ಪಂಜು ಕಾವ್ಯಧಾರೆ

ಕಾಗದದ ನಾವೆ ತೇಲಿ ಬಿಟ್ಟಿವೆ ದೋಣಿಗಳ ಪುಟ್ಟ ಕನಸು ಕೈಗಳು ತೇಲಿ ಸಾಗಿದಷ್ಟೂ ಹರುಷ ಕಂಗಳಲಿ ಪ್ರತಿಫಲಿಸುವ ತಿಳಿನೀರು ಗಾಳಿಗೆ ಹೊಯ್ದಾಡುತ್ತ ಸಾಗುತಿವೆ ಕಾಗದದ ನಾವೆಗಳು ಅರಿಯದ ಗುರಿಯೆಡೆಗೆ ಹೊಳೆಯ ಹರಿವಿನೆಡೆ ಮೌನ ಪಯಣ ಅಂದು ನಾನೂ ಕಳಿಸಿದ್ದೆ ದೋಣಿಗಳ ಹೊಳೆಗುಂಟ ಸಾಗಿ ಅದರ ಹಿಂದಿಂದೆ ಕಲ್ಲುಗಳ ತಡವಿ ಗಿಡಗಂಟಿಗಳ ದಾಟಿ ದೂರ ದೂರ ಯಾನ ಕೆಲವು ಮುಳುಗಿ ಕೆಲವು ತೇಲಿ  ಕಣ್ ಹಾಯ್ದಷ್ಟು ದೂರ ನೋಡಿ ಮತ್ತಷ್ಟು ದೋಣಿಗಳು ಹೆಗಲ ಚೀಲದಲ್ಲಿ ನಾಳೆಯ ಪಯಣಕೆ ಸಜ್ಜಾಗಿ … Read more

ನಿರ್ಧಾರ!: ಎಸ್.ಜಿ.ಶಿವಶಂಕರ್

ಕೊನೆಗೂ ಸದಾನಂದರು  ನಿರ್ಧಾರ ತೆಗೆದುಕೊಂಡುಬಿಟ್ಟಿದ್ದರು. ಯಾವುದಕ್ಕಾಗಿ ಮೂವತ್ತು ವರ್ಷಗಳಿಂದ ಹಿಂಜರಿಯುತ್ತಿದ್ದರೋ ಅದನ್ನಿಂದು ಹತ್ತಿಕ್ಕಿದ್ದರು! ಜೀವನದಲ್ಲಿ ಎಂದೂ ತೆಗೆದುಕೊಳ್ಳದ ಮಹತ್ವದ ನಿರ್ಧಾರವನ್ನು ಸದಾನಂದರು ತೆಗೆದುಕೊಂಡಿದ್ದರು. ಅವರ ನಿರ್ಧಾರ ಯಾವ ಸ್ವರೂಪದ್ದು ಎಂಬುದರ ಕಲ್ಪನೆ ಮನೆಯವರಿಗೆ ಇರಲಿಲ್ಲ;  ಶ್ಯಾಮಲೆಗೂ  ಇರಲಿಲ್ಲ. ಹಾಗೇನಾದರೂ ಗೊತ್ತಾಗಿಬಿಟ್ಟಿದ್ದರೆ ಅವರ ಕಣ್ಣಿನಲ್ಲಿ ಸದಾನಂದರು ಏಕದಂ ವಿಲನ್ ಅಗಿಬಿಡುತ್ತಿದ್ದರು. ಎಲ್ಲರೂ ಹಿಡಿಹಿಡಿ ಶಾಪ ಹಾಕುತ್ತಿದ್ದುದರಲ್ಲಿ ಸಂದೇಹವೇ ಇರಲಿಲ್ಲ. ಇವೆಲ್ಲಾ ಸದಾನಂದರಿಗೆ ಗೊತ್ತಿತ್ತು. ಅದಕ್ಕೇ ಇಷ್ಟು ವರ್ಷ ಅದನ್ನೆಲ್ಲ ಒಳಗೇ ಹಿಡಿದಿಟ್ಟಿದ್ದರು. ಮೂವತ್ತು ವರ್ಷಗಳಿಂದ ಯಾವುದಕ್ಕೆ ಹಿಂದೇಟು ಹಾಕುತ್ತ … Read more

