ಆಲಿಸ್ ವಾಕರ್ ಳ ಮೂರು ಕವಿತೆಗಳು: ರಮೇಶ್ ಮೇಗರವಳ್ಳಿ

 *ಆಲಿಸ್ ವಾಕರ್* ಅಮೇರಿಕಾದ ಜಾರ್ಜಿಯಾದ ಈಟಾನ್ಟನ್ ನಲ್ಲಿ ೯ – ೨ – ೧೯೪೪ ರ೦ದು ಜನಿಸಿದ ಆಲಿಸ್ ವಾಕರ್ ಅಮೇರಿಕಾದ ಸುಪ್ರಸಿದ್ಧ ಕಾದ೦ಬರಿಗಾರ್ತಿ, ಕಥೆಗಾರ್ತಿ, ಕವಯತ್ರಿ, ಪ್ರಬ೦ಧಗಾರ್ತಿ ಮತ್ತು ಹೋರಾಟಗಾರ್ತಿ.  ಅವಗಢವೊ೦ದರಲ್ಲಿ ಒ೦ದು ಕಣ್ಣನ್ನು ಕಲೆದುಕೊ೦ಡ ಆಲಿಸ್ ವಾಕರ್ ಳಿಗೆ ಆಗಾಧವಾದ ಓದಿನ ಹಸಿವು. ಸಾರಾ ಲಾರೆನ್ಸ್ ಕಾಲೇಜ್ ಮತ್ತು ಸ್ಪೆಲ್ಮನ್ ಕಾಲೇಜ್ ಗಳಲ್ಲ್ಲಿ ಶಿಕ್ಷಣ ಪಡೆದ ಆಲಿಸ್ ವಾಕರ್ ಳ ಸುಪ್ರಸಿಧ್ಧ ಕಾದ೦ಬರಿ "The color purple" ಗೆ ಪ್ರತಿಷ್ಠಿತ  ಪುಲಿಟ್ಸರ್ ಬಹುಮಾನ ಮತ್ತು … Read more

ನಮ್ಮ ಬಳಿ ಇಲ್ಲದಿರುವುದಕ್ಕೆ: ಪದ್ಮಾ ಭಟ್

ಹೈಸ್ಕೂಲು ದಿನಗಳಲ್ಲಿ ಆ ಪದ್ಯ ಓದಿದ ನೆನಪು.. ಚಳಿಗಾಲ ಬಂದಾಗ ಎಷ್ಟು ಚಳಿ ಎಂದರು. ಬಂತಲ್ಲ ಬೇಸಿಗೆ ಕೆಟ್ಟ ಬಿಸಿಲೆಂದರು ಎಂಬ ಪದ್ಯದ ಹೆಸರು ಇಕ್ಕಳ ಎಂದು.. ಹೌದಲ್ವಾ.. ನಮಗೆ ಕಳೆದುಹೋಗಿದ್ದೇ ಚನ್ನಾಗಿರುತ್ತದೆ..ಚಿಕ್ಕವರಿರುವಾಗ ದೊಡ್ಡವರಾಗುವ ಕನಸುಗಳು. ದೊಡ್ಡವರಾದ ಮೇಲೆ ಬಾಲ್ಯವೇ ಚನ್ನಾಗಿತ್ತೆಂಬ ಮನಸು.. ಪ್ರತೀದಿನವೂ ಪ್ರತೀಕ್ಷಣವೂ ಸಿಗದೇ ಇರುವುದೇ ಒಳ್ಳೆಯದೆಂಬ ಮರೀಚಿಕೆ ನಮಗೆ.. ಸಿಗದಿರುವ ದ್ರಾಕ್ಷಿ ಹುಳಿಯೇ ಎಂದು ನರಿಯಂತೆ ನಾವಂದುಕೊಳ್ಳುವುದಿಲ್ಲ. . ಸಿಗದೇ ಇರುವುದೇ ಚನ್ನಾಗಿರುತ್ತದೆ ಎಂದು ಅಂದುಕೊಳ್ಳುತ್ತೇವೆ ಅಲ್ವಾ..? ಬೇರೆಯವರು ಹಾಕಿಕೊಂಡ ಬಟ್ಟೆಯೇ ಚನ್ನಾಗಿರುತ್ತದೆ.. … Read more

ಮರೆಯುವುದನ್ನು ಮರೆಯುವ ಬಗೆ ಹೇಗೆ?: ಹೊರಾ.ಪರಮೇಶ್

"ಮರೆವು" ಎಂಬುದು ಜ್ಞಾನಾಸಕ್ತರಿಗೆ ಅದರಲ್ಲೂ ಕಲಿಕಾ ಪ್ರಕ್ರಿಯೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗೆ ಶತ್ರುವಂತೆ ಕಾಡುತ್ತದೆ.ಪ್ರತಿಯೊಬ್ಬರಿಗೂ ಜೀವನದ ಒಂದಲ್ಲ ಒಂದು ಸಂದರ್ಭದಲ್ಲಿ ಈ "ಮರೆವು" ಉಂಟಾಗಿ ಕೆಲವೊಮ್ಮೆ ಅವಮಾನ, ಮತ್ತೆ ಕೆಲವೂಮ್ಮೆ ಅಪಘಾತ ಇನ್ನೂ ಕೆಲವು ಸಾರಿ ಆನಂದವನ್ನೇ ಉಂಟು ಮಾಡುತ್ತದೆ.ಅದಕ್ಕೆ ಮನೋವಿಜ್ಞಾನಿಗಳು "ಮರೆವು ಮನುಷ್ಯನಿಗೆ ವರವೂ ಹೌದು ಶಾಪವೂ ಹೌದು" ಎಂದಿದ್ದಾರೆ.             ನಿಜ ನಮ್ಮ ಮೆದುಳಿನಲ್ಲಿ ನಮ್ಮ ಪಂಚೇ೦ದ್ರಿಯಗಳಿಂದ ಪಡೆದ ಅನುಭವಗಳೆಲ್ಲವನ್ನು ದಾಖಲಿಸುವ ಸಾಮರ್ಥ್ಯ ಇರುತ್ತದೆ.ಆದರೆ ಆ ಧಾರಣ ಸಾಮರ್ಥ್ಯವು … Read more

