ಮೌನ ತಳೆದ ಹುಡುಗಿ: ರುಕ್ಮಿಣಿ ನಾಗಣ್ಣವರ

ಆಗಷ್ಟೆ ಬೆಳಕಿನ ಬೆನ್ನಿಗೆ ಕತ್ತಲು ಪತ್ತಲ ಹಾಸುತ್ತಿತ್ತು. ಮಿಣಮಿಣ ಮಿನುಗುವ ತಾರೆಗಳು ಚಂದ್ರನೊಂದಿಗೆ ಕಣ್ಣಾ ಮುಚ್ಚಾಲೆ ಆಡಲು ಸಿದ್ಧವಾಗಿದ್ದವು. ಚಂದ್ರನೋ, ತಾರೆಗಳ ಬಳಗದಿಂದ ತಪ್ಪಿಸಿಕೊಂಡವನಂತೆ ರಮೇಶನ ಕೋಣೆಯನ್ನೇ ಇಣುಕಿ ಇಣುಕಿ ನೋಡುತ್ತಿದ್ದ. ದೀಪ ಹಚ್ಚದ ಕೋಣೆಯಲ್ಲಿ ಕತ್ತಲ ತೆಕ್ಕೆಯೊಳಗೆ ರಮೇಶ್ ಗಾಢ ಮೌನಕ್ಕೆ ಶರಣಾಗಿದ್ದ. ಮನದ ಮೈದಾನದಲಿ ಜಾನಕಿಯೆಡೆಗಿನ ವಿಚಾರಗಳು ಕಾಳಗದ ಹೋರಿಯಂತೆ ಕಾದಾಟ ನಡೆಸಿದ್ದವು. ಅರಳು ಹುರಿದಂತೆ ಮಾತಾಡುವ ಜಾನಕಿ ಕಳೆದ ಆರು ತಿಂಗಳಿನಿಂದ ಮೌನವಾಗಿದ್ದಳು. ಆ ದೀರ್ಘಮೌನ ರಮೇಶನನ್ನು ಭಾದಿಸುತ್ತಿತ್ತು.  ತಲೆ ಚಿಟ್ಟೆನ್ನುವ ಅಸಹನೆ. … Read more

ಸಾಯಲೇ ಬೇಕು ಎಲ್ಲರಲ್ಲಿನ ಸೀಸರ್: ಸಚೇತನ

ಷೇಕ್ಸ್ ಪಿಯರ್ ಎನ್ನುವ ಸದಾ ತುಂಬಿ ಹರಿಯುವ ನದಿಯಿಂದ ಮೊಗೆ ಮೊಗೆದು ತೆಗೆದ ಅದೆಷ್ಟೋ ಸಾವಿರ ಸಾವಿರ ಬೊಗಸೆ ನೀರು ಲೆಕ್ಕವಿಲ್ಲದಷ್ಟು  ಸಾಹಿತ್ಯದ ಬೀಜಗಳನ್ನು ಹೆಮ್ಮರವಾಗಿಸಿ ಫಲ ಕೊಡುತ್ತಿದೆ.  ಕರುಣೆ ಕ್ರೌರ್ಯ ಪ್ರೀತಿ ಹಾಸ್ಯ ಪ್ರೇಮ ಮೋಸ ಎಲ್ಲ  ಮಾನವೀ ಭಾವಗಳ ಸಮಪಾಕವನ್ನು ನಾವೆಲ್ಲರೂ ಅದೆಷ್ಟೋ ಸಲ ರುಚಿಕಟ್ಟಾಗಿ ಉಂಡಿದ್ದರೂ ಯಾವತ್ತಿಗೂ ಅವು ಸಾಕು ಎನಿಸಿಲ್ಲ. ಹರಿಯುವ ನದಿಯಿಂದ ಕೈ ಒಡ್ಡಿ ಕುಡಿದ ಸಿಹಿ ನೀರು ಮತ್ತೆ ಮತ್ತೆ ಬೇಕೆನಿಸಿದೆ. ಸೀಸರ್ ಎನ್ನುವ ದುರಂತ ನಾಯಕನ ಕತೆಯಿಂದ … Read more

ಫೋಟೋ ಚೌಕಟ್ಟಿನ ಆಚೀಚೆ: ಅಮರ್ ದೀಪ್ ಪಿ.ಎಸ್.

ಪ್ರೈಮರಿ ಶಾಲೆಯಲ್ಲಿ ಓದುತ್ತಿದ್ದ ದಿನಗಳವು.  ವರ್ಷಕ್ಕೊಮ್ಮೆ ಗ್ರೂಪ್ ಫೋಟೋ ತೆಗೆಸಿಕೊಳ್ಳಲು ಮೇಷ್ಟ್ರು “ಎಲ್ರೂ ನಾಳೆ ನೀಟಾಗಿ ನಿಮಗಿಷ್ಟವಾದ ಡ್ರೆಸ್ ಹಾಕ್ಕೊಂಡ್ ಬನ್ನಿ” ಅನ್ನುತ್ತಿದ್ದರೆ, ನಮ್ಮ ಮುಖ ಇಷ್ಟಗಲವಾಗಿ ಅಲ್ಲೇ ಹಲ್ಕಿರಿದು ನಿಂತು ಬಿಡುತ್ತಿದ್ದೆವು.   ಮತ್ತೆ ಫೋಟೋ ತೆಗೆಯೋ ದಿನ ಮಾತ್ರ  ಅದು ನಡೆಯುತ್ತೋ, ಓಡುತ್ತೋ, ನಿಂತಲ್ಲೇ ಎಲ್ಡು ಬಾರಿ ಸರಿಯಾದ ಟೈಮು ತೋರ್ಸುತ್ತೋ, ಬಿಡುತ್ತೋ, ಒಟ್ನಲ್ಲಿ ಎಲ್ಲಿಂದಲೋ ಒಂದ ವಾಚ್ ಕಟ್ಗ್ಯಂಡು ಅದು ಫೋಟೋದಲ್ಲಿ ಕಾಣೋ ಹಂಗೆ ನಿಂತು ಫೋಸ್ ಕೊಡುತ್ತಿದ್ದೆವು.  ಫೋಟೋ ಪ್ರಿಂಟ್ ಕೈ … Read more

