editor
ಬುಂಡೆದಾಸನೆಂಬ ಹುಚ್ಚಯ್ಯ: ಹೃದಯಶಿವ
ನಾನು ಹದಿನಾರನೇ ವಯಸ್ಸಿಗೆ ಹಳ್ಳಿಗಳನ್ನು ಬಿಟ್ಟಿದ್ದರೂ ಹಳೆಯ ಪರಿಚಿತರು ಮದುವೆ, ಗೃಹಪ್ರವೇಶ, ನಾಮಕರಣ, ಶಾಲಾಕಾಲೇಜುಗಳ ಸಮಾರಂಭ ಅಥವಾ ಯಾರಾದರು ಸತ್ತರೆ ಕರೆಯುತ್ತಾರೆ; ನನ್ನ ಬೇರುಗಳು ಎಂದಿಗೂ ಹಳ್ಳಿಗಳಲ್ಲಿಯೇ ಇರುವುದರಿಂದ ಇದೆಲ್ಲಾ ಸರ್ವೇ ಸಾಮಾನ್ಯ. ನನಗೆ ಸಾವಿನ ಮನೆಗಳ ಬಗ್ಗೆ ಬೇಜಾರು. ಏಕೆಂದರೆ ನನಗದು ನಾಟಕದ ವಾತಾವರಣದ ನೆನಪು ತರುತ್ತದೆ. ಜೀವಂತವಾಗಿದ್ದಾಗ ಎಷ್ಟೋ ಸಲ ಮಕ್ಕಳ, ಸೊಸೆಯಂದಿರ ಕಾಲು ಕಸವಾಗಿ ಬದುಕಿದ ವೃದ್ಧರ ಹೆಣದ ಮುಂದೆ ಅವರ ಬಂಧುಗಳೆನಿಸಿಕೊಂಡವರೆಲ್ಲಾ ಕೂತು ಗೊಳೋ ಅಂತ ಅಳುವ ಪ್ರೊಫೆಶನಲ್ ಪಾತ್ರಧಾರಿಗಂತೆ … Read more
‘ಮುನ್ನಿ’ಯ ಕಾರ್ ಗ್ರಾಫಿಟಿ: ಆದರ್ಶ ಸದಾನ೦ದ ಅರ್ಕಸಾಲಿ
ಇನ್ನೇನು ಹಾಸ್ಪಿಟಲ್ ಗೆ ಹೋಗ್ಬೇಕು, ಅವಸರದಲ್ಲಿ ಕಾರಿನ ಕೀಲಿಯನ್ನು ತೆಗೆದುಕೊ೦ಡು, ಬ್ಯಾಗನ್ನು ತೆಗೆದುಕೊ೦ಡು ಹೊರಡುವದರಲ್ಲಿದ್ದೆ, ಅಷ್ಟರಲ್ಲಿ ಗೇಟಿನಲ್ಲಿ ನೈಟಿಯಲ್ಲೊ೦ದು ಹೆ೦ಗಸಿನ ಆಕಾರ ಪ್ರತ್ಯಕ್ಷವಾಯಿತು. "ಡಾಕ್ಟ್ರು ಹೋಗುವದರಲ್ಲಿದ್ದೀರಾ?" ಏದುರುಸಿಕೊ೦ಡು ಕೇಳಿತು. "ಹೌದು" ( ಎಪ್ರನ್ ಹಾಕಿ, ಹಾಸ್ಪಿಟಲ್ ಬ್ಯಾಗನ್ನು ಹಾಕಿಕೊ೦ಡು, ಈ ರೀತಿ ವೇಷದಲ್ಲಿ ಮದುವೆ ಮೆರವಣಿಗೆಗಾ ಹೊರಟಿದ್ದೀನಿ? ) "ಒ೦ದ್ನಿಮ್ಷ ತಡಿರಿ, ಸಿಟ್ಟು ಮಾಡ್ಕೋಬೇಡಿ" ಮನಸ್ಸಿನಲ್ಲಿ ಒ೦ದು ರೀತಿಯ ಸಿಟ್ಟು ಬ೦ದರೂ, ಮುಖದಲ್ಲಿ ಅದರ ಗ೦ಧ ಸ್ವಲ್ಪವೂ ಸುಳಿಯದ೦ತೆ, ಮುಗುಳ್ನಗುತ್ತಾ "ಏನಾಗಬೇಕಿತ್ತು? " ಅ೦ತ ನನಗೊತ್ತಿರೋ ಅತೀವ … Read more
ಆ ಆಕೃತಿ…!: ಬಸವರಾಜು ಕ್ಯಾಶವಾರ
ಸಮಯ: ರಾತ್ರಿ 9.10 ಸ್ಥಳ: ಕಸ್ತೂರಬಾ ರಸ್ತೆ, ಕಂಠೀರವ ಕ್ರೀಡಾಂಗಣದ ಹತ್ತಿರ “ಧಗ್” ಅಂತು. ಥೇಟ್ ಬಂಡೆ ಕವನದಂತೆ; ಒಂದು ಬೆಂಕಿ ಕಡ್ಡಿ ತಲೆ ಸುಟ್ಟುಕೊಂಡು ಸತ್ತಿತ್ತು, ಕತ್ತಲಿನ ಜೊತೆ. ತೆಳು ಬಿಳಿ ಬಟ್ಟೆ ಸುತ್ತಿಕೊಂಡಿದ್ದ ಅಪ್ಸರೆಗೆ ಬೆಂಕಿ ಹಚ್ಚಲಾಗಿತ್ತು. ಆ ಅಪ್ಸರೆಯ ತಲೆ ಆ ಕೆಂದುಟಿಗಳನ್ನು ನುಂಗಿ ಹಾಕಿದ್ದವು. ಆ ಎರಡು ಕಣ್ಣುಗಳು ತಣ್ಣಗೆ ರೆಪ್ಪೆ ಬಡಿಯುತ್ತಿದ್ದವು. ಕತ್ತಲಿನ ಮಧ್ಯೆ ಆ ಬಿಳಿಗುಡ್ಡೆಗಳು ಕಬ್ಬನ್ ಪಾರ್ಕ್ ನ ಕಬ್ಬಿಣದ ಬೇಲಿಯ ಹಿಂದಿನಿಂದ ನನ್ನನ್ನೇ ನೋಡುತ್ತಿದ್ದವು. ಆ … Read more
ಬೆಂಬಿಡದ ಭೂತ: ಗುರುಪ್ರಸಾದ ಕುರ್ತಕೋಟಿ
