ಅನಪೇಕ್ಷಿತ ಶಿಕ್ಷೆಯ ಮೂಲ ಅಕಾರಣ ಶೋಷಣೆ: ಅಮರ್ ದೀಪ್ ಪಿ.ಎಸ್.

ಆ ದಿನ ಯಾಕೋ "ಆತ"ನಿಗೆ ಕಣ್ಣಿಗೆ ಪಟ್ಟಿ ಕಟ್ಟಿ ಬಿಟ್ಟ ದಿನ… ನಡೆದದ್ದು ಆಫೀಸಿಗೆ,ದೇಕಿದ್ದು ಕೆಲಸವೇ ಆದರೂ ಎದುರಾದದ್ದು ಕೆಟ್ಟ ಸಂಜೆ ಸಮಯ.   ಆತ ಆ ದಿನ ಇದ್ದ ಇಷ್ಟೇ ಕೆಲಸಗಳನ್ನು ಮುಗಿಸಿ ಗೆಳೆಯ ಬಂದನೆಂದ ಕಾರಣಕ್ಕೆ ಅದೇ ಆವರಣದ ಇನ್ನೊಂದು ಕಚೇರಿಗೆ ಒಂದೆರಡು ನಿಮಿಷದ ಮಟ್ಟಿಗೆ ತೆರಳುತ್ತಾನೆ.  ವಾಪಸ್ಸು ಬರುವುದರೊಳಗೆ ಎಂಕ, ನೋಣ ಸೀನ ಎಂಬಂತಿದ್ದ ಮೂರ್ನಾಲ್ಕು ಜನ ಸಿಬ್ಬಂದಿ ಎದುರಿಗೆ ಹತ್ತು ಹದಿನೈದು ಜನರ ಗುಂಪೊಂದು ಕಚೇರಿಗೆ ಬಂದು "ಆತ "ನನ್ನು ಹುಡುಕುತ್ತಾರೆ, … Read more

ಹುಲಿ ವಿಧವೆ ರಹೀಮಾ ಬೇಗಂ: ಅಖಿಲೇಶ್ ಚಿಪ್ಪಳಿ

ಮೊನ್ನೆ ಭಾನುವಾರ ಬೇರೆ ಯಾವುದೋ ವಿಚಾರಕ್ಕೆ ಊರಿನಲ್ಲಿ ಮೀಟಿಂಗ್ ಸೇರಿದ್ದೆವು. ಹತ್ತಾರು ಜನರಿದ್ದ ಆ ಗುಂಪಿನಲ್ಲಿ ರಸ್ತೆ ಅಗಲೀಕರಣದ ವಿಷಯ ಅದೇಗೋ ನುಸುಳಿ ಬಂತು. ಗ್ರಾಮಪಂಚಾಯ್ತಿಯ ಸದಸ್ಯರೊಬ್ಬರು ಹೇಳಿದರು. ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಬದಿಯ ಮರಕಡಿಯಲು ಪರವಾನಿಗೆ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂಬುದು ಸಾರಾಂಶ. ಸರಿ ಪರಸ್ಪರ ಚರ್ಚೆ ಶುರುವಾಯಿತು.  ಕೆಲವರು ಹೇಳಿದರು ಅಭಿವೃದ್ಧಿಗಾಗಿ ರಸ್ತೆ ಬದಿಯ ಸಾಲು ಮರಗಳನ್ನು ತೆಗೆಯುವುದು ಅನಿವಾರ್ಯ. ಹಿಂದೆ ಅದ್ಯಾವುದೋ ಕಾಲದಲ್ಲಿ ಜನರು ನಡೆದುಕೊಂಡೊ ಅಥವಾ ಎತ್ತಿನ ಗಾಡಿಗಳಲ್ಲಿ ದೂರದೂರುಗಳಿಗೆ ಹೋಗುತಿದ್ದರು. … Read more

ಆದಾಯ ತೆರಿಗೆ ಮತ್ತು ನಾವು: ಪ್ರಶಸ್ತಿ ಪಿ.

  ಈಗ ಟೀವಿ, ಪೇಪರ್ಗಳಲ್ಲೆಲ್ಲಾ ಫುಟ್ಬಾಲು ಜ್ವರ. ಮೆಸ್ಸಿ, ರೊನಾಲ್ಡೋ, ರೋಬಿನ್ ವಾನ್ ಪರ್ಸಿ.. ಹೀಗೆ ತರಾವರಿ ಹೆಸರುಗಳದ್ದೇ ಗುಣಗಾನ ಫೇಸ್ಬುಕ್ , ಟ್ವಿಟ್ಟರ್ಗಳಲ್ಲೂ. ಈ ಜೋಶಿನ ಮಧ್ಯೆಯೇ ಆದಾಯ ತೆರಿಗೆ ಮಾಹಿತಿ ಸಲ್ಲಿಸಲು ಜುಲೈ ಮೂವತ್ತು ಕೊನೇ ದಿನ ಅನ್ನೋ ಮಾಹಿತಿ ಮೂಲೆಲೆಲ್ಲೋ ಮಿಂಚ್ತಾ ಇರತ್ತೆ. ಸಣ್ಣವರಿದ್ದಾಗಿಂದ ಟಿ.ವಿಯಲ್ಲಿ ಈ ಬಗ್ಗೆ ಜಾಹೀರಾತು ನೋಡೇ ಇರ್ತೇವೆ. ಆದ್ರೆ ಸ್ವಂತ ದುಡಿಯೋಕೆ ಶುರು ಮಾಡಿದಾಗ್ಲೇ ಇದೇನಪ್ಪಾ ಅನ್ನೋ ಪ್ರಶ್ನೆ ಹೆಚ್ಚೆಚ್ಚು ಕಾಡತೊಡಗೋದು. ನಾವು ಕಟ್ಟೋ ತೆರಿಗೆಯೇ ಸರ್ಕಾರದ … Read more

