ಕುರಿಯ ಹಾಲಿನ ಐಸ್ ಕ್ರೀಮು (ಭಾಗ ೨): ಗುರುಪ್ರಸಾದ‌ ಕುರ್ತಕೋಟಿ

ಇಲ್ಲಿಯವರೆಗೆ ನಾವು ಅಮೆರಿಕೆಯ, ನೆಬ್ರಾಸ್ಕಾ ರಾಜ್ಯದ ಒಮಾಹಾದಲ್ಲಿ ಧರೆಗೆ ಬಂದು ಇಳಿದಿದ್ದು ಸೆಪ್ಟೆಂಬರದಲ್ಲಿ. ಆಗ ಅಲ್ಲಿ ಜಿಟಿ ಜಿಟಿ ಮಳೆ ಶುರು ಆಗಿತ್ತು. ಆದರೆ ಕಿಚಿ ಪಿಚಿ ಕೆಸರು ಇರಲಿಲ್ಲ! ಮಹಾ ನಿರ್ದಯಿ ಚಳಿಗಾಲಕ್ಕಿಂತ ಸ್ವಲ್ಪ ಮೊದಲು. ಹೀಗಾಗಿ ಮಳೆಯ ಜೊತೆಗೆ ಸ್ವಲ್ಪ ಚುಮು ಚುಮು ಚಳಿಯೂ ಇತ್ತು. ನಾವು ಹೋದ ಆ ಸಮಯ ಮುಂಬರುವ ಚಳಿಯ ಪರಿಚಯ ಮಾಡಿಕೊಳ್ಳಲು ತುಂಬಾ ಸಹಾಯ ಮಾಡಿತು. ಒಂದು ವೇಳೆ ಚಳಿಗಾಲದ ಹೊತ್ತಿನಲ್ಲಿ ಅಲ್ಲಿಗೆ ಹೋಗಿದ್ದರೆ ಹೊಂದಿಕೊಳ್ಳಲು ತುಂಬಾ ಕಷ್ಟ ಪಡುತ್ತಿದ್ದೆವೇನೋ ಅನಿಸಿತು. ಆದರೆ … Read more

ನುಣುಪುಗಲ್ಲು: ತಿರುಪತಿ ಭಂಗಿ

“ಆದದ್ದು ಆಗೇತಿ ಹ್ವಾದುದ್ದು ಹೋಗೈತಿ, ಇನ್ನ ಏನಮಾಡಿದ್ರ ಹೊಡಮರಳಿ ಬರಾಕ, ಹೆಂಗ ಸಾದ್ಯ ಆದಿತವ್ವಾ..? ನಿನ್ನ ಹಣಿಬರ್ದಾಗ ಏನ್ ಬರದಿದ್ದೋ ಆ ಹಾಟ್ಯಾನ ದೇವ್ರಾ, ಅದನೇನಾರ ತಪ್ಪಸಾಕ ಬರತೈತೇನವ್ವಾ.. ಸಮಾಧಾನ ತಗೋ ತಂಗಿ, ನಿಂದರ ಏನ್ ದೊಡ್ಡ ವಯಸ್ಸಲ್ಲಾ ಈಗ ಬಲೆಬಾರ ಆದ್ರ ಇಪ್ಪತೈದ ಇರ್ಬೇಕ, ಇಷ್ಟ ಸಣ್ಣ ವಯ್ಯಸ್ದಾಗ ಗಂಡನ ಕಳಕೊಂಡ, ಮನಿಮೂಳಿಯಾಗಿ ಕುಂದ್ರೂದಂದ್ರ ನಿನ್ನ ಹಣಿಬರಾ ಎಷ್ಟಾರ ಸುಮಾರ ಇರ್ಬಾರ್ದ, ಸತ್ತಾರ ಜೋಡಿ ನಾಂವೂ ಸಾಯಾಕ ಹೆಂಗ ಸಾದ್ಯ ಆದೀತವ್ವಾ..? ನಾಂವ ನಮಗೋಸ್ಕರಾ ಇರ್ಬೇಕ, … Read more

