ನಡುವೆ ಸುಳಿವಾತ್ಮ…: ಮಹಾದೇವ ಹಡಪದ

 ಬನದ-ಭಾರತ ಹುಣಿವಿಗೆ ಯಲ್ಲಮ್ಮ ತಾಯಿ ಜಾತ್ರೆ ಜೋರು ನಡಿತದ. ಉಡಿ ತುಂಬಸೋದು, ಮುತ್ತು ಕಟಗೊಂಡವರು ಸೇವಾ ಮಾಡೋದು, ಬೇವಿನ ತಪ್ಪಲದಾಗ ಕುಂತ ತಾಯಿಯನ್ನ ಎರೆಯೋದು, ದೀಡ ನಮಸ್ಕಾರ ಹಾಕೋದು, ಪಡ್ಡಲಗಿ ಹಿಡದು ನೇಮದ ಸಲುವಾಗಿ ನಾಕೈದು ಮನಿ ಜೋಗ ಬೇಡೋದು ಹಿಂಗ ಒಕ್ಕಲ ಮಕ್ಕಳ ಮನಿಯೊಳಗ ಸಡಗರ ಹೊಗೆಯಾಡತಿರತದ. ಜಡೆಬಿಟ್ಟ ಜೋಗಮ್ಮ ಜೋಗಪ್ಪಗಳು ತಿಂಗಳ ಕಾಲ ಬಿಡುವಿಲ್ಲದ ಮುಯ್ಯಿ ಮಾಡತಿರತಾರು. ಬಳಿ ಒಡೆದು ರಂಡೆ ಮಾಡೋದರಿಂದ ಶುರುವಾಗುವ ವಿಧಿವಿಧಾನಗಳು ಸೀರಿ ಉಡಿಸಿ, ಮುತ್ತು ಕಟ್ಟಿ, ಕುಂಕಮ ಇಡೋವರೆಗೂ … Read more

ಸೂರ್ಯನ ಮೇಲೆ ಇರಲಿ ಭಕ್ತಿ, ಕೊಡುತಾನಂತೆ ಪುಗಸಟ್ಟೆ ಸೌರಶಕ್ತಿ: ರೋಹಿತ್ ವಿ. ಸಾಗರ್

ನಿಸರ್ಗದ ಅತೀ ಬುದ್ಧಿವಂತ ಕೂಸು ಎಂದೇ ಕರೆಯಲ್ಪಡುವ ಮಾನವನ ಅತೀ ಬುದ್ಧಿವಂತಿಕೆಯ ಪರಾಕಾಷ್ಟೆ ಆ ನಿಸರ್ಗದ ಬುಡವನ್ನೇ ಅಲುಗಾಡಿಸುವಂತದ್ದು. ಕುತೂಹಲ ಯೋಚನಾ ಸಾಮರ್ಥ್ಯದ ಬಲದಿಂದ  ಮೊದಲು ಬೆಂಕಿಯನ್ನು ಕಂಡುಹಿಡಿದ, ಅದರಿಂದ  ಬೇಕಾದದ್ದು, ಬೇಡವಾದದ್ದು ಎಲ್ಲವನ್ನೂ ಎಗ್ಗಿಲ್ಲದೆ ಮಾಡತೊಡಗಿದ. ಬೇಯಿಸಿದ ಆಹಾರ ರುಚಿಯೆನಿಸಿತು; ಬೆಂಕಿ ಉರಿಸಲು ಕಟ್ಟಿಗೆ ಬೇಕು ಕಾಡು ಕಡಿದ, ಬೆಂಕಿಯ ಬೆಳಕು ಬೇಕು ಕಾಡು ಕಡಿದ, ಮರಕ್ಕಿಂತ ಕಲ್ಲಿದ್ದಲು ಉತ್ತಮ ಎಂದು ಅರಿತ, ಗಣಿ ಬೇಕು, ಕಾಡು ಕಡಿದ, ವಿದ್ಯುತ್ ಕಂಡುಹಿಡಿದ, ಅದಕ್ಕೆ ಅಣೆಕಟ್ಟು ಬೇಕು, … Read more

