ಪಂಜು ಕಾವ್ಯಧಾರೆ

ಅಪ್ಪ ಅಂದರೆ…… ಏನೇ ಕೇಳಿದರೂ ಏನೇ ಹೇಳಿದರೂ ಕೋರ್ಟ್ ಲ್ಲಿ ದಾವೆ ಹೂಡಿದಂತೆ ಚೌಕಾಸಿ ಮೇಲೆ ಚೌಕಾಸಿ ಪರ ವಿರೋಧದ ತೀರ್ಪಿನ ಮೇಲೆ ನೂರಾರು ಕರಾರಿನ ಅಪ್ಪನ ಮೊಹರು….. ಹೆಜ್ಜೆ ಹೊಸ್ತಿಲ ಹೊರಗಿಟ್ಟರೂ ಒಳಗಿಟ್ಟರೂ ತೀವ್ರ ಹದ್ದಿನ ಕಣ್ಣು ಇಟ್ಟಂತೆ ಶೋಧ ಪ್ರತಿಶೋಧಗಳ ಕಾರ್ಯಾಚರಣೆ ತಪ್ಪೊಪ್ಪುಗಳ ಸರ್ಪಗಾವಲಿನಲ್ಲಿ ಖುಲಾಸೆಯೇ ಸಿಗದ ಅಪ್ಪನ ಕಾಯ್ದೆ …… ಎಲ್ಲೇ ಇದ್ದರೂ ಹೇಗೆ ಇದ್ದರೂ ಕುದುರೆಗೆ ಲಗಾಮು ಹಾಕಿಟ್ಟಂತೆ ಸಾಗುವ ಪಥದಿ ತಿರುವು ಏನೇ ಬಂದರು ಸ್ಥಿರ ಸಿದ್ದಾಂತಗಳ ಗಡಿ ಮೀರಲು … Read more

ಕುಯಿರನ ಕನಸು ಮತ್ತು ಮಗಳು: ಜಗದೀಶ ಗೊರೋಬಾಳ

ಅಂದು ಸಾವಂತಿಗೆ ಅದೇಕೋ ತಲೆನೋವು ವಿಪರೀತವಾಗಿತ್ತು. ಮನೆಯಂದಾಚೆ ಹೋಗಲಾರದಷ್ಟು ಅಸ್ವಸ್ಥಳಾಗಿದ್ದಳು. ರಾತ್ರಿಯಿಡಿ ಅವಳ ತಲೆಯಲ್ಲಿ ಅನಿರೀಕ್ಷಿತ ಯೋಚನೆಗಳು ಲಗ್ಗೆ ಇಟ್ಟಿದ್ದೇ ಇದಕ್ಕೆ ಕಾರಣವಿರಬಹುದು. “ ನನಗೂ ಅವರಂತಾದರೇ ನನ್ನ ಗುಲಾಬಿಯ ಗತಿಯೇನು? ಗುಲಾಬಿಗೆ ಊಟ ಯಾರು ಕೊಡ್ತಾರೆ? ಗುಲಾಬಿಯನ್ನು ಶಾಲೇಗ್ ಕಳಿಸೋರ್ಯಾರು? ಗುಲಾಬಿಗೆ ರಾತ್ರಿ ಕತೆ ಹೇಳಿ ಮಲಗಿಸೋರ್ಯಾರು” ಎಂಬ ಆಲೋಚನೆಗಳಿಂದ ಸಾವಂತಿಯ ತಲೆ ಚಿತ್ರವಿಚಿತ್ರವಾಗಿತ್ತು. ಈ ರೀತಿ ಯೋಚನೆಗಳಿಂದ ಸಾವಂತಿ ಬೆಚ್ಚಿಬೀಳಲು ಕಾರಣವಿತ್ತು. ಸಾವಂತಿಯದು ಚಿಕ್ಕ ಬಡ ಕುಟುಂಬ. ಗಂಡ ಕುಯಿರ ಮತ್ತು ಎಂಟು ವರ್ಷದ … Read more

ದಾಳ..: ಸತೀಶ್ ಶೆಟ್ಟಿ ವಕ್ವಾಡಿ..

ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಬೇಸಿಗೆಯ ಬಿಸಿಲಿನ ಭರಕ್ಕೆ ಬಳಲಿದ ಧರೆ ತಂಪಾಗಿತ್ತು. ಮಧ್ಯಾಹ್ನವಾದರೂ , ಆಗಸದಲ್ಲಿ ಕಪ್ಪುಗಟ್ಟಿದ ಮೋಡಗಳ ದಾಳಿಗೆ ಬೆದರಿ ಸೂರ್ಯ ಕಣ್ಣು ತೆರೆದಿರಲಿಲ್ಲ. ಇಂದು ಸಹ ಭುವಿಯ ಮೇಲೆ ಮತ್ತೆ ದಾಳಿ ಮಾಡಲು ಮೋಡಗಳ ದಂಡು ಸಜ್ಜಾಗುತ್ತಿತ್ತು, ಪಡುವಣದ ಕಡಲ ಕಡೆಯಿಂದ ಬೀಸುತ್ತಿರುವ ಗಾಳಿ ಸಂಜೆಯ ಮೇಘರಾಜನ ಅಬ್ಬರಕ್ಕೆ ಪಕ್ಕವಾದ್ಯವೆಂಬಂತೆ ಜೋರಾಗಿ ಬೀಸುತ್ತಿತ್ತು. ಇಂತಹ ತಣ್ಣಗಿನ ವಾತಾವರಣದಲ್ಲೂ ಅಲ್ಲಿ ನೆರೆದವರೆಲ್ಲ ಬೆವತ್ತಿದ್ದರು. ನರಹರಿ ಒಳಬೈಲು ಅವರ ಮನೆಯ ಫ್ಯಾನುಗಳು ಅವಿರತವಾಗಿ ಕಾರ್ಯನಿರ್ವಹಿಸುತ್ತಿದ್ದರೂ … Read more

ಕನ್ನಡಿಗಂಟದ ಬಿಂದಿ: ಡಾ.ಅಜಿತ್ ಹರೀಶಿ

ಜೇಡ ತನ್ನೊಳಗಿನಿಂದ ತಾನು ಅಂಟನ್ನು ಸ್ರವಿಸುತ್ತಾ ಬಲೆ ನೇಯುತ್ತಲೇ ಇತ್ತು. ಸೂರ್ಯನ ಕಿರಣಗಳು ಬಲೆಯ ಮೇಲೆ ಬಿದ್ದಾಗ ಕಣ್ಣಿಗೆ ಬಣ್ಣದೋಕುಳಿಯಾಗುತ್ತಿತ್ತು. ದಿನವೂ ಅದೊಂದು ಚಿತ್ತಾಪಹಾರಿಯಾದ ದೃಶ್ಯವಾಗಿತ್ತು. ಆದರೆ ಇಂದೇಕೋ ಕಿರಿಕಿರಿ ಉಂಟುಮಾಡುತ್ತಿದೆ ಎಂದು ಅನ್ನಿಸಿತು. ಕೆಲಸದ ರಾಜಮ್ಮ ಅದಾಗಲೇ ನನ್ನ ರೂಮಿಗೆ ಬಂದು ನೆಲ ಗುಡಿಸುತ್ತಿದ್ದಳು. ರಾಜಮ್ಮ, ಮೇಲೆಲ್ಲಾ ನೋಡು, ಕಸ ಹೊಡೆಯೋದೇ ಇಲ್ಲ. ಹೇಳದೇ ಯಾವ ಕೆಲಸವನ್ನೂ ಇತ್ತೀಚೆಗೆ ನೀನು ಮಾಡಲ್ಲ’ ತುಸು ಗಡಸು ಧ್ವನಿಯಲ್ಲಿ ಜೇಡರ ಬಲೆ ತೋರಿಸುತ್ತಾ ಹೇಳಿದೆ. ಅಯ್ಯೋ, ಇದೊಳ್ಳೆ ಆಯ್ತಲ್ಲಾ … Read more

