ಪೋಸ್ಟ್ ಮ್ಯಾನ್ ಗಂಗಣ್ಣ (ಭಾಗ 10)”: ಎಂ.ಜವರಾಜ್

-೧೦-ನಮ್ಮ ಮುಳ್ಳೂರು ಚಿಕ್ಕಿಯ ತಂಗಿ ಮಗಳು ಮೂರು ದಿನದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಇವತ್ತೊ ನಾಳೆಯೊ ನಾಳಿದ್ದೊ ಆಗುವ ಹೆರಿಗೆ ನೋವು. ಡಾಕ್ಟರು ಯಾವುದನ್ನು ಸರಿಯಾಗಿ ಹೇಳದೆ ನಾಳೆ ಬನ್ನಿ ರಾತ್ರಿ ಬನ್ನಿ ಬೆಳಗ್ಗೆ ಬನ್ನಿ ಇದು ಹೆರಿಗೆ ನೋವಲ್ಲ ಅಂತ ಏನೇನೊ ಸಮಜಾಯಿಸಿ ನೀಡುತ್ತಿದ್ದರು. ಮುಳ್ಳೂರು ಚಿಕ್ಕಿಗೆ ತಂಗಿ ಮಗಳ ಕಷ್ಟ ನೋಡಲಾರದೆ ಬಿಕ್ಕಿ ಬಿಕ್ಕಿ ಅಳುತ್ತ ನನ್ನನ್ನು ಕರೆದು ಬೆಂಗಳೂರಿನ ತಂಗಿಗು ತಂಗಿ ಗಂಡನಿಗೂ ಅವರ ಮೂವರು ಗಂಡು ಮಕ್ಳಳಿಗೂ, ಮುಳ್ಳೂರಿನ ತನ್ನವ್ವಳಿಗೂ “ಎರ‌್ಗ … Read more

ಅಣ್ಣ ಮತ್ತು ಪರಿವರ್ತನೆ: ಬಿ.ಟಿ.ನಾಯಕ

ಅದೊಂದು ದಿನ ‘ಅಣ್ಣ’ರಂಗಣ್ಣನ ದರಬಾರು ನಡೆದಿತ್ತು. ಅಲ್ಲಿ ಸುಮಾರು ಹತ್ತರಿಂದ ಹದಿನೈದು ಆತನ ಚೇಲಾಗಳಿದ್ದರು. ಯಾವುದೋ ಗಹನವಾದ ವಿಷಯದ ಬಗ್ಗೆ ಚರ್ಚೆ ನಡೆದಿತ್ತು. ಅವರ ಸಂಭಾಷಣೆ ಹೀಗಿತ್ತು;‘ಅಣ್ಣಾ …ನೀನು ಏನೋ ಹೇಳು, ಆ ಧೀರನ ಪಾಳ್ಯದ ಗೋವಿಂದಣ್ಣ ನಮ್ಮ ಏರಿಯಾಕ್ಕೆ ಬಂದು ಗಲಾಟೆ ಮಾಡಿ, ಸೀನನನ್ನ ಎತ್ತಾಕ್ಕೊಂಡು ಹೋಗಬಾರದಿತ್ತು. ಆತ ಹಾಗೆ ಮಾಡಿ ಅದರ ಕಳಂಕ ನಮ್ಮ ಮೇಲೆ ಹೊರಿಸುವುದಲ್ಲದೆ, ಲಾಭ ಕೂಡಾ ಮಾಡಿ ಕೊಂಡ’ ಎಂದ ರೇವ್ಯ.‘ಏಯ್ ಸುಮ್ಕಿರಲೇ, ಅವನು ಹಾಗ ಮಾಡಿದಾ ಅಂತ ಏನೋ … Read more

ಸಂಚಿ ಹೊನ್ನಮ್ಮನ ಹದಿಬದೆಯ ಧರ್ಮ – ಒಂದು ವಿವೇಚನೆ: ಸಂತೋಷ್ ಟಿ

ಮೈಸೂರು ರಾಜ ಸಂಸ್ಥಾನದಲ್ಲಿ ಎಲೆ ಅಡಿಕೆ ನೀಡುವ ಸಂಚಿಯ ಕಾಯಕದ ಸಖಿಯಾಗಿ ವೃತ್ತಿಧರ್ಮದಲ್ಲಿದ್ದ ಹೊನ್ನಮ್ಮನ ಕೃತಿ ‘ಹದಿಬದೆಯ ಧರ್ಮ’ವಾಗಿದೆ. ಚಿಕ್ಕದೇವರಾಜ ಒಡೆಯರ್ ಕಾಲದ ಸರಿಸುಮಾರು ಕ್ರಿ.ಶ. ೧೬೭೨-೧೭೦೪ ನೇ ಶತಮಾನದ ಕಾಲಘಟ್ಟದಲ್ಲಿ ಸರಸ ಸಾಹಿತ್ಯದ ವರದೇವತೆ ಎಂಬ ಅಗ್ಗಳಿಕೆಗೆ ಪಾತ್ರಳಾದವಳು ಹೊನ್ನಮ್ಮ. ದೇವರಾಜಮ್ಮಣ್ಣಿಯ ರಾಣಿ ವಾಸದ ಸಖಿಯಾಗಿ ಎಳಂದೂರಿನಿಂದ ಬಂದು ಸೇರಿದ್ದ ಹೊನ್ನಮ್ಮನು, ಅರಮನೆಯ ಪರಿವಾರಕ್ಕೆ ತಾಂಬೂಲ ಅಥವಾ ಎಲೆಅಡಿಕೆ ನೀಡುವ ಕಾಯಕ ಮಾಡುತ್ತಿದ್ದಳು. ತನ್ನ ಬುದ್ಧಿ ಶಕ್ತಿಯಿಂದ ಅರಮನೆಯ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಾಹಿತ್ಯ ಪರಿಸರದಿಂದ … Read more

ಮಕ್ಕಳ ಹಕ್ಕುಗಳು ಮತ್ತು ಧರ್ಮ: ನಾಗಸಿಂಹ ಜಿ ರಾವ್

ಈ ದಿನಗಳಲ್ಲಿ ನನ್ನನ್ನು ಹಲವಾರು ಜನರು ಕೇಳುತ್ತಿರುವುದು ಒಂದೇ ಪ್ರಶ್ನೆ , ಈಗ ರಾಜ್ಯದಲ್ಲಿ ಆಗುತ್ತಿರುವ ಗಲಭೆಯ ಹಿನ್ನಲೆಯಲ್ಲಿ ಮಕ್ಕಳ ಹಕ್ಕುಗಳು ಏನು ಹೇಳುತ್ತದೆ ? ಧರ್ಮದ ಬಗ್ಗೆ ಮಕ್ಕಳ ಹಕ್ಕುಗಳು ಇವೆಯೇ ? ವಿಶ್ವದ ಪ್ರತಿಯೊಂದು ಧರ್ಮಾದಲ್ಲೂ ಮಕ್ಕಳನ್ನು ಹಿರಿಯರ ಅಸ್ಥಿ ಎಂದೇ ಪರಿಗಣಿಸಲ್ಪಟ್ಟಿರುವುದು ಕಂಡು ಬರುತ್ತದೆ , ಪುರಾಣ ಪುಣ್ಯ ಕಥೆಗಳನ್ನು ವಿಮರ್ಶಿಸಿದರೆ ಕಂಡು ಬರುವುದು ಮಕ್ಕಳ ಹಕ್ಕುಗಳ ಉಲ್ಲಂಘನೆಯೇ ! ವಿಶ್ವ ಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯ ಪ್ರಕಾರ ಮಕ್ಕಳಿಗೆ ಜೀವಿಸುವ ಹಕ್ಕುಗಳು … Read more

