ಪಂಜು ಕಾವ್ಯಧಾರೆ

ಹನಿಗಳು.. ನಗಲು ಹೇಳಿದಬುದ್ಧಆದರೆಮಾನವ ನಗದು ಗಾಗಿನಗುವುದನ್ನೇಮರೆತಬುದ್ಧಮೌನನಾದ… ನಾನು ಅಹಂಕಾರದಲ್ಲಿಶಾಂತಿ ನೆಮ್ಮದಿಗಾಗಿಊರೂರುಅಲೆದೆಶಾಂತಿ ತನ್ನೊಳಗೆ ಇದೆಎಂದು ತಿಳಿದಾಗಅವನ್ನಲ್ಲಿನ‘ನಾನು’ ಚಿರನಿದ್ರೆಗೆಜಾರಿತ್ತು… ನಾಕಷ್ಟವೆಂದುಬುದ್ಧನೆಡೆಗೆ ಹೋದೆಬುದ್ಧನ ನಗುಕಂಡನನ್ನ ಕಷ್ಟಗಳುನನ್ನಲ್ಲಿಯೇಲೀನವಾದವು… ಬುದ್ಧನೆಂಬ ಬೆಳಕುಇಲ್ಲಿ ಹಚ್ಚಿಟ್ಟ ದೀಪದ ಪ್ರಭೆಬೆಳಕ ನಡುವೆದುಃಖಕಷ್ಟಅಹಿಂಸೆಅಶಾಂತಿಅಸುನಿಗಿದ್ದವು… ಜಗತ್ತಿನ್ನು ನಿದ್ದೆಯಿಂದ ಎಬ್ಬಿಸಲುನಡುರಾತ್ರಿ ನಿದ್ದೆತೊರೆದ ಬುದ್ದುಜಗತ್ತಿನ ನಿದ್ದೆಯಿಂದ ಏಳುವಯಾವ ಪ್ರಯತ್ನಮಾಡಲಿಲ್ಲ.. ನಗುವಿನ ಶಾಂತಿಯಮಹತ್ವ ಹೇಳಿದಬುದ್ದನಗರದ ಗದ್ದಲದನಡುವೆಬುದ್ದ ನಗುವಿತ್ತುಯಾರ ಮನಸ್ಸಿನಲ್ಲಿನಗುವಿನ ಕುರುಹು ಇರಲಿಲ್ಲ.. ಬುದ್ದನಪ್ರತಿಮೆಗೆಗೆದ್ದಲು ಕಟ್ಟಿರಬಹುದುಪ್ರತಿ ಎದೆಯಲ್ಲಿ ನೆಲೆಸಿರುವಬುದ್ಧನವಿಚಾರಗಳಿಗಲ್ಲ.. -ವೃಶ್ಚಿಕ ಮುನಿ.. ಶಾಲ್ಮಲೆಯ ಸ್ವಗತ ಧಾರವಾಡದ ಸೋಮೇಶ್ವರ ತಾಣದಿಹುಟ್ಟುವೆ ನಾನು ಚಿಕ್ಕ ಚಿಲುಮೆಯ ರೂಪದಿಶಾಲ್ಮಲಾ ಎಂದೆನುವ ಸುರನದಿಯು … Read more

“ಸಮಾನತೆಯ ಹರಿಕಾರ” ಕುವೆಂಪು: ಡಾ. ಅವರೆಕಾಡು ವಿಜಯ ಕುಮಾರ್

ಪ್ರತಿಯೊಂದು ಮಗುವೂ ಹುಟ್ಟುತ್ತಲೇವಿಶ್ವಮಾನವ, ಬೆಳೆಯುತ್ತಾ ನಾವು ಅದನ್ನು ಅಲ್ಪಮಾನವ’ನನ್ನಾಗಿ ಮಾಡುತ್ತೇವೆ.ಮತ್ತೆ ಅದನ್ನು ‘ವಿಶ್ವಮಾನವ’ನನ್ನಾಗಿ ಮಾಡುವುದೇ ಶಿಕ್ಷಣದ ಕರ್ತವ್ಯವಾಗಬೇಕು. -ಕುವೆಂಪು ಪ್ರಕೃತಿಯ ತಾಣವಾದ ಮಲೆನಾಡಿನ ಅಪ್ರತಿಷ್ಠಿತ ಮನೆತನ ಒಂದರಲ್ಲಿ 1904, ಡಿಸೆಂಬರ್ 29ರಂದು ಚಿಕ್ಕಮಗಳೂರು ಜಿಲ್ಲೆಯ ಹಿರೇಕೂಡಿಗೆ ಗ್ರಾಮದಲ್ಲಿ ಶ್ರೀ ವೆಂಕಟಪ್ಪ ಮತ್ತು ಶ್ರೀಮತಿ ಸೀತಮ್ಮ ಅವರ ಬಾಳಿನ ಬೆಳಕಾಗಿ ಪುಟ್ಟಪ್ಪನವರು ಜನಿಸಿದರು. ಶಿವಮೊಗ್ಗ ಜಿಲ್ಲೆಯ ಕುಪ್ಪಳ್ಳಿ ಗ್ರಾಮದಲ್ಲಿ ಬೆಳೆದವರು ವಿಶ್ವಮಾನವರಾಗಿ ವಿಜೃಂಭಿಸಿ ಇತಿಹಾಸ ಪುಟದ ಸ್ವರ್ಣ ಅಕ್ಷರಗಳಲ್ಲಿ ಸೇರ್ಪಡೆಯಾದರು. ಆಗಿನ ಕಾಲದ ಬಡತನ, ದಾರಿದ್ರ್ಯ, ಅಸಾಯಕತೆ ಇವುಗಳನ್ನು … Read more

“ಬಯಲುಡುಗೆಯ ಬೊಂತಾ – ಕತ್ತಲ ಗರ್ಭದ ಬೇಗೆಯಲಿ ಬೇಯುವ ಸಾವಿರದ ಒಂದು ಚಿತ್ರಕಾವ್ಯ”: ಎಂ.ಜವರಾಜ್

“ಸಂಸಾರವೆಂಬುದೊಂದು ಗಾಳಿಯ ಸೊಡರು,ಸಿರಿಯೆಂಬುದೊಂದು ಸಂತೆಯ ಮಂದಿ, ಕಂಡಯ್ಯ!ಇದ ನೆಚ್ಚಿ ಕೆಡಬೇಡ ಸಿರಿಯೆಂಬುದ!ಮರೆಯದೆ ಪೂಜಿಸುಆಚಾರವೇ ಸ್ವರ್ಗ, ಅನಾಚಾರವೇ ನರಕ,ನೀವೇ ಪ್ರಮಾಣು ಕೂಡಲಸಂಗಮದೇವ”(-ಬಸವಣ್ಣ) ಲೇಖಕ, ತಾನು ಅನುಭಿಸಿದ ನೋವು, ಯಾತನೆ, ತುಮುಲ, ರಂಜನೆ, ಕಾಮ, ಭೋಗ, ಶೀಲ, ಶೋಷಣೆ, ಚಳುವಳಿ, ಹೋರಾಟ, ಧರ್ಮ, ದೇವರು, ಜಾತಿ, ಮತ, ಪಂಥ, ಕುರಿತಾದ ತನ್ನೊಳಗಿನ ಅನುಭವವನ್ನು ಹೊಸದೇ ಎನುವ ಸೃಜನಶೀಲ ಕತೆ ಕವಿತೆ ಕಾದಂಬರಿ ಮತ್ತು ಮಹಾಕಾವ್ಯವಾಗಿ ಚಿತ್ರಿಸಿದ್ದಿದೆ. ಇದರ ಆಚೆಗು ಲೇಖಕನೊಬ್ಬನ ಮೂಲಕ ತಾನು ಹುಟ್ಟುವ ಮುನ್ನಿನ – ಈಗಾಗಲೇ ನಡೆದು … Read more

