ಪಂಜು ಕಾವ್ಯಧಾರೆ

ಬೆಳಗಲಿ ದೀಪ *** ಹೊತ್ತಲಿ ದೀಪ ಹೊತ್ತಿ ಉರಿಯುತ್ತಿರುವ ಭ್ರಷ್ಟರ ನಡುವೆ ಹೊತ್ತೇರುವದರಲ್ಲಿ ಹೊಸತನವ ಹೊಮ್ಮಿಸಲಿ ಬೆಳಗಲಿ ದೀಪ ಬಡವರ ಬಾಗಿಲಲಿ ಗುಡಿಸಲುಗಳಲಿ ಬೆಳಕಾಗುವದರೊಳಗೆ ಬದುಕು ಕತ್ತಲಿಂದ ದೂರವಾಗಲಿ ವಿಜೃಂಭಿಸಲಿ ದೀಪ ಸೋಲನ್ನುಂಡು ಹತಾಸೆಗೊಳಗಾದ ಮನಸುಗಳಲಿ ಗೆದ್ದು ಬೀಗುವವರ ಸೊಕ್ಕುಮುರಿದು ಬಿದ್ದಲ್ಲೇ ಬಿದ್ದಿರುವ ವೃದ್ಧರ ಬಾಳಲಿ ಝೇಂಕರಿಸಲಿ ದೀಪ ಹಣದ ಆಸೆಗೆ ಹೆಣವ ಕೆಡವಿದವರ ಚಿತೆಯೆದುರು ಹೆಣ್ಣಿನ ದೇಹಕೆ ಕಣ್ಣ ಹಾಕುವ ಕಾಮುಕರ ಶವದೆದುರು ಸುಡುಗಾಡಲಿ ಶೃಂಗಾರಗೊಳ್ಳಲಿ ದೀಪ ಸಿಂಧೂರವಿಲ್ಲದ ಹಣೆಗಳಮೇಲೆ ಕಣ್ಣುಗಳಿಲ್ಲದ ಕುರುಡರೆದೆಯಲಿ ಬಣ್ಣವಿರದ ಬದುಕಿನ … Read more

ರಾಜ್ಯೋತ್ಸವ: ಪಾರ್ಥಸಾರಥಿ ಎನ್

ನಾಯಕ ನಟ ರೂಪೇಶನ ಮಾತು ಮುಂದುವರೆದಿತ್ತು, " ಕನ್ನಡ ನಾಡು ನುಡಿ ಜಲ ಭೂಮಿಗಾಗಿ, ನನ್ನ ಈ ಜನ್ಮವನ್ನು ಮೀಸಲಾಗಿಡುವೆ.  ನನ್ನ ಪ್ರೀತಿಯ ಅಣ್ಣ ತಮ್ಮಂದಿರೆ, ಇಂದು ನಾನು ಈ ನಾಡಿನಲ್ಲಿ  ಅನ್ನ ತಿನ್ನುತ್ತಿರುವೆ, ನಿಮ್ಮ ನಡುವೆ ಒಬ್ಬ ನೆಚ್ಚಿನ ನಟನಾಗಿ ನಿಂತಿರುವೆ ಎನ್ನುವದಾದರೆ ಅದಕ್ಕೆ ಈ ನಾಡಿನ ಸಮಸ್ತ ತಾಯಿಯರ ಪ್ರೀತಿ, ಅಕ್ಕ ತಂಗಿಯರ ವಾತ್ಸಲ್ಯ ಕಾರಣ. ಸ್ವಂತ ಅಣ್ಣ ತಮ್ಮಂದಿರು ನನ್ನ  ಜೊತೆ ಇರಲಿಲ್ಲ, ಆದರೆ ನೀವು ನನ್ನ ಕೈ ಬಿಡಲಿಲ್ಲ, ನನಗೆ ಅಣ್ಣನಂತೆ … Read more

ಯಮಕಿಂಕರರು: ಒಂದು ಭಯಾನಕ ಸತ್ಯಕಥೆ (ಭಾಗ 9): ಪ್ರಸಾದ್ ಕೆ.