ಕೋಲಾಪಾನಕ ಉಪಾಖ್ಯಾನ ಸಹಿತ ರಘುವರಚರಿತ ಲಘುವ್ಯಾಖ್ಯಾನವು: ಎಸ್. ಜಿ. ಸೀತಾರಾಮ್

ವಿಧವಿಧ ರಾಮಾಯಣಗಳಿಂದ ಹೆಚ್ಚುತ್ತಿರುವ ಹೊರೆಯಿಂದಾಗಿ, ಭೂಭಾರವನ್ನು ಹೊತ್ತ ಆದಿಶೇಷನು ನುಲಿದಾಡುತ್ತಿದ್ದಾನೆ; ರಾಮಾಯಣ ಸಾಹಿತ್ಯ ಪ್ರದೇಶ ಕಾಲಿಡಲಾಗದಷ್ಟು ನಿಬಿಡವಾಗಿಹೋಗಿದೆ ಎಂಬಂತೆ ಕುಮಾರವ್ಯಾಸನು ಸುಮಾರು ೬೦೦ ವರ್ಷಗಳ ಹಿಂದೆಯೇ ಹೇಳಿದ್ದನೆಂದಮೇಲೆ, ಇಂದು ಆ ಹೊರೆ ಇನ್ನೆಷ್ಟು ಹೆಚ್ಚಿರಬಹುದೆಂದು ಊಹಿಸಬಹುದು. ಆದ್ದರಿಂದಾಗಿ, ಮತ್ತೆ ಅದೇ ಕಥೆಯನ್ನೇ ಇರುಳುದ್ದ ಹೇಳಿ, ಹಗಲು ಹರಿಯುತ್ತಿದ್ದಂತೆ, ರಾಮಣ್ಣ-ರಾವಣ್ಣ ಯೇನ್ ಅಣ್ಣ-ತಮ್ಮಂದ್ರಾ? ಎಂಬ ಆಕಳಿಕೆಯ ಆಲಾಪವನ್ನು ಆಲಿಸುವ ಬದಲು, ಈಗಿನ ರಾಮಜನ್ಮದಿನಾಚರಣೆಗಾಗಿ ಅದೇ ರಘುವರಕಥೆಯ ಕೆಲವೇ ವಿಚಾರಗಳ ಲಘುನೋಟವೊಂದನ್ನು ಇಲ್ಲಿ ತೆಗೆದುಕೊಳ್ಳಲಾಗಿದೆ. ಆ ಕಥೆಯ ಕೆಲವು ಪ್ರಮುಖ … Read more

ಬೆಳಕ ಕನಸ ಬೆನ್ನೇರಿ: ಪ್ರಶಸ್ತಿ ಪಿ.

ಬೀದಿಗೆಲ್ಲಾ ಬೆಳಕೀಯುತ್ತಿದ್ದ ಪಾದರಸ ದೀಪದ ಅಂಚು ಕಪ್ಪುಗಟ್ಟಿತ್ತು. ಕಣ್ಣುರಿಸೋ ಪ್ರಖರ ಬೆಳಕ ಲೆಕ್ಕಿಸದೆ ಅತ್ತಲೇ ದಿಟ್ಟಿಸುವವರಿಗೆ ಆ ಕಪ್ಪೊಂದು ಸಾವರಾಶಿ ಅಂತ ಹೊಳೆಯುತ್ತಿತ್ತು. ಒಳಹೊಕ್ಕಲು ಜಾಗವೇ ಇಲ್ಲವೆಂಬಂತೆ ಭಾಸವಾಗುತ್ತಿದ್ದ ಮರ್ಕ್ಯುರಿ ದೀಪದ ಶಾಖವನ್ನೂ ಲೆಕ್ಕಿಸದೇ ಆ ಹುಳುಗಳು ಅದೇಗೆ ಒಳಹೊಕ್ಕವೋ, ಬೆಳಕ ಜೊತೆಗೇ ಇದ್ದ ಬಿಸಿಗೆ ಸುಟ್ಟು ಸತ್ತವೋ ಮೊದಮೊದಲ ನೋಡುಗನಿಗೆ ಸದಾ ಅಚ್ಚರಿಹುಟ್ಟಿಸುವಂತಿತ್ತು. ಬೆಳಕಿಗೆ ಕಾರಣವ ಹೊತ್ತು ನಿಂತ ಉದ್ದನೆ ಕಂಬಕ್ಕೆ ಕಾಡುತ್ತಿರೋ ಏಕತಾನತೆ, ಎಲ್ಲಾ ಮಲಗಿರುವಾಗ ಎದ್ದಿದ್ದು ಜಗಕೆ ಬೆಳಗ ತೋರೂ ನಿರ್ಲ್ಯಕ್ಷ್ಯಕ್ಕೊಳಗಾಗುತ್ತಿರೋ ಬೇಸರದ … Read more