ಒಂದು ನಾಯಿಮರಿಗಾಗಿ….: ಜೆ.ವಿ.ಕಾರ್ಲೊ

ಅಂದು ಸಂಜೆ ಲಂಡನಿನಲ್ಲಿ ಮೈ ಕೊರೆಯುವಂತ ಚಳಿ. ಬಸ್ಸಿನೊಳಗೆ ಹಲ್ಲು ಕಚ್ಚಿಕೊಂಡು ಮುದುಡಿ ಕುಳಿತಿದ್ದ ಪ್ರಯಾಣಿಕರಿಗೆ ಯಾರೋ ಎಡೆಬಿಡದೆ ಚೂರಿಯಿಂದ ಕೊಚ್ಚುತ್ತಿರುವಂತ ಅನುಭವವಾಗುತ್ತಿತ್ತು. ಸದ್ದು ಮಾಡುತ್ತಾ ರೊಂಯ್ಯನೆ ಬಸ್ಸಿನೊಳಗೆ ನುಗ್ಗುತ್ತಿದ್ದ ಗಾಳಿಯಿಂದ ರಕ್ಷಣೆ ಪಡೆದುಕೊಳ್ಳಲು ಜನ ಹರಸಾಹಸ ಪಡುತ್ತಿದ್ದರು. ಬಸ್ಸು ಮುಂದಿನ ಸ್ಟಾಪಿನಲ್ಲಿ ನಿಂತಾಗ ಇಬ್ಬರು ಮಹಿಳೆಯರು, ಮತ್ತೊಬ್ಬ ಪುರುಷ ಬಸ್ಸು ಹತ್ತಿ ಖಾಲಿ ಇದ್ದ ಸೀಟುಗಳಲ್ಲಿ ಆಸೀನರಾದರು, ಮಹಿಳೆಯರಲ್ಲಿ ಒಬ್ಬಾಕೆಗೆ ಅಷ್ಟೇನೂ ವಯಸ್ಸಾಗಿರಲಿಲ್ಲ. ಆಕೆ ಸೀಲ್ ಚರ್ಮದ ಕೋಟು ಧರಿಸಿದ್ದಳು. ಅಂದಿನ ಮೇಲ್ಮಧ್ಯಮ ವರ್ಗದ ಸ್ತ್ರೀಯರ … Read more

ದಂತ ಪುರಾಣ: ಸಂಗೀತ ರವಿರಾಜ್

ಹಾಲು ಕುಡಿಯಲೊಲ್ಲದ ಮಗಳಿಗೆ ಪ್ರೇರೇಪಿಸಲು ಚಂದ್ರನ ತೋರಿಸಿ ಗಣಪತಿಯ ದಂತ ಮುರಿದದ್ದು ಹೇಗೆ ಗೊತ್ತಾ ಎಂಬ ಕತೆಯನ್ನು ಪ್ರಾರಂಭಿಸಿದೆ. ಆನೆ ತಲೆ ಜೋಡಿಸಿದ್ದನ್ನು ನೋಡಿ ನಕ್ಕ ಚಂದ್ರನಿಗೆ ಗಣಪತಿ ಸಿಟ್ಟಿನಿಂದ ತನ್ನ ಮುಖದ ದಂತವನ್ನು ತುಂಡರಿಸಿ ಎಸೆದ ಎಂದು ನನಗೆ ತಿಳಿದ ಗಣಪತಿಯ ‘ ದಂತ’ ಕತೆಯನ್ನು ಹೇಳಿ ಲೋಟ ಖಾಲಿ ಮಾಡಿಸಿದೆ. ಆದರೆ ಈಗ ನಾನು ಮನುಷ್ಯರ ದಂತದ ಕುರಿತ ಸ್ವಾರಸ್ಯಕರ ಕತೆಗಳನ್ನು ಹೇಳಹೊರಟಿರುವೆ. ದೇಹದ ಯಾವ ಅಂಗಕ್ಕು ಚಿಕ್ಕ ಗಾಯವಾದರು ಆ ದಿನ ಏನೋ … Read more

ಕತ್ತಲ ಗುಮ್ಮ: ಶೀಲಾ ಗೌಡ

ಕಾಲೇಜ್, ಟುಟೋರಿಯಲ್ಸ್, ಟೆಸ್ಟ್, ಪರೀಕ್ಷೆ ಬರೀ ಇದೇ ಆಗಿದೆ ನಮ್ಮ ದೈನಂದಿನ ಕೆಲಸ. ಬೇಜಾರು ಮಾಡಿಕೊಳ್ಳೋ ಹಾಗಿಲ್ಲ, ಅಕಾಸ್ಮಾತ್ತಾದರೂ ಹೇಳುವ ಹಾಗಿಲ್ಲ. ಅಪ್ಪಿ ತಪ್ಪಿ ಹೇಳಿದರೆ ಕೇಳಿದವರ ಪುಕಸಟ್ಟೆ ಭೋದನೆ ಜೊತೆಗೆ ನಗು ಮೊಗದಿಂದ ಆಲಿಸುವ ಶಿಕ್ಷೆ. ಒಟ್ಟಿನಲ್ಲಿ ಓದೋ, ಮಾರ್ಕ್ಸ್ ತೆಗೆಯೋ ರೇಸಿನಲ್ಲಿ ಓಡ್ತಿದಿವಿ. ಹೀಗೆ ತಮ್ಮ ಬೇಸರವನ್ನು ಹಂಚಿಕೊಳ್ಳುತ್ತ ಟುಟೋರಿಯಲ್ಸ ಕಡೆ ಹೆಜ್ಜೆ ಹಾಕುತಿದ್ದರು ಐವರು ಗೆಳೆಯರು. ಅರವಿಂದನ ಹಾಗೆ ನಾವೆಲ್ಲ ಡಿಪ್ಲೋಮ ಮಾಡಬೇಕಿತ್ತು ಹೀಗೆ ಒಂದೆ ಸರಿ ಟೆನ್ನಷನ್ ಇರ್ತಿರ್ಲಿಲ್ಲ ಎಂದ ಸುನಿಲನ … Read more

ಕಷ್ಟವೇ ದೇವರು………?: ದೀಪಾ ಜಿ.ಎಸ್

ನಮ್ಮ ಜೀವನದಲ್ಲಿ ಕಷ್ಟ ಬಂದಾಗ ಮಾತ್ರ ನಾವುಗಳು ಯಾಕೆ ದೇವರನ್ನ ನೆನಪು ಮಾಡ್ಕೊಂತೀವಿ . ಅದೇ ನಾವು ಸಂತೋಷದಿಂದ ಇದ್ದಾಗ ದೇವರನ್ನ ನೆನಪು ಮಾಡ್ಕೊಳ್ಳೊದೇ ಇಲ್ಲ ಅಲ್ವಾ. ಜೀವನದಲ್ಲಿ ಕಷ್ಟಗಳು ಬಂದಾಗ ನಾವ್ ಯಾಕೆ ತಲೆ ಬಾಗಬೇಕು. ನಾವ್ ಯಾಕೆ ಕಷ್ಟಗಳಿಗೆ ಹೆದರ್ಬೇಕು……? ನಾವ್ ಯಾಕೆ ಕಷ್ಟಗಳಿಗೆ ಅಂಜಬೇಕು…..? ಕಷ್ಟಗಳು ಬಂದಾಗ ನಾವ್ ಯಾಕೆ ಹೆದರಿ ಕೂತ್ಕೋಬೇಕು….? ನಾವ್ ಯಾಕೆ ಅಳ್ಬೇಕು….? ಹೀಗೆ ಹಲವಾರು ಪ್ರಶ್ನೆಗಳು ಹುಟ್ಟಿಕೊಂಡಾಗ ಉತ್ತರ ನಮ್ಮಲ್ಲೇ ಇದೆ ಅಲ್ವ. ನಮ್ಮಲ್ಲೂ ಕೂಡ ಆ … Read more

