ಪಂಜು ಕಾವ್ಯಧಾರೆ

**ಮಾರಿಬಲೆಯಾ ** ಬಲೆಯೆತ್ತಿ ಹೊರಟಿಹರು ಬೆಸ್ತರು ಸಡಗರದಿ ಜಡಿಮಳೇಲಿ ಕಡಲ ತಡಿಗೆ I ಇಂದು ಸಿಕ್ಕಾವೋ? ಭೂತಾಯಿ ಕೊಡವಾಯಿ ಕಂಡಿಕಿ ಜಾರಿ ನನ್ನ ಬಲಿಗೆ I ಬಂದಿಹುದು ಮಳೆಗಾಲ ಬೀಸುವುದೇ ಬಲೆ ಈಗ! ಸಿಕ್ಕೇ ಸಿಕ್ಕಾವು ಎಸುಡಿ ಸಿಗಡಿ I ಮರವಂತೆ ಕಡೆಹೋಪ ಬರುವುದು ಬಾರಿ ಬೆಲೆ ಸಿಕ್ಕರೆ ಭೂತಾಯಿ ಕಂಡಿಕಿ I ಬೋರ್ಗರೆವ ಕಡಲೆಡೆಗೆ ಬಂದಾನೋ ಮೊಗವೀರ ಬೀಸಿದಾ *ಮಾರಿ**ಬಲೆಯಾ I ನನ್ನಯ ಮನೆಯಿಂದ ದೂರಾದ ಮೈಲುವರೆಗೂ ಇಂದು ನನ್ನದೇ ಬಲೆಯೂ I ಬಲೆ ಬಿಡುವುದು … Read more

”ಸಲೂನೆಂಬ ಶೋಕಿಯ ಸುಖಗಳು”: ಪ್ರಸಾದ್‌ ಕೆ.

”ಮುನ್ನೂರು ರೂಪಾಯಿ ಸಾರ್…”, ಅಂದಿದ್ದೆ ನಾನು. ಪರಿಚಿತ ಹಿರಿಯರೊಬ್ಬರು ನನ್ನ ಈ ಮಾತನ್ನು ಕೇಳಿ ನಿಜಕ್ಕೂ ಹೌಹಾರಿಬಿಟ್ಟಿದ್ದರು. ಅಂದು ನಾವು ಮಾತನಾಡುತ್ತಿದ್ದಿದ್ದು ಕ್ಷೌರದ ಬಗ್ಗೆ. ಊರಿನಲ್ಲಿ ನಲವತ್ತು-ಐವತ್ತು ರೂಪಾಯಿಗಳಿಗೆ ಮುಗಿದುಹೋಗುತ್ತಿದ್ದ ಹೇರ್ ಕಟ್ಟಿಂಗಿಗೆ ಅಷ್ಟೊಂದು ಹಣ ಸುರಿಯುವಂಥದ್ದೇನಿದೆ ಎನ್ನುವ ಅಚ್ಚರಿ ಅವರದ್ದು. ‘ಇವೆಲ್ಲ ಬೇಕಾ ನಿಂಗೆ’ ಎಂದು ಕಣ್ಣಲ್ಲೇ ನುಂಗುವಂತೆ ನನ್ನನ್ನು ನೋಡಿದರು. ಎಲ್ಲರಿಗೂ ಈಗ ಶೋಕಿಯೇ ಬದುಕಾಗಿಬಿಟ್ಟಿದೆ ಎಂದು ಬೈದೂಬಿಟ್ಟರು. ಬೈದಿದ್ದು ನನಗೋ ಅಥವಾ ಕ್ಷೌರ ಮಾಡಿಸಿದವನಿಗೋ ಗೊತ್ತಾಗಲಿಲ್ಲ. ಆದರೆ ಭೌತಿಕವಾಗಿ ನಾನೇ ಅಲ್ಲಿ ಇದ್ದಿದ್ದರ … Read more