ಕತೆ ಮತ್ತು ಆತ್ಮಕತೆಗಳ ನಡುವಿನ ನಯವಾದ ನೇಯ್ಗೆ: ಡಾ. ಹೆಚ್ ಎನ್ ಮಂಜುರಾಜ್

ಕೃತಿ: ಕಿಟಕಿಗಳಾಚೆ (ಪ್ರಬಂಧ ಸಂಕಲನ)ಲೇಖಕರು: ರವೀಂದ್ರನಾಯಕ್ ಸಣ್ಣಕ್ಕಿಬೆಟ್ಟುಪ್ರಕಾಶಕರು: ಸಮನ್ವಿತ, ಬನ್ನೇರುಘಟ್ಟ, ಬೆಂಗಳೂರುಮೊದಲ ಮುದ್ರಣ: ೨೦೨೩, ಕೃತಿ ಬಿಡುಗಡೆ: ೧೩-೦೭-೨೦೨೪ಪುಟಗಳು: ೧೩೨+೪, ಬೆಲೆ: ₹ ೧೫೦ ಕಳೆದ ಒಂದು ತಿಂಗಳ ಹಿಂದೆಯಷ್ಟೇ ಲೋಕಾರ್ಪಣೆಗೊಂಡ ‘ಕಿಟಕಿಗಳಾಚೆ’ ಕೃತಿಯಲ್ಲಿ ಒಟ್ಟು ಇಪ್ಪತ್ತೆಂಟು ಪ್ರಬಂಧಗಳಿವೆ. ಈಗಾಗಲೇ ಮೂರು ಕವನ ಸಂಕಲನಗಳನ್ನು ಪ್ರಕಟಿಸಿರುವ ಕವೀಂದ್ರ ರವೀಂದ್ರರು ತಮ್ಮ ಕವನಗೀತಗಳಿಂದಾಗಿ ತಮ್ಮದೇ ಯುಟ್ಯೂಬ್ ಚಾನೆಲ್ ಮೂಲಕ ನಾಡಿನ ಅಸಂಖ್ಯಾತ ಸಹೃದಯರನ್ನು ಮುಟ್ಟಿದ್ದಾರೆ. ಹೆಸರಾಂತ ಗಾಯಕರಾದ ಶ್ರೀ ರಾಘವೇಂದ್ರ ಬೀಜಾಡಿ, ಶ್ರೀ ಗಣೇಶ ದೇಸಾಯಿಯವರ ಸಂಗೀತ ತಂಡವು … Read more

ಮಾತನಾಡುವ ಮಂಚ: ಡಾ. ಮಲರ್ ವಿಳಿ ಕೆ

ತಮಿಳು ಮೂಲ : ಪುದುಮೈಪಿತ್ತನ್ರಚಿಸಿದ ಕಾಲ: ೧೯೩೪ಅನುವಾದ : ಡಾ. ಮಲರ್ ವಿಳಿ ಕೆ, ಕನ್ನಡ ಪ್ರಾಧ್ಯಾಪಕರು,, ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ. ಸರ್ಕಾರಿ ಆಸ್ಪತ್ರೆಯಲ್ಲಿ ಪೂರ್ವದ ಕಡೆಯ ವಾರ್ಡ್ ನ ಹಾಸಿಗೆಯಲ್ಲಿ, ನನ್ನ ರೋಗಕ್ಕೆ ಏನೋ ಒಂದು ಉದ್ದನೆಯ ಲ್ಯಾಟಿನ್ ಹೆಸರನ್ನು ಹೇಳಿ, ನನ್ನನ್ನು ಕರೆದುಕೊಂಡು ಹೋಗಿ ಮಲಗಿಸಿದರು. ನನ್ನ ಇಕ್ಕೆಲಗಳಲ್ಲಿಯೂ ನನ್ನಂತೆ ಹಲವು ರೋಗಿಗಳು ಗೋಳಿಡುತ್ತಾ, ಹೂಂಗುಡುತ್ತಾ ನರಕದ ಉದಾಹರಣೆಯಂತೆ.ಒಂದೊಂದು ಮಂಚದ ಪಕ್ಕದಲ್ಲಿಯೂ ಔಷಧಿಯನ್ನು ಗಂಜಿಯನ್ನು ಇಡಲು ಒಂದು ಚಿಕ್ಕ ಆಲಮಾರು, ಮಂಚದ ಕಂಬಿಯಲ್ಲಿ ಡಾಕ್ಟರ ಗೆಲುವು … Read more

ಸಮಾಜಮುಖಿ ಯುವ ಲೇಖನ ಸ್ಪರ್ಧೆ-2024

ಕನ್ನಡದ ಹೊಸ ಪೀಳಿಗೆಯ ಆಲೋಚನೆ ಮತ್ತು ಬರವಣಿಗೆಯನ್ನು ಉದ್ದೀಪಿಸುವ ಉದ್ದೇಶದಿಂದ ಬೆಂಗಳೂರಿನ ಸಮಾಜಮುಖಿ ಪ್ರಕಾಶನ 16 ರಿಂದ 32 ವಯಸ್ಸಿನ ಯುವಕ-ಯುವತಿಯರಿಗಾಗಿ ‘ಯುವ ಲೇಖನ ಸ್ಪರ್ಧೆ’ ಏರ್ಪಡಿಸಿದೆ. ಆಯ್ಕೆಯಾದ ಐದು ಲೇಖನಗಳಿಗೆ ತಲಾ ರೂ.5,000 ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.ಲೇಖನದ ವಿಷಯ: ಪ್ರಾಥಮಿಕ ಶಿಕ್ಷಣ ಮಾತೃಭಾಷೆಯಲ್ಲಿಯೇ ಆಗಬೇಕು ಎಂದು ಹೇಳುವಲ್ಲಿನ ವೈಚಾರಿಕ ಮತ್ತು ಜಾಗತಿಕ ತಳಹದಿಯೇನು..? ಲೇಖನ 1,600 ರಿಂದ 2,000 ಪದಗಳ ಮಿತಿಯಲ್ಲಿರಬೇಕು. ಲೇಖನದ ಜೊತೆಗೆ ಹುಟ್ಟಿದ ದಿನಾಂಕದ ಯಾವುದಾದರೂ ದಾಖಲೆಯ ಪ್ರತಿ, ಪೂರ್ಣ … Read more

ಓ ನನ್ನ ಚೇತನ ಆಗು ಅನಿಕೇತನ…:ಅಶ್ಫಾಕ್ ಪೀರಜಾದೆ

ಕೆಲ ವರ್ಷಗಳ ಹಿಂದಿನ ಮಾತು, ಹೆಸರಾಂತ ಲೇಖಕ ಅಬ್ಬಾಸ್ ಮೇಲಿನಮನಿಯವರು “ಲೋಕ-ದರ್ಶನ” ಸಾಪ್ತಾಹಿಕದಲ್ಲಿ ಬೆಳಕು ಕಂಡ ನನ್ನ ಕಥೆ “ಜನ್ನತ್” ಬಗ್ಗೆ ಪ್ರತಿಕ್ರಿಯಿಸಿ ಬೆನ್ನ ತಟ್ಟಿದ್ದರು. ಹಾಗೇ ನಾನು ಸಹ “ಪ್ರಜಾ-ವಾಣಿ”ಯಲ್ಲಿ ಪ್ರಕಟವಾದ ಅವರ ಕಥೆ “ಅಮಿನಾಳ ಹಝ್ ಯಾತ್ರೆ”ಯ ಬಗ್ಗೆ ಮಾತಾಡಿದ್ದೆ. ತನ್ನ ಗಂಡನ ಹಝ್ ಯಾತ್ರೆಯ ಕನಸು ಪರೋಪಕಾರದಲ್ಲಿ ಸಾಕಾರಗೊಳಿಸುವ ಒಂದು ಶೋಷಿತ ಹೆಣ್ಣಿನ ಕರಳು ಮಿಡಿಯುವ ಕಥೆ ತುಂಬಾ ಹೈದಯ ಸ್ರ‍್ಶಿಯಾಗಿ ಮೂಡಿ ಬಂದಿತ್ತು. ಆ ಕಥೆಯ ಬಗ್ಗೆ ಬರೆಯುವುದು ಈ ಲೇಖನದ … Read more

