ಕುವೆಂಪು ಪುಸ್ತಕ ಮನೆಗೆ ಪುಸ್ತಕಗಳ ದೇಣಿಗೆ ನೀಡಿರಿ

ಬಡಮಕ್ಕಳ ಜ್ಞಾನಾರ್ಜನೆಯ ಉದ್ದೇಶಕ್ಕಾಗಿ ಗ್ರಾಮೀಣ ಭಾಗದಲ್ಲಿ ಸ್ಥಾಪನೆಗೊಂಡಿರುವ ‘ಕುವೆಂಪು ಪುಸ್ತಕ ಮನೆ’ ಗೆ ನಿಮ್ಮಲ್ಲಿರುವ ಯಾವುದೇ ಬಗೆಯ ಪುಸ್ತಕಗಳನ್ನು ದೇಣಿಗೆಯಾಗಿ, ದಾನವಾಗಿ ನೀಡಬಹುದಾಗಿದೆ.ನೀವು ನೀಡುವ ಒಂದು ಪುಸ್ತಕ ಒಂದು ಕೋಟಿಗೂ ಮಿಗಿಲು.ಮಕ್ಕಳಿಗೆ ಪುಸ್ತಕಗಳನ್ನು ಓದಲು ನೀಡಿ; ಸಹಕರಿಸಿ.ಪ್ರಕಟಣೆ : ಕುವೆಂಪು ಪುಸ್ತಕ ಮನೆಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿದೂ ಸಂ : 8549957444 ಅಂಚೆ ಮೂಲಕ ಪುಸ್ತಕ ತಲುಪಿಸಲುಕುವೆಂಪು ಪುಸ್ತಕ ಮನೆನಂ ೯೬/ಎ, ಪರಿಣಾಮಿಪುರ, ಕಾವೇರಿಪುರ ಅಂಚೆತಲಕಾಡು ಹೋಬಳಿ, ತಿ ನರಸೀಪುರ ತಾಲ್ಲೂಕು,ಮೈಸೂರು – ೫೭೧೧೨೩

ಪಂಜು ಕಾವ್ಯಧಾರೆ

ನನ್ನಲ್ಲಿಷ್ಟು ಕನಸುಗಳಿವೆಮಾರಾಟಕ್ಕಲ್ಲ,ಎಲ್ಲರೆದೆಯ ಬರಡು ಭೂಮಿಯಲ್ಲಿಹೂಳುತ್ತೇನೆ,ಹೊಸ ನಾಳೆಗಳನ್ನೇ ಚಿಗುರಿಸುತ್ತೇನೆ ! ನನ್ನೀ ಕನಸುಗಳು-ಬುದ್ದನ ನಗೆಯ ನೆರಳಲ್ಲಿಬೆಳೆದು ಬಂದಂತಹವು,ಊರಾಚೆಯ ಒಲೆಯ – ಊರೊಳಗೆನೆಮ್ಮದಿಯ ನಗೆ ಬೀರುವಕನಸು ಕಾಣುತ್ತದೆ, ನನ್ನೀ ಕನಸು ! ಮೈಲು ದೂರದಲ್ಲಿಯ ಬೆಟ್ಟದ ಮ್ಯಾಲಿನದೇವದಾಸಿಯೂ ಅಂಗಲಾಚುತ್ತಾಳೆ-ನನ್ನೀ ಕನಸುಗಳಿಗಾಗಿ !ಮುಟ್ಟಾದ ಪುಟ್ಟ ತಂಗಿಯತುಂಬಿ ನಿಂತ ಕಣ್ಣಾಲೆಯೂ ಕೈಚಾಚಿದೆ-ನನ್ನ ಕನಸುಗಳತ್ತ ! ಸುಸ್ತಾಗಿದ್ದ ‘ಗಸ್ತಿ’ಯೂ ಗಸ್ತು ತಿರುಗಲು-ಅಣಿಯಾಗುತಿದ್ದಾನೆ , ಮತ್ತೇನಂಬಿಕೆಯಿದೆ ನನ್ನೀ ಕನಸುಗಳಲ್ಲಿ,ಅಪ್ಪ ಮುಟ್ಟಿದ ನೀರು ಮೈಲಿಗೆಯೆಂದದೊರೆಗಳಿಂದುಕನಸುಗಳ ಕಂಡು – ದಡಬಡಿಸುತ್ತಿದ್ದಾರೆ ! ಇಂದು ಬದುಕಿದ್ದರೆ -ನನ್ನಅಂಬೇಡ್ಕರ್ ?ನನ್ನೀ ಕನಸುಗಳ … Read more

ಸಾಲ: ಅನಂತ ರಮೇಶ್

1 ಹದಿನೈದು ವರ್ಷಗಳಿಂದ ಅಭ್ಯಾಸವಾಗಿ ಹೋಗಿದೆ. ಲತಾಳ ಅದೇ ವ್ಯಂಗ್ಯದ ಮಾತು. “ಸಾಹೇಬರ ಸವಾರಿ ಈವತ್ತು ಯಾವ ಕಡೆಗೆ?”. ನಾನು ಉತ್ತರಿಸುವ ಗೊಡವೆಗೆ ಹೋಗುವುದಿಲ್ಲ. ತಿಂಡಿಯೊಟ್ಟಿಗೆ ಕಾಫಿ ಲೋಟ ಟೇಬಲ್‌ಮೇಲೆ ಬಡಿಯುತ್ತಾಳೆ. ಸಾವಕಾಶ ತಿಂದು ಹೊರಡುತ್ತೇನೆ. ಆ ಸಮಯ ಮೀರುವುದಿಲ್ಲ. ಈಗ ಬೆಳಗಿನ 9:30. ಸಾಮಾನ್ಯವಾಗಿ ಎಲ್ಲರೂ ಆಫೀಸಿಗೆ ಹೊರಡುವ ಸಮಯ! ಹೊರಗೆ ರಸ್ತೆಯಲ್ಲಿ ನಡೆಯುವಾಗ, ಲತಾಳ ಬಗೆಗೆ ಕನಿಕರ ಅನ್ನಿಸುತ್ತೆ. ಅವಳಾದರೂ ಏನು ಮಾಡಿಯಾಳು? ನನಗಂತೂ ತಿಂಗಳಿಗೊಮ್ಮೆ ಸಂಬಳ ತರುವ ಕೆಲಸವಿಲ್ಲ. ಯಾವುದಾದರೂ ಮನೆ ಬಾಡಿಗೆ, … Read more