ಧರ್ಮಸಂಕಟ: ಗಿರೀಶ ಜಕಾಪುರೆ

ಹಿಂದಿ ಮೂಲ – ಪ್ರೇಮಚಂದ ಕನ್ನಡಕ್ಕೆ – ಗಿರೀಶ ಜಕಾಪುರೆ 1. ‘ಪುರುಷರಲ್ಲಿ ಸ್ತ್ರೀಯರಲ್ಲಿ ಬಹಳ ವ್ಯತ್ಯಾಸವಿರುತ್ತದೆ. ನಿಮ್ಮ ಮನಸ್ಸು ಕನ್ನಡಿಯಂತೆ ಕಠಿಣವಾಗಿರುತ್ತದೆ, ಮತ್ತೆ ನಮ್ಮದು ಹೂವಿನಂತೆ ಮೃದು. ಹೂಗಳು ವಿರಹದ ಶಾಖ ತಾಳಲಾರವು’ ‘ಹರಳು ತಾಗಿದರೂ ಸಾಕು ಕನ್ನಡಿ ಚೂರಾಗುತ್ತದೆ. ಮೃದು ವಸ್ತುಗಳಲ್ಲಿ ಲೌಚಿಕತೆ ಇರುತ್ತದೆ’ ‘ಬಿಡು, ಮಾತಲ್ಲಿ ಮರಳು ಮಾಡಬೇಡ. ದಿನವಿಡೀ ನೀ ಬರುವ ದಾರಿ ನೋಡುತ್ತೇನೆ, ರಾತ್ರಿಯಿಡಿ ಗಡಿಯಾರದ ಮುಳ್ಳುಗಳನ್ನು. ಇಷ್ಟಾದ ಮೇಲೆ ಹೇಗೋ ಕಷ್ಟಪಟ್ಟು ನಿನ್ನ ದರ್ಶನವಾಗುತ್ತದೆ’ ‘ನಾನು ಸದಾಕಾಲ ನಿನ್ನನ್ನು … Read more

”ಸಂಬಂಧಗಳು ನಮಗೆಷ್ಟು ಮುಖ್ಯ?”: ಪೂಜ ಗುಜಾರನ್‌

ಸಂಬಂಧಗಳು ನಮಗೆಷ್ಟು ಮುಖ್ಯ? ಯಾವ ಸಂಬಂಧಗಳು ನಮ್ಮನ್ನು ತುಂಬಾ ಭಾವನಾತ್ಮಕವಾಗಿ ಕಾಡುತ್ತದೆ.? ಯಾವ ಸಂಬಂಧಗಳನ್ನು ನಾವು ಯಾವತ್ತು ಬಿಟ್ಟು ಹೋಗುವುದಿಲ್ಲ.?ಯಾರು ನಮ್ಮನ್ನು ಅತಿಯಾಗಿ ಕಾಡುತ್ತಾರೆ.? ಇಲ್ಲಿ ಸಂಬಂಧಗಳನ್ನು ಬೆಳೆಸಲು ಯಾವ ಮಾನದಂಡಗಳ ಅಗತ್ಯವಿದೆ.? ಪ್ರಶ್ನೆಗಳು ಮುಗಿಯಲಾರದಷ್ಟಿವೆ.. ಉತ್ತರಗಳನ್ನು ನಾವು ಹುಡುಕಬೇಕಷ್ಟೆ.. ನಮ್ಮ ಬದುಕಿನಲ್ಲಿ ಬರುವ ಸಂಬಂಧಗಳು ಅರಿತೋ ಅರಿಯದೆನೋ ನಮ್ಮನ್ನು ಗಾಢವಾಗಿ ತನ್ನ ಬಾಹುಗಳಲ್ಲಿ ಬಂಧಿಸಿರುತ್ತದೆ. ಮಾನವ ಸಂಬಂಧಗಳೆ ಹೀಗೆ ಹುಟ್ಟಿದ ಕೂಡಲೇ ಸಂಬಂಧಗಳ ಸಂಕೋಲೆಯೊಳಗೆ ಬಂಧಿಯಾಗಿರುತ್ತಾನೆ. ತನ್ನ ತಾಯಿ ಜೊತೆ ಶುರುವಾದ ಈ ಸಂಬಂಧ ಇನ್ನಷ್ಟು … Read more