ಅಗ್ನಿ ಸ್ಪರ್ಶ: ಭಾರ್ಗವಿ ಜೋಶಿ

ಅಲ್ಲಿ ಜನಸಾಗರ ನೆರೆದಿತ್ತು, ಜಾತಿ ಮತದ ಬೇಧವಿಲ್ಲದೆ ನೆರೆದಿದ್ದ ಜನ.. ಎಲ್ಲರಲ್ಲೂ ಮನೆ ಮಾಡಿದ ಮೌನ, ತುಂಬಿದ ಕಣ್ಣೀರು. ಕಳೆದುಕೊಂಡ ಮಾಣಿಕ್ಯ ಬದುಕಿದ ರೀತಿಯೇ ಹಾಗಿತ್ತು. ಶ್ರೀನಿವಾಸ ರಾಯರು ತಮ್ಮ 60ವರ್ಷ ಸಾರ್ಥಕ ಬದುಕಿನ ಪಯಣ ಮುಗಿಸಿ ಪರಲೋಕ ಸೇರಿದ್ದರು. ಬದುಕಿರುವಷ್ಟು ದಿನ ಆದರ್ಶ ಜೀವನ ನಡೆಸಿದ್ದರು, ಜಾತಿ ಭೇಧವಿಲ್ಲದೆ, ಮೇಲು ಕೀಳು, ಬಡವ ಶ್ರೀಮಂತ ಎಂಬ ಬೇಧವಿಲ್ಲದೆ ಎಲ್ಲರನ್ನು ಪ್ರೀತಿಸುತ್ತಿದ್ದರು. ಪರೋಪಕಾರಕ್ಕೆ ಹೆಸರಾಗಿದ್ದರು. ಅನಾರೋಗ್ಯ, ಮಕ್ಕಳ ವಿದ್ಯಾಭ್ಯಾಸ ಹೀಗೆ ಹಲವಾರು ಇವರಿಂದ ಸಹಾಯ ಪಡೆದಿದ್ದರು. ಇವರ … Read more

ಉದಯನ್ಮುಖ ಬರಹಗಾರ್ತಿ ವೀಣಾ ನಾಗರಾಜ್: ವೈ. ಬಿ. ಕಡಕೋಳ

ಶ್ರೀಮತಿ ವೀಣಾ ನಾಗರಾಜು ಉತ್ತಮ ಶಿಕ್ಷಕಿ, ಪ್ರತಿಭಾವಂತೆ, ಸಮಾಜಶಾಸ್ತ್ರ ವಿಷಯದಲ್ಲಿ ಎಂ. ಎ. ಪದವೀಧರೆ. ಇವರು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾಳಜ್ಜಿ ಹಟ್ಟಿಯಲ್ಲಿ ಕಳೆದ 12 ವರ್ಷದಿಂದ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿ. ಚನ್ನಬಸವಯ್ಯ ಸಾವಿತ್ರಮ್ಮ ದಂಪತಿಗಳ ನಾಲ್ಕು ಜನ ಮಕ್ಕಳಲ್ಲಿ ಹಿರಿಯ ಸುಪುತ್ರಿ. ಇವರ ಪತಿ ನಾಗರಾಜು ಕೂಡ ಪ್ರೌಢಶಾಲಾ ಶಿಕ್ಷಕ. ಎಂ. ಎ(ಸಮಾಜಶಾಸ್ತ್ರ) ಓದಿರುವ ಶಿಕ್ಷಕಿ ವೀಣಾ ನಾಗರಾಜು ವೃತ್ತಿಯೊಡನೆ ಬರವಣಿಗೆಯನ್ನು ಪ್ರವೃತ್ತಿಯನ್ನಾಗಿಸಿಕೊಂಡು 15 ಕ್ಕೂ ಹೆಚ್ಚು ಕತೆಗಳನ್ನು … Read more