ಮೂವರ ಕವಿತೆಗಳು: ಮುಕುಂದ್ ಎಸ್., ಮೌಲ್ಯ ಎಂ., ಅಕುವ

ಲೋ ಮಾರ್ಕು,  ನೀ ಕಟ್ಟಿದ್ ಜಗ್ಲಿ ಮ್ಯಾಕ್ ಕೂತು,  ದೊಡ್ಡ್ ದೊಡ್ಡ್ವರು ಹೇಳಿದ್ದು  ಅರ್ಥವಾಗ್ದಿದ್ರು ಬೇರೆಯವರಿಗೆ ಷೇರ್ ಗಿರ್ ಮಾಡಿಕ್ಕಂಡು, ರಾಜಕಾರಣಿ ಹಾಕೋ ಥರಾವರಿ  ಟೋಪಿಗಳ್ ನಾವ್ ನಮ್ಮ್  ಗೆಳ್ಯರಿಗು ಹಾಕಿ,  ಪರ್ ವಿರೋಧ ಬಾಯ್ ಬಡ್ಕೊಂಡು, ಫ್ರೆಂಡ್, ಅನ್ ಫ್ರೆಂಡ್ ಅಂತ್ ಆಟ್ಗಳ ಜೊತೆ ಕ್ಯಂಡಿ ಕ್ರಷುಗಳ್ ಬಗ್ಗೆ ಉರ್ಕೊಂಡು,  ನಮ್ಮ್ ನಮ್ಮ್ ಪಟ್ವ ತೆಗೆದು  ಸ್ಚಯಂವರಕ್ಕೆ ರೆಡಿ ಆಗೋ ಪರಿಯಲ್ಲಿ ತೆಗ್ಸಿ, ಲೈಕುಗಳ ಬಿಕ್ಕ್ಸೆಗೆ ಕಾಯ್ಕೊಂಡು, ಅಕ್ಕ ಪಕ್ಕ ಇರೋ ಅಣ್ಣ್ ತಮ್ಮದಿರ್ ದೂರ್ … Read more

ಝೆನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

ಪುಷ್ಪ ವೃಷ್ಟಿ ಸುಭೂತಿ ಬುದ್ಧನ ಶಿಷ್ಯನಾಗಿದ್ದ. ಶೂನ್ಯತೆಯ ಶಕ್ತಿಯನ್ನು ತಿಳಿಯುವುದರಲ್ಲಿ ಆತ ಯಶಸ್ವಿಯಾಗಿದ್ದ. ವ್ಯಕ್ತಿನಿಷ್ಠತೆ ಮತ್ತು ವಿಷಯನಿಷ್ಠತೆಗಳೊಂದಿಗೆ ಶೂನ್ಯತೆಗೆ ಇರುವ ಸಂಬಂಧದ ಹೊರತಾಗಿ ಏನೂ ಅಸ್ಥಿತ್ವದಲ್ಲಿ ಇಲ್ಲ ಅನ್ನುವ ದೃಷ್ಟಿಕೋನ ಇದು. ಒಂದು ದಿನ ಮಹೋನ್ನತ ಶೂನ್ಯತೆಯ ಚಿತ್ತಸ್ಥಿತಿಯಲ್ಲಿ ಸುಭೂತಿ ಒಂದು ಮರದ ಕೆಳಗೆ ಕುಳಿತಿದ್ದ. ಅವನ ಸುತ್ತಲೂ ಹೂವುಗಳು ಬೀಳಲಾರಂಭಿಸಿದವು. “ಶೂನ್ಯತೆಯ ಕುರಿತಾದ ನಿನ್ನ ಪ್ರವಚನಕ್ಕಾಗಿ ನಾವು ನಿನ್ನನ್ನು ಶ್ಲಾಘಿಸುತ್ತಿದ್ದೇವೆ” ಎಂಬುದಾಗಿ ಪಿಸುಗುಟ್ಟಿದರು ದೇವತೆಗಳು. “ಶೂನ್ಯತೆಯ ಕುರಿತಾಗಿ ನಾನು ಮಾತನಾಡಿಯೇ ಇಲ್ಲ” ಪ್ರತಿಕ್ರಿಯಿಸಿದ ಸುಭೂತಿ. “ನೀನು … Read more

ಫ಼ೈಂಡಿಂಗ್ ಫ಼ಾನ್ನಿ ಮತ್ತು ನಮ್ಮೊಳಗಿನ ಮುಗಿಯದ ಹುಡುಕಾಟ: ಪ್ರಶಾಂತ್ ಭಟ್

ಈಗ ನನ್ನ ಬಹಳ ಕಾಡಿದ ಒಂದು ಸಿನಿಮಾ ಬಗ್ಗೆ ಬರೆಯಬೇಕು.  ಅದರಲ್ಲಿ ಬರುವ ಒಂದು ಡೈಲಾಗ್ ಬಗ್ಗೆ 'ನಮ್ಮ ರಾಜ್ಯಕ್ಕೆ ಅಪಮಾನವಾಯಿತು' ಅಂತ ಬೊಬ್ಬಿರಿದ ನನ್ನ ರಾಜ್ಯದ ಕೆಲವರ ಬಗ್ಗೆ ನಿಜಕ್ಕೂ ಕನಿಕರವಿದೆ. ಹೌದು. ಇದು ಅದೇ ಸಿನಿಮಾ. 'ಫ಼ೈಂಡಿಂಗ್ ಫ಼ಾನ್ನಿ' ಹೋಮಿ ಅಡಜನಿಯ ನಿರ್ದೇಶನವಿರುವ  (ಇವನ ಬೀಯಿಂಗ್ ಸೈರಸ್ ಕೂಡ ಒಳ್ಳೆಯ ಪ್ರಯತ್ನ) ಕೆಲವು ಕಡೆ 'ಲೆಟ್ಟರ್ಸ್ ಟು ಜೂಲಿಯಟ್' ಅನ್ನು ಹೋಲುತ್ತದೆ. ಅರ್ಜುನ್ ಕಪೂರ್, ದೀಪಿಕಾ ಪಡುಕೋಣೆ (ಇವಳ ಸ್ಕರ್ಟ್ ನ ಅಂದವನ್ನು ಬಣ್ಣಿಸಲೇ?) … Read more

ಕತ್ತಲ ಕೊಳ್ಳದಾಚೆಗೆ: ಪ್ರಶಸ್ತಿ ಪಿ.