“ಪೋಸ್ಟ್ ಮ್ಯಾನ್ ಗಂಗಣ್ಣ (ಭಾಗ 9)”: ಎಂ.ಜವರಾಜ್

-೯-ದಿನಗಳೂ ಉರುಳುತ್ತ ವಾರಗಳೂ ಉರುಳುತ್ತ ತಿಂಗಳುಗಳೂ ಉರುಳುತ್ತ ಹಂಗೆ ವರ್ಷಗಳೂ ಉರುಳಿದವು. ಈಗ ಊರು ಬದಲಾಗಿತ್ತು. ಹಿಂಗೆ ಬದಲಾಗ್ತ ಇದ್ದದ್ದ ನಾನೂ ನೋಡ್ತಾ ಬೆಳಿತಾ ಎಸೆಸೆಲ್ಸಿಯಲ್ಲೇ ಐದಾರು ವರ್ಷ ಏಗಿ ಕೊನೆಗೂ ಅದಾಗಿ ಪಿಯುಸಿಗೂ ಸೇರಿದ್ದಾಯ್ತು. ನಾನೋ ಕಾಲೇಜು ಹ್ಯಾಂಗೋವರಲ್ಲಿ ಎಲ್ಲರು ನೋಡಲೆಂದು ಇರೊ ಹಳೇ ಬಟ್ಟೆನೆ ಒಗೆದು ಐರನ್ ಉಜ್ಜಿ ಮನೆಯೊಳಗಿನ ತಂತಿ ಮೇಲೆ ಬಟ್ಟೆ ಅಂಗಡಿಯಲ್ಲಿ ಜೋಡಿಸಿಟ್ಟಂಗೆ ಮಡಚಿ ಇಟ್ಟುಕೊಂಡು ದಿನಾ ಒಂದೊಂದು ಸೆಲೆಕ್ಟ್ ಮಾಡಿಟ್ಟು ಇನ್ಸರ್ಟ್ ಮಾಡಿಕೊಂಡು ಪೌಡರ್ ಸ್ನೊ ಹಾಕೊಂಡು ಸ್ಟೈಲಾಗಿ … Read more

ʼ ರೂಪಾಂತರ ʼ- ಹೊಸತರ ಹಂಬಲ: ಎಂ ನಾಗರಾಜ ಶೆಟ್ಟಿ

ಸಿನಿಮಾ ಮುಗಿದು ತೆರೆಯ ಮೇಲೆ ಕ್ರೆಡಿಟ್ಸ್‌ ಬರತೊಡಗುತ್ತದೆ. ಆದರೆ ಪ್ರೇಕ್ಷಕರು ಸೀಟು ಬಿಟ್ಟು ಕದಲುವುದಿಲ್ಲ. ಮಾತಿಲ್ಲದೆ, ಯಾವುದೋ ಗುಂಗಿಗೊಳಗಾದವರಂತೆ ಕೂತಿದ್ದು, ನಿಧಾನವಾಗಿ ಏಳುತ್ತಾರೆ. ಇದು ʼ ರೂಪಾಂತರ ʼ ಸಿನಿಮಾದ ಕುರಿತು ಬಹಳಷ್ಟನ್ನು ಹೇಳುತ್ತದೆ. ಒಂದು ರೀತಿಯಲ್ಲಿ ಪ್ರೇಕ್ಷಕನ್ನು ಆವರಿಸಿಕೊಂಡರೆ, ಇನ್ನೊಂದು ತರದಲ್ಲಿ ಗೊಂದಲʼ. ರೂಪಾಂತರ ʼ ಚಿತ್ರದ ವಿಶೇಷವಿರುವುದೇ ಇಲ್ಲಿ! ಮೊದಲ- ವಿಚಿತ್ರ, ಕರಾಳ, ವಿಕೃತ- ದೃಶ್ಯದಲ್ಲಿ ವಯಸ್ಸಾದ ವ್ಯಕ್ತಿಯೊಬ್ಬ ತನ್ನನ್ನು ತಾನು ಬಚಾವು ಮಾಡಿಕೊಳ್ಳಲು ಕತೆ ಹೇಳಲು ಶುರುವಿಟ್ಟುಕೊಳ್ಳುತ್ತಾನೆ. ಕತೆ ಚೆನ್ನಾಗಿಲ್ಲದ್ದರೆ ಸಾಯಿಸುತ್ತೇವೆ ಎನ್ನುವ … Read more

ವೃತ್ತ ಮೀರುವ ತವಕ – ‘ಬಾಬ್‌ ಮಾರ್ಲಿ ಫ್ರಂ ಕೋಡಿಹಳ್ಳಿ’: ಎಂ. ನಾಗರಾಜ ಶೆಟ್ಟಿ

ವೃತ್ತ ಮೀರುವ ತವಕ – ʼ ಬಾಬ್‌ ಮಾರ್ಲಿ ಫ್ರಂ ಕೋಡಿಹಳ್ಳಿ ಅಗ್ನಿ ಮಾಂಸದ ಕುಲುಮೆಯಲಿನನ್ನ ಕಾಯಿಸಿ ಬಣ್ಣವ ಮಾಡಿಮರಳಿ ನನ್ನ ರೂಪನೇ ಕಡೆವಏ ನನ್ನಾಳದ ಅಳುವೇನನ್ನ ಚಿತ್ರಕ್ಕೇಕೆ ಬೆನ್ನು ಬರೆವೆ? ಎನ್ಕೆ ಹನುಮಂತಯ್ಯನವರ ಕವಿತೆ ಕೇಳುವ ʼ ನನ್ನ ಚಿತ್ರಕ್ಕೇಕೆ ಬೆನ್ನು ಬರೆವೆ? ʼ ಪ್ರಶ್ನೆಯೇ ” ಬಾಬ್‌ ಮಾರ್ಲಿ ಫ್ರಂ ಕೋಡಿಹಳ್ಳಿ ʼ ನಾಟಕದ ಮೂರು ಪಾತ್ರಗಳ ಒಳಗುದಿ. ಚಂದ್ರಶೇಖರ್‌ ಮಾಡಿದ ಬಾರ್‌ ಸಿಂಗರ್‌ ಪಾತ್ರ ತನ್ನ ಹೆಸರನ್ನು ʼಬಾಬ್ ಮಾರ್ಲಿʼ ಎಂದು ಬದಲಾಯಿಸಿಕೊಂಡು … Read more