ಚಿಮಮಾಂದ ಅಧಿಚೀಯ Americanah: ನಾಗರೇಖಾ ಗಾಂವಕರ

“A white boy and a black girl who grow up in the same working class town in England can get together and race is secondary, but in America even if the white boy and black girl grow up in the same neighbourhood , race would be primary” ಇದು ಆಫ್ರಿಕಾದ ಸಮಕಾಲೀನ ಸಾಹಿತ್ಯ ಲೋಕದ ಶ್ರೇಷ್ಠ ಪ್ರತಿಭೆ ಚಿಮಮಾಂದ … Read more

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 57 & 58): ಎಂ. ಜವರಾಜ್

-೫೭-ತಿಥಿ ಆಗಿ ತಿಂಗ್ಳಾಯ್ತುಈ ಅಯ್ನೋರು ಅಂದ್ಕೊಂಡಂತೆಪಂಚಾಯ್ತಿ ಚೇರ್ಮನ್ರು ಆದ್ರುಈ ನೆಪ ಮುಂದಿಟ್ಕಂಡುಸುತ್ಮುತ್ಲ ಮುಂದಾಳ್ನೆಲ್ಲತ್ವಾಟ್ಗ ಬರೇಳ್ಕಂಡಿದ್ರು ರಾತ್ರ ಆಗಿತ್ತುಆ ಆಳು ಎಲ್ಲಯವಸ್ತಿ ಮಾಡಿದ್ನಎತ್ತಗ ತಿರಿಕಂಡ್ರು ಬಾಡೆಬಾಡುನ್ ಗಮಲೆಯಾರ್ ಕೈಲ್ನೋಡು ಹೆಂಡುದ್ ಬಾಟ್ಲೆಹೆಂಡುದ್ ವಾಸ್ನೆನೆ ಈಗ ಪಂಚಾಯ್ತಿ ಆಳ್ತನ ಎಲ್ಲಈ ಅಯ್ನೋರ್ ಕೈಲೆ ಆಗ ಆ ಚೆಂಗುಲಿಸೋದುರ್ ಮಾವ ಬಂದ ಅನ್ಸುತ್ತಈ ಅಯ್ನೋರು‘ಹ್ಞು ಏನಾ ಇಲ್ಲಿಗಂಟ ಬಂದಿದೈ’ ಅಂದ್ರು‘ಅಯ್ನೋರಾ ಕೇಸು ಏನಾಯ್ತು’‘ನೀನು ಮೈಸೂರ್ ಸಿಟಿಲಿರಂವಕೋರ್ಟು ಲಾಯಿರಿಕಾನೂನ್ ಗೊತ್ತಿರಂವದುಡ್ಡುಕಾಸು ತುಂಬಿರಂವನೀನ್ತಾನೆ ಕಂಪ್ಲೆಂಟ ಕೊಡ್ಸಿಆ ಪರ್ಶುನ ಎಳಿಸ್ದಂವಕಾಲ್ನು ಕಾಲ್ನೆಡ್ತಿನು ಗಲಾಟಿ ಮಾಡಕರಂಪ ರಾದ್ದಾಂತುಕ್ಕ … Read more

ಪಂಜು ಕಾವ್ಯಧಾರೆ

ನನ್ನಲ್ಲಿಷ್ಟು ಕನಸುಗಳಿವೆಮಾರಾಟಕ್ಕಲ್ಲ,ಎಲ್ಲರೆದೆಯ ಬರಡು ಭೂಮಿಯಲ್ಲಿಹೂಳುತ್ತೇನೆ,ಹೊಸ ನಾಳೆಗಳನ್ನೇ ಚಿಗುರಿಸುತ್ತೇನೆ ! ನನ್ನೀ ಕನಸುಗಳು-ಬುದ್ದನ ನಗೆಯ ನೆರಳಲ್ಲಿಬೆಳೆದು ಬಂದಂತಹವು,ಊರಾಚೆಯ ಒಲೆಯ – ಊರೊಳಗೆನೆಮ್ಮದಿಯ ನಗೆ ಬೀರುವಕನಸು ಕಾಣುತ್ತದೆ, ನನ್ನೀ ಕನಸು ! ಮೈಲು ದೂರದಲ್ಲಿಯ ಬೆಟ್ಟದ ಮ್ಯಾಲಿನದೇವದಾಸಿಯೂ ಅಂಗಲಾಚುತ್ತಾಳೆ-ನನ್ನೀ ಕನಸುಗಳಿಗಾಗಿ !ಮುಟ್ಟಾದ ಪುಟ್ಟ ತಂಗಿಯತುಂಬಿ ನಿಂತ ಕಣ್ಣಾಲೆಯೂ ಕೈಚಾಚಿದೆ-ನನ್ನ ಕನಸುಗಳತ್ತ ! ಸುಸ್ತಾಗಿದ್ದ ‘ಗಸ್ತಿ’ಯೂ ಗಸ್ತು ತಿರುಗಲು-ಅಣಿಯಾಗುತಿದ್ದಾನೆ , ಮತ್ತೇನಂಬಿಕೆಯಿದೆ ನನ್ನೀ ಕನಸುಗಳಲ್ಲಿ,ಅಪ್ಪ ಮುಟ್ಟಿದ ನೀರು ಮೈಲಿಗೆಯೆಂದದೊರೆಗಳಿಂದುಕನಸುಗಳ ಕಂಡು – ದಡಬಡಿಸುತ್ತಿದ್ದಾರೆ ! ಇಂದು ಬದುಕಿದ್ದರೆ -ನನ್ನಅಂಬೇಡ್ಕರ್ ?ನನ್ನೀ ಕನಸುಗಳ … Read more

ಸಾಲ: ಅನಂತ ರಮೇಶ್

1 ಹದಿನೈದು ವರ್ಷಗಳಿಂದ ಅಭ್ಯಾಸವಾಗಿ ಹೋಗಿದೆ. ಲತಾಳ ಅದೇ ವ್ಯಂಗ್ಯದ ಮಾತು. “ಸಾಹೇಬರ ಸವಾರಿ ಈವತ್ತು ಯಾವ ಕಡೆಗೆ?”. ನಾನು ಉತ್ತರಿಸುವ ಗೊಡವೆಗೆ ಹೋಗುವುದಿಲ್ಲ. ತಿಂಡಿಯೊಟ್ಟಿಗೆ ಕಾಫಿ ಲೋಟ ಟೇಬಲ್‌ಮೇಲೆ ಬಡಿಯುತ್ತಾಳೆ. ಸಾವಕಾಶ ತಿಂದು ಹೊರಡುತ್ತೇನೆ. ಆ ಸಮಯ ಮೀರುವುದಿಲ್ಲ. ಈಗ ಬೆಳಗಿನ 9:30. ಸಾಮಾನ್ಯವಾಗಿ ಎಲ್ಲರೂ ಆಫೀಸಿಗೆ ಹೊರಡುವ ಸಮಯ! ಹೊರಗೆ ರಸ್ತೆಯಲ್ಲಿ ನಡೆಯುವಾಗ, ಲತಾಳ ಬಗೆಗೆ ಕನಿಕರ ಅನ್ನಿಸುತ್ತೆ. ಅವಳಾದರೂ ಏನು ಮಾಡಿಯಾಳು? ನನಗಂತೂ ತಿಂಗಳಿಗೊಮ್ಮೆ ಸಂಬಳ ತರುವ ಕೆಲಸವಿಲ್ಲ. ಯಾವುದಾದರೂ ಮನೆ ಬಾಡಿಗೆ, … Read more