(ಅತೀಂದ್ರಿಯ ಅನುಭವದ ಕಥೆಗಳು – ಭಾಗ ೬) ಈ ಕಥೆ ನನ್ನ ಸಹೋದ್ಯೋಗಿ ರಮೇಶ ನಾಯಕ ಅವರಿಗಾದ ಅನುಭವದ ಎಳೆಯ ಮೇಲೆ ಹೆಣೆದದ್ದು — ನಾನು ಹುಟ್ಟಿ ಬೆಳೆದು ದೊಡ್ಡವನಾಗಿದ್ದು ಭಟ್ಕಳದಲ್ಲಿ. ನಮ್ಮ ಮನೆಯಿಂದ ಎಡವಿ ಬಿದ್ದರೆ ಸಮುದ್ರ! ಅಂದರೆ ಅದು ಅಷ್ಟು ಹತ್ತಿರದಲ್ಲಿದೆ ಅಂತ ಅರ್ಥ. ಅದು ಬೇರೆಯವರಿಗೆ ಕೇಳೋಕೆ ಚಂದ. ಪರ ಊರಿನಿಂದ ಒಂದೆರಡು ದಿನಕ್ಕೆ ಅಂತ ನಮ್ಮೂರಿಗೆ ಬಂದವರಿಗೆ ಸಮುದ್ರಕ್ಕೆ ಹೋಗಿ ಸ್ನಾನ ಮಾಡಲು ಅಡ್ಡಿ ಇಲ್ಲ. ಅಲ್ಲೇ ಇರೋವ್ರಿಗೆ ಕಷ್ಟ. ಅದರ … Read more
ಟನ್ನು ಭಾರದ ಖುಷಿ ಹೊರುವಂತಿರಬೇಕು ಟ್ರಿಪ್ಪು: ಅಮರ್ ದೀಪ್ ಪಿ.ಎಸ್.
ಒಂದೇ ಕಡೆ ಅದೇ ಕೆಲಸ, ಅದೇ ರಸ್ತೆ, ಓಡಾಟ, ಮನೆ, ಮಂದಿ, ಮಾತು, ಜೀವನ ಕ್ರಮ ಒಮ್ಮೊಮ್ಮೆ ಬೋರಾಗುತ್ತೆ. ಆಗಾಗ ಒಂದೆರಡು ದಿನಗಳ ಮಟ್ಟಿಗಾದರೂ ಹೊರಗಡೆ ತಿರುಗಾಡಿ ಬರಬೇಕು. ಹೋಗಿ ಬಂದೆವೆಂದರೆ, ಮನಸ್ಸು ದಿಗ್ಗನೇ ಎದ್ದು "ನಾನ್ ಫ್ರೆಶ್ ಆದ್ನೆಪ್ಪಾ" ಅಂತೇನೂ ಹೇಳುವುದಿಲ್ಲ. ಆದರೆ, ಗೆಳೆಯರು ಸೇರಿ ರುಟೀನು ತಪ್ಪಿಸಿಕೊಂಡ ಖುಷಿಗೋ ಅಥವಾ ಹೊಸ ಜಾಗ, ಸಧ್ಯಕ್ಕೆ ಹತ್ತಿರವಿಲ್ಲದ ಕೆಲಸ, ದುಡಿಮೆ, ಟೆನ್ಶನ್ ಎಲ್ಲಾನು ಮರೆತು ಖುಷ್ ಖುಷಿಯಾಗಿ ಪರಿಸರ, ನದಿ ತೀರ, ಐತಿಹಾಸಿಕ ಸ್ಥಳ, … Read more
ಹುಲಿಯೋ, ಸುಂದರಾಂಗಿಯೋ?: ಜೆ.ವಿ.ಕಾರ್ಲೊ
ಹುಲಿಯೋ, ಸುಂದರಾಂಗಿಯೋ? ಮೂಲ: ಫ್ರ್ಯಾಂಕ್ ಸ್ಟೊಕ್ಟನ್ ಅನುವಾದ: ಜೆ.ವಿ.ಕಾರ್ಲೊ ಬಹಳ ಬಹಳ ವರ್ಷಗಳ ಹಿಂದೆ ಒಬ್ಬ ರಾಜ ರಾಜ್ಯವನ್ನಾಳುತ್ತಿದ್ದ. ತನ್ನ ನೆರೆಯ ಲ್ಯಾಟಿನ್ ಸಾಮ್ರಾಜ್ಯದ ಪ್ರಭಾವದಿಂದಾಗಿ ಅವನು ತೋರಿಕೆಗೆ ನಾಗರಿಕನಾಗಿ ಕಾಣುತ್ತಿದ್ದನಾದರೂ, ಮೂಲತಃ ತುಂಬಾ ಕ್ರೂರಿಯಾಗಿದ್ದ, ಚಂಚಲ ಸ್ವಭಾವದವನಾಗಿದ್ದ. ಯಾವ ಗಳಿಗೆಯಲ್ಲಿ ಅವನ ಯೋಚನೆಗಳು ಹೇಗೆ ತಿರುಗುತ್ತವೆಂದು ಊಹಿಸಲು ಯಾರಿಗೂ ಸಾಧ್ಯವಿರಲಿಲ್ಲ. ಅವನೇ ಅವನ ಆಪ್ತ ಸಲಹಾಕಾರನಾಗಿದ್ದ ಮತ್ತು ಆ ಗಳಿಗೆಯಲ್ಲೇ ತೀರ್ಮಾನಿಸಿ ಜಾರಿಗೊಳಿಸುತ್ತಿದ್ದ. ಅವನ ರಾಜ್ಯಭಾರ ಯಾವುದೇ ಅಡ್ಡಿ ಆತಂಕಗಳಿಲ್ಲದೆ ಸರಾಗವಾಗಿ ನಡೆಯುತ್ತಿದ್ದರೆ ಅವನು ತುಂಬಾ … Read more
ಕ್ರಾಂತಿಯೆಂಬ ಭ್ರಾಂತಿ: ಅಖಿಲೇಶ್ ಚಿಪ್ಪಳಿ