ಪ್ರಾರ್ಥನೆಯು ಧ್ಯಾನಸ್ಥಗೊಂಡ ಪರಿಮಳದ ಪರಿ: ಡಾ. ಹೆಚ್ ಎನ್ ಮಂಜುರಾಜ್

ವಿವಶತೆ ಮತ್ತು ಆರ್ತತೆಗಳ ನಡುವೆ ತೂಗುಯ್ಯಾಲೆಯಾಡುವ ಘನಮೌನ ಪ್ರಭುವೇ,ಇನ್ನಾದರೂ ಹೊರಗೆ ಕತ್ತಲಾಗಿಸುಈ ಬೆಳಕು ದಾರಿ ತೋರಿಸಿದ್ದು ಸಾಕುನಡೆದೂ ನಡೆದೂ ಸುಸ್ತಾಗಿದ್ದೇನೆ,ದಾರಿ ಗುರಿಗಳ ನಡುವೆ ಸಾಗುವಲ್ಲಿಸಾಧನೆಗಳ ಮಿಂಚುಳದ ಬೆಳಕಿನಲ್ಲಿದಾಹ ತೀರದ ಚಪ್ಪಾಳೆಯಲ್ಲಿನಾನಿಲ್ಲದಂತೆ ಬಂಧಿಯಾಗಿದ್ದೇನೆ ನಿದ್ದೆ ಮತ್ತು ಎಚ್ಚರದ ನಡುವಿನಸ್ಥಿತಿಯೊಂದು ಮೂರ್ತವಾದ ಹಾಗೆಬದುಕು ಎರಡು ಕೊನೆಗಳ ನಡುವೆಸಿಲುಕಿ ಇಲ್ಲವಾದ ಹಾಗೆ,ಇರುವ ಸ್ಥಿತಿಯಲ್ಲಿ ಕಣ್ಣು ಮುಚ್ಚಲಾಗದಷ್ಟುಬದುಕು ಬಟ್ಟ ಬಯಲಾಗಿದೆ ನಗುವ ಧರಿಸಿ ಸುಮ್ಮನೆ ಒಟ್ಟಿಗಿದ್ದದ್ದು ಸಾಕುಕೆಳಗಿಳಿಸಿ ಬಿಡು ಈ ಹೆಗಲ ಭಾರದೂರ ಮಾಡಿಸು; ಕಳಚಿಕೊಳ್ಳುತ್ತೇನೆಸಾಕಿನ್ನು ಒಣಮಾತಿನ ಉಪಚಾರ;ನನಗೆ ನಾನೊಂದಿಷ್ಟು ಹತ್ತಿರವಾಗುತ್ತೇನೆ ದೂರುತ್ತಿರಲಿ … Read more

“ಸಿಎಮ್ಮೆನ್ ಎಂಬ ರಂಗ ರೂವಾರಿ”: ಎಂ.ಜವರಾಜ್

ಕೃಷ್ಣಮೂರ್ತಿ ಹನೂರರು “ಚಾಮರಾಜನಗರ ಸೆರಗಿನ ಇಲ್ಲವೇ, ತಿರುಮಕೂಡಲು ನರಸೀಪುರ ಸುತ್ತಮುತ್ತಲಿನ ಬದುಕು ಬವಣೆ ಹೇಳುವ..” ಎಂದು ನನ್ನ ಮೊದಲ ಕಥಾ ಸಂಕಲನದ ಮುನ್ನುಡಿಯಲ್ಲಿ ಬರೆಯುತ್ತಾರೆ. ಇದು ಮೈಸೂರು ಚಾಮರಾಜನಗರ ಜಿಲ್ಲೆಗಳ ಅವಿನಾಭಾವ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುವ ಮನೋಸ್ಥಿತಿಯ ದ್ಯೂತಕದ ಬೆಸುಗೆಯಾಗಿದೆ. ಮೈಸೂರು ಜೆಲ್ಲೆಯ ಭಾಗವಾಗಿದ್ದ ಚಾಮರಾಜನಗರ, ರಾಜ್ಯದ ದಕ್ಷಿಣ ಗಡಿ ನೆಲವಾಗಿ ಆಳುವವರಿಂದ ನಿರ್ಲಕ್ಚ್ಯಕ್ಕೆ ಗುರಿಯಾಗಿ ಅಭಿವೃದ್ಧಿಹೀನವಾಗಿ ಅನಾಥವಾದಂತೆ ಕಾಣುತ್ತಿತ್ತು. ಇದನ್ನರಿತ ಸ್ಥಳೀಯ ಜನ ಸಮೂಹದಲ್ಲಿ ಪ್ರಭುತ್ವದ ವಿರುದ್ಧ ಅಸಹನೆಯ ಕಾರಣವಾಗಿ ಅದೊಂದು ಸಮಯ ಓಟ್ ಬ್ಯಾಂಕ್ … Read more

ಕಂಬಳ, ಕೃಷ್ಣಪ್ಪ ಮತ್ತು ಅಮರತ್ವ: ಡಾ. ವಿಶ್ವನಾಥ ಎನ್ ನೇರಳಕಟ್ಟೆ

ಅಲೇ ಬುಡಿಯೆರಿಯೇ* ಎಂಬ ಕೂಗು ಕೇಳಿದ ತಕ್ಷಣವೇ ಎಂಟು ಕಾಲುಗಳನ್ನು ಅಟ್ಟಿಸಿಕೊಂಡು ಹೋಗಲಾರಂಭಿಸಿದ ಎರಡು ಕಾಲುಗಳು, ಎತ್ತರೆತ್ತರಕ್ಕೆ ಚಿಮ್ಮುತ್ತಿದ್ದ ನೀರು, ಕಬ್ಬಿಣಕ್ಕೂ ಕಠಿಣತೆಯೊಡ್ಡುವಂತಿದ್ದ ಮೈ ಎಲ್ಲವನ್ನೂ ನೋಡುತ್ತಲೇ ಇದ್ದ ಕೃಷ್ಣಪ್ಪನ ಕಣ್ಣುಗಳು ಕೊನೆಯ ಒಂದು ಬಿಂದುವಿನಲ್ಲಿ ಹೋಗಿ ನೆಲೆಸಿದವು. ತಮ್ಮ ತಮ್ಮ ಕಡೆಯ ಕೋಣಗಳನ್ನು ಕೈಬೀಸಿ ಕರೆಯುತ್ತಿದ್ದವರು ಹಲವರು. ಮತ್ತೀಗ ಕಂಬಳದ ಕರೆಯಾಚೆಗೆ ದೃಷ್ಟಿ ಬದಲಿಸಿದ ಕೃಷ್ಣಪ್ಪನಿಗೆ ಮುಂದೆ ಓಡುತ್ತಿದ್ದ ಎರಡು ಕೋಣಗಳು ಮತ್ತು ಹಿಂದೆ ಅಟ್ಟಿಸುತ್ತಿರುವ ಓಟಗಾರ ಈ ಇಡೀ ದೃಶ್ಯ ಹೊಸದು ಭಾವವೊಂದನ್ನು ಮೂಡಿಸಿತು. … Read more

ವಿಶ್ವಪ್ರಗತಿ?????: ನಾಗಸಿಂಹ ಜಿ ರಾವ್

ಹಾಸನದ ಮುನಿಸಿಪಲ್ ಹೈಸ್ಕೂಲ್, ಒಂಬತ್ತನೇ ತರಗತಿ ಮಕ್ಕಳು ಗಲಾಟೆ ಮಾಡ್ತಾ ಕೂತಿದ್ರು, ಸಮಾಜ ವಿಜ್ಞಾನದ ಶಿಕ್ಷಕ ಮರಿಯಪ್ಪ ತರಗತಿ ಪ್ರವೇಶ ಮಾಡಿದ ತಕ್ಷಣ ತರಗತಿಯಲ್ಲಿ ನಿಶ್ಯಬ್ದ. ಎಲ್ಲಾ ವಿದ್ಯಾರ್ಥಿಗಳನ್ನು ದಿಟ್ಟಿಸಿ ನೋಡಿ ಹೇಳಿದ್ರು “ಶಿಕ್ಷಣ ಇಲಾಖೆ ಹಾಗೂ ಯುನಿಸಿಫ್ ಒಟ್ಟಿಗೆ ಬೆಂಗಳೂರಲ್ಲಿ ಒಂದು ಸಮಾಲೋಚನೆ ಮಾಡ್ತಿದಾರೆ, ವಿಶ್ವಪ್ರಗತಿ ಮತ್ತು ವಿಶ್ವಶಾಂತಿಯ ಬಗ್ಗೆ ವಸ್ತುಪ್ರದರ್ಶನ, ರಾಜ್ಯದ ಯಾವುದೇ ಶಾಲೆಯಿಂದ ಮಕ್ಕಳು ಭಾಗವಹಿಸಬಹುದು, ವಿಶ್ವಪ್ರಗತಿ ಅಥವಾ ವಿಶ್ವಶಾಂತಿಯ ಬಗ್ಗೆ ಒಂದು ಮಾಡಲ್ ಸಿದ್ಧ ಮಾಡಿ ಪ್ರದರ್ಶನ ಮಾಡಬೇಕು. ಉತ್ತಮವಾದ ಮಾಡಲ್ಗೆ … Read more

