ಗಂಧದ ಘಮ..: ಅನಿತಾ ನರೇಶ್ ಮಂಚಿ

ತಲೆಬರಹ ನೋಡಿ ಇದರಲ್ಲೇನಿದೆ ವಿಶೇಷ, ’ತನ್ನನ್ನೇ ತೇದು ಪರಿಮಳವನ್ನು ಲೋಕಕ್ಕೆ ಕೊಡುವ ತ್ಯಾಗಜೀವಿ ತಾನೇ ಗಂಧ’ ಅಂತೀರಲ್ವಾ..ಹೌದು ಸ್ವಾಮೀ ನಾನು ಅದನ್ನು ಅಲ್ಲ ಅನ್ನಲಿಲ್ಲ.. ಆದ್ರೆ ಗಂಧ ತನ್ನನ್ನು ತೇಯಬೇಕಾದರೆ ಎಷ್ಟು ಜೀವ ತೇಯುತ್ತದೆ ಅಂತಾದ್ರು ನಿಮಗೆ ಗೊತ್ತಾ.. ಅದೊಂದು ದೊಡ್ಡ ಕಥೆ.. ಹೇಳ್ತೀನಿ ಕೇಳಿ..   ನನ್ನಣ್ಣನ ಮನೆ ಅಂದರೆ ಅದೊಂದು ಸಸ್ಯ ಭಂಡಾರ. ನಮ್ಮೂರಾದ ಕರಾವಳಿಯಲ್ಲಿ ಬೆಳೆಯದ ಹಲವು ಸಸ್ಯಸಂಕುಲಗಳು ಮಲೆನಾಡಿನ ಅವನ ತೋಟದಲ್ಲಿ ನಳನಳಿಸುತ್ತಿರುತ್ತದೆ. ನಾನೋ ’ಕಂಡದ್ದೆಲ್ಲಾ ಬೇಕು…… ಭಟ್ಟನಿಗೆ’ ಅನ್ನೋ ಜಾತಿ. … Read more

ಸಂಬಂಧಗಳ ಸುಳಿಯಲ್ಲಿ ’ಬೇರಿಲ್ಲದವರು’: ಹಿಪ್ಪರಗಿ ಸಿದ್ಧರಾಮ

ನಗರದಲ್ಲೊಂದು ಚಿಕ್ಕ ಮತ್ತು ಚೊಕ್ಕದಾದ ಕುಟುಂಬ. ಆಧುನಿಕ ಕಾಲದ ಸಕಲೆಂಟು-ಸೌಕರ್ಯಗಳು ಇರುವ ಆ ಕುಟುಂಬದ ಯಜಮಾನ ಸರಕಾರದ ಇಲಾಖೆಯೊಂದರಲ್ಲಿ ಇಂಜನೀಯರ್ ಮತ್ತು ಆತನ ಪತ್ನಿಯೂ ಸಹ ಆಧುನಿಕ ಕಾಲದ ಸುಶಿಕ್ಷಿತೆ ಮತ್ತು ಸರಕಾರಿ ಶಾಲೆಯ ಶಿಕ್ಷಕಿಯಾಗಿ ನೌಕರಿ ಮಾಡುತ್ತಿದ್ದಾಳೆ. ಇಂತಿಪ್ಪ ಕೈತುಂಬ ಸಂಬಳದ ಉದ್ಯೋಗಸ್ಥ ದಂಪತಿಗಳಿಗೆ ಹದಿಹರೆಯದ ಮಗ ಮತ್ತು ಮಗಳು ಇದ್ದಾರೆ. ಮನೆಯಲ್ಲಿಯೂ ಎಲ್ಲವೂ ಇದೆ ಆದರೆ ಶಾಂತಿ-ಸಮಾಧಾನ-ಹೊಂದಾಣಿಕೆ-ಅರ್ಥ ಮಾಡಿಕೊಳ್ಳುವಂತಹ ಸಾಮಾಜಿಕ ಅಂಶಗಳು ಅವಶ್ಯವಾಗಿ ಇರಬೇಕಾದುದೇ ಇಲ್ಲ. ಇರುವ ನಾಲ್ವರಿಗೂ ತಮ್ಮದೇ ಆದ ಅವಸರ, ಉದ್ವೇಗ, … Read more

ಸುದ್ದಿಯಾಗದ ಸುದ್ದಿಗಳ ಹಿಂದೆ: ಪ್ರಶಸ್ತಿ

ಪ್ರಚಾರ ಅನ್ನೋದು ಯಾರಿಗೆ ಬೇಡ ಹೇಳಿ ? ಯಾರಿಗೂ ಒಂದು ಜೊತೆ ಬಟ್ಟೆ ಕೊಟ್ಟಿದ್ರಿಂದ ಹಿಡಿದು ಮತ್ಯಾರಿಗೋ ಐದು ರೂಪಾಯಿ ದಾನ ಮಾಡಿದವರೆಗೆ ನಿತ್ಯದ ತಿಂದುಂಡು ಮಲಗೋದ್ರ ಹೊರತಾಗಿ ಮಾಡಿದ ಒಳ್ಳೇ ಕೆಲ್ಸಗಳನ್ನ ನಾಲ್ಕು ಜನರೊಂದಿಗೆ ಹಂಚಿಕೋಬೇಕು ಅನ್ನೋ ಹಂಬಲ ನಮಗೆ. ಅದನ್ನ ಮಾಡಿದೆ, ಇದನ್ನ ಮಾಡಿದೆ ಹೇಳಿಕೊಳ್ಳೋ ಮೂಲಕ ಬೇರೆಯವ್ರ ದೃಷ್ಟಿಯಲ್ಲೊಂದು ಒಳ್ಳೇ ಸ್ಥಾನ ಪಡೆಯೋದು ಸಾಮಾನ್ಯರ ಬಯಕೆಯಾದ್ರೆ  ಏನೆಲ್ಲಾ ಮಾಡ್ತಿದ್ರೂ ಯಾರ ಕಣ್ಣಿಗೂ ಬೀಳದೇ ತಣ್ಣಗಿದ್ದು ಬಿಡೋ ಜನಗಳದ್ದು ಮತ್ತೊಂದು ಗುಂಪು. ತಮ್ಮ ಜೀವನವನ್ನೇ … Read more