ರೈತನಿಗೆ ಮಣ್ಣಿನ ಮಗ ಎನ್ನುತ್ತಾರೆ. ರೈತ ದೇಶದ ಬೆನ್ನೆಲುಬು ಎಂದು ಹೊಗಳಿದ್ದಾರೆ. ಈ ದೇಶದಲ್ಲಿರುವ ೧೨೦ ಕೋಟಿ ಜನಸಂಖ್ಯೆಯ ಸಿಂಹಪಾಲು ಮಂದಿ ರೈತಾಪಿ ವೃತ್ತಿಯನ್ನೇ ಅವಲಂಬಿಸಿಕೊಂಡು ಬದುಕುತ್ತಿದ್ದಾರೆ. ಆದರೆ ಅನ್ನದಾತನ ಬದುಕು ಹೇಗಿದೆ? ಗ್ರಾಮೀಣ ಭಾರತದ ರೈತ ಹೇಗಿದ್ದಾನೆ? ಪ್ರಪಂಚದ ಎಲ್ಲಾ ಸಾಂಪ್ರಾದಾಯಿಕ ರೈತರ ಬದುಕು ವಾತಾವರಣವನ್ನು ಅವಲಂಭಿಸಿದೆ. ಭಾರತದ ಕೃಷಿ ಪ್ರದೇಶದ ೭೦% ಪ್ರದೇಶ ಮಳೆಯಾಧಾರಿತವಾಗಿದೆ. ಕಾಲ-ಕಾಲಕ್ಕೆ ಮಳೆಯಾದರೆ ಮಾತ್ರ ರೈತನ ಬದುಕು ತುಸು ಹಸನಾಗುತ್ತದೆ. ಬೀಜ ಬಿತ್ತುವಾಗ ಬರಗಾಲ, ಕೊಯ್ಲಿನ ಸಂದರ್ಭದಲ್ಲಿ ಅತಿವೃಷ್ಟಿಯಾದಲ್ಲಿ ರೈತನ … Read more
ಮೂರು ಕವಿತೆಗಳು: ಚೆನ್ನ ಬಸವರಾಜ್, ನವೀನ್ ಪವಾರ್, ವಾಮನ ಕುಲಕರ್ಣಿ
ಕೊಕ್ ಕೊಕ್ ಕೊಕ್ಕೋ….!! ಲೇ… ಕುಮುದಾ, ಜಾಹ್ನವಿ, ವೈಷ್ಣವಿ ಎದ್ದೇಳ್ರೇ… ಬೆಳಗಾಯ್ತು ; ಕೋಳಿ ಮನೆಯೊಳಗೆಲ್ಲೋ.. ಬಂದು, ಕೊಕ್ ಕೊಕ್ ಕೊಕ್ಕೋ…. ಎಂದು ಕೂಗಿದ ಸದ್ದು ಹಾಳಾದ್ದು ಅದ್ಹೇಗೆ ಮನೆ ಹೊಕ್ಕಿತೋ… ಏನೋ? ಎಲ್ಲಾ ನನ್ನ ಪ್ರಾರಬ್ಧ ಕರ್ಮ ಇನ್ನೇನು ಕಾದಿದೆಯೋ ಇದ ಕೇಳಿಸಿಕೊಂಡು ಅಕ್ಕಪಕ್ಕದವರು ನಗದಿರರು ನಮ್ಮ ಏನೆಂದು ತಿಳಿದಾರು, ಅನುಸೂಯಮ್ಮನ ಮೊಮ್ಮಕ್ಕಳು ಕೋಳಿ ತಿನ್ನುವರೆಂದು ಊರೆಲ್ಲಾ ಹೇಳಿ ಕೊಂಡು ತಿರುಗಾಡಿದರೆ ಇನ್ನು ನಾ ತಲೆಯೆತ್ತಿ ಹೊರಗೆಲ್ಲೂ ಓಡಾಡುವಂತಿಲ್ಲ ಅಯ್ಯೋ …. ಅಜ್ಜೀ… ಸುಮ್ಮನೆ ಮಲಗ … Read more
ಅಳುವಿನಲ್ಲಡಗಿದೆ ಬಾಳು: ಸಂಗೀತ ರವಿರಾಜ್
ಹೀಗೊಂದು ಶುಭನುಡಿಯಿದೆ " ಒಂದೇ ಹಾಸ್ಯದ ಬಗ್ಗೆ ಮತ್ತೆ ಮತ್ತೆ ನಗುವುದಿಲ್ಲವಾದರೆ, ಒಂದೇ ಸಂಗತಿ ಬಗ್ಗೆ ಮತ್ತೆ ಮತ್ತೆ ಅಳುವುದ್ಯಾಕೆ? ಮತ್ತೆ ಮತ್ತೆ ತೇಲಿ ಬರುವ ಅಳು ಒಂದು ರೀತಿಯಲ್ಲಿ ಅಪ್ಯಾಯಮಾನವಾದ ಸಂಗತಿ. ಅಳುವೆನ್ನುವುದು ಮನುಷ್ಯನ ಎಲ್ಲಾ ಮೂಲಭೂತ ಕ್ರಿಯೆಗಳಂತೆ ಸಹಜವೋ? ಅದೊಂದು ಕಲೆಯೋ? ಸಾಂಧರ್ಭಿಕವೋ? ತಿಳಿಯಲೊಲ್ಲುದು. ಆದರು ಬೇಸರವಾದಾಗ ಅಳುವುದು ಮಾತ್ರ ಸಹಜ. ಅಳುವ ಗಂಡಸರನ್ನು ನಂಬಬೇಡ ಎನ್ನುತ್ತದೆ ಗಾದೆ. ಈ ಗಾದೆ ಚಾಲ್ತಿಗೆ ಹೇಗೆ ಬಂತೆಂದು ಯೋಚಿಸಿದರೆ ಅಳು ಯಾವಾಗಲೂ ಹೆಣ್ಣಿಗೆ ಕಟ್ಟಿಟ್ಟ ಬುತ್ತಿ … Read more
ಗುರುಭ್ಯೋ ನಮ: ಪ್ರಶಸ್ತಿ
ಬದುಕ ಪಯಣಕೆ ಬೆಳಕನಿತ್ತಿಹ ಪ್ರಣತಿ ಗುರುವರ್ಯ ಹುಡುಗು ಮುದ್ದೆಯ ಪ್ರತಿಮೆಯಾಗಿಸಿ ನಿಂತ ಆಚಾರ್ಯ ಸಕಲವಿದ್ಯೆಯ ಮಳೆಯಗಯ್ದಿಹೆ ಮುನಿಸ ಮೋಡದಲಿ ಕಷ್ಟ ಸುಡುತಿರೆ, ಜೀವವಳುತಿರೆ ಸಹಿಸಿ ಮೌನದಲಿ ನಳಿನಿ ಮೇಲಣ ಹನಿಯ ತರದಲಿ ತಪ್ಪ ಮಸ್ತಕದಿ ಸರಿಸಿ ಹರಿಸಿದೆ ಜ್ಞಾನ ಬೆಳಕನು ತೊಳೆದ ಬುದ್ದಿಯಲಿ |೧| ಅರಿವಿಗೆ ನಿಲುಕದ ಮಾತುಗಳಲ್ಲಿ ಗುರುವಿನ ನಿಲುವುಗಳೆಷ್ಟಿಹುದೋ ಕತ್ತಲ ಪಥದಲೂ ಹಾಕುವ ಹೆಜ್ಜೆಯ ತಿದ್ದಿಹ ಬುದ್ದಿಗಳೆಷ್ಟಿಹುದೊ ಶಿಸ್ತನು ಕಲಿಸಿದೆ, ಬುದ್ದಿಯ ಬೆಳೆಸಿದೆ ಸವಾಯೀಯುತಲೆ ಜಡಮನಕೆ ತೊಲಗಿಸಿ ಮೌಢ್ಯತೆ, ಮೂಡಿಸಿ ಐಕ್ಯತೆ ನನ್ನನು ತೆರೆದಿಹೆ … Read more
ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು: ಪದ್ಮಾ ಭಟ್, ಇಡಗುಂದಿ
ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು ಬಳಸಿಕೊಂಡೆವದನೆ ನಾವು ಅದಕು ಇದಕು ಎದಕು.. ದ.ರಾ ಬೇಂದ್ರೆಯವರ ಈ ಹಾಡಿನ ಸಾಲು ಪದೇ ಪದೇ ನೆನಪಾಗತೊಡಗಿತ್ತು.. ಗೆಳೆಯಾ ಬಹುಶಃ ಪ್ರೀತಿ ಎಂಬ ಪದಕ್ಕೆ ಎಷ್ಟು ಆಪ್ತವಾದ ಸಾಲುಗಳು ಇವು ಅಲ್ವಾ? ಬದುಕಿನಲ್ಲಿ ಎಲ್ಲವೂ ಇದ್ದು ಪ್ರೀತಿಯೇ ಇಲ್ಲದಿದ್ದರೆ ಏನು ಚಂದ ಹೇಳು, ಆದರೆ ಬಡತನದಲ್ಲಿಯೂ ಪ್ರೀತಿಯಿದ್ದರೆ, ಅದನ್ನೇ ಎಲ್ಲಾದಕ್ಕೂ ಬಳಸಿಕೊಳ್ಳಬಹುದು..ಪ್ರೀತಿಯಿಂದ ಹೊಟ್ಟೆ … Read more
ಕಾಣದ ಅಪ್ಪನಿಗೆ: ಲಾವಣ್ಯ ಆರ್.
ಅಪ್ಪ, ಚಿಕ್ಕಂದಿನಲ್ಲಿ ಈ ಎರಡು ಅಕ್ಷರಗಳು ನನ್ನ ಮನಸ್ಸಿನಲ್ಲಿ ನೆಲೆಯೂರುವಂತೆ ನೀನು ಮಾಡಲಿಲ್ಲ, ನಾ ತೊದಲು ನುಡಿವಾಗ ನೀ ಬಂದು ಮುದ್ದಾಡಲಿಲ್ಲ, ನಡಿಗೆ ಕಲಿವ ಬರದಲ್ಲಿ ಬಿದ್ದಾಗ ನೀ ಬಂದು ನನ್ನ ಎತ್ತಿ ಸಂತೈಸಲಿಲ್ಲ, ಅಮ್ಮ ನನ್ನ ಹೊಡೆವಾಗ ನೀ ಬಂದು ಬಿಡಿಸಲು ಇಲ್ಲ, ಹಾಗೆಂದು ನಾನೆಂದಿಗೂ ನೀನು ಬೇಕೆಂದು ಬಯಸಲಿಲ್ಲ, ಒಂದುವೇಳೆ ಮನಸ್ಸು ನಿನ್ನ ಬಯಸಿದರು ಅದರ ಆಸೆಯನ್ನು ಶಮನಗೊಳಿಸುವಲ್ಲಿ ನಾನು ಯಶಸ್ವಿಯಾದೆ. ಆದರೂ ಅಪ್ಪ ನಿನ್ನಿಂದ ಅನುಭವಿಸಿದ ನೋವುಗಳಿಗೆ ಲೆಕ್ಕವಿಲ್ಲ, ಹೇಗೆಂದು ಕೇಳುವೆಯ? ಪುಟ್ಟ … Read more
ಸಾಮಾನ್ಯ ಜ್ಞಾನ (ವಾರ 44): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಏಷ್ಯಾ ಖಂಡದಲ್ಲಿಯೇ ಅತ್ಯಂತ ದೊಡ್ಡ ರೈಲು ಸಂಪರ್ಕ ಹೊಂದಿರುವ ದೇಶ ಯಾವುದು? ೨. ಪುತಿನ ಇದು ಯಾರ ಕಾವ್ಯ ನಾಮ? ೩. ವೆಸ್ಟ್ ಕೊಸ್ಟ್ ಪೇಪರ್ ಮಿಲ್ ಕಾರ್ಖಾನೆ ಕರ್ನಾಟಕದಲ್ಲಿ ಎಲ್ಲಿದೆ? ೪. ಮನುಶ್ರೀ ಪ್ರಶಸ್ತಿ ಪಡೆದ ಪ್ರಥಮ ಮಹಿಳಾ ಸಾಹಿತಿ ಯಾರು? ೫. ಮಲಯಾಳಂನ ಸಾಹಿತಿ ತಕಳಿ ಶಿವಶಂಕರ ಪಿಳ್ಳೈಯವರ ಯಾವ ಕೃತಿಗೆ ಜ್ಞಾನಪೀಠ ಪ್ರಶಸ್ತಿ ದೊರತಿದೆ? ೬. ಬೆಂಗಳೂರಿನಲ್ಲಿ ಹೈಕೋರ್ಟ್ ಸ್ಥಾಪನೆಯಾದ ವರ್ಷ ಯಾವುದು? ೭. ವಾಯುಭಾರ ಮಾಪಕ ಕಂಡು ಹಿಡಿದವರು … Read more
ಹೇಗಿದ್ದ ಹೇಗಾದ ಗೊತ್ತಾ: ನಟರಾಜು ಎಸ್. ಎಂ.