ಅರ್ಥಾ ಅಯಿತ್ರೀಯಪ್ಪಾ: ಬಿ.ಟಿ.ನಾಯಕ್

ಅದೊಂದು ದಿನ ಮಾನ್ಯ ಜಿಲ್ಲಾಧಿಕಾರಿಗಳು ಒಂದು ಹಳ್ಳಿಯನ್ನು ಸರಕಾರಿ ಕರ್ಯಕ್ರಮಕ್ಕೆ ಆಯ್ಕೆ ಮಾಡಿಕೊಂಡು ಅಲ್ಲಿಗೆ ಬಂದಿದ್ದರು. ಹೀಗಾಗಿ, ಅವರು ಹೆಮ್ಮೆಯಿಂದ ಮತ್ತು ಬಹಳೇ ಅನಂದದಿಂದ ಕರ್ಯಕ್ರಮ ಮಾಡಲು ತಮ್ಮ ಸಹೋದ್ಯೋಗಿಗಳಿಗೂ ಕೂಡ ತಿಳಿಸಿದ್ದರು. ಒಟ್ಟಿನಲ್ಲಿ ಆ ಹಳ್ಳಿಯ ಜನರ ಮನಸ್ಸು ಗೆದ್ದು ಹೋಗಲು ತವಕ ಪಡುತ್ತಿದ್ದರು. ಅಲ್ಲಿ ಕಾರ್ಯಕ್ರಮ ನಿಗದಿ ಪಡಿಸಿದಂತೆ ಮತ್ತು ವೇದಿಕೆಗೆ ಆಗಮಿಸಲು, ಅಲ್ಲಿ ಕಾರ್ಯಕ್ರಮ ಆಯೋಜಿಸಿದ್ದವರು ಮನವಿ ಮಾಡಿದಾಗ, ಅವರು ವೇದಿಕೆಗೆ ಅಲ್ಲಿಗೆ ಬಂದು ಕುಳಿತರು. ಅವರ ಪಕ್ಕದಲ್ಲಿ ಹಳ್ಳಿಯ ಮುಖ್ಯಸ್ಥರಾದ ನಾಗನಗೌಡರುಉಪಸ್ಥಿತರಿದ್ದರು. … Read more

ಪೋಸ್ಟ್ ಮ್ಯಾನ್ ಗಂಗಣ್ಣ (ಭಾಗ 8)”: ಎಂ.ಜವರಾಜ್

-೮-ಒಂಟೆತ್ತಿನ ಗಾಡಿಲಿ ಗೋದಿ ಉಪ್ಪಿಟ್ಟು ಬಂದಾಗ ಹತ್ತತ್ತಿರ ಒಂದು ಗಂಟೆಯಾಗಿತ್ತು. ಗೋದಿ ಉಪ್ಪಿಟ್ಟನ್ನು ದೊಡ್ಡ ದೊಡ್ಡ ಕ್ಯಾನ್ಗಳಿಂದ ಸ್ಕೂಲಲ್ಲಿದ್ದ ಎರಡು ದೊಡ್ಡ ಬಾಂಡಲಿಗೆ ಸುರಿವಾಗ ಗೋದಿ ಉಪ್ಪಿಟ್ಟು ಗಮಗಮ ಅಂತಿತ್ತು. ಬಿಸಿ ಗೋದಿ ಉಪ್ಪಿಟ್ಟು ತುಂಬಿದ್ದ ಬಾಂಡಲಿಯಿಂದ ಹೊಗೆ ಏಳುತ್ತಿತ್ತು. ಆ ಗಮಲು ಹೀರುತ್ತಿದ್ದರೆ ಮಜವಾಗುತ್ತಿತ್ತು.. ನಟರಾಜ ಮೇಷ್ಟ್ರು ಏಳನೇ ಕ್ಲಾಸಿನ ಗೌಡರ ಹುಡುಗರಿಂದ ಆ ಗೋದಿ ಉಪ್ಪಿಟ್ಟನ್ನು ಇಳಿಸಿಕೊಳುವುದು ಮತ್ತು ಮದ್ಯಾಹ್ನ ಬೆಲ್ಲು ಹೊಡೆದಾಗ ಕ್ಯೂ ನಿಲ್ಲಿಸಿ ಎಲ್ಲರಿಗೂ ಕೊಡುವ ಜವಾಬ್ದಾರಿ ವಹಿಸಿದ್ದರು. ಪೋಸ್ಟ್ ಮ್ಯಾನ್ … Read more

“ಪೋಸ್ಟ್ ಮ್ಯಾನ್ ಗಂಗಣ್ಣ (ಭಾಗ 7)”: ಎಂ.ಜವರಾಜ್

-೭–ಅವತ್ತೇನೊ ಟಪಾಲುಗಳು ಜಾಸ್ತಿ ಇದ್ದವು ಅನ್ಸುತ್ತೆ. ಪೋಸ್ಟ್ ಮೇಷ್ಟ್ರು ಷಣ್ಮುಖಸ್ವಾಮಿ ಹೋಟೆಲಿಗೆ ಹೋಗಿ ಟೀ ಕುಡಿದು ಬರೊ ತನಕ ಗಂಗಣ್ಣನ ಲೆಕ್ಕ ಮುಗಿದಿರದೆ ಕನ್ಫ್ಯೂಸ್ ಮಾಡಿಕೊಂಡು ಎಲ್ಲ ಲೆಟರುಗಳನ್ನು ಅತ್ತಿಂದಿತ್ತ ಇತ್ತಿಂದತ್ತ ಎತ್ತಿ ಎತ್ತಿ ಇಡುತ್ತ ಜೋಡಿಸುತ್ತಲೇ ಇದ್ದ. ನಾವು ಪೋಸ್ಟ್ ಮೇಷ್ಟ್ರು ಅತ್ತ ಹೋಗಿದ್ದನ್ನೇ ನೋಡಿಕೊಂಡು ಮೆಲ್ಲಗೆ ಬಂದು ಗಂಗಣ್ಣನ ಸುತ್ತ ನಿಂತು ನೋಡ್ತ ಮಾತಾಡ್ತ “ಅದು ತಿರುಮಕೂಡಲ್ದು. ಇದು ಬೈರಾಪುರುದ್ದು. ಇದಿದೆಯಲ್ಲ ಅದು ಗೋಪಾಲ್ಪುರುದ್ದು.. ಅದು ಅವ್ರದು ಇದು ಇವ್ರದು” ಅಂತ ಪೋಸ್ಟ್ ಮೇಷ್ಟ್ರು … Read more