ಸಂಗಾತಿ ಬ್ಲಾಗ್‌ ನ ಸಂಪಾದಕರಾದ ಕು.ಸ.ಮಧುಸೂದನರವರ ಒಂದೆರಡು ನುಡಿ

‘ಸಂಗಾತಿ’ ಸಾಹಿತ್ಯದ ಬ್ಲಾಗ್ ಶುರುವಾಗಿ ಕೇವಲ ಎರಡು ತಿಂಗಳು ಮಾತ್ರ ಆಗಿರುವುದರಿಂದ ಈ ಕ್ಷೇತ್ರದಲ್ಲಿ ಹೆಚ್ಚು ಬರೆಯಲು ನಾನು ಅರ್ಹನೆಂದು ಭಾವಿಸಿಲ್ಲ.ಪತ್ರಿಕೋಧ್ಯಮ ನನ್ನ ಕಾಲೇಜು ದಿನಗಳ ಕನಸಾಗಿತ್ತು.ಆದರೆ ನನ್ನ ವೈಯುಕ್ತಿಕ ಬದುಕಿನ ಸಮಸ್ಯೆಗಳಿಂದ ಅನಿವಾರ್ಯವಾಗಿ ಸರಕಾರಿ ನೌಕರಿಗೆ ಸೇರಬೇಕಾಯಿತು. ಆಗೀಗ ಕತೆ ಕವಿತೆಗಳನ್ನು ಬರೆದು ಪತ್ರಿಕೆಗಳಿಗೆ ಕಳಿಸಿ ಕಾಯುವಷ್ಟಕ್ಕೆ ನನ್ನ ಸಾಹಿತ್ಯದ ಆಸಕ್ತಿ ಸೀಮಿತವಾಯಿತು. ನಾಲ್ಕು ವರ್ಷಗಳ ಹಿಂದೆ ಸ್ವಯಂನಿವೃತ್ತಿ ಪಡೆದ ನಂತರ ಪೂರ್ಣಪ್ರಮಾಣದಲ್ಲಿ ಬರವಣಿಗೆಯಲ್ಲಿ ತೊಡಗಿಕೊಂಡು ಒಂದು ಕವನಸಂಕಲನ ಒಂದು ಕಥಾ ಸಂಕಲನ ಎರಡು ರಾಜಕೀಯ … Read more

ನನ್ನವಳ ನೆನಪು: ಶ್ರೀರಂಗ. ಕೆ. ಆರ್

ಅದೇನೋ ಅಂದು ಮನಸ್ಸು ತಳಮಳಗೊಂಡಿತ್ತು. ಮಲಗಿ ಮೂರು ಸುತ್ತು ಹೊರಳಾಡಿದರೂ ಕಣ್ಣಿಗೆ ನಿದ್ದೆ ಹತ್ತಲಿಲ್ಲ. ಆಗ ನಿನ್ನಪ್ಪನಿಂದ ಕರೆಬಂದದ್ದು. ನಿನಗೆ ಹೆರಿಗೆ ನೋವು, ಆಸ್ಪತ್ರೆಯಲ್ಲಿದ್ದೇವೆ ಎಂದು. ಆಗಲೇ ಓಡಿ ಬರಬೇಕೆಂದುಕೊಂಡೆ. ಪರವಾಗಿಲ್ಲ ನಾವೆಲ್ಲರೂ ಇದ್ದೇವೆ ತೊಂದರೆಯಿಲ್ಲ, ಬೆಳಗ್ಗೆ ಬಂದರಾಯಿತು ಎಂದರು ಮಾವ. ಆದರೂ ನನಗೆ ಸಮಾಧಾನವಿರಲಿಲ್ಲ. ನಿನ್ನ ಕನಸುಗಳಿಲ್ಲದೆ ಮಲಗಿದವನೇ ಅಲ್ಲ ನಾನು, ಅಂದೇಕೋ ಕಣ್ಣುಗಳು ಮುಚ್ಚಲೇ ಇಲ್ಲ. ಮಲಗಿದ್ದ ಕೋಣೆಯ ಮೇಲ್ಛಾವಣಿಯ ಪರದೆಯ ಮೇಲೆ ನಿನ್ನ ಜೊತೆ ಕಳೆದ ಕ್ಷಣಗಳ ನೆನಪುಗಳು ಮೂಡಿಬರುತ್ತಿದ್ದವು. ಅವನ್ನೇ ನೋಡುತ್ತ … Read more