ಮನುಕುಲದ ಅವಸಾನ ಹತ್ತಿರವಾಗುತ್ತಿದೆಯೇ?: ಅಖಿಲೇಶ್ ಚಿಪ್ಪಳಿ ಅಂಕಣ

ಭೂಮಿಯ ಮೇಲೆ ಒಂದು ತರಹದ ವೈರಸ್ ಸೃಷ್ಟಿಯಾಗಿದೆ. ಈ ವೈರಸ್‌ಗಳು ಮನುಷ್ಯನ ದೇಹವನ್ನು ಹೊಕ್ಕು ಅವಾಂತರ ಮಾಡಿ ಕ್ರಮೇಣ ಸಾಯಿಸುತ್ತವೆ. ಸತ್ತ ಹೆಣಗಳು ಮತ್ತೆ ಎದ್ದು ಕೂತು ದೆವ್ವಗಳಾಗಿ ಪರಿವರ್ತನೆ ಹೊಂದಿ ಉಳಿದ ಮನುಷ್ಯರನ್ನು ಕಾಡುತ್ತವೆ. ಈ ತರಹದ ಕಥಾವಸ್ತುವನ್ನು ಹರವಿಕೊಂಡು ನಿರ್ಮಿಸಲಾದ ಅಮೇರಿಕಾದ ಒಂದು ಪ್ರಸಿದ್ಧ ಧಾರಾವಾಹಿಯ ಹೆಸರು ದಿ ವಾಕಿಂಗ್ ಡೆಡ್. ಈ ಧಾರಾವಾಹಿಯು ಅತ್ಯಂತ ಪ್ರಸಿದ್ಧಿಯನ್ನು ಪಡೆದು ದಾಖಲೆ ನಿರ್ಮಿಸಿದೆ. ಕಾಲ್ಪನಿಕವಾಗಿ ಸೃಷ್ಟಿಸಲಾದ ಈ ಘಟನೆಗಳು ನಿಜವಾಗಲೂ ನಡೆಯುತ್ತವೆಯೇ? ಮನುಕುಲದ ಅವಸಾನ ಸನಿಹವಾಗುತ್ತಿದೆಯೇ? … Read more

ಪಂಚಮಿ ಹಬ್ಬಾ ಉಳದಾವ ದಿನ ನಾಕ, ಅಣ್ಣಾ ಬರಲೇಯಿಲ್ಲಾ ಕರಿಯಾಕ: ಸುಮನ್ ದೇಸಾಯಿ

ಶ್ರಾವಣ ಮಾಸಾ ಬಂತಂದ್ರ ಅತ್ತಿ ಮನ್ಯಾಗಿನ ಹೆಣ್ಣಮಕ್ಕಳಿಗೆ ಎನೊ ಒಂಥರಾ ಹುರಪಿರತದ,ಪಂಚಮಿ ಹಬ್ಬಕ್ಕ ತವರುಮನಿಗೆ ಹೋಗೊ ಸಂಭ್ರಮದಾಗ ಭಾಳ ಖುಷಿಲೆ ತನ್ನ ಕರಿಲಿಕ್ಕೆ ಬರೊ ಅಣ್ಣ ಅಥವ ತಮ್ಮನ ದಾರಿಕಾಯಕೊತ,     "ಪಂಚಮಿ ಹಬ್ಬಾ ಉಳದಾವ ದಿನ ನಾಕ,,,  ಅಣ್ಣಾ ಬರಲೇಯಿಲ್ಲಾ ಕರಿಯಾಕ……….." ಅಂತ ತನ್ನೊಳಗ ತಾನ ಹಾಡು ಹಾಡಕೊತ,ತವರುಮನ್ಯಾಗಿನ್ ಪಂಚಮಿ ಹಬ್ಬದ ಸಂಭ್ರಮನ ತನ್ನ ಗೆಳತ್ಯಾರಿಗೆ ಹೆಳ್ಕೊತಿರತಾಳ."  "ನನ್ನ ತವರಲ್ಲಿ ಪಂಚಮಿ ಭಾರಿ,.  ಮಣ ತೂಕದ ಬೆಲ್ಲಾ ಕೊಬ್ಬರಿ,. ಅಳ್ಳು ಅವಲಕ್ಕಿ, ತಂಬಿಟ್ಟು ಸೂರಿ,,. … Read more

ಮೂರು ಕವಿತೆಗಳು: ಕಾವ್ಯ ಪ್ರಿಯ, ಬಸವರಾಜ್ ಕದಮ್, ರಾಣಿ ಪಿ.ವಿ.

ಬ್ಯಾಚುಲರ್ ಫುಡ್ಸ್.. ಬೆಳಗಾಗುತ್ತಲೆ ಎದ್ದೊಡನೆ ಏನಾಗುವುದು ನನಗೇಕೊ ಮೊದಲು ಹಸಿವಾಗುವುದು ಊರಿನಲ್ಲಿದ್ದಾಗ ತಿ೦ಡಿ ತಯಾರಾಗುತ್ತಿದ್ವು ಹೊಟ್ಟೆ ತು೦ಬ ತಿ೦ದು ಅಡ್ಡಾಡುತ್ತಿದ್ದೆವು… ಇ೦ದಿನ ಪರಿಸ್ತಿತಿ ಬದಲಾಗಿಹುದು ರಾತ್ರಿ ಮನೆಗೆ ಬ೦ದರೂ ಕೇಳರಾರಿಹರು ಊಟ ತಿ೦ಡಿ ಉಪಚಾರದ ಮಾತೆಲ್ಲಿಹುದು ಪಿಜಾ ಅ೦ಗಡಿಯವನಿಗೆ ವ್ಯಾಪಾರ ಜೋರು… ಇದಕ್ಕೆ ಬೇಕೊ೦ದು ಶಾಶ್ವತ ಪರಿವಾರವು ಯೊಚಿಸಿ ನೊಡಿದೆ ಎನಿಹುದು ದಾರಿಯೂ ಅಡಿಗೆ ಮಾಡುವುದು ನನಗೆ ಸುಲಭವು ಲೇಟಾದರೂ ಹಚ್ಚುವೆನು ಒಲೆಯ ದಿನವೂ…. ಬೆಳಗಿನ ತಿ೦ಡಿಗೆ ಕಾರ್ನ್ ಫ್ಲೇಕ್ಸು ಮಧ್ಯಾನ ಕ್ಯಾ೦ಟೀನ ಮಿನಿ ಮೀಲ್ಸು ಸ೦ಜೆ … Read more

ಸಾಮಾನ್ಯ ಜ್ಞಾನ (ವಾರ 39): ಮಹಾಂತೇಶ್ ಯರಗಟ್ಟಿ

೧)    ೨೦೧೨ ರಲ್ಲಿ ಎಚ್.ಎಸ್ ಶಿವಪ್ರಕಾಶ ಅವರ ಯಾವ ಕೃತಿಗೆ  ಕೇ೦ದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ? ೨)    ಸತ್ಯಕಾಮ ಇದು ಯಾರ ಕಾವ್ಯನಾಮ ? ೩)    ಬಾ೦ಗ್ಲಾದೇಶದ ರಾಷ್ಟ್ರೀಯ ಕ್ರೀಡೆ ಯಾವುದು ? ೪)    ಕೃಷ್ಣನದಿಯ ಉಗಮಸ್ಥಳ ಯಾವುದು ? ೫)    ಮಣ್ಣಿನಲ್ಲಿ ಎರೆಹುಳುವಿನ ಮಹತ್ವವನ್ನು ಕ೦ಡುಹಿಡಿದವರು ಯಾರು ? ೬)    ಐಎಸ್‌ಐ (ಇ೦ಡಿಯನ್ ಸ್ಟಾಂಡರ್ಡ್ ಇನ್ಸ್ಟಿಟ್ಯೂಷನ್) ಆಸ್ತಿತ್ವಕ್ಕೆ ಬಂದವರ್ಷ ಯಾವುದು? ೭)    ನೀರಿನಲ್ಲಿ ಆಮ್ಲಜನಕವವನ್ನು ಹೀರಿಕೊಳ್ಳಲು ಮೀನಿಗೆ ಸಹಾಯ ಮಾಡುವ ಅ೦ಗ ಯಾವುದು ? … Read more