ನನ್ನೊಳಗಿನ ಗೆಳತಿ: ಸುಮನ್ ದೇಸಾಯಿ

    ಅದೊಂದು ಸುಂದರ ಸಂಜೆ. ಪಾರ್ಕಿನೊಳಗ ಅವರಿಗಾಗಿ ಕಾಯಿಕೊಂಡು ಕೂತಿದ್ದೆ. ಇಗೀಗಷ್ಟೆ ಅವರ ಪರಿಚಯ ಆಗಿತ್ತು. ದಿನಾಲು ವಾಕಿಂಗ್ ಬರ್ತಿದ್ರು. ಸುಮಾರು ೫೩ ರ ಅಂಚಿನ ಅವರು, ಅದ್ರ ಹಂಗ ಅನಿಸ್ತಿದ್ದಿಲ್ಲ. ನಲವತ್ತೈದರ ಆಸು ಪಾಸು ಅನಿಸ್ತಿತ್ತು. ತಿಳಿಯಾದ ಬಣ್ಣ, ಸ್ವಲ್ಪ ಕೋಲೆನ್ನಬಹುದಾದ ಮುಖ, ಕಂಡು ಕಾಣದಂತೆ ನಗುವ ಕಣ್ಣುಗಳು, ಧೀಮಂತ ಮುಖಕ್ಕೆ ಒಪ್ಪುವ ಕನ್ನಡಕ. ಸ್ನೆಹಮಯವಾದ ಸಂಯಮದಿಂದ ಕೂಡಿದ ಮಾತುಗಳು. ಇತ್ತೀಚಿಗ್ಯಾಕೊ ಮನಸ್ಸಿಗೆ ಹತ್ತರ ಆಗ್ಲಿಕತ್ತಿದ್ರು. ಆವತ್ತ ಅವರನ್ನ ನೋಡಿದ ಮೊದಲ ದಿನ, ನನ್ನ … Read more

ಸಾಮಾನ್ಯ ಜ್ಞಾನ (ವಾರ 30): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧)    ಮೇ – ೨೬ – ೨೦೧೪ ರಂದು ನರೇಂದ್ರ ಮೋದಿಯವರು ಭಾರತದ ಎಷ್ಟನೆಯ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು ? ೨)    ಇತ್ತಿಚೆಗೆ ನಡೆದ ೨೦೧೪ ರ ಲೋಕಸಭಾ ಚುನಾವಣೆಯಲ್ಲಿ ಉಮಾಭಾರತಿಯವರು ಯಾವ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದಾರೆ ? ೩)    ಪೋಲಿಯೋ ನಿರ್ಮೂಲನೆಯ ಹರಿಕಾರ ಎಂಬ ಖ್ಯಾತಿ ಪಡೆದ ಡಾ||ಹರ್ಷವರ್ಧನ ಅವರಿಗೆ ಮೋದಿ ಸಂಪುಟದಲ್ಲಿ ಯಾವ ಖಾತೆ ನೀಡಲಾಗಿದೆ ? ೪)    ಇತ್ತೀಚೆಗೆ ದೂರ ಸಂಪರ್ಕ ಮತ್ತು ಕಾನೂನು ನ್ಯಾಯಾಂಗ ಸಚಿವರಾದ ರವಿಶಂಕರ್ ಪ್ರಸಾದ್ … Read more

ಅಪರಿಚಿತರು ಪರಿಚಿತರಾದಾಗ: ನಟರಾಜು ಎಸ್.ಎಂ.

ಜಲ್ಪಾಯ್ಗುರಿಯಲ್ಲಿ ರಾಜ್ ಗಂಜ್ ಎಂಬ ಬ್ಲಾಕ್ ಇದೆ. ಬ್ಲಾಕ್ ಎಂದರೆ ನಮ್ಮ ಕಡೆಯ ತಾಲ್ಲೂಕು. ಆ ಬ್ಲಾಕು ಒಂದು ಕಡೆ ಬಾಂಗ್ಲಾ ದೇಶಕ್ಕೆ ಅಂಟಿಕೊಂಡಿದೆ. ಅಂದರೆ ಬಾಂಗ್ಲಾ ದೇಶದ ಬಾರ್ಡರ್ ಈ ಬ್ಲಾಕ್ ನಲ್ಲಿದೆ. ಆ ಬ್ಲಾಕಿನ ಬಾರ್ಡರ್ ನಲ್ಲಿರುವ ಒಂದು ಊರಿನಲ್ಲಿ ಒಮ್ಮೆ ಜಾಂಡೀಸ್ ಕೇಸ್ ಗಳು ಪತ್ತೆಯಾಗಿದ್ದವು. ಅದರ ಇನ್ ವೆಸ್ಟಿಗೇಷನ್ ಗೆ ಅಂತ ಹೋಗಿದ್ದೆ. ನನ್ನ ಜೊತೆ ನಮ್ಮ ಸರ್, ಒಂದಿಬ್ಬರು ಆಫೀಸ್ ಸ್ಟಾಫ್, ವಾಟರ್ ಟೆಸ್ಟಿಂಗ್ ಲ್ಯಾಬೋರೇಟರಿಯಿಂದ ಬಂದಿದ್ದ ಟೆಕ್ನಿಷಿಯನ್ ಮತ್ತು … Read more

“ಚೇತನ” ಎಂದಾದರೂ “ವಿಕಲ”ವಾಗಲು ಸಾಧ್ಯವೇ?: ಅಮರ್ ದೀಪ್ ಪಿ.ಎಸ್.

ದೇಹದಲ್ಲಿ ಮನುಷ್ಯನಿಗೆ ಯಾವುದಾದ್ರೂ  ಅಂಗ ಊನತೆ ಇದ್ರೆ ಅದಕ್ಕೆ ಅಂಗವೈಕಲ್ಯ ಅಂತ ಲೋಕ ರೂಢಿಯಾಗಿ ಕರೆದು ಬಿಟ್ಟರು.  ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ನಮ್ಮ ಬರಹಗಾರರು ಅಂಗವೈಕಲ್ಯ ಪದವನ್ನು ಬದಲಾಯಿಸಿ "ವಿಕಲಚೇತನ"ಎಂದು ಕರೆದರು.  ಆಂಗ್ಲದಲ್ಲಿ "physically handicapped" ಅನ್ನುವ ಪದವನ್ನು ಯಥಾವತ್ತಾಗಿ  ಕನ್ನಡೀಕರಿಸಿರಬಹುದು.  ಅದನ್ನೇ ಅಂಥಹವರನ್ನು ನಿಂದಿಸದ ರೀತಿ ಯಲ್ಲಾಗಲಿ ಪ್ರೋತ್ಸಾಹಿಸುವ ರೀತಿಯಲ್ಲಾಗಲಿ  "physically challenged" ಅಂತ ಕರೀಬೇಕು ಅಂತೇನೋ ಆಯಿತು. ಇರಲಿ  ನನ್ನ ಪ್ರಶ್ನೆ ಇರುವುದು  ಈಗ ಈ ಅಂಗ ಊನತೆ ಇರುವ ಜನರನ್ನು … Read more

