯಾರಣ್ಯ ಯಾವ ಪ್ರಾಣಿಗೆ ಹೆಸರಾಗಿದೆ? ೬.    ಐಶ್ವರ್ಯ ರೈ ಮೇಣದ ಪ್ರತಿಮೆ ಲಂಡನ್‌ನ ಯಾವ ಮ್ಯೂಸಿಯಂನಲ್ಲಿದೆ? … Read more