ತುಪ್ಪದ ರುಚಿ ನಂತರವೂ ಸಾಲ ಮಾಡಲೇಬೇಕಾ?: ಅಮರ್ ದೀಪ್ ಪಿ.ಎಸ್.

ಡಾ. ಬಿ. ಆರ್. ಅಂಬೇಡ್ಕರ್ ಅವರು ಹೇಳಿದ್ದರೆನ್ನಲಾದ  ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಒಂದು ಘಟನೆ. ದಲಿತ ಸಮುದಾಯದವರು ಸಾಮೂಹಿಕ ಭೋಜನದಲ್ಲಿ ತುಪ್ಪವನ್ನು ಬಡಿಸಿ, ಊಟ ಮಾಡುವ ವೇಳೆ ಮೇಲ್ವರ್ಗದ ಜನರು ಅಡುಗೆ ಪಾದಾರ್ಥಗಳನ್ನು ಚೆಲ್ಲಾಪಿಲ್ಲಿ ಮಾಡಿ ಊಟ ಮಾಡುತ್ತಾ ಕುಳಿತ ಜನರನ್ನು ಹಿಗ್ಗಾಮುಗ್ಗಾ ಥಳಿಸಿದ್ದರಂತೆ. ಕಾರಣ, ಆ ವರ್ಗದ ಜನರು ತುಪ್ಪ ತಿನ್ನಬಾರದು.  ತಿಂದದ್ದು ಮೇಲ್ವರ್ಗದ ಜನಗಳಿಗೆ ಮಾಡಿದ ಅಪಮಾನವಂತೆ. ಇಂಥ ಪಿಡುಗುಗಳನ್ನು ಸಾಕ್ಷರತೆ ಸಾರುವ ಮೂಲಕ ಮಾತ್ರ ತೊಡಗಿಸಲು ಸಾಧ್ಯವೆಂದರಿತು ಡಾ. ಬಿ. ಆರ್. ಅಂಬೇಡ್ಕರ್ … Read more

ನಾಲ್ವರ ಕವನಗಳು: ಜಾನ್ ಸುಂಟಿಕೊಪ್ಪ, ಪರಶು ರಾಮ್, ಮುರಳಿ ತರೀಕೆರೆ, ಪವಿತ್ರ ಆಚಾರ್ಯ

ಮೂಲ ನನ್ನ ಬಯಕೆಗಳ ಮೂಲ ಈ ಎದೆಗೂಡಾಗಿದ್ದರೆ ತುರ್ತಾಗಿ ಎದೆಗೂಡನು ಕೆಡವಿ ಬಿಡುವುದು ಲೇಸು ಇಲ್ಲವಾದರೆ – ಈ ದೇಹ ಪಾಳು ಬಿದ್ದೀತು ,,.   ನನ್ನ ಬಯಕೆಗಳ ಮೂಲ ಈ ನೆತ್ತರಾದರೆ ಒಮ್ಮೆ ಎಲ್ಲವ ಬತ್ತಿಸುವುದು ಲೇಸು ಇಲ್ಲವಾದರೆ – ಮೈ ನೀಲಿಗಟ್ಟೀತು ,,,   ನನ್ನ ಬಯಕೆಗಳ ಮೂಲ ಈ ಉಸಿರಾದರೆ ಒಮ್ಮೆ ಸತ್ತುಬಿಡುವುದು ಲೇಸು ಇಲ್ಲವಾದರೆ – ಉಸಿರಿಗೆ ಉಸಿರು ಸೇರಿ ಊರು ಕೆಟ್ಟೀತು ,,,   ನನ್ನ ಬಯಕೆಗಳ ಮೂಲ ಈ … Read more

ಅಣ್ಣಾ ಎಂಬ ಕೂಗಲಿ ಕರಗಿಹೋಗುವ ಮುನ್ನ: ಪ್ರಶಸ್ತಿ ಅಂಕಣ

ಪ್ರತೀ ಪದಕ್ಕೂ ತನ್ನದೇ ಆದೊಂದು ನೆನಪ ಬುತ್ತಿಯಿರುತ್ತಾ ಅಂತ.  ಕೆಲವದ್ದು ನಲಿವ ನರ್ತನವಾದರೆ ಕೆಲವದ್ದು ನೋವ ಮೌನ ಗಾನ. ಅಕ್ಕ ಅನ್ನೋ ಎರಡಕ್ಷರದ ಮಾಧುರ್ಯ, ಗೆಳತಿ ಅನ್ನೋ ಮೂರಕ್ಷರದ ನವಿರು ಭಾವಗಳು, ಅಮ್ಮಾ ಅನ್ನೋ ಮಮತೆ, ಅಪ್ಪ ಅನ್ನೋ ಗೌರವ, ಹೆಮ್ಮೆ .. ಹೀಗೆ ಪ್ರತೀ ಪದವೂ ತಮ್ಮದೇ ಆದೊಂದು ಹೊಸಲೋಕಕ್ಕೆ ಕೊಂಡೊಯ್ಯುವಂತೆ. ಸ್ನೇಹ ಎಂಬ ಪದದ್ದೆಂತೂ ನೆನಪುಗಳ ಬುತ್ತಿಯಲ್ಲ. ಅದೊಂದು ಜಾತ್ರೆ. ತಿರುಗಿದಷ್ಟೂ ಮುಗಿಯದಷ್ಟು, ನೋಡಿದಷ್ಟೂ ದಣಿಯದಷ್ಟು , ಹೊಸ ಹೊಸ ದಿಕ್ಕಲ್ಲಿ ಹೊಸ ಹೊಸ … Read more

ಐ.ಲವ್ ಯೂ ಅಪ್ಪ: ಪದ್ಮಾ ಭಟ್, ಇಡಗುಂದಿ.

ನೀನ್ಯಾಕೆ ನನ್ನನ್ನು ಇಷ್ಟು ಪ್ರೀತಿಸ್ತೀಯಾ.. ನೀ ನನಗಾಗಿ ಮಾಡೋ ಒಂದೊಂದು ಪ್ರೀತಿಗೂ, ತ್ಯಾಗಕ್ಕೂ, ನಿಸ್ವಾರ್ಥದ ಮನಸಿಗೊಮ್ಮೆ ಹೀಗೆ ಕೇಳಿ ಬಿಡೋಣವೆಂದೆನಿಸುತ್ತದೆ.. ನನ್ನಗೊಂದಲ ಮನಸ್ಸಿಗೆ ನೀನು ಸಂತೈಸಿದ ದಿನಗಳು ಅದೆಷ್ಟೋ.. ನನ್ನ ಖುಷಿಯಲ್ಲಿಯೇ ನಿನ್ನ ಖುಷಿಯನ್ನು ಕಂಡ ಸಮಯಕ್ಕಂತೂ ಬಹುಶಃ ಲೆಕ್ಕವೇ ಇರಲಿಕ್ಕಿಲ್ಲ..ನಾ ಸೋತಾಗ ನನ್ನ ಕಣ್ಣೀರಲ್ಲಿಯೇ, ಹೊಸ ಭರವಸೆಯನ್ನು ಹುಟ್ಟಿಸಿದವನು ನೀನು..ಯಾವುದೇ ಒಳ್ಳೆಯ ಕೆಲಸ ಮಾಡಲಿ ಅದಕ್ಕೆಲ್ಲ ಗಟ್ಟಿಯಾದ ಸಪೋರ್ಟ್‌ ಕೊಡುತ್ತಾ ಬಂದಿದ್ದೀಯ..ಮಗಳೇ ಚನ್ನಾಗಿ ಓದು ಎಂಬ ಮಾತನ್ನು ನನ್ನ ಕಿವಿಯಲ್ಲಿ ಎಂದೂ ಗುನುಗುನಿಸುತ್ತಿರುವಷ್ಟು ಬಾರಿ ನೀ … Read more