ಇಳಾ: ಗಿರಿಜಾ ಜ್ಞಾನಸುಂದರ್‌

“ಪಿಂಕಿ, ಬಬ್ಲೂ ಬನ್ನಿ ಮನೆಗೆ… ತುಂಬ ಹೊತ್ತಾಗಿದೆ.. ಆಶಾ ಆಂಟಿ ಮನೆಗೆ ಬಂದ್ರೆ ನಿಮಗೆ ಏನು ಬೇಡ” ಅಂತ ತಮ್ಮ ಮಕ್ಕಳನ್ನು ಕರೆದುಕೊಂಡು ಹೋದಳು ಪಿಂಕು ಬಬ್ಲೂ ಅಮ್ಮ. ಆಗಲೇ ರಾತ್ರಿ ಎಂಟು ಗಂಟೆ ಆಗಿದೆ… ಇನ್ನೊಂದು ಹತ್ತು ನಿಮಿಷಕ್ಕೆ ಇನ್ನು ಆಶಾ ಆಂಟಿ ಮನೆಯಲ್ಲಿ ಉಳಿದುಕೊಂಡಿದ್ದ ೫- ೬ ಮಕ್ಕಳನ್ನೆಲ್ಲ ಅವರವರ ಮನೆಯವರು ಕರೆದುಕೊಂಡು ಹೋದರು. ಆಶಾ ಎಲ್ಲ ಮಕ್ಕಳು ಹೋದಮೇಲೆ ಸಪ್ಪೆ ಮುಖ ಹಾಕಿಕೊಂಡು ಕುಳಿತಿದ್ದಳು. ಮನೆಯೆಲ್ಲ ಚಾಕಲೇಟ್ ಪೇಪರ್ಸ್, ತಿಂಡಿ ತಿನಿಸುಗಳನ್ನು ಚೆಲ್ಲಿ … Read more

ಮರೆಯಲಾಗದ ಮದುವೆ (ಕೊನೆಯ ಭಾಗ): ನಾರಾಯಣ ಎಮ್ ಎಸ್

ಅಯ್ಯರೊಂದಿಗೆ ಮಾತಾಡಿದ್ದು ಎಲ್ಲರಿಗೂ ಸಮಾಧಾನ ತಂದಿತ್ತು. ತನಿಯಾವರ್ತನದ ನಂತರ ಸಿಂಧು ಭೈರವಿ, ತಿಲಂಗ್ ಮತ್ತು ಶಿವರಂಜನಿಯಲ್ಲಿ ಹಾಡಿದ ದೇವರನಾಮಗಳು ಮುದ ಕೊಟ್ಟವು. ಕಛೇರಿ ಕೊನೆಯ ಭಾಗ ತಲುಪಿದ್ದರಿಂದ ಮೈಕು ಹಿಡಿದ ಮೋಹನ ವೇದಿಕೆ ಹತ್ತಿದ. ನೇದನೂರಿಯವರಿಂದ ಪ್ರಾರಂಭಿಸಿ, ಒಬ್ಬೊಬ್ಬರಾಗಿ ಪಿಟೀಲು, ಮೃದಂಗ, ಖಂಜಿರ ಮತ್ತು ತಂಬೂರಿಯಲ್ಲಿ ಸಾಥ್ ನೀಡಿದ ಪ್ರತಿಯೊಬ್ಬ ಕಲಾವಿದರ ಬಗ್ಗೆಯೂ ಒಂದೆರಡು ಒಳ್ಳೆಯ ಮಾತನಾಡಿ ಧನ್ಯವಾದ ಅರ್ಪಿಸಿದ. ಒಬ್ಬೊಬ್ಬರಿಗೂ ಧನ್ಯವಾದ ಹೇಳಿದ ಬೆನ್ನಲ್ಲೇ ಕ್ರಮವಾಗಿ ಆಯಾ ಕಲಾವಿದರಿಗೆ ಕೃಷ್ಣಯ್ಯರ್ ಖುದ್ದು ತಮ್ಮ ಹಸ್ತದಿಂದ ಸೂಕ್ತ … Read more

ಹಾರುವ ಹಂಸೆಯ ಕಾವ್ಯಗುಣ: ವಿನಯಚಂದ್ರ

“ಹಾರುವ ಹಂಸೆ” ಇತ್ತೀಚಿನ ದಿನಗಳಲ್ಲಿ ನಾನು ಓದಿ ಮೆಚ್ಚಿದ, ಇತ್ತೀಚಿನ ತಲೆಮಾರಿನವರು ರಚಿಸಿದ ಕೃತಿಗಳಲ್ಲಿ ಬಹಳ ಉತ್ತಮವಾದ ಕೃತಿ ಎಂದು ನಿಸ್ಸಂಶಯವಾಗಿ ಹೇಳಿಬಿಡಬಹುದು. ಇದು ಚಾಮರಾಜನಗರದ ಆರ್ ದಿಲೀಪ್ ಕುಮಾರ್ ರವರ ಕವಿತೆಗಳ ಸಂಕಲನ. ಗಂಭೀರವಾದ ಸಾಹಿತ್ಯ ವಿದ್ಯಾರ್ಥಿಯೊಬ್ಬ ತನ್ನ ಅಧ್ಯಯನದ ಆಧಾರದ ಮೇಲೆ, ಉತ್ತಮ ಕಾವ್ಯಗಳಲ್ಲಿ ಇರಬಹುದಾದ ಲಕ್ಷಣಗಳನ್ನು ಗುರುತು ಹಾಕಿಕೊಂಡು, ಅದಕ್ಕೆ ನಿಷ್ಠನಾಗಿ ಕಾವ್ಯ ರಚನೆ ಮಾಡಿದರೆ ಕವಿತೆಗಳು ಹೇಗೆ ಮೂಡಬಹುದೋ, ಕ್ವಚಿತ್ತಾಗಿ ಹಾಗೆಯೇ ಮೂಡಿವೆ ದಿಲೀಪರ ಕವಿತೆಗಳು. ಕಾವ್ಯದಲ್ಲಿ ಮುಖ್ಯವಾಗಿ ವಸ್ತು ವಿಷಯ, … Read more