ಪಂಜು ಕಾವ್ಯಧಾರೆ

ಡಿಸೆಂಬರ್ ಚಳಿ  ಡಿಸೆಂಬರ್ ಬಂತೆಂದರೆ ಸಾಕು ತುಟಿಗಳು ಒಣಗಿ ಅವಳು ಕೊಡುತ್ತೇನೆಂದ ಮುತ್ತು  ಮತ್ತೆ ಮತ್ತೆ ನೆನೆಯುವಂತೆ ಮಾಡುತ್ತಿದೆ, ಜಗದ ಋತು ಚಕ್ರಕೆ ತಲೆ ಬಾಗಿ  ಕೊರೆಯುವ ಚಳಿಯಲಿ  ಹೆಣ್ಣಿನ ಸೌಂದರ್ಯದ ವಕ್ರತೆ  ಗಂಡಿನ ಚಂಚಲತೆಯನು ಕೆಣಕುತ್ತಿದೆ.  ನಿರಾಶೆ  ಕತ್ತಲೆಯ ಕನಸುಗಳು ಸೋತಾಗ  ಹೋಗುತಿರುವ ದಾರಿ ಮೌನ ತಳೆದಾಗ  ಬಯಕೆಗಳ ಬಾಯಾರಿಕೆಗೆ ನಗುತಲಿದೆ ಮೌನ  ಕಾಣದ ತೀರಕೆ ಹೊರಟಿದೆ ಜೀವನ  ನಿಲ್ಲದ ತವಕ,ಕೊನೆಯಿಲ್ಲದ ಏಕಾಂತ  ನಿಸ್ವಾರ್ಥಿ  ಹೇ ಹಣತೆಯ ದೀಪ ನೀನೆಷ್ಟು ನಿಸ್ವಾರ್ಥಿ  ರಾತ್ರೀಲಿ ನಿನ್ನ ಬಿಟ್ಟರೆ … Read more

ಬೇಸಿಗೆಯ ರಜೆ(ಸಜೆ): ಸುಮನ್ ದೇಸಾಯಿ

ಬ್ಯಾಸಗಿ ರಜಾ ಮುಗಿದು ಮತ್ತ ಶಾಲಿ ಶುರುವಾದ್ವು. ಇಷ್ಟು ದಿನದ ರಜೆಯ ಮಜಾ ಅನುಭವಿಸಿದ ಮಕ್ಕಳಿಗೆ ಶಾಲೆಗೆ ಹೋಗಲಿಕ್ಕೆ ಎನೊ ಒಂದು ಹುರುಪು ಇರ್ತದ. ಹೊಸಾ ಪುಸ್ತಕ, ಹೊಸಾ ಬ್ಯಾಗು, ಮತ್ತ ಇಷ್ಟು ದಿನ ಬಿಟ್ಟ ಇದ್ದ ಗೆಳೆಯ/ಗೆಳತಿಯರನ್ನ ನೋಡೊ ಕಾತುರ, ಸೂಟಿಯೊಳಗ ತಾವು ಏನೆನೆಲ್ಲ ನೋಡಿದ್ದು, ಆಟ ಆಡಿದ್ದು ಎಲ್ಲ ಸುದ್ದಿಯನ್ನು ಸ್ನೇಹಿತರ ಮುಂದ ಹೇಳ್ಕೊಳ್ಳೊ ಕಾತುರ ಇರ್ತದ.   ಆದ್ರ ಈಗಿನ ಮಕ್ಕಳಿಗೆ ರಜೆನು ಸಜೆ ಹಂಗಿರ್ತದ ಅಂತ ನಂಗ ಅನಿಸ್ತದ. ನಾ ಭಾಳ … Read more

ಆಯ ತಪ್ಪಿದ್ರೆ ಅಪಾಯ (ಅಳಿದುಳಿದ ಭಾಗ): ಎಂ.ಎಸ್.ನಾರಾಯಣ.

(ಇಲ್ಲಿಯವರೆಗೆ…) ಕೆಲವರಿಗೆ ಇದೆಲ್ಲಾ ವಿವರಣೆ, ಸ್ಪಷ್ಟೀಕರಣಗಳು ರೇಜಿಗೆಯೆನಿಸಬಹುದು. ಹೀಗೆ ದ್ವಂದ್ವ, ಗೊಂದಲ ಹಾಗೂ ಸಂಕೀರ್ಣತೆಗಳಿಂದ ಕೂಡಿದ ಹಲವಾರು ಸಿದ್ಧಾಂತಗಳೇಕೆ ಬೇಕು? ಸರಳವಾದ ಒಂದು ಸಿದ್ಧಾಂತ ಸಾಲದೇ? ಎಂದೂ ಪ್ರಶ್ನಿಸಬಹುದು. ಆದರೆ, ಸತ್ಯದ ಸಮಗ್ರ ವಿವರಣೆಯು ಸತ್ಯದ ಎಲ್ಲ ಮಗ್ಗುಲುಗಳನ್ನೂ ಗಣನೆಗೆ ತೆಗೆದುಕೊಳ್ಳಲೇಬೇಕಾಗುತ್ತದೆ. ಅಲ್ಲದೆ, ಅಂತಹ ಅತಿ ಸರಳೀಕರಣಗಳಿಂದ ಆಗಬಹುದಾದ ಅಪಾಯಗಳನ್ನೂ ನಿರ್ಲಕ್ಷಿಸಲಾಗುವುದಿಲ್ಲ. ಈಗ ಉದಾಹರಣೆಗೆ ಬರೀ ಕರ್ಮವಾದವನ್ನು ಅಳವಡಿಸಿಕೊಂಡೆವೆಂದುಕೊಳ್ಳಿ. ಆಗ ಎಲ್ಲ ಹೊಣೆಗಾರಿಕೆಯೂ ನಮ್ಮದೇ ಎಂದಾಗುತ್ತದೆ. ಹಾಗಾದೊಡನೆ, ‘ಎಲ್ಲವೂ ನನ್ನಿಂದಲೇ,  ನಾನಿಲ್ಲದಿದ್ದರೇನೂ ಇಲ್ಲ, ನಾನೇ ಸರ್ವಸ್ವ’, ಎಂದು … Read more