  ಬೈಕಲ್ಲಿ ಹೋಗ್ಬೇಡ, ಒಂದಷ್ಟು ಲೇಟಾದ್ರೂ ಪರ್ವಾಗಿಲ್ಲ. ಬಸ್ಸಿಗೆ ಹೋಗೋ ಅಂತ ಅಮ್ಮ ಹೇಳಿದ ಮಾತ್ನ ಕೇಳ್ಬೇಕಾಗಿತ್ತು ಅಂತ ಬಾಳೇಬರೆ ಘಾಟೀಲಿ ಕತ್ತಲ ರಾತ್ರೇಲಿ ಕೆಟ್ಟ ಬೈಕಿಗೊಂದು ಮೆಕ್ಯಾನಿಕ್ನ ಹುಡುಕೋಕೋದಾಗ್ಲೇ ಅನಿಸಿದ್ದು. ಫ್ರೆಂಡ್ ಮನೆ ಕಾರ್ಯಕ್ರಮಕ್ಕೆ ಮಧ್ಯಾಹ್ನವೇ ಹೊರಟು ಬಿಡ್ಬೇಕಿತ್ತು. ಆದ್ರೆ ಬೈಕಿದ್ಯಲ್ಲ, ಬಸ್ಸು ಹೋದ್ರೆ ಹೆಂಗಾದ್ರೂ ರಾತ್ರೆಗೆ ಮುಟ್ಕೋಬೋದು ಅನ್ನೋ ಧೈರ್ಯವೇ ನಿರ್ಲಕ್ಷ್ಯಕ್ಕೆ ಕಾರಣವಾಗಿ ಊರಲ್ಲೇ ಸಂಜೆಯಾಗೋಗಿತ್ತು. ನಾಳೆ ಹೋಗೋಣ ಅಂದ್ರೆ ಕಾರ್ಯಕ್ರಮವಿದ್ದಿದ್ದೇ ಇವತ್ತು ರಾತ್ರೆ. ಹೋಗ್ಲೇಬೇಕೆನ್ನೊ ಹಟಕ್ಕೆ ಮನೆಯವ್ರು ಅರೆಮನಸ್ಸಿಂದ್ಲೇ ಒಪ್ಪಿದ್ರು. ಜೊತೆಗಿನ್ನಿಬ್ರು ಗೆಳೆಯಂದ್ರು … Read more

ಅಯ್ಯೋ ಅವ್ರು ಏನ್ ಅಂದ್ಕೊತಾರೋ !!: ಸಂತೋಷ್ ಗುರುರಾಜ್

ಇದು ನಮ್ಮ ನಿಮ್ಮೆಲ್ಲರ  ಅತೀ ದೊಡ್ಡ  ಕಾಡುವ ಪ್ರಶ್ನೆ ? ಇದೊಂದೇ ಡೈಲಾಗ್ ಇಂದ ಕೆಲವರು ತಮ್ಮ ಜೀವನದ ಗುರಿ ಮುಟ್ಟಲು ಆಗುವುದಿಲ್ಲ. ಇದನ್ನು ಯಾರೋ ನಮಗೆ ಆಗದೇ ಇರುವವರು ಮಾಡುವುದಲ್ಲ ನಮಗೆ ನಾವೇ ಮಾಡಿಕೊಳ್ಳುವುದು. ಇದು ಒಂತರಾ ಮಾನಸಿಕ ರೋಗ. ಇದು ಪ್ರತಿಯೊಬ್ಬನ ಜೀವನದಲ್ಲಿ ನಡೆಯುವ ನೆಗೆಟಿವ್ ಕಮಾಂಡ್. ಅದು ಎಷ್ಟರ ಮಟ್ಟಿಗೆ ಅಂದ್ರೆ ಆ ಕಮಾಂಡ್ ಇಂದ ನಾವು ತಪ್ಪಿಸಿಕೊಳ್ಳಲು ಸಾಕಷ್ಟು ಸಮಯ ಬೇಕಾಗುತ್ತದೆ, ಅಷ್ಟರಲ್ಲಿ ವಯಸ್ಸು ಮುಗಿದಿರುತ್ತದೆ. ಈ ಕಮಾಂಡ್ ದಾಟಿ ದೈರ್ಯದಿಂದ … Read more

ಪಶ್ಚಿಮ ಘಟ್ಟಗಳ ಸ್ಥಿತಿ-ಗತಿ (ಅವಲೋಕನ-೬): ಅಖಿಲೇಶ್ ಚಿಪ್ಪಳಿ

ಮುಂದುವರೆದಿದೆ. . . ಮಾಧವ ಗಾಡ್ಗಿಳ್ ವರದಿ: ಸೂಕ್ಷ್ಮ ಪ್ರದೇಶಗಳು: ಪರಿಸರ ಸಂರಕ್ಷಣಾ ಕಾಯ್ದೆ ೧೯೮೬ ಕಲಂ ೩ರಂತೆ,  ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯು ಪರಿಸರ ಸಂರಕ್ಷಣೆಗಾಗಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವ ಅಧಿಕಾರ ನೀಡಿದೆ. ಈ ಕಾಯ್ದೆಯ ಪ್ರಕಾರ ಕೇಂದ್ರವು ಪರಿಸರವನ್ನು ಕಲುಷಿತಗೊಳಿಸುವ ಎಲ್ಲಾ ತರಹದ ಕಾರ್ಖಾನೆಗಳ ಸ್ಥಾಪನೆಯನ್ನು ತಡೆಯುವುದು ಮತ್ತು ಈಗಾಗಲೇ ಪ್ರಾರಂಭಿಸಲಾಗಿರುವ ಕಾರ್ಖಾನೆಗಳಿಗೆ ನಿಷೇಧ ಹೇರುವ ಅಧಿಕಾರವಿದೆ ಅಥವಾ ಕಟ್ಟುನಿಟ್ಟಾದ ಎಚ್ಚರಿಕೆ ಕ್ರಮಕೈಗೊಳ್ಳಲು ನಿರ್ದೇಶಿಸಬಹುದಾಗಿದೆ. ಕಲಂ ೫(೧)ರಂತೆ ಜೀವಿವೈವಿಧ್ಯ ನಾಶವಾಗುವಂತಹ ಕಾರ್ಖಾನೆಗಳಿಗೂ … Read more

ಸಾಮಾನ್ಯ ಜ್ಞಾನ (ವಾರ 64): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು  ೧.    ಸ್ವತಂತ್ರ ಭಾರತದಲ್ಲಿ ನೇಮಕಗೊಂಡ ಪ್ರಥಮ ಶಿಕ್ಷಣದ ಆಯೋಗ ಯಾವುದು? ೨.    ಕೆಎಸ್‌ಆರ್‌ಪಿ (KSRP) ನ ವಿಸ್ತೃತ ರೂಪವೇನು? ೩.    ಹಸಿರು ಸಸ್ಯಗಳು ಯಾವ ಕ್ರಿಯೆಯ ಮೂಲಕ ತಮ್ಮ ಆಹಾರವನ್ನು ತಾವೇ ತಯಾರಿಸಿಕೊಳ್ಳುತ್ತವೆ. ೪.    ಡಿ.ಟಿ.ಹೆಚ್. ಸೇವೆ ಆರಂಭವಾದ ವರ್ಷ  ಯಾವುದು? ೫.    ಶೂಲಪಾಣಿ ಇದು ಯಾರ ಕಾವ್ಯನಾಮವಾಗಿದೆ? ೬.    ಜಾಕೀರ್ ಹುಸೇನ್ ಎಂದಾಕ್ಷಣ ನೆನಪಿಗೆ ಬರುವ ವಾಧ್ಯ ಯಾವುದು? ೭.    ಸಚಿನ್ ತೆಂಡೂಲ್ಕರ್ ರವರ ಮೇಣದ ಪ್ರತಿಮೆ ಆಸ್ಟ್ರೇಲಿಯಾದ ಯಾವ ಕ್ರೀಡಾಂಗಣದಲ್ಲಿದೆ? ೮.    ಸೋಮೇಶ್ವರ … Read more