ಬೆಂಬಿಡದ ಭೂತ: ರಾಜೇಂದ್ರ ಬಿ. ಶೆಟ್ಟಿ

ಸುಮಾರು ಅರುವತ್ತು ವರ್ಷಗಳ ಹಿಂದೆ * ಅಪ್ಪ ಇನ್ನೂ ಮನೆಗೆ ಬಂದಿಲ್ಲ. ಅವರು ಮಂಗಳೂರಿನಿಂದ ಬರಬೇಕು. ಅದು ನಮ್ಮ ಊರಿನಿಂದ ಹತ್ತೊಂಬತ್ತು ಮೈಲು ದೂರವಂತೆ. ನಾನು, ಅಣ್ಣ ಮತ್ತು ಅಮ್ಮ ಅಪ್ಪನಿಗಾಗಿ ಕಾದು ಕುಳಿತಿದ್ದೇವೆ. ಯಾವಾಗಲೂ ರಾತ್ರಿ ಆಗುವ ಮೊದಲೇ ಬರುವ ಅಪ್ಪ ಇವತ್ತು ಇನ್ನೂ ಬಂದಿಲ್ಲ. “ಅಪ್ಪ ಕೊನೆಯ ಬಸ್ಸಿನಲ್ಲಿ ಬರಬಹುದು. ನೀವು ಊಟ ಮಾಡಿ ಮಲಗಿ” ಎಂದು ಅಮ್ಮ ನಮಗೆ ಗಂಜಿ ಬಡಿಸಿದರು. ಊಟ ಮಾಡಿ, ನಿದ್ದೆ ತಡೆಯಲಾರದೆ ನಾನು ಮಲಗಿದೆ. ನಡುವೆ ಎಚ್ಚರ … Read more

ಪದ್ಯಗಳೂ ಹೂನಗೆ ಬೀರಲಿ: ಹೆಚ್. ಷೌಕತ್ ಆಲಿ

ಬೆಣ್ಣೆನಗರಿಯ ಸರಿತ ಕೆ.ಗುಬ್ಬಿ ಹೊಸಪೇಟೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಂತೆ ಸಾಹಿತ್ಯಸಕ್ತಿ ಬೆಳೆಸಿಕೊಂಡ ಕವಯತ್ರಿಯು ಹೌದು ಅನೇಕ ವಿಷಯಗಳು ವಿಚಾರಗಳು, ಘಟನೆಗಳು ಕಣ್ಣಿನ ಮುಂದೆ ಘಟಿಸಿದಾಗ ಆ ಚಿತ್ರಗಳನ್ನು ಮನದಾಳದಲ್ಲಿ ರೂಪನೀಡಿ ಸುಂದರ ಕವಿತೆಗಳಿಗೆ ತಮ್ಮ ಲೇಖನಿಯ ಮುಖಾಂತರ ಬರೆಯುವ ಹವ್ಯಾಸಿ ಕನ್ನಡತಿ. ಬದುಕು ಸುಲಭದ ವಿಚಾರವಲ್ಲ ಇಲ್ಲಿ ಅನೇಕ ಹಂತಗಳಿವೆ, ಮಜಲುಗಳಿವೆ. ಸಂತಸ ಸಂಭ್ರಮ ನೋವು ಹಿಂಸೆ ಎಲ್ಲವನ್ನು ಮೆಟ್ಟಿನಿಲ್ಲಲ್ಲಿ ಸಮಾಜದ ವಕ್ರತೆಯಲ್ಲಿಯು ಗಮನಿಸಬೇಕಾದ ಜವಾಬ್ದಾರಿಯು ತಮ್ಮ ಕವನಗಳ ಮೂಲಕ ಓದುಗರ ಮುಂದೆ ಪ್ರಸ್ತುತ ಪಡೆಸುವಲ್ಲಿ ಸಫಲತೆಯನ್ನು … Read more

ಮೈ ಫಿರ್ ಭೀ ತುಮ್ ಕೋ ಚಾಹುಂಗಾ…: ಬೀರೇಶ್ ಎನ್ ಗುಂಡೂರ್

ಕಗ್ಗತ್ತಲ ರಾತ್ರಿಗೂ ಒಂದು ಕೊನೆಯುಂಟು. ಅಲ್ಲಿ ಹೊಸ ಬೆಳಕಿನ ಹೊಸ ಚಿಗುರಿನ ಆಶಯ ಉಂಟು. ಕಪ್ಪುಗಟ್ಟಿ ಆರ್ಭಟಿಸಿ ಸುರಿಯುವ ಮಳೆಯು ಕೂಡ ಒಂದರೆ ಕ್ಷಣ ಯೋಚಿಸಿ ರಂಗುರಂಗಿನ ಕಾಮನಬಿಲ್ಲಿನ ಅಂದವನಿಕ್ಕುತ್ತದೆ. ಆದರೆ ಆ ನಿನ್ನ ಓರೆನೋಟದ ಬಿಸುಪು ಮಾತ್ರ ಇನ್ನೂ ಕರುಣೆ ತೋರುತ್ತಿಲ್ಲ ನೋಡು. ದಿನವೂ ಖಾಲಿ ಮಾಡಿಕೊಳ್ಳುವ ಚಂದಿರನ ಕಾಂತಿಗೂ ಹೊಟ್ಟೆ ಕಿಚ್ಚುಪಡುವಷ್ಟು ಕಾಂತಿಯನ್ನು ಕಣ್ಣಲ್ಲೇ ಕಾಪಿಟ್ಟುಕೊಂಡಿದ್ದೀಯಾ. ನನ್ನ ಕೆಣಕಲೆಂದೆ ಆ ನೀಳ ಹುಬ್ಬುಗಳ ಸಂಗ ಬೆಳೆಸಿದ್ದೀಯ. ಮುಂಗುರುಳ ಸರಿಸಿ ಸರಿಸಿ ಆ ಮೂಗುತಿಗೆ ಅಷ್ಟು … Read more