ಹ್ಹೋ.. ಏನು ..?: ಅನಿತಾ ನರೇಶ್ ಮಂಚಿ

ನಾಯಿ ಬೊಗಳುವ ಸದ್ದಿಗೆ ಒಬ್ಬೊಬ್ಬರಾಗಿ ಹೊರ ನಡೆದ ನಮ್ಮ ಮನೆಯ ಸದಸ್ಯರು ಯಾರೊಂದಿಗೋ ಏನು ? ಏನು? ಎಂದು ವಿಚಾರಿಸುತ್ತಿರುವುದು ಕೇಳಿಸಿತು. ಮಧ್ಯಾಹ್ನದ ಊಟದ ಸಿದ್ದತೆಯಲ್ಲಿದ್ದ ನಾನು ಯಾರಿರಬಹುದು ಎಂಬ ಕುತೂಹಲದಲ್ಲಿ ಹೊರಗೆ ದೃಷ್ಟಿ ಹಾಯಿಸಿದೆ. ಅರ್ರೇ .. ನಮ್ಮ ಪ್ರೀತಿಯ ಗೌರತ್ತೆ.. ಅದೂ ಕೊಡಗಿನ  ಕಾವೇರಿಯ ಉಗಮಸ್ಥಾನದಿಂದ  ಮೊದಲ ಬಾರಿಗೆ ನಮ್ಮನೆಗೆ ಬರುತ್ತಾ ಇರುವುದು. ನಾವೆಲ್ಲಾ ಅವರ ಮನೆಗೆ ಹೋಗಿ ದಿನಗಟ್ಟಲೆ ಟೆಂಟ್ ಊರುತ್ತಿದ್ದೆವು. ಸ್ವಲ್ಪವೂ ಬೇಸರಿಸಿಕೊಳ್ಳದೇ ಉಪಚಾರ ಮಾಡಿ ಅಕ್ಕರೆಯಿಂದ ನೋಡಿಕೊಳ್ಳುತ್ತಿದ್ದರು.  ಅಲ್ಲಿಂದ ಮರಳುವಾಗ … Read more

ಪಕ್ಷಿ ವೀಕ್ಷಣೆಗೊಂದು ದಿನ: ಡಾ. ಅಶೋಕ್ ಕೆ. ಆರ್.

ಇತ್ತೀಚಿನ ದಿನಗಳಲ್ಲಿ ವಾರಾಂತ್ಯದ ಪ್ರವಾಸವೆಂದರೆ ದೂರವೂ ಅಲ್ಲದ ತುಂಬಾ ಹತ್ತಿರವೂ ಅಲ್ಲದ ಉತ್ತಮ ಹೋಟೆಲ್ಲಿಗೋ, ಸಕಲ ಐಷಾರಾಮಿ ಸೌಲಭ್ಯಗಳಿರುವ ರೆಸಾರ್ಟಿಗೋ ಹೋಗಿ ವಾರಪೂರ್ತಿ ಮನೆ ಆಫೀಸಿನಲ್ಲಿ ಮಾಡಿದ್ದನ್ನು ವಾರಾಂತ್ಯದಲ್ಲಿ ಹೊಸ ಜಾಗದಲ್ಲಿ ಮಾಡುವುದಷ್ಟೇ ಆಗಿಹೋಗಿದೆ. ಪ್ರಕೃತಿ ಸೌಂದರ್ಯ ಸವಿಯಲು ಹೋಗುವವರ ಸಂಖೈಯೂ ಹೆಚ್ಚುತ್ತಿದೆಯಾದರೂ ಬಹಳಷ್ಟು ಮಂದಿ ನಿರ್ಮಲ ಸ್ಥಳಗಳನ್ನು ಮಲಿನಗೊಳಿಸಿ ಹಿಂದಿರುಗುತ್ತಾರೆ. ಇಂತಹವರ ಕಾರಣದಿಂದಾಗಿ ಹೆಚ್ಚು ಪ್ರಸಿದ್ಧವಲ್ಲದ ತಾಣಗಳ ಕುರಿತು ಮಾಹಿತಿ ಒದಗಿಸುವುದಕ್ಕೆ ಕೊಂಚ ಹಿಂಜರಿಕೆ ಇರುವುದು ಸುಳ್ಳಲ್ಲ. ಪಕ್ಷಿ ವೀಕ್ಷಕರಿಗೆ, ಛಾಯಾಗೃಹಕರಿಗೆ ಕೊಕ್ಕರೆ ಬೆಳ್ಳೂರು ಚಿರಪರಿಚಿತ. … Read more

ಮೇ ೨೨ ಹಾಗೂ ಜೂನ್ ೫ ರ ನಡುವೆ: ಅಖಿಲೇಶ್ ಚಿಪ್ಪಳಿ

ಮೇ ೨೨ ಜೀವಿ ವೈವಿಧ್ಯ ದಿನ. ಮೇ ತಿಂಗಳು ಕಳೆದ ನಂತರ ಜೂನ್ ಮೊದಲ ವಾರದಲ್ಲೇ ಅಂದರೆ ಜೂನ್ ೫ ರಂದು ವಿಶ್ವ ಪರಿಸರ ದಿನಾಚರಣೆ. ಈ ಪರಿಸರದಲ್ಲಿ ಎನೆಲ್ಲಾ ವೈವಿಧ್ಯಗಳಿವೆ ಎಂಬುದನ್ನು ಸಂಪೂರ್ಣವಾಗಿ ಅರಿಯಲು ಇನ್ನೂ ಸಾಧ್ಯವಾಗಿಲ್ಲ. ಪ್ರತಿವರ್ಷ ಹೊಸ ಸಸ್ಯವೈವಿಧ್ಯ ಹಾಗೂ ಜೀವಿಗಳು ಪತ್ತೆಯಾಗುತ್ತಿರುತ್ತವೆ. ನಿಸರ್ಗ ಅದ್ಯಾವುದೋ ಲೆಕ್ಕಾಚಾರ ಹಾಕಿಯೇ ಜೀವಿಗಳನ್ನು ಸೃಷ್ಟಿ ಮಾಡುತ್ತಿರುತ್ತದೆ. ನಮ್ಮ ಗ್ರಹಿಕೆ ಬರುವ ಮೊದಲೇ ಹಲವು ಜೀವಿಗಳು ನಾಮಾವಶೇಷವಾಗುತ್ತವೆ. ಪ್ರಕೃತಿಯ ಅಗಾಧ ಅಚ್ಚರಿಗಳ ಎದುರು ನಾವು ಹುಲುಮಾವನರಷ್ಟೆ ಸೈ. … Read more

ಕಥಾಕಾಲ: ಪ್ರಶಸ್ತಿ ಪಿ.