ಬಿಳಿಯ ಕರುಣೆಯ ಮೇಲೆ ಕಪ್ಪು ಕ್ರೌರ್ಯದ ಕಲ್ಲು: ಸಚೇತನ

ಮನುಷ್ಯ ! ಪ್ರೀತಿಸುವ ದ್ವೇಷಿಸುವ, ಕಾಡುವ ಕಾಡಿಸುವ, ಹೆದರುವ ಹೆದರಿಸುವ, ಅಳಿಸುವ ಸೃಷ್ಟಿಸುವ, ಕರುಣೆಯ ಕ್ರೌರ್ಯದ ಮನುಷ್ಯ. ಧರ್ಮದ ಹೆಸರಿನಲ್ಲಿ ಹಸಿದ ಹೊಟ್ಟೆಗೆ  ತುತ್ತು  ಅನ್ನ  ಕೊಡುವ ಮನುಷ್ಯ ಅದೇ ಧರ್ಮದ ಹೆಸರಿನಲ್ಲಿ ಅನ್ನಕ್ಕೆ ವಿಷವನ್ನಿಕ್ಕಬಲ್ಲ.  ಆದಿ ಮಾನವ ನಂತರದ ಆಧುನಿಕ ಮಾನವ  ಬದುಕಿಗೊಂದು ಶಿಸ್ತಿನ ಚೌಕಟ್ಟು ಬೇಕು ಎಂದು ಸೃಷ್ಟಿಸಿದ ಧರ್ಮದ ಸರಳ ರೇಖೆಗಳನ್ನ ತಿರುಚಿ ವಕ್ರವಾಗಿಸಿ ಸುಂದರ ರಂಗೋಲಿಯ ಸಾಲುಗಳನ್ನು ಕುಣಿಕೆಯಾಗಿಸಿ ಕುತ್ತಿಗೆಗೆ ಬಿಗಿಯಬಲ್ಲ ಮನುಷ್ಯ.  ಕ್ರೌರ್ಯ ಮತ್ತು ಕರುಣೆ ಒಂದೇ ಮುಖದ ಎರಡು … Read more

ನಮ್ಮ ಇಂದ್ರಿ ಕತಿ: ರುಕ್ಮಿಣಿ ನಾಗಣ್ಣವರ

ಕೆಲಸದ ಮ್ಯಾಲ ಹೆಡ್ ಆಫಿಸಿಗಿ ಹ್ವಾದ್ರ ನನ್ನದಲ್ಲದ ಕೆಲಸಾನೂ ನಾ ಮಾಡಬೇಕಾಗಿ ಬರ್ತದ. ಮನ್ನಿ ಮನ್ನೆರ ಕಂಪ್ಯೂಟರ್ ಕೆಲಸಕಂತ ಒಬ್ಬ ಹುಡುಗನ ನೇಮಿಸ್ಯಾರ.  ಅದೇನೋ ಡಿಪ್ಲೊಮಾ ಕೋರ್ಸ್ ಮುಗಿಸ್ಯಾನಂತ. ಆ ಊರ ಪಲ್ಲಾಳಗಿತ್ತಿ ಪದ್ದಿ ಬಾಯಾಗಿಂದ ಕೇಳಿದ ಸುದ್ದಿ. ಡಿಪ್ಲೊಮಾ ಮುಗಿಸಿದ ಹುಡಗ ಇಲ್ಲಿ ಇವರ ಕೊಡು ಯಾಡ ಸಾವಿರಕ ಅವರ ಅಂದಿದ್ದ ಅನಿಸ್ಕೊಂಡ ನಾಯಿಗಿಂತ ಕಡೆ ಆಗಿ ಯಾಕ ಸಾಯ್ಲಿಕ್ ಬಂದಾನೊ? ಅಂತ ನನಗ ಅನಿಸಿದ್ದೂ ಅದ. ಅವನ ಮಾರಿ ನೋಡಿದರ ಅಯ್ಯೋ ಪಾಪ! ಅನಿಸಿ … Read more

‘ನಿಶಾ’ಗಮನ: ಗುರುಪ್ರಸಾದ ಕುರ್ತಕೋಟಿ

(ಇಲ್ಲಿಯವರೆಗೆ) ಇಡೀ ರಾತ್ರಿ ನಿದ್ದೆ ಹತ್ತಿರಕ್ಕೂ ಸುಳಿಯದೇ ಒದ್ದಾಡಿ ತನಗೆ ಯಾವಾಗಲೋ ನಿದ್ದೆ ಹತ್ತಿದ್ದು ಬೆಳಿಗ್ಗೆ ಎದ್ದಾಗಲೇ ಸುಜಯ್ ಗೆ ಗೊತ್ತಾಗಿದ್ದು. ಎದ್ದವನೇ ಅತ್ತಿತ್ತ ತಡಕಾಡಿ ತನ್ನ ಸ್ಮಾರ್ಟ್ ಫೋನು ಎಲ್ಲಿಹುದು ಅಂತ ಹುಡುಕಾಡಿದ. ಎದ್ದ ಕೂಡಲೇ ಅದರ ಮುಖ ನೋಡದಿದ್ದರೆ ಸಮಾಧಾನವಿಲ್ಲ ಅವನಿಗೆ. ಅದು ಪಕ್ಕದಲ್ಲಿರದಿದ್ದರೆ ಅವನಿಗೆ ಉಸಿರಾಡುವುದೂ ಕಷ್ಟವೇ! ಹಿಂದಿನ ಕಾಲದ  ಕಥೆಗಳಲ್ಲಿ ರಾಕ್ಷಸರ ಜೀವ ಒಂದು ಗಿಣಿಯಲ್ಲಿ ಇರುತ್ತಿತ್ತಂತೆ ಹಾಗೆಯೇ ಸುಜಯ್ ನ ಜೀವ ಅವನ ಸ್ಮಾರ್ಟ್ ಫೋನ್ ನಲ್ಲೆ ಇದೆ. ಅದನ್ನೊಂದು … Read more

ಬರದ ಬೇಗೆಯಿಂದ ತತ್ತರಿಸುತ್ತಿದ್ದ ಕೂಲಿಕಾರ್ಮಿಕರಿಗೆ ಆಶಾಕಿರಣವಾದ ಆಲೆಮನೆ: ಹನಿಯೂರು ಚಂದ್ರೇಗೌಡ

ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ ಹನೂರಿನಲ್ಲಿ ಹಲವಾರು ವರ್ಷಗಳಿಂದ ಮಳೆ-ಬೆಳೆ ಇಲ್ಲದೆ ಬರದ ಬವಣೆಯಲ್ಲಿ ತತ್ತರಿಸಿ ಗುಳೇ ಹೊರಡುವ ಸ್ಥಿತಿಯಲ್ಲಿದ್ದ ಕೂಲಿ ಕಾರ್ಮಿಕರಲ್ಲಿ ಕೆಲವರಿಗಾದರೂ ಕೃಷ್ಣನಾಯ್ಡುರವರ ಆಲೆಮನೆ ಆಶಾಕಿರಣವಾಗುವ ಮೂಲಕ ಆಸರೆ ನೀಡಿದೆ. ಗೊಂಬೆ ಬೆಲ್ಲವನ್ನು ತಯಾರಿಸಿ ಮಾರಾಟಕ್ಕೆ ಸಿದ್ದಪಡಿಸಿರುವುದು. ಮಳೆ ಇಲ್ಲದೆ ಕೆರೆ ಬಾವಿಗಳಲ್ಲಿ ನೀರು ಬತ್ತಿ ಅಂತರ್ಜಲ ಕುಸಿದಿರುವ ಕಾರಣ, ನೀರಾವರಿ ಪಂಪ್‌ಸೆಟ್ ಜಮೀನಿದ್ದರೂ ಮಾಮೂಲಿ ಬೆಳೆಗಳನ್ನೇ ಬಳೆಯಲು ಆಗದಿರುವಂತಹ ಪರಿಸ್ಥಿತಿಯಲ್ಲಿ, ಯಥೇಚ್ಛ ನೀರನ್ನು ಅಲವಲಂಬಿಸಿ ಬೆಳೆಯುವಂತಹ ಕಬ್ಬನ್ನು ಬೆಳೆಯಲು ಸಾಧ್ಯವೇ? ಕಬ್ಬನ್ನೇ ಬೆಳೆಯಲಿಲ್ಲವೆಂದ ಮೇಲೆ … Read more

“%”: ಪ್ರಶಸ್ತಿ ಪಿ.

ಈ ವಾರ ಯಾವ ವಿಷಯದ ಬಗ್ಗೆ ಬರೆಯೋದಪ್ಪ ಅಂತ ಯೋಚ್ನೆ ಮಾಡ್ದಾಗೆಲ್ಲಾ ಐಡಿಯಾಗಳ ಚೌಚೌಭಾತ್ ಮನಸಲ್ಲಿ. ಅದೋ , ಇದೋ ಅಥವಾ ಮತ್ತೊಂದೋ ಅಂತ ಒಂದಿಷ್ಟು ಬಿಡಿಬಿಡಿ ಎಳೆಗಳು ಹೊಳೆದಿರುತ್ತೆ. ಈ ಸಲ ೧೦೦% ಇದ್ರ ಬಗ್ಗೆನೇ ಬರಿಬೇಕು ಅಂತ ಧೃಢ ನಿರ್ಧಾರ ಮೂಡೋವರೆಗೆ ಈ ಬಿಡಿ ಬಿಡಿ ಐಡಿಯಾಗಳು ಮನದ ಒಂದಿಷ್ಟು ಪ್ರತಿಶತ ಭಾಗ ಆಕ್ರಮಿಸಿಕೊಂಡಿರುತ್ತೆ. ಸ್ವಸ್ತಿಕ್ಕು, ಸೂಪರ್ರು, ಎ,ಐ,ಝೆಡ್ ಹೀಗೆ ಚಿಹ್ನೆಗಳು ಅಕ್ಷರಗಳೆಲ್ಲಾ ಸಿನಿಮಾ ಆಗೋದು ನೋಡಿದ್ವಿ, ಇದೇನಿದು ಪ್ರತಿಶತದ ಚಿಹ್ನೆ(%) ಅಂದ್ಕೊಂಡ್ರಾ ? … Read more

ಅಗ್ನಿ: ಬೆಳ್ಳಾಲ ಗೋಪಿನಾಥ ರಾವ್

       ೧. ಬಲಿ   ಚಂದ್ರ ಹಾಸ ಮತ್ತೊಮ್ಮೆ ತಲೆ ಕೆರೆದುಕೊಂಡ.   ಎರಡಸ್ಥಂತಿನ  ಭದ್ರ ಬುನಾದಿ ಎಬ್ಬಿಸಿ ಕಟ್ಟಿಸಿದ ಈ ಕಟ್ಟೋಣ    ಅಲುಗಾಡುವದೆಂದರೇನು?  ಅರ್ಥವಾಗಲಿಲ್ಲ.     ಚೈತ್ರಂಗೆ ಹೇಳೋಣವೆಂದುಕೊಂಡ ಮತ್ತೆ ನಕ್ಕಾಳು.  ನಿನ್ನೆ ಹಲ್ಲಿನ ವೈದ್ಯರು ಕೊಟ್ಟ  ಮಾತ್ರೆಯದ್ದೇನಾದರೂ ಸೈಡ್ ಎಫೆಕ್ಟ್ ಆಗಿರಬಹುದಾ.   ಸ್ವಲ್ಪ ಮತ್ತಿನಲ್ಲಿದ್ದವರ ಹಾಗಿದ್ದೀರಾ ಚೈತ್ರನ ರಾತ್ರೆಯ ಮಾತು ನೆನಪಾಯ್ತು.  ಕಣ್ಣೂ ನಿಚ್ಚಳವಾಗಿ ಕಾಣ್ತಾ ಇದೆ.  ಚಿವುಟಿಕೊಂಡ.   ಇಲ್ಲ ಸರಿಯಾಗಿ ನೋವಾಗ್ತಾ ಇದೆ.  ಮತ್ತೆ,,?  … Read more

ಮೂವರ ಕವಿತೆಗಳು: ಸಾಬಯ್ಯ ಕಲಾಲ್, ನಾಗರಾಜ ವಿ.ಟಿ., ಕಾವ್ಯಪ್ರಿಯ

ಗೋವಿನ ನೋವು ನನ್ನ ಕೊಬ್ಬಿದ ಮಾಂಸವನು ತಿಂದು ತೇಗುವ ನಿನಗೆ.. ಚೀಪಿದ ಮೂಳೆಯನ್ನಾದರು ಸಮಾಧಿ ಮಾಡಿದ್ದರೆ.. ನನ್ನೊಳಗಿರುವ ಮುಕ್ಕೋಟಿ ದೇವರ ಆತ್ಮಕ್ಕಾದರು ಶಾಂತಿ ದೊರಕುತ್ತಿತ್ತು..|| ಹರೆಯದಲ್ಲಿ ಹಾಲು ಕರೆದು ಹಾಲುಣಿಸಿದ ತಾಯಿಗೆ ದ್ರೋಹ ಬಗೆದು ಮುದಿತನದಲ್ಲಿ ಕಟುಕನಿಗೆ ಕೊಡುವ ಬದಲು ನೀನೆ ಜೀವಂತ ಸಮಾಧಿ ಮಾಡಿದ್ದರೆ ಹಾಲುಣಿಸಿದ ಋಣವಾದರು ತೀರುತ್ತಿತ್ತು..|| ನಿನಗಾಗಿ ಹಗಲಿರುಳು ದುಡಿದು ಬಸವಳಿದ ನನಗೆ ಕಸಾಯಿಖಾನೆಗೆ ಕಳಿಸುವ ಬದಲು ದವಾಖಾನೆಗೆ ನನ್ನ ಕಳಿಸಿದ್ದರೆ ಈ ತಾಯಿಯ ಮನದ ನೋವು ಹಗುರವಾಗುತ್ತಿತ್ತು..|| ತಾಯಿಯೆಂದು ಪೂಜಿಸಿದ ನಿನು … Read more