ಪ್ರಕಟಣೆ

ಕನ್ನಡ ನಾಡು ನುಡಿಯ ಸೇವೆ ಮಾಡುವ ನಿಟ್ಟಿನಲ್ಲಿ ಸ್ವಯಂ ಇಚ್ಚೆಯಿಂದ ಕನ್ನಡ ನಾಡು ನುಡಿಯ  ಬಗ್ಗೆ ಕವನ ಸಂಕಲನವೊಂದು ಹೊರತರಲು ಯೋಚಿಸಲಾಗಿದೆ. ಅದಕ್ಕಾಗಿ ತಾವು ಕನ್ನಡ ನಾಡು, ನುಡಿ, ಕನ್ನಡಕ್ಕಾಗಿ ದುಡಿದ ಮಹಿಳೆ/ಪುರುಷ, ಕನ್ನಡ ನೆಲ, ಜಲ, ಕನ್ನಡದ ವೈವಿಧ್ಯತೆ, ಕರ್ನಾಟಕದ ಪ್ರಾಕೃತಿಕ ಸೌಂದರ್ಯ ಇತ್ಯಾದಿ ವಿಷಯಗಳ ಕುರಿತು ತಮ್ಮ ಇತ್ತೀಚಿನ ಎರಡು ಕವನಗಳನ್ನು ಆಹ್ವಾನಿಸಲಾಗುತ್ತಿದೆ. ಆಯ್ದ ಕವಿಗಳಿಗೆ ಸನ್ಮಾನಿಸಲಾಗುವುದು. ಪುಸ್ತಕ ರೂಪದಲ್ಲಿ ಕವನಗಳನ್ನು ಪ್ರಕಟಿಸಲಾಗುವುದು.  ಕವನ ಕಳುಹಿಸಲು ಕೊನೆಯ ದಿನ ಆಗಷ್ಟ್ ೨೩, ಕವನ ಸ್ವತಂತ್ರ … Read more

ಕಗ್ಗಲಿಪುರದಲ್ಲೊಂದು ಕನ್ನಡ ಸೇನೆ: ಹೃದಯಶಿವ ಅಂಕಣ

ಕಗ್ಗಲಿಪುರದಲ್ಲಿ 'ಕರುನಾಡ ಗಜಕೇಸರಿ ಸೇನೆ'ಯ ಉದ್ಘಾಟನೆ ಇವತ್ತಷ್ಟೇ (ಜುಲೈ 27) ನಡೆಯಿತು. ನನಗೆ ಅಲ್ಲಲ್ಲಿ ಆಗಾಗ ಕಂಡಂಥ ಕೆಲವು ಮುಖಗಳು ಅಲ್ಲಿ ಎದುರಾದವು. ನನಗೆ ಇದ್ದಕ್ಕಿದ್ದಂತೆಯೇ ಒಂದಿಷ್ಟು ನೆನಪುಗಳು ಆವರಿಸಿದವು. ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದಾಗ ಅವ್ವನ ಅವ್ವ ಹಾಗೂ ಅವ್ವನ ಅಣ್ಣನೊಂದಿಗೆ ಮೊದಲಬಾರಿ ಬೆಂಗಳೂರಿಗೆ ಬರುವಾಗ ಕಗ್ಗಲಿಪುರದ ಮಾರ್ಗವಾಗಿಯೇ ಹಾದುಬಂದಿದ್ದೆ; ಗವಿಪುರದಲ್ಲಿ ನಡೆದ ಸಂಬಂಧಿಕರೆನ್ನಿಸಿಕೊಳ್ಳುವ ಯಾರದೋ ಮದುವೆಗೆ; ಈಗ ಅದೆಲ್ಲ ಅದೇಕೋ ನೆನಪಾಯಿತು. ಅಲ್ಲೇ ಇದ್ದ ಇಬ್ಬರು ಹಳ್ಳಿ ಯುವಕರಲ್ಲಿ ಒಬ್ಬ, "ಪಂಪ್ ಸನ್ಗ್ ಬಂದ್ರಾ ಸಾ?" … Read more

ಹೆಣ್ಣುಮಕ್ಕಳು ನಿರ್ಭಯರಾಗಿ ಓಡಾಡುವ ಕಾಲ ಮುಗಿದೇ ಹೋಯಿತೇ?: ಕೆ. ಉಷಾ ಪಿ. ರೈ

ನಿರ್ಭಯಳ ಭೀಕರ ಬಲತ್ಕಾರ ನಡೆದ ನಂತರ ’ಬಲಾತ್ಕಾರ’ ಎನ್ನುವ ಪದ ಅಂಕೆ ಸಂಖ್ಯೆಗಳ ಮಿತಿಯನ್ನೂ ಮೀರಿ ಯಾವುದೇ ಸಂಕೋಚವಿಲ್ಲದೆ ಅದೂ ಒಂದು ದಿನ ನಿತ್ಯದ ಬಳಕೆಯ ಶಬ್ಧದಂತೆ ಕಿವಿಗೆ ಬೀಳುತ್ತಲೇ ಇರುತ್ತದೆ. ಇದೇನೂ ಚರಿತ್ರೆಯಲ್ಲೇ ಮೊದಲ ’ಬಲತ್ಕಾರ’ದ ಕೇಸ್ ಅಲ್ಲ. ಆದರೆ ಇಡೀ ದೇಶದ ಜನರು ಒಗ್ಗಟ್ಟಾಗಿ ಪ್ರತಿಭಟಿಸಿದ್ದು ಈ ಘಟನೆಯನ್ನು. ಹಾಗಾಗಿ ಈ ಕೇಸಿಗೆ ಬಲ ಬಂದಿತ್ತು. ಇಡೀ ದೇಶದ ಜನರ ಪ್ರತಿಭಟನೆಯ ನಂತರವೂ ಬಲತ್ಕಾರಗಳು ನಿಲ್ಲಲಿಲ್ಲ. ಅದರ ನಂತರ ಮುಂಬಯಿಯಲ್ಲಿ ನಡೆದ ಶಕ್ತಿಮಿಲ್ ಬಲಾತ್ಕಾರದ … Read more