ಕೃತಕ ಮಾಂಸ-ಎಲೆ ಮತ್ತು ವಿಶ್ವಬ್ಯಾಂಕ್ ಎಂಬ ವಿಷಜಾಲ: ಅಖಿಲೇಶ್ ಚಿಪ್ಪಳಿ ಅಂಕಣ

ಮೊನ್ನೆ ಅಂದರೆ ಅಗಸ್ಟ್ ೩ ೨೦೧೪ರಂದು ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವದ ಪ್ರಧಾನಿ ನೆರೆ ದೇಶವಾದ ನೇಪಾಳಕ್ಕೆ ಭೇಟಿ ನೀಡಿದ್ದರು. ಕಳೆದ ೧೭ ವರ್ಷಗಳಿಂದ ಯಾವುದೇ ಭಾರತದ ಪ್ರಧಾನಿ ಅಲ್ಲಿಗೆ ಭೇಟಿ ನೀಡಿರಲಿಲ್ಲ. ನೇಪಾಳದ ಪ್ರಸಿದ್ಧ ಪಶುಪತಿನಾಥ ದೇವಾಲಯಕ್ಕೆ ರುದ್ರಾಕ್ಷಿ ಸರ ತೊಟ್ಟು ಕೊಂಡು ಭೇಟಿ ನೀಡಿದ ಸಮಯದಲ್ಲೇ ಇತ್ತ ರಾಜ್ಯ ಮಟ್ಟದ ಪತ್ರಿಕೆಯಲ್ಲಿ ರುದ್ರಾಕ್ಷಿಗೆ ಬೇಡಿಕೆ ಹೆಚ್ಚುತ್ತಿದೆ ಎಂದು ವರದಿ ಮಾಡಿತ್ತು. ನೆರೆಯ ಚೀನಾದ ಮಂದಿ ಕಾರಿನ ಸೀಟು ಕವರ್‌ಗಳಿಗೆ ರುದ್ರಾಕ್ಷಿಯನ್ನು ಬಳಸುತ್ತಿದೆ ಎಂದು ಹೇಳಿತ್ತು. ಇದೇ … Read more

ಸಾಮಾನ್ಯ ಜ್ಞಾನ (ವಾರ 40): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು ೧.    ಗುಜರಾತಿ ಲೇಖಕ ಪನ್ನಾಲಾಲ್ ಪಟೇಲವರ ಯಾವ ಕೃತಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿದೆ? ೨.    ಎಡಕಲ್ಲು ಗುಡ್ಡದ ಮೇಲೆ ಕಾದಂಬರಿಯ ಕರ್ತೃ ಯಾರು? ೩.    ಮೀರಾಬಾಯಿ ಯಾವ ಸಂತತಿಯ ರಾಣಿ? ೪.    ಕರ್ನಾಟಕದಲ್ಲಿ ದೊಡ್ಡ ವಿದ್ಯುತ್ ಯೋಜನೆ ಹೊಂದಿರುವ ನದಿ ಯಾವುದು? ೫.    ಮೇಘಾಲಯ ರಾಜ್ಯದ ಪ್ರಾದೇಶಿಕ ಭಾಷೆ ಯಾವುದು? ೬.    ಕಾವೇರಿ ನದಿ ಸೃಷ್ಟಿಸಿರುವ ಎರಡು ಪ್ರಮುಖ ಜಲಪಾತಗಳು ಯಾವುವು? ೭.    ರಕ್ಕಸತಂಗಡಿಯ ಯುದ್ಧ ನಡೆದ ವರ್ಷ ಯಾವುದು? ೮.    ಮೂರು ಹಂತದ ಪಂಚಾಯತ್ … Read more

ಬಾಡಿಗೆ ಮನೆಗಾಗಿ ಬಾಡಿದ ಮನಗಳು….: ಸಂತೋಷ ಗುಡ್ಡಿಯಂಗಡಿ

೧೯೧೮ರಲ್ಲಿ ನಾನು ಭಾರತಕ್ಕೆ ಮರಳಿ ಬಂದೆ. ನಾನು ಬರೋಡಾ ರಾಜ್ಯದ ಹಣಕಾಸಿನ ಸಹಾಯದಿಂದ ಉಚ್ಛ ಶಿಕ್ಷಣ ಪಡೆದವನಾದ್ದರಿಂದ ಒಪ್ಪಂದಕ್ಕೆ ಅನುಗುಣವಾಗಿ ಆ ರಾಜ್ಯಕ್ಕೆ ನನ್ನ ಸೇವೆಯನ್ನು ಸಲ್ಲಿಸಬೇಕಾಗಿತ್ತು. ಹೀಗಾಗಿ ಭಾರತಕ್ಕೆ ಮರಳಿದ ಕೂಡಲೇ ನೇರವಾಗಿ ಬರೋಡಾಕ್ಕೆ ಬಂದೆ. ಯುರೋಪ್ ಮತ್ತು ಅಮೆರಿಕೆಯಲ್ಲಿನ ಐದು ವರುಷಗಳ ವಾಸ್ತವ್ಯವು ನಾನು ಅಸ್ಪೃಶ್ಯನೆಂಬ ಪ್ರಜ್ಞೆಯನ್ನು ಸಂಪೂರ್ಣವಾಗಿ ಅಳಿಸಿಹಾಕಿತ್ತು. ಬರೋಡಾದಲ್ಲಿ ’ವಿಶಿ’ ಎಂದು ಕರೆದುಕೊಳ್ಳುವ ಹಿಂದೂ ಹೋಟೆಲ್ಲುಗಳು ಇದ್ದದ್ದು ನನಗೆ ತಿಳಿದಿದ್ದವು. ಅವು ನನಗೆ ಪ್ರವೇಶ ನೀಡಲಾರವು. ಅವುಗಳಲ್ಲಿ ಪ್ರವೇಶಿಸಲು ಇದ್ದ ಒಂದೇ … Read more

