ಕವಿತೆಯ ಕನವರಿಕೆಗಳು: ಸಂಗೀತ ರವಿರಾಜ್

                ಸಾಹಿತ್ಯದ ಎಲ್ಲಾ ಪ್ರಕಾರಗಳಿಂದಲೂ ಕವಿತೆಯೆ ಹೆಚ್ಚು ಅನುಭೂತಿಯನ್ನು ನೀಡುವಂತದ್ದು. ಇದು ಸಾಹಿತ್ಯದ ಬಗೆಗೆ ಆಸಕ್ತಿಯಿರುವವರ ಅಂಬೋಣ. ಆದರೆ ಕವಿತೆ ಅಂದರೆ ಮಾರುದೂರ ಹೋಗುವ, ಮೂಗು ಮುರಿಯುವ ಜಾಯಮಾನದವರೆ ಹೆಚ್ಚಿರುವ ಈ ಕಾಲದಲ್ಲಿ ಕವಿತೆ ಬಗ್ಗೆ ಚೂರು ಪಾರು ಅಭಿಮಾನ ಹೊಂದಿರು ನಮ್ಮಂತವರ ಗತಿ ದೇವರಿಗೆ ಪ್ರೀತಿ! ಸಿನಿಮಾಗಳಲ್ಲಿ, ಹಾಸ್ಯ ಧಾರಾವಾಹಿಗಳಲ್ಲಿ ಬರಹಗಾರರನ್ನು ವಿದೂಷಕರನ್ನಾಗಿ ತೋರಿಸುವ ಪರಿಪಾಟಲು ಹಿಂದಿನಿಂದಲೇ ನಡೆದು ಬಂದಿದೆ. ವಾಸ್ತವವಾಗಿ ಏನಾಗುತ್ತದೆಯೆಂದರೆ ಓದುಗರ ಸಂಖ್ಯೆ … Read more

ತಿರಸ್ಕಾರ (ಭಾಗ 3): ಜೆ.ವಿ.ಕಾರ್ಲೊ, ಹಾಸನ

(ಇಲ್ಲಿಯವರೆಗೆ) ಉದ್ದೇಶ? ಅದು ಅವನಿಗೂ ಗೊತ್ತಿರಲಿಲ್ಲ. ಪ್ರೀತಿಯ ಹಸಿವು, ಕಾಡುತ್ತಿರುವ ತಬ್ಬಲಿತನ ಎಂದು ಹೇಳಲು ಅವನಿಗೆ ನಾಲಿಗೆ ಹೊರಳಲಿಲ್ಲ. ಊರ ಜನರ ತಿರಸ್ಕಾರ ಅವನನ್ನು ಉಸಿರುಗಟ್ಟಿಸಿತ್ತು. ಅವರ ಇರುವನ್ನೇ ಕಡೆಗಣಿಸಿ ಪಕ್ಕಕ್ಕೆ ಮುಖ ತಿರುಗಿಸಿ ನಡೆಯುವ ಫ್ರಾನ್ಸಿಗರ ಕತ್ತನ್ನು ಹಿಡಿದು ಮುರಿಯಬೇಕೆನ್ನಿಸುವಷ್ಟು ಕ್ರೋಧ ಅವನಲ್ಲಿ ಉಂಟಾಗುತ್ತಿತ್ತು. ಕೆಲವೊಮ್ಮೆ ಅಸಹಾಯಕತೆಯಿಂದ ಗಳಗಳನೆ ಅಳಬೇಕೆಂದು ಅವನಿಗೆ ಅನಿಸುತ್ತಿತ್ತು. ತನ್ನನ್ನು ಪ್ರೀತಿಯಿಂದ ಬರಮಾಡಿಕೊಂಡು ಸ್ವಾಗತಿಸುವ ಒಂದು ಮನೆಯಿದ್ದಿದ್ದರೆ! ಇದು ಅವನ ಗುಪ್ತ ಆಸೆಯಾಗಿತ್ತು. ಆನ್ನೆಟಳಂತ ಹುಡುಗಿ ತನ್ನ ಜಾಯಮಾನಕ್ಕೆ ತಕ್ಕ ಹುಡುಗಿ … Read more

ಚುಟುಕಗಳು: ನವೀನ್ ಮಧುಗಿರಿ, ನಗೆಮಲ್ಲಿಗೆ

ಕಿರು ಕವಿತೆಗಳು —————— ಅಪ್ಪನ ನೇಗಿಲ ಕಾವ್ಯಕೆ ಹೊಟ್ಟೆ ತುಂಬಿದವರ ತೇಗುಗಳೇ ಪ್ರಶಸ್ತಿ , ಪುರಸ್ಕಾರ ತಟ್ಟೆಯಲಿ ಬಿಟ್ಟ, ತಿಪ್ಪೆಗೆ ಚೆಲ್ಲಿದ ಅನ್ನ ಅಪ್ಪನ ಬೆವರಿಗೆ ನೀವು ಮಾಡಿದ ಅವಮಾನ — ಮೊನ್ನೆ ಮಹಾನ್ ದೈವಭಕ್ತ ಸಿದ್ರಾಮ ದೇವರಿಗೆ ಕೈ ಮುಗಿದು ಕಾಣಿಕೆ ಸಲ್ಲಿಸಿ ದೇವಸ್ಥಾನದಿಂದ ಹೊರ ಬರುವಷ್ಟರಲ್ಲಿ ಅವನ ಚಪ್ಪಲಿ ಕಳುವಾಗಿದ್ದವು! — ರೈತನ ಬೆವರ ಹನಿ ಹೊಳೆದಿದೆ ಎಳೆ ಬಿಸಿಲಿಗೆ ಪೈರಿನ ನೆತ್ತಿಯ ಮೇಲೆ ತೆನೆ — ಒಂದಷ್ಟು ಪ್ರೀತಿ ಮಣ್ಣಾದ ಮೇಲೆ ಈ … Read more

ಅಮರವಾಗಲಿ ನಮ್ಮ ಚೆಲುವ ಕನ್ನಡ ನುಡಿಯು: ಹೊರಾ.ಪರಮೇಶ್ ಹೊಡೇನೂರು

"ಜೇನಿನ ಹೊಳೆಯೋ ಹಾಲಿನ ಮಳೆಯೋ  ಸುಧೆಯೋ ಕನ್ನಡ ಸವಿ ನುಡಿಯೋ….  ವಾಣಿಯ ವೀಣೆಯೊ ಸ್ವರ ಮಾಧುರ್ಯವೋ  ಸುಮಧುರ ಸುಂದರ ನುಡಿಯೋ….ಆಹಾ!"         ಎಂಬ ಗೀತೆಯು ನಮ್ಮ ಕರುನಾಡಿನ ಕನ್ನಡಿಗರ ಎದೆಯಾಳದಲ್ಲಿ ಸದಾ ರಿಂಗಣಿಸುತ್ತಲೇ ಇರುತ್ತದೆ. ಕನ್ನಡದ ಮೇರು ನಟ ಡಾ.ರಾಜ್ ಕುಮಾರ್ ರವರ ಅಮೃತ ಕಂಠಸಿರಿಯಲ್ಲಿ ಅಜರಾಮರವಾಗಿರುವ ಈ ಗೀತೆಯು ಚಲನಚಿತ್ರಕ್ಕಾಗಿ ರಚಿಸಲ್ಪಟ್ಟರೂ ನಮ್ಮ "ಸವಿಗನ್ನಡ"ದ ಹಿರಿಮೆ-ಗರಿಮೆಗಳನ್ನು ಬಿಂಬಿಸುವಲ್ಲಿ ಯಶಸ್ವಿಯಾಗಿ ಕನ್ನಡ ಭಾಷಾ ಚಳುವಳಿಯಲ್ಲಿ ಪ್ರಮುಖವಾದ ಕನ್ನಡಪರ ಕಾಳಜಿಯ ಸಂದೇಶಗೀತೆಯಾಗಿದ್ದು ಇತಿಹಾಸದ ಪುಟ … Read more