ದೀಪದ ದೆವ್ವ (ದೆವ್ವದ ಕಥೆಗಳು – ಭಾಗ ೩):ಗುರುಪ್ರಸಾದ್ ಕುರ್ತಕೋಟಿ

(ಇದು ಸಂಗೀತಾ ಕೇಶವ ಅವರಿಗಾದ ಅನುಭವದ ಎಳೆಯ ಮೇಲೆ ಹೆಣೆದ ಕತೆ) ನಾನಾಗ ಪೀಯುಸಿ ಮೊದಲ ವರ್ಷದಲ್ಲಿ ಓದುತ್ತಿದ್ದೆ. ನಾವಿದ್ದದ್ದು ನನ್ನ ಊರಾದ ಚಿಕ್ಕೋಡಿಯಲ್ಲಿ. ಅದು ಬೆಳಗಾವಿ ಜಿಲ್ಲೆಯಲ್ಲಿದೆ. ಹವಾಮಾನದ ವಿಷಯದಲ್ಲಿ ಅದಕ್ಕೂ ಬೆಳಗಾವಿಗೂ ಏನೂ ವ್ಯತ್ಯಾಸವಿರಲಿಲ್ಲ. ಅದು ಆಗಿನ ಸಂಗತಿ. ಈಗ ಬಿಡಿ ಬೆಳಗಾವಿಯ ಹವಾಮಾನವೂ ಪ್ರಕೃತಿ ವೈಪರಿತ್ಯಕ್ಕೆ ಬಲಿಯಾಗಿ ಹದಗೆಟ್ಟಿದೆ. ಆಗೆಲ್ಲಾ ಬೆಳಗಾವಿಯಲ್ಲಿ ಮಳೆ ಯಾವ ಪರಿ ಸುರಿಯುತ್ತಿತ್ತೆಂದರೆ… ಸುರಿಯುತ್ತಿತ್ತು ಅಷ್ಟೆ! ಒಮ್ಮೆ ಶುರುವಾಯಿತೆಂದರೆ ನಿಲ್ಲುವ ಮಾತೆ ಇರಲಿಲ್ಲ. ಚಿಕ್ಕೋಡಿಯ ಪರಿಸ್ಥಿತಿಯೂ ಹೆಚ್ಚು ಕಡಿಮೆ … Read more

ಒಲವೇ ಬಾಡಿಗೆ ಮನೆಯ ಲೆಕ್ಕಾಚಾರ:ಅಮರದೀಪ್ ಅಂಕಣ

ಹೊರಗೆ ಜೋರು ಮಳೆ.  ಮನೆ ತುಂಬಾ ತಟಕ್ ತಟಕ್ ಎಂದು ಸೋರಿದ ಮಳೆ ಹನಿಗಳು ಹೊರಡಿಸುವ ಪ್ಯಾಥೋ ಸಾಂಗಿನ ತುಣುಕು ಸಂಗೀತ.  ಮನೆ ಮಾಳಿಗೆಯ  ಹೊಗೆ ಗೂಡಿನ ಬಾಯಿಗೆ ತಗಡು ಮುಚ್ಚುವುದನ್ನು ಮರೆತಿದ್ದಳು ಮುದುಕಿ.  ಫಕ್ಕನೇ ನೋಡಿ ಮೊಮ್ಮಗನಿಗೆ ಹೇಳಿದಳು.  ಹುಡುಗ ಹತ್ತಲೋ ಬೇಡವೋ ಎಂಬಂತೆ ನೋಡಿದ; ಹಣ್ಣಣ್ಣು  ಮುದುಕಿ ತನ್ನ ಅಳಿದುಳಿದ ಹಲ್ಲುಗಳನ್ನು ಜೋಪಾನ ಮಾಡಿಟ್ಟು ಕೊಂಡು ದಿನ ದೂಡುವಂತೆ ಗೋಚರಿಸುತ್ತಿದ್ದ ಏಣಿಯ ಪರಿಸ್ಥಿತಿ.   ಹಂಗೂ ಹಿಂಗೂ ಸವ್ಕಾಶಿ ಹತ್ತಿ ಮಾಳಿಗೆ ನೋಡಿದರೆ ಏನಿತ್ತು? … Read more

ವೈಭವದ ಕೂಟ-ಪ್ಯಾಶನ್ನಿನ ಊಟ ? :ಪಾ.ಮು.ಸುಬ್ರಮಣ್ಯ

ಹಾಗೇ ಸುಮ್ಮನೇ ಏನಾದರೊಂದು ಬರೆಯಬೇಕೆಂದು ಮನಸ್ಸು ತವಕಪಡುತ್ತಿತ್ತು. ವಿಷಯಕ್ಕಾಗಿ ಮನದ ಗಾಳಿಪಟವನ್ನು ಹರಿಯಬಿಟ್ಟೆ.  ಪಟ ನೇರವಾಗಿ ಒಂದು ಅದ್ದೂರಿ ಕಾರ್ಯಕ್ರಮವೊಂದರ ನಡುವೆ ನಿಂತಿತು.  ಸುತ್ತಲೂ ಕಣ್ಣಾಡಿಸಿದೆ.  ವೈಭವಪೂರ್ಣವಾದ ಕಾರ್ಯಕ್ರಮ. ಯಾರೋ ಹಣದಧಿಪತಿಗಳೇ ಈ ಕಾರ್ಯಕ್ರಮದ ಆಯೋಜಕರೆಂದು ಮೇಲ್ನೋಟಕ್ಕೆ ಅನ್ನಿಸಿತು.  ಯಾರಾದರೆ ನನಗೇನು?  ನನಗೆ ಬೇಕಾಗಿರುವ ವಿಷಯ ಸಿಕ್ಕರೆ ಸಾಕು, ಎಂದಂದುಕೊಂಡು ಹುಡುಕತೊಡಗಿದೆ.  ಪ್ರತಿಯೊಬ್ಬರೂ ತಮ್ಮದೇ ಆದ ವೈಯಕ್ತಿಕ ವಿಚಾರಗಳಲ್ಲಿ ತೊಡಗಿದ್ದಾರೆನ್ನಿಸಿತು.  ನನ್ನನ್ನಾರು ಗಮನಿಸಲಿಲ್ಲ.  ಮನದ ಪಟ ಅಲೆದಾಟಕ್ಕಿಳಿದಾಗ ಕೇಳಿಯೇಬಿಟ್ಟಿ.  ’ಇಲ್ಲಿ ನನಗೇನು ಕೆಲಸ? ನನ್ನನ್ನು ಇಲ್ಲಿಗೇಕೆ ಕರೆತಂದೆ? … Read more