ತಾತನ ಗೋರಿ ಮತ್ತು ನೆನಪುಗಳು: ಹೃದಯಶಿವ ಅಂಕಣ

ದಟ್ಟ ಮೌನ ಕವಿದಿದೆ. ತಾತನ ಗೋರಿಯ ಪಕ್ಕದಲ್ಲಿ ಕುಳಿತು ಸುತ್ತಲೂ ದಿಟ್ಟಿಸಿದರೆ ಹಸಿರು ಹೊಲಗಳು, ಬೆಟ್ಟದ ನೆತ್ತಿಗೆ ಮುತ್ತುಗರೆವ ಕೆಂಪುಮೋಡಗಳು, ಸುತ್ತಣ ಮರಗಳ ಗೂಡುಗಳಲ್ಲಿನ ಹಕ್ಕಿಮರಿಗಳು ಚಿಲಿಪಿಲಿಗುಟ್ಟುತ್ತಿವೆ, ತಣ್ಣನೆ ಸಂಜೆಯ ಹೊತ್ತು. ಸೂರ್ಯ ನನಗೆ ಟಾಟಾ ಹೇಳುತ್ತಿದ್ದಾನೆ ಅನ್ನಿಸುತ್ತಿದೆ. ಆಕಾಶದಗಲ ಹಕ್ಕಿಗಳು ಚಿತ್ರ ಬಿಡಿಸಿದಂತೆ ಹಾರುತ್ತಿವೆ. ಪಡುವಣ ಕೆಂಪಾಗುತ್ತಿದೆ. ತಲೆಯ ಮೇಲೆ ಹುಲ್ಲುಹೊರೆ ಹೊತ್ತ ವ್ಯಕ್ತಿ ಒಂದು ಜೊತೆ ಎತ್ತಿನೊಂದಿಗೆ ಊರ ಕಡೆ ಹೊರಟಿದ್ದಾನೆ. ಒಂದು ಜಿಂಕೆಯೋ, ಸಾರಂಗವೋ ಕಣ್ಣೆದುರೇ ಛಂಗನೆ ಹಾರಿದಂತೆ ಭಾಸ, ತುಸು ದೂರದಲ್ಲೇ … Read more

ಹಬ್ಬ ಯಾವುದಾದರೇನು ಮುಬಾರಕ್ ಒಂದೇ: ಅಮರ್ ದೀಪ್ ಪಿ.ಎಸ್.

ಫೆಬ್ರವರಿ 16, 27, ಏಪ್ರಿಲ್ 24, ಡಿಸೆಂಬರ್ 25, ಆಗಸ್ಟ್ 15, ಜನವರಿ 26, ಹೀಗೆ ಸುಮಾರು ದಿನಗಳು ಒಬ್ಬೊಬ್ಬರಿಗೆ ಒಂದೊಂದು ಮರೆಯಲಾರದ ದಿನವಾಗಿರುತ್ತೆ.  ಮದುವೆಯದೋ.  ಹುಟ್ಟುಹಬ್ಬದ್ದೋ… ರಾಷ್ಟ್ರೀಯ ಹಬ್ಬ ಅದು ಬಿಡಿ ಎಲ್ಲರಿಗೂ ಹಬ್ಬವೇ. ಒಮ್ಮೊಮ್ಮೆ ಆ ದಿನಗಳಿಗೆ ಅಂಟಿಕೊಂಡು ಒಂದೊಂದು ಹಬ್ಬ, ಹುಣ್ಣಿಮೆ, ಅಮಾವಾಸ್ಯೆ, ಘಟನೆಗಳು  ಸೇರಿರುತ್ತವೆ. ಹೆಚ್ಚು ಓದಿರದ ನಮ್ಮವ್ವನ ವಯಸ್ಸಿನವರಿಗೆ  "ನನ್ನ  ಹುಟ್ಟಿದ ದಿನಾಂಕ ಯಾವ್ದವ್ವ?" ಅಂತೇನಾದ್ರೂ ಕೇಳಿದ್ರೆ, ಗೊತ್ತಿಲ್ಲೆಪ್ಪಾ, ಆದ್ರ ನೀ ಹುಟ್ಟಿದ್ ಎಲ್ಡು ದಿನಕ್ಕೆ ಕಾರ ಹುಣ್ಣಿವಿ ಇತ್ನೋಡೆಪ್ಪ. … Read more

ಗಂಧದ ಘಮ..: ಅನಿತಾ ನರೇಶ್ ಮಂಚಿ

ತಲೆಬರಹ ನೋಡಿ ಇದರಲ್ಲೇನಿದೆ ವಿಶೇಷ, ’ತನ್ನನ್ನೇ ತೇದು ಪರಿಮಳವನ್ನು ಲೋಕಕ್ಕೆ ಕೊಡುವ ತ್ಯಾಗಜೀವಿ ತಾನೇ ಗಂಧ’ ಅಂತೀರಲ್ವಾ..ಹೌದು ಸ್ವಾಮೀ ನಾನು ಅದನ್ನು ಅಲ್ಲ ಅನ್ನಲಿಲ್ಲ.. ಆದ್ರೆ ಗಂಧ ತನ್ನನ್ನು ತೇಯಬೇಕಾದರೆ ಎಷ್ಟು ಜೀವ ತೇಯುತ್ತದೆ ಅಂತಾದ್ರು ನಿಮಗೆ ಗೊತ್ತಾ.. ಅದೊಂದು ದೊಡ್ಡ ಕಥೆ.. ಹೇಳ್ತೀನಿ ಕೇಳಿ..   ನನ್ನಣ್ಣನ ಮನೆ ಅಂದರೆ ಅದೊಂದು ಸಸ್ಯ ಭಂಡಾರ. ನಮ್ಮೂರಾದ ಕರಾವಳಿಯಲ್ಲಿ ಬೆಳೆಯದ ಹಲವು ಸಸ್ಯಸಂಕುಲಗಳು ಮಲೆನಾಡಿನ ಅವನ ತೋಟದಲ್ಲಿ ನಳನಳಿಸುತ್ತಿರುತ್ತದೆ. ನಾನೋ ’ಕಂಡದ್ದೆಲ್ಲಾ ಬೇಕು…… ಭಟ್ಟನಿಗೆ’ ಅನ್ನೋ ಜಾತಿ. … Read more