ಇಳಾ: ಗಿರಿಜಾ ಜ್ಞಾನಸುಂದರ್‌

“ಪಿಂಕಿ, ಬಬ್ಲೂ ಬನ್ನಿ ಮನೆಗೆ… ತುಂಬ ಹೊತ್ತಾಗಿದೆ.. ಆಶಾ ಆಂಟಿ ಮನೆಗೆ ಬಂದ್ರೆ ನಿಮಗೆ ಏನು ಬೇಡ” ಅಂತ ತಮ್ಮ ಮಕ್ಕಳನ್ನು ಕರೆದುಕೊಂಡು ಹೋದಳು ಪಿಂಕು ಬಬ್ಲೂ ಅಮ್ಮ. ಆಗಲೇ ರಾತ್ರಿ ಎಂಟು ಗಂಟೆ ಆಗಿದೆ… ಇನ್ನೊಂದು ಹತ್ತು ನಿಮಿಷಕ್ಕೆ ಇನ್ನು ಆಶಾ ಆಂಟಿ ಮನೆಯಲ್ಲಿ ಉಳಿದುಕೊಂಡಿದ್ದ ೫- ೬ ಮಕ್ಕಳನ್ನೆಲ್ಲ ಅವರವರ ಮನೆಯವರು ಕರೆದುಕೊಂಡು ಹೋದರು. ಆಶಾ ಎಲ್ಲ ಮಕ್ಕಳು ಹೋದಮೇಲೆ ಸಪ್ಪೆ ಮುಖ ಹಾಕಿಕೊಂಡು ಕುಳಿತಿದ್ದಳು. ಮನೆಯೆಲ್ಲ ಚಾಕಲೇಟ್ ಪೇಪರ್ಸ್, ತಿಂಡಿ ತಿನಿಸುಗಳನ್ನು ಚೆಲ್ಲಿ … Read more

ಮರೆಯಲಾಗದ ಮದುವೆ (ಕೊನೆಯ ಭಾಗ): ನಾರಾಯಣ ಎಮ್ ಎಸ್

ಅಯ್ಯರೊಂದಿಗೆ ಮಾತಾಡಿದ್ದು ಎಲ್ಲರಿಗೂ ಸಮಾಧಾನ ತಂದಿತ್ತು. ತನಿಯಾವರ್ತನದ ನಂತರ ಸಿಂಧು ಭೈರವಿ, ತಿಲಂಗ್ ಮತ್ತು ಶಿವರಂಜನಿಯಲ್ಲಿ ಹಾಡಿದ ದೇವರನಾಮಗಳು ಮುದ ಕೊಟ್ಟವು. ಕಛೇರಿ ಕೊನೆಯ ಭಾಗ ತಲುಪಿದ್ದರಿಂದ ಮೈಕು ಹಿಡಿದ ಮೋಹನ ವೇದಿಕೆ ಹತ್ತಿದ. ನೇದನೂರಿಯವರಿಂದ ಪ್ರಾರಂಭಿಸಿ, ಒಬ್ಬೊಬ್ಬರಾಗಿ ಪಿಟೀಲು, ಮೃದಂಗ, ಖಂಜಿರ ಮತ್ತು ತಂಬೂರಿಯಲ್ಲಿ ಸಾಥ್ ನೀಡಿದ ಪ್ರತಿಯೊಬ್ಬ ಕಲಾವಿದರ ಬಗ್ಗೆಯೂ ಒಂದೆರಡು ಒಳ್ಳೆಯ ಮಾತನಾಡಿ ಧನ್ಯವಾದ ಅರ್ಪಿಸಿದ. ಒಬ್ಬೊಬ್ಬರಿಗೂ ಧನ್ಯವಾದ ಹೇಳಿದ ಬೆನ್ನಲ್ಲೇ ಕ್ರಮವಾಗಿ ಆಯಾ ಕಲಾವಿದರಿಗೆ ಕೃಷ್ಣಯ್ಯರ್ ಖುದ್ದು ತಮ್ಮ ಹಸ್ತದಿಂದ ಸೂಕ್ತ … Read more

ಹಾರುವ ಹಂಸೆಯ ಕಾವ್ಯಗುಣ: ವಿನಯಚಂದ್ರ

“ಹಾರುವ ಹಂಸೆ” ಇತ್ತೀಚಿನ ದಿನಗಳಲ್ಲಿ ನಾನು ಓದಿ ಮೆಚ್ಚಿದ, ಇತ್ತೀಚಿನ ತಲೆಮಾರಿನವರು ರಚಿಸಿದ ಕೃತಿಗಳಲ್ಲಿ ಬಹಳ ಉತ್ತಮವಾದ ಕೃತಿ ಎಂದು ನಿಸ್ಸಂಶಯವಾಗಿ ಹೇಳಿಬಿಡಬಹುದು. ಇದು ಚಾಮರಾಜನಗರದ ಆರ್ ದಿಲೀಪ್ ಕುಮಾರ್ ರವರ ಕವಿತೆಗಳ ಸಂಕಲನ. ಗಂಭೀರವಾದ ಸಾಹಿತ್ಯ ವಿದ್ಯಾರ್ಥಿಯೊಬ್ಬ ತನ್ನ ಅಧ್ಯಯನದ ಆಧಾರದ ಮೇಲೆ, ಉತ್ತಮ ಕಾವ್ಯಗಳಲ್ಲಿ ಇರಬಹುದಾದ ಲಕ್ಷಣಗಳನ್ನು ಗುರುತು ಹಾಕಿಕೊಂಡು, ಅದಕ್ಕೆ ನಿಷ್ಠನಾಗಿ ಕಾವ್ಯ ರಚನೆ ಮಾಡಿದರೆ ಕವಿತೆಗಳು ಹೇಗೆ ಮೂಡಬಹುದೋ, ಕ್ವಚಿತ್ತಾಗಿ ಹಾಗೆಯೇ ಮೂಡಿವೆ ದಿಲೀಪರ ಕವಿತೆಗಳು. ಕಾವ್ಯದಲ್ಲಿ ಮುಖ್ಯವಾಗಿ ವಸ್ತು ವಿಷಯ, … Read more

ಡಿಸೆಂಬರ್ ಎಂದರೆ ಪ್ರವಾಸಗಳ ನೆನಪು..: ವಿನಾಯಕ ಅರಳಸುರಳಿ

ಶಾಲಾ ಪ್ರವಾಸವೆನ್ನುವುದು ಬದುಕಿನ ಮತ್ತೆಲ್ಲ ಪ್ರವಾಸಗಳನ್ನೂ ಮೀರಿಸುವಂಥಹಾ ಸವಿನೆನಪು. ಅರ್ಧವಾರ್ಷಿಕ ಪರೀಕ್ಷೆಗಳೆಲ್ಲಾ ಮುಗಿದು ಛಳಿಗಾಲದ ಪ್ರವೇಶವಾಗುವ ಹೊತ್ತಿಗೆ ಶೈಕ್ಷಣಿಕ ಪ್ರವಾಸದ ಘೋಷಣೆಯನ್ನು ಸ್ವತಃ ಹೆಡ್ ಮಾಷ್ಟರೇ ಮಾಡುತ್ತಿದ್ದರು. ಬರುವ ಆಸೆ ಎಲ್ಲರಲ್ಲೂ ಇರುತ್ತಿತ್ತಾದರೂ ನೂರಿನ್ನೂರು ರೂಪಾಯಿಗಳ ಪ್ರವಾಸ ಶುಲ್ಕವನ್ನು ಹೊಂದಿಸುವುದು ಎಲ್ಲರಿಗೂ ಸಾಧ್ಯವಿರುವ ವಿಷಯವಾಗಿರಲಿಲ್ಲ. ಕೆಲವರಿಗೆ ಸುಲಭವಾಗಿ ಸಿಗುತ್ತಿದ್ದ ಈ ಹಣ ಇನ್ನು ಕೆಲವರಿಗೆ ಅಪ್ಪ-ಅಮ್ಮನಿಂದ ಬೆನ್ನಿನ ಮೇಲೆ ನಾಲ್ಕು ಗುದ್ದಿಸಿಕೊಂಡ ಬಳಿಕವೇ ಸಿಗುತ್ತಿತ್ತು. ಇನ್ನೂ ಕೆಲವರು ತಾವು ಅಲ್ಲಿಲ್ಲಿ ಅಡಿಕೆ ಸುಲಿದು, ಗೇರುಬೀಜ ಹೆಕ್ಕಿ ಸಂಪಾದಿಸಿದ್ದ … Read more