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 21 & 22): ಎಂ. ಜವರಾಜ್

-೨೧- ಅಯ್ಯಯ್ಯೋ ಅಯ್ಯಯ್ಯಪ್ಪಾ ಅಂತಂತಾಗಿ ಮೈಕೈ ನೋವ ತಡಿದೆ ಪಕ್ಕಂತ ಕಣ್ಬುಟ್ಟು ನೋಡುದ್ರಾ.. ಸೂರ್ಯ ಮೂಡಿ ನಾ ಗಬ್ಬುನಾತ ಬೀರೋ ಮೋರಿ ಬದಿಲಿ ಬಿದ್ದು ನನ್ನ ಆಕಡ ಒಂದು ಈಕಡ ಒಂದು ಹಾಲ್ಕುಡಿಯೋ ಸಣ್ಣ ನಾಯಿ ಮರಿಗಳು ಎಳಿತಾ ಈಜಾಡ್ತ ಆಟ ಆಟ್ತ ಪಣ್ಣ ಪಣ್ಣಾಂತ ಆಕಡ್ಕು ಈಕಡ್ಕು ನೆಗೆದಾಡ್ತ ಗುರುಗುಡ್ತ ಇದ್ದು. ಅಸ್ಟೊತ್ಗ ಬಾಗ್ಲು ಕಿರುಗುಟ್ತು ನನ್ನ ದಿಗಿಲು ಅತ್ತಗೋಗಿ ನೋಡ್ತು.. ಸವ್ವಿ ಕಣ್ಣುಜ್ಕೊಂಡು ತಲ ಕೆರಕೊಂಡು ಲಂಗ ಮ್ಯಾಲಕ್ಕೆತ್ಕಂಡು ಬಾಯಾನಿ ಆಕುಳಿಸ್ಕಂಡು ಮೂಲಲಿರ ಸೀಗಕಡ್ಡಿ … Read more

ಏನು ಬರೆಯಬೇಕೆಂಬುದೇ ಗೊತ್ತಾಗುತ್ತಿಲ್ಲ: ನಾಗೇಶ್ ಪ್ರಸನ್ನ.ಎಸ್.

ಓದಿಕೊಂಡಿದ್ದನ್ನೆಲ್ಲಾ ಬರೆಯಲಾಗುವುದಿಲ್ಲ, ಅರಿತುಕೊಂಡಿದ್ದನ್ನಷ್ಟೇ ಬರೆಯಲಾಗುವುದು. ಅದಲ್ಲದೇ, ಅರಿತುಕೊಂಡ ಎಷ್ಟೋ ವಿಷಯಗಳಲ್ಲಿ ಕೆಲವು ಮರೆತು ಹೋಗುವುದೂ ಉಂಟು. ಮರೆತ ವಿಷಯಗಳನ್ನು ಜ್ಞಾಪಿಸಿಕೊಂಡು ಬರೆಯುವುದು ಮಾತ್ರ ಕೆಲವೇ ಕೆಲವು. ಅಂತಹ ಕೆಲವು ವಿಷಯಗಳನ್ನು ಬರೆಯಲೆತ್ನಿಸಿದಾಗಲೇ ತಿಳಿದುಕೊಂಡಿರುವುದು ಎಷ್ಟೆಂದು ತಿಳಿಯುವುದು. ಈ ಒಂದೆರಡು ವಿಷಯಗಳನ್ನು ತಿಳಿದ ಮೇಲೂ #ಏನು ಬರೆಯಬೇಕೆಂಬುದೇ ಗೊತ್ತಾಗುತ್ತಿಲ್ಲ# ನಾವು ಮೊದಲೇ ಸಿದ್ಧರಿರುತ್ತೇವೆ. ಯಾವ ವಿಷಯದ ಬಗ್ಗೆ ಬರೆಯಬೇಕು, ಯಾವ ಅಂಶಗಳನ್ನು ಬರೆಯಬೇಕು, ಯಾವ ಅಳತೆಯಲ್ಲಿ ಬರೆಯಬೇಕು ಮತ್ತು ಇತ್ಯಾದಿ. ಬರವಣೆಗಯಲ್ಲಿ ಶುದ್ಧತೆಯ ಜೊತೆಗೆ ಪಕ್ವತೆ ಇರಬೇಕು. ಬರೆಯುತ್ತಿರುವ … Read more