ಕರುನಾಡಿನ ದಾಸಶ್ರೇಷ್ಟ ಕನಕಕದಾಸರು: ಹಿಪ್ಪರಗಿ ಸಿದ್ಧರಾಮ

ಕರುನಾಡಿನ ದಾಸ ಪರಂಪರೆಯಲ್ಲಿ ಭಕ್ತ ಕನಕದಾಸರು (1508-1606) ವಿಶಿಷ್ಟ ವ್ಯಕ್ತಿತ್ವದ ಸಮಾಜ ಸುಧಾರಕರು. ದಾಸ ಸಾಹಿತ್ಯದ ದಿಗ್ಗಜ ದಾಸಶ್ರೇಷ್ಟ ಕನಕದಾಸರ ಕರ್ಮಭೂಮಿ ಕಾಗಿನೆಲೆಯಾಗಿದ್ದರೂ ಅವರು ಜನಿಸಿದ್ದು ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ. ಇಲ್ಲಿ ಕನಕದಾಸರ ಅರಮನೆ ಇದ್ದ ಬಗ್ಗೆ ಇತ್ತೀಚಿನ ಉತ್ಖನನ ಮತ್ತು ದಾಖಲೆಗಳು ಖಚಿತಪಡಿಸಿವೆ. ತಂದೆ ಬೀರಪ್ಪ ಡಣ್ಣಾಯಕರ ಅಕಾಲ ಮರಣದಿಂದ ಕಿರಿಯ ವಯಸ್ಸಿನಲ್ಲಿಯೇ ವಿಜಯನಗರ ಆಡಳಿತಕ್ಕೊಳಪಟ್ಟ ಶಿಗ್ಗಾಂವ-ಬಂಕಾಪುರ ಪ್ರದೇಶಕ್ಕೆ ಡಣ್ಣಾಯಕರಾಗಿ, ತಾಯಿ ಬಚ್ಚಮ್ಮನ ಮಾರ್ಗದರ್ಶನದಲ್ಲಿ ಆಡಳಿತ ನಡೆಸುವ ಕನಕದಾಸರ ಮೂಲ ಹೆಸರು ತಿಮ್ಮಪ್ಪ. ಯಾವುದೋ … Read more

ಗಾಧಿಮಾಯಿ ಹತ್ಯಾಕಾಂಡ: ಅಖಿಲೇಶ್ ಚಿಪ್ಪಳಿ

ದಕ್ಷಿಣ ನೇಪಾಳದ ಕಠ್ಮಂಡುವಿನಿಂದ ಸುಮಾರು 160 ಕಿ.ಮಿ. ದೂರದಲ್ಲಿರುವ ಜಿಲ್ಲೆಯ ಹೆಸರು ಬಾರ. ಈ ಜಿಲ್ಲೆಯ ಭರಿಯಾರ್‍ಪುರ್‍ನಲ್ಲಿರುವ ಗಾಧಿಮಾಯಿ ದೇವಸ್ಥಾನ ಇವತ್ತು ಜಗತ್ ಖ್ಯಾತವಾಗಿದೆ. 5 ವರ್ಷಗಳಿಗೊಮ್ಮೆ ಇಲ್ಲಿ ಜಾತ್ರೆ ನಡೆಯುತ್ತದೆ. ನಮ್ಮಲ್ಲೂ ಹಳ್ಳಿ-ಹಳ್ಳಿಗಳಲ್ಲಿ ಜಾತ್ರೆಗಳು ನಡೆಯುತ್ತವೆ. ಇದರಲ್ಲೇನು ವಿಶೇಷವೆಂದು ಕೇಳಬಹುದು. ಎಲ್ಲಾ ಜಾತ್ರೆಗಳಲ್ಲೂ ಮಾರಿಯನ್ನು ಸಂತೃಪ್ತಿಗೊಳಿಸುವ ಸಲುವಾಗಿ ಪ್ರಾಣಿಬಲಿಯನ್ನು ನೀಡುತ್ತಾರೆ. ಕೆಲವು ಕಡೆ ಅಕ್ರಮವಾಗಿ ನರಬಲಿಯನ್ನು ನೀಡುವುದೂ ಇದೆ. ಭಾರತದಂತಹ ದೇಶದಲ್ಲಿ ಪ್ರಾಣಿಬಲಿ ತಡೆಯುವ ಕಟ್ಟುನಿಟ್ಟಾದ  ಕಾನೂನುಗಳಿವೆ. ಈ ಕಾನೂನು ಹಲವು ಬಾರಿ ವಿಫಲವಾಗುತ್ತದೆ. ಕಾನೂನು … Read more

ಸಾಮಾನ್ಯ ಜ್ಞಾನ (ವಾರ 56): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: 1.    ವಿಶ್ವದ ಪ್ರಥಮ ಔದ್ಯೋಗಿಕ  ರಾಷ್ಟ್ರ ಯಾವುದು? 2.    ಭಾರತದಲ್ಲಿ ಆಡಳಿತ ಸುಧಾರಣಾ ಆಯೋಗದ ಪ್ರಥಮ ಅಧ್ಯಕ್ಷರು ಯಾರಾಗಿದ್ದರು? 3.    ಕರ್ನಾಟಕ ರಾಜ್ಯ ಡಾ||ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ ಎಲ್ಲಿದೆ? 4.    ಅಮುಗೇಶ್ವರ ಇದು ಯಾರ ಅಂಕಿತ ನಾಮವಾಗಿದೆ? 5.    ನಮ್ಮ ಕಣ್ಣಿನಲ್ಲಿ ಪರದೆಯಂತೆ ಕಾರ್ಯ ನಿರ್ವಹಿಸುವ ಭಾಗ ಯಾವುದು? 6.    ಕುವೆಂಪು ರವರ ಮೊದಲ ಕಾವ್ಯನಾಮ ಯಾವುದು? 7.    ಕಳರಿಪಟ್ ಎನ್ನುವುದು ಯಾವ ರಾಜ್ಯಕ್ಕೆ ಸಂಬಂಧಿಸಿದ ಯುದ್ಧ ಕಲೆಯಾಗಿದೆ? 8.   … Read more