ಮೂರು ಕವನಗಳು: ಸಂತೇಬೆನ್ನೂರು ಫೈಜ್ನಟ್ರಾಜ್, ಜಾನ್ ಸುಂಟಿಕೊಪ್ಪ, ಎಸ್. ಕಲಾಲ್

ದ್ವಿಪದಿಗಳು ಕುಡಿದ ಅಮಲಿನಲ್ಲಿಲ್ಲ ಸಖಿ ನೀನಿಲ್ಲ ಎಂಬುದೊಂದು ನೋವೆನಿಸಿಲ್ಲ ನನಗೆ         ಹೆಜ್ಜೆ ಇಟ್ಟಲ್ಲೆಲ್ಲಾ ಮುರಿದ ಹಪ್ಪಳ         ಸದ್ದು ಪುಡಿಯಾದ ಕನಸುಗಳು ಜೀವ ಬಿಟ್ಟವು ನನಗೂ ಎಚ್ಚರ ಇದೆ ನೆನಪಿರಲಿ ಕುಡಿದರೇನು ಮರೆವಲ್ಲ ಹಳೇ ಮೆಲುಕು!         ನಡೆ ನಡೆದಂತೆ ದಾರಿ ಹಿಂದೆ ಅಷ್ಟೆ;         ಹಿಂದಿನದು ಬಿಟ್ಟಿಲ್ಲ ಜೊತೆಗೆ ಅಚ್ಚರಿ ಕನಸ ಚರಂಡಿ ದಾಟಲು ದರ್ದಿದೆ ಸಭ್ಯರೆಲ್ಲಾ ನನ್ನ ಅವಸ್ಥೆಯೆಡೆ ಕಣ್ ನೆಟ್ಟಿದ್ದಾರೆ!         ಹಗಲಿನಲಿ ಹಾಡಾಗಿ … Read more

ಪ್ರಶಸ್ತಿ ಪಿ. ಸಾಗರ ಬರೆದ ಕತೆ: ಸುದೇಷ್ಣೆ

ಏ ಎಲ್ಲಾದ್ರೂ ಟ್ರಿಪ್ ಹೋಗೋಣ್ವಾ ? ಬೆಂಗ್ಳೂರಿಗೆ ಬಂದು ತುಂಬಾ ದಿನ ಆಯ್ತು ಕಣೋ. ಏನೂ ನೋಡಿಲ್ಲ ಸರಿಯಾಗಿ.  ಹೂಂ. ಸರಿ. ಎಲ್ಲಿಗೆ ?  ಅರೆ, ವಾರ ವಾರ ಕಾಲಿಗೆ ಚಕ್ರ ಕಟ್ಕೊಂಡವ್ನ ತರ ತಿರ್ಗೋದು ನೀನು. ಬೈಕಂತೆ, ಕಾರಂತೆ. ಬಸ್ಸಂತೆ. ಆ ಫೇಸ್ಬುಕ್ಕನ್ನೇ ಮಿನಿ ಹಾರ್ಡುಡಿಸ್ಕು ಮಾಡೋ ಅಷ್ಟು ಫೋಟೋ ತುಂಬ್ಸಿದ್ದೀಯ. ನಂಗೆ ಕೇಳ್ತಿಯಲ್ಲೋ ಎಲ್ಲೋಗದು ಅಂತ. ನೀನು ಹೋಗಿರೋ ಜಾಗಗಳಲ್ಲೇ ಯಾವ್ದಾದ್ರೂ ಹೇಳೋ. ಊಂ… ನಿಂಗೆ ಎಷ್ಟೊತ್ತಿನ ಪ್ರಯಾಣ ಆಗಿರ್ಬೇಕು ? ಒಂದೆರಡು ಘಂಟೆ … Read more

ಗಾಂಧಿ: ನಾ.ಧನಪಾಲ

ಮೂಲ: ತೆಲುಗು ಕತೆ ಲೇಖಕರು: ಸಲೀಂ, ಕನ್ನಡಕ್ಕೆ: ನಾ. ಧನಪಾಲ ಪ್ರಮುಖ ಸಾಪ್ತಾಹಿಕದಲ್ಲಿ ಗಾಂಧಿ ಬರೆದ ಲೇಖನವನ್ನು ಓದಿ ಮುಗಿಸಿದೊಡನೆ ಕಣ್ಣುಗಳು ಒದ್ದೆಯಾದವು.  ಅರಣ್ಯವನ್ನು ನಂಬಿಕೊಂಡು ಬದುಕುತ್ತಿರುವ ಬುಡಕಟ್ಟಿನವರ ಏಳು ಬೀಳುಗಳನ್ನು ಎಷ್ಟು ಚೆನ್ನಾಗಿ ಬರೆದಿದ್ದನೋ ?  ಬಹಳ ಹೃದ್ಯವಾಗಿ. . . !  ಮನಸ್ಸನ್ನು ಕಲಕುವಂತಿದೆ. ಹಾಗೆ ಬರೆಯಲು ಗಾಂಧಿಯಂತಹ ಮಾನವತಾವಾದಿಗೆ ಮಾತ್ರವೇ ಸಾಧ್ಯ.  ಗಾಂಧಿ ತಾನು ನಂಬಿರುವ ತನ್ನ ಸಿದ್ಧಾಂತಗಳಿಗಾಗಿ ಪ್ರಾಣಾರ್ಪಣೆಗಾದರೂ ಸಿದ್ಧನಿರುವ ಧೀಮಂತ ವ್ಯಕ್ತಿ.  ಕರ್ನಾಟಕದಲ್ಲಿ ಆತನಿಗೆ ಬಹಳ ಅಭಿಮಾನಿಗಳಿದ್ದಾರೆ.   ಮಾನವತೆಯನ್ನು … Read more

ಪಂಚಮಹಾಸಾಗರದ ಐದು ಕೊಳೆಗುಂಡಿಗಳು: ಅಖಿಲೇಶ್ ಚಿಪ್ಪಳಿ ಅಂಕಣ

(ಭೂಮಂಡಲದ ಶೇ ೭೦ ಭಾಗ ನೀರಿನಿಂದ ಸುತ್ತುವರೆದಿದೆಯಾದ್ದರಿಂದ ಅಷ್ಟೂ ನೀರನ್ನೂ ಸೇರಿಸಿ ಒಂದೇ ಮಹಾಸಾಗರ ಎನ್ನಬಹುದು. ಆದರೂ ದೇಶಗಳು ತಮ್ಮ ಗಡಿಗಳಿಗೆ ಅನುಸಾರವಾಗಿ ೫ ಮಹಾಸಾಗರಗಳನ್ನು ಗುರುತಿಸಿಕೊಂಡಿದ್ದಾರೆ. ೧. ಪೆಸಿಫಿಕ್ ಮಹಾಸಾಗರ ೨. ಅಟ್ಲಾಂಟಿಕ್ ಮಹಾಸಾಗರ ೩. ಹಿಂದೂ ಮಹಾಸಾಗರ ೪. ಅಂಟಾರ್ಟಿಕ್ ಮಹಾಸಾಗರ ಮತ್ತು ಆರ್ಕ್‌ಟಿಕ್ ಮಹಾಸಾಗರ) ಮೊನ್ನೆ ಸೋಮವಾರ ಅಂದರೆ ದಿನಾಂಕ:೨೧/೦೭/೨೦೧೪ರ ಬೆಳಗ್ಗೆ ತೋಟದಲ್ಲಿ ಸಣ್ಣ-ಪುಟ್ಟ ಕೆಲಸ ಮಾಡುವಾಗ ಅಪ್ಪಟ ಭೂಮಿಪುತ್ರನ ಜಂಗಮವಾಣಿಯಿಂದ ಕರೆ ಬಂತು ಎಂದು ಮನೆಯಿಂದ ಕೂಗಿದರು. ಈ ಭೂಮಿಪುತ್ರನ ದೂರವಾಣಿ … Read more

ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದಲ್ಲಡಗಿರುವ ರಾಜಕೀಯ…! : ನಂದಿಕೇಶ್. ಬಾದಾಮಿ

         ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಲಾವಿದರೆಂದು ಪಿಂಚಣಿ ಪಡೆಯುತ್ತಿರುವವರ ವಿವರವನ್ನು ಗಮನಿಸಿದರೆ, ಕಲೆಯ ಗಾಳಿ;ಗಂಧ ಗೊತ್ತಿರದವರೆ ಬಹುಪಾಲು ಆ ಪಟ್ಟಿಯಲ್ಲಿ ತುಂಬಿಕೊಂಡಿದ್ದಾರೆ. ಅದೇ ರೀತಿ ಶಿಕ್ಷಣ ಕ್ಷೇತ್ರದಲ್ಲಿ ತಾಲೂಕು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಆದರ್ಶ ಶಿಕ್ಷಕ/ಕಿ ಪ್ರಶಸ್ತಿ ಪಡೆದವರ ವಿವರವನ್ನು ಪರಿಶೀಲಿಸಿದರೆ ಅದರಲ್ಲೂ ಕೂಡಾ ರಾಜಕೀಯ ದುರ್ವಾಸನೆಯ ಘಾಟು ಮೂಗಿಗೆ ಅಮರಿಕೊಳ್ಳುತ್ತದೆ. ಇನ್ನು ಬಹುತೇಕ ಪ್ರಶಸ್ತಿ ಪುರಸ್ಕಾರಗಳಂತೂ ರಾಜಕೀಯ ಕರಿನೆರಳಿನಲ್ಲಿಯೇ ವಿತರಣೆಯಾಗುತ್ತಿವೆ. ಮೊನ್ನೆಮೊನ್ನೆಯಷ್ಟೆ ಹಿರಿಯ ಸಾಹಿತಿ ಕುಂ. … Read more

ಮರೆವು: ವೆಂಕಟೇಶ್ ಪ್ರಸಾದ್

ಹಿ೦ದಿನ ದಿನ ಅಲರಾ೦ ಇಡಲು ಮರೆತ ತಪ್ಪಿಗೆ ಇ೦ದು ತಡವಾಗಿ ಏಳುವ೦ತಾಗಿತ್ತು.ಎದ್ದವನೇ ದೈನ೦ದಿನ ಕೆಲಸ ಕಾರ್ಯಗಳನ್ನು ಪೂರೈಸಿ ಆಫೀಸಿಗೆ ಹೊರಟು ಈ ಮರೆವಿಗೆ ಶಪಿಸುತ್ತಾ ಬಸ್ ಹತ್ತಿದ ನ೦ತರವೇ ಧೀರ್ಘವಾಗಿ ಉಸಿರು ತೆಗೆದುಕೊ೦ಡದ್ದು. ಅತ್ತ ತಿರುಗಿದರೆ ಕ೦ಡಕ್ಟರ್ ಟಿಕೆಟ್ ಟಿಕೆಟ್ ಎ೦ದು ನಿ೦ತಿದ್ದ. ಪಾಸ್ ತೋರಿಸೋಣ ಕಿಸೆ ಬ್ಯಾಗ್ ತಡಕಾಡಿದರೆ ಎಲ್ಲಿದೇ?? ಪಾಸ್ ಮನೆಯಲ್ಲೇ ಮರೆತಿದ್ದೆ. ಮತ್ತೆ ಮರೆವಿಗೊ೦ದಷ್ಟು ಶಾಪ ಹಾಕಿ ಪೂಒರ್ತಿ ಬಸ್ ಚಾರ್ಜ್ ಕೊಟ್ಟು ಕಿಟಕಿಯತ್ತ ಮುಖ ಮಾಡಿದೆ.  ಈ ಮರೆವಿನ ವಿಷಯ ಬ೦ದಾಗ … Read more

ಒಂದಿಷ್ಟು ಪುಟ್ಟ ಕತೆಗಳು:ಸುಚಿತ್ರ ಕೆ. ಕಾವೂರು.

ಎರಡು ಕೋಮಿನ ಜನರ ನಡುವೆ ಜಗಳ ಆರಂಭವಾಗಿತ್ತು..  ಕಾರಣ ತಮ್ಮ ಧರ್ಮದ ಭಿತ್ತಿ ಪತ್ರ ಅಂಟಿಸಿ ಅಪ ಪ್ರಚಾರ ಮಾಡಿದರೆಂದು… ಒಂದು ಆಡು ಬಂದು ಆ ಭಿತ್ತಿಪತ್ರವನ್ನು ನಿಧಾನವಾಗಿ ಹರಿದು ಮೆಲ್ಲತೊಡಗಿತು..  ***** ಅಣ್ಣ ತನ್ನ ತಂಗಿಯ ಗಂಡನ ಮನೆಯ ಪರಿಸ್ಥಿತಿ ಬಗ್ಗೆ ಹೆಂಡತಿ ಜೊತೆ ಹೇಳಿ ವ್ಯಥೆ ಪಡುತ್ತಿದ್ದ…ಆದರೆ ಹೆಂಡತಿ ತನ್ನ ಮನೆಯಲ್ಲಿ ನರಕ ಅನುಭವಿಸುವುದ ಕಂಡೂ ಕಾಣದಂತೆ ನಟಿಸುತ್ತಿದ್ದ. ***** ಅಮ್ಮ ನಿನ್ನ ಸೊಸೆಯನ್ನು ಹದ್ದುಬಸ್ತಿನಲ್ಲಿಡು ಇಲ್ಲಾಂದ್ರೆ ನಿನ್ನ ಮೂಲೆಗೆ ಹಾಕಿಯಾಳು ಎಂದು ಅತ್ತೆಯನ್ನು … Read more