ಇಲ್ಲಿಯವರೆಗೆ ಈ ಕುಖ್ಯಾತ ಪ್ರಕರಣಗಳಿಗೆ ಸಂಬಂಧಪಟ್ಟಂತೆ ನ್ಯಾಯಮೂರ್ತಿ ಆರ್ಚಿ ಕ್ಯಾಂಪ್ಬೆಲ್ ರ 1996 ರ ವಿಸ್ತøತ ವರದಿಯನ್ನು ಅವಲೋಕಿಸಿದರೆ ಈ ಪ್ರಕರಣಗಳ ಹಲವು ಭಯಾನಕ ರಹಸ್ಯಗಳು ಒಂದೊಂದಾಗಿ ತೆರೆದುಕೊಳ್ಳುವುದು ಸತ್ಯ.  ಸ್ಕಾರ್-ಬೋರೋದ ಸರಣಿ ಅತ್ಯಾಚಾರಗಳ ಪ್ರಕರಣಗಳ ಮೇಲೆ ಮೊದಲು ಸಂಕ್ಷಿಪ್ತವಾಗಿ ಕಣ್ಣಾಡಿಸೋಣ. ಸ್ಥಳೀಯ ಮೆಟ್ರೋ ಟೊರಾಂಟೋ ಪೋಲೀಸ್ ಇಲಾಖೆಯು ಶಂಕಿತ ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆಗೊಳಿಸಿದ ನಂತರ ಮಾಹಿತಿಗಳ ಮಹಾಪ್ರವಾಹವೇ ಹಲವು ಮೂಲಗಳಿಂದ ಹರಿದುಬಂದಿತ್ತು. ಮೊದಲೇ ಹೇಳಿದಂತೆ 1990 ರ ಅಕ್ಟೋಬರ್ ಅಂತ್ಯದ ಅವಧಿಯಲ್ಲಿ ಬರೋಬ್ಬರಿ ಒಂಭೈನೂರು ಹೆಸರುಗಳು … Read more

ಚಿಕ್ಕ ಬಿಲಗುಂಜಿಯ ಕಮಲೇಶ್ವರ ದೇವಸ್ಥಾನ: ಪ್ರಶಸ್ತಿ

ಹೋಗೋದು ಹೇಗೆ ?  ಸಾಗರ ತಾಲ್ಲೂಕಿನ ಸುತ್ತಮುತ್ತಲಿರೋ ಕೆಳದಿ,ಇಕ್ಕೇರಿ,ಕಲಸೆ, ಹೊಸಗುಂದ ಮುಂತಾದ ಇತಿಹಾಸ ಪ್ರಸಿದ್ಧ ತಾಣಗಳ ಬಗ್ಗೆ ಕೇಳಿರುತ್ತೀರಿ. ಆದರೆ ಸಾಗರಕ್ಕೆ ಹತ್ತಿರದಲ್ಲೇ ಹನ್ನೊಂದನೇ ಶತಮಾನದ ದೇವಸ್ಥಾನವೊಂದಿದೆ ಅನ್ನೋದು ಹೆಚ್ಚಿನವರಿಗೆ ತಿಳಿದಿರಲಾರದು. ಅದೇ ಸಾಗರದಿಂದ ಸುಮಾರು ೨೦ ಕಿ.ಮೀ ದೂರದಲ್ಲಿರುವ ಚಿಕ್ಕ ಬಿಲಗುಂಜಿಯ ಕಮಲೇಶ್ವರ ದೇವಸ್ಥಾನ. ಸಾಗರದಿಂದ ಚಿಕ್ಕಬಿಲಗುಂಜಿಗೆ ಹೋಗೋಕೆ ಎರಡು ಮಾರ್ಗಗಳಿವೆ. ಸಾಗರದಿಂದ ಶಿವಮೊಗ್ಗಕ್ಕೆ ಹೋಗೋ ಮಾರ್ಗದಲ್ಲಿ ಸಿಗೋ ತ್ಯಾಗರ್ತಿ ಕ್ರಾಸಿನಲ್ಲಿ ಹೋಗೋದು ಮೊದಲನೇ ಮಾರ್ಗವಾದರೆ ನಂತರ ಸಿಗೋ ಕಾಸ್ಪಾಡಿ ಎಂಬ ಊರಿನ ಬಳಿ ಎಡಕ್ಕೆ … Read more