ಮೊದಲ ಪಾಕ ಪ್ರಯೋಗ: ಶ್ರೀನಿಧಿ ರಾವ್

ನಾನೆಂತಾ ಧಿಗ್ಗಡ ಧಿಮ್ಮಿ ಅಂದ್ರೆ ಮದುವೆಗೆ ಮೊದಲು ಒಂದು ದಿನ ಅಡುಗೆ ಮನೆ ಹೊಕ್ಕು ಅಡುಗೆ ಮಾಡಿದವಳೇ ಅಲ್ಲ. ಒಂದು ಕಾಫಿ, ಟೀ, ಕೂಡಾ ಮಾಡಿ ಗೊತ್ತೇ ಇಲ್ಲ. ಅಮ್ಮ ಎಷ್ಟೇ ಹೇಳಿದರೂ ಅದು ನನಗಲ್ಲ ವೆಂದೇ ಹಾಯಾಗಿ ಇದ್ದವಳು. ಆದರೆ ಅದೊಂದು  ದಿನ ನನ್ನ ನಿಶ್ಚಿತಾರ್ಥ  ಅಂತ ನಿರ್ಧಾರವಾಯಿತಾ ನನ್ನ ಕತೆ ಶುರು. ಅಯ್ಯೋ ನಂಗೆ ಅಡುಗೆ ಮನೆ ಹೊಕ್ಕೆ ಗೊತ್ತಿಲ್ಲ ಏನು ಮಾಡಲಿ ? ಆದರೂ ವಿಶೇಷ ಬದಲಾವಣೆ ಏನೂ ಇಲ್ಲ. ಎಂಟು ಘಂಟೆಗೆ … Read more

ಮಕ್ಕಳ ಮೇಲಿನ ದೌರ್ಜನ್ಯಗಳ ಹಲವು ಮುಖಗಳು: ಕೆ.ಎಂ.ವಿಶ್ವನಾಥ (ಮಂಕವಿ)

ನಮ್ಮ ದೇಶದಲ್ಲಿ ಮಕ್ಕಳೆಂದರೆ  ಹಲವು ಯೋಚನೆಗಳು ಮನದ ಮೂಲೆಯೊಳಗೆ ಮೂಡಿ ಬರುತ್ತವೆ. ನಮ್ಮ ಮಕ್ಕಳು ಬರಿ ಮಕ್ಕಳಲ್ಲ ಅವರು ಸಂಪೂರ್ಣ ವ್ಯಕ್ತಿಗಳು ಎಂದು ಪರಿಗಣಿಸಿ, ಅವರನ್ನು ತುಂಬ ಜಾಗುರೂಕತೆಯಿಂದ ಬೆಳೆಸಿ, ಅವರೇ ನಮ್ಮ ಭಾರತದ ಭವ್ಯ ಭವಿಷ್ಯ, ನಮ್ಮ ನಾಡನ್ನು ಆಳುವ ರಾಜಕಾರಣಿಗಳು ಹೀಗೆ ಹಲವು ಮಾತುಗಳು ನಮ್ಮಲ್ಲಿ ಕೇಳಿ ಬರುತ್ತವೆ.  ಆದರೆ ಇತ್ತೀಚಿಗೆ ನಮ್ಮ ದೇಶದಲ್ಲಿ ನಮ್ಮ  ಮಕ್ಕಳ ಮೇಲೆ ನಡೆಯುತ್ತಿರುವ ಹಲವು ದೌರ್ಜನ್ಯಗಳು ಸಾಕಷ್ಟು ವಿಚಿತ್ರ ಯೋಚನೆಗಳು ಒಡಮೂಡಿ ಬರುತ್ತಿರುವುದು ಕೂಡ ಗಮನಿಸಬೇಕಾದ ಅಂಶವೇ … Read more

ಸಾಮಾನ್ಯ ಜ್ಞಾನ (ವಾರ 32): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿರುವ ವಿಮಾನ ನಿಲ್ದಾಣದ ಹೆಸರೇನು? ೨.    ಸರ್ದಾರ್ ಸರೋವರ್ ಯೋಜನೆಯು ಯಾವ ನದಿಗೆ ಸಂಬಂಧಿಸಿದ್ದು? ೩.    ಸೆಲ್ಯೂಲರ್ ಜೈಲು ಭಾರತದಲ್ಲಿ ಎಲ್ಲಿದೆ? ೪.    ಪಂಜಾಬಿನ ಖ್ಯಾತ ಕವಯಿತ್ರಿ ಅಮೃತಾ ಪ್ರೀತಂ ಅವರಿಗೆ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟ ಕೃತಿ ಯಾವುದು? ೫.    ಗೊಮಟೇಶ್ವರನಿಗೆ ಮಹಾಮಸ್ತಕಾಭಿಷೇಕ ಎಷ್ಟು ವರ್ಷಗಳಿಗೊಮ್ಮೆ ನಡೆಯುತ್ತದೆ? ೬.    ಮಳೆ ನೀರಿನ ಸಂಗ್ರಹಣೆಯನ್ನು ಕಡ್ಡಾಯವಾಗಿ ಪ್ರತಿಯೊಬ್ಬರು ಮಾಡಬೇಕೆಂಬ ಆದೇಶ ಹೊರಡಿಸಿದ ಮೊದಲ ರಾಜ್ಯ ಯಾವುದು? ೭.    ಪೋಸ್ಟ್ ಆಫೀಸ್ ಕೃತಿಯ … Read more

‘ಮೌನ’, ಮಾತಾಡಲೇಬೇಕಾದ ನಾಟಕ: ಹೃದಯಶಿವ

  ನಾಗರಾಜ ಸೋಮಯಾಜಿಯವರು ಸಣ್ಣ ಪ್ರಾಯದಲ್ಲಿಯೇ ರಂಗಭೂಮಿಯ ಒಡನಾಟ ಇಟ್ಟುಕೊಂಡವರು. 'ವ್ಯಾನಿಟಿ ಬ್ಯಾಗ್', 'ನರಿಗಳಿಗೇಕೆ ಕೋಡಿಲ್ಲ', 'ಹೀಗೆರಡು ಕಥೆಗಳು' ಸೇರಿದಂತೆ ಒಂದಿಷ್ಟು ನಾಟಕಗಳಲ್ಲಿ ನಟಿಸಿದವರು. ಕಳೆದ ನಾಲ್ಕು ವರ್ಷಗಳಿಂದ ರಂಗಚಟುವಟಿಕೆಗಳನ್ನು ಬೆರಗಿನಿಂದ ನೋಡುತ್ತಾ ಬಂದವರು. ಬಿ.ವಿ.ಕಾರಂತರ ಶಿಷ್ಯೆ ಎನ್.ಮಂಗಳ ಅವರ ಜೊತೆಗಿದ್ದು ಸಾಕಷ್ಟು ರಂಗಾಸಕ್ತಿ ಬೆಳೆಸಿಕೊಂಡವರು. ಇವರು ಈಗ 'ಮೌನ' ನಾಟಕವನ್ನು ನಿರ್ದೇಶಿಸುವಾಗ ಒಂದಿಷ್ಟು ಕುತೂಹಲ ಮೂಡುವುದು ಸಹಜ. 'ಮೌನ' ನಾಟಕ ಇವತ್ತಿನ ದಿನಮಾನಕ್ಕೆ ಅಲ್ಲಲ್ಲಿ ಹತ್ತಿರವೆನಿಸಿದರೂ, ಸ್ವಲ್ಪಮಟ್ಟಿಗೆ ನವ್ಯಕಾಲಘಟ್ಟದ ಕಥನಮಿಡಿತಗಳನ್ನು ಮತ್ತೆ ಮತ್ತೆ ನೆನಪಿಸುವ ವಸ್ತುವನ್ನು … Read more

