ಪಂಜುವಿನ ಯುಗಾದಿ ವಿಶೇಷಾಂಕ

ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳೊಂದಿಗೆ… ಪಂಜುವಿನ ಯುಗಾದಿ ವಿಶೇಷಾಂಕ ನಿಮ್ಮ ಓದಿಗೆ.. ಈ ಸಂಚಿಕೆಯಲ್ಲಿ…. ಕಾವ್ಯಧಾರೆ 1 ಮಮತಾ ಅರಸೀಕೆರೆ ಮೌಲ್ಯ ಎಂ. ಗೋವಿಂದ ಹೆಗಡೆ ಪ್ರವೀಣಕುಮಾರ್ .ಗೋಣಿ ಷಣ್ಮುಖ ತಾಂಡೇಲ್ ಬೀನಾ ಶಿವಪ್ರಸಾದ ಶಿವಕುಮಾರ ಕರನಂದಿ ಮಾ.ವೆಂ.ಶ್ರೀನಾಥ ನಂದೀಶ್ ಮಾಧವ ಕುಲಕರ್ಣಿ, ಪುಣೆ ಸಂದೀಪ ಫಡ್ಕೆ, ಮುಂಡಾಜೆ ವಿಭಾ ವಿಶ್ವನಾಥ್ ಜಹಾನ್ ಆರಾ ಎಚ್.ಕೊಳೂರು ಆದಿತ್ಯಾ ಮೈಸೂರು ರಂಜಿತ ದರ್ಶಿನಿ ಆರ್. ಎಸ್ ಯಲ್ಲಪ್ಪ ಎಮ್ ಮರ್ಚೇಡ್ ಕುರಿಯ ಕಾಲು: ಜೆ.ವಿ.ಕಾರ್ಲೊ ಉದಾತ್ತ ಜೀವಿ ಪ್ಲಾಟಿಪಸ್: … Read more

ಕಾವ್ಯಧಾರೆ 1

ಹುಡುಕಾಟ ಜಾರಿಯಲ್ಲಿದೆ …. ಮತ್ತೆ ಮತ್ತೆ ಕೆದಕಿ ವಿಶ್ವಸ್ಥ ಚಹರೆಯನ್ನು ಹುಡುಕುತ್ತೇನೆ ಅರಿವು ಸರಸರನೆ ತೆರೆಯುತ್ತೇನೆ ಪ್ರತೀ ಪುಟದಲ್ಲೂ ಅರಸುತ್ತೇನೆ ಅಲ್ಲಿರಬಹುದು.. ಇಲ್ಲವೇ !!? ಇಲ್ಲಂತೂ ಇದ್ದೇ ಇರಬಹುದು ಘಟ್ಟಿಗಿತ್ತಿಯರ ಮಾದರಿಗಳು ಬಂಡೆಯಂತಹ ಹೆಣ್ಣುಗಳು ಎಲ್ಲೆಲ್ಲಿ..? ಪುರಾಣದಲ್ಲಿ ಉಪನಿಷತ್ತುಗಳ ಕಣಜದಲ್ಲಿ ಭಾರತದಲ್ಲಿ, ರಾಮಾಯಣಗಳ ಹಂದರದಲ್ಲಿ ಮಹಾಕಾವ್ಯಗಳ ರಾಶಿಯಲ್ಲಿ ಬೈಬಲ್ಲು ಕುರಾನುಗಳ ಅಂತರಂಗದಲ್ಲಿ ಎಲ್ಲೆಲ್ಲಿದ್ದಾಳೆ ಆಕೆ ಎಲ್ಲೆ ಮೀರಿದಳೆ? ಚಲ್ಲಾಪಿಲ್ಲಿಯಾದಳೆ? ಮತ್ತೆ… ಮತ್ತೆ… ಧೀರ ಮಹಾಪುರುಷರು ಅಣಿ ಮಾಡಿಟ್ಟ ಗಲ್ಲಿಗೇರಿದಳೆ..? ಸಂಶೋಧನೆ ಕಂಗಾಲಾಗುತ್ತೇನೆ ಯಾವ ಪುಟದಲ್ಲೂ ದಿಟ್ಟೆಯರಿಲ್ಲ ಅಗ್ನಿದಿವ್ಯ … Read more

ಕುರಿಯ ಕಾಲು: ಜೆ.ವಿ.ಕಾರ್ಲೊ

ಕಿಟಕಿಯ ಪರದೆಗಳು ಇಳಿಬಿದ್ದಿದ್ದ ಬೆಚ್ಚನೆಯ ರೂಮಿನಲ್ಲಿ ಟೇಬಲ್ ಲ್ಯಾಂಪಿನ ಮಂದ ಬೆಳಕು ಒಂದು ವಿಶಿಷ್ಟ ವಾತಾವರಣ ಉಂಟುಮಾಡಿತ್ತು. ಅವಳು ಕುಳಿತಿದ್ದ ಕುರ್ಚಿಯ ಹಿಂಭಾಗದಲ್ಲಿದ್ದ ಸೈಡ್‍ಬೋರ್ಡಿನ ಮೇಲೆ ಒಂದು ಅರೆ ತುಂಬಿದ್ದ ವ್ಹಿಸ್ಕಿ ಬಾಟಲ್, ಎರಡು ಉದ್ದನೆಯ ಗ್ಲಾಸುಗಳು, ಸೋಡ ಮತ್ತು ಐಸ್ ತುಂಡುಗಳ ಥರ್ಮೋ ಬಕೆಟ್ ತಯಾರಾಗಿತ್ತು. ಅವಳ ಎದುರಿನ ಕುರ್ಚಿ ಇನ್ನೂ ಖಾಲಿ ಇತ್ತು. ಮೇರಿ ಮಲೋನಿ, ತನ್ನ ಪತಿ ಕೆಲಸದಿಂದ ಹಿಂದಿರುಗುವುದನ್ನೇ ಕಾಯುತ್ತಿದ್ದಳು. ಗಳಿಗೆಗೊಮ್ಮೆ ಅವಳ ದೃಷ್ಟಿ ಗೋಡೆಯ ಮೇಲಿದ್ದ ಗಡಿಯಾರದ ಕಡೆಗೆ ಹೊರಳುತ್ತಿತ್ತು. … Read more