ಆರೋಗ್ಯದ ಮೇಲೆ ಸಕಾರಾತ್ಮಕ ಮನೋಭಾವದ ಪರಿಣಾಮ: ವೈ. ಬಿ. ಕಡಕೋಳ

ಮನುಷ್ಯನ ನಡೆ-ನುಡಿ ಆತನ ಮನೋಭಾವ, ಕ್ರಿಯೆ, ಪ್ರತಿಕ್ರಿಯೆಗಳು ಒಂದೇ ರೀತಿ ಇರುವುದಿಲ್ಲ. ಒಂದು ಸಾಮಾನ್ಯ ಪ್ರಚೋದನೆಗೆ ಹತ್ತಾರು ಜನ ಹತ್ತಾರು ರೀತಿಯ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಬಹುದು. ಉದಾಹರಣೆಗೆ ಒಂದು ಮಗು ಅಳುತ್ತಿದ್ದರೆ ಕೆಲವರು "ಅಯ್ಯೋ ಪಾಪ ಎನ್ನಬಹದು. ಇನ್ನು ಕೆಲವರು “ಛಿ ಏನು ಅನಿಷ್ಟ ಎಷ್ಟು ಅಳುತ್ತೆ” ಎನ್ನಬಹುದು. ಇನ್ನು ಕೆಲವರು “ಪಾಪ ಆ ಮಗುವನ್ನು ರಮಿಸಬೇಕು” ಎನ್ನಬಹುದು. ಒಬ್ಬರು ಮಗುವಿನ ಪಕ್ಕದಲ್ಲಿ ಕುಳಿತು ರಮಿಸಲು ಯತ್ನಿಸಬಹುದು. ಹೀಗೆ ಕೇವಲ ಒಂದು ಘಟನೆ ಹತ್ತಾರು ಜನರಲ್ಲಿ ಹತ್ತಾರು ಯೋಚನೆಗಳನ್ನು … Read more

ಆಧುನಿಕ ಬೆಳವಣಿಗೆಯಿಂದ ಮಾನವೀಯ ಮೌಲ್ಯಗಳ ಅವನತಿ: ಶಿವಣ್ಣ ಎಸ್.ಕೆ. 

ಇಂದು ಆಧುನಿಕತೆಯು ಅತ್ಯಂತ ವೇಗದಲ್ಲಿ ಬೆಳೆಯುತ್ತಿರುವುದು ನಿಜಕ್ಕೂ ಸಂತೋಷದ ವಿಷಯ. ಆದರೆ ಈ ತೀವ್ರಗತಿಯ ಆಧುನಿಕತೆಯ ಬೆಳವಣಿಗೆಯಿಂದಾಗಿ ಭಾರತದಲ್ಲಿ ಆಧುನಿಕತೆಯ ಬಿಸಿ (ಶಾಖ) ಹೆಚ್ಚು ತಟ್ಟಿರುವುದು ನಗರ/ಪಟ್ಟಣಗಳಲ್ಲಿ ಎಂದು ಹೇಳಬಹುದು. ಇಂದು ಸಾಮಾಜಿಕ ಸಂಬಂಧಗಳು ಗುರು-ಹಿರಿಯರು, ತಂದೆ-ತಾಯಂದಿರು, ಸ್ತ್ರೀಯರು ತಮ್ಮ ಸ್ಥಾನಮಾನಗಳನ್ನು ಕಳೆದುಕೊಳ್ಳುತ್ತಿರುವುದು ನಿಜಕ್ಕೂ ವಿಷಾದನೀಯ ಸಂಗತಿಯಾಗಿದೆ. ಸ್ವದೇಶಿ ಮತ್ತು ವಿದೇಶಿ ಚಾನೆಲ್‍ಗಳು ಮನೋರಂಜನೆಯ ಹೆಸರಿನಲ್ಲಿ ಬಿತ್ತರಿಸುತ್ತಿರುವ ಅಶ್ಲೀಲ ಚಿತ್ರಗಳಿಂದಾಗಿ ಭಾರತೀಯ ಸಂಸ್ಕøತಿಯ ಸಂಕೇತಗಳಾದ ಸೀರೆ, ಕುಂಕುಮ, ಹಸಿರು ಬಳೆಗಳು ಇಂದು ಕಾಣಸಿಗುವುದು ಅಪರೂಪವಾಗಿದೆ. ಹೀಗೆಯೇ ಮುಂದುವರೆದರೆ … Read more

