ಸಾಮಾನ್ಯ ಜ್ಞಾನ (ವಾರ 16): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    π(ಪೈ) ಇದರ ಬೆಲೆಯನ್ನು ತೋರಿಸಿಕೊಟ್ಟ ಭಾರತೀಯ ಗಣಿತಜ್ಞ ಯಾರು? ೨.    ಇಂದಿನ ಸಸ್ಯಶಾಸ್ತ್ರ (Botany) ಹಿಂದೆ ಯಾವ ಹೆಸರಿನಿಂದ ಪ್ರಸಿದ್ಧವಾಗಿತ್ತು? ೩.    ಅಂಧರಿಗಾಗಿ ಲಿಪಿ ಕಂಡು ಹಿಡಿದವರು ಯಾರು? ೪.     ಭಾರತ ದೇಶದವರು ತಯಾರಿಸಿದ ಪ್ರಥಮ ಕಂಪ್ಯೂಟರಿನ ಹೆಸರೇನು? ೫.    ಭಾರತದ ಮಾನವ ಮಸ್ತಿಷ್ಕ ಯಂತ್ರ (Man Computer) ಎಂದು ಪ್ರಸಿದ್ಧಳಾದ ಮಹಿಳೆ ಯಾರು? ೬.    ಭಾರತದ ರಾಷ್ಟ್ರಗೀತೆ ’ಜನಗಣಮನ’ ವನ್ನು ಪ್ರಥಮ ಬಾರಿಗೆ ರಾಷ್ಟ್ರಗೀತೆಯಾಗಿ ಹಾಡಿದ ವರ್ಷ ಮತ್ತು ಸ್ಥಳ ಯಾವುದು? … Read more

ಕಾಣುವ ಅನಾಚಾರಕ್ಕೆ, ಕಾಣದ ಅಸಮಂಜಸ ಉಪಮೆಗಳೇಕೆ?: ಸುಮನ್ ದೇಸಾಯಿ

   ಈಗೀಗ ದೇಶದೊಳಗ ಅತ್ಯಾಚಾರದ ಪ್ರಕರಣಗೊಳು ಅತೀ ಸರ್ವೆ ಸಾಮಾನ್ಯ ಅನ್ನೊ ಹಂಗ ನಡಿಲಿಕತ್ತಾವ. ಮನುಷ್ಯನ ಮನಸ್ಥಿತಿ ಎಷ್ಟು ವಿಕೃತಿಗಳ ಕಡೆಗೆ ವಾಲೆದಂದ್ರ ಇವತ್ತ ಸಂಬಂಧಗಳ ಪವಿತ್ರತೆಯನ್ನು ಸುದ್ಧಾ ಮರೆತು ಮನುಷ್ಯ ಮೃಗಗಳಂಗ ವರ್ತಿಸ್ಲಿಕತ್ತಾನ. ಇಂಥಾ ವಿಕೃತ ಮನಸಿಗೆ, ಸಣ್ಣ ಮಕ್ಕಳು, ಅಕ್ಕ ತಂಗಿ, ಕಡಿಕ ತಾ ಹಡದ ಮಗಳು ಅನ್ನೊದನ್ನು ಮರೆತು ಕಾಮಾಂಧ ಆಗ್ಯಾನ. ಗಾಂಧೀ ಅಜ್ಜನ ರಾಮ ರಾಜ್ಯದ ಕನಸು ನೆನಸಾಗೊ ಯಾವ ಲಕ್ಷಣಗಳು ಈ ಯುಗಾಂತ್ಯದ ತನಕಾ ಇಲ್ಲಾ ಅನಿಸ್ತದ.  ರಾಮ ರಾಜ್ಯ … Read more

ಸಾಗರದ ಮಾರಿಕಾಂಬ ಜಾತ್ರೆ: ಪ್ರಶಸ್ತಿ ಪಿ.