ಮನೆಯ ಅಂಗಳದಲ್ಲಿ ರಂಗವಲ್ಲಿ ಬಿಡಿಸಿ: ಸಚಿನ್ ನಾಯ್ಕ ಅಂಕೋಲ

ಹೃದಯದಲ್ಲಿ  ಪುಟ್ಟ ಪುಟ್ಟ ಕನಸುಗಳ ಅರಮನೆ ಕಟ್ಟಿ ಬದುಕಿನುದ್ದಕ್ಕೂ ನನ್ನೊಡನೆ ಅಲ್ಲೇ ಇರುವ ಭರವಸೆಗೆ ನಗು ನಗುತ್ತಲೇ ಒಪ್ಪಿಗೆಕೊಟ್ಟ  ನಿನಗಾಗಿ                                          ನಿನ್ನವನಿಂದ…. ನೋಡು ಹೊರಗಡೆ ; ಆಕಾಶದಲ್ಲಿ ಇಂದು ಪೂರ್ಣಚಂದ್ರ…. ನೆಲದ ಮೇಲೆಲ್ಲಾ ಅವನ ಹಾಲು ಬೆಳಕು…. ಜೀsss ಎನ್ನೋ ಮರದ ಮೇಲೆ  ಎಂದೂ ಕಾಣದಂತೆ ಅದೃಶ್ಯವಾಗೇ ಇರುವ ಜಿರಲೆಗಳ … Read more

ರೆಡಿ ಸ್ಟೆಡಿ ಪೋ!: ಗುರುಪ್ರಸಾದ ಕುರ್ತಕೋಟಿ

ಅವತ್ತಿನ ದಿನದಲ್ಲೇನು ಹೇಳಿಕೊಳ್ಳುವಂತಹ ವಿಶೇಷತೆಯಿರಲಿಲ್ಲ. ಪ್ರತಿದಿನದಂತೆ ಅವತ್ತೂ ಬೆಳಗಾಗಿತ್ತು, ವೆಂಕಣ್ಣ  ಎಂದಿನಂತೆ ಬಲ ಮಗ್ಗಲಲ್ಲೇ ಎದ್ದಿದ್ದ! ಅವನ ಹೆಂಡತಿ ಎಂದಿನಂತೆ ಅವತ್ತು ಕೂಡ ಇನ್ನೂ ಎದ್ದಿರಲಿಲ್ಲವಾದ್ದರಿಂದ, ಹಲವು ಬಗೆಯ ರಾಸಾಯನಿಕಗಳ ಆಗರವೆಂದು ಗೊತ್ತಿದ್ದೂ ಕೂಡ ಚಹಾ ಎನ್ನುವ ಕಷಾಯದ ವಿಷವನ್ನು ತನ್ನ ಕೈಯಾರೆ ಕುದಿಸಿಕೊಂಡ. ಎಷ್ಟಂದ್ರೂ ನಮಗೆ ಬೇಕಾದ ವಿಷವನ್ನು ನಾವೇ ಆರಿಸಿಕೊಳ್ಳಬೇಕೆಂದು ಹಿರಿಯರು ಹೇಳಿಬಿಟ್ಟಿದ್ದಾರಲ್ಲ! ಯಾಂತ್ರಿಕವಾಗಿ ಇತರ ಪ್ರಾತಃ ಕರ್ಮಗಳಿಗೂ ಮುಕ್ತಿಯನ್ನು ಕರುಣಿಸಿದ್ದ. ಹಿಂದಿನ ದಿನ ನೋಡಿದ್ದ ನಾಟಕದ ಪಾತ್ರವೊಂದು ಅವನ ತಲೆಯಲ್ಲಿ ಇನ್ನೂ ಗುಂಯ್ … Read more

ವಿಚ್ಚೇದನಾ ಪ್ರಕರಣ ಕಾರ್ಯಕ್ರಮದ ನಂತರ: ಅಮರ್ ದೀಪ್ ಪಿ.ಎಸ್.

ಚೆಂದನೆಯ ಕಥಾವಸ್ತುವುಳ್ಳ ಸಿನೆಮಾಗಳು ಹಿಂದೆ  ನೂರು ದಿನ ಪ್ರದರ್ಶನ ಕಾಣುವುದು ಮಾಮೂಲಾಗಿತ್ತು. ಸತತ ಇಪ್ಪತ್ತೈದನೇ ವಾರ, ಐವತ್ತನೇ ವಾರ,  ಒಂದು ವರ್ಷ,  ಎರಡು ವರ್ಷದ ದಾಖಲೆ ಪ್ರದರ್ಶನದ ಸಂಭ್ರಮ.  ಮೊನ್ನೆ ಮೊನ್ನೆ ಒಂದು ಹಿಂದಿ ಸಿನೆಮಾ ಬರೋಬ್ಬರಿ ಒಂದು ಸಾವಿರ ವಾರ ಪ್ರದರ್ಶನ ಕಂಡು ಅದೇ ಸಿನಿಮಾದೊಂದಿಗೆ ಆ ಸಿನಿಮಾ ಥಿಯೇಟರ್ ಮುಚ್ಚಲಾಯಿತು. ಇತ್ತೀಚಿನ ಸಿನೆಮಾಗಳು ವಾರಗಳ ಲೆಕ್ಕದ ಬದಲು ದಿನದ ಲೆಕ್ಕದಲ್ಲಿ ಪ್ರದರ್ಶನ ಕಂಡ ಬಗ್ಗೆ   “ಇಪ್ಪತ್ತೈದನೇ ದಿನ”  “ಐವತ್ತನೇ ದಿನ” “ನೂರನೇ ದಿನ” … Read more

ಜ್ಯೋತಿಷ್ಯದ ದುರುಪಯೋಗ: ಶ್ರೀನಿವಾಸ್ ಪ್ರಭು

ಜ್ಯೋತಿಷ್ಯ  ಎಂಬ ಪದ ಹುಟ್ಟಿದ್ದು ಸೂರ್ಯನನ್ನು ಕೇಂದ್ರೀಕರಿಸಿ. ಸೂರ್ಯನನ್ನು ಪ್ರಧಾನವಾಗಿರಿಸಿ ಇತರ ಗ್ರಹಗಳು ಸುತ್ತುವ ವಾಗ ಚಂದ್ರನ  ಮೇಲೆ ಬೀಳುವ ಸೂರ್ಯನ ಬೆಳಕಿನ ಛಾಯಾ ಬಿಂಬ ಆರೋಹ ಮತ್ತು ಅವರೋಹ ಪರಿಕ್ರಮದಲ್ಲಿ ಪುನರಾವರ್ತನೆ ಯಾಗುವ ದಿನದ ಗಣಿತ. ಮನುಕುಲ ಭೂಮಿಯ ಮೇಲೆ ಹುಟ್ಟಿದಂದಿನಿಂದ ಆಕಾಶಕಾಯದಲ್ಲಿ ಕಾಣುವ ಸೂರ್ಯ, ಚಂದ್ರ, ನಕ್ಷತ್ರ ಹಾಗೂ ಇತರ ಆಕಾಶ ಕಾಯಗಳ ಬಗ್ಗೆ ಕೂತೂಹಲಗೊಂಡು, ಕೆಲವು ಬುದ್ಧಿವಂತ ಸನ್ಯಾಸಿಗಳು ಸಂಶೋಧನೆ ಮಾಡುತ್ತಾ, ಸೂರ್ಯನ ಬೆಳಕು ಚಂದ್ರನ ಮೇಲೆ ಬೀಳುವ ಪರಿಯನ್ನು ಲೆಕ್ಕ ಹಾಕತೊಡಗಿ … Read more