ಪ್ರೇಮ ಪ್ರವಾದಿಯ ಪರಿಸರ ಪ್ರೇಮ: ಅಶ್ಫಾಕ್ ಪೀರಜಾದೆ

ತನ್ನ ಪ್ರಥಮ ಕೃತಿ ” ಮಮದಾಪೂರ ಚುಟುಕುಗಳು ” ಮೂಲಕ ಪ್ರೇಮ ಪ್ರವಾದಿ ಎಂದು ನಾಡಿನಾದ್ಯಂತ ಪ್ರಸಿದ್ದಿ ಪಡೆದಿರುವ ಈಶ್ವರ ಮಮದಾಪುರ ಅವರು ಇತ್ತೀಚೆಗೆ ಇನ್ನೊಂದು ಕೃತಿ “ಮಮದಾಪೂರ ಹನಿಗವಿತೆಗಳು” ಓದುಗರ ಕೈಗಿಟ್ಟಿದ್ದಾರೆ. ಚುಟುಕು, ಹನಿಗವಿತೆ, ಹಾಯ್ಕು, ಕಿರುಪದ್ಯ ಮುಂತಾದ ಹೆಸರುಗಳಿಂದ ಕರೆಯಲ್ಪಡುವ ಈ ಸಾಹಿತ್ಯ ಪ್ರಕಾರ ಕವಿಯ ಮನದ ಪರದೆಯ ಮೇಲೆ ಆ ಕ್ಷಣಕ್ಕೆ ಮಿಂಚಿ ಮಾಯವಾಗುವ ಭಾವ ಸ್ಪಂದನ.. ಅದೇ ಬರಹದ ರೂಪ ಪಡೆದುಕೊಂಡು ಓದುಗರ ಹೃದಯ ತಾಕುವ ತಂತುವಾಗಿ ಮಾರ್ಪಡುತ್ತದೆ. ಈಶ್ವರ ಮಮದಾಪುರ … Read more

ಹುಟ್ಟು ಹಬ್ಬದ ಶುಭಾಶಯಗಳು ಪಂಜು: ವರದೇಂದ್ರ ಕೆ.

ಪಂಜು ಸಾಹಿತ್ಯದ ಚಿಲುಮೆ, ಅಂತರ್ಜಾಲದಲ್ಲಿ ಹೆಸರು ಮಾಡಿದಕ್ಕಿಂತಲೂ ಅಂತರಂಗದಲ್ಲಿ ಸದ್ದಿಲ್ಲದೆ ಸೇರಿಕೊಂಡ ಸಿಹಿ ಪನ್ನೀರು. ಸಾಹಿತ್ಯ ರಚಿಸಿ ಮಸ್ತಕದಿಂದ ಪುಸ್ತಕಕ್ಕೆ ಇಳಿಸಿ ಕೂತವರಿಗೆ; ಪುಸ್ತಕದಿಂದ ಓದುಗರ ಮನೆಗೆ ಮನಸಿಗೆ ತಲುಪಿಸುವಂತಹ ಪರಿಪೂರ್ಣ ಕೆಲಸ ಪಂಜುವಿನಿಂದಾಗಿದೆ. ಪಂಜು ಎಂದರೆ ಬೆಳಕು, ಕತ್ತಲಲ್ಲಿದ್ದವರಿಗೆ ಪಂಜುಹಿಡಿದು ಸಾಹಿತ್ಯ ಬೆಳೆಸುವ ದಾರಿತೋರಿಸಿದೆ ನಾಡಿಗೆ ಪರಿಚಯಿಸಿ ಸಾಹಿತ್ಯ ಲೋಕದಲ್ಲಿ ಗುರುತಿಸಿಕೊಳ್ಳಲು ಸಹಾಯವಾಗಿ ನಿಂತಿದೆ. ಯುವ, ಎಲೆ ಮರೆ ಕಾಯಿಯಂತಹ ಸಾಹಿತಿಗಳಿಗೆ ಉತ್ತಮ ವೇದಿಕೆಯಾಗಿ ನಿಂತು ೭ ವಸಂತಗಳನ್ನು ಪೂರೈಸಿದೆ. ಈ ಸಪ್ತ ವರ್ಷದಲ್ಲಿ ಸಾಕಷ್ಟು … Read more