ಸಾಗರದ ಹಬ್ಬಗಳು ಅಂದ್ರೆ ಮೊದಲು ನೆನಪಾಗೋದು ಮೂರು ವರ್ಷಕ್ಕೊಮ್ಮೆ ಬರೋ ಮಾರಿ ಜಾತ್ರೆ. ಸಾಗರದ ಮಧ್ಯಭಾಗದಲ್ಲಿರುವ ಶ್ರೀ ಮಾರಿಕಾಂಬೆ ದೇವಿಯ ಒಂಭತ್ತು ದಿನಗಳ ಜಾತ್ರೆಯೆಂದರೆ ಸಾಗರಿಗರ ಪಾಲಿಗೆ ಅಂದೊಂದು ದೊಡ್ಡ ಹಬ್ಬವೇ. ಮೊದಲನೇ ದಿನ ಅದೇ ಬೀದಿಯಲ್ಲಿರುವ ತನ್ನ ತವರು ಮನೆಯಲ್ಲಿರುತ್ತಾಳಂತೆ ತಾಯಿ. ಅವತ್ತು ಮಾಂಸ ಮಧ್ಯಗಳಿಲ್ಲದ ಸಸ್ಯಾಹಾರಿ ಪೂಜೆ. ಆಮೇಲಿನ ದಿನಗಳಲ್ಲಿ ಕುರಿ, ಕೋಳಿಗಳ ಕಡಿತವೆಂದು ಮಾಂಸಾಹಾರಿಗಳ ಹಬ್ಬ. ಆ ಬೀದಿಯ ಮಾಂಸದಂಗಡಿಯಲ್ಲಿ ಮೊದಲ ದಿನವೇ ಮೂವತ್ತೊಂದು ಕುರಿ ಕಡಿದರಂತೆ  ಆ ಮನೆಯಲ್ಲಿ ಬಂದ ನೆಂಟರ … Read more

ಭೀಷ್ಮ ಪ್ರತಿಜ್ಞೆ: ಡಾ . ಸಿ.ಎಂ.ಗೋವಿಂದರೆಡ್ಡಿ

ಶ್ರೀ ವ್ಯಾಸಮಹರ್ಷಿಗಳು ತಮ್ಮ ಶಿಷ್ಯರಿಗೆ ಹೇಳಿದ ಮಹಾಭಾರತ ಕಥೆಯನ್ನು, ಅರ್ಜುನತನಯನಾದ ಅಭಿಮನ್ಯುವಿನ ಪುತ್ರ ಪರೀಕ್ಷಿತನ ಮಗನಾದ ಜನಮೇಜಯನು ಸರ್ಪಯಾಗ ಮಾಡುವ ಕಾಲದಲ್ಲಿ ವೈಶಂಪಾಯನನಿಂದ ಕೇಳಿ ತಿಳಿದನು : ಮಹರ್ಷಿ ವಿಶ್ವಾಮಿತ್ರ ಮೇನಕೆಯರ ಮಗಳೂ ಕಣ್ವಮಹರ್ಷಿಗಳ ಸಾಕುಮಗಳೂ ಆದ ಶಕುಂತಲೆಯನ್ನು ವರಿಸಿದವನು ಚಂದ್ರವಂಶದ ರಾಜನಾದ ದುಷ್ಯಂತ. ಈ ದುಷ್ಯಂತ ಶಕುಂತಲೆಯರ ಮಗನೇ ಭರತ. ಭರತನಿಂದಲೇ ಭಾರತವಂಶವಾಯಿತು. ಭರತನ ಮಗ ಸುಹೋತ್ರ ; ಸುಹೋತ್ರನ ಮಗ ಹಸ್ತಿ. ಇವನಿಂದಲೇ ರಾಜಧಾನಿಗೆ ಹಸ್ತಿನಾಪುರವೆಂಬ ಹೆಸರು ಬಂದದ್ದು. ಹಸ್ತಿಯ ಮಗ ಸಂವರಣ ; … Read more

