ಕೆಂಪು ಹುಂಜ: ಜೆ.ವಿ.ಕಾರ್ಲೊ

ಸೋಂಬಾನ ಆರೂಡುವ ಎತ್ತು ಹೊಟ್ಟೆಯುಬ್ಬರಿಸಿಕೊಂಡು ಸತ್ತು ಬಿದ್ದಿತ್ತು. ಸೋಂಬಾನ ಜಗತ್ತು ತಲೆ ಕೆಳಗಾದುದರಲ್ಲಿ ಆಶ್ಚರ್ಯವಿಲ್ಲ. ಎತ್ತು ಮುದಿಯಾಗಿತ್ತು, ನಿಜ. ನಿತ್ರಾಣಗೊಂಡಿತ್ತೂ ನಿಜವಾದರೂ, ಒಳ್ಳೆಯ ಸಮಯ ನೋಡಿಯೇ ಸೋಂಬಾನಿಗೆ ಕೈ ಕೊಟ್ಟಿತ್ತು… ಒಂದು ಹದವಾದ ಮಳೆ ಉದುರಿ ಭೂಮಿ ಉತ್ತನೆಗೆ ತಯಾರಾದಾಗ! ಎತ್ತು ಯಾಕೆ ಸತ್ತಿತು ಎಂದು ಕಾರಣ ಸೋಂಬಾನಿಗೆ ಸ್ಪಷ್ಟವಾಗಿ ಗೊತ್ತಿತ್ತು. ಅವನ ಹೊಲದ ಬದಿಯಲ್ಲೇ ಒಂದು ದೈತ್ಯಾಕಾರದ ಆಲದ ಮರವಿತ್ತು. ಅದರಲ್ಲಿ ವಾಸವಿದ್ದ ಚೌಡಿಗೆ, ಪ್ರತಿವರ್ಷ ಕೊಯ್ಲಿನ ನಂತರ ಕೆಂಪು ಹುಂಜನನ್ನು ಬಲಿ ಕೊಡುವುದು ರೂಢಿ. … Read more