ಭ್ರಮಾ – ಸತ್ಯ – ಭಾಮಾ !: ಡಾ. ಹೆಚ್ ಎನ್ ಮಂಜುರಾಜ್

ನಾನು ಸಾಮಾನ್ಯವಾಗಿ ಪ್ರಶ್ನೆಗಳನ್ನು ಕೇಳುತ್ತಾ ಕೂರುವುದಿಲ್ಲ; ಆದರೆ ನನ್ನನ್ನೇ ಕೇಳಿಕೊಳ್ಳುತ್ತಿರುತ್ತೇನೆ. ಸಾಧ್ಯವಾದಷ್ಟೂ ಪ್ರಶ್ನೆಗಳೇ ಹುಟ್ಟದಂತೆ ನೋಡಿಕೊಳ್ಳುತ್ತಿರುತ್ತೇನೆ! ಇದೊಂದು ಸುಖವಾದ ಮತ್ತು ನಿರಾಯಾಸ ಸ್ಥಿತಿ. ಇದಕ್ಕೆ ವಿಶೇಷವಾದ ಜ್ಞಾನವೇನೂ ಬೇಡ; ಎಂಥದೋ ಅಲೌಕಿಕವೋ; ಅಧ್ಯಾತ್ಮಸಿದ್ಧಿಯೋ ಎಂಬಂಥ ಹೆಸರಿಡುವುದೂ ಬೇಡ. ಲೌಕಿಕದಲ್ಲೇ ಇದ್ದು, ಮುಳುಗಿ, ಎದ್ದು ಬದುಕು ನಡೆಸಿದರೂ ಸುಖ ಮತ್ತು ನೆಮ್ಮದಿಯನ್ನು ಹೊಂದಬಹುದು. ಅದಕ್ಕಾಗಿ ಪೂಜೆ, ಪುರಸ್ಕಾರ, ದೇವರು, ಧರ್ಮ, ಅಧ್ಯಾತ್ಮ ಅಂತ ಲೋಕೋತ್ತರಕೆ ಕೈ ಚಾಚುವ ಅಗತ್ಯವಿಲ್ಲ. ಕೈ ಚಾಚಿದರೆ ತಪ್ಪೇನೂ ಇಲ್ಲ. ಅವರವರ ಸ್ವಾತಂತ್ರ್ಯ. ನಿರ್ಬಂಧಗಳಿಗೆ … Read more

ನನ್ನ ಗೊಂದಲ ಏನೆಂದರೆ: ಶೈಲಜ ಮಂಚೇನಹಳ್ಳಿ

AC ಅಂದರೆ Assistant Commissioner ಎನ್ನುವ ಪದಕ್ಕೆ ಸರಿಯಾದ ಕನ್ನಡ ಪದದ ಬಗ್ಗೆ . ಈ ಬಗ್ಗೆ ನನಗೆ ಗೊಂದಲ ಶುರುವಾಗಿದ್ದು ನಮ್ಮ ಜಮೀನುಗಳಲ್ಲಿ ಒಂದು ರಸ್ತೆ ಅನಧಿಕೃತವಾಗಿ ಹಾದು ಹೋಗಿ ಪಿ.ಎಂ.ಜಿ.ಎಸ್.ವೈ. ವತಿಯಿಂದ ಅಗಲೀಕರಣ ಕೂಡ ಆಗುತ್ತಿರುವುದರಿಂದ, ಭೂಸ್ವಾಧೀನವಾಗದೇ ರಸ್ತೆ ಇಲ್ಲದ ಖಾಸಗಿ ಜಮೀನುಗಳಲ್ಲಿ ರಸ್ತೆ ಮಾಡಲು ನಮ್ಮ ಒಪ್ಪಿಗೆ ಇಲ್ಲ ಎಂದು ತಿಳಿಸಿದಾಗ ಪಿ.ಎಂ.ಜಿ.ಎಸ್.ವೈ. ಯ ಅಧಿಕಾರಿಗಳು ಕೆಲ ರಾಜಕೀಯ ಪುಡಾರಿಗಳನ್ನು ಮತ್ತು ಕೆಲ ಕೆಟ್ಟ ಹಳ್ಳಿ ಜನರನ್ನು ಸೇರಿಸಿಕೊಂಡು ನಮಗೆ ತೊಂದರೆ ಕೊಟ್ಟಿರುವ … Read more

“ಪೋಸ್ಟ್ ಮ್ಯಾನ್ ಗಂಗಣ್ಣ (ಭಾಗ 6)”: ಎಂ.ಜವರಾಜ್

-೬- ಅವತ್ತು ಸುಡು ಬಿಸಿಲ ಒಂದು ಮದ್ಯಾಹ್ನ ಗಂಗಣ್ಣ ಸುಸ್ತಾದವನಂತೆ ಸೈಕಲ್ ಏರಿ ಬಂದವನು ಅಗಸ್ತೇಶ್ವರ ದೇವಸ್ಥಾನದ ಉತ್ತರ ದಿಕ್ಕಿನ ಬಾಗಿಲ ಪಕ್ಕದ ಪಶ್ಚಿಮದ ಕಡೆ ಮುಖ ಮಾಡಿದ್ದ ಬಸಪ್ಪನ ವಿಗ್ರಹದ ಜಗುಲಿ ಅಂಚಿಗೆ ಕುಂತು ಕಾಗದ ಪತ್ರ ಚೆಲ್ಲಿಕೊಂಡು ತೊಟ್ಟಿಕ್ಕುತ್ತಿದ್ದ ಬೆವರು ಒರೆಸಿಕೊಳ್ಳುತ್ತ ಓದುತ್ತ ಜೋಡಿಸುತ್ತಿದ್ದ. ಬಿಸಿಲು ಧಗಧಗಿಸುತ್ತಿತ್ತು. ಅದೇ ಹೊತ್ತಿಗೆ ಭರ ್ರಂತ ಬಂದ ಅರ್ಚಕರು ಅವನಿಗೆ ಎದುರಾಗಿ ಕುಂತು “ಏನಪ್ಪ ಗಂಗ ಲೆಟ್ರು ಗಿಟ್ರು ಬಂದಿದಿಯಾ” ಅಂದರು. ಗಂಗಣ್ಣನ ಮುಖ ಇನ್ನಷ್ಟು ಬೆವರಿ … Read more

ನಾಗರಾಜಪ್ಪನ ನೆರಳು: ಡಾ. ವಿಶ್ವನಾಥ ಎನ್ ನೇರಳಕಟ್ಟೆ

ನಾಗರಾಜಪ್ಪ ಠೀವಿಯಿಂದ ತನ್ನೂರಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ. ಆರಡಿ ಎತ್ತರದ ಗಟ್ಟಿ ದೇಹ, ವಯಸ್ಸು ಅರುವತ್ತು ದಾಟಿದ್ದರೂ ಕುಂದದ ಕಸುವು, ತಲೆಯ ಮುಕ್ಕಾಲು ಭಾಗ ಆವರಿಸಿದ್ದ ಕಪ್ಪು ಕೂದಲು, ನೇರ ನಿಲುವು ಇವೆಲ್ಲಾ ನಾಗರಾಜಪ್ಪನನ್ನು ಯುವಕನಂತೆಯೇ ಕಾಣಿಸುತ್ತಿದ್ದವು. ಆದರೆ ನಾಗರಾಜಪ್ಪನ ಮನಃಸ್ಥಿತಿ ತೀರಾ ಭಿನ್ನವಾಗಿತ್ತು. ಮುಂದಿನ ಯುಗಾದಿಗೆ ಅರವತ್ತಾರಕ್ಕೆ ಕಾಲಿಡುವ ಆತಹತ್ತು ವರ್ಷ ಹೆಚ್ಚಾಗಿದೆ ತನಗೆ ಎಂದು ಭ್ರಮಿಸಿಕೊಂಡು ಖುಷಿಪಡುತ್ತಿದ್ದ. ವಯಸ್ಸಷ್ಟು ಹೆಚ್ಚಾದರೆ ಜೀವನಾನುಭವವನ್ನೂ ಹೆಚ್ಚಾಗಿ ಗಳಿಸಿಕೊಂಡಿದ್ದೇನೆ ಎಂಬ ಭಾವ ಆತನೊಳಗೆ ಮೂಡಿ, ಹೆಮ್ಮೆಪಟ್ಟುಕೊಳ್ಳುವಂತಾಗುತ್ತಿತ್ತು. ಇಂತಹ ನವಿರು … Read more