ಬಸು ಬೇವಿನಗಿಡದ ಅವರ “ನೆರಳಿಲ್ಲದ ಮರ”: ಅಶ್ಫಾಕ್ ಪೀರಜಾದೆ.

ನಾಡು ಕಂಡ ಪ್ರಮುಖ ಕಥೆಗಾರರಲ್ಲಿ ಬೇವಿನಗಿಡದ ಕೂಡ ಒಬ್ಬರು. ಅದರಲ್ಲೆ ವಿಶೇಷವಾಗಿ ಉತ್ತರ ಕರ್ನಾಟಕದ ಅತ್ಯಂತ ಪ್ರಖ್ಯಾತ ಕಥೆಗಾರರು ಬಸು ಅವರು. ತಾಯವ್ವ, ಬಾಳೆಂಬ ಕಂಬ, ಹೊಡಿ ಚಕ್ಕಡಿ, ಹಾಗು ಉಗುಳು ಬುಟ್ಟಿ ಹೀಗೆ ಒಟ್ಟು ಐದು ಕಥಾಸಂಕಲನಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ಅರ್ಪಿಸಿರುವ ಬಸುಬೇವಿನ ಗಿಡದ ಅವರು ಇತ್ತೀಚೆಗೆ ಆರನೇಯ ಕಥಾ ಸಂಕಲನ “ನೆರಳಿಲ್ಲದ ಮರ” ಕತಾಪ್ರಿಯರ ಕೈಗಿಟ್ಟಿದ್ದಾರೆ. ಪ್ರತಿಷ್ಠಿತ ಪಲ್ಲವ ಪ್ರಕಾಶನದಿಂದ ಪ್ರಕಟಗೊಂಡಿರುವ ಈ ಕೃತಿ ತನ್ನ ಬಾಹ್ಯ ಸೌಂದರ್ಯದಿಂದ ಮನ ಸೆಳೆಯುವಂತೆ ಒಳ … Read more

ಸಾವನ್ ಕೆ ಸಿಂಧನೂರು ರವರ ಮಗರಿಬ್‌ ಗಜಲ್‌ ಸಂಕಲನ: ಶಿವಕುಮಾರ ಮೋ ಕರನಂದಿ

ಕೃತಿ: ಮಗರಿಬ್ ಗಜಲ್ ಸಂಕಲನ ಲೇಖಕರು: ಸಾವನ್ ಕೆ ಸಿಂಧನೂರು ಪ್ರಕಾಶನ: ಅಮ್ಮಿ ಪ್ರಕಾಶನ ಗಜಲ್ ಉರ್ದು ಕಾವ್ಯದ ಅತ್ಯಂತ ಜನಪ್ರಿಯ ರೂಪ. ಉರ್ದು ಸಾಹಿತ್ಯದಲ್ಲಿ ಜನಪ್ರಿಯವಾಗಿರುವ ಗಜಲ್ ಗಂಭೀರ ಕಾವ್ಯವೂ ಹೌದು. ಪ್ರಾಯಶಃ ಹನ್ನೊಂದನೇ ಶತಮಾನದಲ್ಲಿ ಪ್ರಾರಂಭವಾಗಿರಬೇಕು. ಗಜಲ್ ಅನ್ನು ಉರ್ದು ಕಾವ್ಯದ ರಾಣಿ ಎನ್ನುತ್ತಾರೆ. ಗಜಲ್ ಅಂದರೆ ಫಾರಸಿ ಭಾಷೆಯಲ್ಲಿ ಜಿಂಕೆ! ಸ್ವಚ್ಛಂದವಾಗಿ ಕಾಡಿನಲ್ಲಿ ಓಡಾಡುವ ಈ ಜಿಂಕೆ ಸೆರೆಸಿಕ್ಕಾಗ ಹೊರಡಿಸುವ ಅರ್ತನಾದವೇ ಕರುಣಾ ರಸವನ್ನೊಳಗೊಂಡ `ಗಜಲ್~ ಎಂದು ಅರ್ಥೈಸುತ್ತಾರೆ. ಗಜಲ್ ರಾಣಿಯ ಹುಚ್ಚು … Read more