ಪಶ್ಚಿಮ ಘಟ್ಟಗಳ ಸ್ಥಿತಿ-ಗತಿ (ಅವಲೋಕನ-೫): ಅಖಿಲೇಶ್ ಚಿಪ್ಪಳಿ

ಮುಂದುವರೆದಿದೆ. . . ಮಾಧವ ಗಾಡ್ಗಿಳ್ ವರದಿ: ಸುಸ್ಥಿರ ಅಭಿವೃದ್ಧಿ-ಚಿಂತನಾಯುಕ್ತ ಸಂರಕ್ಷಣೆ: ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಕೇದ್ ತಾಲ್ಲೂಕಿನಲ್ಲಿ ಮಹಾರಾಷ್ಟ್ರ ಕೈಗಾರಿಕ ಅಭಿವೃದ್ದಿ ನಿಗಮವಿದೆ. ಇಲ್ಲಿ ಭರಪೂರ ರಾಸಾಯನಿಕ ಕೈಗಾರಿಕೆಗಳಿವೆ. ನೆರೋಲ್ಯಾಕ್, ಹಿಂದೂಸ್ತಾನ್ ಲಿವರ್, ರತ್ನಗಿರಿ ಕೆಮಿಕಲ್ಸ್ ಹೀಗೆ ಹತ್ತು ಹಲವು ವಿಷಕಕ್ಕುವ ಕಾರ್ಖಾನೆಗಳಿವೆ. ಈ ತರಹದ ಕಾರ್ಖಾನೆಗಳಿಂದ ಸಾಮಾನ್ಯ ಜನರಿಗೆ ತೊಂದರೆಯಾಗದಿರಲೆಂದು ಅಲ್ಲಿನ ಸರ್ಕಾರ ೨೦೦೬ರಲ್ಲಿ ಲೋಟೆ ಅಭ್ಯಾಸ್ ಗಾತ್ ಎಂಬ ಕಾರ್ಖಾನೆಗಳ ಮೇಲ್ವಿಚಾರಣೆ ಅಧ್ಯಯನ ತಂಡವನ್ನು ರಚಿಸಿತು. ಈ ಸಮಿತಿಯು ಕಾಲ-ಕಾಲಕ್ಕೆ ತನ್ನ ವರದಿಯನ್ನು … Read more

ಆ ಬೆಳದಿಂಗಳ ರಾತ್ರಿಯಲಿ ಒಂಟಿತನ: ಪದ್ಮಾ ಭಟ್

ಅದೊಂದು ಸುಂದರ ಬೆಳದಿಂಗಳ ರಾತ್ರಿ.. ತಂಪು ತಂಗಾಳಿ ಎದೆಗೆ ಸೋಕಿರಲು ಕನಸುಗಳ ಪದಗುಚ್ಚವುಕವಲೊಡೆದು ಬಂದಿತು.ನಕ್ಷತ್ರಗಳನ್ನು ಎಣಿಸುತ್ತಾ ಎಣಿಸುತ್ತ ಚಂದಿರನ ನಗೆಯನು ನೋಡುತ್ತಿದ್ದೆ. ಭಾವನೆಗಳ ಹೊಸ್ತಿಲು ನೆಲಕೆ ತಾಕದಂತೇ ಹಾರುತಿರಲು ಮನಸಿಗೆ ಮುದ ನೀಡುವ ಬಚ್ಚಿಟ್ಟ ನವಿಲುಗರಿ. ಆಗಲೇ ಕಾಡುವಒಂಟಿತನ. ಕೆಲವೊಂದು ಸಮಯಕ್ಕೆ, ಯೋಚನೆಗಳಿಗೆ ಆಸ್ಪದ ನೀಡುವ ಒಂಟಿತನ. ಆ ಒಂಟಿತನವು ಕೆಲವು ಬಾರಿಅತ್ಯಂತ ಖುಷಿಯನ್ನುಕೊಡುತ್ತದೆ.ಕನಸುಗಳ ಲೋಕಕ್ಕೆ ಒಬ್ಬಂಟಿಯಾಗಿರುವಾಗ ಮಾತ್ರ ಹೋಗಲು ಸಾಧ್ಯ. ಕನಸೇ ಬದುಕನ್ನು ನನಸೆಂದು ಮಾಡುವೆ ಎಂದು ಕೇಳಿಕೊಳ್ಳಲು ಅವಕಾಶ ನೀಡುವುದು. ಬೇಕಾದ ಹಾಗೆ ತಿರುಗಿಸಿ … Read more

ಸಾಮಾನ್ಯ ಜ್ಞಾನ (ವಾರ 63): ಮಹಾಂತೇಶ್ ಯರಗಟ್ಟಿ

    ಪ್ರಶ್ನೆಗಳು: ೧.    ವಿಶ್ವಸಂಸ್ಥೆಯ ಶಿಕ್ಷಣ ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಮುಖ್ಯ ಕಛೇರಿ ಎಲ್ಲಿದೆ? ೨.    ಯುನಿಸೆಫ್ (UNICEF) ವಿಸ್ತೃತ ರೂಪವೇನು? ೩.    ವೀಚಿ ಇದು ಯಾರ ಕಾವ್ಯನಾಮವಾಗಿದೆ? ೪.    ೧೯೧೮ರಲ್ಲಿ ಆರಂಭವಾದ ಪ್ರಬುದ್ಧ ಕರ್ನಾಟಕ ಪತ್ರಿಕೆಯ ಮೊದಲ ಸಂಪಾದಕರು ಯಾರಾಗಿದ್ದರು? ೫.    ಸಲ್ಮಾನ್ ಖಾನ್ ಮೇಣದ ಪ್ರತಿಮೆ ಲಂಡನ್ನಿನ ಯಾವ ಮ್ಯೂಸಿಯಂನಲ್ಲಿದೆ? ೬.    ದೇಶದ ಮೊಟ್ಟ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕಿರಣ ಬೇಡಿಯವರು ಇತ್ತೀಚೆಗೆ ಯಾವ ಪಕ್ಷ … Read more