ಉದಾತ್ತ ಜೀವಿ ಪ್ಲಾಟಿಪಸ್: ಅರ್ಪಿತ ಮೇಗರವಳ್ಳಿ

ಒ೦ದಾನೊ೦ದು ಕಾಲದಲ್ಲಿ ಆ ದೇವರು ಅನ್ನೋನಿಗೆ ಮೂರು ಬಗೆಯ ವಿಭಿನ್ನ ಜೀವಿಗಳನ್ನು ಸೃಷ್ಟಿಮಾಡುವ ಹುಕಿ ಬ೦ದಿತು. ಆ ಪ್ರಕಾರವಾಗಿ ದೇವರು ಮೊಟ್ಟಮೊದಲಿಗೆ ಸಸ್ತನಿಗಳನ್ನು ಸೃಷ್ಟಿಸಿ ಅವುಗಳಿಗೆ ನೆಲದ ಮೇಲೆ ಬದುಕುವ ಅವಕಾಶಮಾಡಿಕೊಟ್ಟನು. ಹಾಗೆಯೆ ವಾತಾವರಣದ ವಿಪರೀತಗಳಿ೦ದ ರಕ್ಷಿಸಿಕೊಳ್ಳಲು ಅವಕ್ಕೆ ತುಪ್ಪಳವನ್ನು ದಯಪಾಲಿಸಿದನು. ಎರಡನೆಯದಾಗಿ ಮೀನುಗಳನ್ನು ಸೃಷ್ಟಿಸಿದ ಭಗವ೦ತ, ಅವುಗಳನ್ನು ನೀರಿನಲ್ಲಿ ಸರಾಗವಾಗಿ ಈಜಾಡಲು ಬಿಟ್ಟು, ಉಸಿರಾಡಲು ಕಿವಿರುಗಳನ್ನು ನೀಡಿದನು. ತನ್ನ ಸೃಷ್ಟಿಕಲೆಯನ್ನು ಮು೦ದುವರೆಸಿದ ದಯಾಮಯಿ ಮೂರನೆಯದಾಗಿ ಹಕ್ಕಿಗಳನ್ನು ಸೃಷ್ಟಿಸಿ ಆಕಾಶದಲ್ಲಿ ಅನ೦ತವಾಗಿ ಹಾರಡಲು ಅವುಗಳಿಗೆ ರೆಕ್ಕೆಗಳನ್ನು ನೀಡಿದನು. … Read more

ಆರತಕ್ಷತೆ: ಅದಿತಿ ಎಂ. ಎನ್.

ದೂರದ ಸಂಬಂಧಿಯಾಗಿದ್ದ ಶಿವರಾಮನ ಮಗನ ಮದುವೆಯ ಕರೆಯೋಲೆ ತಲುಪಿದಾಗಿನಿಂದ ಜಯಣ್ಣ ಮೋಡದ ಮೇಲೆಯೇ ತೇಲುತ್ತಿದ್ದರು. ಹಣಕಾಸಿನ ವಿಚಾರದಲ್ಲಿ ತಾನೆಲ್ಲಿ, ಶಿವರಾಮನೆಲ್ಲಿ? ಆದರೂ ಅವನು ತನಗೆ ಮದುವೆಯ ಕರೆಯೋಲೆಯನ್ನು ಮರೆಯದೇ ಕಳಿಸಬೇಕೆಂದರೆ ತನ್ನ ಮೇಲೆ ಅವನಿಗೆ ಪ್ರೀತಿ, ವಿಶ್ವಾಸ ಇದೆಯೆಂದೇ ಅರ್ಥವಲ್ಲವೇ ಎನ್ನುವುದು ಜಯಣ್ಣನ ತರ್ಕವಾಗಿತ್ತು. ಅವರ ಉತ್ಸಾಹಕ್ಕೆ ತಕ್ಕ, ಮದುವೆಯ ಆರತಕ್ಷತೆ ಕಾರ್ಯಕ್ರಮ ಬೆಂಗಳೂರಿನಲ್ಲಿಯೇ ಇತ್ತು; ಅದೂ ಮನೆಯಿಂದ ಅಂದಾಜು ಐದಾರು ಕಿಲೋಮೀಟರ್ ದೂರದಲ್ಲಿದ್ದ ದೊಡ್ಡ ಛತ್ರದಲ್ಲಿ. ಹಾಗಾಗಿ ಜಯಣ್ಣ, ಮದುವೆಗೆ ಅಲ್ಲದಿದ್ದರೆ ಆರತಕ್ಷತೆಗಾದರೂ ಹೋಗಿಯೇ ಸಿದ್ಧ … Read more

ಅಚ್ಚೊತ್ತಿದಂಥ ಪ್ರೀತಿಗಾಗಿ ಕಂದುಬಣ್ಣದ ಕಣ್ಣಿನ ಟ್ಯಾಟೋ…..: ಪಿ.ಎಸ್. ಅಮರದೀಪ್.

ತುಂಬಾ ನಿಸ್ತೇಜವಾದವು ಕಣ್ಣುಗಳು. ರಣ ಬಿಸಿಲಿಗೋ, ಮನಸ್ಸು ಉಲ್ಲಾಸ ಕಳೆದುಕೊಂಡಿದ್ದಕ್ಕೋ ಗೊತ್ತಿಲ್ಲ. ಅಂತೂ ಕಣ್ಣುಗಳಲ್ಲಿ ಸೋತ ಭಾವ. ನೋಡುತ್ತಿದ್ದರೆ ಏನೋ ಚಿಂತೆಯಲ್ಲಿ ಮುಳುಗಿದನೇನೋ ಅನ್ನಬೇಕು. ಕಣ್ಣ ಕೆಳಗೆ ಕಪ್ಪು ಕಲೆ, ಚರ್ಮ ಸುಕ್ಕು, ತುಟ್ಟಿಯೂ ಕಪ್ಪಿಟ್ಟಂತೆ. ಸಿಗರೇಟು ಅತಿಯಾಗಿ ಸೇದುತ್ತಿದ್ದನಾ? ಅಥವಾ ಲೇಟ್ ನೈಟ್ ಪಾರ್ಟಿನಾ? ಅಳತೆ ಮೀರಿದ ಕುಡಿತವಾ? ನೇರವಾಗಿ ಕೇಳಿಬಿಡಲಾ? ಊಹೂಂ, ಕೇಳಿದರೆ ಅದಕ್ಕಿಂತ ದೊಡ್ಡ ಬೇಸರ ಮತ್ಯಾವುದು ಅವನಿಗಾಗದು. ಹೀಗೆ ಕಂಡಾಗಲೆಲ್ಲಾ “ಏನ್ಸಾರ್, ಯಾಕೋ ತುಂಬಾ ಸೊರಗಿದಿರಾ! ಹುಷಾರಿಲ್ವಾ?” ಅಂತ ಬೇರೆಯವರು ಕೇಳೋದು, … Read more

ವಿದ್ಯಾಕಾಶಿಯೊಳಗ ಉಗಾದಿ, ಬಾರೋ ವಸಂತ ಬಾ……..!!!!!: ಡಾ. ಅನಿರುದ್ಧ ಸು ಕುಲಕರ್ಣಿ

ವಿದ್ಯಾಕಾಶಿ ಧಾರವಾಡ, ರಾಜ್ಯದ ಎರಡನೇ ಸಾಂಸ್ಕೃತಿಕ ನಗರಿ, ಮಲೆನಾಡಿಗೆ ದ್ವಾರ ಅಂದ್ರೆ ಧಾರವಾಡ, ಧಾರವಾಡ ಅಂದ ಕೂಡಲೇ ಎಲ್ಲಾರಿಗೂ ಮೊದಲ ನೆನಪು ಆಗುದು ಧಾರವಾಡ ಪೇಢ, ಕರ್ನಾಟಕ ವಿಶ್ವವಿದ್ಯಾಲಯ, ಮಾಳಮಡ್ಡಿಯ ವನವಾಸಿ ರಾಮದೇವರ ಗುಡಿ, ಉತ್ತರಾದಿಮಠ, ಸಾಧನಕೇರಿಯ ಬೇಂದ್ರೆ ಅಜ್ಜ, ಗೋಪಾಲಪುರದ ಬೆಟಗೇರಿ ಕೃಷ್ಣ ಶರ್ಮ, ನುಗ್ಗಿಕೇರಿ ಹನುಮಪ್ಪ, ಸೋಮೇಶ್ವರ ಗುಡಿ, ವಿದ್ಯಾಗಿರಿ, ಧರ್ಮಸ್ಥಳ ಆಸ್ಪತ್ರೆ., ಇನ್ನು ಅನೇಕ ಅವ. ಹೋಳಿಹುಣ್ಣಿಮೆ ಮುಂದೆ ಹಳೆಯ ಡ್ರೆಸ್ ಯಾವ ಇರತಾವ ಅವನ್ನ ಸ್ವಲ್ಪ ಇಸ್ತ್ರಿ ಮಾಡಿ, ಬಣ್ಣ ಆಡಲಿಕ್ಕೆ … Read more