ಝೆನ್ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಎರಡು ಮೊಲಗಳ ಬೆನ್ನಟ್ಟಿ ಹೋಗುವುದು.  ಕದನ ಕಲೆಗಳ ವಿದ್ಯಾರ್ಥಿಯೊಬ್ಬ ತನ್ನ ಅಧ್ಯಾಪಕನನ್ನು ಸಮೀಪಿಸಿ ಕೇಳಿದ: “ಕದನ ಕಲೆಗಳ ಕುರಿತಾದ ನನ್ನ ಜ್ಞಾನವನ್ನು ಇನ್ನೂ ಉತ್ತಮಗೊಳಿಸಿಕೊಳ್ಳು ಬಯಕೆ ನನ್ನದು. ನಿಮ್ಮಿಂದ ಕಲಿಯುವುದರ ಜೊತೆಯಲ್ಲಿ ಇನ್ನೊಂದು ಶೈಲಿಯನ್ನು ಇನ್ನೊಬ್ಬ ಅಧ್ಯಾಪಕರಿಂದ ಕಲಿಯಬೇಕೆಂದಿದ್ದೇನೆ. ಈ ನನ್ನ ಆಲೋಚನೆಯ ಕುರಿತು ನಿಮ್ಮ ಅನಿಸಿಕೆ ಏನು?” ಗುರುಗಳು ಉತ್ತರಿಸಿದರು: “ ಎರಡು ಮೊಲಗಳ ಬೆನ್ನಟ್ಟಿ ಹೋಗುವ ಬೇಟೆಗಾರ ಯಾವುದೊಂದನ್ನೂ ಹಿಡಿಯುವುದಿಲ್ಲ.” ***** ೨. ಏಕಾಗ್ರತೆ ಬಿಲ್ಲುಗಾರಿಕೆಯ ಅನೇಕ ಸ್ಪರ್ಧೆಗಳಲ್ಲಿ ಗೆದ್ದು ಸರ್ವವಿಜೇತನಾಗಿದ್ದ ಯುವ … Read more

ಚುಟುಕಗಳು: ವೀಣಾ ಭಟ್

ವ್ಯರ್ಥ ಸುಂದರಿಯ ನಡೆಯಲ್ಲಿ  ಸುಗುಣವಿಲ್ಲದಿರೆ  ಆ ಸೌಂದರ್ಯ  ಸುಡುಗಾಡು ಹೊಗೆಯಲ್ಲಿ  ಸುರುಗಿ ಹೂ ಕಂಪು   ಚೆಲ್ದಂತೆ ವ್ಯರ್ಥ.  ಗ್ರಹಚಾರ ಈ ರಾಜಕೀಯ ಮಂತ್ರಿಗಳ ಸರ್ಕಾರ  ರಾಕ್ಷಸರ ಅವತಾರ  ಅವರದೇ ದರ್ಬಾರ  ಹೇಳುವರು ಮಾಡುವೆವು ನಮ್ಮ ಉದ್ದಾರ  ಕೇಳಿ ಪ್ರಶ್ನಿಸಿದರೆ ಇಲ್ಲದ  ಟೆಕ್ಸಾಕಿ ಬಿಡಿಸುವರು ನಮ್ಮ ಗ್ರಹಚಾರ ಹಿಂಗಿದೆ ನೋಡಿ ಸ್ವಾಮೀ ಸಮಾಚಾರ   ಪಜೀತಿ  ನನ್ನುಡುಗಿ ಪಾರ್ವತಿ  ನಾ ಮಾಡ್ತಿದ್ದೆ ತುಂಬಾ ಪಿರೂತಿ  ಅವಳ ಚೆಂದದ ಗೆಳತಿ ಮಾಲತಿ   ಕಂಡಾಗಿನಿಂದ ನಾನಾದೆ ಮಾರುತಿ  ನನ್ನುಡುಗಿ … Read more