ಮೊನ್ನೆ ಶನಿವಾರ ಯೂ ಟ್ಯೂಬ್ ನಲ್ಲಿ ಒಂದಷ್ಟು ಹಿಂದಿ ಕಾಮಿಡಿ ಶೋ ಗಳನ್ನು ನೋಡುತ್ತಾ ಕುಳಿತ್ತಿದ್ದೆ. ಹಿಂದಿಯ ರಿಯಾಲಿಟಿ ಶೋ ಗಳಲ್ಲಿ ತಮ್ಮ ಕಾಮಿಡಿಗಳಿಂದಲೇ ಮಿಂಚಿದ ರಾಜು ಶ್ರೀವತ್ಸವ್, ಕಪಿಲ್ ಶರ್ಮ, ಸುನಿಲ್ ಪಾಲ್ ಹೀಗೆ ಹಲವರ ವಿಡೀಯೋಗಳು ನೋಡಲು ಸಿಕ್ಕಿದ್ದವು. ಒಂದು ರಿಯಾಲಿಟಿ ಶೋ ನ ವಿಡೀಯೋದಲ್ಲಿ ಕಾಮಿಡಿಯನ್ ಜೋಕ್ ಹೇಳಿ ಮುಗಿಸುವ ಮುಂಚೆಯೇ ದೊಡ್ಡದಾಗಿ ಸುಮ್ಮ ಸುಮ್ಮನೆ ನಗುವ ನವಜ್ಯೋತ್ ಸಿದ್ದುವಿನ ಅಬ್ಬರದ ನಗುವನು ನೋಡಿ "ಈ ಯಪ್ಪಾ ಜೋಕ್ ಅಲ್ಲದಿದ್ದರೂ ಸುಮ್ಮ ಸುಮ್ಮನೆ … Read more
ಗುಡುಗಿನಂಥ ಮೇಷ್ಟ್ರು, ಮಳೆಯಂಥ ಮೇಡಮ್ಮು: ಅಜ್ಜಿಮನೆ ಗಣೇಶ್
ಒಳಗೆ ಆವೇಶದಲ್ಲಿ ಗುಡುಗುತ್ತಿರುವ ಮೇಷ್ಟ್ರು, ಅದರ ಪರಿಣಾಮ ಎಂಬಂತೆ ಹೊರಗೆ ಜೋರು ಮಳೆ, ಎರಡಕ್ಕೂ ಸಾಕ್ಷಿಯಾಗಿ ತಾರಸಿಯಿಂದ ಸುರಿಯುತ್ತಿದ್ದ ನೀರಿನಡಿ ನಿಂತಿದ್ದೆ..ಮಳೆಗಾಲದ ಆರಂಭವೇ ಕಾಯಿಲೆ ಹಿಡಿಸುತ್ತಾದ್ದರಿಂದ ಸುಮ್ಮಸುಮ್ಮನೆ ಮಲೆನಾಡಿನಲ್ಲಿ ನೆನೆಯೋ ಸಾಹಸ ಯಾರು ಮಾಡುತ್ತಿರಲಿಲ್ಲ.. ಅಂತಹದ್ದರಲ್ಲಿ ಸರಿಸುಮಾರು ಅರ್ಧಗಂಟೆ ನಿಸರ್ಗದ ಷವರ್ನಡಿಯಲ್ಲಿ ಸುಮ್ಮನೆ ನಿಂತಿದ್ದೆ..ಕಾರಣ ನಿಂತಿದ್ದು ಸ್ವಇಚ್ಛೆಯಿಂದಾಗಿರದೇ ಮೇಷ್ಟ್ರು ವಿಧಿಸಿದ ಶಿಕ್ಷೆಯಿಂದಾಗಿತ್ತು. … Read more
ದಂತಕತೆ: ಅನಿತಾ ನರೇಶ್ ಮಂಚಿ
ಈಗೊಂದೆರಡು ದಿನಗಳಿಂದ ಯಾರನ್ನು ಕಂಡರೂ ಕೆಂಡದಂತಹ ಕೋಪ. ಅದರಲ್ಲೂ ಸುಮ್ಮನೆ ಹಲ್ಲು ಕಿಸಿದುಕೊಂಡು ನಗ್ತಾ ಇರ್ತಾರಲ್ಲ ಅಂತವರನ್ನು ಕಂಡರೆ ಅವರ ಅಷ್ಟೂ ಹಲ್ಲುಗಳನ್ನು ಕೆಳಗುದುರಿಸಿ ಅವರ ಬೊಚ್ಚು ಬಾಯಿ ಪೆಚ್ಚಾಗುವಂತೆ ಮಾಡಬೇಕೆಂಬಾಸೆ.. ಇದ್ಯಾಕೋ ’ಏ ಹಾತ್ ಮುಜೆ ದೇದೋ ಠಾಕುರ್’ ಎಂದು ಅಬ್ಬರಿಸುವ ಗಬ್ಬರ್ ಸಿಂಗನನ್ನು ನಿಮಗೆ ನೆನಪಿಸಿದರೆ ಅದಕ್ಕೆ ನಾನಲ್ಲ ಹೊಣೆ. ನನ್ನ ಹಲ್ಲೇ ಹೊಣೆ. ಹೌದು .. ಇಷ್ಟಕ್ಕೂ ಮೂಲ ಕಾರಣ ನನ್ನ ಹಲ್ಲುಗಳೇ. ಮಕ್ಕಳಿಗೆ ಮೊದಲು ಮೂಡುವ ಹಲ್ಲುಗಳನ್ನು ಹಾಲು ಹಲ್ಲುಗಳೆಂದು ಅದ್ಯಾರೋ … Read more
ದೆವ್ವಗಳ ಸುತ್ತ: ಹೃದಯಶಿವ ಅಂಕಣ