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 55 & 56): ಎಂ. ಜವರಾಜ್

-೫೫-ಓಟಾಗಿ ಎಂಟೊಂಬತ್ದಿನ ಆಗಿತ್ತುಇವತ್ತು ಎಣ್ಕ ಅದನಾಳಿದ್ದು ಕಳ್ದು ಆಚ ನಾಳನೀಲವ್ವೋರ್ ತಿಥಿ ಅದ ಈ ಅಯ್ನೋರು ಆಳ್ಗಳ್ ಬುಟ್ಕಂಡುಸುಣ್ಣನುವ ಗೋಪಿ ಬಣ್ಣನುವಮನಗ್ವಾಡ್ಗ ತುಂಬುಸ್ತಿದ್ರು ಈಗ ಈ ದೊಡ್ಡವ್ವ ಬುಟ್ರ ಯಾರಿದ್ದರು..ಈ ಅಯ್ನೋರ್ಗ ಈ ದೊಡ್ಡವ್ವನೇ ಗತ್ಯಾದ್ಲುಈ ದೊಡ್ಡವ್ವ ಹೇಳ್ದಾಗೇ ಕೇಳ್ಬೇಕುಈ ದೊಡ್ಡವ್ವನ ಮಾತ್ನಂತೆಸತ್ತೋದ ನೀಲವ್ವೋರ ಅವ್ವ ಅಪ್ಪಬಂದುಮಗಳ ನೆನ್ಕಂಡು ಮನ ಕೆಲ್ಸ ಮಾಡ್ತಿದ್ರು ಈಗ ಈ ಅಯ್ನೋರು ದೊಡ್ಡವ್ವನ್ಗ ಹೇಳಿತಾಲ್ಲೊಕ್ಕಚೇರಿ ಕಡ ನಡುದ್ರುಹಿಂಗ ತಾಲ್ಲೊಕ್ಕಚೇರಿ ಕಡ ನಡ್ದಾಗಆ ಆಳು ದಾರಿಲಿ ಸಿಕ್ಕಿಗುಸುಗುಸು ಮಾತಾಡ್ತ ನಡ್ದಹಂಗೆ ಇನ್ನಿಬ್ರು ಬಂದ್ರುತಾಲ್ಲೊಕ್ಕಚೇರಿ … Read more

ಬೆರಗೊಂದು ಕೊರಗಾಗಿ ಕಾಡಿದಾಗ…. : ಸುಂದರಿ ಡಿ.

ತನ್ನ ಪಾಡಿಗೆ ತಾನು ಹಾಡಿಕೊಂಡು, ಹನಿಗಳ ಚುಮುಕಿಸಿ, ಬಳುಕುತ ಬಿಸಿಲ ನೇರ ಕೋಲುಗಳ ಸ್ಪರ್ಶದಿಂದಲೇ ಮತ್ತಷ್ಟು ಹೊಳಪಿನಿಂದ ತನ್ನಾಳದ ಮರಳನೂ ಚಿನ್ನದಂತೆ ಹೊಳೆಯಿಸುತ, ಜುಳು-ಜುಳು ನಾದದೊಂದಿಗೇ ಹರಿಯುತಿದ್ದ ನೀರ ಬದಿಯಲಿ ತನ್ನ ಸೊಬಗತೋರುತ, ನೀರ ಸೊಬಗನೂ ಹೆಚ್ಚಿಸಲೆಂಬಂತೆ ಅದರ ಸತ್ವವನೇ ಹೀರಿ ನಿಜವಾದ ಹಸಿರೆಂದರೆ ಇದೇ ಎಂಬಂತೆ ಬೆಳೆದು ನಿಂತಿದ್ದ ಗಿಡಗೆಂಟೆಗಳು, ಅವುಗಳಲ್ಲಿ ಬೆಟ್ಟದ ಹೂವಿನಂತೆ ಇತರರನು ತಮ್ಮತ್ತ ಸೆಳೆವ ಯಾವ ಗೋಜಿಗೂ ಹೋಗದೆ ಬೇಲಿಯ ಹೂವೆಂದೇ ಕರೆಸಿಕೊಂಡರೂ ಸಹಜ ಸೌಂದರ್ಯದ ಕಾರಣವೊಂದರಿಂದಲೇ ತಮ್ಮತ್ತ ತಿರುಗಿ ನೋಡುವಂತೆ … Read more

“ಮಕ್ಕಳ ಸಾಹಿತ್ಯ ಸಂಪಾದಕತ್ವ ಕೃತಿ”ಯ ಲೋಕಾರ್ಪಣಾ ಕಾರ್ಯಕ್ರಮ

ಸಾಹಿತ್ಯಾಸಕ್ತರೇ,ಸಹೃದಯೀ ಕವಿಮನಸ್ಸುಗಳೇ,ಫೆಬ್ರವರಿಯಲ್ಲಿ ನಮ್ಮ ಸಂಸ್ಥೆಯ ಕಡೆಯಿಂದ “ಮಕ್ಕಳ ಸಾಹಿತ್ಯ ಸಂಪಾದಕತ್ವ ಕೃತಿ”ಯ ಲೋಕಾರ್ಪಣಾ ಕಾರ್ಯಕ್ರಮ ನಡೆಯಲಿದೆ. 🎉 ಆಸಕ್ತರು ನಿಮ್ಮ ಸ್ವರಚಿತ ಕುತೂಹಲ ಭರಿತ ನೀತಿಕಥೆ ಮತ್ತು ಮಕ್ಕಳಿಗೆ ಸುಲಲಿತವಾಗಿ ಹಾಡಲು ಬರುವಂತಹ ಮಕ್ಕಳ ಪದ್ಯವನ್ನು ಕಳುಹಿಸಿಕೊಡಬೇಕಾಗಿ ಕೋರಿಕೆ. ವಿದ್ಯಾರ್ಥಿಗಳು ಕೂಡ ಭಾಗವಹಿಸಬಹುದು. ನಿಮ್ಮ ಗುರುತಿನ ಚೀಟಿ ಅಗತ್ಯವಾಗಿ ಲಗತ್ತಿಸಿದರೆ ದತ್ತ ಮೊತ್ತದಲ್ಲಿ ಕಡಿತಗೊಳಿಸಲಾಗುವುದು. ÷ ಮಕ್ಕಳ ಪದ್ಯ (೧ ಪುಟ)÷ ಕಥನ-ಕವನವಾದರೆ ( ೧-೨ ಪುಟಗಳು)÷ ಮಕ್ಕಳ ನೀತಿಕಥೆ ( ೨-೩ ಪುಟಗಳು ) ಅಲ್ಲದೇ … Read more