ಎಲೆಕ್ಷನ್ನಾದ ಮೇಲೆ ಆಗೊಮ್ಮೆ ಈಗೊಮ್ಮೆಯಾದರೂ ಬರುತ್ತಿದ್ದ ಮಳೆಯ ಸುಳಿವೂ ಇಲ್ಲದೇ ಅದೆಷ್ಟೋ ದಿನಗಳಾಗಿ , ತನ್ನನ್ನು ತಾನೇ ಸುಟ್ಟುಕೊಳ್ಳುವಂತಿದ್ದ ಬಿರುಬೇಸಿಗೆ. ಈ ಸುಡುಬೇಸಿಗೆಯಲ್ಲಿ ಕೂತ ಕುರ್ಚಿಯೂ ಕೊಂಚ ಹೊತ್ತಲ್ಲೇ ಕೆಂಡದಂತೆನಿಸಿದರೆ ಆಶ್ಚರ್ಯರ್ಯವೇನಿಲ್ಲ. ಸ್ವಂತಕ್ಕೇ ಸಮಯವಿಲ್ಲದೀ ಸಮಯದಲ್ಲೊಬ್ಬರ ಹುಡುಕಾಟ ನಡೆದಿದೆ. ಅವ್ರೇ ಕತೆಗಾರ ಕಟ್ಟಪ್ಪ. ಈ ಕಟ್ಟಪ್ಪರಿಗೆ ಕತೆ ಬರೆಯೋದು ಅಂದ್ರೆ ಅದೊಂದು ತಪಸ್ಸು. ಯಾರೋ ಕೇಳಿದ್ರು ಅಂತ, ಏನೋ ನೋಡಿದ್ರು ಅಂತ ತಕ್ಷಣಕ್ಕೆಲ್ಲಾ ಏನೇನೋ ಎಳೆಹೊಡೆದು ಅದು ಕತೆಯಾಗೋದಲ್ಲ.ಈ ತತ್ ಕ್ಷಣದ ಕತೆ ಮತ್ತು ಮೂಡಿದ್ದಾಗ, ಬಿಡುವಿದ್ದಾಗೆಲ್ಲಾ ಒಂದೊಂದು … Read more

ಮೈ ಕ್ರೇಝಿ ಲೈಫ್ ಸ್ಟಿಲ್ ಗೋಸ್ ಆನ್..!!: ಸಚಿನ್ ಎಂ. ಆರ್.

ಫ್ಲಾಶ್ ಬ್ಯಾಕ್ ೧ (ಬ್ಲಾಕ್ ಅಂಡ್ ವೈಟ್ ಶೇಡ್):  ಅದು ೨೦೦೫ರ ಇಸವಿ. ಗುಳಿ ಬಿದ್ದ ಕಣ್ಣುಗಳ ಸಾಧಾರಣ ಎತ್ತರದ ತೆಳ್ಳನೆಯ ಬಿಳಿ ಹುಡುಗ ಶಾಲಾ ಗೇಟಿಂದ ಹೊರಬಿದ್ದ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದ ಚೀಟಿ ಕೈಲಿತ್ತು. ೮೪% ಮಾರ್ಕ್‌ಸ್ ಬಂದಿತ್ತು. ಒಂದು ಪರ್ಸಂಟ್ ಇಂದ ಡಿಸ್ಟಿಂಕ್ಷನ್ ಮಿಸ್ಸು. ಛೇ.. ಹಳಹಳಿಸಿದ ಆತ..!  ಕಾಲೇಜು ಮೆಟ್ಟಿಲು ಹತ್ತುವ ಹೊತ್ತು. ಅಪ್ಪ ಕೇಳಿದ್ರು ನಿನ್ನ ಮುಂದಿನ ಗುರಿ ಏನೊ? ಅವನುತ್ತರ ಗೊತ್ತಿಲ್ಲಪ್ಪ..,  ಆದ್ರೆ ನಾನು ಸೈಕಿಯಾಟಿಸ್ಟ್ ಆಗ್ತೀನಿ, ಎಲ್ರ ಬುಲ್ಡೆ … Read more

ನಾನು ಏಕೆ, ಏಕೆ ಹೀಗೆ…?!!!: ಭರತೇಶ ಅಲಸಂಡೆಮಜಲು

                      ಮಾನವ ಜಗದ ಒಂದು ಹಗಳಿರುಳ ಜೀವನದಲ್ಲಿ ಅನೇಕ ಅನುಭವಗಳನ್ನು ಪಡೆಯುತ್ತಾನೆ. ಕೆಲವು ಒಳ್ಳೆಯ ಅನುಭವಗಳಾದರೆ, ಕೆಲವು ಕೆಟ್ಟ ಅನುಭವಗಳು. ಹಲವು ಸಲ ಅನುಮಾನ, ಅವಮಾನಗಳೇ ಅನುಭವವಾಗಿ ರೂಪಾಂತರವಾಗುತ್ತದೆ. ಕತ್ತಲ ಜೀವದ ಹೃದಯ ಕವಾಟಕ್ಕೆ ಇವುಗಳೇ ದಾರಿದೀಪವಾಗುತ್ತದೆ. ಜಗದಲ್ಲಿ ಉಚಿತವಾಗಿ ದೊರೆಯುವುದೆಂದರೆ ಅದು ಉಚಿತ ಸಲಹೆಗಳು, ಪರಪದೇಶಗಳು, ಹಿತೋಪದೇಶಗಳು ಎಲ್ಲರ ಮನದಲ್ಲೂ ಮನೆಯಲ್ಲೂ ಹರಿದಾಡುತ್ತವೆ, ಕೆಲವು ಮತ್ತೆ ಮತ್ತೆ ಪೀಡಿಸುತ್ತವೆ, ಮಾನಸವನ್ನು ಕಾಡುತ್ತವೆ, … Read more

ಆಡಿಯೋ ಸಹಿತ ಪಂಜು ಕಾವ್ಯಧಾರೆ

ಅಮ್ಮ ನಾನು ಕೈಚಾಚಿ ಹನಿಗಳ  ಸ್ಪರ್ಶಿಸಲು  ಇಬ್ಬನಿಯ ಹೊತ್ತ ಚಳಿಗಾಳಿ ಮೈಯ ಅಪ್ಪಲು ನೆಲ ತುಂಬಿ ನಿಂತ ನೀರು ಪಾದಗಳ ಮುತ್ತಿಡಲು ನೀನು ನೆನಪಾಗುತ್ತೀಯ ಅಮ್ಮ ಒದ್ದೆಯಾದ ಮೈ ಒರೆಸಿದಂತೆ ಕೆಸರಾದ ಕಾಲ ನೇವರಿಸಿ  ತೊಳೆದಂತೆ ಅನ್ನಿಸಿಬಿಡುವುದು  ಪ್ರತೀಬಾರಿ ಮಳೆಬರಲು -ಅಕ್ಷಯ ಕಾಂತಬೈಲು                     ನಾ ನಿನ್ನ ಮರೆತು, ತೊರೆಯ ಹೊರಟರೆ ತಾಯಿ  ತನ್ನ ಮಗುವನ್ನು ತೊರೆದಂತೆ  ಮರ ತನ್ನ ಬೇರನ್ನು ತಾನೇ  ಕಡಿದುಕೊಂಡಂತೆ, … Read more

ಮಾತು ಮುಕ್ಕಿದ ಮೌನ: ನಳಿನಾ ಡಿ.