ಚಿಕ್ಕಪುಟ್ಟ ಕಾಳಜಿಯಲ್ಲಿ: ಪದ್ಮಾ ಭಟ್

                ಎಷ್ಟೋ ಬಾರಿ ಚಿಕ್ಕಪುಟ್ಟ ವಿಷಯಗಳು ಅರ್ಥವಾಗುವುದೇ ಇಲ್ಲ. ಎಲ್ಲದರ ನಡುವೆ ಇದ್ದುಕೊಂಡೇ ಏನೂ ಗೊತ್ತಿಲ್ಲದ, ಅಭಿವ್ಯಕ್ತಿ ಪಡಿಸಲಾಗದ ರೀತಿಯಾಗಿಬಿಡುತ್ತದೆ.. ನಮ್ಮನ್ನು ಅವರು ಅರ್ಥ ಮಾಡ್ಕೋಬೇಕು, ಇವರು ಅರ್ಥಮಾಡಿಕೋಬೇಕು ಎಂದು ಹಂಬಲಿಸುವ ನಾವೇ ಯಾಕೆ ಬೇರೆಯವರನ್ನು ಅರ್ಥ ಮಾಡಿಕೊಳ್ಳುವಲ್ಲಿ ಮೂಕರಾಗುತ್ತೇವೆಯೋ ಪ್ರಶ್ನಿಸಿಕೊಳ್ಳಬೇಕಿದೆ. ಪ್ರೀತಿಯ ನಡುವೆ, ಪ್ರೀತಿಸುವ ಜನರ ನಡುವೆ ನಾವೂ ಪ್ರೀತಿಯ ಜೀವಿಯಾಗಿದ್ದರೇ ಚಂದ. ಎಲ್ಲವನ್ನೂ ಹಗುರವಾಗಿ, ಸಡಿಲವಾಗಿ ತೆಗೆದುಕೊಳ್ಳುವಾಗ ಒಂದೆರಡು ನಿಮಿಷವಾದರೂ ಆ ವ್ಯಕ್ತಿಯ ಬಗ್ಗೆಯೋ, … Read more

ಮನೆಗೆ ಬಂದ ಮೋಹಿನಿ: ಪಾರ್ಥಸಾರಥಿ. ಎನ್.

ಅದೇನೊ ಈ ಟೀವಿಗಳ ಹಾವಳಿ ಜಾಸ್ತಿಯಾದನಂತರ ಎಲ್ಲರ ಮನೆಗಳಲ್ಲಿ ರಾತ್ರಿ ಮಲಗುವ ಸಮಯವೆ ಹೆಚ್ಚು ಕಡಿಮೆ ಆಗಿಹೋಗಿದೆ. ಮೊದಲೆಲ್ಲ ರಾತ್ರಿ ಹತ್ತು ದಾಟಿತು ಅಂದರೆ ಸಾಕು ಎಲ್ಲರ ಮನೆಯ ದೀಪಗಳು ಆರುತ್ತಿದ್ದವು. ಈಗಲಾದರೆ ಅರ್ಧರಾತ್ರಿ ದಾಟಿದರು ಯಾವುದೊ ಚಾನಲ್ ನೋಡುತ್ತ ತೂಕಡಿಸುತ್ತ ಕುಳಿತಿರುವವರೆ ಜಾಸ್ತಿ.  ಕಳೆದ ವಾರ ಹೀಗೆ ಆಯಿತು. ಮನೆಯಲ್ಲಿ ಹೆಂಡತಿ ಹಾಗು ಮಗಳು ರಾತ್ರಿ ಹತ್ತೂವರೆ ಆಯಿತೆಂದು ಹೋಗಿ ಮಲಗಿಬಿಟ್ಟರು, ನಾನು ವಿದೇಶಿ ಚಾನಲ್ ನ ಹಾರರ್ ಸಿನಿಮಾ ನೋಡುತ್ತ ಕುಳಿತಿದ್ದವನು, ಟೀವಿ ಆರಿಸಿ … Read more