ಅಮಾವಾಸ್ಯೆ: ಗಿರಿಜಾ ಜ್ಞಾನಸುಂದರ್

“ಏ ಬೇಡ ಮಕ್ಕಳಾ, ಅವು ನಮ್ಮ ಸೀಬೆ ಮರಗಳಲ್ಲ, ಬೇರೆಯವರದ್ದು. ಅವರನ್ನು ಕೇಳದೆ ಹಾಗೆಲ್ಲ ಕೀಳಬಾರದು” ಎಂದು ಕಾಮಾಕ್ಷಿ ಕೂಗುತ್ತಿದ್ದರು ಮಕ್ಕಳ ಸೈನ್ಯ ಅವಳ ಮಾತನ್ನು ಕಿವಿಗೆ ಹಾಕಿಕೊಳ್ಳದೆ ಹಣ್ಣುಗಳನ್ನು ಕಿತ್ತು ತಮ್ಮ ಚೀಲಕ್ಕೆ ಹಾಕುವುದರಲ್ಲಿ ಮುಳುಗಿತ್ತು. ಒಟ್ಟು ಹತ್ತು ಮೊಮ್ಮಕ್ಕಳು ಸೇರಿ ಲಗ್ಗೆ ಹಾಕಿದ್ದರು. ರಜಕ್ಕೆ ಅಜ್ಜಿ ಮನೆಗೆ ಬಂದಿದ್ದ ಎಲ್ಲರು ಮಂಗಗಳಾಗಿದ್ದರು. ಅವರನ್ನು ಹಿಡಿಯುವುದಕ್ಕೆ ಸೀನ ಮಾವನಕೈಯಲ್ಲಿ ಮಾತ್ರ ಸಾಧ್ಯ ಆಗುತ್ತಿತ್ತು. ಅವರು ಶಾಲೆಯ ಮುಖ್ಯೋಪಾಧ್ಯಾಪಕರಾಗಿ ಮಕ್ಕಳ ಮೇಲೆ ಒಳ್ಳೆ ಹಿಡಿತ ಹೊಂದಿದ್ದರು. ಆದರೆ … Read more

ಮಗುವಿನ ಕಥೆ: ನಂದಾ ಹೆಗಡೆ

ಪ್ರೈಮರಿ ಸ್ಕೂಲ್ ಟೀಚರಾದ ನಾನು ಇಂದು ಶಾಲೆಯಿಂದ ಮನೆಗೆ ಬಂದರೂ ಶಾಲೆಯದೇ ಗುಂಗಿನಲ್ಲಿದ್ದೆ. ಆರನೇ ಕ್ಲಾಸ್ ನಲ್ಲಿ ಓದುತ್ತಿದ್ದ ಪ್ರಗತಿ ನನ್ನ ಯೋಚನೆಯ ವಿಷಯವಾಗಿದ್ದಳು. ಪ್ರಗತಿ ನಾನು ನೋಡುತ್ತಿದ್ದ ಹಾಗೆ ಚೂಟಿಯಾದ ಹುಡುಗಿ. ಓದುವುದರಲ್ಲಿ ಯಾವಾಗಲೂ ಮುಂದು. ಸಾಮಾನ್ಯವಾಗಿ ಅವಳು ಎಲ್ಲಾ ವಿಷಯಕ್ಕೂ ನೂರಕ್ಕೆ ನೂರು ಅಥವಾ ಅದರ ಆಜು ಬಾಜು ಅಂಕ ಗಳಿಸುತ್ತಿದ್ದಳು. ಆದರೆ ಈಗ ಎರಡು ಮೂರು ಪರೀಕ್ಷೆಗಳಲ್ಲಿ ಅಂಕಗಳ ಇಳಿಕೆಯಾಗತೊಡಗಿತ್ತು. ಏನೋ ಸ್ವಲ್ಪ ವ್ಯತ್ಯಾಸವಾಗಿರಬಹುದೆಂದು ನಾನೂ ವಿಶೇಷವಾಗಿ ಏನೂ ಹೇಳಿರಲಿಲ್ಲ. ಆದರೆ ಅರ್ಧ … Read more

ಕ್ಯಾಮೆರಾಮ್ಯಾನ್: ದಯಾನಂದ ರಂಗದಾಮಪ್ಪ

ಕ್ಯಾಮೆರಾ ಸ್ಟುಡಿಯೋದಲ್ಲಿ ಕೆಲಸ ಮಾಡುತ್ತಾ ಅರಿವಿಲ್ಲದೆ ನಿದ್ರೆಗೆ ಜಾರಿದ್ದೆ. ಸ್ಟುಡಿಯೋದಲ್ಲಿನ ಫೋನಿನ ರಿಂಗಿನ ಸದ್ದು ನನ್ನನ್ನು ಎಚ್ಚರಿಸಿತು. ನಿದ್ದೆಗಣ್ಣಲ್ಲೇ ಫೋನ್ ಸ್ವೀಕರಿಸಿದೆ. ಅತ್ತ ಕಡೆಯಿಂದ Is this Colors Studios? May I speak to Saurabh ಅಂದ. ನಾನು yes Speaking ಅಂದೆ. ನಾನು ಡೇನಿಯಲ್ ಅಂತ, ನಾಳೆ ಮಧುವೆಗೆ ಒಂದು ಫೋಟೋಶೂಟ್ ಮಾಡಿಕೊಡ್ತಿರಾ ಪ್ಲೀಸ್. ಮುಂದಿನ ವಾರ ನನ್ನ ಮದುವೆ. ಸುಮಾರು ಸ್ಟುಡಿಯೊಸ್ ಗೆ ಕರೆ ಮಾಡಿದೆ ಆದರೆ ಎಲ್ಲ ಸ್ಟುಡಿಯೊಸ್ ಬುಕ್ ಆಗಿವೆ … Read more

ವಿಮಲಿ: ಎನ್, ಶೈಲಜಾ ಹಾಸನ

ಇಸ್ಕೋಲಿನಲ್ಲಿ ಏಳಿದ್ದ ವಿಸಯದ್ದ ಬಗ್ಗೆನೇ ಅವತ್ತೇಲ್ಲ ಯೋಚ್ನೆ ಮಾಡ್ಕಂಡು ಏಟು ವೊತ್ತಿಗೆ ಮನಿಗೋಯ್ತಿನೊ, ಏಟು ಬ್ಯಾಗ ಅವ್ವಂಗೆ ಆ ವಿಸಯ ತಿಳ್ಸಿ ನಮ್ಮನೆಗೂ ಒಂದು ಸೌಚಾಲ್ಯ ಮಾಡಿಸ್ಕೊತಿನೋ ಅಂತ ವಿಮಲಿ ಮನಸ್ಸಿನಲ್ಲೆ ಮಂಡಿಗೆ ತಿಂತಿದ್ದಳು. ಮನೆಗೆ ಬಂದವ್ಳೆ ಅವ್ವನ್ನ ಕಾಡೊಕೆ ಸುರು ಹಚ್ಕಂಡ್ಳು. “ಏಂತದೇ ಅದು ಸೌಚಲ್ಯ” ಅಂತ ಇಟ್ಟಿಗೆ ವೊತ್ತು ಸುಸ್ತಾಗಿದ್ದ ಪಾರು ರೇಕಂಡ್ಳು. ವಿಮಲಿ ಅತ್ಯೂತ್ಸಹದಿಂದ “ಅದೇ ಕನವ್ವ, ಕಕ್ಸದಮನೆ, ಇವತ್ತು ನಮ್ಮಿಸ್ಕೋಲಿನಲ್ಲಿ ದೊಡ್ಡವರೆಲ್ಲ ಬಂದು ಬಾಷ್ಣ ಮಾಡಿದ್ರು ಕನವ್ವ ಬಯಲಾಗೆ ಎಲ್ಡಕ್ಕೆ ವೋಗಬಾರದಂತೆ,ಅಂಗೆ … Read more