ಡಿಸೆಂಬರ್ ಎಂದರೆ ಪ್ರವಾಸಗಳ ನೆನಪು..: ವಿನಾಯಕ ಅರಳಸುರಳಿ

ಶಾಲಾ ಪ್ರವಾಸವೆನ್ನುವುದು ಬದುಕಿನ ಮತ್ತೆಲ್ಲ ಪ್ರವಾಸಗಳನ್ನೂ ಮೀರಿಸುವಂಥಹಾ ಸವಿನೆನಪು. ಅರ್ಧವಾರ್ಷಿಕ ಪರೀಕ್ಷೆಗಳೆಲ್ಲಾ ಮುಗಿದು ಛಳಿಗಾಲದ ಪ್ರವೇಶವಾಗುವ ಹೊತ್ತಿಗೆ ಶೈಕ್ಷಣಿಕ ಪ್ರವಾಸದ ಘೋಷಣೆಯನ್ನು ಸ್ವತಃ ಹೆಡ್ ಮಾಷ್ಟರೇ ಮಾಡುತ್ತಿದ್ದರು. ಬರುವ ಆಸೆ ಎಲ್ಲರಲ್ಲೂ ಇರುತ್ತಿತ್ತಾದರೂ ನೂರಿನ್ನೂರು ರೂಪಾಯಿಗಳ ಪ್ರವಾಸ ಶುಲ್ಕವನ್ನು ಹೊಂದಿಸುವುದು ಎಲ್ಲರಿಗೂ ಸಾಧ್ಯವಿರುವ ವಿಷಯವಾಗಿರಲಿಲ್ಲ. ಕೆಲವರಿಗೆ ಸುಲಭವಾಗಿ ಸಿಗುತ್ತಿದ್ದ ಈ ಹಣ ಇನ್ನು ಕೆಲವರಿಗೆ ಅಪ್ಪ-ಅಮ್ಮನಿಂದ ಬೆನ್ನಿನ ಮೇಲೆ ನಾಲ್ಕು ಗುದ್ದಿಸಿಕೊಂಡ ಬಳಿಕವೇ ಸಿಗುತ್ತಿತ್ತು. ಇನ್ನೂ ಕೆಲವರು ತಾವು ಅಲ್ಲಿಲ್ಲಿ ಅಡಿಕೆ ಸುಲಿದು, ಗೇರುಬೀಜ ಹೆಕ್ಕಿ ಸಂಪಾದಿಸಿದ್ದ … Read more

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 55 & 56): ಎಂ. ಜವರಾಜ್

-೫೫-ಓಟಾಗಿ ಎಂಟೊಂಬತ್ದಿನ ಆಗಿತ್ತುಇವತ್ತು ಎಣ್ಕ ಅದನಾಳಿದ್ದು ಕಳ್ದು ಆಚ ನಾಳನೀಲವ್ವೋರ್ ತಿಥಿ ಅದ ಈ ಅಯ್ನೋರು ಆಳ್ಗಳ್ ಬುಟ್ಕಂಡುಸುಣ್ಣನುವ ಗೋಪಿ ಬಣ್ಣನುವಮನಗ್ವಾಡ್ಗ ತುಂಬುಸ್ತಿದ್ರು ಈಗ ಈ ದೊಡ್ಡವ್ವ ಬುಟ್ರ ಯಾರಿದ್ದರು..ಈ ಅಯ್ನೋರ್ಗ ಈ ದೊಡ್ಡವ್ವನೇ ಗತ್ಯಾದ್ಲುಈ ದೊಡ್ಡವ್ವ ಹೇಳ್ದಾಗೇ ಕೇಳ್ಬೇಕುಈ ದೊಡ್ಡವ್ವನ ಮಾತ್ನಂತೆಸತ್ತೋದ ನೀಲವ್ವೋರ ಅವ್ವ ಅಪ್ಪಬಂದುಮಗಳ ನೆನ್ಕಂಡು ಮನ ಕೆಲ್ಸ ಮಾಡ್ತಿದ್ರು ಈಗ ಈ ಅಯ್ನೋರು ದೊಡ್ಡವ್ವನ್ಗ ಹೇಳಿತಾಲ್ಲೊಕ್ಕಚೇರಿ ಕಡ ನಡುದ್ರುಹಿಂಗ ತಾಲ್ಲೊಕ್ಕಚೇರಿ ಕಡ ನಡ್ದಾಗಆ ಆಳು ದಾರಿಲಿ ಸಿಕ್ಕಿಗುಸುಗುಸು ಮಾತಾಡ್ತ ನಡ್ದಹಂಗೆ ಇನ್ನಿಬ್ರು ಬಂದ್ರುತಾಲ್ಲೊಕ್ಕಚೇರಿ … Read more

ಬೆರಗೊಂದು ಕೊರಗಾಗಿ ಕಾಡಿದಾಗ…. : ಸುಂದರಿ ಡಿ.

ತನ್ನ ಪಾಡಿಗೆ ತಾನು ಹಾಡಿಕೊಂಡು, ಹನಿಗಳ ಚುಮುಕಿಸಿ, ಬಳುಕುತ ಬಿಸಿಲ ನೇರ ಕೋಲುಗಳ ಸ್ಪರ್ಶದಿಂದಲೇ ಮತ್ತಷ್ಟು ಹೊಳಪಿನಿಂದ ತನ್ನಾಳದ ಮರಳನೂ ಚಿನ್ನದಂತೆ ಹೊಳೆಯಿಸುತ, ಜುಳು-ಜುಳು ನಾದದೊಂದಿಗೇ ಹರಿಯುತಿದ್ದ ನೀರ ಬದಿಯಲಿ ತನ್ನ ಸೊಬಗತೋರುತ, ನೀರ ಸೊಬಗನೂ ಹೆಚ್ಚಿಸಲೆಂಬಂತೆ ಅದರ ಸತ್ವವನೇ ಹೀರಿ ನಿಜವಾದ ಹಸಿರೆಂದರೆ ಇದೇ ಎಂಬಂತೆ ಬೆಳೆದು ನಿಂತಿದ್ದ ಗಿಡಗೆಂಟೆಗಳು, ಅವುಗಳಲ್ಲಿ ಬೆಟ್ಟದ ಹೂವಿನಂತೆ ಇತರರನು ತಮ್ಮತ್ತ ಸೆಳೆವ ಯಾವ ಗೋಜಿಗೂ ಹೋಗದೆ ಬೇಲಿಯ ಹೂವೆಂದೇ ಕರೆಸಿಕೊಂಡರೂ ಸಹಜ ಸೌಂದರ್ಯದ ಕಾರಣವೊಂದರಿಂದಲೇ ತಮ್ಮತ್ತ ತಿರುಗಿ ನೋಡುವಂತೆ … Read more

“ಮಕ್ಕಳ ಸಾಹಿತ್ಯ ಸಂಪಾದಕತ್ವ ಕೃತಿ”ಯ ಲೋಕಾರ್ಪಣಾ ಕಾರ್ಯಕ್ರಮ

ಸಾಹಿತ್ಯಾಸಕ್ತರೇ,ಸಹೃದಯೀ ಕವಿಮನಸ್ಸುಗಳೇ,ಫೆಬ್ರವರಿಯಲ್ಲಿ ನಮ್ಮ ಸಂಸ್ಥೆಯ ಕಡೆಯಿಂದ “ಮಕ್ಕಳ ಸಾಹಿತ್ಯ ಸಂಪಾದಕತ್ವ ಕೃತಿ”ಯ ಲೋಕಾರ್ಪಣಾ ಕಾರ್ಯಕ್ರಮ ನಡೆಯಲಿದೆ. 🎉 ಆಸಕ್ತರು ನಿಮ್ಮ ಸ್ವರಚಿತ ಕುತೂಹಲ ಭರಿತ ನೀತಿಕಥೆ ಮತ್ತು ಮಕ್ಕಳಿಗೆ ಸುಲಲಿತವಾಗಿ ಹಾಡಲು ಬರುವಂತಹ ಮಕ್ಕಳ ಪದ್ಯವನ್ನು ಕಳುಹಿಸಿಕೊಡಬೇಕಾಗಿ ಕೋರಿಕೆ. ವಿದ್ಯಾರ್ಥಿಗಳು ಕೂಡ ಭಾಗವಹಿಸಬಹುದು. ನಿಮ್ಮ ಗುರುತಿನ ಚೀಟಿ ಅಗತ್ಯವಾಗಿ ಲಗತ್ತಿಸಿದರೆ ದತ್ತ ಮೊತ್ತದಲ್ಲಿ ಕಡಿತಗೊಳಿಸಲಾಗುವುದು. ÷ ಮಕ್ಕಳ ಪದ್ಯ (೧ ಪುಟ)÷ ಕಥನ-ಕವನವಾದರೆ ( ೧-೨ ಪುಟಗಳು)÷ ಮಕ್ಕಳ ನೀತಿಕಥೆ ( ೨-೩ ಪುಟಗಳು ) ಅಲ್ಲದೇ … Read more

ಸೇತುವೆ….: ಸತೀಶ್ ಶೆಟ್ಟಿ ವಕ್ವಾಡಿ.