ಬದಲಾಗುವ ಬಣ್ಣಗಳು (ಭಾಗ 3): ಅಶ್ಫಾಕ್ ಪೀರಜಾದೆ

ಇಲ್ಲಿಯವರೆಗೆ – 5 – ಚೇತನ ವಿವಾಹದ ನಂತರ ಇನ್ನಷ್ಟು ವಿಚಲಿತನಾದ. ಇನ್ನಷ್ಟು ದ್ವಂದ್ವಕ್ಕೆ ಒಳಗಾದ ಮಾನಸಿಕವಾಗಿ ಕಾವೇರಿಯೊಂದಿಗೆ ಹೊಂದಾಣಿಕೆ ಸಾಧ್ಯವಾಗುತ್ತಿರಲಿಲ್ಲ. ಪವಿತ್ರೆಯ ನೆನಪು ಅವನೆದೆಯಲ್ಲಿ ಬಿರುಗಾಳಿಯಾಗಿ ಬೀಸಿದಾಗ ಈತ ತರಗೆಲೆಯಂತಾಗಿ ಬಿಡುತ್ತಿದ್ದ. ತತ್ತರಿಸಿ ಹೋಗುತ್ತಿದ್ದ. ಮನದ ಯಾತನೆಯ ತೀವ್ರತೆ ಕಡಿಮೆಗೊಳಿಸಲು ಮತ್ತೇ ಮತ್ತೇ ಅವನು ಕುಡಿತಕ್ಕೆ ಶರಣಾಗುತ್ತಿದ್ದ. ಅದೇ ಅಮಲಿನಲ್ಲಿ ಎಲ್ಲ ಮನಸಿನ ಎಲ್ಲ ತಡೆಗೊಡೆಗಳು ದಾಟಿ ಮತ್ತೆ ಪವಿತ್ರೆಯ ಮನೆಯ ದಾರಿ ಹಿಡಿಯುತ್ತಿದ್ದ. ಪವಿತ್ರಳ ಮನೆ ಇವನಿಗೆ ಮಾನಸಿಕ ನೆಮ್ಮದಿಯ ಕೇಂದ್ರವಾಗಿತ್ತು. ಈತನ ಮದ್ವೆಯ … Read more

ಅಲಪಿಯ ಹೌಸ್ ಬೋಟ್ ಎಂಬ ಸ್ವರ್ಗದತುಣುಕು!: ಭಾರ್ಗವ ಎಚ್ ಕೆ

ಸಮುದ್ರದದಂಡೆಗೆ ಬೌಂಡರಿ ಗೆರೆಗಳಂತೆ ಕಾಣುವ ಕಬ್ಬಿಣದ ರೈಲು ಹಳಿಗಳು!. ಅದರ ಮೇಲೆ ಎಡೆಬಿಡದೆ ಅತ್ತಿಂದಿತ್ತ ಓಡಾಡುವ ಕೊಂಕಣ ರೈಲುಗಳು. ಆ ಹಳಿಯ ದಾರಿಯಲ್ಲೊಂದು ಅಲಪಿ ಎಂಬ ಕುಟ್ಟ ನಾಡು!. ರೈಲಿನಲ್ಲಿ ಪಯಣಿಸುವಾಗ ಒಂದು ದಿಕ್ಕಿನಲ್ಲಿ ಮೀನು ಹಿಡಿಯುವ ಬೋಟ್ ಗಳು ಕಣ್ಣಿಗೆ ಕಂಡರೆ, ಇನ್ನೊಂದು ದಿಕ್ಕಿನಲ್ಲಿ ವೈಭವದ ಹವಾನಿಯಂತ್ರಿತ ನಯನ ಮನೋಹರ ಹೌಸ್ ಬೋಟ್ ಗಳ ಇರುವೆ ಸಾಲು! ಹೆಂಡತಿ, ಮಗಳೊಂದಿಗೆ ಕುಟುಂಬ ಸಮೇತ ದೇವರ ನಾಡಿನ ಪ್ರಸಿದ್ಧ ಹೌಸ್ ಬೋಟ್ ಪ್ರವಾಸಿ ತಾಣವಾದ ಅಲಪಿ ಊರಿಗೆ … Read more

