ಜಯಂತಿಪುರವೆಂಬ ಸಾವಿರದ ಕಥಾಕಡಲು…!: ಜಗದೀಶ ಬ. ಹಾದಿಮನಿ
ಶ್ರೀಧರ ಬನವಾಸಿಯವರು ‘ಅಮ್ಮನ ಆಟೋಗ್ರಾಫ್’, ‘ಬ್ರಿಟಿಷ್ ಬಂಗ್ಲೆ’, ‘ದೇವರ ಜೋಳಿಗೆ’ ಕಥಾ ಸಂಕಲನಗಳು; ‘ತಿಗರಿಯ ಹೂಗಳು’, ‘ಬಿತ್ತಿದ ಬೆಂಕಿ’, ‘ಪೂರ್ಣಚಂದ್ರನಿಗೆ ಮುಖವಾಡವಿಲ್ಲ’ ಕವನ ಸಂಕಲನಗಳು, ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ ಪಡೆದ ‘ಬೇರು’ ಕಾದಂಬರಿ ಹಾಗೂ ‘ಪಂಚಮಿ ಪ್ರಕಾಶನ’ದಿಂದ ಈಗಾಗಲೇ ಕನ್ನಡನಾಡಿಗೆ ಚಿರಪರಿಚಿತರು. ಈಗಿವರ ಮತ್ತೊಂದು ವಿಶಿಷ್ಟಕೃತಿಯೇ ‘ಜಯಂತಿಪುರದ ಕತೆಗಳು’ ಎಂಬ ಕಥಾ ಸಂಕಲನ. ಇದರಲ್ಲಿ ಒಟ್ಟು ಹತ್ತು ಕತೆಗಳು, ಎರಡು ನೀಳ್ಗತೆಗಳಿವೆ. ಯಾವವೂ ಅವಸರದ ರಚನೆಗಳಾಗಿಲ್ಲ; ಎಲ್ಲವೂ ಧ್ಯಾನಿಸಿಕೊಂಡು ನಿಧಾನ ಮೈದಾಳಿದಂತಹವುಗಳು. ಜಯಂತಿಪುರವನ್ನೇ ಕೇಂದ್ರಸ್ಥಾನ … Read more