ಎಲ್ಲೆಲ್ಲೋ ಓಡುವ ಮನಸೇ….: ಶೀತಲ್ ವನ್ಸರಾಜ್
ಮೊನ್ನೆ ಆಫೀಸಿಗೆ ಹೋಗಲು ಕ್ಯಾಬ್ ಬುಕ್ ಮಾಡ್ತಾ ಇದ್ದೆ. ಯಾಕೋ ಯಾವ ವಾಹನವೂ ಸಿಗುತ್ತಿರಲಿಲ್ಲ. ನಮಗೆಲ್ಲಾ ಗೊತ್ತಿರುವ ವಿಚಾರವೇ, ನಮ್ಮ ರಾಜಧಾನಿಯ ಟ್ರಾಫಿಕ್ ಗೋಳು. ಇಲ್ಲಿ ಅರ್ಧ ಜೀವನ ರೋಡಿನಲ್ಲಿ ಇನ್ನರ್ಧ ವಾಹನಕ್ಕಾಗಿ ಕಾಯುವುದರಲ್ಲಿ ಮುಗಿದು ಹೋಗುತ್ತದೆ ಎಂಬುವುದು. ನಮ್ಮೂರಿನ ಎಲ್ಲಾ ಸಾಮಾನ್ಯರಿಗೂ ಸಾಮಾನ್ಯವಾಗಿ ಹೋಗಿದೆ, ರೋಡಿನಲ್ಲಿ ವ್ಯಯ ಮಾಡಿದ ಸಮಯವನ್ನು ನಿರ್ಲಕ್ಷಿಸುವುದು. ಹೋಗಲಿ ಬಿಡಿ ಈಗ ನೇರ ವಿಚಾರಕ್ಕೆ ಬರುವೆ. ಅಂದು ಕೊನೆಗೂ ನನಗೊಂದು ಕ್ಯಾಬ್ ಸಿಕ್ಕಿತು. ಮರುಭೂಮಿಯಲ್ಲಿ ಸಣ್ಣ ಒರತೆ ಸಿಕ್ಕ ಸಂತೋಷ ನನಗೆ. … Read more