ಪಂಜು ಕಾವ್ಯಧಾರೆ

ಅಪ್ಪ ಅಪ್ಪಾ ಅದೊಂದು ದಿನ ನೀ ಹೇಳಿದೆ ಕಣ್ಣುಗಳನ್ನು ಪಿಳ  ಪಿಳನೆ ಬಿಟ್ಟು ನಿನ್ನನ್ನೇ  ನೋಡುತ್ತಿದ್ದಾ ಈ ಪುಟ್ಟ ಜೀವಕ್ಕೆ, ಮಗಳೇ  ನೀ ನನ್ನ ಮಾತ ನಡೆಸುವೆಯ? ನಿನ್ನ ಬದುಕಿನ  ಪರಪಂಚದಲ್ಲಿ ಕಾಣಿಸುತ್ತಿದ್ದ ಆ ನಿನ್ನ ಆಚಾರಗಳು, ವಿಚಾರಗಳು, ಮಮತೆಯದನಿಯಾಳಗಳು… ಹೀಗೆ.. ನಿನ್ನಪರೂಪದ  ಸಂಗತಿಗಳ ಅರ್ಥೈಸಲಾಗದೆ, ನಿನ್ನೊಲುಮೆಯ ಪ್ರೀತಿಸಾಗರದಲಿ ಮಿಂದೇಳುತ್ತಿದ್ದ ನನಗೆ ನೀನೇ ವಿಸ್ಮಯ ಬೇರೊಂದ ಬಯಸದೆ  ನಾ ಉಲಿದೆ ನೀ ಹೇಳುವ ಮಾತನ್ನೊಂದನ್ನೂ ನಾ ತೆಗೆಯಲಾರೆ. ಅಪ್ಪಾ ನನ್ನಿಂದ ನೀ ದೂರಾದ  ಇಷ್ಟು ವರುಷಗಳೂ ನಡೆದೇ … Read more

ಜಾಣಸುದ್ದಿ 5: ಕೊಳ್ಳೇಗಾಲ ಶರ್ಮ

  ಈ ವಾರದ ಸಂಚಿಕೆಯಲ್ಲಿ ಕೊಳ್ಳೇಗಾಲ ಶರ್ಮರವರ ಧ್ವನಿಯಲ್ಲಿರುವ ಈ ಆಡೀಯೊ ಕೇಳಲು ಈ ಕೆಳಗಿನ ಕೊಂಡಿಯ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಜಾಣ ಸುದ್ದಿ ಧ್ವನಿಮುದ್ರಿಕೆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ save as/ download ಆಪ್ಷನ್ ನಿಂದ ನಿಮ್ಮ ಮೊಬೈಲ್/ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… ಇ ಮೇಲ್ ನಲ್ಲಿ ಅಥವಾ ವಾಟ್ಸ್ ಅಪ್ ನಲ್ಲಿ ಈ ಧ್ವನಿಮುದ್ರಿಕೆ ನಿಮಗೆ ಬೇಕು ಎಂದನಿಸಿದರೆ ನಿಮ್ಮ ಕೋರಿಕೆಯನ್ನು … Read more

ಕುವೆಂಪು ಮತ್ತು ಕನ್ನಡ: ದೊರೇಶ್

 ಡಿಸೆಂಬರ್ 29 ಕುವೆಂಪು ಅವರ ಹುಟ್ಟುಹಬ್ಬವನ್ನು ನಾವು ಆಚರಿಸುತ್ತಿದ್ದೇವೆ. ಆದಿಕವಿ ಪಂಪನಿಂದ ಸಶಕ್ತ ಕಾವ್ಯ ಮಾರ್ಗವನ್ನು ಕಂಡುಕೊಂಡ ಕನ್ನಡ ಸಾಹಿತ್ಯವು ಅಗಾಧವಾಗಿ ಬೆಳೆದಿರುವುದಷ್ಟೇ ಅಲ್ಲದೆ ಅನುಪಮ ಕೊಡುಗೆಯನ್ನು ವಿಶ್ವ ಸಾಹಿತ್ಯಕ್ಕೆ ನೀಡಿದೆ. ಈ ಕನ್ನಡದ ಸಾಹಿತ್ಯ ನದಿಯು ತನ್ನ ಸುದೀರ್ಘ ಪಯಣದಲ್ಲಿ ಆಚೀಚೆಯಿಂದ ಜಲದ್ರವ್ಯಗಳನ್ನು ಪಡೆದು ಮುಂದೆ ಸಾಗಿ ಸಾಗರವಾಗಿ ರೂಪುಗೊಂಡಿತು. ಆ ಸಾಗರದಲ್ಲಿ ಮುತ್ತುರತ್ನಗಳು ನಿರ್ಮಾಣವಾದವು. ಅದರಲ್ಲೊಂದು ಅದ್ಭುತ ಮುತ್ತು ಕುವೆಂಪು.ಅವರ ಸಾಧನೆಯ ಪ್ರತಿಯೊಂದು ಹೆಜ್ಜೆಯಲ್ಲೂ ಕನ್ನಡ ಸಂಸ್ಕೃತಿಯ ದರ್ಶನವಾಗುತ್ತದೆ. ಕುವೆಂಪು ಅವರಷ್ಟು ಕನ್ನಡದ ಪರವಾಗಿ … Read more

ಹೊಸ ವರುಷದೊಂದಿಗೆ ಬೆಸೆಯಲಿ ಸ್ನೇಹ- ಸಂಬಂಧಗಳು: ವೇದಾವತಿ ಹೆಚ್. ಎಸ್.

ಮನುಷ್ಯನ ಜೀವನ ಎಷ್ಟೊಂದು ವಿಚಿತ್ರ. ಬೇಕು ಬೇಕು ಎನ್ನುತ್ತಾ ಸಾಗುವಾಗ ವಯಸ್ಸಿನ ಅರಿವು ಮರೆತು ಹೋಗುತ್ತದೆ. ಹೊಸ ವರ್ಷದ ಸಂತೋಷ ಒಂದು ಕಡೆ ಇದ್ದರೆ, ಈ ಹಿಂದಿನ ವರುಷಗಳು ಹೇಗೆ ಕಳೆದು ಹೋದವು ಎಂಬುದು ಮೆಲುಕು ಹಾಕುವುದು ಮರೆತಿರುತ್ತಾನೆ. ನಾಗಾಲೋಟದಲ್ಲಿ ಸಾಗುತ್ತಿರುವ ಜೀವನ ಯಾವಾಗಲೂ ನಾಳೆಯದನ್ನೇ ಯೋಚಿಸಿ ಜೀವನದಲ್ಲಿ ತನಗಾಗಿ ಬರುವಂತಹ ಇಂದಿನ ದಿನದ  ಸಂತೋಷವನ್ನು ಕಳೆದು ಕೊಳ್ಳುತ್ತಾನೆ. ಹಿಂದಿನ ಕಾಲದಲ್ಲಿ ಹಬ್ಬಗಳಲ್ಲಿ ಹೊಸ ವರ್ಷಗಳ ಆಚರಣೆಯನ್ನು ಮಾಡುವ ಸಂಪ್ರದಾಯವಿತ್ತು. ಮನೆಯವರೆಲ್ಲ ಒಂದೆಡೆ ಸೇರಿ ಸಂಭ್ರಮಿಸುತ್ತಿದ್ದ ದಿನಗಳವು. … Read more