ಚೊಕ್ಕ ಕತೆಗಳು: ಮಾಧವ ಡೋಂಗ್ರೆ

1.ಸಂಸಾರ ಆತ ಸ್ಥಿತಪ್ರಜ್ಞ. ಆಕೆ ಚಂಚಲೆ. ಆದರೂ ಅವರದು ಬಿಡಲಾರದ ಅನುಬಂಧ.  ಆಕೆ ಆತನನ್ನು ಖುಶಿಪಡಿಸಲು ದಿನವೂ ಆತನಲ್ಲಿ ಬಂದು ಅವನಲ್ಲಿ ಸೇರುತ್ತಾಳೆ. ಆದರೆ ಕೆಲವೊಮ್ಮೆ ನಿತ್ರಾಣಳಾಗಿ ನಡುದಾರಿಯಲ್ಲೆ ಬಿದ್ದುಹೋಗುತ್ತಾಳೆ. ಅವನಾದರೋ ಇದ್ಯಾವುದರ ಪರಿವೆ ಇಲ್ಲದೆ ನಿಶ್ಚಲನಾಗಿದ್ದು ತನ್ನ ತಪಸ್ಸನ್ನಾಚರಿಸುತ್ತಾನೆ. ಇನ್ನೊಂದು ಆಯಾಮದಲ್ಲಿ ಆತ ಆಕೆಗಾಗಿ ಕ್ಷಣಕ್ಷಣವೂ ಹಾತೊರೆಯುತ್ತಿರುತ್ತಾನೆ. ಆಕೆಯ ಬರುವಿಕೆ ಗೊತ್ತಿದ್ದರೂ ಸುಮ್ಮನೆ ಮುನಿಸಿಕೊಳ್ಳುತ್ತಾನೆ. ಆದರೆ ಆಕೆ ಬಂದರೂ, ಬರದಿದ್ದರೂ ಅವರಿಬ್ಬರ ಮಕ್ಕಳನ್ನು ಜೊಪಾನವಾಗಿ ನೋಡಿಕೊಂಡು, ರಾತ್ರಿಯಾದಂತೆ ಮಕ್ಕಳನ್ನು ಮಲಗಿಸಿ ಅವಳಿಗೊಸ್ಕರ ಕಾಯತೊಡಗುತ್ತಾನೆ. ಆತನ ಹೆಸರು … Read more

ಮೂವರ ಕವಿತೆಗಳು: ಗಿರಿ, ರಘುನಂದನ ಹೆಗಡೆ, ಪಾ.ಮು.ಸುಬ್ರಮಣ್ಯ ಬ.ಹಳ್ಳಿ.

ಕಾಡುವ ನೆನಪಿನ ಹಿಂದೆ ನೂರೊಂದು ಚಡಪಡಿಕೆ ಒಂದೊಂದು ತಿರುವಲು ನಿನ್ನ ನಗುವಿನ ಪಳೆಯುಳಿಕೆ ಕಂಡೂ ಕಾಣದೆ ಕತ್ತಲಿನ ಮೂಲೆಯಲಿ ಕಂಪಸೂಸಿದ ನಿನ್ನ ಬೆಳದಿಂಗಳಂತ ನಸುನಗೆ ಸುಮ್ಮನೆ ಪ್ರೇಮಿಸುತಿದ್ದ ನನ್ನ ಕವಿಯನಾಗಿ ಮಾಡಿದ್ದು ನೀನಾ? ನಿನ್ನ ನೆನಪಾ? ಹೇಳು, ದಯವಿಟ್ಟು ಹೇಳು ಕನಸಲಿ ಬಂದು ಕನವರಿಸುವಂತೆ ಮಾಡಿದ್ದು ನೀನಾ? ನಿನ್ನ ಮುಂಗುರಳಾ? – ಗಿರಿ         ಮೂಲ ಮರೆತವನ ಹುಡುಕಾಟ ಅಂಗಳದಿಂದ ಹತ್ತು ಹೆಜ್ಜೆ ಎತ್ತಿಟ್ಟರೆ ನೆರಳು ಬಿಸಿಲು ಆಟವಾಡುವ ಮನೆ ಉಸ್ಸೆಂದು ಹಗುರಾಗಿ … Read more

ತಿರಸ್ಕಾರ (ಭಾಗ 2): ಜೆ.ವಿ.ಕಾರ್ಲೊ, ಹಾಸನ

(ಇಲ್ಲಿಯವರೆಗೆ) … ಹುಡುಗಿ ಅವನಿಗೆ ಒಂದು ಮುತ್ತು ಕೊಟ್ಟಿದ್ದರೆ ಅವನು ಸುಮ್ಮನೇ ಹೊರಟುಹೋಗಿ ಈ ಅನಾಹುತ ಜರುಗುತ್ತಿರಲಿಲ್ಲವೇನೋ? ನೆಲಕ್ಕುರುಳಿದ್ದ ರೈತನ ಮೇಲೆ ಅವನ ದೃಷ್ಟಿ ಹರಿದು ಅವನಿಗೆ ನಗು ಬಂದಿತು. ಹಾಗೆಯೇ ಹೆಂಗಸಿನೆಡೆಗೆ ನೋಡಿದಾಗ ಅವಳಿನ್ನೂ ಕಂಪಿಸುತ್ತಿದ್ದಳು. ಹುಡುಗಿಯ ನಂತರ ತನ್ನ ಸರದಿ ಎಂದು ಅವಳು ಭಾವಿಸಿರಬೇಕು! ಯಾಕೆ ಹೆಂಗ್ಸೇ ಅಳ್ತಾ ಇದ್ದೀಯಾ? ಇದು ಇವತ್ತಲ್ಲ ನಾಳೆ ಜರುಗಲೇ ಬೇಕಿತ್ತು. ಅವನು ಹಿಂಬದಿಯ ಜೇಬಿನಿಂದ ಪರ್ಸನ್ನು ಹೊರತೆಗೆದು, ತೆಗೋ ಇದರಲ್ಲಿ ನೂರು ಫ್ರಾಂಕುಗಳಿವೆ. ನಿನ್ನ ಮಗಳಿಗೊಂದು ಡ್ರೆಸ್ … Read more