ಶರಧಿಯ ದಡದಲ್ಲಿ ಪ್ರೀತಿಯ ಕನಸು:ಪದ್ಮಾ ಭಟ್ ಇಡಗುಂದಿ

ಮುಸ್ಸಂಜೆಯ ಸೂರ್ಯನ ಅಂತಿಮ ಹೊತ್ತು, ಕೆಂಪು ಕಿರಣ ಮೊಗದಲ್ಲಿ ಬೀಳುತ್ತಿರಲು, ಬೇಡವೆಂದರೂ ಕಂಗಳು ಮುಚ್ಚಿದವು. ಅದೇ ತಾಮುಂದು ತಾಮುಂದೆ ಎಂದು ಓಡಿ ಬರುತ್ತಿರುವ ಅಲೆಗಳು. ಸಮುದ್ರದಂಡೆಯ ಮೇಲೊಂದು ಪುಟ್ಟ ಸ್ವರ್ಗಲೋಕ.. ಹಕ್ಕಿಗಳ ಇಂಚರಕ್ಕೆ ಧ್ವನಿಯಾಗುವ ಹೃದಯಗೀತೆ. ಕನಸುಗಳನೆಲ್ಲ ಬಿಚ್ಚಿ ಹರವಿ ಹಾಕಿಕೊಂಡ ಕಂಗಳಿಗೆ ನಕ್ಷತ್ರದಂತಹ ಹೊಳಪು. ಯೌವನದ ಬೆಚ್ಚಗಿನ ಕನಸುಗಳು. ತಂಪು ತಂಗಾಳಿ ಮಿಶ್ರಿತ ಆ ಇಳಿಸಂಜೆಯಲ್ಲಿ ತುಸು ಬೆಳಕು ಕಂಡಂತೆ ಮತ್ತಷ್ಟು ಸೊಗಸು. ಸಿಹಿತನದಲ್ಲಿ ಬೊಂಬಾಯಿ ಮಿಠಾಯಿ ಮಾರುವವನ ಗಾಡಿಯ ಗಂಟೆಯ ಸದ್ದು… ಇತ್ತ ಇನ್ನೊಂದು … Read more

ಸಾಮಾನ್ಯಜ್ಞಾನ ಪ್ರಶ್ನೋತ್ತರಗಳು: ಮಹಂತೇಶ್ ಯರಗಟ್ಟಿ

ಪ್ರಶ್ನೆಗಳು : ೧.    ನಡೆದಾಡುವ ವಿಶ್ವಕೋಶ ಎಂದು ಕರೆಸಿಕೊಳ್ಳುವ ಕನ್ನಡದ ಲೇಖಕರು ಯಾರು? ೨.    ಅತೀ ಹೆಚ್ಚು ತೆಂಗು ಉತ್ಪಾದಿಸುವ ರಾಜ್ಯ ಯಾವುದು? ೩.    ಉಪಲಬ್ಧವಿರುವ ಕನ್ನಡದ ಮೊದಲ ಶಾಸನ ಯಾವುದು? ೪.    ೧೯೮೩ರಲ್ಲಿ ಯಶವಂತ ಚಿತ್ತಾಲರ ಯಾವ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ? ೫.    ಪಾರ್ಸಿ ಧರ್ಮದ ಸಂಸ್ಥಾಪಕರು ಯಾರು? ೬.    ಕನ್ನಡದ ಜಾನಪದ ಕ್ಷೇತ್ರದಲ್ಲಿ ಪ್ರಥಮ ಡಾಕ್ಟರೇಟ್ ಪದವಿ ಪಡೆದವರು ಯಾರು? ೭.    ಮೊಟ್ಟ ಮೊದಲು ಕಂಡು ಹಿಡಿದ ಕೃತಕ ದಾರ … Read more

ಅತಿಥಿ ಸಂಪಾದಕರ ನುಡಿ

ನಮಗೆ ನಾಳೆಗಳಿಲ್ಲ, ಏಕೆಂದರೆ ಈ ನೆಲದಲ್ಲಿ ಮಕ್ಕಳಿಗೆ ನಾವು ಭವಿಷ್ಯ ಉಳಿಸುತ್ತಿಲ್ಲ. ಮಹಾಮಾರಿಯೊಂದರಂತೆ ಈ ದಿನಗಳನ್ನು ಸಂಪೂರ್ಣವಾಗಿ ಆವರಿಸಿಕೊಂಡಿರುವ ’ ಮಕ್ಕಳ ಮೇಲಿನ ದೌರ್ಜನ್ಯ’ ಎನ್ನುವ ಮನೋಭಾವದೆಡೆಗೆ ನನ್ನ ಧಿಕ್ಕಾರವಿರಿಸಿಯೇ ಈ ಸಂಚಿಕೆಯನ್ನು ನಿಮ್ಮ ಮುಂದೆ ಇರಿಸಲಾಗಿದೆ. ಜಗತ್ತಿನ ಯಾವ ಮಗುವಿನ ಯಾವುದೇ ನೋವಿಗೂ ಕುಳಿತಲ್ಲೇ ಮಮ್ಮಲ ಮರುಗುವ, ಮಾತ್ರವಲ್ಲ ಮಕ್ಕಳ ಕಣ್ಣೀರು ಒರೆಸಲು ತನ್ನ ಕೈಲಾದಷ್ಟು ಕೆಲಸವನ್ನೂ ಮಾಡುವ ಪಪ್ಪನ ಮಗಳಾಗಿ ಇಂತಹ ವಿಷಯದ ಬಗ್ಗೆ ಸಂಚಿಕೆಯ ಸಂಪಾದಕತ್ವ ನನ್ನ ಪಾಲಿಗೆ ಬಂದದ್ದನ್ನು ಹೆಮ್ಮೆಯಿಂದಲೇ ಸ್ವೀಕರಿಸಿ … Read more

ಮಕ್ಕಳು, ಲೈಂಗಿಕ ದೌರ್ಜನ್ಯ ಮತ್ತು ಕಾನೂನು: ಅಂಜಲಿ ರಾಮಣ್ಣ

ಅಂತರಾಷ್ಟ್ರೀಯ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಭಾರತ ದೇಶವು ಸಹಿ ಹಾಕಿ ದಶಕಗಳೇ ಸಂದಿವೆ. ಆದರ ಪ್ರಕಾರ ಮತ್ತು ನಮ್ಮ ಸಂವಿಧಾನದ ಮೂಲ ಆಶಯದಂತೆ ಮಕ್ಕಳ ಸಂರಕ್ಷಣೆ ನಮ್ಮ ಮೂಲಭೂತ ಕರ್ತವ್ಯವೇ ಆಗಿದೆ. ಅದಕ್ಕಾಗಿ ಸರ್ಕಾರಗಳು ಹಲವಾರು ವಿಶೇಷ ಕಾನೂನುಗಳನ್ನು ರಚಿಸಿರುವುದು ಮಾತ್ರವಲ್ಲ ಹಲವಾರು ಯೋಜನೆಗಳನ್ನೂ ರೂಪಿಸಿ ಜಾರಿಗೆ ತಂದಿವೆ. “ಮಕ್ಕಳಿಗೆ ಉತ್ತಮ ಭವಿಷ್ಯವೇ ಭಾರತದ ಭವಿಷ್ಯ” ಎಂಬ  ದೂರದೃಷ್ಟಿಯಿಂದ  ಇಲಾಖೆಯ ನೀತಿ, ಯೋಜನೆಗಳು ಮತ್ತು ಕಾರ್ಯಕ್ರಮಗಳು ಮಕ್ಕಳ ಪರಿಪೂರ್ಣ ಅಬಿವೃದ್ಧಿಗಾಗಿ ಹೆಚ್ಚು ಒತ್ತು ನೀಡುತ್ತಿದ್ದು, ಇದರಲ್ಲಿ ಮಕ್ಕಳ … Read more