ಬಿಡುಗಡೆಗೆ ಹಂಬಲಿಸುವ ಮಹಿಳಾ ಧ್ವನಿಯ ’ದ್ಯೂತಭಾರತ’: ಹಿಪ್ಪರಗಿ ಸಿದ್ಧರಾಮ

ಮಹಾಭಾರತ ಕಥನ ಎಲ್ಲರಿಗೂ ಸಾಮಾನ್ಯವಾಗಿ ಗೊತ್ತಿರುವಂಥದ್ದೇ. ಆಯಾ ಕಾಲಘಟ್ಟದಲ್ಲಿ ಸೃಜನಶೀಲತೆಯ ವಿವಿಧ ಆಯಾಮಗಳೊಂದಿಗೆ ವಿವಿಧ ಪ್ರಕಾರಗಳಲ್ಲಿ ಪ್ರಕಟಗೊಳ್ಳುತ್ತಲೇ ಇದೆ. ಈ ಮಹಾಭಾರತದಲ್ಲಿ ಹೆಚ್ಚಾಗಿ ಮೋಸ, ಕುತಂತ್ರ, ಶೋಷಣೆ, ಅಪಮಾನ, ಹಾದರ, ಬಹುಪತಿತ್ವ, ಬಹುಪುತ್ರತ್ವ, ಮಂತ್ರ ಜಪಿಸಿದ ಕ್ಷಣ ಮಾತ್ರದಲ್ಲಿ ಜನಿಸುವ ವೀರರು, ಹೀನ ರಾಜಕಾರಣ, ಸೇಡು, ಕಿಡಗೇಡಿತನ, ಹೊಣೆಗೇಡಿತನ, ರಸಿಕತನ, ಹುಂಬತನ, ಸ್ನೇಹ ಹೀಗೆ ಹಲವಾರು ಸಂಗತಿಗಳು ವಿಜೃಂಭಿಸಿರುವುದು ಸುಳ್ಳೇನಲ್ಲ. ಇಂತಹ ಮಹಾಭಾರತದಲ್ಲಿ ಶಕುನಿ ಮಾಮಾನ ಕುತಂತ್ರದಿಂದ ಪಗಡೆಯಾಟದ ಜೂಜಿನಲ್ಲಿ ಸೋಲುಂಡ ಪಾಂಡವರು ಕರಾರಿನಂತೆ ವನವಾಸ-ಅಜ್ಞಾತವಾಸ ಅನುಭವಿಸುತ್ತಾರೆ. … Read more

ಕುಮಧ್ವತಿಯ ತಟದಲ್ಲಿ: ಶಿವಕುಮಾರ ಚನ್ನಪ್ಪನವರ

ಕುಮಧ್ವತಿಯ ಸೋದರಿಗೆ, ಪ್ರೀತಿಯ ಭಾಗೀರಥಿಗೆ………… ತಟ್ಟಕ್ಕನೇ ಅಲೆಯೆಬ್ಬಿಸಿ ಮರೆಯಾಗುವ ಮೀನು ತುಂಬಿ ತುಳುಕಾಡುವ ಕುಮಧ್ವತಿಯ ದಡದಲ್ಲಿ ನೀನು ಕಟ್ಟುತ್ತಿದ್ದ ಗುಬ್ಬಚ್ಚಿ ಗೂಡ ಅಳಿಸುವ ಹುನ್ನಾರ ನಡೆಸಿದಂತೆ ಕಾಣುತ್ತದೆ.  ರಾತ್ರಿಯೆಲ್ಲಾ ಕಣ್ಣ ರೆಪ್ಪೆ ಮುಚ್ಚುತ್ತಿದ್ದಂತೆ ಕಣ್ಣ ಪರದೆಯ ಪಟಲದಲ್ಲಿ ಕುಣಿಯುವ ನಿನ್ನ ನೆನಪುಗಳು ಚಾಪೆಯಡಿ ಕುಳಿತ ತಿಗಣೆಗಳಿಗೂ ಅಳು ಬರಿಸುವಂತಿರುತ್ತದೆ. ಒಬ್ಬಂಟಿಯಾಗಿ ಬಿಚ್ಚಿ ಹರವಿಕೊಂಡ ಅವೇ ನೆನಪುಗಳ ಮಧ್ಯದಿಂದಲೇ ನಿನ್ನ ಸುಳಿವು ಗುಂಗಾಡಿ ಹುಳುವಿನಂತೆ ಗುಯ್ ಗುಟ್ಟುತ್ತಾ ತಲೆ ಹೊಕ್ಕು ದೇಹದ ಯಾವ ಭಾಗವನ್ನು ಬಿಡದೇ ಸಮಾಜವೆಲ್ಲದರಿಂದ ದೂರವಾಗಿ … Read more