ದೆವ್ವಗಳ ಬಗ್ಗೆ ಚರ್ಚಿಸುವುದೇ ವೇಳೆ ಹಾಳುಮಾಡಿಕೊಳ್ಳುವ ಕೆಲಸ. ಆ ವಿಷಯದ ಬಗ್ಗೆ ಚರ್ಚಿಸುವವರು ಅಪಾರ ಅನುಭವಿಗಳಂತೆಯೂ, ಅದ್ಭುತವಾಗಿ ಕಥೆ ಕಟ್ಟುವವರಂತೆಯೂ, ಅಪ್ಪಟ ಮೂಢರಂತೆಯೂ ಕಾಣುತ್ತಾರೆ. ದೆವ್ವಗಳ ಅಸ್ತಿತ್ವ ಕುರಿತು ವಾದಿಸುವುದಕಿಂತಲೂ ಅವುಗಳ ಇಲ್ಲದಿರುವಿಕೆಯನ್ನೇ ಪ್ರಬಲವಾಗಿ ವಾದಿಸಬಹುದು; ದೆವ್ವಗಳಿವೆ ಎಂದು ನಂಬಿರುವವರು ಈ ಪ್ರಪಂಚದಲ್ಲಿರುವ ಅಥವಾ ಎಂದೋ ಸವೆದುಹೋದ ಕಟ್ಟುಕತೆ, ಕಪೋಲಕಲ್ಪಿತ ಘಟನೆಗಳನ್ನು, ಅವನ್ನು ನಂಬಿದ್ದವರನ್ನು ಚರ್ಚೆಯ ಮಧ್ಯೆ ಎಳೆದು ತಂದು ತಾವೇ ಮತ್ತೊಮ್ಮೆ ಬೆಚ್ಚಿ, ಬೆವರು ಒರೆಸಿಕೊಳ್ಳಬಹುದು. ಅದೆಲ್ಲವನ್ನು ನೋಡಿ ಸುಮ್ಮನಾಗಬೇಕಷ್ಟೇ. ನಮ್ಮ ನಡುವೆಯೇ ಇರುವ ಕೆಲವರನ್ನು … Read more
ಸ್ವಾತಂತ್ರ್ಯವೋ ಸ್ವಾತಂತ್ರ್ಯ! : ಎಸ್.ಜಿ.ಸೀತಾರಾಮ್, ಮೈಸೂರು.
ಒಂದಾನೊಂದು ಕಾಲದಲ್ಲಿ ಭಾರತದಲ್ಲಿ ಹಚ್ಚಿದ ಸ್ವಾತಂತ್ರ್ಯದ ಕಿಚ್ಚು ಈಗ ಯಾವ ಆಳ-ಅಗಲಕ್ಕೆ ಹಬ್ಬಿದೆ ಎಂಬುದನ್ನು, ಸ್ವತಂತ್ರ ಭಾರತ ಜನನದ ಮಹಾಮಹೋತ್ಸವಕ್ಕೆಂದು ಇಂದು ನಾವು ಹಚ್ಚುವ ೬೭ ಹಣತೆಗಳ ಬೆಳಕಿನಲ್ಲಿ ಒಮ್ಮೆ ನಿಟ್ಟಿಸಿ ನೋಡುವುದು ಒಳಿತು. ಅಂದು ರಾಷ್ಟ್ರಸ್ವಾತಂತ್ರ್ಯಕ್ಕೆಂದು ಎಬ್ಬಿಸಿದ್ದ ಆ ಕಿಚ್ಚು ತಡವಿಲ್ಲದೇ ರಾಜ್ಯಸ್ವಾತಂತ್ರ್ಯಗಳೆಡೆಗೆ ತಿರುಗಿ, ಎಲ್ಲ ರಾಜ್ಯಗಳೂ ತಂತಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಡತೊಡಗಿದವು. ೧೯೫೬ರಲ್ಲಿ ಪುನರ್ವಿಂಗಡನೆಯ ಕಾರಣ ಕೇವಲ ಹದಿನಾಲ್ಕು ಆಗಿದ್ದ ರಾಜ್ಯಗಳ ಸಂಖ್ಯೆ ಇಂದು ಇಪ್ಪತ್ತೊಂಬತ್ತಾಗಿದೆ. ಬೋಡೋಲ್ಯಾಂಡ್, ಗೋರ್ಖಾಲ್ಯಾಂಡ್, ಪೂರ್ವಾಂಚಲ, ಬುಂದೇಲ್ಖಂಡ್, ವಿಂಧ್ಯದೇಶ, ವಿದರ್ಭ ಮತ್ತು … Read more
ಚೌತಿಯ ಚಂದ್ರ ಎನಗೆ ಅಪವಾದ ತಂದ: ಲಕ್ಷ್ಮೀಶ ಜೆ. ಹೆಗಡೆ
ಈ ಘಟನೆ ನಡೆದಿದ್ದು ಸುಮಾರು ಹತ್ತು ವರ್ಷಗಳ ಹಿಂದೆ. ಆಗ ನಾನು ಐದನೇ ತರಗತಿಯಲ್ಲಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಓದುತ್ತಿದ್ದೆ. ಏಪ್ರಿಲ್, ಮೇ ತಿಂಗಳಿನ ಬೇಸಿಗೆ ರಜೆಯಲ್ಲಿ ಮಗ ಕಂಪ್ಯೂಟರ್ ಕಲಿಯಲಿ ಎಂದು ನನ್ನಪ್ಪ ನನ್ನನ್ನು ಒಂದು ಕಂಪ್ಯೂಟರ್ ಕೋಚಿಂಗ್ ಸೆಂಟರ್ ಗೆ ಸೇರಿಸಿದರು. ಜೊತೆಗೆ ನನಗಿಂತ ಒಂದು ವರ್ಷ ದೊಡ್ಡವನಾಗಿದ್ದ ನನ್ನೊಬ್ಬ ಮಿತ್ರನೂ … Read more
ಅಜ್ಜಿ ಲಿಪ್ಟ್ ಪಡೆದದ್ದು …!: ಪಾ.ಮು.ಸುಬ್ರಮಣ್ಯ, ಬ.ಹಳ್ಳಿ.