ನೆನಪುಗಳ ಮಾಲೀಕ………: ರಘು ಕ.ಲ.,

ಶಿಕ್ಷಣ ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲಿ ಪಡೆದರೆ ಬಹಳ ಉತ್ತಮ ಎಂಬುದು ಅನೇಕರ ಅಭಿಪ್ರಾಯ. ಏಕೆಂದರೆ ವಿಜ್ಞಾನ, ತಂತ್ರಜ್ಞಾನ, ಸೃಜನಶೀಲತೆ, ನೃತ್ಯ, ಸಂಗೀತ …… ಹೀಗೆ ಇನ್ನೂ ಹತ್ತಾರು ವಿಚಾರಗಳಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಬಹಳ ಹತ್ತಿರವಾದದ್ದು, ಅನುಕೂಲವಾದದ್ದು ನಗರ ಪ್ರದೇಶ ಎಂಬ ಹಂಬಲದಲ್ಲಿಯೋ, ಬೆಂಬಲದಲ್ಲಿಯೋ ಏನೋ ಗ್ರಾಮೀಣ ಪ್ರದೇಶದ ಕೆಲವರು ನಗರದೆಡೆಗೆ ಮೊರೆ ಹೋಗುತ್ತಿದ್ದಾರೆ. ಎಲ್ಲವೂ ಸಿಗುತ್ತದೆಂಬುದು ಅವರ ಕಲ್ಪನೆಯಷ್ಟೇ ಸರಿ. ಸರಿಯೋ? ತಪ್ಪೋ? ಎಂದು ನಿರ್ದಿಷ್ಟವಾಗಿ ಹೇಳಲಾಗುವುದಿಲ್ಲ. ಅವರವರ ಮನಸ್ಸಿನಂತೆ ಅವರವರ … Read more

ಕೊಠಡಿ ಮೇಲ್ವಿಚಾರಣೆ ಎಂಬ ಗುಮ್ಮ…!: ಶೀಲಾ. ಗೌಡರ. ಬದಾಮಿ.

ಶೈಕ್ಷಣಿಕ ವರ್ಷ ಪ್ರಾರಂಭವಾದೊಡನೆ ಮೊದಲ ಸಭೆಯಲ್ಲೇ ಮುಖ್ಯಸ್ಥರು,”ಕಳೆದ ವರ್ಷ ಆದದ್ದಾಯ್ತು. ಈ ವರ್ಷ ಮಾತ್ರ ನಾವು 100/ ರಿಸಲ್ಟ ಮಾಡಬೇಕು.ಅದಕ್ಕಾಗಿ ಪರೀಕ್ಷೆ ಬಂದಾಗ ಗಡಿಬಿಡಿ ಮಾಡುವುದಕ್ಕಿಂತ ಈಗಿನಿಂದಲೇ ಗುರಿ ಸಾಧನೆಗೆ ಕಂಕಣಬದ್ದರಾಗಬೇಕು. “ ಎಂದು ಎಚ್ಚರಿಸುತ್ತಾರೆ. ಆಗಿನಿಂದಲೇ ಎಲ್ಲ ಶಿಕ್ಷಕರ, ಉಪನ್ಯಾಸಕರ ಎದೆ ಢವ….ಢವ…..ವಾರ್ಷಿಕ ಅಂದಾಜು,ಕ್ರಿಯಾಯೋಜನೆ ಸಿದ್ದಪಡಿಸಿ, ಡಿಸೆಂಬರ್ ಅಂತ್ಯಕ್ಕೆ ಸಿಲ್ಯಾಬಸ್ ಮುಗಿಸಿ, ಎರಡು ತಿಂಗಳು ರಿವಿಜನ್ ಮಾಡಬೇಕು ಎಂದು ಜೂನ್ ಒಂದರಿಂದಲೇ ಆನ್ ಯುವರ್ ಮಾರ್ಕ, ಗೆಟ್ ಸೆಟ್,ಗೋ……ಎಂದು ನಮ್ಮನ್ನು ರೇಸಿಗೆ ಬಿಟ್ಟು ಬಿಡುತ್ತಾರೆ. ಅದು … Read more