ಸಂಬಂಧಗಳ ಸುಳಿಯಲ್ಲಿ ’ಬೇರಿಲ್ಲದವರು’: ಹಿಪ್ಪರಗಿ ಸಿದ್ಧರಾಮ

ನಗರದಲ್ಲೊಂದು ಚಿಕ್ಕ ಮತ್ತು ಚೊಕ್ಕದಾದ ಕುಟುಂಬ. ಆಧುನಿಕ ಕಾಲದ ಸಕಲೆಂಟು-ಸೌಕರ್ಯಗಳು ಇರುವ ಆ ಕುಟುಂಬದ ಯಜಮಾನ ಸರಕಾರದ ಇಲಾಖೆಯೊಂದರಲ್ಲಿ ಇಂಜನೀಯರ್ ಮತ್ತು ಆತನ ಪತ್ನಿಯೂ ಸಹ ಆಧುನಿಕ ಕಾಲದ ಸುಶಿಕ್ಷಿತೆ ಮತ್ತು ಸರಕಾರಿ ಶಾಲೆಯ ಶಿಕ್ಷಕಿಯಾಗಿ ನೌಕರಿ ಮಾಡುತ್ತಿದ್ದಾಳೆ. ಇಂತಿಪ್ಪ ಕೈತುಂಬ ಸಂಬಳದ ಉದ್ಯೋಗಸ್ಥ ದಂಪತಿಗಳಿಗೆ ಹದಿಹರೆಯದ ಮಗ ಮತ್ತು ಮಗಳು ಇದ್ದಾರೆ. ಮನೆಯಲ್ಲಿಯೂ ಎಲ್ಲವೂ ಇದೆ ಆದರೆ ಶಾಂತಿ-ಸಮಾಧಾನ-ಹೊಂದಾಣಿಕೆ-ಅರ್ಥ ಮಾಡಿಕೊಳ್ಳುವಂತಹ ಸಾಮಾಜಿಕ ಅಂಶಗಳು ಅವಶ್ಯವಾಗಿ ಇರಬೇಕಾದುದೇ ಇಲ್ಲ. ಇರುವ ನಾಲ್ವರಿಗೂ ತಮ್ಮದೇ ಆದ ಅವಸರ, ಉದ್ವೇಗ, … Read more

ಸುದ್ದಿಯಾಗದ ಸುದ್ದಿಗಳ ಹಿಂದೆ: ಪ್ರಶಸ್ತಿ

ಪ್ರಚಾರ ಅನ್ನೋದು ಯಾರಿಗೆ ಬೇಡ ಹೇಳಿ ? ಯಾರಿಗೂ ಒಂದು ಜೊತೆ ಬಟ್ಟೆ ಕೊಟ್ಟಿದ್ರಿಂದ ಹಿಡಿದು ಮತ್ಯಾರಿಗೋ ಐದು ರೂಪಾಯಿ ದಾನ ಮಾಡಿದವರೆಗೆ ನಿತ್ಯದ ತಿಂದುಂಡು ಮಲಗೋದ್ರ ಹೊರತಾಗಿ ಮಾಡಿದ ಒಳ್ಳೇ ಕೆಲ್ಸಗಳನ್ನ ನಾಲ್ಕು ಜನರೊಂದಿಗೆ ಹಂಚಿಕೋಬೇಕು ಅನ್ನೋ ಹಂಬಲ ನಮಗೆ. ಅದನ್ನ ಮಾಡಿದೆ, ಇದನ್ನ ಮಾಡಿದೆ ಹೇಳಿಕೊಳ್ಳೋ ಮೂಲಕ ಬೇರೆಯವ್ರ ದೃಷ್ಟಿಯಲ್ಲೊಂದು ಒಳ್ಳೇ ಸ್ಥಾನ ಪಡೆಯೋದು ಸಾಮಾನ್ಯರ ಬಯಕೆಯಾದ್ರೆ  ಏನೆಲ್ಲಾ ಮಾಡ್ತಿದ್ರೂ ಯಾರ ಕಣ್ಣಿಗೂ ಬೀಳದೇ ತಣ್ಣಗಿದ್ದು ಬಿಡೋ ಜನಗಳದ್ದು ಮತ್ತೊಂದು ಗುಂಪು. ತಮ್ಮ ಜೀವನವನ್ನೇ … Read more

ಮನುಕುಲದ ಅವಸಾನ ಹತ್ತಿರವಾಗುತ್ತಿದೆಯೇ?: ಅಖಿಲೇಶ್ ಚಿಪ್ಪಳಿ ಅಂಕಣ

ಭೂಮಿಯ ಮೇಲೆ ಒಂದು ತರಹದ ವೈರಸ್ ಸೃಷ್ಟಿಯಾಗಿದೆ. ಈ ವೈರಸ್‌ಗಳು ಮನುಷ್ಯನ ದೇಹವನ್ನು ಹೊಕ್ಕು ಅವಾಂತರ ಮಾಡಿ ಕ್ರಮೇಣ ಸಾಯಿಸುತ್ತವೆ. ಸತ್ತ ಹೆಣಗಳು ಮತ್ತೆ ಎದ್ದು ಕೂತು ದೆವ್ವಗಳಾಗಿ ಪರಿವರ್ತನೆ ಹೊಂದಿ ಉಳಿದ ಮನುಷ್ಯರನ್ನು ಕಾಡುತ್ತವೆ. ಈ ತರಹದ ಕಥಾವಸ್ತುವನ್ನು ಹರವಿಕೊಂಡು ನಿರ್ಮಿಸಲಾದ ಅಮೇರಿಕಾದ ಒಂದು ಪ್ರಸಿದ್ಧ ಧಾರಾವಾಹಿಯ ಹೆಸರು ದಿ ವಾಕಿಂಗ್ ಡೆಡ್. ಈ ಧಾರಾವಾಹಿಯು ಅತ್ಯಂತ ಪ್ರಸಿದ್ಧಿಯನ್ನು ಪಡೆದು ದಾಖಲೆ ನಿರ್ಮಿಸಿದೆ. ಕಾಲ್ಪನಿಕವಾಗಿ ಸೃಷ್ಟಿಸಲಾದ ಈ ಘಟನೆಗಳು ನಿಜವಾಗಲೂ ನಡೆಯುತ್ತವೆಯೇ? ಮನುಕುಲದ ಅವಸಾನ ಸನಿಹವಾಗುತ್ತಿದೆಯೇ? … Read more