ಪರಿಸರದ ವಿರುದ್ಧ ಜಾಗತಿಕ ಯುದ್ಧ: ಅಖಿಲೇಶ್ ಚಿಪ್ಪಳಿ

ಕೊಡಲಿಯೊಂದು ತಾನಾಗಿಯೇ ಹೋಗಿ ಯಾವುದೇ ಮರವನ್ನು ಕಡಿದ ದಾಖಲೆಯಿಲ್ಲ. ಆದರೆ, ಬೀಜವೊಂದು ತಾನಾಗಿಯೇ ಮಣ್ಣಿನಲ್ಲಿ ಸೇರಿ, ಮರುಹುಟ್ಟು ಪಡೆದ ದಾಖಲೆಗಳು ಎಲ್ಲೆಂದರಲ್ಲಿ ಸಿಗುತ್ತದೆ. ಅಂದರೆ, ನಾಶ ಮಾಡಲು ಪ್ರೇರಕ ಶಕ್ತಿ ಬೇಕು. ಹುಟ್ಟು-ಮರುಹುಟ್ಟು ಈ ಪ್ರಕ್ರಿಯೆ ನಿಸರ್ಗದಲ್ಲಿ ತನ್ನಿಂದ ತಾನೇ ಸಂಭವಿಸುತ್ತದೆ. ಬಿಲ್ಲು-ಬಾಣಗಳು ಖುದ್ದು ಹೋಗಿ ಬೇಟೆಯಾಡುವುದಿಲ್ಲ. ಬಂದೂಕಿನಿಂದ ಗುಂಡು ತಾನಾಗಿಯೇ ಸಿಡಿಯುವುದಿಲ್ಲ. ಇದಕ್ಕೆ ಇನ್ನೊಬ್ಬರ ಸಹಾಯ ಬೇಕು, ಗುರಿ ಇರಬೇಕು, ಶ್ರಮ ಬೇಕು. ಪ್ರಕೃತಿಯ ಸೃಷ್ಟಿಯಲ್ಲಿ ಸಹಜವಾಗಿ ನಡೆಯುವ ಕ್ರಿಯೆಗಳಿಗೆ ಶ್ರಮ ಬೇಕಿಲ್ಲ. ಅಡಚಣೆ-ಅಪಾಯಗಳಿಲ್ಲದಿದ್ದರೆ, ನಿಸರ್ಗದಲ್ಲಿ … Read more

ಸಾಮಾನ್ಯ ಜ್ಞಾನ (ವಾರ 72): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಮೂರ್ತಿದೇವಿ ಪ್ರಶಸ್ತಿ ಪಡೆದ ಪ್ರಥಮ ಕನ್ನಡಿಗ ಯಾರು? ೨.    ಜಿ.ಎಸ್.ಎಂ (GSM)  ನ ವಿಸ್ತೃತ ರೂಪವೇನು? ೩.    ಅಧಿಕ ಪ್ರೋಟೀನ್ ಹೊಂದಿರುವ ಬೆಳೆ ಯಾವುದು? ೪.    ಗುರು ಮಹಿಪತಿ ಇದು ಯಾರ ಅಂಕಿತನಾಮವಾಗಿದೆ? ೫.    ೧೯೯೭ – ೨೦೦೩ರ ಸಾಲಿನ ಭಾರತದ ರಿಸರ್ವ್ ಬ್ಯಾಂಕಿನ ಗವರ್ನರ್ ಯಾರಾಗಿದ್ದರು? ೬.    ಸೋಡಾ ವಾಟರ್‌ನಲ್ಲಿರುವ ಆಮ್ಲ ಯಾವುದು? ೭.     ಕಂದು ಕ್ರಾಂತಿ ಯಾವುದಕ್ಕೆ ಸಂಬಂಧಿಸಿದೆ? ೮.    ೧೯೯೪ ರಲ್ಲಿ ರಾಮ್ ಜೇಠ್ಮಲಾನಿ ಸ್ಥಾಪಿಸಿದ ಪಕ್ಷ ಯಾವುದು? … Read more