ಹಾಗೇ ಸುಮ್ಮನೆ ಅವನಿಗೊಂದಷ್ಟು ಅವಳ ಮಾತುಗಳು: ಅನುರಾಧ ಪಿ. ಸಾಮಗ

ಬಿರುಸಾದ ಗಾಳಿ. ಹಿತವೂ ಅಲ್ಲದ ಅಹಿತವೂ ಅಲ್ಲದ ಶೈತ್ಯ. ಬಿಸಿಲ ಸುಳಿವೇ ಇಲ್ಲದೊಂದು ಹಗಲು. ಸುತ್ತಲಿನ ಸಂಬಂಧಗಳ ಸಂತೆಯಲ್ಲಿ ನನ್ನ ಇರುವಿಕೆ ಮತ್ತದರ ಮೌನ, ಆಪ್ತತೆಯೆಡೆ ನನದೊಂದು ವಿಚಿತ್ರ ಉದಾಸೀನ ಇವೆಲ್ಲವೂ ನಿಜವಾಗಲೂ ಜಾಡ್ಯಕ್ಕೋ, ಮಂಪರಿಗೋ ಎಡೆ ಮಾಡಿಕೊಡಬೇಕಾಗಿತ್ತು. ಆದರೆ ಇಂದು ಮನದಲ್ಲಿ ಹುಡುಕಿದರೂ ಅಸಹನೀಯವಾದದ್ದಕ್ಕೆ ಒಂದಿಷ್ಟೂ ಜಾಗವಿಲ್ಲ. ಯಾಕಿರಬಹುದು?! ಕ್ಷಣಕ್ಕೊಂದಷ್ಟರಂತೆ ಹಲವು ವಿಷಯಗಳು ಮನಃಪಟಲದಲ್ಲಿ ಹಾದುಹೋದವು. ಆದರೆ ಮುಚ್ಚಿದ ಕಣ್ಣ ಮುಂದಿದ್ದುದೊಂದೇ ಅಸ್ಪಷ್ಟ ಬಿಂಬ, ಅದು ನಿನ್ನದು. ಸುಂದರಸ್ವಪ್ನವಾಗಬಹುದಾದದ್ದು ಎಷ್ಟು ಹೊತ್ತಿಗೆ ಮುಗಿದೀತೋ ಅನ್ನುವ ಭಯಂಕರ … Read more

ಪೌರಾಣಿಕ ಸ್ತ್ರೀ ಪಾತ್ರಗಳಲ್ಲಿ ಸ್ತ್ರಿ ಶೋಷಣೆಯ ವಿರುದ್ಧ ಕಹಳೆ: ನಾಗರೇಖಾ ಗಾಂವಕರ

ಜಗತ್ತು ಬದಲಾಗುತ್ತಿದೆ. ಬದಲಾಗುತ್ತಿರುವ ವೈವಸ್ಥೆಯಲ್ಲಿ  ಕಾಲಚಕ್ರದ ಒಂದು ಸುತ್ತು ಈಗಾಗಲೇ ಸುತ್ತಿಬಂದಂತಾಗಿದೆ. ಆಧುನಿಕ ಮೂರನೇ ಜಗತ್ತಿನ ಸ್ತ್ರೀಯರು ಪುರಾಣ ಪಾತ್ರಗಳ ಆದರ್ಶ ಪ್ರತಿರೂಪಗಳ ಧರಿಸಬಯಸುವುದಿಲ್ಲ. ಹಾಗಿದ್ದು ಇಂದಿನ ಪುರುಷ ವಿರಚಿತ ಸಾಹಿತ್ಯದಲ್ಲಿಯೂ ಸ್ತ್ರೀ ಪಾತ್ರಗಳು ಉನ್ನತ ಮೌಲ್ಯಗಳ ಪ್ರತಿಬಿಂಬಿಸುವ ಪಾತ್ರಗಳಾಗಿ ತನ್ನ ತ್ಯಾಗದಿಂದ ಇತರರ ಉದ್ದರಿಸುವ ಅಪರೂಪದ ದೇವತಾ ಸ್ವರೂಪದ ಪ್ರತಿಮೆಗಳಾಗಿ ಮೂಡಿಬರುತ್ತಲೇ ಇವೆ. ಪ್ರಾಚೀನ ಪರಂಪರೆಯಲ್ಲಿ  ಹೆಣ್ಣನ್ನು ದೇವತೆಯಾಗಿಸಿ, ಶಕ್ತಿಯ ಪ್ರತೀಕವಾಗಿಸಿ ಚಿತ್ರಿಸಿದ ಹತ್ತು ಹಲವು ಪಾತ್ರಗಳೂ ಇವೆ. ತನ್ನ ಸಹನೆಗೆ, ಹೆಸರಾದ ಹೆಣ್ಣು  ಆತ್ಮಾಭಿಮಾನಕ್ಕೆ … Read more