20ನೇ ಶತಮಾನ ಕಂಡ ಸಂತ ಶ್ರೇಷ್ಠ- ಈರೋಡು ವೆಂಕಟ ರಾಮಸ್ವಾಮಿ ನಾಯ್ಕರ್: ಶ್ರೀವಲ್ಲಭ ರಾ. ಕುಲಕರ್ಣಿ

ಭಾರತೀಯ ಸಮಾಜದ ರೂಢ ಮೂಲ ನಂಬಿಕೆಗಳ ಮೂಲ ಸ್ವರೂಪವನ್ನು ಪ್ರಶ್ನಿಸಿದ, ಅಲುಗಾಡಿಸಿದ ತೀಕ್ಷ್ಣ ವಿಚಾರವಾದಿ, 20ನೇ ಶತಮಾನದ ಭಾರತೀಯ ಮಹಾನ್ ಚಿಂತಕ ದ್ರಾವಿಡ ನಾಡಿನ ಈರೋಡು ವೆಂಕಟ ರಾಮಸ್ವಾಮಿ ನಾಯ್ಕರ್ 1879 ಸೆಪ್ಟೆಂಬರ್ 17ರಂದು ಮದ್ರಾಸ್ ರಾಜ್ಯದ ಕೊಯಿಮತ್ತೂರ್ ಜಿಲ್ಲೆಯ ಈರೋಡು ಎಂಬಲ್ಲಿ ಹುಟ್ಟಿದರು, ತಮ್ಮ ವಿಚಾರಗಳಿಗೆ ಚಳುವಳಿಯ ಸ್ಪರ್ಶ ನೀಡಿದ ಅವರ ಬದುಕು ಮತ್ತು ಚಿಂತನೆಗಳು ದ್ರಾವಿಡ ಅಸ್ಮಿತೆಯೊಂದನ್ನು ಹುಟ್ಟು ಹಾಕಿ, ತಮಿಳು ನಾಡಿನಲ್ಲಷ್ಟೇ ಅಲ್ಲದೇ ದೇಶ ವಿದೇಶಗಳಲ್ಲಿಯೂ ಪಸರಿಸುವಂತೆ ಮಾಡಿದ್ದು ಇತಿಹಾಸ. ಪೆರಿಯಾರ್ ರಾಮಸ್ವಾಮಿಯವರ … Read more

ಯಾವುದೇ ಗುಣಾಕಾರ 5 ಸೆಕೆಂಡಿನಲ್ಲಿ ಮಾಡಿ: ಪ್ರವೀಣ್‌ ಕೆ.

https://www.youtube.com/watch?v=Y0frHVjYAEo  ಈ ವಿಡಿಯೋದಲ್ಲಿ ಮನಸ್ಸಿನಲ್ಲಿಯೇ ಹೇಗೆ ಗುಣಾಕಾರಗಳನ್ನು ಮಾಡಬಹುದು ಎಂಬುದನ್ನು ತಿಳಿಸಲಾಗಿದೆ. ಇದನ್ನು ಪ್ರತಿಯೊಂದೂ ಲೆಕ್ಕದಲ್ಲಿ ಉಪಯೋಗಿಸಿದರೆ ನಿಮ್ಮ ಗಣಿತದ ವೇಗ ಹೆಚ್ಚುತ್ತದೆ. ಪ್ರಾಕ್ಟೀಸ್ ಮಾಡಲು ಇಲ್ಲಿ ಒತ್ತಿ : Practice Question 1  