ಮಾನ ಕಾಪಾಡಿದ “ಫುಟೇಜ್”: ಚಂದ್ರೇಗೌಡ ನಾರಮ್ನಳ್ಳಿ

ಕೆಲವೊಮ್ಮೆ ಹೀಗಾಗುವುದುಂಟು. ಯಾರದೋ ತಪ್ಪಿಗೆ ಮತ್ತಾರಿಗೋ ಶಿಕ್ಷೆ, ಬಹುಮಾನ ನಿರೀಕ್ಷಿಸಿದ ಸಮಯದಲ್ಲಿ ಅವಮಾನ, ಕಾಣದ ಕೈಗಳ ಮೇಲಾಟ, ಸ್ಥಬ್ದ ತಿಳಿಗೊಳದಂತಿದ್ದ ದಿನಗಳಿಗೆ ಪ್ರಕ್ಷುಬ್ದ ಅಲೆಗಳ ಹೊಡೆತ. ಘಟನೆಯ ನೈಜತೆ ತಿಳಿಯುವವರೆಗೆ ತಳಮಳ. ಆಮೇಲೆ ಸಮಾಧಾನದ ಒಂದು ನಿಟ್ಟುಸಿರು. ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಶ್ರೇಷ್ಠ ಕವಿಯೊಬ್ಬರ ಸ್ಮರಣಾರ್ಥ ನಡೆದ ಕವಿಗೋಷ್ಟಿಯಲ್ಲಿ ಭಾಗವಹಿಸಿದ್ದೆನು. ಕಾರ್ಯಕ್ರಮ ತುಂಬಾ ಅಚ್ಚುಕಟ್ಟಾಗಿತ್ತು. ಬಿಡುವಿನಲ್ಲಿ ಹೊರಬಂದಾಗ ದಾಖಲೆ’ಯ ಪ್ರಕಾಶಕರೊಬ್ಬರು ಸಿಕ್ಕಿದರು. ಅವರನ್ನು ಮಾತನಾಡಿಸಿ ಫೋಟೋ ತೆಗೆಸಿಕೊಂಡೆವು. ಕೆಲವೇ ನಿಮಿಷಗಳಲ್ಲಿ ಉದ್ಘಾಟಿಸಿದ ಗಣ್ಯ ಸಾಹಿತಿಯೂ ಹೊರಬಂದರು. … Read more

ಸುಂದರ ಸಿಯಾಟೆಲ್: ಪ್ರಶಸ್ತಿ

ನಮಗೆ ಅದೇ ಹೆಸರೇಕೆ ಇಟ್ಟರು ಅನ್ನೋದರ ಹಿಂದೆ ನಮ್ಮಪ್ಪ ಹೇಳೋ ತರ ಪ್ರಸಿದ್ಧ ನಗರಗಳಿಗೂ ಆ ಹೆಸರುಗಳೇ ಯಾಕೆ ಬಂದವು ಅಂತ ಎಷ್ಟು ಸಲ ಯೋಚನೆ ಮಾಡಿರೋಲ್ಲ ನಾವು ? ಹೆಸರಲ್ಲೇನಿದೆ ಅಂದ್ರಾ ? ಪ್ರತೀ ನಗರಕ್ಕೂ ತನ್ನದೇ ಆದೊಂದು ಹೆಸರಿರುತ್ತೆ. ಆ ಹೆಸರೇಕೆ ಬಂತು ಅನ್ನೋದರ ಹಿಂದೊಂದು ಸುಂದರ ಕಥೆಯಿರುತ್ತೆ. ಹೆಸರ ಇತಿಹಾಸ ಥಟ್ಟನೆ ಗೋಚರಿಸದಿದ್ದರೂ ಕಾಲಗರ್ಭದಲ್ಲೆಲ್ಲೋ ಮರೆಯಾಗಿ ಕೆದಕುವವರಿಗಾಗಿ ಕಾದು ಕೂತಿರುತ್ತೆ. ದೇಶ ಸುತ್ತೋ ಜೋಶಿನಲ್ಲಿ ಸಿಕ್ಕಿದ್ದ ಸಿಯಾಟೆಲ್ಲಿಗೆ ಆ ಹೆಸರೇಕೆ ಬಂತೆನ್ನೋ ಪ್ರಶ್ನೆಯ … Read more

ನಮ್ಮತನವ ಉಳಿಸಿಕೊಳ್ಳೋಣ: ಸ್ಮಿತಾ ಮಿಥುನ್

ಹಬ್ಬ ಗಳು ಅಂದ್ರೆ ನನ್ಗೆ ತುಂಬಾ ಇಷ್ಟ, ಯಾಕೆ ಅಂದ್ರೆ ಆವತ್ತು ಸಂಭ್ರಮ ಪಡೋ ದಿನ ಹಬ್ಬಗಳ ಮಹತ್ವ ಗೊತ್ತಾಗಿದೆ ನಾನು ಇಲ್ಲಿ ಅಂದ್ರೆ ದೂರದ ಗಲ್ಫ್ ಗೆ ಬಂದ ಮೇಲೆ. ಹಬ್ಬಗಳು ನಮ್ಮತನದ ಪ್ರತೀಕ. ಇವತ್ತು ನಾವು ನಮ್ಮತನವನ ಯಾಕೋ ಬಿಟ್ಟು ಬಿಡುತಿದ್ದೇವೋ ಅಂಥ ಅನಿಸೋಕೆ ಶುರು ಆಗಿದೆ. ನಾವು ಅಂದ್ರೆ ಕನ್ನಡಿಗರೇ ಹೀಗೆನಾ ? ಯಾಕೆ ಅಂದ್ರೆ ನೀವು ಗುಜರಾತಿಗಳನ್ನ ನೋಡಿ ಎಲ್ಲಿ ಹೋದ್ರು ಅಲ್ಲಿ ಒಂದು ಸಣ್ಣ ಗುಜರಾತ್ ನ ನಿರ್ಮಿಸಿಬಿಡ್ತಾರೆ. ಆದ್ರೆ … Read more