ಘಟ್ಟ ಉಳಿಸುವ ವರದಿಗೆ ಅಗ್ನಿಸ್ಪರ್ಷ: ಅಖಿಲೇಶ್ ಚಿಪ್ಪಳಿ

ಭಾನುವಾರ ರಜಾದಿನ. ಬಂಧುಗಳೊಬ್ಬರ ಮನೆಯಲ್ಲಿ ಅದೇನೋ ವಿಶೇಷ ಕಾರ್ಯಕ್ರಮವಿತ್ತು, ಮುಗಿಸಿಕೊಂಡು ಬರುವಾಗ ಸಂಜೆ ೫ ಗಂಟೆ. ಪೇಟೆ ಸುಮಾರು ೫ ಕಿ.ಮಿ. ದೂರವಿತ್ತು. ಬರುವ ರಸ್ತೆಯಲ್ಲಿ ವಿಪರೀತ ಹೊಗೆ ತುಂಬಿಕೊಂಡಿತ್ತು. ನಮ್ಮ ಮುಂದೆ ಸಾಗುತ್ತಿದ್ದ ಕಾರು ಮುಂದೆ ರಸ್ತೆ ಕಾಣದೆ ನಿಂತಿತ್ತು. ನೋಡಿದರೆ, ರಸ್ತೆಯ ಪಕ್ಕದ ಕಾಡಿಗೆ ಬೆಂಕಿ ಹಚ್ಚಿದ್ದರು. ಗಾಳಿಯಿಲ್ಲದ ಕಾರಣ ಹೊಗೆ ನಿಧಾನಕ್ಕೆ ಮೇಲ್ಬಾಗದ ರಸ್ತೆಯಲ್ಲಿ ತುಂಬಿಕೊಂಡು ರಸ್ತೆಯನ್ನೇ ಬಂದ್ ಮಾಡಿ ಹಾಕಿತ್ತು. ಅಪಾಯವೇನು ಇರಲಿಲ್ಲವಾದರೂ, ರಸ್ತೆಯೇ ಕಾಣುತ್ತಿರಲಿಲ್ಲ. ಬೈಕಿನಲ್ಲಿ ಮುಂದೆ ಸಾಗಿದವನಿಗೆ ಉಸಿರು … Read more

ಬರವಣಿಗೆಯ ಶನಿವಾರವೂ ಜೋಗಿಯವ್ರ ಕಾಲಂಬರಿಯೂ: ಪ್ರಶಸ್ತಿ.ಪಿ.

ಕನಸೊಳಗೊಂದು ಕನಸು, ಅದರೊಳಗೆ ಮತ್ತೊಂದು, ಅದರೊಳಗೆ ಇನ್ನೊಂದು ಕನಸು. ಹೀಗೆ ಕನಸೊಳಗೆ ಕನಸ ಬಿತ್ತುತ್ತಲೇ ವಾಸ್ತವ ಕನಸುಗಳ ಪರಿವೆಯಿಲ್ಲದೇ ಕಥೆ ಕಟ್ಟುತ್ತಾ  ಸಾಗುವ ಸಿನಿಮಾವೊಂದಿದೆ ಇಂಗ್ಲೀಷಲ್ಲಿ,inception ಅಂತ. ವಾಸ್ತವ ಕನಸುಗಳ ಅರಿವಿಲ್ಲದಂತೆ ಸಾಗುವ ಅದಮ್ಯ ಪರಿಯದು. ಅದೇ ತರ ವಿಮರ್ಶೆಯ ಬಗ್ಗೆ ವಿಮರ್ಶೆ ಬರದ್ರೆ ? ಕತೆಗಾರನೊಬ್ಬನ ಕತೆ ಹುಟ್ಟಿದ ಬಗ್ಗೆಯೇ, ಕಥಾಸಂಕಲನದಲ್ಲಿ ಬಂದ ಕತೆಗಳ ಬಗ್ಗೆಯೇ ಒಂದು ಕತೆ ಬಂದ್ರೆ ? ಪಂಪಕಾವ್ಯದಲ್ಲಿ ಬರುವ ಕರ್ಣನ ಬಾಯಲ್ಲಿ ಬರುವ ಭಾನಾಮತಿಯ ದ್ಯೂತದ ಪ್ರಸಂಗದ ಬಗ್ಗೆ ಬರೆದ … Read more

ಬದುಕ್ ಸಾಯ್ರಿ: ಪ್ರವೀಣ್ ಎಸ್ ಕುಲಕರ್ಣಿ

    ಥತ್ತೇರಿಕೆ…!ಮತ್ತೆ ಫೇಲಾಗ್ ಬಿಟ್ನಾ. . ಚೆನ್ನಾಗೆ ಬರೆದಿದ್ನಲ್ಲ. . ಯಾಕೋ ಈ ದೇವರದು ಅತಿಯಾಯ್ತು. . ನನ್ನ ಸುಖವಾಗಿ ಬದುಕಲು ಬಿಡಲೇಬಾರದು ಅಂತ ಇದ್ರೆ ಯಾಕ್ ಹುಟ್ಟಿಸಿದ್ನೋ, ಮನೆಗೆ ಹೋಗಿ ಏನು ಮುಖ ತೋರಿಸೋದು. . . ಏನು. . . ?ಮತ್ತೆ ಲಾಸಾ. . . ಸರ್ಯಾಗ್ ನೋಡಿ ಹೇಳೋ, ಈ ಸಲಾ ಹೆಚ್ಚು ಕಮ್ಮಿ ಆದ್ರೆ ನಾನಷ್ಟೇ ಅಲ್ಲಾ ಅಪ್ಪ ಅಮ್ಮ ಹೆಂಡ್ತಿ ಮಕ್ಕಳು ಎಲ್ರೂ ಸೇರಿ ನೇಣು ಹಾಕ್ಕೋಬೇಕಾಗುತ್ತೆ. . … Read more

ನೆಮ್ಮದಿಯೆಂಬುದೊಂದು ಭಾವ..: ಪದ್ಮಾ ಭಟ್

ಮಧ್ಯಾಹ್ನದ ಬಿಸಿಲಿನಲ್ಲಿ , ಛತ್ರಿ ಹಿಡಿದು ಒಂದಷ್ಟು ದೂರ ಸಾಗಿದ್ದೆ. ರಸ್ತೆ ಬದಿಯಲ್ಲಿ ಟೆಂಟು ಹಾಕಿಕೊಂಡು , ಅರ್ಧ ಹರಿದ ಬಟ್ಟೆಯಲ್ಲಿದ್ದ ಹೆಂಗಸೊಬ್ಬಳು ರೊಟ್ಟಿ ಸುಡುತ್ತಿದ್ದರೆ,  ಪಕ್ಕದಲ್ಲಿಯೇ ಇದ್ದ ಮರಳು ರಾಶಿಯಲ್ಲಿ ಅವಳ ಇಬ್ಬರು ಮಕ್ಕಳು ಆಟವಾಡುತ್ತಿದ್ದರು.. ಆ ನಗುವು ಬಡತನವನ್ನೆಲ್ಲಾ ಮರೆಮಾಚಿತ್ತು. ಖುಷಿಯಿಂದಿರಲು ದುಡ್ಡು  ಬೇಕೆಂಬುದಿಲ್ಲ ಎಂಬುದನ್ನು ಮತ್ತೆ ಮತ್ತೆ ಹೇಳುವಂತಿತ್ತು.. ಸ್ವಲ್ಪ ಹೊತ್ತು ಅಲ್ಲಿಯೇ  ನಿಂತು ನೋಡುತ್ತಿದ್ದವಳಿಗೆ ಎಲ್ಲಾ ಇದ್ದೂ ಖುಷಿಯಿಂದಿರಲು ಸಾಧ್ಯವಿಲ್ಲ.. ಏನೂ ಇಲ್ಲದೇ ಇರುವ ಇವರು ಅದೆಷ್ಟು ನಗುತ್ತಿದ್ದಾರಲ್ಲ ಎಂದೆನಿಸಿದ್ದು ಸುಳ್ಳಲ್ಲ.  … Read more