ಭರತ ಮಾತೆಯ ಪುಣ್ಯ ಭೂಮಿಯನ್ನು ರಕ್ತದಿಂದ ತೋಯಿಸದಿರಿ ಸಹೋದರರೆ: ಸಿದ್ದುಯಾದವ್ ಚಿರಿಬಿ…

ನಿನ್ನೆ ಒಂದು ಕೆಲಸದ ವಿಷಯವಾಗಿ ಕೂಡ್ಲಿಗಿಯ ಸಾರ್ವಜನಿಕ ಅಸ್ಪತ್ರೆಗೆ ಹೋಗಿದ್ದೆ. ನಾನು ಹೋದಾಗ ಡಾಕ್ಟರ್ ಬಂದಿರಲಿಲ್ಲ. ಅದಕ್ಕಾಗಿ ಅಸ್ಪತ್ರೆಯ ಹೊರಗಡೆ ಕುಳಿಯು ಕಾಯ್ತಿದ್ದೆ. ಒಬ್ಬ ವ್ಯೆಕ್ತಿ ಬಂದು "ನೀವು ಸಿದ್ದುಯಾದವ್ ಅಲ್ವಾ?" ಅಂದ. 'ಹೌದು' ಎಂದೆ. ಅವ್ನು ಮರುಮಾತನಾಡದೆ ಯಾರ್ಗೊ ಪೋನ್ ಮಾಡ್ತ ಹೊರಟರಹೋದ. ಸ್ವಲ್ಪ ಸಮಯದ ನಂತರ ಇಬ್ಬರು ಬೈಕ್ ಮೆಲೆ ಬಂದು " ಸಿದ್ದುಯಾದವ್ " ಅಂದ್ರು ಹೌದು ಎಂದೆ. 'ನಿಮ್ಮ ಹತ್ತಿರ ಸ್ವಲ್ಪ ಮಾತಾಡ್ಬೆಕು ಬರ್ತಿರಾ!' ಅಂದ್ರು. ಯಾಕೆ ಎಂದೆ. ಪ್ಲೀಜ್ ಬನ್ನಿ … Read more

ಆ ಒಂದು ಪ್ರಶ್ನೆ: ಕೆ ಟಿ ಸೋಮಶೇಖರ ಹೊಳಲ್ಕೆರೆ

ಎಲ್ಲಾ  ಸಮಾಜಗಳಿಗೂ ಆದರ್ಶ ಪುರಷನಾದ, ಪುರಷೋತ್ತಮನಾದ ರಾಮನ ಆದರ್ಶದ ಕಥೆ ಅನನ್ಯ. ಆ ಕಥೆ ಸೊಗಸಾಗಿ ರಚಿಸಿದ ವಾಲ್ಮೀಕಿ ಧನ್ಯ. ಅನುಸರಿಸಿ ಆದರ್ಶವಾದ ಭಾರತೀಯ ಸಮಾಜ ಪರಮಧನ್ಯ. ರಾಮಾಮಾಯಣ ವಿಶ್ವದ ಮಹಾಕಾವ್ಯಗಳಲ್ಲಿ  ಒಂದು. ರಾಮಾಯಣ ಎಂದರೆ ' ರಾಮನ ಚರಿತೆ ' ಎಂದು ಅರ್ಥ. ' ರಾಮ '  ಎಂದರೆ  ಮನೋಹರ, ಸುಂದರ, ರಂಜಿಸು ಎಂಬ ಅರ್ಥಗಳಿವೆ. ' ಆಯನ '  ಎಂದರೆ ಚರಿತೆ, ಗತಿ, ಸ್ಥಾನ ಎಂಬ ಅರ್ಥಗಳಿವೆ. ಅವೆರಡು ಪದಗಳು ಸಮಾಸವಾಗಿ ರಾಮಾಯಣ ಪದವಾಗಿದೆ. … Read more

ದೋಸ್ತಿ ಖಾತೆಯವರಿಂದ ಕತೆ ಮಾತು ಆಹ್ವಾನ

ಬೆಳಗಾವಿಯಲ್ಲಿ ಒಂದಷ್ಟು ಕತೆಗಾರರು ಸೇರಿ ಒಬ್ಬರ ಕತೆಗಳ ಬಗ್ಗೆ ಇನ್ನೊಬ್ಬರು ಮಾತನಾಡುವ ವಿಶಿಷ್ಟ "ಕತೆ ಮಾತು" ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.  ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಜೊತೆಗೆ ಲಗತ್ತಿಸಲಾಗಿದೆ.   ಕಾರಣ, ಸಹೃದಯರಾದ ತಾವು ಕಾರ್ಯಕ್ರಮಕ್ಕೆ ಆಗಮಿಸಬೇಕಾಗಿ ವಿನಂತಿ. ಕಾರ್ಯಕ್ರಮದ ವಿವರಗಳು ಕೆಳಗಿನಂತಿವೆ. 13ನೇ ನವೆಂಬರ್ 2016,  ಕೇಂದ್ರ ಗ್ರಂಥಾಲಯ, ಡಿ.ಸಿ. ಕಂಪೌಂಡ್, ಬೆಳಗಾವಿ ಕಾರ್ಯಕ್ರಮದ ಆಶಯ: ಸಮಕಾಲೀನ ಕತೆಗಾರ ಗೆಳೆಯರು ಕೂತು ಪರಸ್ಪರರ ಕೃತಿಗಳ ಬಗ್ಗೆ ಅನಿಸಿಕೆ ಹಂಚಿಕೊಳ್ಳುವ ತನ್ಮೂಲಕ ಹೊಸ ಹೊಳಹುಗಳನ್ನು ಅರಿಯುವ ಚಿಕ್ಕ ಪ್ರಯತ್ನ.  ಒಬ್ಬರು … Read more