ಹೀಗೇ ಸುಮ್ಮನೆ ಏನನ್ನಾದರೂ ಹೇಳುತ್ತಿರಬೇಕೆಂಬ ಮನಸ್ಸಿನ ವಾಂಛೆಯನ್ನು ಅದುಮಿಟ್ಟುಕೊಳ್ಳಲು ಸಾಧ್ಯವಾಗದೆ ವಸ್ತುವಿಗಾಗಿ ಹುಡುಕಾಟ ಶುರುಮಾಡಿದೆ. ರಸ್ತೆಯಲ್ಲಿ ಅನೇಕ ವಸ್ತುಗಳು ಸಿಗುತ್ತವೆಂಬ ನಂಬಿಕೆ ಅನೇಕ ಬರಹಗಾರರದು. ವಸ್ತುಗಳೇನೋ ಸಿಗುತ್ತವೆ, ಆದರೆ ನೋಡುವ ಕಣ್ಣಿರಬೇಕು. ಆಘ್ರಾಣಿಸುವ ಮನಸ್ಸಿರಬೇಕು. ಅನುಭವಿಸುವ ಆಸೆ ಇರಬೇಕು. ಹೇಳಬೇಕೆಂಬ ಇಚ್ಚೆ ಇರಬೇಕು. ಒಮ್ಮೆ ಹೀಗೆ ನಡೆದು ಬರುತ್ತಿರುವಾಗ ಸುಮಾರು ಎಂಬತ್ತು ವರ್ಷ ವಯಸ್ಸಿನ ಹೆಂಗಸು ಕೈಯಲ್ಲಿ ಕೆಂಪು ಬಣ್ಣದ ಸಣ್ಣ ಚೀಲವೊಂದನ್ನು ಹಿಡಿದು ನಡೆದು ಬರುತ್ತಿದ್ದಳು. ತನ್ನ ದೀರ್ಘಕಾಲದ ಬದುಕಿನಲ್ಲಿ ಸಾಕಷ್ಟು ಹಿತ-ಅಹಿತ ಅನುಭವಗಳನ್ನು … Read more
ಗಣನಾಥನಿಗೊಂದು ನಮನವೆನ್ನುತ್ತಾ: ಪ್ರಶಸ್ತಿ
ವಿಘ್ನೇಶನ ಬಗ್ಗೆ ಬರೆಯೋದೇನನ್ನ ನಾಥನೆನ್ನಲೇ ಗೌರೀತನಯನನ್ನ ಯಶವ ಹಂಚುವ ಆದಿ ಪೂಜ್ಯನನ್ನ ಕರವ ಮುಗಿಯುವೆ ಹರಸು ಗಣಪನೆನ್ನ ಗಣೇಶನೆಂದರೆ ಏನು ಹೇಳಲಿನ್ನ ಜಾಣನೆನ್ನಲೇ ವಿದ್ಯಾ ದೇವನನ್ನ ನಮನವೆನ್ನಲೇ ವಕ್ರದಂತನನ್ನ ನಶಿಶು ವಿಘ್ನವ ನೀಡಿ ಹರುಷ, ಹೊನ್ನ ವಿನಾಯಕ, ಗಜಾನನ ಅಂತ ಬರಿಯೆ ಬರೆಯೋದೇನು, ಅದನ್ನೇ ಆದಿಯಕ್ಷರಗಳಾಗಿಸಿ ಒಂದಿಷ್ಟು ಸಾಲು ಗೀಚಬಾರದೇಕೇ ಅಂತೆನ್ನೋ ಆಲೋಚನೆ ನರನ ತಲೆಯಲ್ಲಿ ಹೊಳೆದಿದ್ದೇ ತಡ ಕೃಷ್ಣ ಪಿಂಗಾಕ್ಷನ ಬಗ್ಗೆ ಒಂದಿಷ್ಟು ಸಾಲು ಜೋಡಿಸಾಯ್ತು. ತನ್ನ ದಂತದಿಂದಲೇ ರಾಮಾಯಣವನ್ನು ಬರೆದನೆಂಬೋ ಧೂರ್ಮವರ್ಣನ ಬಗ್ಗೆ ಒಂದಿಷ್ಟು … Read more
ಎರಡು ಕವಿತೆಗಳು:ವಿಲ್ಸನ್ ಕಟೀಲ್, ಸಿ.ಮ.ಗುರುಬಸವರಾಜ್ ಇಟ್ಟಿಗಿ
ಮೂರ್ತಿಗಳಿಗೆ ಉಚ್ಚೆ ಉಯ್ಯಬೇಡಿ ಮೂರ್ತಿಗಳಿಗೆ ಉಚ್ಚೆ ಹುಯ್ಯಬೇಡಿ ವಿಚಾರವಾದಿಗಳೆ! ಮೂರ್ತಿಗಳಿಗೆ ಉಚ್ಚೆ ಹುಯ್ಯಬೇಡಿ ಹಸಿದ, ಬಾಯಾರಿದ ಕೋಟಿ ಜನರ ಕಂಬನಿಯನ್ನೂ ಒರೆಸದ ಶುಷ್ಕ ಕೈಗಳಿಂದ ಮಾಡಿಸಿದ ಹಾಲು, ತುಪ್ಪ, ಎಳನೀರಿನ ಅಭಿಶೇಕವೇ ಸಾಕವುಗಳಿಗೆ! ಮೂರ್ತಿಗಳಿಗೆ ಉಚ್ಚೆ ಹುಯ್ಯಬೇಡಿ!! * ಮೂರ್ತಿಗಳಿಗೆ ನೀವು ಬಯ್ಯಬೇಡಿ ವಿಚಾರವಾದಿಗಳೆ! ಮೂರ್ತಿಗಳಿಗೆ ನೀವು ಬಯ್ಯಬೇಡಿ ಕಂದಪದ್ಯದಲ್ಲೂ ಹೊಳೆದ ಹೊಸ ವಿಚಾರವನ್ನು ಓದಿ ಅರ್ಥೈಸಲಾಗದ ಮಂತ್ರ ಪಂಡಿತರ ಬಾಯ್ಗಳಿಂದ ಹೊರಟ ಒಣ ಪಠಣಗಳ ಕಿರಿಕಿರಿಯೇ ಸಾಕವುಗಳಿಗೆ! ಮೂರ್ತಿಗಳಿಗೆ ನೀವು ಬಯ್ಯಬೇಡಿ!! * ಸಾಧ್ಯವಾದರೆ ನಾವೆಲ್ಲಾ … Read more
ಭಾರತಾಂಭೆಯೇ ನಿನ್ನ ಮಕ್ಕಳು ಕ್ಷೇಮವೇ???: ಅಖಿಲೇಶ್ ಚಿಪ್ಪಳಿ