  ಗೆಳತಿಯರು ಕಳೆದುಹೋಗುತ್ತಾರಾ?  ಆದರೆ ಗೆಳತಿಯರನ್ನು ಜತನದಿಂದ ಸಂಪಾದಿಸುವುದು ಹೇಗೆ?  ಇದು ನಾನು, ನಿನ್ನ ಏಕೈಕ ಗೆಳೆಯ ಎಂದು ಎದೆಯುಬ್ಬಿಸಿ ಹೇಳಿದಾಗಲೆಲ್ಲಾ ನನ್ನ ಸ್ನೇಹದ ಸವಿಯರಿತ ಅವಳ ಮನಸ್ಸು ಉಬ್ಬುವುದು, ಮತ್ತೆ ಜಗತ್ತಿನ ಅತ್ಯಂತ ಸುಖವಾದ ಗೆಳತಿ ನಾನೇ ಕಣೋ, ಅದು ನಿನ್ನಿಂದಾನೇ ಅಂತ ಅವಳ ಸಂಭ್ರಮಿಸಿ ಭತ್ತದ ಹೊಲಗಳ ಹಸಿರು ಬಯಲಿನಲ್ಲಿ ಕೂಗಿದಾಗ, ನನ್ನ ಮನಸ್ಸಿನೊಂದಿಗೆ ದೇಹವೂ ಊರಾಚೆಯಲ್ಲಿ ಗೋಚರಿಸುವ ಗುಡ್ಡದ ಮೇಲೇನೇ ಕೂತುಬಿಟ್ಟಿರತ್ತೆ.  ನನ್ನಷ್ಟು ಎತ್ತರ ಯಾರೂ ಇಲ್ಲ ಎಂಬ ಕೋಡು.    ಐದಾರನೇ … Read more

ಗಂಡ ಒಬ್ಬ ಸೆನ್ಸಿಟಿವ್ ಗೆಳೆಯನಂತೆ ಯಾಕಿರೋಲ್ಲ/ಯಾಕಾಗೋಲ್ಲ?: ಸುಮನ್ ದೇಸಾಯಿ

ಕಪ್ಪುಗಟ್ಟಿರುವ ಆಕಾಶ, ಹೆಪ್ಪುಗಟ್ಟಿರುವ ವಿಷಾದವನ್ನು ಹೆಚ್ಚಿಸುವ ಬಣ್ಣ. ಟೆರೇಸ್ ಮೇಲೆ ಒಬ್ಬಳೇ ಕುಳಿತಿದ್ದೇನೆ. ಮಾತನಾಡುವಾಸೆ. ಅವನು ಜತೆಗಿಲ್ಲ. ಮತ್ತದೇ ಬೇಸರ. ಅದೇ ಸಂಜೆ, ಅದೇ ಏಕಾಂತ. ಅದೇನೋ ಗೊತ್ತಿಲ್ಲ, ಸಂಜೆಗೂ ಬೇಸರಕ್ಕೂ ಎಲ್ಲಿಲ್ಲದ ನಂಟು. ಸಂಜೆಯಾಗುತ್ತಿದ್ದಂತೆ ಮನಸ್ಸು ಮಾತನಾಡಲು ಹಾತೊರೆಯುತ್ತದೆ. ಮನಸ್ಸಿನ ಮಾತು ಕೇಳಿಸಿಕೊಳ್ಳುವವರಿಗಾಗಿ ಹುಡುಕಾಡುತ್ತದೆ. ಮೊಬೈಲ್ನಲ್ಲಿರೋ ಕಾಂಟ್ಯಾಕ್ಟ್ ನಂಬರುಗಳನ್ನೆಲ್ಲಾ ತಡಕಾಡುತ್ತೇನೆ. ಒಬ್ಬರೂ ಸಿಗಲೊಲ್ಲರು. ಹಾಗೆ ಸಿಕ್ಕಿದವರೆಲ್ಲರ ಜತೆ, ಇದ್ದಬದ್ದವರ ಜತೆ ಮನಸ್ಸನ್ನ ಬಿಚ್ಚಿಡಲಾಗುತ್ತದಾ, ಹಂಚಿಕೊಂಡು ಹಗುರಾಗಬಹುದಾ? ಇಲ್ಲವೇ ಇಲ್ಲ. ಅದಕ್ಕೂ ಒಂದು ವಿಶ್ವಾಸಾರ್ಹತೆ ಬೇಕು. ಸ್ನೇಹದ … Read more

ಸಾಮಾನ್ಯ ಜ್ಞಾನ (ವಾರ 29): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಜ್ಞಾನಪೀಠ ಪ್ರಶಸ್ತಿ ಪಡೆದ ವಿ.ಕೃ.ಗೋಕಾಕರ ಕಾವ್ಯ ಯಾವುದು ? ೨.    ಕರ್ನಾಟಕ ವಿದ್ಯುತ್ ಕಾರ್ಖಾನೆ (ಕವಿಕಾ) ಸ್ಥಾಪನೆಯಾದ ವರ್ಷ ಯಾವುದು ? ೩.    ಅನಂತ ಪದ್ಮನಾಭ ದೇವಾಲಯ ಯಾವ ರಾಜ್ಯದಲ್ಲಿದೆ ? ೪.    ಅಖಿಲ ಭಾರತ ವಾಖ್‌ಶ್ರವಣ ಸಂಸ್ಥೆ ಕರ್ನಾಟಕದಲ್ಲಿ ಎಲ್ಲಿದೆ ? ೫.    ಇತಿಹಾಸದ ಪಿತಾಮಹ ಯಾರು ? ೬.    ವಯಸ್ಕ ಮಾನವನ ಮೆದುಳು ಸುಮಾರು ಎಷ್ಟು ತೂಕವಾಗಿರುತ್ತದೆ ? ೭.    ಭಾರತ ದೇಶಿಯವಾಗಿ ನಿರ್ಮಿಸಿದ ಅತಿ ಉದ್ದನೆಯ ನೌಕೆ ಯಾವುದು ? … Read more

ಇಲ್ಲಿ ಎಲ್ಲವೂ ಬದಲಾಗುತ್ತದೆ: ನಟರಾಜು ಎಸ್. ಎಂ.