ಪಂಜು ಕಾವ್ಯಧಾರೆ

ಕನಸ್ಫುರಣೆ:   ಹಾಡು ಹರಿಯದೆಯೇ ರಾಗ ಸೃಜಿಸಿದೆ  ಮಧುರ ಗಾನಕೆ ಸೆರೆಯಾಗಿ  ಭಾವ ತೊರೆಯದೆಯೇ ಮೌನ ಮಿಡಿದಿದೆ  ಕನಸ ಸಾಲಿಗೆ ಕರೆಯಾಗಿ  ಮಾತು ಹಾಡಾದಾಗ, ಮೌನಭಾವವರಿತಾಗ  ಕಾವ್ಯ ಹೊಮ್ಮಿದ ಪರಿಯಂತೆ  ಕೌತುಕ ಕಾಡಿದ ಹಾಡು ನನ್ನ ಪಾಡು..!   ತುಟಿ ವೊಡೆಯದಲೇ ನಗು ಸುರಿದದಂಗೆ  ಪುಳಕನಿನ್ನಾಟ ನೆನೆದು ಬೆರಗಾಗಿ  ಕಣ್ಣು ಮಿಟುಕದೆಯೇ ನೀರು ಹರಿದಂಗೆ  ವಿರಹ ತಾಳದೆಯೆ ನೋವಾಗಿ ನಗುವತಿಯಾಗಿ ಹನಿಯುರುಳಿದಾಗ  ಸಂವೇದನೆ ಚಿಮ್ಮಿದ ಝರಿಯಂತೆ   ವೇದನೆಯ ಹಾಡು ನನ್ನ ಜಾಡು..!   ಕಾವ್ಯ ಸಾಲಿನ … Read more

ಸವಿ ನೆನಪುಗಳ ಪ್ರಥಮ ಮಿಲನಗಳ ಮೀರುವುದ್ಹೇಗೆ: ಷಡಕ್ಷರಿ ತರಬೇನಹಳ್ಳಿ

ಶಾಲೆಯ ಮೆಟ್ಟಿಲು ತುಳಿದ ಮೊದಲ ದಿನ ಇನ್ನೂ ನೆನಪಿದೆ. ನನ್ನನ್ನು ತನ್ನ ಬುಜದ ಮೇಲೊತ್ತು ಜೇಬು ತುಂಬಾ ಚಾಕಲೇಟು ತುಂಬಿಕೊಂಡು ಶಾಲೆಗೆ ಬಿಡುವ ಮುನ್ನ ನನ್ನ ಸೋದರ ಮಾವ ಹೇಳಿದ ಮಾತು ಮರೆಯದಂತೆ ನೆನಪಿದೆ. “ಸಾರ್ ನಮ್ಮುಡುಗನಿಗೆ ಯಾವ ಕಾರಣಕ್ಕೂ ಹೊಡೆಯಬೇಡಿ. ಅವನು ಮನೆಗೆ ಹೋಗಲು ಹಠ ಹಿಡಿದರೆ ತಗೊಳ್ಳೀ ಈ ಚಾಕಲೇಟ್ ಅವನಿಗೆ ಕೊಡಿ. ಆಯ್ತೇನೋ ಬಾಬು, ನೀನು ಹೇಳಿದಂತೆಯೇ ಇವರಿಗೆ ಹೇಳಿದ್ದೀನಿ. ಸರೀನಾ ಇವತ್ತಿನಿಂದ ನೀನು ಬೆಳಗೆಲ್ಲಾ ಇಲ್ಲೇ ಇರಬೇಕು ಗೊತ್ತಾಯ್ತಾ? ಆಗಲಿ ಎಂದು … Read more

ಟೇಮು ಅಂದ್ರೆ ಟೇಮು: ಅನಿತಾ ನರೇಶ್ ಮಂಚಿ

ಒಂದು ಕೈಯಲ್ಲಿ ಕೋಕೋಕೋಲಾ ಮತ್ತು ರಿಮೋಟ್ ಕಂಟ್ರೋಲರನ್ನು ಬ್ಯಾಲೆನ್ಸ್ ಮಾಡುತ್ತಾ  ಇನ್ನೊಂದು ಕೈಯಲ್ಲಿ ಅಂಗೈ ತುಂಬುವಷ್ಟು ಚಿಪ್ಸನ್ನು ಹಿಡಿದುಕೊಂಡು ನೆಟ್ಟ ಕಣ್ಣಿನಲ್ಲಿ ಟಿ ವಿ ಯಲ್ಲಿ ತೋರಿಸುತ್ತಿದ್ದ ಫಿಟ್ ನೆಸ್ ಕಾರ್ಯಕ್ರಮವನ್ನು ಸೋಫಾದ ಮೇಲೆ ಮಲಗು ಭಂಗಿಯಲ್ಲಿ ಕುಳಿತು ವೀಕ್ಷಿಸುತ್ತಿರುವ ಸಮಯದಲ್ಲಿ  ’ಅವ್ವಾ ಲಂಗರು ಕೊಡಿ’ ಅಂದಳು ನಮ್ಮ ಮನೆಯ ಹೊಸ  ಸಹಾಯಕಿ. ಇದ್ದಕ್ಕಿದ್ದ ಹಾಗೆ ಕೇಳಿದ  ಅವಳ ಮಾತು ಕಿವಿಯೊಳಗೆ ಹೊಕ್ಕರೂ ಅರ್ಥವಾಗದೇ ಕಣ್ಣುಗಳನ್ನು ಟಿ ವಿ ಯ ಕಡೆಯಿಂದ ಬಲವಂತವಾಗಿ ತಿರುಗಿಸಿ ಅತ್ತ ಕಡೆ … Read more

ಜರ್ನಿ, ದಾರಿಯೊಂದೇ ಮೂರು ಸಂಗತಿಗಳು: ಅಮರ್ ದೀಪ್ ಪಿ.ಎಸ್.