ಪಂಚಮಿ ಹಬ್ಬಾ ಉಳದಾವ ದಿನ ನಾಕ, ಅಣ್ಣಾ ಬರಲೇಯಿಲ್ಲಾ ಕರಿಯಾಕ: ಸುಮನ್ ದೇಸಾಯಿ

ಶ್ರಾವಣ ಮಾಸಾ ಬಂತಂದ್ರ ಅತ್ತಿ ಮನ್ಯಾಗಿನ ಹೆಣ್ಣಮಕ್ಕಳಿಗೆ ಎನೊ ಒಂಥರಾ ಹುರಪಿರತದ,ಪಂಚಮಿ ಹಬ್ಬಕ್ಕ ತವರುಮನಿಗೆ ಹೋಗೊ ಸಂಭ್ರಮದಾಗ ಭಾಳ ಖುಷಿಲೆ ತನ್ನ ಕರಿಲಿಕ್ಕೆ ಬರೊ ಅಣ್ಣ ಅಥವ ತಮ್ಮನ ದಾರಿಕಾಯಕೊತ,     "ಪಂಚಮಿ ಹಬ್ಬಾ ಉಳದಾವ ದಿನ ನಾಕ,,,  ಅಣ್ಣಾ ಬರಲೇಯಿಲ್ಲಾ ಕರಿಯಾಕ……….." ಅಂತ ತನ್ನೊಳಗ ತಾನ ಹಾಡು ಹಾಡಕೊತ,ತವರುಮನ್ಯಾಗಿನ್ ಪಂಚಮಿ ಹಬ್ಬದ ಸಂಭ್ರಮನ ತನ್ನ ಗೆಳತ್ಯಾರಿಗೆ ಹೆಳ್ಕೊತಿರತಾಳ."  "ನನ್ನ ತವರಲ್ಲಿ ಪಂಚಮಿ ಭಾರಿ,.  ಮಣ ತೂಕದ ಬೆಲ್ಲಾ ಕೊಬ್ಬರಿ,. ಅಳ್ಳು ಅವಲಕ್ಕಿ, ತಂಬಿಟ್ಟು ಸೂರಿ,,. … Read more

ಮೂರು ಕವಿತೆಗಳು: ಕಾವ್ಯ ಪ್ರಿಯ, ಬಸವರಾಜ್ ಕದಮ್, ರಾಣಿ ಪಿ.ವಿ.

ಬ್ಯಾಚುಲರ್ ಫುಡ್ಸ್.. ಬೆಳಗಾಗುತ್ತಲೆ ಎದ್ದೊಡನೆ ಏನಾಗುವುದು ನನಗೇಕೊ ಮೊದಲು ಹಸಿವಾಗುವುದು ಊರಿನಲ್ಲಿದ್ದಾಗ ತಿ೦ಡಿ ತಯಾರಾಗುತ್ತಿದ್ವು ಹೊಟ್ಟೆ ತು೦ಬ ತಿ೦ದು ಅಡ್ಡಾಡುತ್ತಿದ್ದೆವು… ಇ೦ದಿನ ಪರಿಸ್ತಿತಿ ಬದಲಾಗಿಹುದು ರಾತ್ರಿ ಮನೆಗೆ ಬ೦ದರೂ ಕೇಳರಾರಿಹರು ಊಟ ತಿ೦ಡಿ ಉಪಚಾರದ ಮಾತೆಲ್ಲಿಹುದು ಪಿಜಾ ಅ೦ಗಡಿಯವನಿಗೆ ವ್ಯಾಪಾರ ಜೋರು… ಇದಕ್ಕೆ ಬೇಕೊ೦ದು ಶಾಶ್ವತ ಪರಿವಾರವು ಯೊಚಿಸಿ ನೊಡಿದೆ ಎನಿಹುದು ದಾರಿಯೂ ಅಡಿಗೆ ಮಾಡುವುದು ನನಗೆ ಸುಲಭವು ಲೇಟಾದರೂ ಹಚ್ಚುವೆನು ಒಲೆಯ ದಿನವೂ…. ಬೆಳಗಿನ ತಿ೦ಡಿಗೆ ಕಾರ್ನ್ ಫ್ಲೇಕ್ಸು ಮಧ್ಯಾನ ಕ್ಯಾ೦ಟೀನ ಮಿನಿ ಮೀಲ್ಸು ಸ೦ಜೆ … Read more

ಸಾಮಾನ್ಯ ಜ್ಞಾನ (ವಾರ 39): ಮಹಾಂತೇಶ್ ಯರಗಟ್ಟಿ

೧)    ೨೦೧೨ ರಲ್ಲಿ ಎಚ್.ಎಸ್ ಶಿವಪ್ರಕಾಶ ಅವರ ಯಾವ ಕೃತಿಗೆ  ಕೇ೦ದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ? ೨)    ಸತ್ಯಕಾಮ ಇದು ಯಾರ ಕಾವ್ಯನಾಮ ? ೩)    ಬಾ೦ಗ್ಲಾದೇಶದ ರಾಷ್ಟ್ರೀಯ ಕ್ರೀಡೆ ಯಾವುದು ? ೪)    ಕೃಷ್ಣನದಿಯ ಉಗಮಸ್ಥಳ ಯಾವುದು ? ೫)    ಮಣ್ಣಿನಲ್ಲಿ ಎರೆಹುಳುವಿನ ಮಹತ್ವವನ್ನು ಕ೦ಡುಹಿಡಿದವರು ಯಾರು ? ೬)    ಐಎಸ್‌ಐ (ಇ೦ಡಿಯನ್ ಸ್ಟಾಂಡರ್ಡ್ ಇನ್ಸ್ಟಿಟ್ಯೂಷನ್) ಆಸ್ತಿತ್ವಕ್ಕೆ ಬಂದವರ್ಷ ಯಾವುದು? ೭)    ನೀರಿನಲ್ಲಿ ಆಮ್ಲಜನಕವವನ್ನು ಹೀರಿಕೊಳ್ಳಲು ಮೀನಿಗೆ ಸಹಾಯ ಮಾಡುವ ಅ೦ಗ ಯಾವುದು ? … Read more

ಪ್ರಕಟಣೆ

ಕನ್ನಡ ನಾಡು ನುಡಿಯ ಸೇವೆ ಮಾಡುವ ನಿಟ್ಟಿನಲ್ಲಿ ಸ್ವಯಂ ಇಚ್ಚೆಯಿಂದ ಕನ್ನಡ ನಾಡು ನುಡಿಯ  ಬಗ್ಗೆ ಕವನ ಸಂಕಲನವೊಂದು ಹೊರತರಲು ಯೋಚಿಸಲಾಗಿದೆ. ಅದಕ್ಕಾಗಿ ತಾವು ಕನ್ನಡ ನಾಡು, ನುಡಿ, ಕನ್ನಡಕ್ಕಾಗಿ ದುಡಿದ ಮಹಿಳೆ/ಪುರುಷ, ಕನ್ನಡ ನೆಲ, ಜಲ, ಕನ್ನಡದ ವೈವಿಧ್ಯತೆ, ಕರ್ನಾಟಕದ ಪ್ರಾಕೃತಿಕ ಸೌಂದರ್ಯ ಇತ್ಯಾದಿ ವಿಷಯಗಳ ಕುರಿತು ತಮ್ಮ ಇತ್ತೀಚಿನ ಎರಡು ಕವನಗಳನ್ನು ಆಹ್ವಾನಿಸಲಾಗುತ್ತಿದೆ. ಆಯ್ದ ಕವಿಗಳಿಗೆ ಸನ್ಮಾನಿಸಲಾಗುವುದು. ಪುಸ್ತಕ ರೂಪದಲ್ಲಿ ಕವನಗಳನ್ನು ಪ್ರಕಟಿಸಲಾಗುವುದು.  ಕವನ ಕಳುಹಿಸಲು ಕೊನೆಯ ದಿನ ಆಗಷ್ಟ್ ೨೩, ಕವನ ಸ್ವತಂತ್ರ … Read more