ಕುಪ್ಪಳ್ಳಿಯ ಕವಿಶೈಲದ ಮರೆಯಲಾಗದ ನೆನಪುಗಳು: ವೈ.ಬಿ.ಕಡಕೋಳ

ಹತ್ತು ವರ್ಷಗಳ ಹಿಂದಿನ ನೆನಪು (2007) ಕುವೆಂಪುರ ಮನೆಯಲ್ಲಿ ಐದು ದಿನಗಳ ಕಾಲ ಸಂಶೋಧನ ವಿದ್ಯಾರ್ಥಿಗಳಿಗೆ ಕಮ್ಮಟವನ್ನು ಅನಿಕೇತನ ಕಟ್ಟಡದಲ್ಲಿ ಹಮ್ಮಿಕೊಳ್ಳಲಾಗಿತ್ತು. ಐದು ದಿನಗಳು ಕಮ್ಮಟದ ಜೊತೆಗೆ ಕವಿಮನೆಯನ್ನು ನೋಡುತ್ತ ಅಲ್ಲಿನ ವಾತಾವರಣದ ಜೊತೆಗೆ ಕುವೆಂಪುರವರ ಬದುಕಿನ ಘಟ್ಟಗಳ ಹಾಗೂ ಅವರ ಕೃತಿಗಳ ಓದು ನನಗೆ ಹಿಡಿಸಿತ್ತು. ಆ ಐದು ದಿನಗಳ ಅವಧಿಯ ನಂತರ ಆ ಸ್ಥಳ ಪರಿಸರ ಬಿಟ್ಟು ಬರುವಾಗ ಕವಿಸ್ಮøತಿಯನ್ನು ಮನದಲ್ಲಿ ಹೊತ್ತು ಹೊರಬರಬೇಕಾಯಿತು.ಆ ದಿನ ಅವರ ಹುಟ್ಟು ಹಬ್ಬದ ಸಡಗರ ಎಲ್ಲ ಶಿಬಿರಾರ್ಥಿಗಳೊಡನೆ … Read more

ಸ್ತ್ರೀ ಸಾಮರ್ಥ್ಯ ಮತ್ತು ಅವಕಾಶಗಳು: ನಾಗರೇಖಾ ಗಾಂವಕರ

ಡಾ. ಸೌಮ್ಯ ಸ್ವಾಮಿನಾಥನ್ ವಿಶ್ವ ಆರೋಗ್ಯ ಸಂಸ್ಥೆಯ ಭಾರತದ ಪ್ರತಿನಿಧಿಯಾಗಿ ಈ ತಿಂಗಳ ಮೊದಲ ವಾರವಷ್ಟೇ ಆಯ್ಕೆಯಾಗಿದ್ದಾರೆ. ಭಾರತದ ಮಟ್ಟಿಗೆ ಪ್ರಪ್ರಥಮ ಬಾರಿಗೆ ಒಬ್ಬ ಮಹಿಳೆ ಆಯ್ಕೆಯಾಗಿರುವುದು ಸ್ತ್ರೀ ಸಮಾಜ ಹೆಮ್ಮೆ ಪಡುವಂತಹ ಸಂಗತಿ. ಮಹಿಳೆಗೆ ಅಸಾಧ್ಯವೆನ್ನುವಂತಹ  ಜವಾಬ್ದಾರಿ ಯಾವುದು ಇಲ್ಲ ಎಂಬುದಕ್ಕೆ  ಸಾಕ್ಷಿಯಾಗುತ್ತಿದ್ದಾರೆ. ಸ್ತ್ರೀ ಜಾಗತಿಕ ರಂಗದಲ್ಲಿ ಪುರುಷನಿಗೆ ಸಮಾನವಾಗಿ ಮಿಂಚುವ ಯಾವ ಸಾಮಥ್ರ್ಯದಲ್ಲೂ ಕಡಿಮೆಯಿಲ್ಲ. ಹಾಗಾಗಿ ಮಹಿಳೆ ಮತ್ತು ಮಹಿಳಾ ಜಗತ್ತು ಇಂದು ವ್ಯಾಪಕ ಅರ್ಥ ಹಾಗೂ ವಿಸ್ತಾರವನ್ನು ಪಡೆದುಕೊಳ್ಳುತ್ತಿದೆ. ಜಾಗತಿಕ ಸಮೀಕ್ಷೆಯ ಪ್ರಕಾರ … Read more

ದೇವಾಲಯ, ದೇವರ .. ಸರಳವಾಗಿ ಅರ್ಥೈಸಿದ ವಚನಕಾರರು!: ಕೆ ಟಿ ಸೋಮಶೇಖರ ಹೊಳಲ್ಕೆರೆ

ಇಂದು ಹಣ, ಅಧಿಕಾರ, ಆಸ್ಥಿ, ವಸ್ತು, ಒಡವೆ, ವಾಹನಗಳು ಇದ್ದವರಿಗೆ ಜನ ಹೆಚ್ಚು ಗೌರವ ಕೊಡುತ್ತಿದ್ದಾರೆ. ಮಾನ, ಮನ್ನಣೆ ನೀಡುತ್ತಿದ್ದಾರೆ. ಪ್ರಯುಕ್ತ ಜನ ಅದನ್ನು ಗಳಿಸಲು ಶತಾಯ ಗತಾಯ ಶ್ರಮಿಸುತ್ತಿದ್ದಾರೆ. ಇವರು ಗಳಿಸುವ ಏಕಮೇವ ಉದ್ದೇಶ ಹೊಂದಿ ಶೀಘ್ರವಾಗಿ ಸಂಪತ್ತು ಗಳಿಸಲು ಇರುವ ಮಾರ್ಗಗಳು ಯಾವು ಎಂದು ಹುಡುಕುತ್ತಿದ್ದಾರೆಯೇ ವಿನಾ ಒಳ್ಳೆಯ, ನೀತಿಯುತ ಮಾರ್ಗ ಯಾವುದು ಎಂದು ಹುಡುಕುತ್ತಿಲ್ಲ! ಗಳಿಸುವುದು ಮುಖ್ಯ ವಿನಾ ಮಾರ್ಗ ಮುಖ್ಯವಲ್ಲ! ಎಂದು ಭಾವಿಸಿದುದರಿಂದ ಅನ್ಯ ಮಾರ್ಗದಿಂದ ದುಡಿಯುವಂತಾಗಿದೆ. ಧರ್ಮ, ಅರ್ಥ, ಕಾಮ, … Read more