ಹೂವಾಗಿ ಅರಳಿ: ವೆಂಕಟೇಶ ಚಾಗಿ

  ಬೆಳಗಿನ ೬ ಗಂಟೆಯ ಸಮಯ. . ಕಣ್ಣಲ್ಲಿ ಇನ್ನೂ ನಿದ್ದೆ ಮಂಪರು. ಆದರೂ ಕಣ್ತೆರೆಯುವಂತೆ ಮಾಡಿತ್ತು ಮೊಬೈಲ್. ಯಾರದೋ ಮೆಸೆಜ್ ಬಂದಿರುವ ರಿಂಗ್ ಟೋನ್ ಆಗಾಗ ಕೇಳಿಸುತ್ತಿತ್ತು. ಚಳಿಗಾಲದ ಚಳಿಯಲ್ಲಿ ಮುದುಡಿಕೊಂಡು ಮಲಗಿದ್ದ ನಾನು ಮನಸ್ಸಿಲ್ಲದೇ ಕಣ್ತೆರೆಯಬೇಕಾಯಿತು. ಒಂಟಿ ಕಣ್ಣು ತೆರೆದು ಮೊಬೈಲ್ ತಡಕಾಡಿದೆ. ಮೆಸೆಜ್ ಟೋನ್ ನ ಶಬ್ದ ಮೊಬೈಲ್ ನ್ನು ಬೇಗ ಕೈಗೆ ಸಿಗುವಂತೆ ಮಾಡಿತ್ತು. ಆನ್ ಮಾಡುತ್ತಿದ್ದಂತೆ ಸುಮಾರು ೧೦ ಮೆಸೆಜ್ ಗಳಲ್ಲೂ ಸಾರಿ ಸಾರಿ ಸಾರಿ. . . ಹಿಂದಿನ … Read more

ಇದು ಕಥೆಯಲ್ಲ ವ್ಯಥೆ: ಆರೀಫ ವಾಲೀಕಾರ

ಅವ್ವ..! ಅವ್ವ..! ಎಂದು ರಾಮ ಓಡುತ್ತಾ ಮನೆಗೆ ಬಂದ ರಾಮು, ಅಕ್ಕ ಎಲ್ಲಿ ಎಂದು ಕೇಳಿದ?. ಅದಕ್ಕೆ ಗುರವ್ವ(ರಾಮು ತಾಯಿ) ಅವಳು(ರುಕ್ಕು ರಾಮುನ ಅಕ್ಕ) ಹಳ್ಳಕ್ಕೆ ಕಟ್ಟಿಗೆ ತರಲು ಹೋಗಿದ್ದಾಳೆಂದು ಹೇಳಿ. ತನ್ನ ಕಾಯಕದಲ್ಲಿ ತಲ್ಲಿನಳಾದಳು. ನಾನು ಆಟ ಆಡೋಕೆ ಹೋಗುತ್ತೀನಿ ಎಂದು ರಾಮು ಓಡಿ ಹೋದ. ಗುರವ್ವ ಕುಳ್ಳು ಸರಿಮಾಡುತ್ತಾ ಗೋಣು ಹಾಕಿದಳು. ಸೂರ್ಯಸ್ತ ಆಗುತ್ತಿತ್ತು. ಧರೆಪ್ಪ(ಗುರವ್ವನ ಗಂಡ) ಗೌಡರ ಹೊಲದ ಕೆಲಸ ಮುಗಿಸಿಕೊಂಡು ಮನೆಗೆ ಬಂದ. ‘ಲೇ ಗುರಿ ಎಲ್ಲಿ ಇದ್ದಿಯೇ?. ಗುರವ್ವಾ ಚುಮಣಿಗೆ … Read more

ಪರೀಕ್ಷೆಯನ್ನು ಹಬ್ಬದಂತೆ ಆಚರಿಸಿ ಉತ್ತಿರ್ಣರಾಗಿರಿ: ಜಯಶ್ರೀ ಭ. ಭಂಡಾರಿ.

ಇಂದಿನ ಮಕ್ಕಳು ನಾಳಿನ ನಾಡ ಬೆಳಗುವ ನಾಯಕರು. ಅವರಿಗೆ ಸರಿಯಾದ ಮಾರ್ಗದರ್ಶನ ಬೇಕು. ಶಾಲೆಯಲ್ಲಿ ಗುರುಗಳು ಮನೆಯಲ್ಲಿ ಪಾಲಕರು ಮಕ್ಕಳ ಶ್ರೇಯಸ್ಸಿಗೆ ಶ್ರಮಿಸುತ್ತಾರೆ. ಹುಟ್ಟಿದ ಪ್ರತಿಮಗುವಿನಲ್ಲಿ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಅವನನ್ನು ಭಾವಿಭವಿಷ್ಯತ್ತಿಗೆ ಅಣಿಮಾಡುವ ಗುರುತರ ಜವಾಬ್ದಾರಿ ಶಿಕ್ಷಕರ ಹಾಗೂ ಪಾಲಕರ ಮೇಲಿದೆ. ಮಗ/ಳು ಶಾಲೆಗೆ ಹೋಗತಾರೆ ಅಂದರೆ ಅವರ ಬಗ್ಗೆ ಪಾಲಕರ ಕಾಳಜಿ ಬೇಕೆಬೇಕು. ತಯಾರಿ ಮಾಡಿ ಶಾಲೆಗೆ ಕಳಿಸಿದರೆ ಜವಾಬ್ದಾರಿ ಮುಗಿತು ಅವರ ಕೇಳಿದ್ದೆಲ್ಲ ಕೊಡಿಸಿದರೆ ಆಯ್ತಲ್ಲವಾ ಅನ್ನಬೇಡಿ. ನಿಮ್ಮ ಮಗು ನಿಮ್ಮ … Read more

ಜಾಣಸುದ್ದಿ 9: ಕೊಳ್ಳೇಗಾಲ ಶರ್ಮ

ಈ ವಾರದ ಸಂಚಿಕೆಯಲ್ಲಿ ಕೊಳ್ಳೇಗಾಲ ಶರ್ಮರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… ಇ ಮೇಲ್ ನಲ್ಲಿ ಅಥವಾ ವಾಟ್ಸ್ ಅಪ್ ನಲ್ಲಿ ಈ ಧ್ವನಿಮುದ್ರಿಕೆ ನಿಮಗೆ ಬೇಕು ಎಂದನಿಸಿದರೆ ನಿಮ್ಮ ಕೋರಿಕೆಯನ್ನು ನಮ್ಮ ಇ … Read more

ನೆನಪಾಗುತ್ತಾರೆ ಇನ್ನೂ ನಮ್ಮ ಅಪ್ಪಾಜಿ ಮೇಷ್ಟ್ರು : ಜಹಾನ್‍ ಆರಾ. ಎಚ್. ಕೋಳೂರು

ಬೆಳಗ್ಗೆ ಶಾಲೆ ಗಂಟೆ ಹೊಡೆದ ನಿಮಿಷಾರ್ಧದಲ್ಲಿ ಎಲ್ಲರೂ ಪ್ರಾರ್ಥನೆ ಕಡೆಗೆ. ಆಯಸ್ಕಾಂತವು ಕಬ್ಬಿಣದ ವಸ್ತುಗಳನ್ನು ಆಕರ್ಷಿಸಿದಂತೆ ಮೇಷ್ಟ್ರ ವಿಷಲ್ ನಮ್ಮನ್ನು ಆಕರ್ಷಿಸುತ್ತಿತ್ತು. ಗಟ್ಟಿ ಧ್ವನಿಯಲ್ಲಿ “ಸಾವಧಾನ” ಎಂದರೆ ಹುಮ್ಮಸ್ಸಿನಿಂದ “ಏಕ್” ಎನ್ನುವ ಧ್ವನಿ ಒಂದು ಕಡೆಯಾದರೆ ನೂರಾರು ಮಕ್ಕಳ ಕಿವಿಗಳವರೆಗೆ ತರುವ ಮತ್ತೊಂದು ಧ್ವನಿ “ವಿಶ್ರಾಮ್” ಮತ್ತೊಂದು ಕಡೆ,ಇ ದು ನಮ್ಮ ಶಾಲೆಯ ಪಿ.ಟಿ.ಮೇಷ್ಟ್ರಾದ ಅಪ್ಪಾಜಿಗೌಡ್ರ ಶಿಸ್ತಿನ ಪಾಠ. ಶಿಸ್ತು, ಸಜ್ಜನಿಕೆಗೆ ಮತ್ತೊಂದು ಹೆಸರೇ ಇವರು. ನೀಳಕಾಯದ ಬಿಳಿಗೂದಲಿನ ಇವರು ಯಾವಾಗಲೂ ಸಫಾರಿ ಬಟ್ಟೆ ಮೈಮೇಲೆ, ಎಲ್ಲರ … Read more