ಕಗ್ಗಲಿಪುರದಲ್ಲೊಂದು ಕನ್ನಡ ಸೇನೆ: ಹೃದಯಶಿವ ಅಂಕಣ

ಕಗ್ಗಲಿಪುರದಲ್ಲಿ 'ಕರುನಾಡ ಗಜಕೇಸರಿ ಸೇನೆ'ಯ ಉದ್ಘಾಟನೆ ಇವತ್ತಷ್ಟೇ (ಜುಲೈ 27) ನಡೆಯಿತು. ನನಗೆ ಅಲ್ಲಲ್ಲಿ ಆಗಾಗ ಕಂಡಂಥ ಕೆಲವು ಮುಖಗಳು ಅಲ್ಲಿ ಎದುರಾದವು. ನನಗೆ ಇದ್ದಕ್ಕಿದ್ದಂತೆಯೇ ಒಂದಿಷ್ಟು ನೆನಪುಗಳು ಆವರಿಸಿದವು. ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದಾಗ ಅವ್ವನ ಅವ್ವ ಹಾಗೂ ಅವ್ವನ ಅಣ್ಣನೊಂದಿಗೆ ಮೊದಲಬಾರಿ ಬೆಂಗಳೂರಿಗೆ ಬರುವಾಗ ಕಗ್ಗಲಿಪುರದ ಮಾರ್ಗವಾಗಿಯೇ ಹಾದುಬಂದಿದ್ದೆ; ಗವಿಪುರದಲ್ಲಿ ನಡೆದ ಸಂಬಂಧಿಕರೆನ್ನಿಸಿಕೊಳ್ಳುವ ಯಾರದೋ ಮದುವೆಗೆ; ಈಗ ಅದೆಲ್ಲ ಅದೇಕೋ ನೆನಪಾಯಿತು. ಅಲ್ಲೇ ಇದ್ದ ಇಬ್ಬರು ಹಳ್ಳಿ ಯುವಕರಲ್ಲಿ ಒಬ್ಬ, "ಪಂಪ್ ಸನ್ಗ್ ಬಂದ್ರಾ ಸಾ?" … Read more

ಹೆಣ್ಣುಮಕ್ಕಳು ನಿರ್ಭಯರಾಗಿ ಓಡಾಡುವ ಕಾಲ ಮುಗಿದೇ ಹೋಯಿತೇ?: ಕೆ. ಉಷಾ ಪಿ. ರೈ

ನಿರ್ಭಯಳ ಭೀಕರ ಬಲತ್ಕಾರ ನಡೆದ ನಂತರ ’ಬಲಾತ್ಕಾರ’ ಎನ್ನುವ ಪದ ಅಂಕೆ ಸಂಖ್ಯೆಗಳ ಮಿತಿಯನ್ನೂ ಮೀರಿ ಯಾವುದೇ ಸಂಕೋಚವಿಲ್ಲದೆ ಅದೂ ಒಂದು ದಿನ ನಿತ್ಯದ ಬಳಕೆಯ ಶಬ್ಧದಂತೆ ಕಿವಿಗೆ ಬೀಳುತ್ತಲೇ ಇರುತ್ತದೆ. ಇದೇನೂ ಚರಿತ್ರೆಯಲ್ಲೇ ಮೊದಲ ’ಬಲತ್ಕಾರ’ದ ಕೇಸ್ ಅಲ್ಲ. ಆದರೆ ಇಡೀ ದೇಶದ ಜನರು ಒಗ್ಗಟ್ಟಾಗಿ ಪ್ರತಿಭಟಿಸಿದ್ದು ಈ ಘಟನೆಯನ್ನು. ಹಾಗಾಗಿ ಈ ಕೇಸಿಗೆ ಬಲ ಬಂದಿತ್ತು. ಇಡೀ ದೇಶದ ಜನರ ಪ್ರತಿಭಟನೆಯ ನಂತರವೂ ಬಲತ್ಕಾರಗಳು ನಿಲ್ಲಲಿಲ್ಲ. ಅದರ ನಂತರ ಮುಂಬಯಿಯಲ್ಲಿ ನಡೆದ ಶಕ್ತಿಮಿಲ್ ಬಲಾತ್ಕಾರದ … Read more

ದೀಪದ ದೆವ್ವ (ದೆವ್ವದ ಕಥೆಗಳು – ಭಾಗ ೩):ಗುರುಪ್ರಸಾದ್ ಕುರ್ತಕೋಟಿ

(ಇದು ಸಂಗೀತಾ ಕೇಶವ ಅವರಿಗಾದ ಅನುಭವದ ಎಳೆಯ ಮೇಲೆ ಹೆಣೆದ ಕತೆ) ನಾನಾಗ ಪೀಯುಸಿ ಮೊದಲ ವರ್ಷದಲ್ಲಿ ಓದುತ್ತಿದ್ದೆ. ನಾವಿದ್ದದ್ದು ನನ್ನ ಊರಾದ ಚಿಕ್ಕೋಡಿಯಲ್ಲಿ. ಅದು ಬೆಳಗಾವಿ ಜಿಲ್ಲೆಯಲ್ಲಿದೆ. ಹವಾಮಾನದ ವಿಷಯದಲ್ಲಿ ಅದಕ್ಕೂ ಬೆಳಗಾವಿಗೂ ಏನೂ ವ್ಯತ್ಯಾಸವಿರಲಿಲ್ಲ. ಅದು ಆಗಿನ ಸಂಗತಿ. ಈಗ ಬಿಡಿ ಬೆಳಗಾವಿಯ ಹವಾಮಾನವೂ ಪ್ರಕೃತಿ ವೈಪರಿತ್ಯಕ್ಕೆ ಬಲಿಯಾಗಿ ಹದಗೆಟ್ಟಿದೆ. ಆಗೆಲ್ಲಾ ಬೆಳಗಾವಿಯಲ್ಲಿ ಮಳೆ ಯಾವ ಪರಿ ಸುರಿಯುತ್ತಿತ್ತೆಂದರೆ… ಸುರಿಯುತ್ತಿತ್ತು ಅಷ್ಟೆ! ಒಮ್ಮೆ ಶುರುವಾಯಿತೆಂದರೆ ನಿಲ್ಲುವ ಮಾತೆ ಇರಲಿಲ್ಲ. ಚಿಕ್ಕೋಡಿಯ ಪರಿಸ್ಥಿತಿಯೂ ಹೆಚ್ಚು ಕಡಿಮೆ … Read more