“ಪೋಸ್ಟ್ ಮ್ಯಾನ್ ಗಂಗಣ್ಣ (ಭಾಗ 5)”: ಎಂ.ಜವರಾಜ್

-೫- ಒಂದ್ಸಲ ನಮ್ಮಣ್ಣ ಕೆಲಸದ ಅಪಾಯಿಂಟ್ಮೆಂಟ್ ಲೆಟರಿಗೆ ಕಾಯ್ತಾ ಇದ್ದ. ಟ್ರೈನಿಂಗ್ ಮಾಡಿ ಎರಡು ವರ್ಷವಾದರು ಕೆಲಸದ ಆಸೆಯಿಂದ ಇದ್ದವನಿಗೆ ಅಪಾಯಿಂಟ್ಮೆಂಟ್ ಲೆಟರ್ ಬರಲೇ ಇಲ್ಲ. ಅದೇ ಹೊತ್ತಿಗೆ ಸರ್ಕಾರದ ಕೃಷಿ ನೀರಾವರಿ ಯೋಜನೆಯಡಿ ಬಲದಂಡೆ ನಾಲೆ ಕೆಲಸ ಶುರುವಾಗಿತ್ತು. ಇದರಿಂದ ನಮಗಿದ್ದ ಎರಡು ಮೂರು ಎಕರೆ ಡ್ರೈಲ್ಯಾಂಡಿಗೆ ನೀರು ಸಿಕ್ಕಿ ಭತ್ತದ ಫಸಲು ಕಾಣುವ ಹಂಬಲದಿಂದ ರಂಗೋಲಿ ಕಲ್ಲಿನ ಹೊಲ ಅಗೆದು ಮಟ್ಟ ಮಾಡುವ ಕೆಲಸವೂ ನಡೆಯುತ್ತಿತ್ತು. ಇದರ ದೆಸೆಯಿಂದ ಅಪ್ಪ ಮತ್ತು ಇಬ್ಬರು ಅಣ್ಣಂದಿರ … Read more

ಬೆಟ್ಟದ ಭೂತದ ಕತೆ ಮೇದರದೊಡ್ಡಿ ಹನುಮಂತ

ನಮ್ಮೂರು ಕಾವೇರಿ ತೀರದಲ್ಲಿ ಬರುವ ಸುಮಾರು ನಲವತ್ತು ಮನೆಗಳಿರುವ ಪುಟ್ಟ ಊರು. ಊರಿನ ಸುತ್ತೆಲ್ಲಾ ಬಂಡೆಗಳೇ ಸುತ್ತುವರಿದಿರುವ ಕಾರಣ ಊರಿನ ಯಾವ ಕಡೆ ನಿಂತು ಪೋಟೋ ಕ್ಲಿಕ್ಕಿಸಿದರೂ ಸಹ ಯಾವುದೋ ಕಾಡಿನಿಂದ ಪೋಟೋ ತೆಗೆದಂತೆ ಕಾಣುವುದು ವಿಸ್ಮಯವೇ ಸರಿ.ಸಾರಿಗೆ ಸಂಪರ್ಕವಿಲ್ಲದ ಕಾರಣ ಸಾಕ್ಷರತೆಯ ಪ್ರಮಾಣ ಕಡಿಮೆಯಿದೆ. ಹಾಗಾಗಿ ನಾನು ಹತ್ತನೇ ತರಗತಿಯಾಚೆಗಿನ ಮೆಟ್ಟಿಲು ತುಳಿಯಲಿಲ್ಲ.ಅತಿ ಹೆಚ್ಚು ಕರಡಿಗಳು ವಾಸಿಸುವ ಗವಿಗಳಿರುವ ಕಾರಣ ಊರಿನ ಸಮೀಪದ ಬಂಡೆ ಸಾಲಿಗೆ ಕರಡಿಕಲ್ಲು ಎಂಬ ಹೆಸರಿದೆ. ಊರಿಗೆ ಕರಡಿಕಲ್ ದೊಡ್ಡಿ ಎಂಬ … Read more

ಮದುವೆ ಅವರವರ ಭಾವ: ಬಿ.ಟಿ.ನಾಯಕ್

ಶಾಮುನ ತಂದೆ ತಾಯೀ ಅದಾಗಲೇ ಹಿರಿಯ ನಾಗರೀಕರಾಗಿದ್ದರು. ತಾವು ಮಾಡುತ್ತಿರುವ ಶ್ರಮದ ಕೆಲಸಗಳಿಂದ ಮುಕ್ತಿ ಹೊಂದಬೇಕೆಂದು, ತಮ್ಮ ಪುತ್ರನನ್ನು ಕರೆದು ಒಂದು ವಿಷಯ ಚರ್ಚಿಸೋದಿದೆ ಬಾ ಎಂದು ಕರೆದರು. ಆಗ ಆತ ಬಂದು;‘ಅದೇನಮ್ಮಾ ಚರ್ಚಿಸುವಂಥಹ ವಿಷಯ ?’ ಎಂದ.‘ಅಂದ ಹಾಗೆ ನಿನಗೆಷ್ಟು ವಯಸ್ಸು ?’ ಎಂದಳು ಅಮ್ಮ.‘ಹತ್ರ..ಹತ್ರ ಇಪ್ಪಂತ್ತೆಂಟು’ ಎಂದ.‘ನಿನ್ನಈ ವಯಸ್ಸಿಗೆ ಏನು ಆಗಬೇಕು ಅದು ಆಗಬೇಕಲ್ಲವೇ ?’ ಎಂದ ಅಪ್ಪ.‘ಉದ್ಯೋಗವಂತೂ ಸಿಕ್ಕಿದೆ, ಸರಿಯಾದ ಸಂಬಳ ಕೂಡ ಸಿಗುತ್ತಿದೆ, ಮತ್ತಿನ್ನೇನು ಬೇಕು ?’ ಎಂದ ಶಾಮು.‘ಅಲ್ವೋ.. ದಡ್ಡ.. … Read more