ಭಯದ ಬೆನ್ನೇರಿ ಬಂತು: ಅನಿತಾ ನರೇಶ್ ಮಂಚಿ

’ಹತ್ತು ಗಂಟೆಗೆ ರೆಡಿಯಾಗಬೇಕು ದಾರಿಯಲ್ಲಿ ಹೋಗ್ತಾ ಕೇಶು ಮಾಮಾನನ್ನು ಕರೆದುಕೊಂಡು  ಮದುವೆ ಮನೆಗೆ ಹೋಗೋದು.. ನೀನಿನ್ನು ನಿಧಾನ ಮಾಡ್ಬೇಡ’ ಅನ್ನುವ ಮಾತನ್ನು ನೂರು ಸಲ ಕೇಳಿ ಆಗಿತ್ತು ಇವರ  ಬಾಯಲ್ಲಿ. ಸರಿ ಇನ್ನು ನನ್ನಿಂದ ತಡ ಆಯ್ತು ಅನ್ನೋದು ಬೇಡ ಅನ್ನುವ ಸಿಟ್ಟಿನಲ್ಲಿ ಸ್ವಲ್ಪ ಬೇಗವೇ ಹೊರಟು ಬಿಟ್ಟಿದ್ದೆ.  ’ಹೇಗೂ ಹೊರಟಾಗಿದೆಯಲ್ಲ.. ಇನ್ನು ಮನೆಯೊಳಗೆ ಕೂತೇನು ಮಾಡುವುದು. ಹೋಗಿ ಕೇಶು ಮಾಮ ಬರ್ತೇನೆ ಅಂತ ಹೇಳಿದ ಜಾಗದಲ್ಲೊ ಕಾಯೋಣ’ ಅಂದರಿವರು. ನನಗೂ ಅದೇ ಸರಿ ಅನ್ನಿಸಿ ಕಾರೇರಿದೆ.  … Read more

ನಾಯಿ ಪಾಡು: ಗುಂಡುರಾವ್ ದೇಸಾಯಿ

ವಾರದಿಂದ ತಲೆ ಸಿಡದು ಹೋದಂಗಾಗಕತಿತು. ಕ್ಷಣ ಕ್ಷಣಕ್ಕೂ ಭಯ ಆತಂಕ ಸುರುವಾಗಕತಿತು, ಶಾಲೆಯಲ್ಲಿ ಪಾಠ ಮಾಡುವಾಗಲು ಮನೆ ವಾತಾವರಣ ನೆನಸಿಕೊಂಡ ಕೂಡಲೆ ಸ್ಥಬ್ಧನಾಗಿ ನಿಂತುಬಿಡುತ್ತಿದ್ದೆ.  ಮಕ್ಕಳು ’ಸಾರ್, ಮುಂದು ಹೇಳ್ರೀ ಯಾಕ ಹಾಂಗ ನಿಂತ್ರಿ’ ಎಂದು ಎಚ್ಚರಿಸಿದಾಗಲೇ ವಾಸ್ತವಕ್ಕೆ ಬರೋದು. ಸಹುದ್ಯೋಗಿಗಳು ’ಯಾಕ ಹಿಂಗಾಗ್ಯಾರ? ಏನು ತಾಪತ್ರಯನೋ ಏನೋ? ಅಥವಾ ಮನೆಯಲ್ಲಿ ಮನೆಯವರ ಜೊತೆಗೆ ಮನಸ್ತಾಪನೋ?’ ಎಂದು ಹಲವು ಬಾರಿ ಕೆದುಕಲೆತ್ನಿಸಿದರು ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ನಿಮಗೂ ಏನೇನೋ ಕಲ್ಪನೆಗಳು ನನ್ನ ಬಗ್ಗೆ ಮೂಡಿರಬೇಕಲ್ಲ. ಅದು ಹೇಳುವ ವಿಷಯವೇನು … Read more

ಎಮಿಲಿ ಎಂಬ ಅಮಲು: ಮಹೇಂದ್ರ ಎಂ. ನವೋದಯ

೧೯ನೇ ಶತಮಾನದ ಇಂಗ್ಲೀಷ್ ಸಾಹಿತ್ಯದಲ್ಲಿನ ಮಹಿಳಾ ಲೇಖಕಿಯರಲ್ಲಿ ಅತ್ಯುನ್ನತ ಸ್ಥಾನ ಅಲಂಕರಿಸಿದವರಲ್ಲಿ ಎಮಿಲಿ ಬ್ರಾಂಟೆ ಕೂಡ ಒಬ್ಬರು. ಜುಲೈ ೩೦, ೧೮೧೮ ರಂದು ಜನಿಸಿ, ತೀರಾ ಸಂಕ್ಷಿಪ್ತವಾಗಿ ೩೦ ವರ್ಷಗಳ ಕಾಲ ಬದುಕಿದರೂ ಅವರ ಸಾಹಿತ್ಯ ಕೊಡುಗೆ ಅನನ್ಯ ಮತ್ತು ಅಜರಾಮರ. ಎಮಿಲಿ ಬೆಳೆದದ್ದು ದೂರದ ಇಂಗ್ಲೆಂಡ್, ಬರೆದದ್ದು ಇಂಗ್ಲೀಷ್ ನಲ್ಲಿ, ಎಮಿಲಿ ಚಿಕ್ಕ ವಯಸ್ಸಿನಲ್ಲಿ ತಾಯಿಯನ್ನು ಕಳೆದುಕೊಂಡು, ಕಠಿಣ ಸ್ವಭಾವದ ನೆಂಟನಬ್ಬೊಳ ಮನೆಯಲ್ಲಿ ಬೆಳೆದಳು. ಹೆಚ್ಚು ಔಪಚಾರಿಕ ಶಿಕ್ಷಣವನ್ನು ಪಡೆಯಲಿಲ್ಲ. ಆಕೆ ಯಾರೊಂದಿಗೂ ಬೆರೆತವಳಲ್ಲ, ಒಂಟಿತನವೇ … Read more

ಮೌನವೊಂದು ಸಾಗುತಿಹುದು ಬದುಕು ಬಿಟ್ಟು: ಸಚೇತನ

  ವಿಶಾಲ ಮರುಭೂಮಿಯ ಮರಳಿನ ಮೇಲೆ ಬಿಸಿಲು ಚೆಲ್ಲುತ್ತ ನಿಂತ ನೀಲ ಆಕಾಶಕ್ಕೆ ಒಂದೇ ಬಣ್ಣ, ಕಪ್ಪು, ಬಿಳಿ, ಕಡು ನೀಲ, ಕಡುಗಪ್ಪು, ಬಂಗಾರ, ಹಳದಿ ಯಾವುದೇ ಬಣ್ಣಗಳಿಲ್ಲದ ಮೋಡಗಳ ಅಡಿಯಲ್ಲಿರುವವರ ಬದುಕು ಕೂಡ, ಬಣ್ಣಗಳಿಲ್ಲದ ಬದುಕು. ಈ ನೀಲ ಆಕಾಶದ ಕೆಳಗೆ  ಇರಾಕ್ ಮತ್ತು ಟರ್ಕಿ ನಡುವಿನ ಮರುಭೂಮಿಯಂತ ಪ್ರದೇಶದಲ್ಲಿ ಕುರ್ದಿಶ್ ಎನ್ನುವ ನಿರಾಶ್ರಿತರ ಕ್ಯಾಂಪ್ ಇದೆ. ಇರಾಕ್ ಮತ್ತು ಅಮೇರಿಕಾದ ಯುದ್ಧೋನ್ಮಾದದ ಹರಿತ ಧೂಳು ಎಲ್ಲೆಲ್ಲು ತುಂಬಿದೆ. ಯುದ್ಧವೆಂದರೆ ಸೈನಿಕರ ಬಡಿದಾಟವಲ್ಲ, ಬಂದೂಕುಗಳ ಶಬ್ದಗಳಲ್ಲ, … Read more

ಕಿರು ಕತೆಗಳು: ನವೀನ್ ಮಧುಗಿರಿ, ಮುಕುಂದ್ ಎಸ್.