ಒಂಟಿತನ – ಪರಿಣಾಮ – ಮುಕ್ತಿ: ಗೀತಾ ಜಿ.ಹೆಗಡೆ, ಕಲ್ಮನೆ.

ಬದುಕನ್ನು ಒಂಟಿಯಾಗಿ ಎದುರಿಸುತ್ತಿದ್ದೇವಾ? ನಿಜಕ್ಕೂ ನಮಗೆ ಏನು ಬೇಕು ಜೀವಿಸಲು? ಯಾರ ಅಗತ್ಯ ನಮಗೆ ಹೆಚ್ಚು? ಒಂಟಿತನ ಕಾಡುವುದು ಯಾವಾಗ? ಅಥವಾ ಒಂಟಿತನ ಕಾಡಿದಾಗಲೆಲ್ಲ ನಮ್ಮ ಜೊತೆಗಿರುವವರು ಯಾರು ಗಂಡನಾ, ಮಕ್ಕಳಾ, ಸ್ನೇಹಿತರಾ ಬಂಧುಗಳಾ ಅಥವಾ ನೆರೆಹೊರೆಯವರಾ? ಇದರಿಂದ ಹೇಗೆ ಮುಕ್ತಿ ಹೊಂದಬೇಕು? ಇವೆಲ್ಲ ಆಗಾಗ ಕಾಡುವ ಪ್ರಶ್ನೆ. ಇವೆಲ್ಲವೂ ಸತ್ಯವಾಗಿ ಅರಿವಾಗಬೇಕು ಅಂದರೆ ಕೆಲವು ಸಂದರ್ಭದಲ್ಲಿ ಮಾತ್ರ ಸಾಧ್ಯ. ಅದು ಕಷ್ಟ ಕಾಲದಲ್ಲೂ ಅಲ್ಲ ಅಥವಾ ಕಾಯಿಲೆ ಬಿದ್ದು ನರಳುವಾಗಲೂ ಅಲ್ಲ. ಹಾಗಾದರೆ ಇನ್ಯಾವಾಗ? ; … Read more

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ ೪): ಎಂ. ಜವರಾಜ್

೪- ನನ್ನ ಮೆಟ್ಟಿ ಗಿರಿಕ್ಕು ಗಿರಿಕ್ಕನೆ ಆ ಸಂತ ಸಾಮ್ರಾಜ್ಯವ ಬುಟ್ಟು ಅಯ್ನೋರ್ ಪಾದ ಹೋಗ್ತಾ ಹೋಗ್ತಾ ಕತ್ತಲು ಆವರಿಸಿಕೊಳ್ತ ರಸ್ತೆ ಮಾರ್ಗ ಬುಟ್ಟು ಕಿರು ದಾರಿ ಕಾಣ್ತಲ್ಲೊ… ಆ ಕಿರು ದಾರೀಲಿ ಅಯ್ನೋರ್ ಮನೇನಾ? ಅಂತಂದರೆ ಅದು ಸುಳ್ಳಾಗಿ ಹೋಯ್ತಲ್ಲೋ.. ಆ ಕತ್ತಲ ಸಾಮ್ರಾಜ್ಯದಲಿ ಅಯ್ನೋರ್ ಉಟ್ಟ ಪಂಚೆ ಅಂಚು ನನ್ನ ಸುತ್ತ ಸುತ್ಕಂಡು ನಾಜೂಕಲ್ಲಿ ನಗ್ತಾ ನಗ್ತಾ ‘ನನ್ ಒಡಿಯನ ವೈಭೋಗ ನಿಂಗೊತ್ತಾ ಮೆಟ್ಟೇ..? ನಿಂಗೇನ್ ಗೊತ್ತು.. ನೀ ಹೊಸಿಲಾಚೆ ಬುಟ್ಟು ಒಂದಿಂಚು ಬರಗಿದ್ದುದಾ..? … Read more