ಮಕ್ಕಳ ಬಾಳಿನ ಬೆಳಕಿನ ಪಂಜು ಆಗೋಣ: ನಟರಾಜು ಎಸ್. ಎಂ.

ಒಂದು ಭಾನುವಾರ ಬೆಳಿಗ್ಗೆ ಗೆಳತಿಯೊಡನೆ ಫೋನಿನಲ್ಲಿ ಮಾತನಾಡುತ್ತಿದ್ದಾಗ ಆಕೆ  "  ಇವತ್ತು ಒಂದು ನ್ಯೂಸ್ ನೋಡಿದೆ. ನಾಲ್ಕು ವರ್ಷದ ಹುಡುಗಿಯನ್ನು ಹತ್ತು ವರ್ಷದ ಹುಡುಗ ಅತ್ಯಾಚಾರ ಮಾಡಿದ್ದಾನೆ. ಆ ನ್ಯೂಸ್ ನೆನೆಸಿಕೊಂಡರೆ ಭಯ ಆಗುತ್ತೆ ಜೊತೆಗೆ ನಾವು ಯಾವ ಲೋಕದಲ್ಲಿ ಬದುಕುತ್ತಿದ್ದೇವೆ ಅಂತ ಅನಿಸುತ್ತೆ." ಎಂದು ಹೇಳಿ ಮೌನ ತಾಳಿದಳು. ಅವಳ ಮಾತುಗಳ ಕೇಳಿ ಮನಸ್ಸು ಒಂದು ಶೂನ್ಯ ಭಾವಕ್ಕೆ ಶರಣಾಗಿತ್ತು. ಕಾಕತಳೀಯವೆಂಬಂತೆ ಅಚನಕ್ಕಾಗಿ ಆ ದಿನವೇ ಜಿಲ್ಲಾ ಮಟ್ಟದ "ಮಕ್ಕಳ ಮೇಲಿನ ದೌರ್ಜನ್ಯ ತಡೆ" ಕುರಿತ … Read more

ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆ ಸಾಧ್ಯವೇ ? ಸಾಧುವೇ ?: ರಜನಿ ಆಚಾರ್ಯ

"Every soul is born divine" ಎನ್ನುತ್ತಾರೆ ವಿವೇಕಾನಂದರು. ಈ ಜಗತ್ತಿನಲ್ಲಿ ಹುಟ್ಟುವ ಪ್ರತಿ ಜೀವಿಯೂ ದೈವೀಕತೆಯ ಅಡಕಮುದ್ರೆಯೇ. ಆದರೆ ಆ ದೈವೀಕತೆಯ ರಾಗ ಸುಶ್ರಾವ್ಯವಾಗಿ ಹೊರಹೊಮ್ಮಿಸಲು ಪ್ರತಿ ಜೀವಿಯೂ ಅದಮ್ಯ ಆತ್ಮವಿಶ್ವಾಸದೊಂದಿಗೆ ಶೃತಿ ಸೇರಿಸಲೇಬೇಕು. ಅದಕ್ಕೆ ಮೊದಲ ಮೆಟ್ಟಿಲೇ ಬಾಲ್ಯ. ಪ್ರತಿ ಮಗುವಿನ ಮನಸ್ಸು ಬಾಲ್ಯದಲ್ಲೇ ಸರ್ವಾಂಗೀಣ ಅಭಿವೃದ್ಧಿ ಹೊಂದಿದರೆ ಮಾತ್ರ ಆ ಮಗು ಮುಂದೆ ಒಂದು ಆರೋಗ್ಯಕರ ಮನಸ್ಸನ್ನು ಹೊಂದಿ ದೈವೀಕತೆಯನ್ನು ಸಾಧಿಸುವೆಡೆ  ಎಡೆಯಿಡಬಲ್ಲದೇನೊ ಹಾಗೂ ಪ್ರಸ್ತುತ ಸಮಾಜದ ಸರ್ವತೋಮುಖ ಬೆಳವಣಿಗೆಯ ಕಣ್ಣುಗಳಾಗಿ ರಾಷ್ಟ್ರದ … Read more

ನಾನ್ಯಾವ ಜಾತಿ?: ಹೃದಯಶಿವ

ಅದೇಕೋ ನೆನಪಾಗುತ್ತಿದೆ. ಐದಾರು ವರ್ಷಗಳ ಹಿಂದೆ ನಾನು ಕಂಡ ಆ ನಾಲ್ವರು ಯುವಕರ ತಂಡ. ನನ್ನನ್ನು ಭೇಟಿ ಮಾಡಲು ಬಂದಿದ್ದರು. ಎಲ್ಲರೂ ಹೆಚ್ಚು ಕಮ್ಮಿ ಇಪ್ಪತ್ತು-ಇಪ್ಪತ್ತೆರಡರ ವಯೋಮಾನದವರು. ಅವರಿವರ ಕೈ ಕಾಲು ಹಿಡಿದು ನಾಲ್ಕು ಕಾಸು ಎತ್ತಿ ಬೆಂಗಳೂರಿನಲ್ಲಿ ತಮ್ಮ ಜಾತಿ ಹೆಸರಿನಲ್ಲಿ ಪುಟ್ಟದೊಂದು ಕಚೇರಿ ಆರಂಭಿಸಿದ್ದವರು. ಚಿಗುರುಮೀಸೆ, ಪ್ರಶಾಂತ ಕಣ್ಣು, ಚೇತೋಹಾರಿ ಮುಖದ ಉತ್ಸಾಹಿ ಹುಡುಗರು. ಕನಕಪುರ, ಮಳವಳ್ಳಿ, ಬನ್ನೂರು ಕಡೆ ಇಂಥವರು ಸಿಗುತ್ತಾರೆ. ಯಾರಿಗೂ ಪುಸ್ತಕಗಳ ನಂಟು ಇದ್ದಂತ್ತಿಲ್ಲ. ನನ್ನನ್ನು ಕಾಣಲೆಂದು ಬಂದರು. "ಈ … Read more