ಚಪ್ಪಾಳೆ ಇಡೀ ಶಾಲೆಗೇ ವರ್ಷದ ಉತ್ತಮ ಪ್ರತಿಭಾವಂತ ವಿದ್ಯಾರ್ಥಿ ಎಂದು ಮಗ ವೇದಿಕೆಯ ಮೇಲೆ ಪ್ರಶಸ್ತಿಯನ್ನು ಪಡೆವಾಗಯುವಾಗ, ಪೋಷಕರ ಸಾಲಿನಲ್ಲಿ ಕುಳಿತ ಅವನ ಕುರುಡು ತಂದೆ ಸಂತಸದಿಂದ ಎಲ್ಲರೊಟ್ಟಿಗೆ ಚಪ್ಪಾಳೆ ತಟ್ಟಿದರು. *** ನಾಯಿ ಆ ಮನೆಯಲ್ಲಿ ಅದು ಊಟದ ಸಮಯ. ಗಂಡ ಊಟಕ್ಕೆ ಕುಳಿತಿದ್ದ, ಹೆಂಡತಿ ಬಡಿಸುತ್ತಿದ್ದಳು. ಎರಡು ತುತ್ತು ತಿನ್ನುವಾಗ ಗಂಡ ತನ್ನ ಮಾಮೂಲಿ ಗೊಣಗಾಟವನ್ನ ಶುರು ಮಾಡಿದ. ಅನ್ನ ಯಾಕಿಷ್ಟು ಮೆತ್ತಗೆ ಮಾಡಿದ್ದೀಯ?  ಸಾರಿಗೆ ಉಪ್ಪು ಕಡಿಮೆ. ಪಲ್ಯ ತುಂಬಾ ಖಾರ ಖಾರ. … Read more

ಧ್ವನಿ ಕೇಳೋ ಆಸೆಯೂ, ರೆಕಾರ್ಡಿಂಗ್ ನೆನಪೋಲೆಯು: ಪ್ರಶಸ್ತಿ ಪಿ.

ಶಾಲಾ ದಿನಗಳಲ್ಲಿ ಆಕಾಶವಾಣಿಯಲ್ಲಿ ಶನಿವಾರ ಬರ್ತಿದ್ದ ಗಾಂಧಿ ಸ್ಮೃತಿ, ಭಾನುವಾರದ ರೇಡಿಯೋ ಸಿನಿಮಾ(ಧ್ವನಿಯಲ್ಲೇ ಸಿನಿಮಾದ ಕಲ್ಪನೆಗಳ ಕಟ್ಟೋ ಅದ್ಬುತ ಅನುಭವ ಕೇಳೇ ಸವಿಬೇಕು), ಪ್ರತಿದಿನ ಸಂಸ್ಕೃತ ವಾರ್ತೆಯ ಬಲದೇವಾನಂದ ಶರ್ಮ,  ಏಳೂ ಮೂವತ್ತೈದರ ವಾರ್ತೆ, ಎಂಟರ ಹಿಂದಿ, ಇಂಗ್ಲೀಷ್ ವಾರ್ತೆಗಳು, ನಂತರದ ರೇಡಿಯೋ ಡಾಕ್ಟರಗಳನ್ನು ಕೇಳೇ ದೊಡ್ಡವರಾದ ನಮಗೆ  ರಾತ್ರಿ ಎಂಟು ಘಂಟೆಗೆ ಬರೋ "ಯುವವಾಣಿ" ಅಚ್ಚುಮೆಚ್ಚಾಗಿತ್ತು. ಅದರಲ್ಲಿ ಬರ್ತಿದ್ದ ಕಾಲೇಜು, ಶಾಲಾ ವಿದ್ಯಾರ್ಥಿಗಳು ಮತ್ತು ಅವರು ನಡೆಸಿಕೊಡುತ್ತಿದ್ದ ಕಾರ್ಯಕ್ರಮ ಕೇಳುತ್ತಿದ್ದ ನನಗೆ ನಾನೂ ಒಮ್ಮೆ ರೇಡಿಯೋದಲ್ಲಿ … Read more

ತಿರುಗುಬಾಣ: ಬಸವರಾಜ ಎಂ.

ಆಫೀಸ್ ಗೆ ತಡವಾಗುತ್ತಿತ್ತು. ಇಸ್ತ್ರಿ ಮಾಡಿದ ಬಟ್ಟೆ  ಬೇರೆ ಇರಲಿಲ್ಲ. ಮಗನಿಗೆ ಹೇಳೋಣವೆಂದುಕೊಳ್ಳುವ ಹೊತ್ತಿಗೆ ಗಾದೆ ನೆನಪಿಗೆ ಬಂತು. "ಅಪ್ಪ ಮಾಡಿದ್ದು ಉತ್ತಮ,  ಮಗ ಮಾಡಿದ್ದು ಮಧ್ಯಮ, ಆಳು ಮಾಡಿದ್ದು ಆಳು" ಅಂತ. ಮನೆಯಲ್ಲಿ ಆಳು ಇಡಲಂತೂ ಸಾಧ್ಯವಾಗಿಲ್ಲ ಹೋಗಲಿ ನಾನೆ ಮಾಡೋಣ ಎಂದುಕೊಂಡರೆ ನನಗೊಂದು ಜಿಜ್ಞಾಸೆ. ಅದೇನೆಂದರೆ ನನ್ನ ಅಪ್ಪನನ್ನು  ಪರಿಗಣಿಸಿದರೆ ನಾನು ಮಾಡಿದ್ದು ಮಧ್ಯಮವಾಗುತ್ತದೆ. ಮಗನಿಗೆ  ಹೇಳೋಣವೆಂದರೆ ಮತ್ತೆ ಮಧ್ಯಮದ ವಿಚಾರ ಬಂತು. ಈಗ ನನ್ನ ಕೋಪ ತಿರುಗಿದ್ದು ನನ್ನ ಅಂಗಿಯ ಇಸ್ತ್ರಿಯ ಮಾಡದ … Read more