ಹಿಮಾಲಯವೆಂಬ ಸ್ವರ್ಗ (ಭಾಗ 6): ವೃಂದಾ ಸಂಗಮ್

ಇಲ್ಲಿಯವರೆಗೆ  ಸಾಯಂಕಾಲ ಹೃಷಿಕೇಶಕ್ಕೆ. ಇದು ಭಾರತದ ಉತ್ತರಾಖಂಡ ರಾಜ್ಯದ ಡೆಹ್ರಾಡೂನ್ ಜಿಲ್ಲೆಯಲ್ಲಿರುವ ಒಂದು ಪಟ್ಟಣ. ಹಿಮಾಲಯಕ್ಕೆ ಹೆಬ್ಬಾಗಿಲೆನಿಸಿಕೊಳ್ಳುತ್ತದೆ ಹೃಷಿಕೇಶ ವಿಷ್ಣುವಿನ ಒಂದು ಹೆಸರು. ಇದರ ಅರ್ಥ ಇಂದ್ರಿಯಗಳ ಒಡೆಯ ಎಂಬುದಾಗಿದೆ. ಈ ಸ್ಥಳದಲ್ಲಿ ರೈಭ್ಯ ಋಷಿಯ ತಪಸ್ಸಿಗೆ ಒಲಿದು ವಿಷ್ಣು ಹೃಷಿಕೇಶನಾಗಿ ಪ್ರತ್ಯಕ್ಷನಾದನೆಂದು ಒಂದು ಕಥೆಯಿದೆ.  ಸ್ಕಂದ ಪುರಾಣದಲ್ಲಿ ಈ ಸೀಮೆಯು ಕುಬ್ಜಾಮ್ರಕ ಎಂದು ಹೆಸರಿಸಲ್ಪಟ್ಟಿದೆ. ಐತಿಹಾಸಿಕವಾಗಿ ಹೃಷಿಕೇಶ ಕೇದಾರ ಖಂಡದ ಭಾಗ. ಇಂದಿನ ಗಢ್ವಾಲ್ ಪ್ರದೇಶವು ಹಿಂದೆ ಕೇದಾರ ಖಂಡ ವೆಂದು ಕರೆಯಲ್ಪಡುತ್ತಿತ್ತು.         … Read more

ಕಳ್ಳನ ಕಥೆ: ಶ್ರೀಮಂತ ಯನಗುಂಟಿ

ಮೂಲ: ರಸ್ಕಿನ್ ಬಾಂಡ್ ಕನ್ನಡಕ್ಕೆ: ಶ್ರೀಮಂತ ಯನಗುಂಟಿ ರೋಮಿಗೆ ಭೇಟಿಯಾದಾಗ ನಾನಿನ್ನೂ ಕಳ್ಳನಾಗಿದ್ದೆ. ಕೇವಲ ಹದಿನೈದು ವರ್ಷದವನಾಗಿದ್ದರೂ ಕಳ್ಳತನದಲ್ಲಿ ನಾನೊಂದು ಅನುಭವಿ ಮತ್ತು ಯಶಸ್ವೀ ಹಸ್ತವಾಗಿದ್ದೆ.  ನಾನು ರೋಮಿಯ ಬಳಿ ಹೋದಾಗ ಅವನು ಕುಸ್ತಿ ಪಂದ್ಯವನ್ನು ವಿಕ್ಷೀಸುತ್ತಿದ್ದ. ಅವನು ಇಪ್ಪತ್ತೈದು ವರ್ಷದವನಿರಬಹುದು. ನನ್ನ ಉದ್ದೇಶಕ್ಕೆ ಸರಳವಾಗಿ ಸರಿಹೊಂದುವ ಹಾಗೆ ಕಾಣಿಸಿದ. ಈ ಯುವಕನ ವಿಶ್ವಾಸವನ್ನು ಗೆಲ್ಲಬಲ್ಲೆ ಎಂದು ನನಗೆ ಖಚಿತವಾಯಿತು.  "ನೀನು ಸ್ವಲ್ಪ ಕುಸ್ತಿ ಪಟುವಿನ ಹಾಗೆ ಕಾಣಿಸುತ್ತಿಯ", ನಾನು ಹೇಳಿದೆ. ಮಂಜುಗಡ್ಡೆಯನ್ನು ಕರಗಿಸಲು ಯಾವುದೇ ಹೊಗಳಿಕೆಯ … Read more

ಪುನೀತಭಾವ: ಸತೀಶ್ ಶೆಟ್ಟಿ ವಕ್ವಾಡಿ.