ಗಿಲಿಗಿಲಿ ಪುವ್ವಾ : ಕೃಷ್ಣ ಶ್ರೀಕಾಂತ ದೇವಾಂಗಮಠ

ಪಾತ್ರ ವರ್ಗ ಚಾರು – ಒಂದು ಕೈ ಮಾತ್ರ ಇರುವ ಕೇರಿಯ ಹುಡುಗ ಮಾನು – ಕೇರಿಯ ಹುಡುಗ ಮೀರಾ – ಕೇರಿಯ ಹುಡುಗಿ ಮಾದಪ್ಪ – ಮಾನುವನ ತಂದೆ ಅನಾಮಿಕ – ಧ್ವನಿ ಪುಟ್ಟಿ – ಲಂಬೋದರ & ಜಾನ್ನವಿಯ ಮಗಳು ಗೌರಿ – ಗೆಳತಿ ದೇವ್ರು – ಅಜ್ಜಿಯ ಮಮ್ಮಕ್ಕಳು ಅನಿ – ಅಜ್ಜಿಯ ಮಮ್ಮಕ್ಕಳು ಮಾಯಾ – ಅಕ್ಕನಂಥ ಗೆಳತಿ ಜಾನ್ನವಿ – ಪುಟ್ಟಿಯ ತಾಯಿ ಲಂಭೋದರ – ಪುಟ್ಟಿಯ ತಂದೆ ದೃಶ್ಯ … Read more

ಕಾವ್ಯಧಾರೆ 2

ಯುಗಾದಿ ನವ ಸಂತಸ ನವ ಸಂಭ್ರಮ ನವ ನವೋಲ್ಲಾಸ ತುಂಬಲು ಮತ್ತೆ ಬಂದಿದೆ ಯುಗಾದಿ ನವ ಚೇತನ ನವ ಭಾವನ ನವ ನವೋತ್ಸಾಹ ಬೀರಲು ಮತ್ತೆ ಬಂದಿದೆ ಯುಗಾದಿ ನವ ಪಲ್ಲವಿ ನವ ಕಿನ್ನರಿ ನವ ನವೋತ್ಕರ್ಷ ಹೊಂದಲು ಮತ್ತೆ ಬಂದಿದೆ ಯುಗಾದಿ ನವ ಬಂಧನ ನವ ಸ್ಪಂದನ ನವ ನವೋದಯ ಹೊಮ್ಮಲು ಮತ್ತೆ ಬಂದಿದೆ ಯುಗಾದಿ ನವ ಬದುಕಿಗೆ ನವ ದಾರಿಗೆ ನವ ನವೋದಕವೆರೆಯಲು ಮತ್ತೆ ಬಂದಿದೆ ಯುಗಾದಿ ನವ ಮಂಥನ ನವ ಚಿಂತನ ನವ … Read more

ಜೀವನದ ಅಂಚಿನಲ್ಲಿರುವ ಪುಟಗಳನ್ನು ಪ್ರೀತಿಯ ಬಣ್ಣದಿಂದ ತುಂಬೋಣ: ಜಯಶ್ರೀ. ಜೆ. ಅಬ್ಬಿಗೇರಿ

ಅದ್ಯಾಕೆ ಹೀಗೆ ಅಂತ ನನಗೂ ಗೊತ್ತಿಲ್ಲ. ಮೊದಲಿನಿಂದಲೂ ಹಾಗೆ ಗೆಳತಿಯರು ಅಂತ ಸಮೀಪವಿದ್ದವರೆಲ್ಲ ನನ್ನೊಂದಿಗೆ ಒಂದಿಷ್ಟು ಜಾಸ್ತಿನೇ ಅನ್ನುವಷ್ಟು ಆತ್ಮೀಯರಾಗ್ತಾರೆ. ತಮ್ಮ ಮನಸ್ಸಿನಲ್ಲಿರುವುದನ್ನು ನನ್ನ ಬಳಿ ಮುಕ್ತವಾಗಿ ಹೇಳಿಕೊಳ್ಳುತ್ತಾರೆ. ಬಹುಶಃ ನಾನು ನನ್ನದೇನೋ ಕೆಲಸವಿದೆ ಎಂದು ಅವರಿಗೆ ಬೆನ್ನು ಹಾಕಿ ಎದ್ದು ಹೋಗದೇ ಇರುವುದರಿಂದಲೋ, ಅವರು ಹೇಳಿದ್ದನ್ನೆಲ್ಲ ದೇವರ ಹಾಗೆ ಕೂತು ಕೇಳಿಸಿಕೊಳ್ಳುತ್ತೇನೆ ಎನ್ನುವುದಕ್ಕೋ ಅಥವಾ ಅವರು ಏನು ಹೇಳಿದರೂ ಅದನ್ನು ಪ್ರಶ್ನಿಸದೇ ಒಪ್ಪಿಕೊಳ್ಳುತ್ತೇನೆ ಎನ್ನುವ ಕಾರಣಕ್ಕೋ, ಏನೋ ಗೊತ್ತಿಲ್ಲ. ಒಟ್ಟಿನಲ್ಲಿ ವಯಸ್ಸಿನಲ್ಲಿ ಹೆಚ್ಚು ಕಡಿಮೆ ಹಿರಿಯರು … Read more

ಯುಗಾದಿ: ವೈ. ಬಿ. ಕಡಕೋಳ

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ಎಂಬ ಬೇಂದ್ರೆಯವರ ಗೀತೆಯ ಸಾಲುಗಳಲ್ಲಿ ಯುಗಾದಿಯ ಬರುವಿಕೆ, ಅದರಲ್ಲಿನ ಸಡಗರ ವರ್ಣನಾತೀತ. ಋತುಗಳ ರಾಜ ವಸಂತನ ಆಗಮನದ ಸೂಚನೆಯ ಜೊತೆಗೆ ಯುಗಾದಿಯು ಎಲ್ಲ ಹಬ್ಬಗಳಿಗೂ ನಾಂದಿಯಾಗಿ ಪ್ರತಿ ಸಂವತ್ಸರದ ಚೈತ್ರ ಮಾಸ ಶುಕ್ಲಪಕ್ಷದ ಪಾಡ್ಯಮಿ ತಿಥಿಯಂದು ಆಚರಿಸಲ್ಪಡುವ ಹಬ್ಬ ಯುಗಾದಿ. ರಾಮಾಯಣ ಕಾಲಕ್ಕಿಂತ ಮೊದಲು ಉತ್ತರಾಯಣದಿಂದ ಹೊಸ ವರ್ಷದ ಗಣನೆ ಪ್ರಾರಂಭವಾಗುತ್ತಿತ್ತು. ಶ್ರೀರಾಮನು ಆವತರಿಸಿದ ಮಾಸ ಹಾಗೂ ಪಟ್ಟಾಭಿಷೇಕವಾದ … Read more