ಅದು ಶರದೃತುವಿನ ಬೆಳಗಿನ ಜಾವ. ಮುಂಗಾರಿನ ಮೋಡಗಳು ತೆರೆಮರೆಗೆ ಸರಿದು ಆಕಾಶ ಶುಭ್ರವಾಗಿತ್ತು. ಹುಣ್ಣಿಮೆಯ ದಿನವಾಗಿದ್ದರಿಂದ ಚಂದಿರ ಬೆಳ್ಳಿಯ ಬಟ್ಟಲಂತೆ ಸುಂದರವಾಗಿ ಕಾಣಿಸುತ್ತಿದ್ದ. ಮೋಡಗಳ ಸವಾಲುಗಳಿಲ್ಲದ ಕಾರಣ ತಾರೆಗಳು ಇಡೀ ಆಗಸವನ್ನು ಆಕ್ರಮಿಸಿ ತಮ್ಮ ಆಧಿಪತ್ಯ ಸ್ಥಾಪಿಸಿ, ಭಾನ ತುಂಬೆಲ್ಲಾ ಬೆಳಕಿನ ಸರಪಳಿ ನಿರ್ಮಿಸಿದ್ದವು. ಹುಣ್ಣಿಮೆಯ ಚಂದಿರ, ರಾತ್ರಿಯ ಕತ್ತಲೆಯನ್ನೆಲ್ಲ ತನ್ನ ಒಡಲೊಳಗೆ ತುಂಬಿಕೊಂಡು ಬೆಳದಿಂಗಳ ಮಳೆಯನ್ನೇ ಸುರಿಸುತ್ತಿದ್ದ. ಪಶ್ಚಿಮದಿಂದ ಬೀಸುತ್ತಿದ್ದ ತಂಗಾಳಿ, ನುಸುಕಿನ ಮಂಜಿನ ಹನಿಗಳ ಸಾಂಗತ್ಯದಿಂದ ಚಳಿಯು ಅನ್ನಿಸಿದ ತಣ್ಣನೆಯ ವಾತಾವರಣ ಸೃಷ್ಟಿಸಿತ್ತು. ಮರಗಿಡಗಳ … Read more

ಪ್ರೇಮನಾದ: ಸುಮ ಉಮೇಶ್

ರಾಧಮ್ಮನವರ ನಂತರ ಬಹಳ ವರ್ಷಗಳ ಮೇಲೆ ಹುಟ್ಟಿದವನೇ ಅವರ ತಮ್ಮ ಸುಧಾಕರ್. ರಾಧಮ್ಮನಿಗೂ ಸುಧಾಕರ್ ಗೂ ಅಂತರ ಹೆಚ್ಚಾಗಿದ್ದರಿಂದ ಅವನನ್ನು ಕಂಡರೆ ಎಲ್ಲರಿಗೂ ಅತೀವ ಪ್ರೀತಿ. ಅಕ್ಕನ ಮುದ್ದಿನ ತಮ್ಮ ಅವನು. ರಾಧಮ್ಮನವರ ಮದುವೆ ಆದಾಗ ಸುಧಾಕರ್ಗೆ ಕೇವಲ ಎಂಟು ವರ್ಷ. ಮದುವೆ ಆದ ವರ್ಷದೊಳಗೆ ರಾಧಮ್ಮ ಹೆಣ್ಣು ಮಗುವಿನ ತಾಯಿ ಆದಾಗ ಎಲ್ಲರಿಗೂ ಸಂತಸ. ರಾಧಳ ತಂದೆ ತಾಯಿಗೆ ದೂರದ ಒಂದು ಆಸೆ ಮೊಳೆಯಲಾರಂಭಿಸುತ್ತದೆ. ಪುಟ್ಟ ಸುರಭಿಯೇ ಮುಂದೆ ಸುಧಾಕರ್ನ ಕೈ ಹಿಡಿದು ಮೊಮ್ಮಗಳು ಮನೆ … Read more

ಸಾರ್ಥಕ್ಯ: ಡಾ. ಅಜಿತ್ ಹರೀಶಿ

ಎಂದಿನಂತೆ ಊರ ಈಶ್ವರ ದೇವರ ಪೂಜೆ ಮುಗಿಸಿ ಜನಾರ್ದನ ಭಟ್ಟರು ದೇವಸ್ಥಾನದ ಮೆಟ್ಟಿಲಿಳಿಯುತ್ತಿದ್ದರು. ಅಲ್ಲಿಂದ ಕೂಗಳತೆಯ ದೂರದಲ್ಲೇ ಅವರ ಮನೆ. ಪೂಜೆ ಮುಗಿಸಿ ಏಳುವಾಗಲೇ ತಲೆಯಲ್ಲಿ ಏನೋ ಒಂಥರಾ ಭಾರವಾದ ಹಾಗೆ ಅವರಿಗೆ ಅನ್ನಿಸಿತ್ತು. ನಾಲ್ಕು ಹೆಜ್ಜೆ ಹಾಕಿದಾಗ ದೇಹ ತೂಗಿದಂತೆ ಭಾಸವಾಗಿತ್ತು. ಆದರೂ ಅಲ್ಲಿ ಕುಳಿತುಕೊಳ್ಳದೇ ಬೇಗ ಮನೆಗೆ ಹೋಗಿ ವಿಶ್ರಾಂತಿ ತೆಗೆದುಕೊಂಡರಾಯಿತು ಎಂದುಕೊಂಡು ಕೊನೆಯ ಮೆಟ್ಟಿಲು ಇಳಿಯುತ್ತಿದ್ದರು. ಇಡೀ ದೇಹವು ಬಾಳೆದಿಂಡನ್ನು ಕತ್ತಿಯಿಂದ ಕಡಿದಾಗ ಬೀಳುವಂತೆ ಕುಸಿದು ಬಿತ್ತು. ಕೆಲ ಕ್ಷಣಗಳ ಮಟ್ಟಿಗೆ ಅವರಿಗೆ … Read more

ಹಣ್ಣೆಲೆಯ ಹಾಡು: ಗಿರಿಜಾ ಜ್ಞಾನಸುಂದರ್

ಎಳೆ ಬಿಸಿಲು ಅಂದವಾದ ಬೆಳಕು ಬೀರುತ್ತಾ ಎಲ್ಲೆಡೆ ಹರಡುತ್ತಿದೆ. ಅಂಗಳದಲ್ಲಿ ಆರಾಮ ಖುರ್ಚಿಯಲ್ಲಿ ಬಿಸಿಲು ಕಾಯುತ್ತ ಮೈಯೊಡ್ಡಿರುವ ಕೃಷ ದೇಹದ ವೃದ್ಧ ಶ್ರೀನಿವಾಸ. ವಯಸ್ಸು ಸುಮಾರು ೮೯- ೯೦ ಆಗಿರಬಹುದು. ಸುಕ್ಕುಗಟ್ಟಿದ ಮುಖ, ಪೂರ್ತಿ ನರೆತ ಕೂದಲು. ಹಣೆಯಮೇಲೆ ಎದ್ದು ಕಾಣುವ ಗೆರೆಗಳು, ಬೊಚ್ಚು ಬಾಯಿ. ಇಷ್ಟೆಲ್ಲದರ ಮಧ್ಯೆ ಏನನ್ನೋ ಕಳೆದುಕೊಂಡು ಹುಡುಕುತ್ತಿರುವಂಥ ಕಣ್ಣುಗಳು. ತನ್ನ ಮಕ್ಕಳು ಮೊಮ್ಮಕ್ಕಳೊಂದಿಗೆ ಸುಖವಾದ ಜೀವನ ಕಾಣುತ್ತಿರುವ ಹಿರಿಯ ಜೀವ. ದಿನವೂ ವಿಶ್ರಮಿಸುತ್ತ, ತನ್ನ ಹಿಂದಿನ ದಿನಗಳನ್ನು ನೆನೆಯುತ್ತ ಮೆಲುಕು ಹಾಕುವ … Read more