ಸಂಜೆ ನಾಲ್ಕು ಇಪ್ಪತ್ತಕ್ಕೆ ಹುಬ್ಬಳ್ಳಿಯಿಂದ ನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲಲ್ಲಿ ದೆಹಲಿಗೆ  ನಮ್ಮ ಪ್ರಯಾಣವಿತ್ತು. ಒಂದು ಸೆಕೆಂಡ್ ಕ್ಲಾಸ್ ಸ್ಲೀಪರ್ ಟಿಕೆಟ್ ಕನ್ಫರ್ಮ್ ಆಗಿತ್ತು.  ಇನ್ನೊಂದು ಇಲ್ಲ.  ಆಗಿಲ್ಲದ್ದೇ ನಂದು.   ನಮ್ಮ ಸ್ನೇಹಿತರೊಬ್ಬರ ಜೊತೆ ಹೋಗಿದ್ದೆ. ಆ ದಿನ ಬೆಳಗಾಂ ದಾಟಿದ ನಂತರ ಟಿ. ಸಿ. ಟಿಕೆಟ್ ಕನ್ಫರ್ಮ್ ಮಾಡಿ ಪಕ್ಕದ ಬೋಗಿಯಲ್ಲಿ ಸೀಟು ಕೊಟ್ಟಿದ್ದ.  ರಾತ್ರಿ ಎಂಟಾಗುತ್ತಿದ್ದಂತೆ ಆ ವರ್ಷದಲ್ಲೇ ಜ್ವರ ಕಾಣಿಸಿಕೊಳ್ಳದ ನನಗೆ ಜ್ವರ ಏರಿ ಓಡುವ ರೈಲಲ್ಲಿ ಪೇಚಿಗೆ ಹತ್ತಿತ್ತು.  ನನ್ನಲ್ಲಿದ್ದ … Read more

ಇರುವೆ ಮತ್ತು ಮಿಡತೆ: ಜೆ.ವಿ.ಕಾರ್ಲೊ

ಮೂಲ ಕತೆ: ‘The Ant and the Grasshopper’  ಲೇಖಕರು: ಡಬ್ಲ್ಯು.ಸಾಮರ್‌ಸೆಟ್ ಮ್ಹಾಮ್ ಕನ್ನಡಕ್ಕೆ: ಜೆ.ವಿ.ಕಾರ್ಲೊ ನಾನು ಸಣ್ಣವನಿದ್ದಾಗ ಫ್ರೆಂಚ್ ಲೇಖಕ ಫೊಂಟೇಯ್ನಾನ ಕೆಲವು ನೀತಿ ಕತೆಗಳನ್ನು ಉರು ಹಚ್ಚಿಕೊಳ್ಳುವುದು ಕಡ್ಡಾಯವೆಂಬಂತ್ತಿತ್ತು. ಈ ಕತೆಗಳಲ್ಲಿ ಅಡಗಿರುವ ನೀತಿಯನ್ನು ನಮ್ಮ ಮನದಟ್ಟಾಗುವಂತೆ ನಮ್ಮ ಹಿರಿಯರೂ ವಿವರಿಸುತ್ತಿದ್ದರು. ಈ ಕತೆಗಳಲ್ಲಿ ನನಗೆ ಬಹಳ ಇಷ್ಟವಾದ ಕತೆ ’ಇರುವೆ ಮತ್ತು ಮಿಡತೆ’ಯದು. ಈ ಅಸಮಾನತೆಯ ಜಗತ್ತಿನಲ್ಲಿ ಕ್ರಿಯಾಶಾಲಿಗಳಿಗೆ ಜಯ, ಸೋಮಾರಿಗಳಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ತುಂಬಾ ಸೊಗಸಾಗಿ ಈ ಕತೆಯಲ್ಲಿ ಚಿತ್ರಿಸಲಾಗಿದೆ. ವಸಂತ … Read more

ಓತಿ ಮೊಟ್ಟೆಯಿಟ್ಟ ಕತೆ: ಅಖಿಲೇಶ್ ಚಿಪ್ಪಳಿ

ಹೊಸ ಮನೆ ಕಟ್ಟಿಕೊಂಡು ವಾಸವಾಗಿ ಸುಮಾರು ೨ ತಿಂಗಳು ಕಳೆದವು. ಕೃಷಿಯಿಂದ ವಿಮುಖವಾಗುತ್ತಿರುವ ಹೊತ್ತಿನಲ್ಲಿ ಮರಳಿ ಮಣ್ಣಿಗೆ ಹೋಗಿದ್ದು ಹೊಸ-ಹೊಸ ಅನುಭವಗಳನ್ನು ನೀಡುತ್ತಿದೆ. ಈಗ ಕಟ್ಟಿಕೊಂಡಿರುವ ಹೊಸ ಮನೆಯ ಹಿಂಭಾಗದಲ್ಲಿ ಸುಮಾರು ೨೦ ಗುಂಟೆಯಷ್ಟು ಜಾಗದಲ್ಲಿ ದಟ್ಟವಾದ ಅರಣ್ಯ ರೂಪುಗೊಂಡಿದೆ. ಅಗಣಿತ ಸಂಖ್ಯೆಯಲ್ಲಿ ಸಸ್ಯಗಳ ಸಂಖ್ಯೆ ವೃಧ್ದಿಸಿದೆ. ನೂರಾರು ಕಾಡಿನ ಮೇಲ್ಮನೆ ಸದಸ್ಯರು ದಿನಾ ಬೆಳಗ್ಗೆ ಸಂಗೀತ ನೀಡುತ್ತವೆ. ಹನುಂತರಾಯರ ಸಂತತಿಯೂ ಬಂದು ತಮ್ಮ ಹಕ್ಕನ್ನು ಚಲಾಯಿಸಲು ಬಯಸುತ್ತಿವೆ. ಅಳಿದು ಹೋದವೆಂದುಕೊಂಡ ಕ್ಯಾಸಣಿಲು ತನ್ನ ಉದ್ದವಾದ ಸುಂದರ … Read more

ಆಯ ತಪ್ಪಿದ್ರೆ ಅಪಾಯ: ಎಂ.ಎಸ್.ನಾರಾಯಣ.