ವೈದ್ಯಕೀಯ ಲೋಕದ ಸಂಶೋಧನೆಗಳ ದಿಕ್ಕು ಬದಲಾಗಬೇಕು!: ಕೆ ಟಿ ಸೋಮಶೇಖರ ಹೊಳಲ್ಕೆರೆ

ಮಾನವನ ಚಿಂತನೆಗಳು ಪ್ರಕೃತಿಯ ನಿಯಮಗಳಿಗೆ ದೇಹ ಪ್ರಕೃತಿಗೆ ಪೂರಕವಾಗಿರಬೇಕು. ಸಹಜ ಚಿಂತನೆಗಳು ಪ್ರಕೃತಿಯ, ದೇಹ ಪ್ರಕೃತಿಯ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕೊಡುತ್ತವೆ. ಅಸಹಜ ಚಿಂತನೆಗಳು ಸಮಸ್ಯೆಗಳ ಸರಣಿಯನ್ನೇ ಸೃಷ್ಟಿಸುತ್ತವೆ! ಸಹಜ ಚಿಂತನೆಗಳಿದ್ದರೂ ಮಾನವ ತನ್ನ ದುರಾಸೆಯಿಂದ ದುಡ್ಡಿನ ಪಿಶಾಚಿ ಯಾಗಿರುವುದರಿಂದ ಉದ್ದೇಶಪೂರ್ವಕವಾಗಿ ಅಸಹಜವಾಗಿ ಚಿಂತಿಸಿ ಪ್ರಕೃತಿಯ, ದೇಹ ಪ್ರಕೃತಿಯ ನೋವು ಯಾತನೆಗಳಿಗೆ ಕಾರಣವಾಗುತ್ತಿದ್ದಾನೆ. ಪರಿಸರ ಮಾಲಿನ್ಯಕ್ಕೂ ಕಾರಣನಾಗಿದ್ದಾನೆ! ಇತ್ತೀಚೆಗೆ ಜಗತ್ತಿನಾದ್ಯಂತ ಇದೆ ವಿಜೃಂಭಿಸಿ ಜೀವಜಲ, ಅನಾರೋಗ್ಯ ಸಮಸ್ಯೆಗಳು ಅತಿ ಆಗಲು ಯಾತನೆ ಮುಗಿಲು ಮುಟ್ಟಲು ಕಾರಣವಾಗಿದೆ. ಇಡೀ … Read more

ಕಾರ್ನ್ ಪಲಾವ್ ಮತ್ತು ಕರಬೂಜದ ಹಣ್ಣಿನ ಮಿಲ್ಕ್ ಶೇಕ್: ವೇದಾವತಿ ಹೆಚ್.ಎಸ್.

1.ಕಾರ್ನ್ ಪಲಾವ್. (Corn Pulao) ಮಕ್ಕಳಿಂದ ದೊಡ್ಡವರವರೆಗೂ ಇಷ್ಟವಾಗುವ ಕಾರ್ನ್ ಪಲಾವ್ ಆರೋಗ್ಯಕರವಾದ ಮತ್ತು ರುಚಿಕರವಾದ ಪಲಾವ್ ನಲ್ಲಿ ಒಂದಾಗಿದೆ. ಕಾರ್ನ್ ಪಲಾವ್ ವೊಂದಿಗೆ ರಯತಾ, ವೆಜ್ ಕೂರ್ಮ ಹಾಕಿ ಸವಿಯಲು ರುಚಿಯಾಗಿರುತ್ತದೆ. ಬೇಕಾಗುವ ಸಾಮಾಗ್ರಿಗಳು: ಬಾಸುಮತಿ ಅಕ್ಕಿ ಒಂದು ಕಪ್ ಕಾರ್ನ್ ಒಂದು ಕಪ್ ಈರುಳ್ಳಿ ಎರಡು/ಚಿಕ್ಕದಾಗಿ ಕತ್ತರಿಸಿ. ಟೊಮೆಟೊ ಎರಡು/ಚಿಕ್ಕದಾಗಿ ಕತ್ತರಿಸಿ ಕ್ಯಾರೆಟ್, ಬೀನ್ಸ್ ಒಂದು ಕಪ್/ಚಿಕ್ಕದಾಗಿ ಕತ್ತರಿಸಿ ಕ್ಯಾಪ್ಸಿಕಂ ಒಂದು/ಚಿಕ್ಕದಾಗಿ ಕತ್ತರಿಸಿ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಒಂದು ಟೀ ಚಮಚ ಗರಂಮಸಾಲೆ ಅರ್ಧ … Read more

ತನ್ನ ಅಹಂನ ಮುಂದೆ ದೇಶ ಕಾಯುವ ಯೋಧರ ತ್ಯಾಗ ಬಹು ದೊಡ್ಡದು: ನಾಗರಾಜ್.ಮುಕಾರಿ (ಚಿರಾಭಿ)

ಬೇಸಿಗೆ ಕಾಲ ಬಂದಾಗಲೆಲ್ಲಾ ಊಟಿ ಅಥವಾ ಮನಾಲಿಯ ನೆನಪಾಗುತ್ತಿತ್ತು ಕಾರಣ ನಿಮಗೆ ಗೊತ್ತೇ ಇದೆ. ಅಲ್ಲಿಯ ವಾತಾವರಣ ದೇಹ ತಂಪು ಮಾಡುವುದರ ಜೊತೆಗೆ ಕಣ್ಣುಗಳಲ್ಲಿ ಅಲ್ಲಿಯ ಸ್ವರ್ಗರಮಣೀಯ ದೃಷ್ಯಗಳನ್ನು ತುಂಬಿ ಆನಂದ ಪಡೆಸುತ್ತದೆ. ಹಾಗಾಗಿ ಈ ಬಾರಿ ಮನಾಲಿಗೆ ಹೋಗುವುದಾಗಿ ನಿರ್ಧರಿಸಿ ತಿರುವನಂತಪುರಂ-ಡೆಲ್ಲಿಗೆ ಹೊರಡುವ ರಾಜಧಾನಿ ಎಕ್ಸ್‍ಪ್ರೆಸ್‍ನಲ್ಲಿ ಟಿಕೆಟ್ ಬುಕ್ ಮಾಡಿ ಕುಟುಂಬ ಸಮೇತರಾಗಿ ಹೊರಟೇ ಬಿಟ್ಟೆವು. ರೈಲಿನ ಒಳಹೊಕ್ಕೊಡನೇ ತಂಪಾದ ಗಾಳಿ ಮೈಯಲ್ಲಾ ತಣ್ಣಗಾಗಿಸಿತು. ಮನಾಲಿಯ ಸುಖ ಇಲ್ಲಿಂದಲೇ ಸಿಗಲು ಶುರುವಾಯಿತು. ನಮಗೆ ನಿಗಧಿ ಪಡಿಸಿದ … Read more