  ಸೂರ್ಯನಿಗೆ ಆಗಷ್ಟೇ ಬೆಳಗಾಗಿತ್ತು. ಹಕ್ಕಿಗಳ ಚಿಲಿಪಿಲಿ ಇಲ್ಲದ್ದಿದ್ದರೂ ಡಿಸೆಂಬರ್ ತಿಂಗಳ ಚುಮು ಚುಮು ಚಳಿಗೆ ಮುಂಜಾನೆ ಆಹ್ಲಾದಕರವಾಗಿತ್ತು. ಶೀತಗಾಳಿಗೆ ಮೈಯೊಡ್ಡಿ ಮಂಜಿನಹನಿಗಳನ್ನು ಹೊತ್ತ ಹುಲ್ಲಿನ ಮೇಲೆ ಬರಿಗಾಲಿನಲ್ಲಿ  ನೆಡೆಯುವುದೇ ಒಂದು ಅನನ್ಯ ಅನೂಭೂತಿ.  ಹಾಗೆ ಹಲ್ಲಿನ ಜೊತೆ ಜಗಳಕ್ಕೆ ಬಿದ್ದ ಬ್ರಷ್ ನೊಂದಿಗೆ ಕಾದಾಡುತ್ತ ಮನೆ ಎದುರಿನ ಗದ್ದೆಯ ಅಂಚಿನಲ್ಲಿ ಹೆಜ್ಜೆಹಾಕುತ್ತಿದ್ದೆ.  ಬೆಂಗಳೂರಿನಂತೆ ಇಲ್ಲಿ ತರಕಾರಿಯವನ ಬೊಬ್ಬೆ ಇಲ್ಲ.  ಕಸದವಳ ಶೀಟಿ ಸ್ವರವಿಲ್ಲ, ಸ್ಕೂಲ್ ವ್ಯಾನಿನ ಕರ್ಕಶ ಹಾರ್ನಿನ ಮಾರ್ಧನಿ ಇಲ್ಲ. ಆಗಷ್ಟೇ ಕೊಯ್ಲು ಮಾಡಿದ … Read more

ಜನಜಾಗೃತಿಯ ಮಹಾಮಾರ್ಗದ ‘ಆಯುಧ’ ನಾಟಕ ಪ್ರಯೋಗ: ಹಿಪ್ಪರಗಿ ಸಿದ್ಧರಾಮ

ಬದುಕಿನಲ್ಲಿ ಸರ್ವವನ್ನು ಕಳೆದುಕೊಂಡ ವ್ಯಕ್ತಿಯೋರ್ವ ಅಂತಿಮವಾಗಿ ಗುರುವಿನ ಹುಡುಕಾಟದಲ್ಲಿ ಅಲೆಮಾರಿಯಾಗಿ ತಾಯಿಯನ್ನು ಕಳೆದುಕೊಂಡ ಮಗುವಿನಂತೆ ಹಂಬಲಿಸುತ್ತಾ ರಂಗಪ್ರವೇಶಿಸುವುದರೊಂದಿಗೆ ‘ಆಯುಧ’ ನಾಟಕ ಅಸಂಗತವಾಗಿ ಆರಂಭವಾಗುತ್ತದೆ. ಕೆಲಸವಿಲ್ಲದ ವಿದ್ಯಾವಂತ ನಿರುದ್ಯೋಗಿಗಳು ಬಡಾವಣೆಯೊಂದರ ಹರಟೆ ಕಟ್ಟೆಯಲ್ಲಿ ಕಲಿತ ವಿದ್ಯೆಯನ್ನು ಮರೆತು ಇಸ್ಪೀಟು, ಜೂಜಾಟದಲ್ಲಿ ತೊಡಗಿಸಿಕೊಂಡಿರುತ್ತಾರೆ. ಅಲ್ಲಿಗೆ ಆಗಮಿಸುವ ಅನಾಮಿಕನೋರ್ವನು ‘ಸೇವ್ ಇಂಡಿಯಾ ; ಸೇವ್ ಡೆಮಾಕ್ರಸಿ’ ಎಂದು ತನ್ನಷ್ಟಕ್ಕೆ ತಾನೆ ಬಡಬಡಿಸುತ್ತಾ, ನಗುತ್ತಾ ಅವಧೂತನಂತೆ ಆಗಮಿಸಿ, ಕುಳಿತುಕೊಳ್ಳುತ್ತಾನೆ. ಹೀಗೆ ಎಷ್ಟೋ ಹೊತ್ತು ನಡೆದರೂ ನಿರುದ್ಯೋಗಿಗಳು ಮತ್ತು ಅನಾಮಿಕರ ನಡುವೆ ಯಾವುದೇ ಸಂವಹನ … Read more