“ಅಪ್ಪನಿಲ್ಲದ ಈ ಮೂರು ವರ್ಷದ ನಂತರ….. . . . . .”: ಧನರಾಜ್ ಪಾತ್ರೆ

ನಾನು ನೋಡಿದ ಮೊದಲ ವೀರ. ಬಾಳು ಕಲಿಸಿದ ಸಲಹೆಗಾರ ಬೆರಗು ಮೂಡಿಸುವ ಜಾದೂಗಾರ ಅಪ್ಪ, ಹಾಡು ಕೇಳಿದಾಗೆಲ್ಲಾ.. ಅಪ್ಪ ಕಣ್ಣೆದುರು ನಿಲ್ಲುತ್ತಾರೆ. ಸಾಲುಗಳು ಮಾತ್ರ ಒಂದು ಕುಟುಂಬದಲ್ಲಿ ತಂದೆಯ ಪಾತ್ರ ಪ್ರತಿಬಿಂಬಿಸುತ್ತದೆ. ನನ್ನ ತಂದೆಗೆ “ಬಾಬಾ” ಎಂತಲೇ ಕರೀತಿದ್ದೆ ನನ್ನ ಇಬ್ಬರು ಅಣ್ಣಂದಿರು (ಜಗನ್ನಾಥ, ದಶರಥ) “ದಾದಾ” ಅಂತ ಕರೀತಿದ್ದರು. ನನ್ನ ತಂದೆ ತಾಯಿ ಹೊಟ್ಟೆ ಪಾಡಿಗಾಗಿ ಕೂಲಿ ಹುಡುಕಿಕೊಂಡು ಸತಾರಕ್ಕೆ (ಮಹಾರಷ್ಟ್ರ) ಹೋದಾಗ ಅಲ್ಲಿ ನನ್ನ ಇಬ್ಬರು ಅಣ್ಣಂದಿರು ಹುಟ್ಟಿದ್ದು ಮಾಹಾರಾಷ್ಟ್ರದಲ್ಲಿ ತಂದೆಗೆ ದಾದಾ ಅಂತಾ … Read more

ಪಂಜುಗೆ ಶುಭಹಾರೈಕೆಗಳು: ಗಿರಿಜಾ ಜ್ಞಾನಸುಂದರ್

ಅದೊಂದು ದಿನ ಒಂದು ಕಾರ್ಯಕ್ರಮದಲ್ಲಿ ಬಹಳಷ್ಟು ಗಣ್ಯರನ್ನು ಭೇಟಿಮಾಡುವ ಸದವಕಾಶ ಸಿಕ್ಕಿತ್ತು ನನಗೆ. ತಮ್ಮ ಕ್ಷೇತ್ರದಲ್ಲಿ ಬಹಳಷ್ಟು ಸಾಧನೆಮಾಡಿದ್ದವರು. ಅವರ ಒಡನಾಟವೇ ಒಂದು ಆನಂದ. ನನ್ನ ಗುರುಗಳಾದ ಉದಯ ಶಂಕರ್ ಪುರಾಣಿಕ್ ರವರು, ಅವರ ಸಹೃದಯೀ ಸ್ನೇಹಿತರು, ಪಂಜು ಪತ್ರಿಕೆಯ ಸಂಪಾದಕರಾದ ನಟರಾಜ್ ಸೀಗೇಕೋಟೆಯವರು ಎಲ್ಲರನ್ನು ಭೇಟಿಯಾದ ಸಮಯ. ನಟರಾಜುರವರು ಮಾತನಾಡುತ್ತ “ನೀವೇಕೆ ಬರೆಯಬಾರದು?” ಎಂದರು. ಅಲ್ಲಿಯವರೆಗೂ ಅದರ ಬಗ್ಗೆ ಯೋಚನೆಯನ್ನು ಮಾಡದ ನನಗೆ ಅದು ಒಂದು ತಮಾಷೆ ಎನ್ನಿಸಿತು. ಕೇವಲ ಸಾಹಿತ್ಯವನ್ನು ಓದಲು ತಿಳಿದಿದ್ದ ನನಗೆ … Read more