ಒಲವೇ ಬಾಡಿಗೆ ಮನೆಯ ಲೆಕ್ಕಾಚಾರ:ಅಮರದೀಪ್ ಅಂಕಣ

ಹೊರಗೆ ಜೋರು ಮಳೆ.  ಮನೆ ತುಂಬಾ ತಟಕ್ ತಟಕ್ ಎಂದು ಸೋರಿದ ಮಳೆ ಹನಿಗಳು ಹೊರಡಿಸುವ ಪ್ಯಾಥೋ ಸಾಂಗಿನ ತುಣುಕು ಸಂಗೀತ.  ಮನೆ ಮಾಳಿಗೆಯ  ಹೊಗೆ ಗೂಡಿನ ಬಾಯಿಗೆ ತಗಡು ಮುಚ್ಚುವುದನ್ನು ಮರೆತಿದ್ದಳು ಮುದುಕಿ.  ಫಕ್ಕನೇ ನೋಡಿ ಮೊಮ್ಮಗನಿಗೆ ಹೇಳಿದಳು.  ಹುಡುಗ ಹತ್ತಲೋ ಬೇಡವೋ ಎಂಬಂತೆ ನೋಡಿದ; ಹಣ್ಣಣ್ಣು  ಮುದುಕಿ ತನ್ನ ಅಳಿದುಳಿದ ಹಲ್ಲುಗಳನ್ನು ಜೋಪಾನ ಮಾಡಿಟ್ಟು ಕೊಂಡು ದಿನ ದೂಡುವಂತೆ ಗೋಚರಿಸುತ್ತಿದ್ದ ಏಣಿಯ ಪರಿಸ್ಥಿತಿ.   ಹಂಗೂ ಹಿಂಗೂ ಸವ್ಕಾಶಿ ಹತ್ತಿ ಮಾಳಿಗೆ ನೋಡಿದರೆ ಏನಿತ್ತು? … Read more

ವೈಭವದ ಕೂಟ-ಪ್ಯಾಶನ್ನಿನ ಊಟ ? :ಪಾ.ಮು.ಸುಬ್ರಮಣ್ಯ

ಹಾಗೇ ಸುಮ್ಮನೇ ಏನಾದರೊಂದು ಬರೆಯಬೇಕೆಂದು ಮನಸ್ಸು ತವಕಪಡುತ್ತಿತ್ತು. ವಿಷಯಕ್ಕಾಗಿ ಮನದ ಗಾಳಿಪಟವನ್ನು ಹರಿಯಬಿಟ್ಟೆ.  ಪಟ ನೇರವಾಗಿ ಒಂದು ಅದ್ದೂರಿ ಕಾರ್ಯಕ್ರಮವೊಂದರ ನಡುವೆ ನಿಂತಿತು.  ಸುತ್ತಲೂ ಕಣ್ಣಾಡಿಸಿದೆ.  ವೈಭವಪೂರ್ಣವಾದ ಕಾರ್ಯಕ್ರಮ. ಯಾರೋ ಹಣದಧಿಪತಿಗಳೇ ಈ ಕಾರ್ಯಕ್ರಮದ ಆಯೋಜಕರೆಂದು ಮೇಲ್ನೋಟಕ್ಕೆ ಅನ್ನಿಸಿತು.  ಯಾರಾದರೆ ನನಗೇನು?  ನನಗೆ ಬೇಕಾಗಿರುವ ವಿಷಯ ಸಿಕ್ಕರೆ ಸಾಕು, ಎಂದಂದುಕೊಂಡು ಹುಡುಕತೊಡಗಿದೆ.  ಪ್ರತಿಯೊಬ್ಬರೂ ತಮ್ಮದೇ ಆದ ವೈಯಕ್ತಿಕ ವಿಚಾರಗಳಲ್ಲಿ ತೊಡಗಿದ್ದಾರೆನ್ನಿಸಿತು.  ನನ್ನನ್ನಾರು ಗಮನಿಸಲಿಲ್ಲ.  ಮನದ ಪಟ ಅಲೆದಾಟಕ್ಕಿಳಿದಾಗ ಕೇಳಿಯೇಬಿಟ್ಟಿ.  ’ಇಲ್ಲಿ ನನಗೇನು ಕೆಲಸ? ನನ್ನನ್ನು ಇಲ್ಲಿಗೇಕೆ ಕರೆತಂದೆ? … Read more

ಮೂರು ಕವನಗಳು: ಸಂತೇಬೆನ್ನೂರು ಫೈಜ್ನಟ್ರಾಜ್, ಜಾನ್ ಸುಂಟಿಕೊಪ್ಪ, ಎಸ್. ಕಲಾಲ್

ದ್ವಿಪದಿಗಳು ಕುಡಿದ ಅಮಲಿನಲ್ಲಿಲ್ಲ ಸಖಿ ನೀನಿಲ್ಲ ಎಂಬುದೊಂದು ನೋವೆನಿಸಿಲ್ಲ ನನಗೆ         ಹೆಜ್ಜೆ ಇಟ್ಟಲ್ಲೆಲ್ಲಾ ಮುರಿದ ಹಪ್ಪಳ         ಸದ್ದು ಪುಡಿಯಾದ ಕನಸುಗಳು ಜೀವ ಬಿಟ್ಟವು ನನಗೂ ಎಚ್ಚರ ಇದೆ ನೆನಪಿರಲಿ ಕುಡಿದರೇನು ಮರೆವಲ್ಲ ಹಳೇ ಮೆಲುಕು!         ನಡೆ ನಡೆದಂತೆ ದಾರಿ ಹಿಂದೆ ಅಷ್ಟೆ;         ಹಿಂದಿನದು ಬಿಟ್ಟಿಲ್ಲ ಜೊತೆಗೆ ಅಚ್ಚರಿ ಕನಸ ಚರಂಡಿ ದಾಟಲು ದರ್ದಿದೆ ಸಭ್ಯರೆಲ್ಲಾ ನನ್ನ ಅವಸ್ಥೆಯೆಡೆ ಕಣ್ ನೆಟ್ಟಿದ್ದಾರೆ!         ಹಗಲಿನಲಿ ಹಾಡಾಗಿ … Read more

ಪ್ರಶಸ್ತಿ ಪಿ. ಸಾಗರ ಬರೆದ ಕತೆ: ಸುದೇಷ್ಣೆ

ಏ ಎಲ್ಲಾದ್ರೂ ಟ್ರಿಪ್ ಹೋಗೋಣ್ವಾ ? ಬೆಂಗ್ಳೂರಿಗೆ ಬಂದು ತುಂಬಾ ದಿನ ಆಯ್ತು ಕಣೋ. ಏನೂ ನೋಡಿಲ್ಲ ಸರಿಯಾಗಿ.  ಹೂಂ. ಸರಿ. ಎಲ್ಲಿಗೆ ?  ಅರೆ, ವಾರ ವಾರ ಕಾಲಿಗೆ ಚಕ್ರ ಕಟ್ಕೊಂಡವ್ನ ತರ ತಿರ್ಗೋದು ನೀನು. ಬೈಕಂತೆ, ಕಾರಂತೆ. ಬಸ್ಸಂತೆ. ಆ ಫೇಸ್ಬುಕ್ಕನ್ನೇ ಮಿನಿ ಹಾರ್ಡುಡಿಸ್ಕು ಮಾಡೋ ಅಷ್ಟು ಫೋಟೋ ತುಂಬ್ಸಿದ್ದೀಯ. ನಂಗೆ ಕೇಳ್ತಿಯಲ್ಲೋ ಎಲ್ಲೋಗದು ಅಂತ. ನೀನು ಹೋಗಿರೋ ಜಾಗಗಳಲ್ಲೇ ಯಾವ್ದಾದ್ರೂ ಹೇಳೋ. ಊಂ… ನಿಂಗೆ ಎಷ್ಟೊತ್ತಿನ ಪ್ರಯಾಣ ಆಗಿರ್ಬೇಕು ? ಒಂದೆರಡು ಘಂಟೆ … Read more