ಸ್ತ್ರೀ ಸ್ವತಂತ್ರ ಅಸ್ಥಿತ್ವದ ಅಗತ್ಯತೆ: ನಾಗರೇಖಾ ಗಾಂವಕರ

ಆಧುನಿಕ ಮಹಿಳಾ ಜಗತ್ತು ತನ್ನದೇ ಸ್ವಯಂಕೃತ ಸಾಧನೆಯ ಸರಣಿಯಲ್ಲಿ ಸಾಗಲು ಅತೀ ಜರೂರತ್ತು ಇರುವುದು ಆಕೆಗೆ ಶಿಕ್ಷಣದ ಅಗತ್ಯತೆ. ಶೈಕ್ಷಣಿಕ ಕ್ಷಮತೆಯಲ್ಲಿ ಆಕೆಯ ಹೆಜ್ಜೆಗಳು ದಿಟ್ಟ ದಾಪುಗಾಲು ಹಾಕಬೇಕಿದೆ. ಶೈಕ್ಷಣಿಕ ಅಗತ್ಯತೆತೆ ಅರಿವು ಇನ್ನೂ ಹಲವು ಹಳ್ಳಿಗಳಲ್ಲಿ ಮೂಡಿಲ್ಲ. ಅರ್ಧಕ್ಕೆ ಶಿಕ್ಷಣದಿಂದ ವಂಚಿತರಾಗುವ ಅದೆಷ್ಟೋ ಹುಡುಗಿಯರಿದ್ದಾರೆ. ಅದರಲ್ಲೂ ಹೆಣ್ಣುಮಕ್ಕಳನ್ನು ಅತಿ ಚಿಕ್ಕ ವಯಸ್ಸಿನಲ್ಲಿ ವಿವಾಹಮಾಡಿಕೊಡುವ ಸಂಪ್ರದಾಯಗಳು ನಿಂತಿಲ್ಲ. ಹೆಣ್ಣು ಕಲಿತು ಉದ್ಧಾರ ಮಾಡುವುದು ಅಷ್ಟೇ ಇದೆ. ಮುಸರೆ ತೊಳೆಯುವುದೇನೂ ತಪ್ಪೋಲ್ಲ ಅನ್ನೋ ಮನಸ್ಥಿತಿ ಇಂದಿಗೂ ಜೀವಂತ. ಹಿಂದೆಲ್ಲಾ … Read more

ಧೈರ್ಯವೇ ಹಿಮಾಲಯ, ಗೆಲ್ಲು ನೀ ಅಧೈರ್ಯವಾ. . . . : ಸುನಂದಾ ಎಸ್ ಭರಮನಾಯ್ಕರ

ಧೈರ್ಯ ಎಂದರೆ ಛಾತಿ, ಕೆಚ್ಚು, ಎದೆಗಾರಿಕೆ. ಧೈರ್ಯವು ಭಯ, ನೋವು ಅಪಾಯ ಅನಿಶ್ಚಿತತೆ ಅಥವಾ ಬೆದರಿಕೆಯನ್ನು ಎದುರಿಸುವ ಸಾಮಥ್ರ್ಯ ಮತ್ತು ಇಚ್ಛೆಯಾಗಿದೆ. ಮನುಷ್ಯ ಯಾವುದೇ ಸಾಧನೆ ಮಾಡಬೇಕಾದರೂ ಆತನಲ್ಲಿ ಮೊದಲು ಇರಬೇಕಾದದ್ದು ಧೈರ್ಯ. “ಧೈರ್ಯಂ ಸರ್ವತ್ರ ಸಾಧನಂ”. ಮನುಷ್ಯನಲ್ಲಿ ಸಿಗುವ ಅತಿ ವಿರಳ ಹಾಗೂ ಅತಿ ಅಮೂಲ್ಯವಾದ ವಸ್ತುವೆಂದರೆ ಧೈರ್ಯವೇ ಆಗಿದೆ. ಅದನ್ನು ಪೇಟೆಯಲ್ಲಿ ಖರೀದಿ ಮಾಡಲಾಗುವುದಿಲ್ಲ. ಅದು ಮಾರಾಟದ ವಸ್ತುವಾಗಿದ್ದರೆ ಪುಕ್ಕಲರೂ, ಶ್ರೀಮಂತರಾದಿಯಾಗಿ ಎಲ್ಲರೂ ಅದನ್ನು ಕೊಂಡು ಕೊಂಡು ತಮ್ಮ ಬಳಿ ಇರಿಸಿಕೊಳ್ಳುತ್ತಿದ್ದರು. ಬದುಕು ಗೆಲ್ಲಲು … Read more

ಪದ್ದಕ್ಕಜ್ಜಿಯ ಅಂತಾಕ್ಷರಿ: ವೃಂದಾ. ಸಂಗಮ

ನಮ್ಮ ಪದ್ದಕ್ಕಜ್ಜಿ ನಿಮಗೆಲ್ಲಾ ಗೊತ್ತೇ ಇದೆಯಲ್ವಾ ? ಗೊತ್ತಿದ್ದೇ ಇರತ್ತೆ. ಅವರು ಇಡೀ ಊರಲ್ಲೇ ವರ್ಲ್ಡ ಫೇಮಸ್ಸು. ಅವರು ಇವತ್ತು ತಿಂಡಿಗೆ ಒತ್ತು ಶಾವಿಗೆ ಮಾಡಿದ್ದರು. ಅಲ್ಲರೀ, ಅದೇನೋ ಅಂತಾಕ್ಷರಿ ಅಂದು ಬಿಟ್ಟು, ಇದೇನು ತಿಂಡಿ ಬಗ್ಗೆ ಹೇಳ್ತಿದೀರಲ್ಲ, ಅಂತಿದೀರಾ ? ಪೂರ್ತಿ ಕೇಳಿಸಕೊಳ್ಳಿ. ಅಲ್ಲೇ ಇರೋದು ಮಜಾ, ಒತ್ತು ಶಾವಿಗೆಯ ಖಾರದ ತಿಂಡಿ ಹಾಗೂ ಅದಕ್ಕೆ ಸಿಹಿಯಾಗಿ ಗಸಗಸೆ ಪಾಯ್ಸ. ನಮ್ಮ ರಾಯರು, ಅದೇ ನಮ್ಮ ಪದ್ದಕ್ಕಜ್ಜಿ ಗಂಡ, ನಿಮಗೆ ಗೊತ್ತೇ ಇದೆಯಲ್ಲ, ನಾನು ಬೇರೆ … Read more

ಇದರರ್ಥವೇನು?: ಸಹನಾ ಪ್ರಸಾದ್

ನಾನು ರಜಿತಾ. ರಂಜಿತಾ ಹೆಸರು ಬರೆಯುವಾಗ ಈ ರೀತಿ ತಿರುಚಲ್ಪಟ್ಟು, ಈ ಹೆಸರು ಖಾಯಂ ಆಯಿತು. ವಯಸ್ಸು ೫೫. ಗಂಡ ಸದಾಶಿವ, ದೊಡ್ಡ ಕಂಪನಿಯಲ್ಲಿ ಕೈ ತುಂಬಾ ಕೆಲಸ ಹಾಗು ಕೈ ತುಂಬಾ ದುಡ್ಡೂ ಸಹ. ಮೊದಲಿಂದಲೂ ಮಿತಭಾಷಿ. ಈಗ ವಯಸ್ಸಾದಂತೆ ಮಹಾ ಮೌನಿ. ಬೆಳಗ್ಗೆ ಎದ್ದು ತನ್ನ ಪ್ರಾತಃವಿಧಿಗಳನ್ನು ತೀರಿಸಿ, ೨೦ ನಿಮಿಷ ವ್ಯಾಯಾಮ ಮಾಡಿ , ತಿಂಡಿ ತಿನ್ನುತ್ತಾ ಪೇಪರ್ ಓದಿ ಹೊರಡುವರು. ಹೊಸ ಮಾದರಿಯ ಕಾರು, ಅದಕ್ಕೊಬ್ಬ ಡ್ರೈವರ್ ಇದಾನೆ. ಗಂಡನ ದಿನಚರಿಯಲ್ಲಿ … Read more