“ಪೋಸ್ಟ್ ಮ್ಯಾನ್ ಗಂಗಣ್ಣ (ಭಾಗ 4)”: ಎಂ.ಜವರಾಜ್

-೪- ಅವತ್ತು ಸ್ಕೂಲಿಗೆ ರಜೆ ಅಂತ ಎಲ್ಲ ಮಾತಾಡುತ್ತಿದ್ದರು. ಸ್ಕೂಲಿಗೆ ಅಂತಲ್ಲ ಎಲ್ಲರಿಗೂ ಗೌರ್ಮೆಂಟ್ ರಜೆ ಅಂತ ಸಿಕ್ಕಸಿಕ್ಕವರು ಹೇಳ್ತಾ ಇದ್ದರೆ ನಮಗೆ ಹಿಗ್ಗೊ ಹಿಗ್ಗು. ಅದನ್ನು ಕೇಳ್ತಾ ಕೇಳ್ತಾ ಪಂಚಾಯ್ತಿ ಆಫೀಸ್ ಮುಂದಿದ್ದ ಮರಯ್ಯನ ಟೀ ಅಂಗಡಿ ಹತ್ತಿರ ಬಂದಾಗ ಆ ಟೀ ಅಂಗಡಿ ಮುಂದೆ ಒಂದಷ್ಟು ಜನ ಹೆಚ್ಚಾಗೇ ನಿಂತು ಟೀ ಕುಡಿತಾ ಬೀಡಿ ಸೇದುತ್ತಾ ಪೇಪರ್ ಓದುತ್ತಾ ರಾಜ್ ಕುಮಾರ್ ಬಗ್ಗೆ ಜೋರಾಗೇ ಮಾತಾಡ್ತ ಇದ್ದರು. ಎಲ್ಲರು ರಾಜ್ ಕುಮಾರ್ ಬಗ್ಗೆ ಮಾತಾಡುತ್ತಿದ್ದರೆ … Read more

ವಿಶ್ವಪ್ರಸಿದ್ಧ ಪಶುವೈದ್ಯರು: ಪ್ರೊ. ಎಂ. ನಾರಾಯಣಸ್ವಾಮಿ

ಪ್ರತಿ ವರ್ಷದ ಏಪ್ರಿಲ್ ತಿಂಗಳ ಕೊನೆಯ ಶನಿವಾರದಂದು ವಿಶ್ವ ಪಶುವೈದ್ಯಕೀಯ ದಿನವನ್ನು ಆಚರಿಸಲಾಗುತ್ತಿದೆ. ಕಳೆದ 25 ವರ್ಷಗಳಿಂದ ಅಂತಹ ಆಚರಣೆ ನಡೆಯುತ್ತಿದೆ. ಆದು ಆರಂಭವಾದದ್ದು 2000ನೇ ಇಸವಿಯಲ್ಲಿ. ಅಂತಹ ದಿನದ ಆಚರಣೆಗೊಂದು ಧ್ಯೇಯವಾಕ್ಯವನ್ನು ವಿಶ್ವ ಪಶುವೈದ್ಯಕೀಯ ಸಂಘವು ಕೊಡುತ್ತದೆ. ಅದರಂತೆ, 2024 ರ ವಿಶ್ವ ಪಶುವೈದ್ಯಕೀಯ ದಿನದ ಧ್ಯೇಯವಾಕ್ಯವು ‘ಪಶುವೈದ್ಯರು ಅತ್ಯಗತ್ಯ ಆರೋಗ್ಯ ಕಾರ್ಯಕರ್ತರಾಗಿದ್ದಾರೆ’ ಎಂಬುದಾಗಿದೆ. ಪಶುವೈದ್ಯರು ಪ್ರಾಣಿಗಳ ಆರೋಗ್ಯವನ್ನು ಕಾಪಾಡುತ್ತಿದ್ದಾರೆ. ಅದಷ್ಟೇ ಅಲ್ಲದೆ ಮಾನವನ ಆರೋಗ್ಯವನ್ನೂ ಕಾಪಾಡುತ್ತಿದ್ದಾರೆ. ಪ್ರಾಣಿಗಳ ರೋಗಗಳನ್ನು ಹತೋಟಿಯಲ್ಲಿಟ್ಟಿದ್ದರಿಂದಾಗಿ ಮಾನವನ ದೈಹಿಕ, ಮಾನಸಿಕ … Read more

ಕವಿತೆ ಮತ್ತು ವಿಮರ್ಶೆ: ಅಜಿತ್ ಹರೀಶಿ, ಎನ್. ಎಸ್. ಶ್ರೀಧರ ಮೂರ್ತಿ

ಒಂದು ಸತ್ಯ ಕವಿತೆ ಕವಿಯೊಬ್ಬ ಬಯಸಿದ್ದ ಸತ್ತು ಹೋಗಲುಅದೂ ಹಾಡುಹಗಲುಜೇಡದ ಉದರದ ಎಳೆ ಕಾಣಲುದಾರಿಯೊಂದು ತೋರಲು ಹೇಳಿ ಹೋಗಬೇಕು ಕಾರಣನನ್ನ ಸಾವಿಗೆ ನಾನೇ ಕಾರಣಕೆಟ್ಟ ಸಂಯೋಗದಿಂದ ನಾನೀಗ ಬಸಿರುಲಜ್ಜೆಯಾಗಿದೆ ಬೇಡ ಉಸಿರು ಕುಣಿಕೆ ಬಿಗಿದು ಕುರ್ಚಿ ಒದ್ದುವಿದಾಯ ಹೇಳಬಯಸಿದ್ದುಪಾಪದ ಕೊಡ ಬಲು ಭಾರಅಂಗುಷ್ಟ ನೆಲ ತಾಗಿ ಹಗ್ಗ ಹಾರ ಜಗತ್ತು ಜಾಗೃತವಾಯಿತು ಜರೆಯಿತುಎಲ್ಲ ನಾಟಕ ಕವಿ ಕಟುಕದಯೆ ತೋರದಿರಿ ಹೂತುಹಾಕಿರಿಬೆಳೆಯದಿರಲಿ ರಕ್ಕಸ ಸಂತತಿ ಕರುಣೆ ಇದ್ದವರು ಲೇಖನಿ ಹಿಡಿದರುಕವಿ ಸಾಯಬಹುದು ಕವಿತೆ ಅಮರಬದುಕು ಬರಹ ಒಂದೆಯೋ ಬೇರೆಯೋಕೊಲ್ಲಬೇಡಿರೆಂದರು … Read more

ಮನದ ಮೌನಕ್ಕೆ ಕೊನೆಯ ಪತ್ರ: ಪೂಜಾ ಗುಜರನ್ ಮಂಗಳೂರು..

ಮನಸ್ಸು ಮೌನವಾಗಿದೆ ಅಂದ್ರೆ ಯಾವುದು ಬೇಡ ಅಂತಲ್ಲ.‌ಯಾವುದನ್ನು ತಲೆಗೆ ಹಚ್ಚಿಕೊಳ್ಳದೆ ನಿರಾಳವಾಗಿರು ಅಂತ ಅರ್ಥ. ಒಂದೊಂದು ಸಲ ಇಂತಹ ಮೌನಗಳು ಬದುಕಿಗೆ ಅನಿವಾರ್ಯ.. ಎಲ್ಲ ನೋವುಗಳೂ ಖುಷಿಗಳು ಮರೆಯಾದಾಗ ಅಲ್ಲೊಂದು ನಿಶ್ಯಬ್ದವಾದ ಮೌನ ಆವರಿಸಿ ಬಿಡುತ್ತದೆ. ಅದನ್ನು ಅನುಭವಿಸಿ ನೋಡುವಾಗ ಮನಸಿಗೆ ಅನಿಸುವುದು ಇಷ್ಟೆ.ಇಲ್ಲಿ ಎಲ್ಲವೂ ಶೂನ್ಯ. ಯಾವುದು ಶಾಶ್ವತವಲ್ಲ‌. ನಾವು ಬಯಸಿದಂತೆ ಎಲ್ಲವೂ ಆಗುತ್ತದೆ ಅಂದುಕೊಳ್ಳುವುದು ಮೂರ್ಖತನ. ಬದುಕೆಂಬ ಕತೆಯನ್ನು ಬರೆಯುವ ಬರಹಗಾರರು ನಾವೇ ಆದರೂ ಅದರೊಳಗಿರುವ ಪಾತ್ರಗಳು ಮಾತ್ರ ಹಲವಾರು. ಈ ಬದುಕಲ್ಲಿ ನಮಗಾಗಿ … Read more