ದೇಶದ ಜನ ಗಣಪತಿ ಹಬ್ಬದ ಸಡಗರದಲ್ಲಿದ್ದಾರೆ. ಬ್ರಹ್ಮಚಾರಿ ಗಣೇಶನ ಹಬ್ಬದ ವಾರ್ಷಿಕ ವಹಿವಾಟನ್ನು ಲೆಕ್ಕ ಹಾಕಿದವಾರೂ ಇಲ್ಲ. ವಿಘ್ನನಿವಾರಕನೆಂಬ ಖ್ಯಾತಿವೆತ್ತ, ಮೊದಲ ಪೂಜಿತನೆಂಬ ಹೆಗ್ಗಳಿಕೆಗೊಳಗಾದ ಗಣೇಶನ ಹಬ್ಬಕ್ಕೂ, ರಾಜಕೀಯಕ್ಕೂ, ಮಾಲಿನ್ಯಕ್ಕೂ ನೇರಾನೇರ ಸಂಬಂಧವಿರುವುದು ಸುಳ್ಳೇನಲ್ಲ. ಗಲ್ಲಿ-ಗಲ್ಲಿಗಳಲ್ಲಿ ಗಣಪತಿ ಪೆಂಡಾಲ್ ತಯಾರಾಗಿದೆ. ವರ್ಷವೂ ರಶೀದಿ ಪುಸ್ತಕ ಹಿಡಿದು ಬರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಗಣಪತಿಯನ್ನು ವಿಸರ್ಜನೆ ಮಾಡುವಾಗಿನ ಮಾಲಿನ್ಯದ ಪ್ರಮಾಣವೂ ಹೆಚ್ಚುತ್ತಲೇ ಇದೆ. ಪಟಾಕಿ ಸಿಡಿಸುವುದು ಎಂದರೆ ಹಿಂದೆಲ್ಲಾ ಸಂಭ್ರಮವಾಗಿತ್ತು. ಈಗ ಪ್ರತಿಷ್ಠೆಯ ವಿಷಯವಾಗಿದೆ. ರಾಸಾಯನಿಕ ಬಣ್ಣಗಳಿಂದ ಕೂಡಿದ … Read more
ಅವಳು ನಮ್ಮವಳಲ್ಲವೆ?: ಕೆ.ಎಂ.ವಿಶ್ವನಾಥ(ಮಂಕವಿ) ಮರತೂರ.
ದೇಶ ನನಗೇನು ಮಾಡಿದೇ ಎನ್ನುವುದಕ್ಕಿಂತ, ದೇಶಕ್ಕಾಗಿ ನಾನೇನು ಮಾಡಿದೆ ಎನ್ನುವುದು ಮುಖ್ಯವಾದ ವಿಚಾರ. ನಮ್ಮ ದೇಶದಲ್ಲಿ ಮಹಿಳೆ ಎಂದಾಕ್ಷಣ ಗೌರವ, ಭಕ್ತಿ, ಶಕ್ತಿ ಎಂಬ ಪದಗಳು ಬಳಕೆಯಾಗುತ್ತವೆ. ಅವಳ ಸೇವೆ ಈ ದೇಶಕ್ಕೆ ಅನನ್ಯ ಎಂಬ ಮಾತು ಎಲ್ಲರ ಮನದೊಳಗೆ ಮನೆಮಾಡಿದೆ. ಮಹಿಳಾ ಸಬಲೀಕರಣ ಎನ್ನುವ ವಿಚಾರ, ಹಿರಿಯರ ತಲೆಯೊಳಗೆ ಇದೆ ಆದರೆ ಪಾಲನೆಯಲ್ಲಿ ಕಾರ್ಯಗತಿಯಲ್ಲಿ ಹೊರಬರುತ್ತಿಲ್ಲ. ನಮ್ಮ ಮಹಿಳೆಯನ್ನು ಸೂಕ್ತವಾಗಿ ಸಬಲೀಕರಣ ಮಾಡುತ್ತೇವೆ ಎಂದು ಬರಿ ಮಾತಿನಲ್ಲಿ ಬರವಣಿಗೆಯಲ್ಲಿ ಹೇಳುತ್ತಿದ್ದೇವೆ. ನೈಜ ಬದುಕಿನಲ್ಲಿ ಅವಳನ್ನು ಸಬಲೀಕರಣವನ್ನು … Read more
ಸಾಮಾನ್ಯ ಜ್ಞಾನ (ವಾರ 43): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಹಿಂದಿ ಲೇಖಕ ರಾಮ್ ಧಾರಾಸಿಂಗ್ ದಿನಕರ ಅವರ ಯಾವ ಕೃತಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿದೆ? ೨. ೨೦೦೨ರಲ್ಲಿ ತುಮಕೂರಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು ಯಾರಾಗಿದ್ದರು? ೩. ಗೀತ ರಹಸ್ಯ ಗ್ರಂಥದ ಕರ್ತೃ ಯಾರು? ೪. ವನ್ಯ ಜೀವಿ ರಕ್ಷಣಾ ಅಧಿನಿಯಮವನ್ನು ಯಾವ ವರ್ಷದಲ್ಲಿ ಜಾರಿಗೊಳಿಸಲಾಯಿತು? ೫. ಎನ್ಕೆ ಇದು ಯಾರ ಕಾವ್ಯ ನಾಮ? ೬. ನಂದಾದೇವಿ ಶಿಖರವು ಯಾವ ರಾಜ್ಯದಲ್ಲಿದೆ? ೭. ಪೆನ್ಸಿಲ್ನ ಸಂಶೋಧಕರು ಯಾರು? ೮. ಹಿಮೋಗ್ಲೋಬಿನಲ್ಲಿರುವ … Read more