ಎರಡು ಕವಿತೆಗಳು: ಮಹಿ, ಅಕುವ

          ಭ್ರೂಣ ಆಗಷ್ಟೇ ಕಿತ್ತು ಬಿದ್ದ ಗಾಳಿಪಟ, ಹೊಟ್ಟೆಯೊಳಗೆ ನುಲಿವ ಸಂಕಟ  ಜೀವ ಪ್ರಕ್ರಿಯೆಗೆ ಅನುಗೊಳ್ಳುವ ದೇಹ  ರಕ್ತಮಯ  ತೊಡೆಗಳ ನಡುವೆ ಚಿಗುರುವ ಚಿಟ್ಟೆ ಮೊಟ್ಟೆ  ದಿನಕಳೆದಂತೆಲ್ಲಾ ಬಟ್ಟೆಯಂತೆ ದೇಹ  ಒಗೆದು ಹರಡುವ ಬಯಕೆ  ದಾರಿತಪ್ಪದೇ ಅಮ್ಮನ ಎದೆಗವಿತು ಆಶ್ರಯ  ಪ್ರತಿ ಹುಡುಗನಲ್ಲು ಕಾಡುವ ರೋಮಿಯೋ  ಥೇಟ್ ಕ್ಲಿಯೊಪಾತ್ರಳದ್ದೆ ನೃತ್ಯ ನಡಿಗೆಗೆ  ಜಂಬದ ಕೊಂಬು ಹಾರು ಕೂದಲ ಮೇಲೆ  ಮಿಗ್ ವಿಮಾನದ್ದೆ ವೇಗ  ಸ್ಕೊಟಿಗೆ  ಹಾದಿಗಳ ಹಾದು, ಹಳ್ಳ ಕೊಳ್ಳಗಳ  ದಾಟಿ … Read more

ಓಯಸಿಸ್: ನಿನಾದ (ಭಾಗ 2)

ಇಲ್ಲಿಯವರೆಗೆ… ಅದೊಂದು ದಿನ ನಿಶಾಂತ್ ಫೋನ್ ಗೆ ಕರೆ  ಮಾಡಿ ಮಾಡಿ ಸೋತು ಹೋಗಿ ನಿನಾದ ಫೋನ್ ಗೆ ಕರೆ ಮಾಡಿದ. ನಂಗೆ ತುರ್ತಾಗಿ ಕೆಲವು ವಿಷಯ ಕೇಳಬೇಕಿತ್ತು. ನಿಶಾಂತ್ ಎಲ್ಲಿ ?? ನಿನಾದ ಶಾಂತವಾಗಿ,  ಬಹುಶಃ  ನಿಶಾಂತ್ ಬ್ಯುಸಿ ಏನು ಕೇಳಬೇಕಿತ್ತು ? ಮನೆಗೆ ಬಂದ ಮೇಲೆ ವಾಪಾಸು ಕರೆ ಮಾಡಲು ಹೇಳುವೆ ಅಂದು ಉತ್ತರಿಸಿದಳು. ಏನೋ ಸುಮಾರು ಹೊತ್ತು ನಿಶಾಂತ್ & ಜೈನ್ ಮಾತನಾಡಿಕೊಂಡಿದ್ದರು. ದಿನಗಳು ಸಾಗಿ ಹೋಗುತ್ತಿದ್ದವು.. ಆಗೊಮ್ಮೆ ಈಗೊಮ್ಮೆ ನಿನಾದ ಕರೆ … Read more

ನಲವತ್ತರ ಆಸು ಪಾಸಿನ ಪ್ರೀತಿ ಫಜೀತಿ: ಅಮರ್ ದೀಪ್ ಪಿ.ಎಸ್.