ನೆರೆಹೊರೆಯವರೊಂದಿಗೆ ಹೇಗಿರಬೇಕು?: ವೈ. ಬಿ. ಕಡಕೋಳ

ಇತ್ತೀಚಿಗೆ ಪಕ್ಕದ ಮನೆಗೆ ನೆಂಟರು ಬಂದಿದ್ದರು ಅವರು ತಮ್ಮ ಮೋಬೈಲ್ ಚಾರ್ಜರ್ ತಂದಿರಲಿಲ್ಲ. ಆಗ ಅವರಿಗೆ ಮೋಬೈಲ್ ಚಾರ್ಜರ್ ಬೇಕಾಯಿತು. ನಮ್ಮ ಮನೆಗೆ ಬಂದರು. ಮೋಬೈಲ್ ನೋಡಿದೆ ಅದರ ಚಾರ್ಜರ್ ನಮ್ಮ ಮನೆಯಲ್ಲಿತ್ತು ಅವರಿಗೆ ಕೊಟ್ಟು ನಿಮ್ಮ ಮೋಬೈಲ್ ಚಾರ್ಜ ಆದ ತಕ್ಷಣ ಮರಳಿಸಿ ಎಂದು ತಿಳಿಸಿದೆ. ತಗೆದುಕೊಂಡು ಹೋದರು. ಮರುದಿನ ಸಂಜೆಯಾದರೂ ಚಾರ್ಜರ ಮರಳಿಸಿರಲಿಲ್ಲ. ಆಫೀಸಿಂದ ಮನೆಗೆ ಬಂದು ಹೆಂಡತಿಯನ್ನು ಅವರ ಮನೆಗೆ ಕಳಿಸಿದೆ. ಅಯ್ಯೋ ಮರೆತೇ ಬಿಟ್ಟಿದ್ದೆವು. ತಗೊಳ್ಳಿ ಎಂದು ಚಾರ್ಜರ್ ಕೊಟ್ಟರಂತೆ. ಅಷ್ಟೇ … Read more

ಕನ್ನಡಿ  ಮತ್ತು  ನಿಂದಕರು: ಕೆ ಟಿ ಸೋಮಶೇಖರ ಹೊಳಲ್ಕೆರೆ

          ಕನ್ನಡಿ ಗೊತ್ತಿಲ್ಲದವರಿಲ್ಲ. ಅದೊಂದು ಹೆಚ್ಚು ಬೆಲೆಬಾಳದ, ಕೆಳಗೆ ಬಿದ್ದರೆ ಸಾಕು ಒಡೆದೇಹೋಗುವ ವಸ್ತು. ಗಾಜಿನ ಒಂದು ಮುಖವನ್ನು ಮೆರುಗುಗೊಳಿಸಿದರೆ ಕನ್ನಡಿ ಸಿದ್ದ! ವಿವಿಧ ಆಕಾರ, ಎತ್ತರಗಳಲ್ಲಿ ಮಾರುಕಟ್ಟಿಯಲ್ಲಿ ದೊರೆಯುವ ನುಣುಪಾದ ಮೇಲ್ಮೈಯುಳ್ಳ ವಸ್ತು! ಹಾಗೆ ನೋಡಿದರೆ ಅದು ವಸ್ತುವೇ ಅಲ್ಲ! ವಿರೂಪ ತೊಡೆದು ಸುರೂಪಿಯಾಗಿಸುವ ಮೂಕ ಸಲಹೆಗಾರ, ಆತ್ಮೀಯ ಸ್ನೇಹಿತ, ಮನೆಯ ಸದಸ್ಯ, ಅಜಾತ ಶತೃ!        ಕನ್ನಡಿಯನ್ನು ಪ್ರೀತಿಸದವರಿಲ್ಲ. ಕನ್ನಡಿಯನ್ನು ಯಾರು ಎಷ್ಟು ಪ್ರೀತಿಸುತ್ತಾರೋ ಅವರು … Read more