ಮಾತೋಶ್ರೀ ಗೌರಮ್ಮ ಸಾಹಿತ್ಯ ಪ್ರಶಸ್ತಿಗಾಗಿ ಕೃತಿಗಳ ಆಹ್ವಾನ

ಮಾತೋಶ್ರೀ ಗೌರಮ್ಮ ಸಾಹಿತ್ಯ ಪ್ರತಿಷ್ಠಾನವು 2016-17ರಲ್ಲಿ ಪ್ರಕಟವಾದ ಕಥೆ,ಕಾದಂಬರಿ,ಕವನ ಸಂಕಲನ,ವಿಮರ್ಶೆ ಮತ್ತು ಅನುವಾದ ಸಾಹಿತ್ಯ ಕೃತಿಗಳಿಗೆ ಪ್ರಶಸ್ತಿ ನೀಡಲು ಆಹ್ವಾನಿಸಿದೆ. ಕನ್ನಡದ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು. ಸಾಹಿತ್ಯದ ಎರಡು ಪ್ರಕಾರದ ಉತ್ತಮ ಕೃತಿಗಳಿಗೆ ಈ ಪ್ರಶಸ್ತಿ ನೀಡಲು ಪ್ರತಿಷ್ಠಾನ ನಿರ್ಧರಿಸಿದೆ.  2500 ನಗದು ಮತ್ತು ಫಲಕವನ್ನು ಒಳಗೊಂಡಿರುವುದೆಂದು ಪ್ರತಿಷ್ಠಾನದ ಅಧ್ಯಕ್ಷರು ಶ್ರೀ ಭೀಮಣ್ಣ ಭಂಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಲೇಖಕರು ಕೃತಿಗಳನ್ನು 28 ಜನವರಿ 2018ರ ಒಳಗಾಗಿ ಈ ವಿಳಾಸಕ್ಕೆ ಕಳಿಸಬಹುದು. ತಿರುಪತಿ ಭಂಗಿ  ಕಾರ್ಯದರ್ಶಿಗಳು “ಮಾತೋಶ್ರೀ ಗೌರಮ್ಮ ಸಾಹಿತ್ಯ … Read more

unsung hero: ವಿಶ್ವಾಸ್ ವಾಜಪೇಯಿ

ಅಪ್ಪ, ತಂದೆ, ಬಾಬಾ.. ಈ ಎರಡಕ್ಷರದ ಮಹತ್ವ. ಈ ಸಂಬಂಧದ ಅರ್ಥ ತಿಳಿದುಕೊಳ್ಳೋದು ಎಷ್ಟೋ ಜನರಿಂದ ಬಹುಷಃ ಆಗಂಗೇ ಇಲ್ಲಾ.. ಅಂಥವರಾಗ ನಾನೂ ಒಬ್ಬ ಎಷ್ಟಾದ್ರೂ ಹಿರಿ ಮಗ ನೋಡ್ರಿ, ಅವ್ವನ ಮ್ಯಾಲೇ ಪ್ರೀತಿ ಜಾಸ್ತಿ ಎಲ್ಲಾರೂ ಅಂತಾರ ತಾಯಿಯಾದಮೇಲೆ ಹೆಣ್ಣೆಗೆ ಎರಡನೇ ಜೀವ ಸಿಗ್ತದ ಅಂತ, ಮತ್ತ ಅಪ್ಪಗ? ಅವನ ಬಗ್ಗೆ ಯಾರೂ ಜಾಸ್ತೀ ಮಾತಾಡಲೇ ಇಲ್ಲ ಯಾಕಂದ್ರ ಅವರ ಜೀವನದಾಗ ಅಪ್ಪನ ‘ರೋಲ್’ ಯಾವತ್ತೂ, ಯಾರಿಗೂ ಕ್ಲಿಯರ್ ಆಗ್ಲೇ ಇಲ್ಲ ಎಲ್ಲರ ಜೀವನದ ಕಥಿಯೊಳಗೂ … Read more

ಮುಕ್ತನಾದವ: ಶ್ರೀಪತಿ ಮಂಜನಬೈಲು

 “ಪ್ರತಿ ಸುಖದ ಹಿಂದೆ ಅನಿವಾರ್ಯವಾಗಿ ದುಃಖ ಬೆಂಬತ್ತುವುದೇ ಆದಲ್ಲಿ, ಆಗ ದುಃಖದಿಂದಲ್ಲ – ಸುಖದಿಂದಲೇ ಮುಕ್ತನಾಗುವ ಸ್ಪಷ್ಟತೆ ನಿನ್ನ ಜೀವನದಲ್ಲಿ ಫಲಿತವಾಗಬೇಕು.” (ಓಶೋ)   — ನಾನಾಗ ಬೆಳಗಾವಿಯವನಾಗಿದ್ದೆ. ನಾನು ನನ್ನ ಸಂಸಾರದೊಂದಿಗೆ ವಾಸಿಸುತ್ತಿದ್ದ ಬಾಡಿಗೆ ಮನೆ ಬೆಳಗಾವಿ ದಂಡು ಪ್ರದೇಶದಲ್ಲಿತ್ತು.  1999 ರ ಡಿಸೆಂಬರ ತಿಂಗಳ ಮೊದಲ ರವಿವಾರದ ದಿನ ಮುಂಜಾನೆಯ ಸಮಯ. ಮನೆಯ ಬಾಗಿಲ ಚಿಲಕ ಕಟಕಟ ಬಡಿದ ಶಬ್ಧ. ಬಾಗಿಲು ತೆಗೆದೆ, ಅವನು ನಿಂತಿದ್ದ. ಬಾರೋ ಒಳಗೆ ಅಂದೆ. ಬಂದ, ಕೈಲಿದ್ದ ಆವತ್ತಿನ … Read more

ಭಾಷಾ ಮೋಡಿಗಾರ: ಜಯಲಕ್ಷ್ಮೀ ಪಾಟೀಲ್

ಗೋಪಾಲ್ ವಾಜಪೇಯಿ ಅನ್ನುವ ಹೆಸರು ಕೇಳಿದ ತಕ್ಷಣ ಸಿನಿಮಾದ ಹಾಡುಗಳ ಬಗ್ಗೆ ಗೊತ್ತಿರುವವರಿಗೆ ‘ಈ ಹಸಿರು ಸಿರಿಯಲಿ, ಮನಸು ನಲಿಯಲಿ ನವಿಲೇ’ ಮತ್ತು ‘ಕಂಬದಾ ಮ್ಯಾಲಿನ ಗೊಂಬೆಯೆ, ನಂಬಲೇನ ನಿನ್ನ ನಗೆಯನ್ನ’ ಹಾಡುಗಳಾದರೆ, ರಂಗಭೂಮಿಯ ಜನರಿಗೆ ‘ಅದ ಗ್ವಾಡಿ, ಅದ ಸೂರು ದಿನವೆಲ್ಲ ಬೇಜಾರು/ ತಿದಿಯೊತ್ತಿ ನಿಟ್ಟುಸಿರು ಎದಿಯಾಗ ಚುರುಚುರು..’, ‘ಯಾವ ದೇಸದ ರಮಣ ಬಂದು, ಏನ ಮೋಸವ ಮಾಡಿದಾ…’ ಇತ್ಯಾದಿ ಹಾಡುಗಳು ನೆನಪಿಗೆ ಬರುತ್ತವೆ. ಇತ್ತೀಚಿಗಷ್ಟೆ ಬಿಡುಗಡೆಯಾದ ಶಿವರಾಜಕುಮಾರ್ ನಟಿಸಿದ ‘ಸಂತೆಯಲ್ಲಿ ನಿಂತ ಕಬೀರ’ ಸಿನಿಮಾ … Read more