2006 ರ ಮೇ ತಿಂಗಳ 11ನೇ ದಿನ ಕೋಲ್ಕತ್ತಾದಲ್ಲಿ ವಿಧಾನ ಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿತ್ತು. ಅಂದು ನಾನು ಓದುತ್ತಿದ್ದ ನ್ಯೂಸ್ ಪೇಪರ್ ನ ಮುಖಪುಟದಲ್ಲಿ ನಗುತ್ತಿರುವ ಬುದ್ಧದೇವ್ ಭಟ್ಟಾಚಾರ್ಯರ ಮುಖವನ್ನು ಕಾರ್ಟೂನ್ ಮಾಡಿ ನೂರಾ ಎಪ್ಪತ್ತೈದು ಬಾರಿ ಪ್ರಿಂಟ್ ಮಾಡಿದ್ದರು. 175 ಅಂದು ಸಿಪಿಎಂ ಪಕ್ಷ ಪಡೆದಿದ್ದ ಒಟ್ಟು ಸೀಟುಗಳ ಸಂಖ್ಯೆಯಾಗಿತ್ತು. ಸಿಪಿಎಂನ ವಿರೋಧಪಕ್ಷವಾದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ್ ಕಾಂಗ್ರೆಸ್ ಕೇವಲ 30 ಸೀಟುಗಳನ್ನು ಪಡೆದಿತ್ತು. ಒಟ್ಟು 294 ಸೀಟುಗಳಿರುವ ಬೆಂಗಾಳದ ವಿಧಾನ ಸಭೆಯಲ್ಲಿ … Read more

ಆಡಿಯೋ ಸಹಿತ ಪಂಜು ಕಾವ್ಯಧಾರೆ

ಕನ್ನಡ ನಾಡಿನಲಿ  ಶ್ರೀಗಂಧದ ನಾಡಿನಲಿ ಸಹ್ಯಾದ್ರಿಯ ಗೂಡಿನಲಿ ಕಾವೇರಿಯ ಮಡಿಲಿನಲಿ ನನ್ನದೊಂದು ಪುಟ್ಟ ಗುಡಿಸಲು ಕನ್ನಡ ನುಡಿಯು ಮಿನುಗುವುದಲ್ಲಿ ಹಸಿರು ತೋರಣದೊಲು ಹಸಿರನುಟ್ಟ ಭುವನಗಿರಿ ಮುಡಿಯಲಿಟ್ಟು ನವಿಲುಗರಿ ಹಕ್ಕಿಗೊರಲ ತಬ್ಬಿ ಹಿಡಿದು ಚಂದಿರನ ಗಿಲಕಿ ಬಡಿದು ನನ್ನ ಹ್ರುದಯ ಕನ್ನಡವನೆ ಮಿಡಿಯುವುದು ನನ್ನ ಮಡದಿ ಮತ್ಸ್ಯಕನ್ಯೆ ಬಳೆಯ ಸದ್ದು ಗೆಜ್ಜೆನಾದ ಅಡಿಗಡಿಗೂ ಕನ್ನಡ ಸುತನ ಪ್ರವರ ತೊದಲು ನುಡಿಯಲಿ ಸವಿಜೇನು ಕನ್ನಡ ನಮ್ಮ ಮನೆಯ ಅಂಗಳದಿ ಪ್ರಜ್ವಲಿಪುದು ಕನ್ನಡ ರಾಷ್ಟ್ರನುಡಿ ರಾಜನುಡಿ ಯಾವುದಾದರೇನು ದಾಯಾದಿಗಳ ನುಡಿಯ ನಡೆಯು … Read more

ಮಂಜಿನ ಮುಸುಕಲ್ಲೂ ಮಾಸದ ಸ್ನೇಹ ಪಯಣ: ಭಾಗ್ಯ ಭಟ್

ಎಲ್ಲಿ ನೋಡಿದರಲ್ಲಿ ಹಸಿರ ಸೊಬಗು… ದಾರಿಯುದ್ದಕೂ ಮನವ ಮುದ್ದಿಸೋ ತಂಪು ಗಾಳಿಯ ಇಂಪು… ತಿಳಿ ನೀಲ ಆಗಸದಿ ಮೆರವಣಿಗೆ ಹೊರಡೋ ಮೋಡಗಳು… ಚಂದದ ಊರಿದು, ಪಕ್ಕಾ ಮಲೆನಾಡ ತಂಪ ಉಣಬಡಿಸೋ ಕಾಫೀ ನಾಡು. ಅದೆಷ್ಟೋ ಚಂದದ ಬೆಟ್ಟ ಗುಡ್ಡಗಳಿಂದ ಕಣ್ಮನ ತಣಿಸುತಿರೋ ಚಿಕ್ಕಮಗಳೂರ ಮುಳ್ಳಯ್ಯನಗಿರಿ, ಬಾಬಾಬುಡನ್ ಗಿರಿ, ಕಲ್ಲತಗಿರಿಗಳ ಸುತ್ತೋ, ನಿಸರ್ಗದ ಅಚ್ಚರಿಗಳ ಸಮೀಕರಿಸೋ ಸಣ್ಣದೊಂದು ಭಾಗ್ಯ ಸಿಕ್ಕಿದ್ದು ಇಲ್ಲಿಗೆ ಬಂದು ವರ್ಷವೊಂದಾದ ಮೇಲೆ.. ಇಲ್ಲಿ ದಕ್ಕಿದ್ದ, ಪಡೆದುಕೊಂಡ ಚಂದದ ಅನುಭವಗಳ ಪದಗಳಲಿ ಹಿಡಿಯೋದು ಕಷ್ಟವೇನೋ…. ಈ … Read more

ನಿಯತ್ತಿನ ಘರ್ಷಣೆ: ಪಾರ್ಥಸಾರಥಿ ಎನ್.

ಗುರು ಕೈಗೆ ಕಟ್ಟಿದ್ದ ಗಡಿಯಾರ ನೋಡಿಕೊಂಡ. ಸಂಜೆ ಆರುಘಂಟೆ ದಾಟುತ್ತಿತ್ತು. ಅವನ ಮನಸ್ಸು ಅಯಾಚಿತವಾಗಿ ನೆನೆಯಿತು. ಬೆಂಗಳೂರಿನಲ್ಲಿ ಈಗ ಸಮಯ ರಾತ್ರಿ ಹತ್ತುವರೆ ಅಗಿರುತ್ತದೆ.  ಮನೆಯಲ್ಲಿ ಅಪ್ಪ ಅಮ್ಮ ಮಲಗಿರುತ್ತಾರೆ,ತಂಗಿ ಓದುತ್ತ ಕುಳಿತಿರಬಹುದು. ಆದಿನದ ಮಟ್ಟಿಗೆ ಕೆಲಸವೇನು ಬಾಕಿ ಇರಲಿಲ್ಲ. ಸರಿ ಹೊರಡೋಣವೆಂದು ಎದ್ದು ನಿಂತ. ಅವನ ಸ್ನೇಹಿತ ಶ್ರೀನಾಥ ಇವನತ್ತ ನೋಡಿದ, ಏನು ಹೊರಟೆ ಅನ್ನುವಂತೆ. ಇಬ್ಬರೂ ಸೇರಿ ದೂರದ ಆ ನಾಡಿನಲ್ಲಿ ಮನೆ ಮಾಡಿದ್ದರು.  "ನಾನು ಹೊರಟಿರುತ್ತೇನೆ"  ಗುರು ನುಡಿದ,  ಶ್ರೀನಾಥನತ್ತ ನೋಡುತ್ತ.  ಶ್ರೀನಾಥ … Read more