                                      ಮೊನ್ನೆ  ವಾರಾಂತ್ಯಕ್ಕೆ ಗೆಳಯರೆಲ್ಲರೂ ಮೈಸೂರಿನ ನಮ್ಮ ಹಳೆಯ ಅಡ್ಡಾ, ವಿಶ್ವನ ಕ್ಯಾಂಟೀನಿನಲ್ಲಿ ಸೇರಿದ್ದೆವು. ಆಗಷ್ಟೇ ನಮ್ಮನ್ನು ಸೇರಿಕೊಂಡ ಹರೀಶ, “ಇವತ್ತಿನ್ ಬಿಲ್ ನಂದ್ಕಣ್ರಪ್ಪಾ, ಕೊನೇಗೂ ಶ್ರೀರಾಂಪುರ್ದಲ್ಲಿ ಒಂದ್ ಥರ್ಟೀಫ಼ಾಟೀ ತೊಗೊಂಡೇಬಿಟ್ಟೇ ಕಣ್ರೋ, ಬ್ಯಾಂಕ್ಲೋನ್ಗೋಡಾಡ್ತಿದೀನಿ, ಒಂದೊಳ್ಳೆ ಮುಹೂರ್ತ ನೋಡಿ ಗುದ್ಲೀ ಪೂಜೆ ಮಾಡ್ಸೋದೊಂದೇ ಬಾಕಿ ನೋಡಿ” ಅಂತ ಗುಡ್ನ್ಯೂಸ್ ಕೊಟ್ಟೇಬಿಟ್ಟ. ಎಲ್ರೂ … Read more

ದಾಂಡೇಲಿ ದೋಣಿಯಾನ: ಪ್ರಶಸ್ತಿ ಪಿ.

ಗೆಳೆಯನ ಮದುವೆಗೆ ಬೆಳಗಾವಿಯ ಚಿಕ್ಕೋಡಿಗೆ ಹೋಗಬೇಕೆಂದಾಗ ಪ್ರವಾಸ ಪ್ರಿಯನಾದ ನಾನು ಸಹಜವಾಗೇ ಜೈಯೆಂದಿದ್ದೆ.  ಮದುವೆಯ ಮುಂಚಿನ ದಿನ ದಾಂಡೇಲಿಗೆ ಹೋಗಿ ಅಲ್ಲಿನ ಕಾಳೀ ನದಿಯಲ್ಲಿ ರಿವರ್ ರಾಫ್ಟಿಂಗ್ ಮಾಡೋಣ ಅಂದಾಗೆಂತೂ ತಗೋ, ಸ್ವರ್ಗಕ್ಕೆ ಮೂರೇ ಗೇಣು. ಗೆಳೆಯರ ಬಾಯಲ್ಲಿ ಈ ರಿವರ್ ರಾಫ್ಟಿಂಗ್ ಬಗ್ಗೆ ಹಲವು ಸಲ ಕೇಳಿದ್ದವನಿಗೆ ಅದನ್ನೊಮ್ಮೆ ನೋಡಬೇಕೆಂಬ ಬಯಕೆ ಮುಂಚಿಂದಲೂ ಇತ್ತೆಂದು ಬೇರೆ ಹೇಳಬೇಕಿಲ್ಲವೆಂದುಕೊಂಡು ಮುಂದುವರೆಯುತ್ತೇನೆ. .ಶುಕ್ರವಾರ ಸಂಜೆ ಐದುಮುಕ್ಕಾಲಕ್ಕೆ ಮೆಜೆಸ್ಟಿಕ್ಕಿಂದ ಹುಬ್ಬಳ್ಳಿಯ ಟ್ರೈನು. ಆಫೀಸಿಂದ ನಾಲ್ಕಕ್ಕೇ ಹೊರಟರೂ ಬೆಂದಕಾಳೂರಿನ ಟ್ರಾಫಿಕ್ಕಿಗೆ ಸಿಲುಕಿ … Read more

ಡುಮ್ಮಾ-ಡುಮ್ಮಿ (ಆಡಿಯೋ ಕತೆ): ಸುಮನ್ ದೇಸಾಯಿ

ಈ ಪುಟ್ಟ ಕತೆಯನ್ನು ಸುಮನ್ ದೇಸಾಯಿಯವರು ಮಕ್ಕಳಿಗಾಗಿ ಬರೆದು ಮತ್ತು ಆ ಕತೆಯನ್ನು ರೆಕಾರ್ಡ್ ಮಾಡಿ ಕಳಿಸಿದ್ದಾರೆ.  ಈ ಕತೆಯನ್ನು ಅವರ ಧ್ವನಿಯಲ್ಲಿ ಕೇಳಲು ಈ ಕೆಳಗಿನ ಕೊಂಡಿ ಮೇಲೆ ಕ್ಲಿಕ್ಕಿಸಿ. ಈ ಧ್ವನಿಮುದ್ರಿಕೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಕೆಳಗಿನ ಲಿಂಕ್ ಮೇಲೆ ರೈಟ್ ಕ್ಲಿಕ್ ಮಾಡಿ ನಂತರ save as ಆಪ್ಷನ್ ನಿಂದ ನಿಮ್ಮ ಕಂಪ್ಯೂಟರ್ ಗೆ ಡೌನ್ ಲೋಡ್ ಮಾಡಿಕೊಳ್ಳಿ… Suman Desai- Dumma Dummi ಹಿಂಗೊಂದ ಊರಾಗ ಡುಮ್ಮಾ-ಡುಮ್ಮಿ ಇದ್ರಂತ. ಡುಮ್ಮಗ ಒಂದಿನಾ ದ್ವಾಸಿ ತಿನಬೆಕನಿಸ್ತಂತ. ಆವಾಗ ಆಂವಾ … Read more