ಆದರ್ಶ ಶಿಕ್ಷಕ, ವಿರಳ ಯುವ ಬರಹಗಾರ ವೈ. ಬಿ. ಕಡಕೋಳ: ಡಾ. ವ್ಹಿ. ಬಿ. ಸಣ್ಣಸಕ್ಕರಗೌಡರ

ಇದೇ ಜನೇವರಿ 21 ರಂದು ಹಾರೂಗೇರಿಯ ಅಜೂರ ಪ್ರತಿಷ್ಠಾನದವರು ಕೊಡಮಾಡುವ ಜಿಲ್ಲಾ ಮಟ್ಟದ ಸಾಹಿತ್ಯ ಕೃತಿಗೆ ವೈ. ಬಿ. ಕಡಕೋಳರ ಪಯಣಿಗ ಕೃತಿ ಆಯ್ಕೆಯಾಗಿದೆ. ಅಷ್ಟೇ ಅಲ್ಲ ಸೇಡಂ ತಾಲೂಕಿನ ಮೇದಕ ಗ್ರಾಮದ ಚನ್ನಕೇಶ್ವರ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಟ್ರಸ್ಟ(ರಿ) ವತಿಯಿಂದ ಶ್ರೀ ಚನ್ನಕೇಶ್ವರ ಉತ್ಸವದ ಅಂಗವಾಗಿ ಪೆಬ್ರುವರಿ 1 ರಂದು ಜರಗುವ ಮಾತೋಶ್ರೀ ನಾಗಮ್ಮ ಆಶಪ್ಪ ಬೊಪ್ಪಾಲ್ ಸ್ಮರಣಾರ್ಥ ಕೊಡಮಾಡುವ ರಾಜ್ಯಮಟ್ಟದ 15ನೇ ವರ್ಷದ ಅಕ್ಷರ ಲೋಕದ ನಕ್ಷತ್ರ ಪ್ರಶಸ್ತಿಗೆ ವೈ. ಬಿ. ಕಡಕೋಳರ … Read more

ನಮ್ಮ ಪುಟ್ಟಿ: ವೆಂಕಟೇಶ ಚಾಗಿ

ನಮ್ಮ ಪುಟ್ಟಿ (ಮಕ್ಕಳ ಕವನ) ನಮ್ಮ ಪುಟ್ಟಿಯ ಚಂದದ ಆಟ ನೋಡಲು ಎಷ್ಟು ಸುಂದರ ಪುಟ್ಟಿ ಜೊತೆಗೆ ಆಟವನಾಡಲು ಬರುವನು ಬಾನಿಗೆ ಚಂದಿರ..!! ಪುಟ್ಟಿಯ ಕೈಯಲಿ ಗೊಂಬೆ ಇದ್ದರೆ ಆಡಿಸಿ ನಗುತ ನಲಿಯುವಳು ಗೊಂಬೆಗೆ ಬಣ್ಣದ ಅಂಗಿಯ ಹಾಕಿ ಲಾಲಿಸಿ ಅಳುವ ಮರೆಯುವಳು !! ಪುಟ್ಟ ಪುಟ್ಟ ಹೆಜ್ಜೆಗಳಿಡುತ ಓಟದ ಆಟವ ಆಡುವಳು ಓಡುವ ಅವಳ ಹಿಡಿದು ಬಿಟ್ಟರೆ ಖುಷಿಯಲಿ ಕೇಕೆ ಹಾಕುವಳು || ಪಾಠ ಓದಲು ಕುಳಿತರೆ ನಾನು ತನಗೂ ಪುಸ್ತಕ ಕೇಳುವಳು ಚಿತ್ರವ ನೋಡಿ … Read more