ಕಣ್ಣಾ ಮುಚ್ಚಾಲೆ..: ಜೆ.ವಿ.ಕಾರ್ಲೊ

ಇಂಗ್ಲಿಶ್ ಮೂಲ: ಗ್ರಹಾಂ ಗ್ರೀನ್ಅನುವಾದ: ಜೆ.ವಿ.ಕಾರ್ಲೊ ಬೆಳಕು ಮೂಡುತ್ತಿದ್ದಂತೆ ಪೀಟರನಿಗೆ ತಕ್ಷಣ ಎಚ್ಚರವಾಯಿತು. ಕಿಟಕಿಯ ಗಾಜಿನ ಮೇಲೆ ಮಳೆ ರಪರಪನೆ ಬಡಿಯುತ್ತಿತ್ತು. ಅಂದು ಜನವರಿ ಐದುಅವನ ಕಣ್ಣುಗಳು ಪಕ್ಕದ ಮಂಚದ ಮೇಲೆ ಮುಸುಕು ಎಳೆದುಕೊಂಡು ಇನ್ನೂ ಮಲಗಿದ್ದ ಅವನ ತಮ್ಮ ಫ್ರಾನ್ಸಿಸನ ಮೇಲೆ ನೆಲೆಗೊಂಡವು. ಅವನಿಗೆ ತನ್ನ ಪ್ರತಿರೂಪವನ್ನೇ ನೋಡಿದಂತಾಯಿತು! ಅದೇ ಕೂದಲು, ಕಣ್ಣುಗಳು, ತುಟಿಗಳು, ಕೆನ್ನೆ.. ಅವನ ತುಟಿಗಳ ಮೇಲೆ ಮಂದಹಾಸ ಮೂಡಿತು.ಜನವರಿ ಐದು. ಮಿಸೆಸ್ ಫಾಲ್ಕನಳ ಮಕ್ಕಳ ಪಾರ್ಟಿ ನಡೆದು ಆಗಾಗಲೇ ಒಂದು ವರ್ಷವಾಯಿತೆಂದು … Read more

ಮೂಡಿದ ಬೆಳಕು…: ಭಾರ್ಗವಿ ಜೋಶಿ

ಎಲ್ಲ ಕಡೆ ಝಗಮಗಿಸುತ್ತಿದ್ದ ದೀಪಗಳ ಸಂಭ್ರಮ. ಸಾಲು ಸಾಲು ದೀಪಗಳು ಇಡೀ ಬೀದಿಯ ಸಂಭ್ರಮ ಸೂಚಿಸುತ್ತಿತ್ತು.. ಆ ಬೀದಿಯ ಕೊನೆಯ ಮನೆಯಲ್ಲಿ ಮಾತ್ರ ಮೌನ. ಬೆಳಕು ತುಸು ಕೊಂಚ ಕಡಿಮೆಯೇ ಇತ್ತು. ಬಡವ -ಬಲ್ಲಿದ ಯಾರಾದರೇನು ಜ್ಯೋತಿ ತಾನು ಬೆಳಗಲು ಬೇಧ ಮಾಡುವುದಿಲ್ಲ ಅನ್ನೋ ಮಾತು ನಿಜವೇ? ಎಣ್ಣೆಗೆ ಕಾಸು ಇಲ್ಲದ ಬಡವರ ಮನೆಯಲ್ಲಿ ಜ್ಯೋತಿ ಉರಿದಿತೇ? ಬೆಳಕು ಚಲ್ಲಿತೇ? ಹೀಗೆ ಕತ್ತಲು ಆವರಿಸಿದ ಆ ಮನೆ, ಮನೆಯೊಡತಿ ಜಾನಕಮ್ಮ, ಪತಿ ರಾಮಣ್ಣ ಅವರ ಒಬ್ಬನೇ ಮಗ … Read more

ಒಂಟೆ ಡುಬ್ಬ: ಡಾ. ಅಶೋಕ್. ಕೆ. ಆರ್

ಬೈಕೋಡಿಸುವಾಗ ರಶಿಕ ಕನ್ನಡ ಹಾಡುಗಳನ್ನು ಕೇಳುವುದಿಲ್ಲ.ಬ್ಲೂಟೂಥ್ ಹೆಲ್ಮೆಟ್ಟಿನಲ್ಲಿ ಸಣ್ಣಗಿನ ದನಿಯಲ್ಲಿ ಗುನುಗುತ್ತಿದ್ದುದು ಮಲಯಾಳಂ, ತಮಿಳು ಹಾಡುಗಳು.ಕನ್ನಡ ಹಾಡ್ ಹಾಕಂಡ್ರೆ ಪ್ರತಿ ಪದಾನೂ ಅರ್ಥವಾಗ್ತ ಆಗ್ತ ಹಾಡಿನ ಗುಂಗಲ್ಲಿ ಸುತ್ತಲಿನ ಪರಿಸರ ಮರ್ತೋಗ್ತದೆ, ಹಂಗಾಗಿ ಭಾಷೆ ಅರ್ಥವಾಗ್ದಿರೋ ಹಾಡುಗಳೇ ವಾಸಿ.ರಾತ್ರಿಯಿಂದ ಬೋರ್ಗರೆದಿದ್ದ ಮಳೆ ಬೆಳಿಗ್ಗೆ ವಿರಮಿಸಿತ್ತು.“ಈ ಕಡೆ ರೋಡಲ್ಲಿ ಒಂದ್ ಮೂವತ್ ಕಿಲೋಮೀಟ್ರು ಹೋದ್ರೆ ಕರ್ಮುಗಿಲು ಅನ್ನೋ ಊರು ಸಿಗ್ತದೆ. ಹೆಚ್ಚೇನಿಲ್ಲ ಅಲ್ಲಿ. ಒಳ್ಳೆ ಸನ್ ರೈಸ್ ಪಾಯಿಂಟಿದೆ ಅಲ್ಲಿ. ಮೋಡ ಇದ್ರೆ ನಿರಾಸೆಯಾಗ್ತದೆ. ನೋಡಿ. ಡಿಸೈಡ್ ಮಾಡಿ” … Read more