ಅಂತರ ರಾಷ್ಟ್ರೀಯ ಖ್ಯಾತಿಯ ಛಾಯಾಚಿತ್ರಕಾರ ಮಹೇಶ್: ಎಂ.ಎನ್.ಸುಂದರ ರಾಜ್

ಪ್ರಕೃತಿ ಛಾಯಾಚಿತ್ರಗಳು ಕೇವಲ ಬಣ್ಣಬಣ್ಣದ ಚಿತ್ರಗಳಲ್ಲ, ಪ್ರಕೃತಿಯಲ್ಲಿ ಮೂಡಿಬಂದ ಸುಂದರ ಕಲಾಕೃತಿಗಳು. ಅವುಗಳನ್ನು ಕೆಮರಾದಲ್ಲಿ ಸೆರೆಹಿಡಿದು ಕಣ್ಮನಗಳಿಗೆ ಮುದನೀಡುವಂತೆ ಸಮಾಜಕ್ಕೆ ನೀಡಿರುವುದರ ಹಿಂದೆ, ಅಪಾರ ಪರಿಶ್ರಮ ಮತ್ತು ತನ್ಮಯತೆಯಿದೆ. ಅದೊಂದು ತಪಸ್ಸು. ನಾವು ಆ ಚಿತ್ರಗಳನ್ನು ನೋಡಿ ಚೆನ್ನಾಗಿದೆ ಎಂದು ಒಂದೇ ಮಾತಿನಲ್ಲಿ ಹೇಳುತ್ತೇವೆ. ಆದರೆ ಅಂತಹ ಫೋಟೋ ತೆಗೆಯಲು ಪಟ್ಟ ಪಾಡು, ತಿರುಗಿದ ಕಾಡು ಮೇಡುಗಳು, ಜೀವದ ಹಂಗು ತೊರೆದು ವನ್ಯ ಜೀವಿಗಳ ಅಪಾಯವನ್ನೂ ಲೆಕ್ಕಿಸದೆ ಒಂದು ಉತ್ತಮ ಚಿತ್ರಕ್ಕೆ ದಿನಗಟ್ಟಲೆ ಆಹಾರ ನಿದ್ರೆಯಿಲ್ಲದೆ ಕಾದು … Read more

ಕೃಷ್ಣಂ ವಂದೇ ಜಗದ್ಗುರುಂ !: ಕೆ ಟಿ ಸೋಮಶೇಖರ ಹೊಳಲ್ಕೆರೆ

ರಾಮಾಯಣ ಮಹಾಭಾರತಗಳು ಭಾರತ ದೇಶದ ಮಹಾಕಾವ್ಯಗಳು, ಹಾಗೇ ಅವು ಇತಿಹಾಸ ಅಂತನೂ ಸಾಕ್ಷಸಮೇತ ಇತಿಹಾಸಕಾರರು ಹೇಳುತ್ತಿದ್ದಾರೆ. ‘ಮಹಾಭಾರತ’ ಪ್ರಪಂಚದಲ್ಲೇ ಅತಿ ದೊಡ್ಡ ಮಹಾಕಾವ್ಯ. ಇದರ ಕತೃ ವ್ಯಾಸ. ಮಹಾಭಾರತದಲ್ಲಿ ಭೀಷ್ಮ ಪರ್ವ ಬಹಳ ಮುಖ್ಯವಾದುದು. ಏಕೆಂದರೆ ಭೀಷ್ಮಪರ್ವದಲ್ಲೇ ಕುರುಕ್ಷೇತ್ರ ಯುದ್ದ ಆರಂಭವಾಗುವ ಕಥನವಿರುವುದು, ಕೃಷ್ಣಾರ್ಜುನರ ಸಂವಾದ ರೂಪದಲ್ಲಿರುವ ಭಗವದ್ಗೀತೆ ಇರುವುದು. ಅರ್ಜುನನ ವಿಷಾದ ಭಾವದಿಂದ ಆರಂಭವಾಗುವ ಭಗವದ್ಗೀತೆ ಶ್ರೀಕೃಷ್ಣ ಅರ್ಜುನನಿಗೆ ಅನುಗ್ರಹಿಸುವ ಪ್ರಸಾದದೊಂದಿಗೆ ಮುಗಿಯುತ್ತದೆ. ವೇದಗಳ ಸಾರ ಉಪನಿಷತ್ತುಗಳು, ಉಪನಿಷತ್ತುಗಳ ಸಾರಸರ್ವಸ್ವ ಭಗವದ್ಗೀತೆ ಅಂತ ಹೇಳುವರು. ಮಹಾಭಾರತದಲ್ಲಿ … Read more