ಪ್ರಕಟಣೆಗಳು

ಉಚಿತ ಚಲನಚಿತ್ರ ಅಭಿನಯ ಮತ್ತು ನಿರ್ದೇಶನ ಕಾರ್ಯಾಗಾರ “ಸೃಷ್ಟಿ ದೃಶ್ಯ ಕಲಾಮಾಧ್ಯಮ ಅಕಾಡೆಮಿ’ಯು ಕಳೆದ 14 ವರ್ಷಗಳಿಂದ ದೃಶ್ಯಮಾಧ್ಯಮ ಕುರಿತು ತಾಂತ್ರಿಕ ತರಬೇತಿ ಶಿಬಿರಗಳನ್ನು ಆಸಕ್ತ ಯುವಜನರಿಗಾಗಿ ಆಯೋಜಿಸುತ್ತಿದೆ. ಪ್ರತಿ ವರ್ಷದಂತೆ ಈ ಸಲವೂ ಚಲನಚಿತ್ರ ಮತ್ತು ದೂರದರ್ಶನಕ್ಕೆ ಸಂಬಂಧಿಸಿದಂತೆ ಕಥೆ, ಚಿತ್ರಕಥೆ, ಸಂಭಾಷಣೆ, ಛಾಯಾಗ್ರಹಣ, ಸಂಕಲನ (ಎಡಿಟಿಂಗ್), ಕಿರುಚಿತ್ರ ನಿರ್ಮಾಣ, ನಿರ್ದೇಶನ ಮತ್ತು ಅಭಿನಯ ಕುರಿತು 5 ತಿಂಗಳ ಕಾರ್ಯಾಗಾರವನ್ನು ದಿನಾಂಕ 08-04-2014  ರಿಂದ ಪ್ರತಿ ಭಾನುವಾರಗಳಂದು ಹಮ್ಮಿಕೊಳ್ಳಲಾಗಿದೆ.   ಪ್ರತಿ ಭಾನುವಾರ “ಭಾರತ್ ಸ್ಕೌಟ್ಸ … Read more

ಸಾಮಾನ್ಯ ಜ್ಞಾನ (ವಾರ 31): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಇತ್ತೀಚೆಗೆ ನಿಧನರಾದ ಗೋಪಿನಾಥ ಮುಂಡೆ ಅವರಿಗೆ ಮೋದಿ ಸಂಪುಟದಲ್ಲಿ ಯಾವ ಖಾತೆ ನೀಡಲಾಗಿತ್ತು? ೨.    ಆಹಾರ ಸಂಸ್ಕರಣೆ ಕೇಂದ್ರ ಸಚಿವೆಯಾದ ಹರ್‌ಸಿಮ್ರತ್ ಕೌರ್ ಯಾವ ಕ್ಷೇತ್ರದಿಂದ ಸ್ಪರ್ಧಿಸಿದ್ದರು? ೩.    ಮೊದಲ ಬಾರಿಗೆ ತಯಾರಾದ ರೋಗ ನಿರೋಧಕ ಔಷಧಿ ಯಾವುದು? ೪.    ಭಾರತೀಯ ಶಿಕ್ಷಣದಲ್ಲಿ ’ಮಹಾಸನ್ನದು’ ಎಂದು ಯಾವ ವರದಿಯನ್ನು ಕರೆಯುತ್ತಾರೆ? ೫.    ಯಾವ ಖಂಡವನ್ನು ದ್ವೀಪ ಖಂಡವೆಂದು ಕರೆಯುತ್ತಾರೆ? ೬.    ವಂಗಭಂಗ ಕಾಯ್ದೆಯನ್ನು ಜಾರಿಗೊಳಿಸಿದ ವರ್ಷ ಯಾವುದು? ೭.    ಮಧುರೈ ಯಾವ ನದಿಯ ದಂಡೆಯ … Read more

ನಾನು ನೋಡಿದ ಚಿತ್ರ, ಚೌಕಟ್ಟು ಮೀರಿದ ಶ್ರಮ: ಅಮರ್ ದೀಪ್ ಪಿ.ಎಸ್.

ಕೆಲ ವರ್ಷಗಳ ಹಿಂದೆ ರಜನಿಕಾಂತ್ ಅವರ ಶಿವಾಜಿ ಸಿನಿಮಾ ಬಂದಿತ್ತು.  ಅದರಲ್ಲಿ ರಜನಿಕಾಂತ್ ಎಲ್ಲಾ ಆಸ್ತಿ ಕಳಕೊಂಡ ನಂತರ ವಿಲನ್ ಸುಮನ್ ರಜನಿಕಾಂತ್ ಅವರಿಗೆ ಒಂದು ರುಪಾಯಿ ಕಾಯಿನ್ ಎಸೆಯುತ್ತಾನೆ. ಆ ಒಂದು ರುಪಾಯಿ ಕಾಯಿನ್ ಸಿನೆಮಾ ಅಂತ್ಯವಾಗುವವರೆಗೂ ಪದೇ ಪದೇ ಪರದೆ ಮೇಲೆ ಕಾಣಿಸಿ ಕೊಳ್ಳುತ್ತಲೇ ಇರುತ್ತದೆ.  ಅದೂ ರಜನಿ ಸ್ಟೈಲಿಶ್ ನಟನೆಯೊಂದಿಗೆ.   ನನಗೆ ಪದೇ ಪದೇ ಆ ಒಂದು ರೂಪಾಯಿಯೇ  ನೆನಪಾಗುತ್ತದೆ.   ಬಿಡಿ, ಸಿನೆಮಾ ಬೇರೆ.  ಜೀವನ ಬೇರೆ. ಒಮ್ಮೊಮ್ಮೆ  ಒಬ್ಬನ … Read more

ಹೀಗೊಂದು ಗೆಳೆಯರ ಬಳಗ! (ಅಳಿದುಳಿದ ಭಾಗ?!): ಗುರುಪ್ರಸಾದ ಕುರ್ತಕೋಟಿ

(ನಮ್ಮ ಗೆಳೆಯರ ಬಳಗ ಹಾಗೂ ಅಗಿನ ನನ್ನ ಅನುಭವಗಳ ಬಗ್ಗೆ  ಹಿಂದೊಮ್ಮೆ ಬರೆದಿದ್ದೆ. ಅದಕ್ಕೆ ಸಿಕ್ಕ ಅಭೂತಪೂರ್ವ ಪ್ರತಿಕ್ರಿಯೆಯಿಂದ ಪುಳಕಿತನಾದೆ. ಅದನ್ನು ಓದಿದ ಕೆಲವು ಗೆಳೆಯರ ಆಗ್ರಹದ ಮೇರೆಗೆ, ಆ ಸಮಯದಲ್ಲಿ ನಮ್ಮ ಜೊತೆಗಿದ್ದ ಇನ್ನೂ ಕೆಲವು ವ್ಯಕ್ತಿಗಳು ಹಾಗೂ ಕೆಲವು ಮೋಜಿನ ಸಂಗತಿಗಳ ಬಗ್ಗೆ ಈಗ ಬರೆದಿದ್ದೇನೆ. ಹಿಂದಿನ ಲೇಖನ ಓದಿಯೇ ಇದನ್ನು ಓದಬೇಕೆಂದೇನು ಇಲ್ಲ. ಆದರೂ ಓದಿದರೆ ನಾನು ಬೇಡ ಅನ್ನುವುದಿಲ್ಲ! 🙂 ಇಲ್ಲಿದೆ ಅದರ ಲಿಂಕ್  ***** ನಮ್ಮ ಬಳಗದ ಇನ್ನೊಂದು ಅವಿಭಾಜ್ಯ … Read more