ಹಂಗುಗಳಾಚೆಯ ’ಪಾಪಿ’ ಪದ್ಯಗಳು: ಜ್ಞಾನೇಂದ್ರ ಕುಮಾರ್

ಯಾವ ವಿಮರ್ಶಕನ ಪುತ್ಥಳಿಯನ್ನೂ  ಯಾವ ಊರ ಸರ್ಕಲಿನಲ್ಲೂ ಇಡುವುದಿಲ್ಲ – ಅನ್ನುತ್ತಲೇ ವಿಮರ್ಶೆಯ ಹಂಗಿನಾಚೆ ಬರೆಯುತ್ತಿರುವವರು ತಾವು ಎಂದು ಘೋಷಿಸಿಕೊಳ್ಳುವ ಕವಿ ಚಕ್ರವರ್ತಿ ಚಂದ್ರಚೂಡ್, ಪದ್ಯ ಹೆಣಿಗೆಯ ಖಚಿತ ಚೌಕಟ್ಟುಗಳಾಚೆಯೇ ನಿಂತು ಬರೆಯುತ್ತಿರುವವರು. ಇತ್ತೀಚೆಗೆ ಬಿಡುಗಡೆಯಾದ ಚಕ್ರವರ್ತಿಯವರ "ಖಾಲಿ ಶಿಲುಬೆ (ಪಾಪಿಯೊಬ್ಬನ ಪ್ರೇಮ ಪದ್ಯಗಳು)" ಕವನ ಸಂಕಲನ ಇದಕ್ಕೊಂದು ನಿದರ್ಶನ.  * ಇಲ್ಲಿನ ಪದ್ಯಗಳನ್ನು ಓದುವಾಗ ಸಾವಿನ ಮನೆಯ ಚಟುವಟಿಕೆಯಂತೆ ವಿಲಕ್ಷಣ ಅನುಭವ ಉಂಟಾಗುತ್ತದೆ. ಅದೊಂದು ಬಗೆಯ ಸತ್ಯದ ಮುಖಾಮುಖಿ, ನಿರಾಕರಿಸುತ್ತಲೇ ಒಪ್ಪಿಕೊಳ್ಳುವ ಬಗೆ ಹಾಗೂ ನಮಗೂ … Read more

ಹಾಡಿನಲ್ಲಿ ಭಾವಗಳ ಸಂಗಮವಿದೆ: ಪದ್ಮಾ ಭಟ್.

ಹುದುಗಲಾರದ ದುಃಖ ಹುದುಗಿರಿಸಿ ನಗೆಯಲ್ಲಿ ನಸು ನಗುತ ಬಂದೆ ಇದಿರೋ.. ಇನಿತು ತಿಳಿಯದ ಮೂಢನೆಂದು ಬಗೆದೆಯೋ ನನ್ನ. ಹೀಗೆ ಕಿವಿ ಮೇಲೆ ಬೀಳುತ್ತಿರುವ ಹಾಡನ್ನು ಕೇಳುತ್ತಾ ..ನಮಗೆ ನಾಳೆ ಪರೀಕ್ಷೆ ಎನ್ನೋದನ್ನೇ ಮರೆತು ಬಿಟ್ಟಿದ್ದೆ..ಪುಸ್ತಕವನ್ನು ಮಡಚಿ ಬದಿಗಿಟ್ಟು ಕೇಳುತ್ತ ಕೂರುವುದೊಂದೇ ಕೆಲಸ..ಈ ಹಾಡುಗಳು ಎಂತಹ ವಿಚಿತ್ರ ಅಲ್ವಾ? ಮನಸಿನ ಒಂದಷ್ಟು ದುಃಖವನ್ನು ನೋವನ್ನು ಮರೆಯಿಸುವ ಶಕ್ತಿಯಿದೆ. ಭಾವಗೀತೆಗಳನ್ನು ಕೇಳುವಾಗ ನನ್ನ ಬಗ್ಗೆಯೇ ಬರೆದಿದ್ದಾರೆಯೋ ಎನ್ನಸುವಷ್ಟು ಹತ್ತಿರದಿಂದ ಅನುಭವಿಸಿದ್ದುಂಟು.. ಅದೇ ಆ ಒಂಟಿ ರೂಂನಲ್ಲಿ ಹಾಡಿನ ನೆನಪುಗಳ ಕಲರವಗಳಿವೆ.. … Read more

ಕಾಳಮಂಜಿ ಗುಡ್ಡ, ಉರಿಸೆಖೆ ಮತ್ತು ಆಹಾರಭದ್ರತೆ: ಅಖಿಲೇಶ್ ಚಿಪ್ಪಳಿ

ಅರೆಮಲೆನಾಡಿನ ಸ್ನೇಹಿತರೊಬ್ಬರು ಮಲೆನಾಡಿಗೆ ಬಂದಿದ್ದರು. ಸಾಗರದಂತಹ ಮಲೆನಾಡಿನಲ್ಲಿ ಈ ಪರಿ ಸೆಖೆಯಿದೆ ಎಂದರೆ ನಂಬಲಿಕ್ಕೆ ಸಾಧ್ಯವಿಲ್ಲ. ಇದಕ್ಕೇನು ಕಾರಣ ಎಂದು ಕೇಳಿದರು. ಇದನ್ನು ಸ್ವಲ್ಪ ಸುತ್ತಿ-ಬಳಸಿ ಹೇಳುವುದು ಒಳ್ಳೆಯದು ಎಂದು ತೋರುತ್ತದೆಯೆಂಬ ಕಾರಣಕ್ಕೆ ಉದಾಹರಣೆಯನ್ನು ನೀಡುವುದು ಅನಿವಾರ್ಯವಾಯಿತು.  ೧೯೭೪-೭೫ರಷ್ಟು ಹಿಂದಿನ ಘಟನೆಯಿದು. ಲಿಂಗನಮಕ್ಕಿಯಿಂದ ಎ.ಬಿ.ಸೆಟ್‌ವರೆಗೆ ಹಾಗೆಯೇ ಎ.ಬಿ.ಸೆಟ್‌ನಿಂದ ಲಿಂಗನಮಕ್ಕಿಯವರೆಗೆ ನೀರು ಸಾಗಣೆಗಾಗಿ ಒಂದು ಚಾನೆಲ್ ನಿರ್ಮಿಸುವ ಯೋಜನೆ ತಯಾರಾಯಿತು.  ಈ ಯೋಜನೆಗೆ ಸೆಂಟ್ರಲ್ ಆಡಿಟ್ ಚಾನೆಲ್ ಎಂದು ಹೆಸರಿಡಲಾಯಿತು. ಈಗಿನ ಹಾಗೆ ತಂತ್ರಜ್ಞಾನ ಮುಂದುವರೆದು ಆಧುನಿಕ ರಾಕ್ಷಸ … Read more

ಈರಬದ್ದೇವ್ರು ಮತ್ತು ಇದ್ದೂ ಇರಬಾರದಂಥ ಭಕ್ತಿ: ಅಮರ್ ದೀಪ್ ಪಿ.ಎಸ್.