ಇಷ್ಟು ಗಡಿಬಿಡಿ ಮಾಡ್ಕೊಂಡ್ ಯಾಕ ಹೋದ್ರಿ?: ಗುರುಪ್ರಸಾದ ಕುರ್ತಕೋಟಿ

ಅವತ್ತು ಎಪ್ರಿಲ್ ೨೧ ನೆ ತಾರೀಖು, ಮದ್ಯಾಹ್ನದ ಹೊತ್ತು. ಫೇಸ್ ಬುಕ್ ಮೆಸ್ಸೆಂಜರ್ ನಲ್ಲಿ ಬಂದ “ಎಂತದ್ರೋ” ಅನ್ನೋ ಮೆಸ್ಸಜು ನನ್ನ ಕಣ್ಣು ಹಿಗ್ಗಿಸಿತ್ತು. ಯಾವ ಹಿರಿಯರು ಆನ್ಲೈನ್ ಇದ್ದಾರೆ ಅಂತ ಗೊತ್ತಿದ್ರೂ, ಅವರು ನನಗೆ ಎಷ್ಟು ಚೆನ್ನಾಗಿ ಪರಿಚಯ ಇದ್ರೂ, ಅವರನ್ನ  ಮಾತಾಡಿಸಬೇಕು ಅಂತ ಆಸೆ ಆದರೂ ಪಿಂಗ್ ಮಾಡೋಕೆ ಹೆದರತಿದ್ನೋ, ಅವರೇ ನನಗೆ “ಎಂತದ್ರೋ” ಅನ್ನೋ ಮೆಸ್ಸೇಜ್ ಕಳಸಿದ್ರೆ ನನಗೆ ಎಷ್ಟು ಖುಷಿ ಆಗಬೇಡಾ? ಅವತ್ತಿನ ದಿನ ನಾನು ಅಮೇರಿಕದಲ್ಲಿ ಇದ್ದೆ, ಅವ್ರು ಬೆಂಗಳೂರಿನಲ್ಲಿ. … Read more

ಗುರುವೆಂದರೆ..ಇವರೇ..!!: ಉಮೇಶ ದೇಸಾಯಿ

   ಇತ್ತೀಚೆಗೆ ಸಂಧ್ಯಾರಾಣಿ ತಾವು ಗೋಪಾಲ ವಾಜಪೇಯಿಯವರನ್ನು ಮೊದಲಬಾರಿ ಭೇಟಿಯಾದಾಗಿನ ಸನ್ನಿವೇಶ ಹೇಳುತ್ತಿದ್ದರು. ಅವರು ಮುಂದುವರೆಸುತ್ತ ಹೇಗೆ ಒಬ್ಬ ಕವಿ ತಾನೇ ಗೀತೆಗಳ ರಚಿಸಿದರೂ ಅದರ ಹಕ್ಕನ್ನು ಅನುಭವಿಸಲಾಗದ ಸಂಕಟವನ್ನು ಹೇಗೆ ಅನುಭವಿಸಿರಬಹುದು ಎಂದು ಹೇಳುತ್ತಿದ್ದರು. ಅದ್ಭುತ ಅನ್ನುವ ಸಾಹಿತ್ಯ ಹಾಡುಗಳ ಬರೆದರೂ ಇದು ನನ್ನದು ಅಂತ ಹೇಳಿಕೊಳ್ಳಲಾಗದ ವಿಚಿತ್ರ ಪರಿಸ್ಥಿತಿ ಗುರುಗಳಾದ ಗೋಪಾಲ ವಾಜಪೇಯಿ ಅನುಭವಿಸಿದರು. ಅದು ಆಗಿದ್ದು ನಾಗಮಂಡಲ ನಾಟಕ/ಸಿನೇಮಾಗೆ ಸಂಬಂಧಿತವಾಗಿ. ಶಾಮರಾಯರ ಕಣ್ಣು/ಕಿವಿ ತಪ್ಪಿಸಿ ಬರೆಯುವ ಪರಿಸ್ಥಿತಿ..ಇಂದಿಗೂ ನಾಗಮಂಡಲದ ಹಾಧು ಬರೆದವರು "ಗೋಪಾಲ … Read more

ನನ್ನ ಶಿಷ್ಯ ಗೋಪಾಲ!: ಶಶಿಕಾಂತ ಕುರ್ತಕೋಟಿ

ನನ್ನ ಮಗ ಗುರುಪ್ರಸಾದ ಅದೊಂದು ದಿನ ಬೆಳಿಗ್ಗೆ “ಅಪ್ಪ, ಗೋಪಾಲ ವಾಜಪೇಯಿಯವರ ಪುಸ್ತಕ ಬಿಡುಗಡೆ ಸಮಾರಂಭವಿದೆ ಬರುತ್ತೀಯಾ? ಅವರು ನಿನ್ನನ್ನು ಕರೆದುಕೊಂಡು ಬರಲು ಹೇಳಿದ್ದಾರೆ.” ಅಂತ ಕೇಳಿದ. ನಾನು ಕೂಡಲೇ ಹೂಂ ಅಂತ ಒಪ್ಪಿಕೊಂಡೆ. ಆ ಹೆಸರು ನನಗೆ ೪೩ ವರ್ಷ ಹಿಂದೆ ಕರೆದೊಯ್ದಿತು. ನಮ್ಮಿಬ್ಬರದು ಗುರು-ಶಿಷ್ಯ ಸಂಬಂಧ. ಆ ಸಮಾರಂಭಕ್ಕೆ ಜಾತಕ ಪಕ್ಷಿಯಂತೆ ಕಾಯತೊಡಗಿದೆ. ಅಷ್ಟು ವರ್ಷಗಳ ನಂತರ ನನ್ನ ಆತ್ಮೀಯ ಗೋಪಾಲನನ್ನು ನೋಡುವ ಅವಕಾಶ ಅದಾಗಿತ್ತು.  ನನ್ನ ಮಗನಿಗೆ ಚಿಕ್ಕಂದಿನಿಂದಲೂ ಸಾಹಿತ್ಯ, ನಾಟಕ ರಂಗದ … Read more

ಪಂಜು ಕಾವ್ಯಧಾರೆ

ನಿನ್ನ ಮಾತುಗಳು ಬೇಡುತ್ತಿರುವಾಗ ಬಲಿ ನನ್ನೆದೆಯ ನೋವನ್ನು ಯಾರಲ್ಲಿ ಹೇಳಿಕೊಳ್ಳಲಿ? ಮಾತಿಗೂ ಮೊದಲು ಕೋಪವೇ ಹೆಡೆ ಬಿಚ್ಚಿ ನಿಲ್ಲುತ್ತಿರುವಾಗ ಪಾತಾಳ ಗರುಡದ ಮಂತ್ರ ಕೋಲನ್ನು ಹುಡುಕುತ್ತ ಎಲ್ಲಿ ಹೋಗಲಿ? ಪ್ರೀತಿಯ ಹೂದೋಟದಲ್ಲಿ ಝಳಪಿಸುವ ಕತ್ತಿ ನರ್ತಿಸುವಾಗ ಸಾಣೆ ಹಿಡಿಯುವವರನ್ನು ಎಷ್ಟೆಂದು ಹುಡುಕಿ ಗಡಿಪಾರು ಮಾಡಲಿ? ಮನದ ಗರ್ಭಗುಡಿಯಲ್ಲಿ ನಂದಾದೀಪವೇ ಹೊತ್ತಿ ಪ್ರಜ್ವಲಿಸುವಾಗ ತಣ್ಣಿರು ಸುರಿದು ಬೆಂಕಿ ನಂದಿಸುವವರನ್ನು ಹುಡುಕುತ್ತ ಎಲ್ಲಿ ಹೋಗಲಿ? ಹೃದಯದಲ್ಲಿ ಪ್ರತಿಷ್ಟಾಪಿಸಿ ಮೂರ್ತಿ ತನ್ನನ್ನೇ ಭಗ್ನಗೊಳಿಸಿಕೊಳ್ಳುವಾಗ ಮುಕ್ಕಾಗದಂತೆ ಗರ್ಭಗುಡಿಯನ್ನು ಕಾವಲು ಕಾಯುವ ಕೆಲಸವನ್ನು ಯಾರಿಗೆ … Read more