ಸಾಮಾನ್ಯ ಜ್ಞಾನ (ವಾರ 55): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ದ.ರಾ.ಬೇಂದ್ರೆಯವರಿಗೆ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟ ಕೃತಿ ಯಾವುದು? ೨.    ನ್ಯಾಕೋ (NACO)ನ ವಿಸ್ತೃತ ರೂಪವೇನು? ೩.    ಚಲಿಸುತ್ತಿರುವ ವಾಹನಗಳ ವೇಗವನ್ನು ಕಂಡು ಹಿಡಿಯಲು ಬಳಸುವ ಸಾಧನ ಯಾವುದು? ೪.    ಧರ್ಮೇಶ್ವರಾ ಇದು ಯಾರ ಅಂಕಿತನಾಮವಾಗಿದೆ? ೫.    ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಅಧ್ಯಕ್ಷರಾದ ಮೊದಲ ಕನ್ನಡಿಗ ಯಾರು? ೬.    ಬರ್ಲಾಂಗ ಇದು ಯಾವ ರಾಜ್ಯದ ನೃತ್ಯ ಶೈಲಿಯಾಗಿದೆ? ೭.    ಧನುರ್ವಾಯು ರೋಗ ಬರಲು ಕಾರಣವಾಗುವ ಬ್ಯಾಕ್ಟೀರಿಯಾ ಯಾವುದು? ೮.    ಭಾರತದ ರಾಷ್ಟ್ರಪತಿ … Read more

ಸಂತೆಯೊಳಗೊಂದು ಸುತ್ತು: ಅನಿತಾ ನರೇಶ್ ಮಂಚಿ

ಸಂತೆ ಅಂದರೆ ಅದೇನೋ ಆಕರ್ಷಣೆ. ನಮಗೆ ಬೇಕಿರಲಿ ಬೇಡದೇ ಇರಲಿ ಸುಮ್ಮನೆ ಸಂತೆ ಸುತ್ತುವುದಿದೆಯಲ್ಲಾ ಅದರಷ್ಟು ಆನಂದ ನೀಡುವ ಕೆಲಸ ಇನ್ನೊಂದಿಲ್ಲ. ಅದೂ ಊರಲ್ಲೇ ನಡೆಯುವ ಉತ್ಸವಕ್ಕೆ ಸೇರುವ ಅಪಾರ ಜನಸ್ತೋಮದ ನಡುವೆ ಕಣ್ಮನ ಸೆಳೆಯುವ ವಸ್ತು ತಿನಿಸುಗಳನ್ನು ಮಾರುವ ಸಂತೆಯ ಅಂಗಡಿಗಳು ಅಂದ ಮೇಲೆ ದೇಹವು ಮನೇಯೊಳಗೇ ನಿಲ್ಲಲು ಅದೇನೂ ಕೊರಡಲ್ಲ ತಾನೆ?! ಚಪ್ಪಲಿ ಮೆಟ್ಟಿಕೊಂಡು ಹೊರಟೇ ಬಿಡುತ್ತದೆ.  ಸಂತೆಯ ಗಮ್ಮತ್ತು ಏನಿದ್ದರೂ ಹಗಲು ಸರಿದು ಇರುಳಿನ ಅಧಿಪತ್ಯ ತೊಡಗಿದಾಗಲೇ  ಚೆಂದ.  ಬಗೆ ಬಗೆಯ ದೀಪಾಲಂಕಾರದಲ್ಲಿ … Read more

ಮಾನ್ ಫ್ರಂ ದಿ ಅರ್ಥ್: ಸಚೇತನ

  ಮನುಷ್ಯ…   ದ್ವಂದ್ವ…  ಅತೀ ಪುರಾತನ ಕಾಲದಿಂದಲೂ ಮನುಷ್ಯನನ್ನು ಕಾಡುತ್ತಿರುವ ದ್ವಂದ್ವ ' ಮನುಷ್ಯನೆಂದರೆ ಯಾರು ?" ಸ್ಥಿತಿ ಗತಿ ಮಿತಿ ಪರಿಮಿತಿ. ಎಲ್ಲವನ್ನು ಎಲ್ಲ ಕಾಲದಲ್ಲಿಯೂ ಕಾಡಿದ ಪ್ರಶ್ನೆ. ' ಮನುಷ್ಯ'  ಮನುಷ್ಯನ ಉಗಮವಾಗಿ, ಅಭ್ಯುದಯವಾಗಿ ಪ್ರಾಣಿಗಳ೦ತಿದ್ದ ಮನುಷ್ಯ ಕಾಲ ಕ್ರಮೇಣ ಕ್ರೋ ಮ್ಯಾಗ್ನನ್  ಆಗಿ ತನ್ನನ್ನು ತಾನು ನಾಗರೀಕತೆಯ ಅಚ್ಚಿನಲ್ಲಿ ಎರಕಗೊಳಿಸುತ್ತ ಬಂದಂತೆ, ಮನುಷ್ಯನ ರೂಪವೂ ಬದಲಾಯಿತು: ದೈಹಿಕವಾಗಿ ಮಾನಸಿಕವಾಗಿ. ದೇಹದ ಸ್ನಾಯುಗಳ ಮಾಂಸಖಂಡಗಳ  ಜೊತೆಗೆ  ಮನಸ್ಸಿನ ಬೆಳವಣಿಗೆಯಾದಂತೆ ಸಂಕುಲಗಳೊಂದು, ವರ್ಣಗಳೊಂದು ಕಡೆ … Read more

ಗೋಪಾಲಾ …. ಗೋಪಾಲಾ…: ಅಮರ್ ದೀಪ್ ಪಿ.ಎಸ್.

