ಅನ್ನದಾತನೊಬ್ಬನ ಜೊತೆ ಇಡೀ ದಿನ..: ನಟರಾಜು ಎಸ್. ಎಂ.
ಚಳಿಯ ಕಾರಣಕ್ಕೆ ವಾಕಿಂಗ್ ಮತ್ತು ಜಾಗಿಂಗ್ ಅನ್ನು ಅಕ್ಷರಶಃ ನಿಲ್ಲಿಸಿಬಿಟ್ಟಿದ್ದ ನಾನು ಇತ್ತೀಚೆಗೆ ಶಿವರಾತ್ರಿಯ ತರುವಾತ ಚಳಿ ಕಡಿಮೆ ಆದ ಕಾರಣ ಬೆಳಿಗ್ಗೆ ಅಥವಾ ಸಂಜೆ ಮತ್ತೆ ವಾಕ್ ಶುರು ಮಾಡಿದ್ದೆ. ಆಫೀಸಿನ ದಿನಗಳಾದರೆ ಸಂಜೆ ಐದೂವರೆ ಆರು ಗಂಟೆ ಆಗುತ್ತಿದ್ದಂತೆ ಆಫೀಸಿನಿಂದಲೇ ಸೀದಾ ತೀಸ್ತಾ ನದಿಯ ಪಕ್ಕದಲ್ಲಿರುವ ಕಟ್ಟೆಯ ಮೇಲೆ ಒಂದೂ ಒಂದೂವರೆ ಗಂಟೆ ತಪ್ಪದೆ ವಾಕ್ ಮಾಡುತ್ತೇನೆ. ಇವತ್ತು ಭಾನುವಾರ ರಜೆ ಇದ್ದುದರಿಂದ ಬೆಳಿಗ್ಗೆ ಬೇಗನೆ ಎದ್ದವನು ರೆಡಿಯಾಗಿ ಮಾರ್ನಿಂಗ್ ವಾಕ್ ಗೆಂದು ತೀಸ್ತಾ ನದಿಯ … Read more