ಗಾಂಧಿ: ನಾ.ಧನಪಾಲ

ಮೂಲ: ತೆಲುಗು ಕತೆ ಲೇಖಕರು: ಸಲೀಂ, ಕನ್ನಡಕ್ಕೆ: ನಾ. ಧನಪಾಲ ಪ್ರಮುಖ ಸಾಪ್ತಾಹಿಕದಲ್ಲಿ ಗಾಂಧಿ ಬರೆದ ಲೇಖನವನ್ನು ಓದಿ ಮುಗಿಸಿದೊಡನೆ ಕಣ್ಣುಗಳು ಒದ್ದೆಯಾದವು.  ಅರಣ್ಯವನ್ನು ನಂಬಿಕೊಂಡು ಬದುಕುತ್ತಿರುವ ಬುಡಕಟ್ಟಿನವರ ಏಳು ಬೀಳುಗಳನ್ನು ಎಷ್ಟು ಚೆನ್ನಾಗಿ ಬರೆದಿದ್ದನೋ ?  ಬಹಳ ಹೃದ್ಯವಾಗಿ. . . !  ಮನಸ್ಸನ್ನು ಕಲಕುವಂತಿದೆ. ಹಾಗೆ ಬರೆಯಲು ಗಾಂಧಿಯಂತಹ ಮಾನವತಾವಾದಿಗೆ ಮಾತ್ರವೇ ಸಾಧ್ಯ.  ಗಾಂಧಿ ತಾನು ನಂಬಿರುವ ತನ್ನ ಸಿದ್ಧಾಂತಗಳಿಗಾಗಿ ಪ್ರಾಣಾರ್ಪಣೆಗಾದರೂ ಸಿದ್ಧನಿರುವ ಧೀಮಂತ ವ್ಯಕ್ತಿ.  ಕರ್ನಾಟಕದಲ್ಲಿ ಆತನಿಗೆ ಬಹಳ ಅಭಿಮಾನಿಗಳಿದ್ದಾರೆ.   ಮಾನವತೆಯನ್ನು … Read more

ಪಂಚಮಹಾಸಾಗರದ ಐದು ಕೊಳೆಗುಂಡಿಗಳು: ಅಖಿಲೇಶ್ ಚಿಪ್ಪಳಿ ಅಂಕಣ

(ಭೂಮಂಡಲದ ಶೇ ೭೦ ಭಾಗ ನೀರಿನಿಂದ ಸುತ್ತುವರೆದಿದೆಯಾದ್ದರಿಂದ ಅಷ್ಟೂ ನೀರನ್ನೂ ಸೇರಿಸಿ ಒಂದೇ ಮಹಾಸಾಗರ ಎನ್ನಬಹುದು. ಆದರೂ ದೇಶಗಳು ತಮ್ಮ ಗಡಿಗಳಿಗೆ ಅನುಸಾರವಾಗಿ ೫ ಮಹಾಸಾಗರಗಳನ್ನು ಗುರುತಿಸಿಕೊಂಡಿದ್ದಾರೆ. ೧. ಪೆಸಿಫಿಕ್ ಮಹಾಸಾಗರ ೨. ಅಟ್ಲಾಂಟಿಕ್ ಮಹಾಸಾಗರ ೩. ಹಿಂದೂ ಮಹಾಸಾಗರ ೪. ಅಂಟಾರ್ಟಿಕ್ ಮಹಾಸಾಗರ ಮತ್ತು ಆರ್ಕ್‌ಟಿಕ್ ಮಹಾಸಾಗರ) ಮೊನ್ನೆ ಸೋಮವಾರ ಅಂದರೆ ದಿನಾಂಕ:೨೧/೦೭/೨೦೧೪ರ ಬೆಳಗ್ಗೆ ತೋಟದಲ್ಲಿ ಸಣ್ಣ-ಪುಟ್ಟ ಕೆಲಸ ಮಾಡುವಾಗ ಅಪ್ಪಟ ಭೂಮಿಪುತ್ರನ ಜಂಗಮವಾಣಿಯಿಂದ ಕರೆ ಬಂತು ಎಂದು ಮನೆಯಿಂದ ಕೂಗಿದರು. ಈ ಭೂಮಿಪುತ್ರನ ದೂರವಾಣಿ … Read more

ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದಲ್ಲಡಗಿರುವ ರಾಜಕೀಯ…! : ನಂದಿಕೇಶ್. ಬಾದಾಮಿ

         ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಲಾವಿದರೆಂದು ಪಿಂಚಣಿ ಪಡೆಯುತ್ತಿರುವವರ ವಿವರವನ್ನು ಗಮನಿಸಿದರೆ, ಕಲೆಯ ಗಾಳಿ;ಗಂಧ ಗೊತ್ತಿರದವರೆ ಬಹುಪಾಲು ಆ ಪಟ್ಟಿಯಲ್ಲಿ ತುಂಬಿಕೊಂಡಿದ್ದಾರೆ. ಅದೇ ರೀತಿ ಶಿಕ್ಷಣ ಕ್ಷೇತ್ರದಲ್ಲಿ ತಾಲೂಕು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಆದರ್ಶ ಶಿಕ್ಷಕ/ಕಿ ಪ್ರಶಸ್ತಿ ಪಡೆದವರ ವಿವರವನ್ನು ಪರಿಶೀಲಿಸಿದರೆ ಅದರಲ್ಲೂ ಕೂಡಾ ರಾಜಕೀಯ ದುರ್ವಾಸನೆಯ ಘಾಟು ಮೂಗಿಗೆ ಅಮರಿಕೊಳ್ಳುತ್ತದೆ. ಇನ್ನು ಬಹುತೇಕ ಪ್ರಶಸ್ತಿ ಪುರಸ್ಕಾರಗಳಂತೂ ರಾಜಕೀಯ ಕರಿನೆರಳಿನಲ್ಲಿಯೇ ವಿತರಣೆಯಾಗುತ್ತಿವೆ. ಮೊನ್ನೆಮೊನ್ನೆಯಷ್ಟೆ ಹಿರಿಯ ಸಾಹಿತಿ ಕುಂ. … Read more