ಬಳ್ಳಾರಿಯ ಕಾಳಮ್ಮ ಬೀದಿಯಿಂದ ಪಶ್ಚಿಮಕ್ಕೆ ಬಂದರೆ, ರಾಜರಾಜೇಶ್ವರಿ ಸಿನೆಮಾ ಥೀಯೇಟರ್.   ಮುಂದೆ ಮೋತಿ ವೃತ್ತ. ಥೀಯೇಟರ್ ಎದುರಿಗೆ ಬಹುಮಹಡಿ ಹೋಟಲ್ಲೊಂದರ ಕಾಮಗಾರಿ ನಡೆಯುತ್ತಿದೆ.  ಸಂಜೆ ಸಿನೆಮಾ ನೋಡಿ ಹೊರ ಬಂದವರು, ಸೆಕೆಂಡ್ ಷೋಗೆ ಹೋಗುವವರ ಜಂಗುಳಿ.  ಕತ್ತಲಲ್ಲಿ ಎದ್ದು ಕಾಣುವಂಥ ಮಲ್ಲಿಗೆಯ ಸರ ತಲೆಯಿಂದ ಎಳೆದು ಎದೆ ಮೇಲೆ ಬಿಟ್ಟುಕೊಂಡು ಒಂದೊಂದೇ ಪಕ್ಕಳೆಯನ್ನು ಕಿತ್ತುತ್ತಾ, ಮುಸುತ್ತಾ ಆಕರ್ಷಿಸುವ ಒಂದಿಷ್ಟು ನಿತ್ಯ ಮುತ್ತೈದೆಯರು.   ಅಲ್ಲಲ್ಲಿ ಕಣ್ಣಾಡಿಸುತ್ತಲೇ ತಿರುಗುವ ವಿಟರು. ಗದ್ದಲದಲ್ಲೇ ಕೈ ಚಳಕ ತೋರಿಸಿ ಜೇಬು … Read more

ಅಡುಗೆಯ ಅವಾಂತರಗಳು: ಸ್ಮಿತಾ ಅಮೃತರಾಜ್

ಅಡುಗೆ ಮಾಡುವುದರಲ್ಲಿ ನಮ್ಮ ಗೃಹಿಣಿಯರು ಎಷ್ಟೇ ಪಳಗಿದರೂ, ಪರಿಣಿತಿಯನ್ನು ಪಡೆದುಕೊಂಡರೂ ಕೆಲವೊಮ್ಮೆ ಗಡಿಬಿಡಿಯಲ್ಲಿ ಅಡುಗೆ ತಯಾರು ಮಾಡುವಾಗ ಎಡವಟ್ಟಾಗಿ ಪಾಕವೇ ಬದಲಾಗಿ ಹೊಸ ರುಚಿಯೇ ಉದ್ಭವಗೊಳ್ಳುವಂತಹ ಪರಿಸ್ಥಿತಿಗಳು ಬಂದೊದಗಿ ಬಿಡುತ್ತದೆ. ಬಹುಷ; ಇದಕ್ಕೆ ಯಾವ ಮನೆಯಾಕೆಯೂ ಹೊರತಾಗಿಲ್ಲ ಅನ್ನಿಸುತ್ತೆ.  ಮೊದ ಮೊದಲೆಲ್ಲಾ ತೀರಾ ಸಾಂಪ್ರದಾಯಿಕ ಅಡುಗೆಗಳು. ಹಾಗಾಗಿ ಇಂತಿಂತ ಖಾದ್ಯಕ್ಕೆ ಇಂತಿಂತದೇ ರುಚಿ ದಕ್ಕುತ್ತದೆ ಅಂತ ಕರಾರುವಕ್ಕಾಗಿ ಹೇಳಿ ಬಿಡಬಹುದಾಗಿತ್ತು. ಅಡುಗೆ ಮಾಡುವಾಗ ಸಾಕಷ್ಟು ಏಕಾಗ್ರತೆಯನ್ನು ಮೈಗೂಡಿಸಿ ಕೊಳ್ಳಬೇಕಾಗಿತ್ತು. ಮನಸ್ಸು ಕೊಂಚ ವಿಚಲಿತವಾಗಿ ಹಾಕುವ ಸಾಮಾಗ್ರಿ ತುಸು … Read more

ಪ್ರೀತಿ, ಪ್ರೇಮ, ಪ್ರಣಯ: ಗಣೇಶ್ ಖರೆ

೧. ನನಗಾಗ ಹದಿನೆಂಟು, ಅವಳಿಗೋ ಹದಿನೈದಿರಬಹುದು. ನೋಡಲು ಸುರಸುಂದರಿ. ಇನ್ನೇನು ಬೇಕು ಪ್ರೇಮಾಂಕುರವಾಗಲು? ನಮ್ಮ ಪ್ರೇಮಕ್ಕೆ ಕೆಲ ವರುಷಗಳೇ ಕಳೆದವು, ಅವಳಿಗೂ ನನ್ನ ಮೇಲೆ ಪ್ರೀತಿಯಿತ್ತು, ನನ್ನ ನೋಡಿದಾಗೆಲ್ಲ ಅವಳು ಬೀರುವ ಮುಗುಳ್ನಗೆಯೇ ಅದಕ್ಕೆ ಸಾಕ್ಷಿ. ಒಬ್ಬರಿಗೊಬ್ಬರು ಎಂದೂ ಪ್ರೇಮದ ಪ್ರಸ್ತಾಪವನ್ನು ಮಾಡಲಿಲ್ಲ. ಕೊನೆಗೆ ನಾನೇ ಮಡಿದೆ, ಅವಳಿಗೆ ಗುಲಾಬಿ ಕೊಟ್ಟಾಗ ನನಗೆ ವಯಸ್ಸು ಇಪ್ಪತ್ತೈದು. ಗುಲಾಬಿ ಪಡೆದು ನಾಚಿ ನಡೆದಿದ್ದಳು, ಅವಳ ಸಮ್ಮತಿ ಕಣ್ಣಲ್ಲೇ ವ್ಯಕ್ತಪಡಿಸಿದ್ದಳು. ಅಂದಿನಿಂದ ಇಂದಿನವರೆಗೂ ಪ್ರತಿ ವರ್ಷ ಅವಳಿಗೆ ಗುಲಾಬಿ ಅರ್ಪಿಸುತ್ತಿದ್ದೇನೆ. … Read more

ಮೂವರ ಕವಿತೆಗಳು

 ನನ್ನ ಅಪ್ಪ ಅಪ್ಪ ಶಬ್ದ ಕೇಳಿದಾಗ ನೆನಪಾಗುವ, ಮೊದಲ ಪ್ರಿಯ ದೇವರು ನೀವು, ನನ್ನ ಬಾಳ ಬಲಹೀನ ಕ್ಷಣಗಳ ಮಳೆಗೆ, ಬಲಿಷ್ಟವಾದ ಆಸರೆಯ ಕೊಡೆ ನೀವು, ನನ್ನ ಎದೆಯ ವೈಭವ ಗೋಪುರದ, ಹೆಮ್ಮೆಯ ಸುವರ್ಣ ಕಳಸವು ನೀವು, ನನ್ನ ಜೀವನದ ಹುಡುಕಾಟದ ಗುರಿ, ನಿಮ್ಮ ಮೊಗದ ಚಿರು ನಗುವಿನಲ್ಲಿ ಅಡಗಿರುವುದು, ನಿಮ್ಮ ಕರುಣೆಯ ಆಳವನು ಹೇಗೆ ಅರಿಯಲಿ, ಅದು ನನಗೆ ಚಿದಂಬರ ರಹಸ್ಯವಾಗಿದೆ. –ಬಿ.ಸಿ.ಪ್ರಮೋದ. ಎಮ್.ಟೆಕ್. ಎನ್.ಐ.ಟಿ.ಕೆ. ಸುರತ್ಕಲ.           ಅವಳು….??? … Read more

