ಆಗಸದಲ್ಲೊಂದು ಅಧೂರಿ ಕಹಾನಿ: ಪ್ರಸಾದ್ ಕೆ.
13 ಫೆಬ್ರವರಿ, 2016 ದೆಹಲಿಯ ಮಯೂರ್ ವಿಹಾರ್ ಎಂಬ ಪ್ರದೇಶದ, ಕೋಟ್ಲಾ ಹಳ್ಳಿಯ ಮೂರನೇ ಗಲ್ಲಿಯಲ್ಲಿ ತಲೆಯೆತ್ತಿರುವ ಕಟ್ಟಡದ ಐದನೇ ಮಹಡಿಯ ಮನೆಯೊಂದು ಆ ದಿನ ತುಸು ಹೆಚ್ಚೇ ಅನ್ನುವಷ್ಟು ಚಟುವಟಿಕೆಯಲ್ಲಿತ್ತು. ನಾನು ಆಫ್ರಿಕಾದ ಮೂಲೆಯೊಂದರಲ್ಲಿರುವ ಲುವಾಂಡಾಗೆ ಉದ್ಯೋಗ ನಿಮಿತ್ತವಾಗಿ ತೆರಳುವ ತರಾತುರಿಯಲ್ಲಿದ್ದೆ. ಪ್ಯಾಕಿಂಗ್ ಬಹುತೇಕ ಮುಗಿದಿದ್ದರೂ ಬ್ಯಾಗಿನೊಳಗೆ ಇನ್ನೇನು ತುರುಕಬಹುದು ಎಂಬ ದುರಾಸೆಯಿಂದ ನನ್ನ ಕಣ್ಣುಗಳು ಮನೆಯ ಮೂಲೆಮೂಲೆಗಳನ್ನು ಜಾಲಾಡುತ್ತಿದ್ದವು. ನಾಲ್ಕೈದು ಭಾರದ ಪುಸ್ತಕಗಳು “ಬಾ ಬಾರೋ… ಎತ್ತಿಕೋ ನನ್ನ'' ಎಂದು ಮೌನವಾಗೇ ಬಲು ಪ್ರೀತಿಯಿಂದ … Read more