"ಭಾವದಲೊಬ್ಬ ದೇವನ ಮಾಡಿ….  ಮನದಲ್ಲೊಂದು ಭಕ್ತಿಯ ಮಾಡಿ  ಕಾಯದ ಕೈಯಲಿ ಕಾರ್ಯವೂ ಉಂಟೆ? ವಾಯಕೆ ಬಳಲುವರು ನೋಡ …..  ಎತ್ತನೇರಿ ಎತ್ತನರಸುವರು  ಎತ್ತ ಹೋದರಯ್ಯ ..ಗ಼ುಹೇಶ್ವರ….. "  ಅಲ್ಲಮ ಪ್ರಭು ಅವರ ವಚನ ಸಾಹಿತ್ಯವನ್ನು ನನ್ನ ಮೆಚ್ಚಿನ  ಹುಡುಗನೊಬ್ಬ  ಹಾಡುವುದನ್ನು ಆಗಾಗ  ಕೇಳುತ್ತಲೇ ಇದ್ದೆ.. ಅದು ಈ ಬರಹಕ್ಕೆ ಎಷ್ಟರ ಮಟ್ಟಿಗೆ ಹೊಂದುತ್ತದೋ ಇಲ್ಲವೋ ಗೊತ್ತಿಲ್ಲ.. ಆದರೆ ಈ  ಬರಹ ಬರೆಯುವ ಹೊತ್ತಿಗೆ ಈ ಹಾಡು ನನ್ನನ್ನ್ನು ಬಹುವಾಗಿ ಕಾಡಿದ್ದಂತೂ ಸತ್ಯ.   ಹೊಸಪೇಟೆ ದಾಟಿ ಮರಿಯಮ್ಮನಹಳ್ಳಿ … Read more

ಹಾದಿ ದೂರವಿದೆ ಇನ್ನೂ, ಭವ್ಯ ಭಾರತಕ್ಕೆ: ಪ್ರಶಸ್ತಿ ಪಿ.

ಮುಂದುವರೆಯೋ ಮುನ್ನವೇ ಹೇಳಿಬಿಡುತ್ತೇನೆ. ಇದು ಬರಹಕ್ಕೆ ಕೇಸರಿ, ಹಸಿರು ಅಥವಾ ಇನ್ಯಾವುದೇ ಬಣ್ಣ ಬಳಿಯೋ ಪ್ರಯತ್ನವಲ್ಲ. ಕಮಲ, ಹಸ್ತ, ಆನೆ, ಕತ್ತಿ, ಪೊರಕೆ ಅಥವಾ ಇನ್ಯಾವುದೇ ಚಿನ್ನೆ ತೊಡಿಸೋ ಪ್ರಯತ್ನವಲ್ಲ.  ಧರ್ಮ, ರಾಜ್ಯ, ಪಕ್ಷಗಳೆಂಬ ಬೇಧಗಳ ಹೊರಬಂದು ವಾಸ್ತವದ ಅನಿವಾರ್ಯತೆಗಳೇನಿದೆಯೆಂಬುದನ್ನು ಬಿಂಬಿಸೋ ಅಗತ್ಯವಷ್ಟೇ .ಮೂವತ್ತು ವರ್ಷಗಳ ಕಿಚಡಿ ಸರ್ಕಾರಗಳ ನಂತರ ಕೊನೆಗೂ ಭಾರತಕ್ಕೊಂದು ಸುಭದ್ರ ಸರ್ಕಾರ ಸಿಕ್ಕಿದೆ. ಕಾಂಗ್ರೆಸ್ಸಾಗಲಿ, ಭಾಜಪಾವೇ ಆಗಲಿ. ಆದ್ರೆ  ಸದಾ ಸ್ಟ್ರೈಕೇ ಮಾಡೋ ಕಮ್ಯೂನಿಸ್ಟು, ಮಾರ್ಕಿಸ್ಟು, ಲೆಫ್ಟಿಸ್ಟುಗಳ ಕಾಲು ಹಿಡಿಯೋ ಕರ್ಮದ ಚಿತ್ರಾನ್ನ … Read more

ಸಾಮಾನ್ಯ ಜ್ಞಾನ (ವಾರ 28): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಸೌದಿ ಅರೇಬಿಯಾದಲ್ಲಿ ತನ್ನ ಶಾಖೆ ಆರಂಭಿಸಿದ ಮೊದಲ ಭಾರತೀಯ ಬ್ಯಾಂಕ್ ಯಾವುದು? ೨.    ಕನ್ನಡ ವಡ್ಸ್‌ವರ್ತ್‌ರೆಂದು ಖ್ಯಾತರಾದವರು ಯಾರು? ೩.    ಸ್ವಂತ ವಿಮಾನ ಖರೀದಿಸಿದ ದೇಶದ ಮೊದಲ ಆಭರಣ ಕಂಪೆನಿ ಯಾವುದು? ೪.    ಜಗತ್ತಿನಲ್ಲಿ ಅತ್ಯಂತ ಆಳವಾದ ಸರೋವರ ಯಾವುದು? ೫.    ಕೊಲಂಬಸ್ ಪ್ರಪಂಚ ಯಾತ್ರೆಗೆ ಹೊರಟ ಹಡಗಿನ ಹೆಸರೇನು? ೬.    ಮುಖ್ಯವಾಗಿ ಯಾವುದರ ಕೊರತೆಯಿಂದ ರಕ್ತಹೀನತೆ ಉಂಟಾಗುತ್ತದೆ? ೭.    ಭಾರತ ಸರ್ಕಾರವು ರೂರಲ್ ಎಲ್‌ಕ್ಟ್ರಿಫಿಕೇಶನ್ ಕಾರ್ಪೋರೇಷನ್‌ನ್ನು (ಖಇಅ) ಸ್ಥಾಪಿಸಲಾದ ವರ್ಷ ಯಾವುದು? ೮.   … Read more