ತಿರಸ್ಕಾರ (ಭಾಗ 1): ಜೆ.ವಿ.ಕಾರ್ಲೊ, ಹಾಸನ

ಮೂಲ: ಡಬ್ಲ್ಯು. ಸಾಮರ್ಸೆಟ್ ಮ್ಹಾಮ್. ಕನ್ನಡಕ್ಕೆ: ಜೆ.ವಿ.ಕಾರ್ಲೊ, ಹಾಸನ (ಬ್ರಿಟಿಶ್ ಲೇಖಕ ಡಬ್ಲ್ಯು. ಸಾಮರ್ಸೆಟ್ ಮ್ಹಾಮ್ (೧೮೭೪-೧೯೬೫) ಹುಟ್ಟಿದ್ದು ಪ್ಯಾರಿಸಿನಲ್ಲಿ. ತನ್ನ ಕುಟುಂಬದ ಸಂಪ್ರದಾಯದಂತೆ ಅವನು ವೃತ್ತಿಯಲ್ಲಿ ವಕೀಲನಾಗಬೇಕಿತ್ತು. ಹುಟ್ಟಿನಿಂದಲೇ ತೊದಲುವಿಕೆಯ ಕಾರಣಗಳಿಂದ ಅವನು ವಕೀಲನಾಗಲಿಲ್ಲ. ಹತ್ತು ವರ್ಷಗಳಲ್ಲೇ ಅನಾಥನಾದ್ದರಿಂದ ಅವನನ್ನು ಅವನ ಚಿಕ್ಕಪ್ಪ ಇಂಗ್ಲೆಂಡಿನಲ್ಲಿ ಸಾಕಿದರು. ಅವನು ಕಲಿತದ್ದು ವೈಧ್ಯ ಶಿಕ್ಷಣವಾದರೂ ಅವನ ಆಸಕ್ತಿ ಸಾಹಿತ್ಯದಲ್ಲಿತ್ತು. ಲೇಖಕನಾಗಿ ಹೆಸರು, ಹಣ ಗಳಿಸಲು ಅವನಿಗೆ ಬಹಳಷ್ಟು ವರ್ಷಗಳೇ ಹಿಡಿದವು. ಕಾದಂಬರಿಕಾರನಾಗಿ, ಸಣ್ಣ ಕತೆಗಾರನಾಗಿ ಹೆಸರುಗಳಿಸುವ ಮೊದಲು ಅವನು … Read more

ಹೋಳಿ ಹುಣ್ಣಿಮೆಯ ಬಣ್ಣ,ಬಣ್ಣ ನೆನಪುಗಳು…!: ನಾರಾಯಣ ಬಾಬಾನಗರ

ಇಲ್ಲಿಯವರೆಗೆ ‘’ಹೋಗಿ ಹೋಗಿ ಈಗ್ಯಾಕ ಹೋಳಿ ಹುಣ್ಣಿವಿ ನೆಪ್ಪ ತಗದಾನ ಈ ಆಸಾಮಿ..’’ಅಂತ ಮನಸಿನ್ಯಾಗ ಗೊಣಗಬ್ಯಾಡ್ರಿ…ನನಗೂ ಗೊತ್ತೈತಿ ಹೋಳಿ ಹುಣ್ಣಿವಿ ಬರೂದು ಇನ್ನಾ ಭಾಳ ಮುಂದ ಐತೆನ್ನೂದು.ಹುಸೇನಿ ನೆನಪಾದ ಕೂಡಲೆ ಅಂವಾ ಭಾಗವಹಿಸಿದ ಹೋಳಿ ಹುಣ್ಣಿವಿ ನೆನಪಾಗತೈತಿ…ಅದರ ಹಿಂದ್ಹಿಂದ್ಹ ಹೋಳಿ ಹುಣ್ಣಿವಿಯ ನೆನಪುಗಳು ಕುಣಕೋತ ಮನದಾಗ ತೇಲಿ ಹೋಗತಾವ… ಹೋಳಿ ಹುಣ್ಣಿವಿ ಹಿಂದಿನ ಅಮಾಸಿ(ಆ ಅಮಾಸಿಗಿ ಏನಂತ ಹೆಸರೈತೋ…ನೆನಪಾಗೊಲ್ಲತು…ಅದನ್ನ ಕಾಮಣ್ಣನಿಗೆ ಬಿಟ್ಟು ಬಿಡೂಣಂತ)ಕಳದು ಚಂದ್ರಾಮನೆಂಬೋ ಚಂದ್ರಾಮ ಯಾವಾಗ ಮುಗಿಲಿನಾಗ ಹಣಿಕಿ ಹಾಕಿದನೋ,ಹಲಿಗಿಗಳು ಹೊರ ಬಂದು ಸಪ್ಪಳಾ ಮಾಡಾಕ … Read more

ನಶೆಯ ನಿಶೆಯಲ್ಲಿ: ಪ್ರಶಸ್ತಿ.ಪಿ,

ಕಿಟಕಿಯ ಕಂಬಿಗಳಿಗೆ ಒಣಗಿಸಿದ ಕರ್ಚೀಪು, ಟವೆಲುಗಳ ಸಂದಿಯಿಂದಲೇ ಇಣುಕಿದ್ದ ಸೂರ್ಯ, ಬಂಡೆಗಳ ಬಿರುಕಲ್ಲೇ ಅರಳೋ ನ್ಯಗ್ರೋಧದಂತೆ. ಅಲಾರಮ್ಮನ್ನೇ ಮೂರು ಬಾರಿ ಮಲಗಿಸುತ್ತಿದ್ದ ಆ ಮಲಗುವೀರನ ಕಷ್ಟಪಟ್ಟು ಎಬ್ಬಿಸುತ್ತಿದ್ದ ನಿತ್ಯದ ಆ ಸೂರ್ಯರಶ್ಮಿಗಳಿಗೂ ಅಂದ್ಯಾಕೋ ಆತ ಮಲಗಿದ್ದ ಪರಿ ಕಂಡು ಅಯ್ಯೋ ಪಾಪ ಅನಿಸಿತ್ತು. ರಾತ್ರಿಯ ಚಳಿಗೋ, ಬಿದ್ದ ಕೆಟ್ಟ ಕನಸಿಗೋ ನಡುಗಿ, ಕಾಲುಗಳ ನಡುವೆ ಕೈಯಿಟ್ಟು ಮುದುರಿ ಮಲಗಿರೋ ಮಗುವ ಕಂಡು ಕರಗಿದ ತಾಯಿಯ ಅಂತಃಕರಣದಂತಾಗಿತ್ತು ರವಿಯ ಕಿರಣಗಳ ಕತೆಯಿಂದು. ಈತನ ರೂಮ ಹೊಕ್ಕ ಅವು ನಿತ್ಯದಂತೆ … Read more