ಮಳೆ ಮಾತುಗಳಲ್ಲಿ: ಪ್ರಶಸ್ತಿ ಪಿ.
ಬೇಸಿಗೆಯ ಬೇಗೆಯಲ್ಲಿ ಬೆಂದ ನಗರದ ಜನಗಳಿಗೀಗ ಮಳೆಯ ತಂಪು. ಭೋರ್ಗರೆವ ಮಳೆಗೆ ಎಂಥಾ ಮಳೆಗಾಲವಪ್ಪಾ ಅನಿಸಿಬಿಡುವಂತ ಮಲೆನಾಡಿಗರಿಗೂ ಈ ಸಲ ತಡವಾದ ಮಳೆ ಕೊಂಚ ತಲೆಬಿಸಿ ತಂದಿದ್ದುಂಟು. ಮೊದಲ ಮಳೆಗೆ ಖುಷಿಯಾಗಿ ನಾಟಿಗೆ ಅಣಿಮಾಡಿದವರು, ಗಾಬರಿಯಾಗಿ ಕೊಳೆ ಔಷಧಿ ಹೊಡೆಸಿದವರು ಮತ್ತೆ ಒಂದು ವಾರವಾದರೂ ಮಳೆಯ ಸುಳಿವಿಲ್ಲದಿದ್ದಾಗ ಗಾಬರಿಯಾಗಿದ್ದು ಸಹಜವೇ. ನಾಟಿಗೆಂದು ಉತ್ತ ನೆಲವೆಲ್ಲಾ ಮತ್ತೆ ಬಿಸಿಲಿಗೆ ಒಣಗೋಕೆ ಶುರುವಾಗಿತ್ತು. ಬಿಸಿಲ ಝಳಕ್ಕೆ ಕೊಳೆಯೌಷಧಿ ಹೊಡೆಸಿಕೊಂಡ ಮರದ ತಲೆಯೆಲ್ಲಾ ಸುಡತೊಡಗಿದ್ವು. ಒಂತರಾ ಬಿಸಿಲಲ್ಲಿ ಬೆಂಕಿ ಹಾಕಿದಂಗೆ ಮರಗಳಿಗೀಗ. … Read more