ಲಿಂಗೇರಿ ವಿಜಿಯ ಗುಟ್ಟು: ವಾಸುಕಿ ರಾಘವನ್

ತನ್ನ ಅಜ್ಜನ ಭಾವಚಿತ್ರದ ಮುಂದೆ ನಿಂತಿದ್ದ ವಿಜಿಯ ಮುಖದಲ್ಲಿ ತೃಪ್ತಿಯ ಮಂದಹಾಸವಿತ್ತು. "ಅಜ್ಜ, ನಿನ್ನ ಮಾತು ನಿಜ ಆಯ್ತು  ನೋಡು. ನೀನು ಹೇಳ್ತಿದ್ದ ಆ ದಿನ ಇವತ್ತು ಬಂತು" ಅಂದವನ ಕಣ್ಣಂಚು ಸ್ವಲ್ಪ ತೇವಗೊಂಡಿತ್ತು. ಅಜ್ಜ ಪಟ್ಟ ಕಷ್ಟಕ್ಕೆ, ಅನುಭವಿಸಿದ ನಿರಾಶೆ, ಅವಮಾನ, ಮೂದಲಿಕೆ ಇವೆಲ್ಲದಕ್ಕೂ ಒಂದು ಚಿಕ್ಕ ಸಮಾಧಾನ ಅನ್ನುವಂತೆ ಇತ್ತು ಆ ದಿನ. ವಿಜಿಯ ದೆಸೆಯಿಂದ ಲಿಂಗೇರಿ ಅನ್ನುವ ಆ ಪುಟ್ಟ ಹಳ್ಳಿಯ ಹೆಸರು ಜಗತ್ತಿನಾದ್ಯಂತ ಹರಡಿತ್ತು. ಯಾವುದೋ ಟಿವಿ ಚಾನಲ್ಲಿನವರು "ವಸ್ತ್ರ ಜಾದೂಗಾರ … Read more

ಆನೆ ಜೀವನ: ಅಖಿಲೇಶ್ ಚಿಪ್ಪಳಿ

ಮೆಕ್ಸಿಕೊ ದೇಶದ ಪ್ರಜೆಯೊಬ್ಬ ದೊಡ್ಡ ಸೂಟ್‌ಕೇಸಿನಲ್ಲಿ ೫೫ ಆಮೆಗಳನ್ನು ಮತ್ತು ೩೦ ಬಣ್ಣದ ಓತಿಗಳನ್ನು ಸಾಗಿಸುವಾಗ ಫ್ರಾಂಕ್‌ಫರ್ಟ್ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳಿಗೆ ಸಿಕ್ಕಿ ಬೀಳುತ್ತಾನೆ. ಮೆಕ್ಸಿಕೊ ಸಿಟಿಯಿಂದ ಫ್ರಾಂಕ್‌ಫರ್ಟ್ ಮಾರ್ಗವಾಗಿ ಬಾರ್ಸಿಲೋನಕ್ಕೆ ಈ ಅಪರೂಪದ ಪ್ರಾಣಿಗಳನ್ನು ಕಳ್ಳಸಾಗಾಣಿಕೆ ಮಾಡುತ್ತಿದ್ದ ಎಂದು ಅಲ್ಲಿಯ ಪತ್ರಿಕೆಗಳಲ್ಲಿ ವರದಿಯಾಗಿದೆ. ೫೦ ರಿಂದ ೬೦ ಸಾವಿರ ಪೌಂಡ್ ಬೆಳೆಬಾಳುವ ಈ ಪ್ರಾಣಿಗಳಲ್ಲಿ ಮೂರು ಆಮೆಗಳು ಸತ್ತು ಹೋಗಿದ್ದವು. ಮತ್ತೊಂದು ಹಾರುವ ಓತಿ ಗರ್ಭ ಧರಿಸಿತ್ತು ಎಂಬುದನ್ನು ಅಲ್ಲಿನ ವನ್ಯಜೀವಿ ತಜ್ಞರು ಹೇಳಿದ್ದಾರೆ. … Read more

ನಮ್ಮ ದೇವರು: ಜೈಕುಮಾರ್.ಹೆಚ್.ಎಸ್

ದೇಶದ ಪ್ರತಿಷ್ಟಿತ ವಿಜ್ಞಾನ ಸಂಶೋಧನಾ ಸಂಸ್ಥೆಯ ಆವರಣವದು. ದಟ್ಟ ಅರಣ್ಯವನ್ನು ನೆನಪಿಸುವ ದೇಶೀಯ ಮರಗಿಡಗಳಷ್ಟೇ ಅಲ್ಲದೆ ವಿವಿಧ ದೇಶಗಳ ಸಸ್ಯಸಂಪತ್ತನ್ನು ಹೊಂದಿದ್ದು, ಎಂಥಹ ಕಡುಬೇಸಿಗೆಯಲ್ಲೂ ತಂಪಾದ ಗಾಳಿ ಬೀಸುತ್ತಾ ನಳನಳಿಸುವ ಆವರಣವದು. ನೂರಾರು ಎಕರೆಯಷ್ಟು ಹರಡಿರುವ ಆವರಣದಲ್ಲಿ ವಿಜ್ಞಾನ ಪ್ರಯೋಗಾಲಯಗಳು, ಕ್ಲಾಸ್ ರೂಮುಗಳು, ವಿದ್ಯಾರ್ಥಿ ನಿಲಯಗಳು, ಕ್ಯಾಂಟೀನ್‌ಗಳು, ವಿಜ್ಞಾನಿಗಳ ವಸತಿ ನಿಲಯಗಳು ಯೋಜಿತ ರೀತಿಯಲ್ಲಿ ವಿಶ್ವದರ್ಜೆಗೆ ಸರಿಸiನಾಗಿ ಅರಣ್ಯದಂಥಹ ಆವರಣದಲ್ಲಿ ಅಡಗಿ ಕುಳಿತಂತಿವೆ.  ಅದೊಂದು ದಿನ ಮಧ್ಯಾಹ್ನದ ಹೊತ್ತು ರಸ್ತೆಯಲ್ಲಿ ಜನ ತಮ್ಮ ಪಾಡಿಗೆ ತಾವು ಸಾಗುತ್ತಿದ್ದಾರೆ. … Read more