ಈ ಸೀರೆಯಲ್ಲಿ  ಈ  ಮೇಕಪ್ ನಲ್ಲಿ   ಹೇಗೆ ಕಾಣಿಸ್ತೇನೆ ? ಕೇಳಿದಳು .    ಅಂದು ಆಕೆ ಬಲಗಡೆ ಸೆರಗು ಹೊದ್ದು ಅವಳ ತೂಕಕ್ಕೆ  ಭಾರವೆನಿಸುವ ಸೀರೆಯನ್ನು ತುಂಬಾ ಇಷ್ಟಪಟ್ಟು ಒಂದೂವರೆ ತಾಸಿಗಿಂತ ಹೆಚ್ಚು ಸಮಯ ತೆಗೆದುಕೊಂಡು ರೆಡಿಯಾಗಿ ಬಂದಿದ್ದಳು. ಎಂದಿಗಿಂತ ತುಸು ಹೆಚ್ಚೇ ಎನ್ನುವಷ್ಟು ಮೇಕಪ್ ಮಾಡಿಕೊಂಡಿದ್ದಳು. ತುಟಿಗಳು ರಂಗಾಗಿದ್ದವು. ಅಂದು ಸಂಜೆ ಕಾಕ್ ಟೈಲ್  ಪಾರ್ಟಿ ಗೆ ಆಹ್ವಾನಿಸಿದ ಮೇರೆಗೆ ಬಹಳ ಉಲ್ಲಸಿತಳಾಗಿ ತನ್ನ ಎಲ್ಲ ನಾಲ್ಕು ದಿನದಿಂದೀಚೆಗೆ ಆದ ಗೆಳತಿಯರೊಂದಿಗೆ ಬಂದಿಳಿದಿದ್ದಳು. … Read more

ಬಂಗಾರಮ್ ಎಂಬ ಹುಲಿಯೂ-ಸಾಗರದ ಮಾರಿಜಾತ್ರೆಯೂ: ಅಖಿಲೇಶ್ ಚಿಪ್ಪಳಿ

ಪಶ್ಚಿಮ ಬಂಗಾಳದ ದಾಬಾ ಅರಣ್ಯ ಪ್ರದೇಶದಲ್ಲಿ ೨೦೦೯ರಲ್ಲಿ ಹುಲಿಮರಿಯೊಂದು ಅನಾಥವಾಗಿ ಅರಣ್ಯಾಧಿಕಾರಿಗಳ ಕಣ್ಣಿಗೆ ಬಿತ್ತು. ಮುದ್ದಾದ ಪುಟ್ಟ ಹುಲಿ ಮರಿ ತಾಯಿಯಿಂದ ಬೇರ್ಪಟ್ಟು ಅಸಹಾಯಕವಾಗಿ ಅನಾಥವಾಗಿತ್ತು. ಅರಣ್ಯಾಧಿಕಾರಿಗಳು ತಾಯಿ ಬರುವುದೆಂದು ಕಾದು ನೋಡಿದರು. ತಾಯಿ ಬರಲಿಲ್ಲ. ಮರಿಯನ್ನು ತಂದು ಬೋರ್ ವನ್ಯಜೀವಿ ಉದ್ಯಾನವನಕ್ಕೆ ತಂದು ಬೆಳೆಸಿದರು. ಹುಲಿ ಮರಿ ಬೆಳದ ಮೇಲೆ ಮತ್ತೆ ಅರಣ್ಯಕ್ಕೆ ಬಿಡುವ ಯೋಜನೆ ಅರಣ್ಯ ಇಲಾಖೆಯದಾಗಿತ್ತು. ಎಲ್ಲಾ ಮೃಗಾಲಯ ಮತ್ತು ಸಂರಕ್ಷಿತ ಉದ್ಯಾನವನಗಳಲ್ಲಿ ಹಿಂಸ್ರ ಪ್ರಾಣಿಗಳಿಗೆ ಆಹಾರವಾಗಿ ಸಾಮಾನ್ಯವಾಗಿ ದನದ ಮಾಂಸವನ್ನು ನೀಡುತ್ತಾರೆ. … Read more