ಮತ್ತೆ ವಸಂತ: ಶ್ರೇಯ ಕೆ ಎಂ

ಸ್ಮಿತಾ ಹಾಗೆಯೇ ಚೇರ್ ಗೆ ಒರಗಿದ್ದಾಳೆ. ಕಣ್ಣಂಚಲ್ಲಿ ನೀರಾಡಿದೆ. ಹಾಗೇ ಹಿಂದಿನ ನೆನಪುಗಳತ್ತ ಜಾರುತ್ತಿದೆ ಮನಸು. ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ ಸ್ಮಿತಾ ಓದಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆಟೋಟ ಸ್ಪರ್ಧೆಗಳಲ್ಲಿ ಎಲ್ಲದರಲ್ಲೂ ಮುಂದು. ಮನೆಯಲ್ಲಿ ಮುದ್ದಿನ ಮಗಳು. ಒಡಹುಟ್ಟಿದವರೊಂದಿಗೆ ಬೆಳೆದ ಸ್ಮಿತಾ ಮನೆಯವರೆಲ್ಲರ ಪಾಲಿನ ಅಚ್ಚುಮೆಚ್ಚು. ಮಧ್ಯಮವರ್ಗದ ಕುಟುಂಬವಾದರೂ ಇದ್ದುದರಲ್ಲಿಯೇ ಸುಖವಾಗಿದ್ದ ಸಂಸಾರ. ಪದವಿ ಓದಿನ ಜೊತೆಗೆ ಹಲವಾರು ಕಲೆಗಳನ್ನು ಕಲಿತವಳು. ಹೀಗೆ ಸಾಗುತ್ತಿದ್ದ ಸಂಸಾರದಲ್ಲಿ ಒಮ್ಮೆ ಅದೆಲ್ಲಿಂದಾನೋ ಒಂದು ಗಂಡಾಂತರ ಬಂದು ಸ್ಮಿತಾಳ ಬಾಳೇ ಛಿದ್ರವಾಗಿ … Read more

ಬಯಲಾಗದ ಬಣ್ಣ: ಅನುರವಿಮಂಜು

ಶೋಭಿತಾಳ ಗಂಡ ತೀರಿಕೊಂಡು ವರ್ಷ ಕಳೆದಿದೆ, ಅವಳೀಗ ಒಂಟಿ ಜೀವನ ನಡೆಸುತ್ತಿದ್ದಾಳೆ. ನಿನ್ನ ಅಂದಿನ ಪ್ರೀತಿ ಇನ್ನು ಜೀವಂತ ಇರುವುದಾದರೆ ಅವಳನ್ನು ಮದುವೆಯಾಗಿ ಹೊಸ ಬದುಕನ್ನು ನೀಡು. ಆಕಸ್ಮಿಕವಾಗಿ ಭೇಟಿಯಾದ ಆತ್ಮೀಯ ಗೆಳೆಯ ಗೌತಮ್ ಆಚ್ಚರಿಯ ಸಂಗತಿ ತಿಳಿಸಿ ಸಲಹೆ ನೀಡಿದ. ಆತನ ಮಾತು ಕೇಳಿ ನನ್ನೊಳಗಿದ ಸೂಕ್ತ ಬಯಕೆಗಳು ಗರಿಗೆದರಿದವು. ಒಂದು ನಿರ್ಧಾರಕ್ಕೆ ಸಿದ್ದನಾದೆ, ಶೋಭಿತಾಳೊಂದಿಗೆ ಉತ್ತಮ ಸ್ನೇಹ ಸಂಬಂಧ ವಿರಿಸಿದ್ದರಿಂದ ನನ್ನ ಮಾತನ್ನು ತಿರಸ್ಕರಿಸಲಾರಳೆಂಬ ನಂಬಿಕೆ ಇತ್ತು. ಒಂಟಿ ಜೀವನ ಅವಳಿಗೂ ಬೇಸರ ತಂದಿರಬಹುದು. … Read more

ಕಿರುಗತೆಗಳು: ಜಯಂತ್ ದೇಸಾಯಿ

ಬಣ್ಣದ ಬಾರಿಗೆ( ಬಣ್ಣದ ಪೊರಕೆ) ಬಾರಿಗೆಮ್ಮೋ ಬಾರಿಗೆ 30 ರೂಪಾಯಿಗೆ ಜೊತಿ ಬಾರಿಗೆ ಸ್ವಲ್ಪವೇ ಅವ ನೋಡ್ರೆಮ್ಮೋ ಅಂತ ಕೂಗುತ್ತಾ ಹಳ್ಳಿಯ ಸಂದಿಸಂದಿಯ ಒಳಗೆ ನುಗ್ಗಿ ಹೋಗುತ್ತಿದ್ದ ಶರಣಪ್ಪ ನ ದ್ವನಿ ಕೇಳಿ ನಿರ್ಮಲ ನುಡಿದಳು ಹೇ ನಿಂದ್ರಪ್ಪ ನಿಂದ್ರು ಹೆಂಗ್ ಕೊಟ್ಟಿ ಅಂದಿ, 30 ರೂಪಾಯಿಗೆ ಅಂದ್ರ ಭಾಳಾ ಫೀರೆ ಆತು ಕಡಿಮೆ ಮಾಡು, ನೋಡಿದ್ರ ನಾಕು ಕಡ್ಡಿ ಇಲ್ಲ ಇದ್ರಾಗ, ಅವ್ವ ಹಂಗನ್ನ ಬ್ಯಾಡ ಗಿರಿ ಗಿರಿ ಹಾಕಿ ಎಳೆದು ಎಳೆದು ತೀಡಿ ನೆಲಕ್ಕೆ … Read more

ಪಂಜು ಕಾವ್ಯಧಾರೆ ೧

ಕಾಲ ಬದಲಿಸಿದ ಬದುಕು ತಂಗಳು ತಡಿಯ ತಿಂದುಅರೆಬೆಂದದ್ದು ಬುತ್ತಿಹೊತ್ತುಕೊಂಡು ಓಡುತ್ತಿತ್ತು ಜೀವಸಮಯದ ಜೊತೆಗೆಪೈಸೆ, ಪೈಸೆಯೂ ಕೂಡಿಟ್ಟುಜೋಪಾನ ಮಾಡಿತ್ತು ಭಾವ,ವಾಸ್ತವದಲ್ಲಿ ನಿಲುಕದ ಬಣ್ಣದ ಕನಸುಗಳ ಭವಿಷ್ಯದ ಜೊತೆಗೆ! ಕಣ್ಣಿಗೆ ಕಾಣದ ಜೀವಿಯತಲ್ಲಣಕೆ ಬದುಕು ಬೀದಿಗೆ ಬಿತ್ತುವರ್ತಮಾನವೇ ಬುಡಮೇಲಾಯಿತುಕೈಗಳಿಗೆ ಕೆಲಸವಿಲ್ಲ ,ಕಾಲುಗಳಿಗೆ ಹೋಗಲುದಾರಿಯೇ ಇಲ್ಲ !ಹಗಲಿನಲ್ಲೂ ಮನೆಯಲ್ಲೇ ಕೊಳೆತವುದೇಹಗಳು,ಆಂತಕದಿಂದ ದಿನ ದೂಡಿದವುಮನಸುಗಳು ಕೆಲವರು ಊರು ಬಿಟ್ಟರುಹಲವರು ಜಗತ್ತೇ…… ಬಿಟ್ಟರುವಲಸೆ ಯುಗ ಪ್ರವಾಹದಂತೆಹರಿಯಿತು ಗಡಿಗಡಿಗಳ ದಾಟಿಸ್ತಬ್ದವಾದವು ಮಹಾನಗರಗಳುಅಮ್ಮನಾಗಿ, ಮಗಳಾಗಿ, ಅರ್ಧಾಂಗಿಯಾಗಿಹೆಣ್ತನ ನಡೆಯಿತು ದಾರಿಗೆ ಊರುಗೋಲಾಗಿವಲಸೆ ಭಾರತದ ಭಾಗವಾಗಿ. ಮಾತು ಮೌನ ವಾಯಿತುಮುಖಕ್ಕೆ … Read more