ಅಪ್ಪ ಸತ್ತಾಗ: ಅಖಿಲೇಶ್ ಚಿಪ್ಪಳಿ

80 ವರ್ಷಗಳ ಹಿಂದೆ ಅಳುತ್ತಲೇ ಭೂಮಿಗೆ ಬಂದ ಮಗುವಿಗೆ ತಿಳುವಳಿಕೆ ಬರುವ ಮೊದಲೇ ತನ್ನ ತಂದೆಯನ್ನು ಕಳೆದುಕೊಂಡಿತ್ತು. ತಂದೆಯನ್ನು ನೋಡಿದ ನೆನಪು ಅದಕ್ಕಿರಲಿಲ್ಲ. ಕಡುಬಡತನದ ಆ ಮನೆಯಲ್ಲಿ ಮನೆ ತುಂಬಾ ಮಕ್ಕಳು ಎಲ್ಲರೂ ಸೇರಿದರೆ ಬರೋಬ್ಬರಿ 8 ಮಕ್ಕಳು ಹಾಗೂ ಎರಡು ವಿಧವೆಯರು! ಊರಲ್ಲಿ ಶಾಲೆಯಿದೆ, ಓದಲಿಕ್ಕೆ ಕಷ್ಟವಿದೆ. ಅಂತೂ-ಇಂತೂ ಕಷ್ಟಪಟ್ಟು ಆ ಮಗು 7ನೇ ತರಗತಿಯವರೆಗೆ ಕಲಿಯಿತು. ಹೆಚ್ಚು ಕನ್ನಡ ಹಾಗೂ ಸ್ವಲ್ಪ ಇಂಗ್ಲೀಷು. ಮತ್ತೆ ಬೇಸಾಯಕ್ಕಿಳಿದ ಆ ಯುವಕ ನಿರಂತರವಾಗಿ ದುಡಿಯುತ್ತಲೇ ಇದ್ದ. ಮಧ್ಯದಲ್ಲಿ … Read more

ಎಲೆಕ್ಷನ್ನು: ಸಿದ್ದರಾಮ ತಳವಾರ, ದಾಸ್ತಿಕೊಪ್ಪ

ಕೇರಿಯ ಜನ ಕಂಗಾಲಾಗಿದ್ದರು. ಗೋಡೆಯಲ್ಲಿದ್ದ ಗೂಟ ಸುಮ್ಮನೆ ತೆಗೆದು ಅದೆಲ್ಗೋ ಬಡ್ಕೊಂಡ್ರು ಅನ್ನೋ ಹಾಗೆ ಇದೆಲ್ಲಾ ನಮ್ಗೆ ಬೇಕಿತ್ತಾ ಅಂತ ಕೇರಿಯ ಹೆಣ್ಣು ಮಕ್ಕಳೆಲ್ಲಾ ಗುಸು ಗುಸು ಪಿಸು ಪಿಸು ಮಾತಾಡಲು ಶುರು ಮಾಡಿದ್ದರು. ಇರೋದಕ್ಕೆ ಸರಿಯಾದ ಸೂರಿಲ್ಲಾ ಕುಡಿಯೋದಕ್ಕೆ ನೀರಿದ್ರೂ ಕೇರಿಯಾಚೆ ಹೋಗಿ ಹಿಡ್ಕೊಂಡ ಬರೋ ಧೈರ್ಯ ಇಲ್ಲಾ. ಮನೇಲಿರೋ ಮುಟಗಿ ಹಿಟ್ಟು ಖಾಲಿ ಆಗಿರೋದ್ರಿಂದ ಮೂರು ದಿನದ ತಂಗಳ ರೊಟ್ಟಿಯನ್ನೇ ನೆನೆಸಿಕೊಂಡು ತಿನ್ನೋ ಟೈಮ್ ಬಂದೈತಿ. ಕೂಸುಗಳಿಗೆ ಹಾಲು ಕುಡಿದೇವಂದ್ರೂ ನಮ್ಮ ಹೊಟ್ಟೆಗ್ ಹಿಟ್ಟಿದ್ರೇ ತಾನೇ … Read more

ಯಮಕಿಂಕರರು: ಒಂದು ಭಯಾನಕ ಸತ್ಯಕಥೆ (ಭಾಗ 10): ಪ್ರಸಾದ್ ಕೆ.

ಇಲ್ಲಿಯವರೆಗೆ ನ್ಯಾಯಮೂರ್ತಿ ಆರ್ಚಿ ಕ್ಯಾಂಪ್ಬೆಲ್ ರ ವರದಿಯು ಸ್ಕಾರ್-ಬೋರೋ ಸರಣಿ ಅತ್ಯಾಚಾರ ಪ್ರಕರಣಗಳಲ್ಲದೆ ಉಳಿದ ಪ್ರಕರಣಗಳ ಮೇಲೂ ಬೆಳಕು ಚೆಲ್ಲಿ ಉತ್ತಮ ಒಳನೋಟವನ್ನು ಕೊಡುತ್ತದೆ.  ಕಾರ್ಲಾ ಹೊಮೋಲ್ಕಾಳ ತಂಗಿ ಟ್ಯಾಮಿ ಹೊಮೋಲ್ಕಾಳ “ಆಕಸ್ಮಿಕ ಮತ್ತು ಸ್ವಾಭಾವಿಕ'' ಸಾವೆಂದು ತಪ್ಪಾಗಿ ದಾಖಲಾದ ಘಟನೆಯನ್ನು ಉಲ್ಲೇಖಿಸುತ್ತಾ, ಟ್ಯಾಮಿಯ ಎಡಕೆನ್ನೆ, ಮೇಲ್ದುಟಿ ಮತ್ತು ಎಡಭುಜದ ಮೇಲೆ ಕಂಡುಬಂದಿದ್ದ ದಟ್ಟಕೆಂಪುಕಲೆಗಳ ಬಗ್ಗೆ ವರದಿಯು ಒತ್ತಿಹೇಳುತ್ತದೆ. ಹಚ್ಚೆಯಂತೆ ದಟ್ಟವಾಗಿ ಮೂಡಿಬಂದಿದ್ದ ಈ ಅಪರೂಪದ ಕಲೆಗಳನ್ನು ಕಡೆಗಣಿಸುವುದು ಸಾಧ್ಯವೇ ಇರಲಿಲ್ಲ. ಅಸಲಿಗೆ ಆಕೆಯ ಉಸಿರಾಟ ನಿಂತುಹೋದಾಗಲೇ … Read more